Subscribe to Updates
Get the latest creative news from FooBar about art, design and business.
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
- ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
Author: admin
ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಒಂಬತ್ತು ವರ್ಷಗಳ ನಂತರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. ಇವರಿಬ್ಬರ ಮುಖಾಮುಖಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಜನಿಕಾಂತ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಖಿಲೇಶ್ ಅವರನ್ನು ಭೇಟಿ ಮಾಡಿದ್ದರು. ಲಖನೌನಲ್ಲಿರುವ ಅಖಿಲೇಶ್ ನಿವಾಸದಲ್ಲಿ ಸಭೆ ನಡೆದಿದೆ. ರಜನಿಕಾಂತ್ ಅವರು ನಿನ್ನೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರು. “ಹೃದಯಗಳು ಭೇಟಿಯಾದಾಗ, ಜನರು ಅಪ್ಪಿಕೊಳ್ಳುತ್ತಾರೆ” ಎಂಬ ಶೀರ್ಷಿಕೆಯೊಂದಿಗೆ ಅಖಿಲೇಶ್ ರಜನಿಕಾಂತ್ ಅವರೊಂದಿಗಿನ ಚಿತ್ರಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಗ ರಜನೀಕಾಂತ್ ಅವರನ್ನು ತೆರೆಯ ಮೇಲೆ ಕಂಡಾಗ ಅನುಭವಿಸಿದ ಸಂತೋಷ ಈಗಲೂ ಉಳಿದುಕೊಂಡಿದೆ ಮತ್ತು ಒಂಬತ್ತು ವರ್ಷಗಳ ಹಿಂದೆ ವೈಯಕ್ತಿಕವಾಗಿ ಭೇಟಿಯಾದಾಗಿನಿಂದ ಸ್ನೇಹಿತರಾಗಿದ್ದೇವೆ ಎಂದು ಅಖಿಲೇಶ್ ಟ್ವೀಟ್ ಮಾಡಿದ್ದಾರೆ. ಶನಿವಾರ ಲಕ್ನೋದಲ್ಲಿ ಜೈಲರ್ ನ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಚಿತ್ರ ವೀಕ್ಷಿಸಲು ಆಗಮಿಸಿದ್ದರು. ನಟ ಮುಖ್ಯಮಂತ್ರಿ ಯೋಗಿ…
ಮುಂಬೈ ವಿಮಾನ ನಿಲ್ದಾಣದಲ್ಲಿ ಭಾರೀ ಮಾದಕ ದ್ರವ್ಯ ದಂಧೆ ರೆವೆನ್ಯೂ ಇಂಟೆಲಿಜೆನ್ಸ್ ನಿರ್ದೇಶನಾಲಯ (ಡಿಆರ್ಐ) ಮಾರುಕಟ್ಟೆಯಲ್ಲಿ 15 ಕೋಟಿ ರೂಪಾಯಿ ಮೌಲ್ಯದ 1,496 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಂಡಿದೆ. ಘಟನೆಯಲ್ಲಿ ವಿದೇಶಿ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆಗಸ್ಟ್ 8 ರಂದು ಇಥಿಯೋಪಿಯಾದ ರಾಜಧಾನಿ ಅಡಿಸ್ ಅಬಾಬಾದಿಂದ ಮುಂಬೈಗೆ ಆಗಮಿಸಿದ್ದ ಭಾರತೀಯ ಪ್ರಯಾಣಿಕನಿಂದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಡಿಆರ್ಐ ಅಧಿಕಾರಿಗಳಿಗೆ ದೊರೆತ ಗೌಪ್ಯ ಮಾಹಿತಿ ಆಧರಿಸಿ ತನಿಖೆ ನಡೆಸಲಾಗಿದೆ. ಅವರ ಬ್ಯಾಗೇಜ್ನಿಂದ 15 ಕೋಟಿಗೂ ಹೆಚ್ಚು ಮೌಲ್ಯದ 1,496 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. DRI ಯ ನಂತರದ ಕಾರ್ಯಾಚರಣೆಯು ನವಿ ಮುಂಬೈನಲ್ಲಿ ಸ್ವೀಕರಿಸುವವರನ್ನು ಬಂಧಿಸಲು ಕಾರಣವಾಯಿತು. ಉಗಾಂಡಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ಇಸ್ರೋ ಪರೀಕ್ಷೆ ಬರೆಯುವವರಿಂದ ವಂಚನೆ ಪ್ರಕರಣದಲ್ಲಿ ಸೋಗು ಹಾಕುವುದು. ಹರಿಯಾಣ ನಿವಾಸಿಗಳು ಇನ್ನಿಬ್ಬರನ್ನು ಯಾಮಾರಿಸಿ ವಂಚಿಸಿದ್ದಾರೆ. ಅರ್ಜಿದಾರರ ಮೊಬೈಲ್ ಫೋನ್ ಕೂಡ ಅವರ ಬಳಿ ಇತ್ತು. ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನೇಮಕಾತಿ ಪರೀಕ್ಷೆಯಲ್ಲಿ ಕೃತಿಚೌರ್ಯ ನಡೆದಿದೆ. ಘಟನೆಯಲ್ಲಿ ಕಾಟನ್ ಹಿಲ್ ಶಾಲೆ ಮತ್ತು ಪಟ್ಟಂ ಶಾಲೆಯಲ್ಲಿ ಪರೀಕ್ಷೆ ಬರೆದವರನ್ನು ಬಂಧಿಸಲಾಗಿದೆ. ಅಭ್ಯರ್ಥಿಗಳು ಹೆಡ್ ಸೆಟ್ ಮತ್ತು ಮೊಬೈಲ್ ಫೋನ್ ಬಳಸಿ ಬ್ಲೂಟೂತ್ ಮೂಲಕ ನಕಲು ಮಾಡಿದ್ದಾರೆ. ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಳುಹಿಸಿದಾಗ ಹೊರಗಿನಿಂದ ಹೆಡ್ ಸೆಟ್ ಮೂಲಕ ಉತ್ತರ ಬಂತು. ಎಪ್ಪತ್ತೊಂಬತ್ತು ಅಂಕಗಳ ಉತ್ತರಗಳನ್ನು ಸಹ ಪ್ರತಿವಾದಿಗಳು ಸರಿಯಾಗಿ ಬರೆದಿದ್ದಾರೆ. ಹರಿಯಾಣ ಮೂಲದ ಸುನೀಲ್ ನನ್ನು ಕಾಟನ್ ಹಿಲ್ ಶಾಲೆಯಲ್ಲಿ ಬಂಧಿಸಲಾಗಿದೆ. ಹರ್ಯಾಣ ಮೂಲದ ಸುಮಿತ್ ಕುಮಾರ್ ಎಂಬಾತನನ್ನು ಪಟ್ಟಂನ ಸೇಂಟ್ ಮೇರಿ ಶಾಲೆಯಿಂದ ಬಂಧಿಸಲಾಗಿದೆ. ಮ್ಯೂಸಿಯಂ ಪೊಲೀಸರಿಗೆ ಸಿಕ್ಕ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ. ಬೆನೆಡಿಕ್ಟ್ ಕೇರಳದ ಇಡುಕಿ ಮೂಲದವನಾಗಿದ್ದು, 6 ತಿಂಗಳ ಹಿಂದೆ ಜಿಎನ್ ಎಂ ಕೋರ್ಸ್ಗೆ ಸೇರಿದ್ದ ಬೆನೆಡಿಕ್ಟ್ ಸಾಬು ತಾನು ಕೇರಳದ ಕೃಷಿ ಅಧಿಕಾರಿ ಎಂದು ಪ್ರಿನ್ಸಿಪಾಲ್ ಬಳಿ ಹೇಳಿದ್ದ. ಬಳಿಕ ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ಸದ್ಯ RAW ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳಿಕೊಂಡಿದ್ದ. ಕಾಲೇಜಿನಲ್ಲಿ ಡ್ರಗ್ಸ್ ಅವೇರ್ ನೆಸ್ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯ ಕಳ್ಳಾಟ ಬೆಳಕಿಗೆ ಬಂದಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಬೆನೆಡಿಕ್ಟ್ ಪೊಲೀಸ್ ಸಮವಸ್ತ್ರವನ್ನು ಹೊಲಿಸಿಕೊಂಡಿದ್ದ. ಅನುಮಾನಗೊಂಡು ಉರ್ವಾ ಠಾಣಾ ಪೊಲೀಸರು ವಿದ್ಯಾರ್ಥಿ ಬೆನೆಡಿಕ್ಟ್ ನನ್ನು ವಶಕ್ಕೆ ಪಡೆದಿದ್ದರು. ಇದೀಗ ನಕಲಿ RAW ಅಧಿಕಾರಿಯನ್ನ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಬಂಧಿತನಿಂದ ನಕಲಿ ಐಡಿ ಕಾರ್ಡ್ ಗಳು ಪೊಲೀಸ್ ಸಮವಸ್ತ್ರ, ಮೊಬೈಲ್ ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದಾರೆ.
ಅಮೆರಿಕದಲ್ಲಿ ಕರ್ನಾಟಕ ಮೂಲದ ದಂಪತಿ ಹಾಗೂ ಪುತ್ರ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ನಲ್ಲಿ ಈ ಘಟನೆ ನಡೆದಿದ್ದು, ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಪುತ್ರ ಯಶ್(6) ಮೃತಪಟ್ಟವರು. ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಕಳೆದ 9 ವರ್ಷಗಳಿಂದ ಯೋಗೇಶ್, ಪ್ರತಿಭಾ ಇಬ್ಬರೂ ಅಮೆರಿಕದಲ್ಲಿ ವಾಸವಾಗಿದ್ದರು. ವೃತ್ತಿಯಲ್ಲಿ ಇಬ್ಬರೂ ಇಂಜಿನಿಯರ್ ಆಗಿದ್ದರು. ಇದೀಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾವಿಗೆ ನಿಖರ ಕಾರಣ ತಿಳಿಸಿ ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರು: ಮದ್ಯದ ಅಮಲಿನಲ್ಲಿ ಬಿದ್ದು ಗಾಯಗೊಂಡಿದ್ದ ದಿನೇಶ್ ಸುಬ್ಬಾ (31), ತಮ್ಮ ಮೇಲೆ ಹಲ್ಲೆಯಾಗಿರುವುದಾಗಿ ಸುಳ್ಳು ದೂರು ನೀಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ‘ಸಿಕ್ಕಿಂನ ದಿನೇಶ್, ನಗರದ ರೆಸ್ಟೋರೆಂಟ್ ವೊಂದರ ಕೆಲಸಗಾರ, ಚೀನಾ ಪ್ರಜೆಯೆಂದು ತಿಳಿದು ದುಷ್ಕರ್ಮಿಗಳು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿ ದೂರು ನೀಡಿದ್ದರು. ತನಿಖೆ ಕೈಗೊಂಡಾಗ, ದಿನೇಶ್ ಅವರೇ ಸುಳ್ಳು ದೂರು ನೀಡಿರುವುದು ಗೊತ್ತಾಗಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸ್ ಮೂಲಗಳು ಹೇಳಿವೆ.
ಬೆಂಗಳೂರು: ವ್ಯಾಪಾರಿ ಸೋಗಿನಲ್ಲಿ ಸುತ್ತಾಡಿ ಸೈಕಲ್ ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಶೇಖರ್ನನ್ನು (50) ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಶ್ರೀರಾಮಪುರ ದಯಾನಂದನಗರದ ನಿವಾಸಿ ಶೇಖರ್, ಹಲವು ದಿನಗಳಿಂದ ಸೈಕಲ್ ಕಳ್ಳತನ ಮಾಡುತ್ತಿದ್ದ. ಈತನನ್ನು ಬಂಧಿಸಿ ಗೆ 5 ಲಕ್ಷ ಮೌಲ್ಯದ 19 ಸೈಕಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಮಲ್ಲೇಶ್ವರ ನಿವಾಸಿಯೊಬ್ಬರ 65 ಸಾವಿರ ಮೌಲ್ಯದ ಸೈಕಲ್ ಇತ್ತೀಚೆಗೆ ಕಳ್ಳತನವಾಗಿತ್ತು.
ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ಸೊಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದ ಪರಿಣಾಮ ವೃತ್ತಕ್ಕೆ ಹಾನಿಯಾಗಿದ್ದು, ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ ಎನ್ನಲಾಗಿದೆ. ಇಂದು ಮುಂಜಾನೆ ಮಂಜು ಮುಸುಕಿದ ವಾತಾವರಣದಿಂದಾಗಿ ರಸ್ತೆ ಸರಿಯಾಗಿ ಗೋಚರಿಸದೇ ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಇದೇ ಮೊದಲ ಬಾರಿ ಭಾರೀ ಹಾನಿ ಸಂಭವಿಸಿದೆ. ಜೊತೆಗೆ ಕೆಎಸ್ ಆರ್ ಟಿಸಿ ಬಸ್ ಕೂಡ ಜಖಂಗೊಂಡಿದೆ. ವರದಿ: ಮಂಜು, ಶ್ರವಣೂರು
ರಾಜ್ಯ ರಾಜಕಾರಣದಲ್ಲಿ ಮತ್ತೆ ಪಕ್ಷಾಂತರ ಪರ್ವ ಆರಂಭವಾಗುತ್ತಿದೆಯೇ ಅನ್ನುವ ಅನುಮಾನ ಆರಂಭಗೊಂಡಿದ್ದು, ಕಳೆದ ಚುನಾವಣೆಯಲ್ಲಿ ಆಪರೇಷನ್ ಕಮಲ ನಡೆದಿದ್ದರೆ, ಈ ಬಾರಿ ಆಪರೇಷನ್ ಹಸ್ತ ಸದ್ದು ಮಾಡ್ತಿದೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದು, ಒಟ್ಟು 20 ಶಾಸಕರು ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರಿಂದ ನಮಗೆ ಭಯ ಇದೆ 24 ಗಂಟೆಯೂ ನಾವು ಎಚ್ಚರದಿಂದ ಇರಬೇಕು ಎಂದು ಅವರು ಹೇಳಿದ್ರು. ಪಕ್ಷದ ತತ್ವ ಸಿದ್ದಾಂತಕ್ಕೆ ಒಪ್ಪಿ ಬರುವವರು ಖಂಡಿತ ಬರಬಹುದು. ಸಹೋದರ ರಮೇಶ್ ಜಾರಕಿಹೊಳಿಯನ್ನ ಮತ್ತೆ ಪಾಪಸ್ಸು ಕಾಂಗ್ರೆಸ್ಗೆ ಕರೆತರುವ ವಿಚಾರವಾಗಿ ಮಾತನಾಡಿದ ಅವರು ನನಗೆ ಆ ಕುರಿತು ತಿಳಿದಿಲ್ಲ ಪಕ್ಷದ ಹಿರಿಯರು ಏನು ಹೇಳುತ್ತಾರೆ ಅದಕ್ಕೆ ನಾವು ಬದ್ಧ ಎಂದರು.
ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು 4 ಜಿಲ್ಲೆಗಳಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.