Subscribe to Updates
Get the latest creative news from FooBar about art, design and business.
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
- NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
- ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
Author: admin
ನಾಲ್ವಡಿ ಕೃಷ್ಣರಾಜ ಒಡೆಯರು ಬ್ರಿಟೀಷರನ್ನು ಚಾಕಚಕ್ಯತೆಯಿಂದ ಎದುರಿಸಿ ಕನ್ನಡಿಗರ ಅಸ್ಮಿತೆ ಉಳಿಸಿದರು’ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಶುಕ್ರವಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿಯನ್ನು ಅನಾವರಣ ಮಾಡಿ ಅವರು ಮಾತನಾಡಿದರು. ‘ಬ್ರಿಟಿಷರ ಒಡೆದು ಆಳುವ ನೀತಿಯನ್ನು ಸಕಾರಾತ್ಮಕವಾಗಿ ಮೆಟ್ಟಿ ನಿಲ್ಲುವ ದೃಷ್ಟಿಯಿಂದ ಕನ್ನಡಿಗರನ್ನು ಒಂದುಗೂಡಿಸಲು ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿರುವುದು ಅವರ ದೂರದೃಷ್ಟಿಯ ದ್ಯೋತಕ’ ಎಂದು ಬಣ್ಣಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ ಪುತ್ಥಳಿಯು ಪರಿಷತ್ತಿನ ಮೊದಲ ಮಹಡಿಯಲ್ಲಿತ್ತು. ಪರಿಷತ್ತಿನ ಅಧ್ಯಕ್ಷರನ್ನು ನೋಡಲು ಬರುವವರು ಮಾತ್ರ ಮಹಾರಾಜರ ಪುತ್ಥಳಿಯ ದರ್ಶನವನ್ನು ಪಡೆಯಬಹುದಿತ್ತು. ಈಗ ಪುತ್ಥಳಿಯನ್ನು ಪರಿಷತ್ತಿನ ಆವರಣದಲ್ಲಿ ಸ್ಥಾಪನೆ ಮಾಡಿ ಜನ ಸಾಮಾನ್ಯರೂ ನಾಲ್ವಡಿ ಅವರಿಗೆ ಗೌರವ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ’ ಎಂದು ತಿಳಿಸಿದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮಾತನಾಡಿ, ಪುತ್ಥಳಿಯ ಜೊತೆಗೆ ಮಹಾಪುರುಷರ ಬದುಕು,…
ಶಾಂತಿ ಪ್ರಿಯರಾದ ಕ್ರೈಸ್ತರ ಸೇವೆ ಸಮಾಜಕ್ಕೆ ಅತ್ಯಗತ್ಯ. ಕ್ರೈಸ್ತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕನ್ನಡ ಕ್ರೈಸ್ತರ ಪರವಾಗಿ ಕರ್ನಾಟಕ ಪ್ರಾಂತ್ಯ ಧರ್ಮಗುರುಗಳ ಭಗಿನಿಯರ ಮತ್ತು ಸಂಘ ಸಂಸ್ಥೆಗಳ ನಿಯೋಗದ ಸನ್ಮಾನ ಸ್ವೀಕರಿಸಿ, ಮಾತನಾಡಿದರು. ‘ಕ್ರೈಸ್ತರು ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸಬೇಕು. ಕ್ರೈಸ್ತರ ಸೇವಾ ಕಾರ್ಯಗಳಲ್ಲಿ ಸಮರ್ಪಣಾ ಭಾವ ಪ್ರಕಾಶಿಸುತ್ತದೆ. ಶಿಕ್ಷಣ, ಆರೋಗ್ಯ ಸೇರಿ ವಿವಿಧ ಸೇವಾ ಕ್ಷೇತ್ರಗಳಲ್ಲಿ ಕ್ರೈಸ್ತ ಸಮುದಾಯ ಸಲ್ಲಿಸಿರುವ ಸೇವೆ ಅವಿಸ್ಮರಣಿಯ. ಸಮುದಾಯಕ್ಕೆ ಅಗತ್ಯ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದರು. ಸರ್ಕಾರದ ಜತೆಗೆ ಧರ್ಮಗುರುಗಳು, ಭಗಿನಿಯರು ಕೈಜೋಡಿಸಿದರೆ, ಸರ್ವಜನಾಂಗದ ಶಾಂತಿಯ ತೋಟವೆನಿಸಿರುವ ಕರ್ನಾಟಕದಲ್ಲಿ ಉತ್ತಮ ಜೀವನ ಸಾಧ್ಯ’ ಎಂದು ಹೇಳಿದರು. ನಿಯೋಗದಲ್ಲಿ ಬೆಂಗಳೂರು ಮಹಾಧರ್ಮ ಕ್ಷೇತ್ರದ ಗುರು ಸಿ. ಫ್ರಾನ್ಸಿಸ್, ಕರ್ನಾಟಕ ಕ್ರೈಸ್ತ ಧರ್ಮಗುರುಗಳು ಬಳಗದ ಅಧ್ಯಕ್ಷ ಎ. ಥಾಮಸ್, ಉಪಾಧ್ಯಕ್ಷ ಬಾರ್ತಲೋಮಿಯೊ, ಕಾರ್ಯದರ್ಶಿ ಪ್ರದೀಪ್ ಜಡ್, ಮೈಸೂರಿನ ಆರೋಗ್ಯಸ್ವಾಮಿ, ಚಿಕ್ಕಮಗಳೂರಿನ ಆಂಟೋನಿ ರಾಜು, ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ…
ಡೆಂಗಿ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, ಕಳೆದ 20 ದಿನಗಳಲ್ಲಿ 1, 330 ಮಂದಿಗೆ ಡೆಂಗಿ ದೃಢಪಟ್ಟಿದೆ. ಬಿಸಿಲು ಮಳೆಯಿಂದಾಗಿ ಈ ಜ್ವರಕ್ಕೆ ಅಧಿಕ ಮಂದಿ ಒಳಪಡುತ್ತಿದ್ದಾರೆ. ರಾಜ್ಯದಲ್ಲಿ ಈ ವರ್ಷ 4,053 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ. ನಗರದಲ್ಲಿ ಈವರೆಗೆ 2,078 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ 1, 047 ಪ್ರಕರಣಗಳನ್ನು ಬಿಬಿಎಂಪಿ ತಡವಾಗಿ ವರದಿ ಮಾಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 4, 742 ಮಂದಿ ಡೆಂಗಿ ಶಂಕಿತರನ್ನು ಗುರುತಿಸಿ, ಅವರಲ್ಲಿ 3, 457 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಈವರೆಗೆ ಒಟ್ಟು 2, 062 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 64 ಮಂದಿ ಶಂಕಿತರನ್ನು ಗುರುತಿಸಿ, 32 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ. ಅವರಲ್ಲಿ 16 ಮಂದಿಯಲ್ಲಿ ಈವರೆಗೆ ಜ್ವರ ದೃಢಪಟ್ಟಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಕಳೆದ ವರ್ಷ…
ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಯುವಕನಿಗೆ ಯುವತಿಯೊಬ್ಬಳು ಚಾಕುವಿನಿಂದ ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. ಜಂಟಿ ದಾಸ್ ಚಾಕು ಇರಿತಕ್ಕೆ ಒಳಗಾದ ಪ್ರಿಯಕರನಾಗಿದ್ದು, ಪ್ರಿಯತಮೆ ಬರೂತಿ ಈ ಕೃತ್ಯ ಎಸಗಿದ್ದಾಳೆ. ದಾಸ್ ಹಾಗೂ ಬರೂತಿ ಕೆಲ ಸಮಯಗಳಿಂದ ಪರಸ್ಪರ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ದಾಸ್, ಬೇರೆ ಹುಡುಗಿಯ ಜೊತೆಗೆ ಸಂಪರ್ಕ ಹೊಂದಿದ್ದು ಪ್ರೇಯಸಿ ಬರೂತಿಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದನು. ಪ್ರಿಯಕರನ ವರ್ತನೆ ನೋಡಿ ರೊಚ್ಚಿಗೆದ್ದ ಬರೂತಿ, ದಾಸ್ ಮನೆಯಲ್ಲಿ ಗಲಾಟೆ ಮಾಡಿ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಲ್ಲಿ ಪ್ರಿಯಕರ ಜಂಟಿ ದಾಸ್ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇತ್ತ ಯುವತಿ ಬರೂತಿಯನ್ನು ವಿವೇಕನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಬೆಳಗಾವಿ: ಜೀವನದಲ್ಲಿ ಜೀಗುಪ್ಸೆ ಹೊಂದಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನ ಟ್ರಾಫಿಕ್ ಕಾನ್ಸ್ಸ್ಟೇಬಲ್ ರಕ್ಷಣೆ ಮಾಡಿರೋ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ 44 ವರ್ಷದ ಶಿವಲೀಲಾ ಪರ್ವತಗೌಡ್ರ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರಿಂದ ಉತ್ತರ ಸಂಚಾರ ಠಾಣೆ ಪಿಸಿ ಕಾಶಿನಾಥ್ ಈರಿಗಾರ ಎಂಬವರಿಗೆ ವಿಷಯ ತಿಳಿಯುತಿದ್ದಂತೆ ಕೆರೆಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ಲೆಕ್ ವ್ಯೂ ಆಸ್ಪತ್ರೆ ಪಾಯಿಂಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಷಯ ತಿಳಿದಿದೆ. ಈ ವೇಳೆ 5 ಅಡಿ ಎತ್ತರದ ಬ್ಯಾರಿಕೇಡ್ ಮೇಲಿಂದ ಜಿಗಿದು ಮಹಿಳೆಯರ ಪ್ರಾಣ ಕಾಪಾಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದು 5 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಾಗಲಕೋಟೆ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ತಾಂತ್ರಿಕ ಕೌಶಲ್ಯಗಳಿಗೆ ಪ್ರಾದ್ಯಾನ್ಯತೆ ನೀಡಬೇಕು. ಪ್ರಾಯೋಗಿಕ ವಿಷಯಗಳ ಕಲಿಕೆಯಲ್ಲಿ ನೈಪುಣ್ಯತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಕಿತ್ತೂರಿನ ಕೆ.ಎನ್.ವಿ.ವಿ.ಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಂಗೀತ ವಿಭಾಗದ ಪ್ರೋ.ನಾಗರಾಜ ಎಚ್.ಕೆ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಂಗೀತ ವಿಭಾಗದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಕಿರು ಉಪನ್ಯಾಸದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂಗೀತ ಅಧ್ಯಯನದಲ್ಲಿ ಕೌಶಲ್ಯಗಳ ಅಭಿವೃದ್ಧಿ ಮುಖ್ಯ. ನೂತನ ಶಿಕ್ಷಣ ಪದ್ದತಿಯಲ್ಲಿ ಸಂಗೀತದ ಆಶೋತ್ತರಗಳನ್ನು ಈಡೇರಿಸುವುದು ಒಂದು ಸವಾಲವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಗೀತ ಹೊಸದು ಮತ್ತು ಉಳಿದ ವಿಷಯಗಳಿಗಿಂತ ವಿಭಿನ್ನವಾಗಿದೆ. ಗುರುಕುಲ ಪದ್ಧತಿಯ ಪರಂಪರೆ ಮುಂದುವರಿಸಿಕೊಂಡು ಬಂದಿರುವ ವಿಭಾಗವಾಗಿದೆ ಎಂದರು. ಸಂಗೀತಕ್ಕೆ ಹಲವಾರು ವೈಶಿಷ್ಟ್ಯತೆಗಳಿವೆ. ಹಲವಾರು ವಿದ್ವಾಂಸರು ರಾಗಗಳ ಬಗ್ಗೆ ಚಿಂತನೆ ಮಾಡಿದ್ದಾರೆ. 12ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಸಂಗೀತದ ಪರಿಕಲ್ಪನೆ ಮಂಡಿಸಿದ್ದಾರೆ. ಸ್ವರ, ನಾದ, ಶೃತಿ ,ಸಪ್ತಂಕ ರಾಗಗಳನ್ನು ಈ ಎಲ್ಲ ಅಂಶಗಳನ್ನು ವಿದ್ಯಾರ್ಥಿಗಳು…
ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಹೌದು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದು, ‘ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿದೆ. ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಈಗ ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಸರಕಾರಿ ಶಾಲಾ,ಕಾಲೇಜುಗಳು ಮೂಲಭೂತ ಸೌಕರ್ಯಗಳ ಕೊರತೆ ಅನುಭವಿಸುತ್ತಿದ್ದು,ಇವುಗಳ ಪೂರೈಸುವ ನಿಟ್ಟಿನಲ್ಲಿ ಸರಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ವಿಧಾನಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಒತ್ತಾಯಿಸಿದ್ದಾರೆ. ತುಮಕೂರು ನಗರದ ಕನ್ನಡ ಭವನದಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ)ಆಯೋಜಿಸಿದ್ದ ನಿವೃತ್ತ ಪ್ರಾಂಶುಪಾಲ ರಿಗೆ ಸನ್ಮಾನ,ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ,ಪ್ರಾಂಶುಪಾಲರ ಸಂಘದ ವಾರ್ಷಿಕ ಸಾಮಾನ್ಯ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು,ಸರಕಾರಿ ಕಾಲೇಜುಗಳಲ್ಲಿ,ಅದರಲ್ಲಿಯೂ ವಿಜ್ಞಾನ ಕಾಲೇಜುಗಳು,ಲೈಬ್ರರಿ, ಪ್ರಯೋಗಾಲಯಗಳ ಕೊರತೆ ಇಂದಿಗೂ ಕಾಡುತ್ತಿದೆ.ಗುಣಮಟ್ಟ ಶಿಕ್ಷಣ ಮಕ್ಕಳಿಗೆ,ಅದರಲ್ಲಿಯೂ ಗ್ರಾಮೀಣ ಮಕ್ಕಳಿಗೆ ದೊರೆಯಬೇಕಾದರೆ, ಮೂಲಭೂತ ಸೌಕರ್ಯಗಳ ಕೊರತೆ ನೀಗಬೇಕಿದೆ ಎಂದರು. ಕಳೆದ 20 ವರ್ಷಗಳಿಂದ ವೈ.ಎ.ನಾರಾಯಣಸ್ವಾಮಿ ಅವರು ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಹಗಲಿರುಳು ಶ್ರಮಿಸುತಿದ್ದಾರೆ. ಅನುದಾನಿತ ಕಾಲೇಜುಗಳ ಖಾಲಿ ಹುದ್ದೆಗಳ ತುಂಬಲು ಸರಕಾರದ ಮೇಲೆ ಒತ್ತಡ ತಂದಿದ್ದಾರೆ. 2020ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬುವಂತೆ ಅಧಿವೇಶನದಲ್ಲಿ ಚರ್ಚೆ ನಡೆಸಿದ್ದು, ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸ ನಮ್ಮಲ್ಲಿದೆ.ಗ್ರಾಮೀಣ ಭಾಗದಲ್ಲಿ ಕೆಲ ಅನುದಾನಿತ ಕಾಲೇಜುಗಳು ಏಕ ಶಿಕ್ಷಕ ಶಾಲೆಯಂತೆ ಗೋಚರಿಸುತಿದ್ದು, ಇದೇ…
ತುರುವೇಕೆರೆ: ಪಟ್ಟಣದ ತಾಲ್ಲೂಕು ಕಚೇರಿಯ ಮುಂಭಾಗದ ಅಂಬೇಡ್ಕರ್ ರಸ್ತೆಯಲ್ಲಿರುವ ಪೂಜಾ ಫ್ಯಾನ್ಸಿ ಸ್ಟೋರ್ ನ ಮುಂಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟಿಯಲ್ಲಿದ್ದ ಸಾವಿರಾರು ರೂಪಾಯಿ ಹಣವನ್ನು ಕಳ್ಳರು ದೋಚಿದ ಘಟನೆ ನಡೆದಿದೆ ಅಂಗಡಿಗೆ ಬಂದಿದ್ದ ತಾಲೂಕಿನ ತಾಳ್ಕೆರೆ ಗ್ರಾಮದ ನಿವಾಸಿ ಶಾಲಿನಿ ಕುಮಾರಸ್ವಾಮಿ ಎಂಬ ಮಹಿಳೆ, ಸ್ಕೂಟಿಯನ್ನು ಅಂಗಡಿಯ ಹೊರಗೆ ನಿಲ್ಲಿಸಿ ಒಳಗೆ ಹೋಗಿದ್ದರು. ಈ ವೇಳೆ ವಾಹನದ ಡಿಕ್ಕಿಯಲ್ಲಿದ್ದ ಸುಮಾರು 93,000 ರೂಪಾಯಿಗಳನ್ನು ಕ್ಷಣ ಮಾತ್ರದಲ್ಲೇ ಕಳ್ಳರು ಎಗರಿಸಿದ್ದಾರೆ. ಈ ಕೃತ್ಯ ನಡೆದ ಸ್ಥಳದಲ್ಲಿ ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಕಳೆದ ವಾರವಷ್ಟೇ ಬಾಣಸಂದ್ರ ರಸ್ತೆಯಲ್ಲಿರುವ ಶಾರದಾ ಎಲೆಕ್ಟ್ರಿಕಲ್ಸ್ ನ ಅಂಗಡಿಯಲ್ಲಿ ಕಳ್ಳತನವಾಗಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂತಹದ್ದೇಹ ಘಟನೆ ನಡೆದಿದೆ. ಈ ಘಟನೆಗಳು ಜನರ ನೆಮ್ಮದಿ ಕೆಡಿಸಿದೆ. ಘಟನೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳ್ಳರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಈವರೆಗೆ ಕಳ್ಳರನ್ನು ಹಿಡಿಯಲು ಸಾಧ್ಯವಾಗಿಲ್ಲ ಎನ್ನುವುದು…
ತುರುವೇಕೆರೆ: ಪಟ್ಟಣದಲ್ಲಿ ರೈತರ ಬೃಹತ್ ಹೋರಾಟವನ್ನು ಎಲ್ಲಾ ಸಂಘಟನೆಗಳೊಂದಿಗೆ ಆಗಸ್ಟ್ 3 ರಂದು ತುರುವೇಕೆರೆ ಬಂದ್ ಹಮ್ಮಿಕೊಂಡಿದ್ದೇವೆ ಎಂದು ತಾಳಕೆರೆ ನಾಗೇಂದ್ರ ತಿಳಿಸಿದ್ದಾರೆ . ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷರಾದ ತಾಳ್ಕೆರೆ ನಾಗೇಂದ್ರ ಅವರು ಮಾತನಾಡಿ ಕೊಬ್ಬರಿ ಬೆಲೆ ಪಾತಾಳಕ್ಕೆ ಕುಸಿದಿದೆ ಇದು ಅನ್ಯಾಯದ ಪರಮಾವಧಿ ಅಧಿಕಾರಿಗಳಿಗೆ ಹಣ ನೀಡಿದರೆ ಎಂತಹ ಕೊಬ್ಬರಿ ಬೇಕಾದರೂ ಹಾಕಿಸಿಕೊಳ್ಳುತ್ತಾರೆ ಮಾರುಕಟ್ಟೆಯಲ್ಲಿರುವ ಕೊಬ್ಬರಿಯನ್ನು ಖರೀದಿ ಮಾಡುತ್ತಾರೆ ಎಂದು ಆರೋಪಿಸಿ. ರೈತರ ಕೊಬ್ಬರಿಯನ್ನು ಸರಿಯಾಗಿ ಖರೀದಿ ಮಾಡಿಲ್ಲ ಇನ್ನೂ ಮಾರುವಂತ ಕೊಬ್ಬರಿ ಶೇಕಡ 60ರಷ್ಟು ರೈತರ ಬಳಿಯೇ ಇದೆ. ಇವರು ಒಂದು ತಿಂಗಳಿನಿಂದ ಬೇಕು ಬೇಡವೋ ಕರಿಸಿ ಖರೀದಿಸಿದ್ದು ಕಳೆದ ಒಂದು ವಾರದಿಂದ ಬಾಗಿಲನ್ನೇ ಮುಚ್ಚಿ, ನಿನ್ನೆ ನಮ್ಮ ಸಂಘಟನೆಯ ಗೌರವಾಧ್ಯಕ್ಷರು ಕೊಬ್ಬರಿಯನ್ನು ಆರಿಸಿಕೊಂಡು ತಂದಿದ್ದಾರೆ. ಆರಿಸಿಕೊಂಡು ತಂದಿರುವ ಕೊಬ್ಬರಿಯನ್ನು ರಿಜೆಕ್ಟ್ ಮಾಡಿದ್ದಾರೆ. ಇದೇ ತರಹ ಸಾವಿರಾರು ರೈತರಿಗೆ ಅನ್ಯಾಯವಾಗುತ್ತಿದೆ…