Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಸಿದ್ಧ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ ಅಲಿಯಾಸ್ ಮೈಲಾರಿಯನ್ನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಲಾಗಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಮ್ಯೂಸಿಕ್ ಮೈಲಾರಿ ಹಾಡಲು ಬಂದಿದ್ದನು. ಇದೇ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಲಾಡ್ಜ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಈ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ಈ ಸಂಬಂಧ ಡಿಸೆಂಬರ್ 14 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ನಡೆದ ಸ್ಥಳ ಮಹಾಲಿಂಗಪುರ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿತ್ತು. ಪೊಲೀಸ್ ಕಾರ್ಯಾಚರಣೆ: ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ ಮೈಲಾರಿಗಾಗಿ ಬಾಗಲಕೋಟೆ ಪೊಲೀಸರು ಮೂರ್ನಾಲ್ಕು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು. ಇಂದು (ಡಿಸೆಂಬರ್ 17) ಬೆಳಿಗ್ಗೆ ಮೈಲಾರಿ ಮಹಾರಾಷ್ಟ್ರದ ಜತ್ತ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದಾಗ…
ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿಯಲ್ಲಿನ ವಿಳಂಬ ಹಾಗೂ ಸಚಿವರ ತಪ್ಪು ಮಾಹಿತಿಯ ವಿಚಾರ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಬಾಕಿ ಹಣದ ಕುರಿತು ನಡೆದ ಚರ್ಚೆಯು ವಾಗ್ವಾದಕ್ಕೆ ತಿರುಗಿ, ಅಂತಿಮವಾಗಿ ವಿರೋಧ ಪಕ್ಷಗಳು ಸದನದಿಂದ ಸಭಾತ್ಯಾಗ ಮಾಡಿದವು. ಗೈರಾದ ಸಚಿವೆ ವಿರುದ್ಧ ಆಕ್ರೋಶ: ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯ ಬಗ್ಗೆ ಪ್ರಶ್ನಿಸಿದರು. ಕಳೆದ ಮೂರು ದಿನಗಳಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ಗೈರಾಗಿರುವುದನ್ನು ಪ್ರಶ್ನಿಸಿದ ಅಶೋಕ್, “ಸಚಿವರು ಮೊದಲು ಸದನಕ್ಕೆ ಬಂದು ಉತ್ತರ ನೀಡಲಿ. ಎರಡು ತಿಂಗಳ ಹಣ ಎಲ್ಲಿ ಹೋಯಿತು? ಸರ್ಕಾರ ದಿವಾಳಿಯಾಗಿದೆಯೇ ಅಥವಾ ಚುನಾವಣಾ ವೆಚ್ಚಕ್ಕೆ ಹಣ ಬಳಸಲಾಗಿದೆಯೇ?” ಎಂದು ಆಕ್ರೋಶ ಹೊರಹಾಕಿದರು. ಸದನದ ಬಾವಿಗಿಳಿದು ಧರಣಿ: ವಿಪಕ್ಷಗಳ ಗದ್ದಲ ಹೆಚ್ಚಾದಂತೆ ಬಿಜೆಪಿ ಮತ್ತು…
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಡಿ.31 ರಂದು ಬುಧವಾರ ತುಮಕೂರು ಎಂ.ಜಿ. ರಸ್ತೆಯಲ್ಲಿರುವ ಬಾಲ ಭವನದಲ್ಲಿ ನಡೆಯುವ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ನೌಕರರ ದಿನಾಚರಣೆಯಲ್ಲಿ ತುಮಕೂರು ತಾಲೂಕು ಮತ್ತು ನಗರದಲ್ಲಿರುವ 80 ವರ್ಷ ತುಂಬಿದ ಹಿರಿಯ ಸದಸ್ಯರುಗಳನ್ನು ಸನ್ಮಾನಿಸಲಾಗುವುದು. ಹಿಂದೆ ಸನ್ಮಾನ ಕ್ಕೆ ಒಳಪಡದ ವರು ಮಾತ್ರ ಅರ್ಹರು. ಅಂತಹವರು ನಿಗದಿತ ನಮೂನೆಯಲ್ಲಿ ತಮ್ಮ ಬಗ್ಗೆ ಮಾಹಿತಿಯನ್ನು ಸಂಘದ ಕಚೇರಿಗೆ ದಿನಾಂಕ 23.12.2025 ರ ಒಳಗಾಗಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9449043055 ನ್ನು ಸಂಪರ್ಕಿಸ ಬೇಕೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಮೈಸೂರಿನಲ್ಲಿ ಡಿ.28ರಂದು ನಡೆಯಲಿರುವ ರಾಜ್ಯ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಡಿ.18ರಂದು ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ. ಪುರುಷರು ಮತ್ತು ಮಹಿಳೆಯರಿಗೆ 10ಕಿ.ಮೀ., 20ವರ್ಷದ ಬಾಲಕ ಮತ್ತು ಬಾಲಕಿಯರಿಗೆ 8 ಹಾಗೂ 6 ಕಿ.ಮೀ, 18 ವರ್ಷದ ಬಾಲಕ ಬಾಲಕಿಯರಿಗೆ 6 ಮತ್ತು 4 ಕಿ.ಮೀ., 16 ವರ್ಷದ ಬಾಲಕ ಬಾಲಕಿಯರಿಗೆ 2 ಕಿ.ಮೀ ದೂರದ ಸ್ಪರ್ಧೆಗಳು ಇರಲಿವೆ. ಆಯ್ಕೆ ಪ್ರಕ್ರಿಯೆ ಬೆಳಗ್ಗೆ 8:30 ಮತ್ತು ಸಂಜೆ 4:30 ಗಂಟೆಗೆ ನಡೆಸಲಾಗುವುದು. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಆಯ್ಕೆಯ ದಿನದಂದು ವಯಸ್ಸಿನ ದೃಡೀಕರಣ ಪತ್ರ, ಆಧಾರ್ ಕಾರ್ಡ್ ಹಾಜರು ಪಡಿಸಿ ಜಿಲ್ಲಾ ಅಥ್ಲೆಟಿಕ್ ತರಬೇತುದಾರ ಶಿವಪ್ರಸಾದ್ ಅವರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964529175 ಅನ್ನು ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ಬೆಂಗಳೂರು ಇವರು ಪ್ರತಿ ವರ್ಷ ಕೊಡಮಾಡುವ “ಲೋಹಿಯಾ ಪ್ರಶಸ್ತಿ” 2025-26 ನೇ ಸಾಲಿನ ಸಾಧಕರಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತಪರ ಜನಪರ ಹೋರಾಟಗಳು ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನಾಂಕ 19–12–2025 ರ ಶುಕ್ರವಾರ ಬೆಳಗ್ಗೆ 11:15 ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ…
ಬೆಂಗಳೂರು: ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ರಾಜ್ಯದ ಪ್ರಮುಖ ಜೈಲುಗಳಲ್ಲಿ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. ಕಳೆದ 36 ಗಂಟೆಗಳಿಂದ ನಡೆದ ಈ ವಿಶೇಷ ತಪಾಸಣೆಯಲ್ಲಿ ಕೈದಿಗಳ ಬಳಿ ಇದ್ದ ಮೊಬೈಲ್ ಫೋನ್ಗಳು, ಸಿಮ್ ಕಾರ್ಡ್ಗಳು, ಮಾದಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿವಿಧ ಜೈಲುಗಳಲ್ಲಿ ನಡೆದ ಕಾರ್ಯಾಚರಣೆ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮೈಸೂರು, ಮಂಗಳೂರು, ಬೆಳಗಾವಿ ಮತ್ತು ವಿಜಯಪುರ ಜೈಲುಗಳಲ್ಲಿ ಈ ಮಿಂಚಿನ ದಾಳಿ ನಡೆಸಲಾಗಿದೆ. ಪರಪ್ಪನ ಅಗ್ರಹಾರ (ಬೆಂಗಳೂರು): ಇಲ್ಲಿ ನಡೆಸಿದ ತಪಾಸಣೆಯಲ್ಲಿ 14 ಮೊಬೈಲ್ ಫೋನ್ಗಳು, 9 ಸಿಮ್ ಕಾರ್ಡ್ಗಳು, ಚಾರ್ಜರ್ಗಳು ಮತ್ತು 10 ವಿವಿಧ ಬಗೆಯ ಚಾಕುಗಳು ಪತ್ತೆಯಾಗಿವೆ. ಮೈಸೂರು ಜೈಲು: ಇಲ್ಲಿ ಅತಿ ಹೆಚ್ಚು ಎಂದರೆ 9 ಮೊಬೈಲ್ ಫೋನ್ಗಳು ಹಾಗೂ 11 ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜೈಲು: ಇಲ್ಲಿ 4 ಮೊಬೈಲ್ ಫೋನ್ಗಳು…
ಬೆಂಗಳೂರು: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಐತಿಹಾಸಿಕ ಜಯ ಸಾಧಿಸಿ ದೇಶಕ್ಕೆ ಕೀರ್ತಿ ತಂದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಟಾಟಾ ಮೋಟಾರ್ಸ್ ಸಂಸ್ಥೆಯು ಹೊಚ್ಚ ಹೊಸ ‘ಟಾಟಾ ಸಿಯೆರಾ’ (Tata Sierra) ಕಾರನ್ನು ಉಡುಗೊರೆಯಾಗಿ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ ಭಾರತೀಯ ವನಿತೆಯರ ಸಾಧನೆಯನ್ನು ಗೌರವಿಸಲು ಟಾಟಾ ಸಮೂಹ ಈ ನಿರ್ಧಾರ ಕೈಗೊಂಡಿದೆ. ಇತ್ತೀಚೆಗೆ ನಡೆದ ವಿಶೇಷ ಸಮಾರಂಭದಲ್ಲಿ ಟಾಟಾ ಸನ್ಸ್ ಮತ್ತು ಟಾಟಾ ಮೋಟಾರ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಆಟಗಾರ್ತಿಯರಿಗೆ ಕಾರಿನ ಕೀ ಹಸ್ತಾಂತರಿಸಿದರು. ವಿಶೇಷತೆಗಳು: ಟಾಟಾ ಮೋಟಾರ್ಸ್ ಕೇವಲ ಕಾರನ್ನು ನೀಡುವುದಲ್ಲದೆ, ಆಟಗಾರ್ತಿಯರ ಇಷ್ಟದ ಬಣ್ಣದ ಕಾರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನೂ ನೀಡಿತ್ತು. ಉಡುಗೊರೆಯಾಗಿ ನೀಡಲಾದ ‘ಟಾಟಾ ಸಿಯೆರಾ’ ಟಾಪ್ ಎಂಡ್ ಮಾಡೆಲ್ ಕಾರಿನ ಎಕ್ಸ್ ಶೋ ರೂಂ ಬೆಲೆ ಸುಮಾರು 21.29 ಲಕ್ಷ ರೂಪಾಯಿಗಳಾಗಿದ್ದು, ಆನ್ ರೋಡ್…
ಕುಣಿಗಲ್: ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ ಮುಂದಿನ ವರ್ಷದಿಂದ ಸರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸಭೆಯಲ್ಲಿ ಮಾತನಾಡಿದ ಅವರು, 2024–25ರಲ್ಲಿ ನಬಾರ್ಡ್ ನಿಂದ ಕಡಿಮೆ ಬಡ್ಡಿ ದರದಲ್ಲಿ 5,600 ಕೋಟಿ ಬರಬೇಕಾಗಿತ್ತು. ಅದರಲ್ಲಿ 3,415 ಕೋಟಿ ರೂ. ಬಂದಿದ್ದು, 2,185 ಕೋಟಿ ರೂ.ಗಳ ಕೊರತೆಯಾಗಿದೆ. ಮಧುಗಿರಿ ತಾಲ್ಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲ್ಲೂಕಿಗೆ ಅನುದಾನ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ ಮಧುಗಿರಿಯಲ್ಲಿ ಶೇ. 6 ರಷ್ಟು ಎ ಸ್ಸಿ ಹಾಗೂ ಎಸ್ಟಿ ಸಮುದಾಯದವರಿದ್ದು, ಕುಣಿಗಲ್ ನಲ್ಲಿ ಕೇವಲ ಶೇ.8 ರಷ್ಟು ಮಾತ್ರ ಎಸ್ ಸಿ ಮತ್ತು ಎಸ್ ಟಿ ಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು. ಆದರೆ ಮುಂದಿನ ವರ್ಷದಿಂದ ಈ ತಾರತಮ್ಯವನ್ನು ಕಾನೂನುಪ್ರಕಾರ ನಿವಾರಣೆ ಮಾಡಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಹಾವೇರಿ: “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು, ಆಡಳಿತ ಯಂತ್ರ ಸತ್ತುಹೋಗಿದೆ. ಪ್ರತಿದಿನ ಒಂದಲ್ಲ ಒಂದು ಹೊಸ ಹಗರಣಗಳು ಹೊರಬರುತ್ತಿದ್ದು, ಇದೊಂದು ಹಗರಣಗಳ ಸರಮಾಲೆಯ ಸರ್ಕಾರವಾಗಿದೆ,” ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ತೀವ್ರವಾಗಿ ಟೀಕಿಸಿದ್ದಾರೆ. ಹಾವೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ ಎಂಬ ಭಾವನೆಯೇ ಜನರಲ್ಲಿ ಇಲ್ಲದಂತಾಗಿದೆ. ಮುಂಜಾನೆ ಒಂದು ಹಗರಣವಾದರೆ, ಮಧ್ಯಾಹ್ನ ಮತ್ತೊಂದು, ಸಂಜೆ ಮಗದೊಂದು ಎಂಬಂತೆ ಭ್ರಷ್ಟಾಚಾರದ ಸರಣಿ ಮುಂದುವರಿಯುತ್ತಿದೆ ಎಂದು ಆರೋಪಿಸಿದರು. ಅಧಿಕಾರಿಗಳ ಮೇಲೆ ಹಿಡಿತವಿಲ್ಲ: ಸರ್ಕಾರದ ಅಸ್ಥಿರತೆಯ ಬಗ್ಗೆ ಮಾತನಾಡಿದ ಪಾಟೀಲ್, “ಈ ಸರ್ಕಾರ ಯಾವಾಗ ಬಿದ್ದುಹೋಗುತ್ತದೆಯೋ ಎಂಬ ಆತಂಕದಲ್ಲಿ ಸಚಿವರಿದ್ದಾರೆ. ಸರ್ಕಾರ ಡೋಲಾಯಮಾನವಾಗಿದ್ದಾಗ ಅಧಿಕಾರಿಗಳು ಯಾರ ಮಾತನ್ನೂ ಕೇಳುವುದಿಲ್ಲ. ಅಭಿವೃದ್ಧಿ ಕೆಲಸಗಳ ಬಗ್ಗೆ ಪತ್ರ ಬರೆದರೆ ಕನಿಷ್ಠ ಸೌಜನ್ಯಕ್ಕೂ ಉತ್ತರ ನೀಡದ ಪರಿಸ್ಥಿತಿ ನಿರ್ಮಾಣವಾಗಿದೆ. ಆಡಳಿತ ಶೂನ್ಯವಾಗಿರುವುದರಿಂದ ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ,” ಎಂದರು. ಭ್ರಷ್ಟಾಚಾರದ ಆರೋಪ: ಹಿಂದಿನ…
ತುಮಕೂರು: ತುಮಕೂರಿನ ಮರಳೂರು ದಿಣ್ಣೆ ಸರ್ಕಾರಿ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಮತ್ತು ದೀಕ್ಷಾ ವಸ್ತ್ರ ಧರಿಸಿ ಶಾಲೆಗೆ ಬಂದಿದ್ದ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕಿ ಹೊರಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ, ಈ ಆರೋಪವನ್ನು ಶಾಲೆಯ ಮುಖ್ಯಶಿಕ್ಷಕಿ ಭಾಗ್ಯ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ತಾವು ಮಕ್ಕಳನ್ನು ಶಾಲೆಯಿಂದ ಹೊರಕ್ಕೆ ಕಳುಹಿಸಿಲ್ಲ, ಬದಲಾಗಿ ಅವರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಿದ್ದಾಗಿ ತಿಳಿಸಿದ್ದಾರೆ. ಶಾಲೆಯಲ್ಲಿ ಮೊಟ್ಟೆ ಬೇಯಿಸುವ ವ್ಯವಸ್ಥೆ ಇರುವುದರಿಂದ ಮತ್ತು ಮಾಲೆ ಧರಿಸಿದ ವಿದ್ಯಾರ್ಥಿಗಳ ಧಾರ್ಮಿಕ ನಿಯಮಗಳಿಗೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಸಮವಸ್ತ್ರ ನಿಯಮಗಳ ಬಗ್ಗೆ ಬಿಇಒ ಅವರ ಸೂಚನೆಯನ್ನು ಮಕ್ಕಳಿಗೆ ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಹಿಂದೂ ಹಿತರಕ್ಷಣಾ ವೇದಿಕೆಯ ಮುಖಂಡರು, ಮಕ್ಕಳ ಧಾರ್ಮಿಕ ಶ್ರದ್ಧೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಡಿಡಿಪಿಐಗೆ ದೂರು ನೀಡಿದ್ದಾರೆ. ಈ ಹಿಂದೆ ಚಿಕ್ಕಮಗಳೂರಿನ ಕಾಲೇಜೊಂದರಲ್ಲೂ ಇಂತಹದ್ದೇ ಘಟನೆ ನಡೆದಿದ್ದು, ಈಗ…