Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬೇಡಿಕೆಯ ನಟ ರಾಜ್ ಬಿ.ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ’45’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಈ ಮಲ್ಟಿಸ್ಟಾರ್ ಸಿನಿಮಾ ಆರಂಭದಿಂದಲೂ ಕುತೂಹಲ ಮೂಡಿಸಿದ್ದು, ಇದೇ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬದಂದು ತೆರೆಗೆ ಬರಲು ಸಿದ್ಧವಾಗಿದೆ. ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಡೊಂಕಣ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೇಲರ್ ಬಿಡುಗಡೆಯಾಗಿದ್ದು ವಿಶೇಷ. 100 ಕೋಟಿ ರೂಪಾಯಿ ಬಜೆಟ್ ನಲ್ಲಿ ಎಂ.ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಅರ್ಜುನ್ ಜನ್ಯ ಅವರು ಮಾತನಾಡಿ, ತಾವು ಈ ಮೂವರು ನಾಯಕರ ಅಭಿಮಾನಿಯಾಗಿ ಸಿನಿಮಾ ನಿರ್ದೇಶನ ಮಾಡಿದ್ದು, ತಮ್ಮ ನಿರ್ದೇಶನದ ಹಿಂದಿನ ಪ್ರೇರಣೆ ಶಿವರಾಜ್…
ಮಂಡ್ಯ: ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಇಂದು ಅದ್ಧೂರಿಯಾಗಿ ಆಚರಿಸಿದರು. ನಾಡದೇವತೆ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯಲು ತೆರಳುತ್ತಿದ್ದ ಹೆಚ್ ಡಿಕೆ ಅವರನ್ನು ಮದ್ದೂರು ಮತ್ತು ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ ಮತ್ತು ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾತಂಡಗಳೊಂದಿಗೆ ಸ್ವಾಗತಿಸಲಾಯಿತು. ಪಕ್ಷದ ಮುಖಂಡರೊಂದಿಗೆ ಕೇಕ್ ಕತ್ತರಿಸಿದ ನಂತರ, ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾರ್ಯಕರ್ತರ ಶುಭ ಹಾರೈಕೆಗೆ ಚಿರಋಣಿ ಎಂದರು. ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ಗೃಹಲಕ್ಷ್ಮಿ ಹಣ ವಿತರಣೆಗಿಂತಲೂ ರೈತರ ಆತ್ಮಹತ್ಯೆ ಮುಂದುವರೆದಿರುವುದು ಮುಖ್ಯ ಸಮಸ್ಯೆಯಾಗಿದೆ. ಲೂಟಿ ಮಾಡುವುದೇ ಅಭಿವೃದ್ಧಿ ಎಂದು ಸರ್ಕಾರ ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಕಾರ್ಯಕರ್ತರೊಬ್ಬರು ಕುಮಾರಸ್ವಾಮಿ ಅವರ ಯಶಸ್ಸಿಗಾಗಿ ರುದ್ರಹೋಮ ಮಾಡಿಸಿದ ತಾಯತವನ್ನು ಉಡುಗೊರೆಯಾಗಿ…
ಕೊರಟಗೆರೆ: ತಾಲೂಕು ಪತ್ರ ಬರಹಗಾರರ ಸಂಘದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಪತ್ರ ಬರಹಗಾರರಿಗೆ ಭದ್ರತೆಯನ್ನು ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ತಹಶೀಲ್ದಾರ್ ಕೆ. ಮಂಜುನಾಥ್ ರವರ ಮುಖೇನ ಮನವಿ ಪತ್ರ ಸಲ್ಲಿಸಿ ಪ್ರತಿಭಟಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ನಟರಾಜ್, ರಾಜ್ಯ ಸರ್ಕಾರವು ಡಿಜಿಟಲೀಕರಣದ ಹೆಸರಿನಲ್ಲಿ ಕಾವೇರಿ 0–1, ಕಾವೇರಿ 0–2 ತಂತ್ರಾಂಶಗಳನ್ನು ಜಾರಿಗೆ ತಂದಿದೆ. ಇದೀಗ ಕಾವೇರಿ 0–3 ತಂತ್ರಾಂಶವನ್ನು ಬರಬಹುದು ಮತ್ತು ಪೆನ್ ಲೆಸ್ ಹಾಗೂ ಪೇಪರ್ ಲೆಸ್ ನೋಂದಣಿಗೆ ಕಾರ್ಯಕ್ಕೆ ಸರ್ಕಾರ ಮುಂದಾಗುತ್ತಿದೆ. ನಮ್ಮ ಪತ್ರ ಬರಹಗಾರರಿಗೆ ಫೆನ್ ಲೆಸ್ ಮತ್ತು ಪೇಪರ್ ಲೆಸ್ ನೋಂದಣಿ ಕಾರ್ಯ ಪ್ರಾರಂಭವಾದಲ್ಲಿ ಪತ್ರ ಬರಹಗಾರರಿಗೆ ಯಾವುದೇ ರೀತಿಯ ಬರವಣಿಗೆ ಕಾರ್ಯ ಇಲ್ಲದಂತಾಗುತ್ತದೆ. ರಾಜ್ಯಾದ್ಯಂತ ಸುಮಾರು 12,000 ಪತ್ರ ಬರಹಗಾರರು ಮತ್ತು ಸಹಾಯಕರು ಇದೇ ವೃತ್ತಿಯನ್ನು ಅವಲಂಬಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಚಿಂತಿಸದೇ ಅಧಿಕಾರಿಗಳ ಸಲಹೆಯನ್ನು ಪಡೆದು ವಿದೇಶದಲ್ಲಿರುವಂತಹ ಪೆನ್ ಲೆಸ್ ಮತ್ತು ಪೇಪರ್ ಲೆಸ್…
ತುಮಕೂರು: ಎತ್ತಿನಹೊಳೆ ನೀರಾವರಿ ಯೋಜನೆ ವಿಳಂಬವಾಗಿದ್ದು, ಯೋಜನೆಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಜನರು ಹೋರಾಟ ರೂಪಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಸಲಹೆ ಮಾಡಿದರು. ನಗರದಲ್ಲಿ ಸೋಮವಾರ ನಡೆದ ಎತ್ತಿನಹೊಳೆ ಯೋಜನೆ ವಿಳಂಬಕ್ಕೆ ಕಾರಣಗಳು ಹಾಗೂ ಪರಿಹಾರ ಕುರಿತ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರ ಇಲ್ಲದ ಸಬೂಬು ತೆಗೆದು ಅನಗತ್ಯವಾಗಿ ವಿಳಂಬ ಮಾಡುತ್ತಿದೆ. ಯೋಜನೆ ವ್ಯಾಪ್ತಿಗೆ ಒಳಪಡುವ ಹಾಸನ, ತುಮಕೂರು, ಚಿತ್ರದುರ್ಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ಜನರು ಈಗಲೇ ಎಚ್ಚೆತ್ತುಕೊಂಡು ಹೋರಾಟ ರೂಪಿಸಬೇಕಿದೆ. ಕೇಂದ್ರದ ಎಲ್ಲ ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡಿ, ಯೋಜನೆ ಪೂರ್ಣಗೊಳ್ಳುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಡಿ.18ರಂದು ನಗರದ ಅಮರಜ್ಯೋತಿ ನಗರದಲ್ಲಿರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಸಾರ್ವಜನಿಕರೊಂದಿಗೆ ಭೇಟಿ ನೀಡಿ ಚರ್ಚೆ ನಡೆಸಲಾಗುವುದು. ಈಗಾಗಲೇ ಸಚಿವ ಸಿ.ಆರ್.ಪಾಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಆದರೆ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿಗಳಿಂದ ವಿಳಂಬವಾಗಿದೆ ಎಂದು ಕೇಂದ್ರ ಹೇಳುತ್ತಿದೆ ಎಂದರು. ಕೇಂದ್ರ…
ಹುಳಿಯಾರು: ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರೀತಿ ರಾಘವೇಂದ್ರ ಆಯ್ಕೆಯಾದರು. ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸದಸ್ಯರು, ಶಾಸಕ ಸಿ.ಬಿ. ಸುರೇಶ್ ಬಾಬು ಅವರೊಂದಿಗೆ ಸುಮಾರು 11.40ರ ಸುಮಾರಿಗೆ ಪಟ್ಟಣ ಪಂಚಾಯಿತಿಗೆ ಆಗಮಿಸಿ ಪ್ರೀತಿ ರಾಘವೇಂದ್ರ ಮಾತ್ರ ನಾಮಪತ್ರ ಸಲ್ಲಿಸಿದರು. ಪ್ರೀತಿ ರಾಘವೇಂದ್ರ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಕೆ. ಪುರಂದರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದು, ಈ ಬಾರಿ ಕೂಡ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷದ ಮೂವರು ಸದಸ್ಯರು, ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಸೇರಿ ಒಟ್ಟು 9 ಸದಸ್ಯರು ಪ್ರೀತಿ ರಾಘವೇಂದ್ರ ಅವರ ಆಯ್ಕೆಗೆ…
ಸರಗೂರು: ವಿಕಲಚೇತನ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುವುದರಿಂದ ಅವರ ದೌರ್ಬಲ್ಯಗಳ ಹೊರತಾಗಿಯೂ ಅದಮ್ಯ ಶಕ್ತಿ ಅವರಲ್ಲಿದೆ ಎಂಬುದನ್ನು ನಿರೂಪಿಸಲು ಸಾಧ್ಯ ಎಂದು ಹಂಚೀಪುರ ಮಠ ತೋಂಟದಾರ್ಯ ಸ್ವಾಮೀಜಿ ಆರ್ಶೀವಾದ ನೀಡಿದರು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಮಂಗಳವಾರದಂದು ಶ್ರೀ ಚಿಕ್ಕ ದೇವಮ್ಮ ವಿಶೇಷಚೇತನರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ಜೀವನಜ್ಯೋತಿ ವಿಶೇಷಚೇತನ ಕ್ಷೇಮಾಭಿವೃದ್ಧಿ ಒಕ್ಕೂಟ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಅಖಿಲ ನಾಮಧಾರಿಗೌಡರ ಸಂಘ, ಸ್ಥಳಿಯ ಸಂಘ ಸಂಸ್ಥೆಗಳು ಸಹಭಾಗಿತ್ವದೊಂದಿಗೆ ಹಮ್ಮಿಕೊಂಡಿರುವ ಅಂತಾರಾಷ್ಟ್ರೀಯ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಅಂಗವಿಕಲರಿಗಾಗಿ ಕಾನೂನು ಅಡಿಯಲ್ಲಿ ಅನೇಕ ಹಕ್ಕುಗಳನ್ನು ನೀಡಿದ್ದು, ಅವರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ತರದಂತೆ ಅವರ ಅಭಿವೃದ್ಧಿಯಲ್ಲಿ ಸಹಕಾರ ನೀಡಬೇಕು ಎಂದು ಪ್ರತಿಪಾದಿಸಿದರು. ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ವಿಕಲಚೇತನರು…
ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿಗೆ ಹೊಂದಿಕೊಂಡಂತಿರುವ ವಾಣಿಜ್ಯ ಸಂಕೀರ್ಣದಲ್ಲಿ ಇಂದು ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ(DSS)ಯ ತಾಲೂಕು ಶಾಖೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಉದ್ಘಾಟಿಸಿದರು. ಈ ಶಾಖೆಯು ಜಿಲ್ಲಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ದಂಡಿನ ಶಿವರಕುಮಾರ್, ತಾಲೂಕು ಸಂಚಾಲಕ ಮಲ್ಲೂರು ತಿಮ್ಮೇಶ್ ರವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿದ್ದು, ಇದೇ ವೇಳೆ ತಾಲೂಕು ಶಾಖೆ ಉದ್ಘಾಟಿಸಿದ ಅನಂತರಾಜು ಮಾತನಾಡಿ, ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಇಂದಿನಿಂದ ಆರಂಭಗೊಂಡಿದ್ದು, ಇದರಿಂದಾಗಿ ನೊಂದವರಿಗೆ ಸಾಮಾಜಿಕವಾಗಿ ದೀನದಲಿತರಿಗೆ ಸರ್ವ ಜನಾಂಗದವರಿಗೂ ಆರೋಗ್ಯಕರ ಹೋರಾಟ ಮಾಡುವುದರ ಮೂಲಕ ನ್ಯಾಯ ದೊರಕಿಸಿ ಕೊಡುವಂತಹ ಕಾರ್ಯ ನಿರ್ವಹಿಸಬೇಕು, ನೊಂದವರ ಪಾಲಿಗೆ ದಾರಿ ದೀಪವಾಗಿ ಈ ಸಂಘಟನೆ ಕಾರ್ಯ ನಿರ್ವಹಿಸಿ ನ್ಯಾಯ ದೊರಕಿಸಿ ಕೊಡಬೇಕು, ಇದರ ಜೊತೆಗೆ ನಾನು ಕೂಡ ಒಬ್ಬ ಅಧಿಕಾರಿಯಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದರು. ನಂತರ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ,…
Bomb Threat Email– ತುಮಕೂರು: ರಾಜ್ಯದ ಹಲವು ಜಿಲ್ಲಾಧಿಕಾರಿ ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರುತ್ತಿರುವ ಬೆನ್ನಲ್ಲೇ, ಇಂದು (ಡಿ.16) ತುಮಕೂರು ಜಿಲ್ಲಾಧಿಕಾರಿ (DC) ಕಚೇರಿಗೂ ಸಹ ಬಾಂಬ್ ಇಟ್ಟಿರುವ ಕುರಿತು ಬೆದರಿಕೆ ಇಮೇಲ್ ಬಂದಿದೆ. ವರದಿಗಳ ಪ್ರಕಾರ, ಬೆಳಗ್ಗೆ 6.59ಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ಮೇಲ್ ಗೆ ಬಂದ ಈ ಸಂದೇಶವನ್ನು ನೋಡಿ ಸಿಬ್ಬಂದಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ತೀವ್ರ ಪರಿಶೀಲನೆ ಮತ್ತು ಭದ್ರತೆ 100ಕ್ಕೂ ಹೆಚ್ಚು ಪೊಲೀಸರು: ನಗರ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ಕಚೇರಿ ಸುತ್ತಮುತ್ತ ನಿಯೋಜಿಸಲಾಗಿದೆ. ಬಾಂಬ್ ಮತ್ತು ಡಾಗ್ ಸ್ಕ್ವಾಡ್: ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ಕಚೇರಿ ಆವರಣದ ಮೂಲೆ ಮೂಲೆಯನ್ನೂ ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಗೇಟ್ನಲ್ಲಿ…
ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಹಾಗೂ ಪ್ರಧಾನ ಕಾರ್ಯದರ್ಶಿರಾಗಿ ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯ ಭವನದಲ್ಲಿ ಭಾನುವಾರ ಅಖಿಲ ನಾಮಧಾರಿಗೌಡ ಸಂಘ ಸರಗೂರು ಶಾಖೆಯಿಂದ ನಡೆದ ಡಿ.ಸುಂದರ್ ದಾಸ್ ಸಂಘದ ಸರ್ವ ಸದಸ್ಯರ ಮಹಾಸಭೆಯಲ್ಲಿ ಉಪಾಧ್ಯಕ್ಷರಾಗಿ ಕೆ.ಬೆಳ್ತೂರು ಪ್ರಕಾಶ್, ಕಾರ್ಯದರ್ಶಿಯಾಗಿ ಮಟಕೆರೆ ನಾಗೇಶ್ ಅವರನ್ನು 3 ವರ್ಷದ ಅವಧಿಗೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ನಂತರ ಮಾತನಾಡಿದ ನೂತನ ಅಧ್ಯಕ್ಷ ಎಚ್.ಡಿ.ರತ್ನಯ್ಯ, ನಾಮಧಾರಿಗೌಡ ಸಮಾಜ ಸರ್ವಾನುಮತದಿಂದ ನೀಡಲಾದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೇ ಪ್ರಾಮಾಣಿಕತೆಯಿಂದ ಸಮಾಜದ ಏಳಿಗೆಗಾಗಿ ಶಕ್ತಿಮಿರಿ ಶ್ರಮಿಸುತ್ತೇನೆ. ಸಮುದಾಯಭವನ ನೂತನ ರೂಪ ಪಡೆಯಲು ಕೆಲಸ ಮಾಡುತ್ತೇನೆ. ಹೀಗಾಗಿ ಇದಕ್ಕೆ ಸಮಾಜದ ಬಂಧುಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. ಮಹಾಸಭೆ: ಇದೇ ಸಂದರ್ಭದಲ್ಲಿ ಸಂಘದ ಪ್ರಭಾರ ಅಧ್ಯಕ್ಷ ವಿನೋದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವಸದಸ್ಯರ ಮಹಾಸಭೆಯನ್ನು ಅಖಿಲ ನಾಮಧಾರಿಗೌಡ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಕೆ.ಟಿ.ಗೋವಿಂದರಾಜು ಉದ್ಘಾಟಿಸಿದರು. ಬೀಜ ನಿಗಮದ ಮಾಜಿ…
ತುಮಕೂರು: ವಿದ್ಯೆಗೆ ಯಾವುದೇ ಜಾತಿಯ ಹಂಗಿಲ್ಲ. ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಿದರೆ ಜ್ಞಾನವಂತರಾಗಲು ಸಾಧ್ಯ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ವಿದ್ಯೆಯು ಕೇವಲ ಸಾಧಕರ ಸ್ವತ್ತು, ಸೋಮಾರಿಗಳ ಸ್ವತ್ತಲ್ಲ ಎಂದು ಹಿರಿಯ ದಲಿತ ಮುಖಂಡ ಹಬ್ಬತ್ತನಹಳ್ಳಿ ಶ್ರೀನಿವಾಸ್ ಅವರು ಕರೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಹಾದಿಯಲ್ಲಿ ಯಶಸ್ಸು ಸಾಧ್ಯ: ಡಾ. ಬಿ.ಆರ್. ಅಂಬೇಡ್ಕರ್ ಅವರು ನಡೆದುಬಂದ ಹಾದಿಯು ನಮಗೆಲ್ಲ ಆದರ್ಶವಾಗಬೇಕು. ಅವರು ತೋರಿಸಿದ ಶಿಕ್ಷಣ, ಸ್ವಾಭಿಮಾನ ಮತ್ತು ಸಂಘಟನೆಯ ಮಾರ್ಗದಲ್ಲಿ ಸಾಗಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಶ್ರೀನಿವಾಸ್ ಅವರು ಒತ್ತಿ ಹೇಳಿದರು. ದಲಿತ ಪರ ಹೋರಾಟಕ್ಕೆ ಮೆರುಗು ನೀಡಿದ ಎಂ.ಸಿ. ರಾಜು: ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಎಂ. ರಾಮಯ್ಯ ಅವರು, ದಿವಂಗತ ಎಂ.ಸಿ. ರಾಜು ಅವರು ತುಮಕೂರು ಜಿಲ್ಲೆಯ ದಲಿತಪರ ಹೋರಾಟಕ್ಕೆ ಮೆರುಗು ನೀಡಿದವರು.…