Author: admin

ಧಾರವಾಡ: ಮತ್ತೇ ಮಹದಾಯಿ ಹೋರಾಟ ಮುನ್ನಲೆಗೆ ಬಂದ ವಿಚಾರವಾಗಿ ಮಾತನಾಡಿದ ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ, ರೈತರಿಗೆ ನಮ್ಮ ವಿರುದ್ಧ ಹೋರಾಟ ಮಾಡಲು ಬೇಡ ಎಂದಿಲ್ಲ. ಕೇಂದ್ರ ಅರಣ್ಯ ಇಲಾಖೆ ಅನುಮತಿ ಕೊಡಬೇಕು. ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭ ಆಗುತ್ತದೆ. ನಾವೇ ರೈತರ ಪರ ಹೋರಾಟ ಮಾಡುತ್ತೇವೆ. ನಾವು ಯೋಜನೆ ಜಾರಿ ಆಗಲಿ ಎನ್ನುವವರು, ನನ್ನ ಹೋರಾಟ‌ ಇರುವುದೇ ಇದಕ್ಕಾಗಿ. ನಾನು ಟೀಕೆ ಟಿಪ್ಪಣಿ ಮಾಡುವುದಿಲ್ಲ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನಿಗೆ ಆತ್ಮೀಯರು. ಈ ಅನುಮತಿ ಕೊಡಿಸುವುದು ಅವರಿಗೆ ದೊಡ್ಡ ಕೆಲಸವಲ್ಲ. ರಾಜ್ಯದ ಹಿತಕ್ಕಾಗಿ ಅನುಮತಿ ಕೊಡಿಸಬೇಕು. ಇದಕ್ಕಿಂತ ದೊಡ್ಡ ಮಾತು ಏನಿಲ್ಲ. ಅದರ ಕ್ರೆಡಿಟ್ ಬೇಕಾದರೆ ನೀವೇ ತೆಗೆದುಕೊಳ್ಳಿ. ಆದರೆ ಲೋಕಸಭಾ ಚುನಾವಣೆ ಮೊದಲು ಇದನ್ನು ಮಾಡಲಿ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…

Read More

ರಾಜ್ಯದ 28 ಇನ್‌ಸ್ಪೆಕ್ಟರ್‌ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿ ಆದೇಶ ಹೊರಡಿಸಿದೆ. ಪಿ. ಎಂ. ಹರೀಶ್ ಕುಮಾರ್, ಎಚ್‌ಎಸ್ಆರ್ ಲೇಔಟ್ ಸಲೀಂ ಸಿ. ನದಾಫ್, ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ; ಎಸ್. ಪ್ರಶಾಂತ್, ಹಲಸೂರು ಸಂಚಾರ ಪೊಲೀಸ್ ಠಾಣೆ: ಎ. ಡಿ. ಪ್ರೀತಂ, ಬೊಮ್ಮನಹಳ್ಳಿ; ಎಂ. ಎಸ್. ರವಿ, ಜ್ಞಾನಭಾರತಿ; ಐ. ರಹೀಂ, ಕೆ. ಜಿ. ಹಳ್ಳಿ: ಬಿ. ಚಿದಾನಂದ, ಯಶವಂತಪುರ ಸಂಚಾರ ಪೊಲೀಸ್ ಠಾಣೆ; ಎ. ಕೆ. ರಕ್ಷಿತ್, ಕೆಂಪೇಗೌಡ ನಗರ; ಎಚ್. ಸಂದೀಪ್, ಸಿಟಿ ಮಾರುಕಟ್ಟೆ; ಜಿ. ಪಿ. ರಾಜು, ಮಾಗಡಿ ರಸ್ತೆ, ಎಂ. ಎಸ್. ಅನಿಲ್‌ಕುಮಾರ್, ಪೀಣ್ಯ ಎಸ್. ಶ್ರೀಧರ್, ಕೆ. ಜಿ. ಹಳ್ಳಿ ಸಂಚಾರ ಪೊಲೀಸ್ ಠಾಣೆ; ಹನುಮಂತ ಕೆ. ಭಜಂತ್ರಿ, ಹಲಸೂರು ಗೇಟ್;ಎಸ್. ಲಕ್ಷ್ಮಣಗೌಡ, ರಾಜಾಜಿನಗರ; ಸಿ. ಜೆ. ಚೈತನ್ಯ, ಕೆ. ಆರ್. ಪುರ ಸಂಚಾರ ಪೊಲೀಸ್ ಠಾಣೆ; ಬಿ. ಎಸ್. ಮಂಜುನಾಥ್, ಜಿಗಣಿ; ಎಂ. ಎಲ್. ಕೃಷ್ಣಮೂರ್ತಿ, ಯಲಹಂಕ, ಟಿ.…

Read More

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ಕುತ್ತಿಗೆಗೆ ವೇಲ್ ನಿಂದ ಬಿಗಿದು ಪತಿಯಿಂದಲೇ ಪತ್ನಿಯ ಹತ್ಯೆಯಾಗಿದೆ. ಪತ್ನಿ ಪೂಜಾ(28) ಕೊಲೆಯಾದ ಮಹಿಳೆಯಾಗಿದ್ದಾರೆ. ಕೊಲೆ ಮಾಡಿ ಮೃತದೇಹವನ್ನು ನಾಲೆಗೆ ಎಸೆದು ಪತಿ ಶ್ರೀನಾಥ್(32) ಪರಾರಿಯಾಗಿದ್ದಾನೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಕಾರ್ಮೋರೆಂಟ್ ಹಾಗೂ ಈಗ್ರೆಟ್ ಜಾತಿಯ ಪಕ್ಷಿಗಳನ್ನ ಕೊಂದಿದ್ದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇದೇ ಗ್ರಾಮದ ರವಿ ಬಂಧಿತ ಆರೋಪಿ. ಸಿಂದುವಳ್ಳಿ ಗ್ರಾಮದ ಸಮೀಪ ಮರದಲ್ಲಿ ಕಾರ್ಮೋರೆಂಟ್ ಮತ್ತು ಈಗ್ರೆಟ್ ಪಕ್ಷಿಗಳು ಗೂಡು ಕಟ್ಟಿದ್ದವು. ಈ ವೇಳೆ ಅದೇ ಗ್ರಾಮದ ಬಂಧಿತ ಆರೋಪಿ ರವಿ ಗೂಡನ್ನ ಕಿತ್ತು ಹಾಕಿ. 24ಮರಿಗಳನ್ನ ಸಾಯಿಸಿ, 7 ಮರಿಗಳಿಗೆ ಗಾಯಗೊಳಿಸಿದ್ದ. ಗಾಯಗೊಂಡಿದ್ದ ಮರಿಗಳಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಅರಣ್ಯಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ RFO ಸುರೇಂದ್ರ, DRFO ಮೋಹನ್ ಕುಮಾರ್, ಗಸ್ತುಪಾಲಕ ರಾಜೇಗೌಡ, ಚಾಲಕ ಗಣೇಶ್ ಭಾಗಿಯಾಗಿದ್ದರು. ಈ ಕುರಿತು ನಂಜನಗೂಡು ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್…

Read More

ಪ್ರಸಕ್ತ ಶೈಕ್ಷಣಿಕ ಸಾಲಿನ ಮೂರು ವರ್ಷದ ಕಾನೂನು ಪದವಿ ಪ್ರವೇಶಾತಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (ತೃತೀಯ ಲಿಂಗಿಗಳಿಗೆ) ಮೀಸಲಾತಿ ನೀಡದಿರಲು ಕಾರ್ಯಕಾರಿ ಮಂಡಳಿ ನಿರ್ಧರಿಸಿದೆ ಎಂದು, ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್ಎಲ್‌ಎಸ್‌ಯು) ಕರ್ನಾಟಕ ರಾಜ್ಯ ಹೈಕೋರ್ಟ್‌ಗೆ ತಿಳಿಸಿದೆ. ತಮಗೆ ಕಾನೂನು ಪದವಿ ಪ್ರವೇಶ ನಿರಾಕರಿಸಿರುವ ಎನ್‌ಎಲ್‌ಎಸ್‌ಯು ಕ್ರಮವನ್ನು ಪ್ರಶ್ನಿಸಿ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿಯಾದ ಮುಗಿಲ್ ಅನ್ನು ವಸಂತ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ಪೀಠ ಹೀಗೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಆರೋಗ್ಯ ಇಲಾಖೆಯು ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲು ಮುಂದಾಗಿದೆ. ಸದ್ಯ ನಮ್ಮ ಕ್ಲಿನಿಕ್‌ ಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12. 30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4. 30 ರವರೆಗೆ ಸೇವೆ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಹಾಗೂ ಉದ್ಯೋಗಸ್ಥರಿಗೆ ಸಮರ್ಪಕವಾಗಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿದ್ದವು. ಹೀಗಾಗಿ, ಈ ಬಗ್ಗೆ ಅಧಿಕಾರಿಗಳ ಜತೆಗೆ ಚರ್ಚಿಸಿರುವ ಸಚಿವ ದಿನೇಶ್ ಗುಂಡೂರಾವ್, ಸಂಜೆ ಸೇವೆ ಒದಗಿಸುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ವಾರಣಾಸಿ, ಅಯೋಧ್ಯೆ, ಗಯಾ ಟೂರ್ ಪ್ಯಾಕೇಜ್ ಸಂಬಂಧ ಯಾತ್ರೆಗೆ ತುಮಕೂರಿನಲ್ಲಿ ಬೋರ್ಡಿಂಗ್ ಮತ್ತು ಡಿ-ಬೋರ್ಡಿಂಗ್ ವ್ಯವಸ್ಥೆಯನ್ನು ಹೊಸದಾಗಿ ಕಲ್ಪಿಸಲಾಗಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಸುಮಾರು 5 ಎಕರೆ ಭೂಮಿ ಮಂಜೂರು ಮಾಡುವಂತೆ ಪತ್ರ ಬರೆದು ಕೋರಲಾಗುವುದು. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆಯವರು ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಇಸ್ಲಾಮಾಬಾದ್: ರಾಷ್ಟ್ರೀಯ ಪ್ರಕ್ಷುಬ್ಧತೆ ಹಾಗೂ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನದಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಶಿಫಾರಸಿನ ಮೇರೆಗೆ ಸಂಸತ್ತನ್ನು ಬುಧವಾರ ತಡರಾತ್ರಿ ವಿಸರ್ಜಿಸಲಾಗಿದೆ. ಇದೀಗ ಸಾರ್ವತ್ರಿಕ ಚುನಾವಣೆಗೆ ವೇದಿಗೆ ಸಜ್ಜಾಗಿದೆ. ಪಾಕ್ ಸಂಸತ್ತಿನ 5 ವರ್ಷಗಳ ಅವಧಿ ಪೂರ್ಣಗೊಳ್ಳಲು 3 ದಿನಗಳ ಮುಂಚಿತವಾಗಿ ಸಂಸತ್ತನ್ನು ವಿಸರ್ಜಿಸಲಾಗಿದೆ. ಆಗಸ್ಟ್ 12 ಸಂಸತ್ತಿನ ಅವಧಿ ಮುಕ್ತಾಯಗೊಳ್ಳುವ ದಿನವಾಗಿತ್ತು. ಪಾಕಿಸ್ತಾನದ ಸಂವಿಧಾನದ ಪ್ರಕಾರ ಸರ್ಕಾರದ ಅವಧಿ ಪೂರೈಸಿದ 60 ದಿನಗಳಲ್ಲಿ ಚುನಾವಣೆ ನಡೆಯಬೇಕು. ಅವಧಿಗೂ ಮುನ್ನ ವಿಸರ್ಜನೆ ಮಾಡಿದರೆ 90 ದಿನಗಳ ಕಾಲಾವಕಾಶ ಇರಲಿದೆ. ಇದೀಗ ಸಂಸತ್ತನ್ನು ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜನೆ ಮಾಡಿರುವುದರಿಂದ ಹೊಸ ಚುನಾವಣೆ ನಡೆಸಲು 90 ದಿನಗಳ ಕಾಲಾವಕಾಶ ಸಿಗಲಿದೆ. ಸಂಸತ್ತನ್ನು ವಿಸರ್ಜಿಸುವಂತೆ ನಾನು ಇಂದು ರಾತ್ರಿ ಅಧ್ಯಕ್ಷರಿಗೆ ಸಲಹೆ ನೀಡುತ್ತೇನೆ ಎಂದು ಷರೀಫ್ ಈ ಹಿಂದೆ ಸಂಸತ್ತಿಗೆ ತಿಳಿಸಿದ್ದರು. ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಲು ಎರಡೂ ಕಡೆಯಿಂದ ಶಿಫಾರಸು ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಗುರುವಾರ ವಿರೋಧ ಪಕ್ಷಗಳ ನಾಯಕರೊಂದಿಗೆ…

Read More

ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ. ಸಚಿವರ ಕಾರ್ಯ ವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಮುಖ್ಯಮಂತ್ರಿಗಳಿಗೆ ಬರೆದಿದ್ದರು ಎನ್ನಲಾದ ಪತ್ರ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಸಿ ಸಮಸ್ಯೆ ಸರಿಪಡಿಸುವ ಪ್ರಯತ್ನ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತತ ಮೂರನೇ ದಿನ (ಬುಧವಾರ) ಜಿಲ್ಲಾವಾರು ಸ್ವಪಕ್ಷೀಯ ಶಾಸಕರ ಸರಣಿ ಸಭೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠ’ ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಇದೇ 16ಕ್ಕೆ ಮುಂದೂಡಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆಗೆ ನಿಗದಿಪಡಿಸಿತ್ತು. ಆದರೆ, ಮಧ್ಯಾಹ್ನದ ಕಲಾಪದ ಅವಧಿಯನ್ನು 3. 45ಕ್ಕೇ ಮುಕ್ತಾಯಗೊಳಿಸಲಾದ ಕಾರಣ ಇದೇ 16ರ ಬೆಳಗ್ಗೆ 10 ಗಂಟೆಗೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More