Author: admin

ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೆ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಪ್ರಿಯತಮೆ ಬರೂತಿ ಈ ಕೃತ್ಯ ಎಸಗಿದ್ದಾಳೆ. ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಬೇರೆ ಹುಡುಗಿಯ ಜೊತೆಗೆ ಸಂಪರ್ಕ ಹೊಂದಿದ್ದು ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಳಗಾವಿ: ಜೀವನದಲ್ಲಿ ಜೀಗುಪ್ಸೆ ಹೊಂದಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನ ಟ್ರಾಫಿಕ್ ಕಾನ್ಸ್‌ಸ್ಟೇಬಲ್‌ ರಕ್ಷಣೆ ಮಾಡಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ 44 ವರ್ಷದ ಶಿವಲೀಲಾ ಪರ್ವತಗೌಡ್ರ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರಿಂದ ಉತ್ತರ ಸಂಚಾರ ಠಾಣೆ ಪಿಸಿ ಕಾಶಿನಾಥ್ ಈರಿಗಾರ ಎಂಬವರಿಗೆ ವಿಷಯ ತಿಳಿಯುತಿದ್ದಂತೆ ಕೆರೆಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ಲೆಕ್‍ ವ್ಯೂ ಆಸ್ಪತ್ರೆ ಪಾಯಿಂಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಷಯ ತಿಳಿದಿದೆ. ಈ ವೇಳೆ 5 ಅಡಿ ಎತ್ತರದ ಬ್ಯಾರಿಕೇಡ್ ಮೇಲಿಂದ ಜಿಗಿದು ಮಹಿಳೆಯರ ಪ್ರಾಣ ಕಾಪಾಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದು 5 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬಾಗಲಕೋಟೆ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ತಾಂತ್ರಿಕ ಕೌಶಲ್ಯಗಳಿಗೆ ಪ್ರಾದ್ಯಾನ್ಯತೆ ನೀಡಬೇಕು. ಪ್ರಾಯೋಗಿಕ ವಿಷಯಗಳ ಕಲಿಕೆಯಲ್ಲಿ ನೈಪುಣ್ಯತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಕಿತ್ತೂರಿನ ಕೆ.ಎನ್.ವಿ.ವಿ.ಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಂಗೀತ ವಿಭಾಗದ ಪ್ರೋ.ನಾಗರಾಜ ಎಚ್.ಕೆ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಂಗೀತ ವಿಭಾಗದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಕಿರು ಉಪನ್ಯಾಸದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂಗೀತ ಅಧ್ಯಯನದಲ್ಲಿ ಕೌಶಲ್ಯಗಳ ಅಭಿವೃದ್ಧಿ ಮುಖ್ಯ. ನೂತನ ಶಿಕ್ಷಣ ಪದ್ದತಿಯಲ್ಲಿ ಸಂಗೀತದ ಆಶೋತ್ತರಗಳನ್ನು ಈಡೇರಿಸುವುದು ಒಂದು ಸವಾಲವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಗೀತ ಹೊಸದು ಮತ್ತು ಉಳಿದ ವಿಷಯಗಳಿಗಿಂತ ವಿಭಿನ್ನವಾಗಿದೆ. ಗುರುಕುಲ ಪದ್ಧತಿಯ ಪರಂಪರೆ ಮುಂದುವರಿಸಿಕೊಂಡು ಬಂದಿರುವ ವಿಭಾಗವಾಗಿದೆ ಎಂದರು. ಸಂಗೀತಕ್ಕೆ ಹಲವಾರು ವೈಶಿಷ್ಟ್ಯತೆಗಳಿವೆ. ಹಲವಾರು ವಿದ್ವಾಂಸರು ರಾಗಗಳ ಬಗ್ಗೆ ಚಿಂತನೆ ಮಾಡಿದ್ದಾರೆ. 12ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಸಂಗೀತದ ಪರಿಕಲ್ಪನೆ ಮಂಡಿಸಿದ್ದಾರೆ. ಸ್ವರ, ನಾದ, ಶೃತಿ ,ಸಪ್ತಂಕ ರಾಗಗಳನ್ನು ಈ ಎಲ್ಲ ಅಂಶಗಳನ್ನು ವಿದ್ಯಾರ್ಥಿಗಳು…

Read More

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ಸರ್ಕಾರದ ವಿರುದ್ದ ಮಾಜಿ‌ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹೌದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದು, ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಸರಕಾರಿ ಶಾಲಾ,ಕಾಲೇಜುಗಳು ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿದ್ದು,ಇವುಗಳ ಪೂರೈಸುವ ನಿಟ್ಟಿನಲ್ಲಿ ಸರಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಒತ್ತಾಯಿಸಿದ್ದಾರೆ. ತುಮಕೂರು ನಗರದ ಕನ್ನಡ ಭವನದಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ)ಆಯೋಜಿಸಿದ್ದ ನಿವೃತ್ತ ಪ್ರಾಂಶುಪಾಲ ರಿಗೆ ಸನ್ಮಾನ,ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ,ಪ್ರಾಂಶುಪಾಲರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು,ಸರಕಾರಿ ಕಾಲೇಜುಗಳಲ್ಲಿ,ಅದರಲ್ಲಿಯೂ ವಿಜ್ಞಾನ ಕಾಲೇಜುಗಳು,ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇಂದಿಗೂ ಕಾಡುತ್ತಿದೆ.ಗುಣಮಟ್ಟ ಶಿಕ್ಷಣ ಮಕ್ಕಳಿಗೆ,ಅದರಲ್ಲಿಯೂ ಗ್ರಾಮೀಣ ಮಕ್ಕಳಿಗೆ ದೊರೆಯಬೇಕಾದರೆ, ಮೂಲಭೂತ ಸೌಕರ್ಯಗಳ ಕೊರತೆ ನೀಗಬೇಕಿದೆ ಎಂದರು. ಕಳೆದ 20 ವರ್ಷಗಳಿಂದ ವೈ.ಎ.ನಾರಾಯಣಸ್ವಾಮಿ ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತಿದ್ದಾರೆ. ಅನುದಾನಿತ ಕಾಲೇಜುಗಳ ಖಾಲಿ ಹುದ್ದೆಗಳ ತುಂಬಲು ಸರಕಾರದ ಮೇಲೆ ಒತ್ತಡ ತಂದಿದ್ದಾರೆ. 2020ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುವಂತೆ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ನಮ್ಮಲ್ಲಿದೆ.ಗ್ರಾಮೀಣ ಭಾಗದಲ್ಲಿ ಕೆಲ ಅನುದಾನಿತ ಕಾಲೇಜುಗಳು ಏಕ ಶಿಕ್ಷಕ ಶಾಲೆಯಂತೆ ಗೋಚರಿಸುತಿದ್ದು, ಇದೇ…

Read More

ತುರುವೇಕೆರೆ: ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದ ಅಂಬೇಡ್ಕರ್ ರಸ್ತೆಯಲ್ಲಿರುವ ಪೂಜಾ ಫ್ಯಾನ್ಸಿ ಸ್ಟೋರ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ಕಳ್ಳರು ದೋಚಿದ ಘಟನೆ ನಡೆದಿದೆ ಅಂಗಡಿಗೆ ಬಂದಿದ್ದ ತಾಲೂಕಿನ ತಾಳ್ಕೆರೆ ಗ್ರಾಮದ ನಿವಾಸಿ ಶಾಲಿನಿ ಕುಮಾರಸ್ವಾಮಿ ಎಂಬ ಮಹಿಳೆ, ಸ್ಕೂಟಿಯನ್ನು ಅಂಗಡಿಯ ಹೊರಗೆ ನಿಲ್ಲಿಸಿ ಒಳಗೆ ಹೋಗಿದ್ದರು. ಈ ವೇಳೆ ವಾಹನದ ಡಿಕ್ಕಿಯಲ್ಲಿದ್ದ ಸುಮಾರು 93,000 ರೂಪಾಯಿಗಳನ್ನು  ಕ್ಷಣ ಮಾತ್ರದಲ್ಲೇ  ಕಳ್ಳರು ಎಗರಿಸಿದ್ದಾರೆ. ಈ ಕೃತ್ಯ ನಡೆದ ಸ್ಥಳದಲ್ಲಿ ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಕಳೆದ ವಾರವಷ್ಟೇ ಬಾಣಸಂದ್ರ ರಸ್ತೆಯಲ್ಲಿರುವ ಶಾರದಾ ಎಲೆಕ್ಟ್ರಿಕಲ್ಸ್ ನ ಅಂಗಡಿಯಲ್ಲಿ ಕಳ್ಳತನವಾಗಿತ್ತು.  ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇಹ ಘಟನೆ ನಡೆದಿದೆ. ಈ ಘಟನೆಗಳು ಜನರ ನೆಮ್ಮದಿ ಕೆಡಿಸಿದೆ. ಘಟನೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಈವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ ಎನ್ನುವುದು…

Read More

ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ . ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ. ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ…

Read More

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ. ವಿರೋಧಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು.ಅವರು ನಡವಳಿಕೆ ಸರಿಯಿರದಿದ್ದ ಕಾರಣ , ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ , ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…

Read More

ಬೆಂಗಳೂರು: ಪುಸ್ತಕಗಳಿಗೆ ಸರ್ಕಾರದ ಪ್ರೋತ್ಸಾಹ ಹೆಚ್ಚಾದರೆ ಸಾಹಿತ್ಯದ ಮೌಲ್ಯ ಕಡಿಮೆಯಾಗುತ್ತದೆ. ಕಳಪೆ ಸಾಹಿತ್ಯ ಹೆಚ್ಚಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ವಿಶ್ವವಾಣಿ ಪುಸ್ತಕ ಹೊರ ತಂದಿರುವ ಆರು ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದು ಬಿಡುಗಡೆಯಾಗಿರುವ ಪುಸ್ತಕಗಳಲ್ಲಿ ಅರ್ಥಪೂರ್ಣವಾಗಿ ಬದುಕಿನ ಒಳ ಮರ್ಮ ಹೇಳುವ ಅಂಕಣಗಳು ಇದರಲ್ಲಿವೆ. ವಿಶ್ವೇಶ್ವರ ಭಟ್ಟರು ಪ್ರತಿದಿನ ಹೊಸದನ್ನು ಹುಡುಕಿ ಜನರಿಗೆ ತಿಳಿಸುತ್ತಾರೆ. ಜನರಿಗೆ ಏನಾದರೂ ಹೇಳುವುದು ಬಹಳ ಕಷ್ಟ. ಅವರಲ್ಲಿ ಇರುವ ಚಿಂತನಾ ಶಕ್ತಿ ಸದಾ ಜೀವಂತ ಇರುವುದನ್ನು ನಾನು ಕಂಡಿದ್ದೇನೆ. ಅವರು ಒಬ್ಬ ಕೇವಲ ಪತ್ರಕರ್ತನಾಗಿ ಬೆಳೆದಿಲ್ಲ. ಒಬ್ಬ ಪತ್ರಕರ್ತ ಎಲ್ಲ ರಂಗದವರೊಂದಿಗೆ ಸಂಪರ್ಕ ಹೊಂದಿರದಿದ್ದರೆ, ಅವರು ಜನರ ಮನಸಿನಿಂದ ದೂರವಾಗುತ್ತಾನೆ ಎಂದರು. ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಪತ್ರಕರ್ತರಿಲ್ಲದೆ ರಾಜಕಾರಣ ಇಲ್ಲ. ರಾಜಕಾರಣಿಗಳಿಲ್ಲದೆ ಪತ್ರಿಕೋದ್ಯಮ‌ ಇಲ್ಲ. ಟೀಕೆ ಮಾಡಲಿಕ್ಕೆ ಆದರೂ ಪತ್ರಿಕೆಗಳಿಗೆ ರಾಜಕಾರಣಿಗಳು ಬೇಕು. ರಾಜಕಾರಣಿಗಳು ಭ್ರಮೆಯಲ್ಲಿರುತ್ತೇವೆ. ಆದರೆ ವಾಸ್ತವ ಹಾಗೆ ಇರುವುದಿಲ್ಲ‌…

Read More

ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27 ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ಧೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಅವರು, ಮೇ 27ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸರಗಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ, ಆರೋಪಿಗಳಿಬ್ಬರು ಸರಗಳ್ಳತನ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಪೊಲೀಸರಿಂದ ಬಂಧನವಾಗಿರುವುದನ್ನು ತಿಳಿದು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆಯಲಾಗಿತ್ತು. ಈ ವೇಳೆ ಬಂಧಿತರಿಂದ ಮೂರು ಲಕ್ಷ ರೂ ಮೌಲ್ಯದ ಒಟ್ಟು 49 ಗ್ರಾಂ ತೂಕದ ಚಿನ್ನದ…

Read More