Author: admin

ರಾಜಧಾನಿಯಲ್ಲಿ ಉಗ್ರ ಕೃತ್ಯ ಎಸಗಲು ಸಂಚು ರೂಪಿಸಿದ ಆರೋಪದಡಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಇಂದು ಅಂತ್ಯ ಹಿನ್ನೆಲೆ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನ ಹಾಜರುಪಡಿಸಲಾಗಿತ್ತು. ಬಳಿಕ ಎನ್‌ಐಎ ವಿಶೇಷ ನ್ಯಾಯಾಲಯ ಆರೋಪಿಗಳನ್ನು ಮತ್ತೆ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತು. ನಗರದಲ್ಲಿ ವಿಧ್ವಂಸಕ ಕೃತ್ಯವೆಸಲು ಸಂಚು ರೂಪಿಸಿದ್ದು, ಈ ಸಂಬಂಧ ಶಂಕಿತರಿಂದ ಗ್ರೆನೇಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಉಗ್ರ ಕೃತ್ಯವೆಸಗಲು ತಯಾರಿ ನಡೆಸಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಶಂಕಿತರನ್ನ ತೀವ್ರ ವಿಚಾರಣೆಗೊಳಪಡಿಸಬೇಕಿದೆ. ಅಲ್ಲದೇ ಶಂಕಿತರ ಹಿಂದೆ ಹಲವು ವ್ಯಕ್ತಿಗಳ ಕೈವಾಡವಿದೆ. ಹೀಗಾಗಿ ಆರೋಪಿತರನ್ನು ಹೆಚ್ಚಿನ ವಿಚಾರಣೆಗೊಳಪಡಿಸಬೇಕಿದೆ. ಹೀಗಾಗಿ 15 ದಿನಗಳ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ ಪರ ವಕೀಲರು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿ ಅಂತಿಮವಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಲಯ ಸಮ್ಮತಿಸಿತು. ಸದ್ಯ ಮಡಿವಾಳದ ಎಫ್‌ಎಸ್‌ಎಲ್ ನ ವಿಚಾರಣಾ ಕೊಠಡಿಯಲ್ಲಿ ಸಿಸಿಬಿ ಶಂಕಿತರನ್ನು…

Read More

ಮೃತ ಸ್ವಾತಂತ್ರ್ಯ ಹೋರಾಟಗಾರನ ವೃದ್ಧ ಪತ್ನಿಗೆ ಪಿಂಚಣಿ ಮತ್ತು ಹಿಂಬಾಕಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಏಕ ಸದಸ್ಯ ಪೀಠ ಹೊರಡಿಸಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಪಡಿಸಿ ಆದೇಶಿಸಿದೆ. ಪಿಂಚಣಿ ಮತ್ತು ಹಿಂಬಾಕಿ ಪಾವತಿಸಲು ಸೂಚನೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಮತ್ತು ಕೆ. ರಾಜೇಶ್ ರೈ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅಲ್ಲದೇ, ಕೇಂದ್ರ ಸರ್ಕಾರಿ ಸನ್ಮಾನ್ ಪಿಂಚಣಿ ಯೋಜನೆಯ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು 2014ರಲ್ಲಿ ಮಾರ್ಗಸೂಚಿ ಪ್ರಕಟಿಸಿದೆ. ಅದನ್ನು ರಾಜ್ಯ ಸರ್ಕಾರ ಸಹ ಪಾಲಿಸುತ್ತಿದೆ. ಆ ಮಾರ್ಗಸೂಚಿ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರ ಅಥವಾ ಹೋರಾಟಗಾರ್ತಿ ಸಾವನ್ನಪ್ಪಿದ ನಂತರ ಅವರ ಹೆಸರಿನಲ್ಲಿ ಪಿಂಚಣಿ ವಿತರಿಸುವಂತಿಲ್ಲ. ಜತೆಗೆ, ಹೋರಾಟಗಾರ ಮತ್ತು ಹೋರಾಟಗಾರ್ತಿ ವಿಷಯವು ಪರಿಶೀಲನೆಯಲ್ಲಿದ್ದರೂ ಸಹ ಪಿಂಚಣಿ ಪಾವತಿಸುವಂತಿಲ್ಲ. ಅದರಂತೆ ರಾಜ್ಯ ಸರ್ಕಾರವು ಪ್ರಕರಣದಲ್ಲಿ…

Read More

ಬೆಂಗಳೂರಿನ ಸೂಲಿಕುಂಟೆ ಸ್ಲಂ ಬೋರ್ಡ್ ಮನೆಗಳ ಬಳಿ ಸ್ಥಳೀಯರೊಂದಿಗೆ ಕೂಡಿ ಪ್ರತಿಭಟನೆ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಕೊಡತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲಿಕುಂಟೆ ಗ್ರಾಮದಲ್ಲಿ 50% ಮೀಸಲಾತಿ ಅಡಿ ಬರುವ ಸ್ಲಂ ಬೋರ್ಡ್ ಮನೆಗಳನ್ನು ಸ್ಥಳೀಯರಿಗೆ ನೀಡದಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ಸೂಲಿಕುಂಟೆ ಸ್ಲಂ ಬೋರ್ಡ್ ಮನೆಗಳ ಬಳಿ ಸ್ಥಳೀಯರೊಂದಿಗೆ ಕೂಡಿ ಶಾಸಕಿ ಮಂಜುಳಾ ಲಿಂಬಾವಳಿ ಪ್ರತಿಭಟನೆ ನಡೆಸಿದರು. ಈ ವೇಳೆ ನಗರ ಮಂಡಲ ಅಧ್ಯಕ್ಷರಾದ ಮನೋಹರ ರೆಡ್ಡಿ, ಮಹದೇವಪುರ ಟಾಸ್ಕ್ ಫೋರ್ಸ್‌ನ ಸಾಮಾಜಿಕ ಮತ್ತು ಸಬಲೀಕರಣ ಅಧ್ಯಕ್ಷರಾದ ವೆಂಕಟಸ್ವಾಮಿ ರೆಡ್ಡಿ ಸೇರಿದಂತೆ ಮುಖಂಡರು ಸ್ಥಳೀಯರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾಗುವ ಬೆಳೆಗೆ ವಿಪತ್ತು ಪ್ರತಿಕ್ರಿಯೆ ನಿಧಿಯಡಿ ನೀಡುವ ಇನ್ ಪುಟ್ ಸಬ್ಸಿಡಿ ಪರಿಷ್ಕರಿಸಿ ಹೆಚ್ಚವರಿ ಮೊತ್ತದೊಂದಿಗೆ ಪರಿಷ್ಕತ ಪರಿಹಾರದ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪ್ರತಿವರ್ಷ ಮುಂಗಾರು ಹಾಗೂ ಹಿಂಗಾರು ಋತುವಿನಲ್ಲಿ ಭಾರಿ ಮಳೆಯಿಂದ ಹಾಗೂ ನದಿ ಹರಿವಿನಿಂದ ಉಂಟಾಗುವ ಪ್ರವಾಹದಿಂದ ಜನ-ಜಾನುವಾರು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳ ಹಾನಿ ಆಗುತ್ತಿದೆ. ಪ್ರತಿ ವರ್ಷ ಬೆಳೆಹಾನಿ ಆಗುವ ಪ್ರಕರಣಗಳಿಗೆ ವಿಪತ್ತು ಪ್ರತಿಕ್ರಿಯೆ ನಿಧಿಯ ಮಾರ್ಗಸೂಚಿಯಂತೆ ಅರ್ಹ ಪ್ರಕರಣಗಳಿಗೆ ಮಾತ್ರ ಪರಿಷ್ಕೃತ ದರದಲ್ಲಿ ಪರಿಹಾರವನ್ನು(ಇನ್ ಪುಟ್ ಸಬ್ಸಿಡಿ) ಪಾವತಿಸಲಾಗುತ್ತಿದೆ. 2023ನೇ ಸಾಲಿನ ಮುಂಗಾರ ಹಂಗಾಮಿನಲ್ಲಿ ಪ್ರವಾಹ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ, ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರದ ವಿಪತ್ತ ಪ್ರತಿಕ್ರಿಯೆ ನಿಧಿ ಮಾರ್ಗಸೂಚಿಯಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಪರಿಷ್ಕೃತ ದರದಲ್ಲಿ ನೀಡಿರುವ ಪರಿಹಾರದಂತೆ ಬೆಳೆ ಹಾನಿಯಾದ ರೈತರಿಗೆ, ಹೆಚ್ಚಿನ ಆರ್ಥಿಕ ನೆರವು ನೀಡಲು ಇನ್ ಪುಟ್ ಸಬ್ಸಿಡಿ…

Read More

ಡಿ. ಜೆ ಹಳ್ಳಿ, ಕೆ. ಜೆ. ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್‌ ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ. ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ಧತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತದೆ. ಅದೊಂದು ಪ್ರಕ್ರಿಯೆ ಮಾತ್ರ ಮಾಡಿದ್ದೇವೆ.  ಈ ವಿಷಯ ಕ್ಯಾಬಿನೆಟ್ ಸಬ್ ಕಮಿಟಿಯಿಂದ ಕ್ಯಾಬಿನೆಟ್‌ ಗೆ ಬರುತ್ತದೆ. ಕ್ಯಾಬಿನೆಟ್‌ ನಲ್ಲಿ ಅಂತಿಮ ತೀರ್ಮಾನ ಆಗುತ್ತದೆ. ಸತ್ಯಾಂಶವನ್ನು ನೋಡಿ ಕಾನೂನಾತ್ಮಕ ಅವಕಾಶ ಇದ್ದರೆ ಕೇಸ್ ವಾಪಸ್ ತೆಗೆದುಕೊಳ್ಳುವೆವು ಎಂದರು. ಉಡುಪಿ ವಿಡಿಯೋ ಬಗ್ಗೆ ಮಾತನಾಡಿ, ಘಟನೆ ಬಹಳ ಸಣ್ಣದು. ಸಣ್ಣ ಘಟನೆಗೆ ರಾಜಕೀಯ ಬಣ್ಣ ಕೊಡುವುದು ಯಾಕೆ? ಪ್ರಿನ್ಸಿಪಾಲ್ ಇದ್ದಾರೆ, ಕಾಲೇಜು ಸಮಿತಿ ಇದೆ. ಈ…

Read More

ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ, ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ ಮನೆಕೆಲಸ ಮಾಡುತ್ತಿದ್ದರು. ಮಗಳಿಗೆ ಕುಣಿಗಲ್‌ ನ ಹೆಟ್ಟೂರು ನಿವಾಸಿ ಗೋವಿಂದ ಗೌಡ ಎಂಬವರೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತವರು ಮನೆಗೆ ಬರುತ್ತಿದ್ದ ಮಗಳ ಕುರಿತು ಇಂದಿರಾ ಚಿಂತಾಕ್ರಾಂತರಾಗಿದ್ದರು. ಈ ಬಗ್ಗೆ ಇಂದಿರಾ ಕೂಡ ತನ್ನ ತಾಯಿಯೊಂದಿಗೆ ದುಃಖ ತೋಡಿಕೊಂಡಿದ್ದಳು. ಸಮಸ್ಯೆಗೆ ಪರಿಹಾರವೆಂಬಂತೆ ಆಕೆಯ ತಾಯಿಯು ತನಗೆ ಜ್ಯೋತಿಷಿ ಸುರೇಶ್ ಪಾಟೀಲ್ ಪರಿಚಯವಿದ್ದು, ಅವರ ಬಳಿ ವಿಚಾರಿಸು ಎಲ್ಲವೂ ಸರಿಹೋಗಲಿದೆ ಎಂದಿದ್ದಳು.…

Read More

ಬಸನಗುಡಿಯ ‘ನ್ಯಾಷನಲ್ ಕೋ- ಆಪರೇಟಿವ್ ಬ್ಯಾಂಕ್‌’ನಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಠೇವಣಿದಾರರಿಗೆ ನ್ಯಾಯ ಕಲ್ಪಿಸುವಂತೆ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ಮತ್ತು ಷೇರುದಾರರ ಹಿತರಕ್ಷಣಾ ವೇದಿಕೆಯ ಮುಖ್ಯಪೋಷಕ ಶಂಕರ್ ಗುಹಾ ದ್ವಾರಕನಾಥ್ ಒತ್ತಾಯಿಸಿದ್ದಾರೆ. ‘ಬಸವನಗುಡಿ ಐತಿಹಾಸಿಕ ಪ್ರಸಿದ್ಧಿ ಕ್ಷೇತ್ರವಾಗಿತ್ತು. ಆದರೆ, ಇದೀಗ ಬ್ಯಾಂಕ್ ಹಗರಣಗಳಿಂದ ಸುದ್ದಿ ಆಗುತ್ತಿದೆ. ಬಸವನಗುಡಿ ಸಹಕಾರಿ ಬ್ಯಾಂಕ್‌ ಹಗರಣಗಳ ಸರಮಾಲೆಗೆ ಇದು ಸೇರ್ಪಡೆಯಾಗಿದೆ’ ಎಂದು ಅವರು ಹೇಳಿದ್ದಾರೆ. ‘ಈ ಬ್ಯಾಂಕ್‌ ನ ಹೊಸ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿ, ಕೆಲವೇ ವರ್ಷಗಳಾಗಿದೆ. ಈ ಹಗರಣದ ಕುರಿತು ಹಳೇ ಆಡಳಿತ ಮಂಡಳಿ ಪದಾಧಿಕಾರಿಗಳು ಉತ್ತರ ನೀಡಬೇಕು. ಬ್ಯಾಂಕ್ ಅನ್ನು ಗ್ರಾಹಕರು ನಂಬಿ ತಾವು ಕಷ್ಟಪಟ್ಟು ಬೆವರು ಸುರಿಸಿ ದುಡಿದ ಹಣ ಠೇವಣಿ ರೂಪದಲ್ಲಿ ಇಟ್ಟಿರುತ್ತಾರೆ. ಗ್ರಾಹಕರ ನಂಬಿಕೆ ಉಳಿಸಿಕೊಳ್ಳಬೇಕಿದ್ದ ಬ್ಯಾಂಕ್‌ಗಳೇ ಹಗರಣಕ್ಕೆ ಒಳಪಡುತ್ತಿರುವುದು ಅತ್ಯಂತ ಆತಂಕಕಾರಿ’ ಎಂದು ತಿಳಿಸಿದ್ದಾರೆ. ‘ಠೇವಣಿದಾರರ ಹಿತದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರ ಹಗರಣ ನಡೆಸಿರುವ ಬ್ಯಾಂಕ್‌ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.…

Read More

ಬಸ್ ನಿಲ್ದಾಣ ಹಾಗೂ ಸಂಚರಿಸುವ ಬಸ್‌ ಗಳಲ್ಲಿ ಪ್ರಯಾಣಿಕರ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಒಂದೇ ಕುಟುಂಬದ ಐವರನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಕದರಿ ವೇಲು, ಕನ್ಯಾಕುಮಾರ್, ಮಹೇಶ್, ಸುಂದರ್ ರಾಜ್ ಹಾಗೂ ಸಲೀಂ ಬಂಧಿತರು.  ಒಂದೇ ಪ್ರದೇಶದಲ್ಲಿ ವಾಸವಿದ್ದ ಆರೋಪಿಗಳು, ಗುಂಪು ಕಟ್ಟಿಕೊಂಡು ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದರು. ಇವರನ್ನು ಬಂಧಿಸಿ  70 ಸಾವಿರ ನಗದು ಹಾಗೂ 30 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು. ‘ದೂರುದಾರರೊಬ್ಬರು ತಮ್ಮ ಪತ್ನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಕ್ಕಾಗಿ 1 ಲಕ್ಷ ನಗದು ಹಾಗೂ ಪತ್ನಿಯ ಚಿನ್ನದ ಮಾಂಗಲ್ಯವನ್ನು ಜೇಬಿನಲ್ಲಿ ಇಟ್ಟುಕೊಂಡು ಬಿಎಂಟಿಸಿ ಬಸ್‌ ನಲ್ಲಿ ಹೊರಟಿದ್ದರು. ಇದೇ ವೇಳೆ ಬಸ್ ಏರಿದ್ದ ಆರೋಪಿಗಳು, ದೂರುದಾರನ ಜೇಬಿನಲ್ಲಿದ್ದ ಹಣ ಕದ್ದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು’. ‘ಆರೋಪಿಗಳ ಪತ್ತೆಗಾಗಿ ಸುಮಾರು 150 ಸ್ಥಳಗಳಲ್ಲಿರುವ ಸಿ. ಸಿ. ಟಿ. ವಿ ಕ್ಯಾಮೆರಾ ಪರಿಶೀಲಿಸಲಾಗಿತ್ತು. ಕೆಲ ಸುಳಿವು ಆಧರಿಸಿ ವಶಕ್ಕೆ ಪಡೆದು…

Read More

ವಧು ಹುಡುಕಿಕೊಡುವ ನೆಪದಲ್ಲಿ ನಗರದ ನಿವಾಸಿಯೊಬ್ಬರಿಂದ 786 ಸಾವಿರ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ದೂರುದಾರ, ತಮ್ಮ ಪುತ್ರನಿಗೆ ವಧು ಹುಡುಕುತ್ತಿದ್ದರು. ಹಲವು ಸಂಬಂಧಿಕರು ಹಾಗೂ ಸ್ನೇಹಿತರ ಬಳಿ ವಧು ಬಗ್ಗೆ ವಿಚಾರಿಸುತ್ತಿದ್ದರು. ‘ಬ್ರಾಹ್ಮಣ ವೇದಿಕೆ ಟ್ರಸ್ಟ್’ನಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿ ದೂರುದಾರರನ್ನು ಪರಿಚಯ ಮಾಡಿಕೊಂಡಿದ್ದ ಸುಧಾಕರ್ ಅಲಿಯಾಸ್ ವೆಂಕಟಾಚಾರಿ, ವಧು ಹುಡುಕಿಕೊಡುವುದಾಗಿ ಹೇಳಿದ್ದ. ಅದಕ್ಕಾಗಿ ಹಂತ ಹಂತವಾಗಿ 786 ಸಾವಿರ ಪಡೆದಿದ್ದ.’ ‘ಹಲವು ತಿಂಗಳಾದರೂ ಆರೋಪಿ, ವಧು ಹುಡುಕಿಲ್ಲ. ಬೇಸತ್ತ ದೂರುದಾರ, ಹಣವನ್ನು ವಾಪಸು ನೀಡುವಂತೆ ಕೋರಿದ್ದರು. ಇದಾದ ನಂತರ, ಆರೋಪಿ ಪರಾರಿಯಾಗಿದ್ದಾನೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲ ಪ್ರತಿಭಟನೆ ನಡೆಸಿದರು. ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ‘ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲಗೊಂಡಿವೆ. ರಾಜಕೀಯವಾಗಿ ಪ್ರಬಲವಾಗಿರುವ ಮೈತೇಯಿ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯಗಳು ಪರಸ್ಪರ ವೈರಿಗಳಂತೆ ಗಲಭೆ, ಕೊಲೆ, ಸುಲಿಗೆ, ಅತ್ಯಾಚಾರ ಹಿಂಸೆಗಳಲ್ಲಿ ತೊಡಗಿಕೊಂಡಿದ್ದು, ಕಣಿವೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ದಶಕಗಳ ಕಾಲ ಮಾಡಿರುವ ಕೋಮು ಪ್ರಚೋದನೆಯಿಂದಲೇ ಈ ಎರಡು ಸಮುದಾಯಗಳ ನಡುವೆ ದ್ವೇಷ ಬೆಳೆದಿದೆ’ ಎಂದು ಆರೋಪಿಸಿದರು. ‘ಗಲಭೆಯನ್ನು ನಿಯಂತ್ರಿಸಲು ವಿಫಲವಾಗಿರುವ ಮಣಿಪುರದ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಜನರ ಬಳಿ ಇರುವ ಅಕ್ರಮ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಬೇಕು. ಅಕ್ರಮವಾಗಿ ಅರಣ್ಯದಲ್ಲಿ ಬೆಳೆಯುತ್ತಿರುವ ಗಸಗಸೆ (ಮಾದಕ ವಸ್ತು) ಕೃಷಿಯನ್ನು ನಿಯಂತ್ರಿಸಬೇಕು. ಅಕ್ರಮ ವಲಸೆ ತಡೆಯಲು ಕ್ರಮ ಕೈಗೊಳ್ಳಬೇಕು. ಮಣಿಪುರ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಿ, ಜನತೆಗೆ ಅಗತ್ಯ…

Read More