Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ರಾಮನಗರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರ ಮಗ ಪಾನಮತ್ತರಾಗಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರಘು ನಾಯಕ್ (65) ಹಾಗೂ ಅವರ ಮಗ ಚಿರಂಜೀವಿ (25) ಮೃತಪಟ್ಟಿದ್ದಾರೆ. ‘ದಾವಣಗೆರೆಯ ರಘು ನಾಯಕ್, ಮಗ ಚಿರಂಜೀವಿ ಹಾಗೂ ಕುಟುಂಬದವರ ಜೊತೆ ಸಿಂಗಪುರ ಲೇಔಟ್ ಬಳಿಯ ಕುವೆಂಪು ನಗರದಲ್ಲಿ ವಾಸವಿದ್ದರು. ಇವರಿಬ್ಬರು ಸಂಬಂಧಿ ವಾಸು ನಾಯಕ್ ಜೊತೆ ಬೈಕ್ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದರು. ‘ಅಪಘಾತಕ್ಕೆ ಕಾರಣವಾಗಿರುವ ಆಕಾಶ್ ಹಾಗೂ ಕಾರಿನಲ್ಲಿದ್ದ ನಿಖಿತ್ ಅವರನ್ನು ಬಂಧಿಸಲಾಗಿದೆ. ಇಬ್ಬರೂ ಮದ್ಯ ಕುಡಿದಿರುವುದು ಪರೀಕ್ಷೆಯಿಂದ ಗೊತ್ತಾಗಿದೆ. ಕಾರಿನಲ್ಲಿದ್ದ ಮೂವರು ಯುವಕರು ಪರಾರಿಯಾಗಿದ್ದಾರೆ. ಅಪಘಾತದಲ್ಲಿ ರಘು ಅವರ ಅಳಿಯ ವಾಸು ನಾಯಕ್ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್…
ಬೆಂಗಳೂರು: ‘ವಿಧಾನಪರಿಷತ್ ಸದಸ್ಯತ್ವ ಸ್ಥಾನ ನಿಷ್ಠಾವಂತ ಕಾರ್ಯಕರ್ತರಿಗೆ ಸಿಗದೇ, ಉಳ್ಳವರ ಪಾಲಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೇಸರಗೊಂಡಿದ್ದಾರೆ.’ ಈ ಹಿನ್ನೆಲೆ ಇಂದು ಪಕ್ಷದ ನಾಯಕರ ನಿಲುವಿನ ವಿರುದ್ಧ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಕೆಪಿಸಿಸಿ ಕಚೇರಿ ಸಭೆ ನಡೆಸಲಿದ್ದಾರೆ. ಎಂಆರ್ ಸೀತಾರಾಮ್, ಉಮಾಶ್ರೀ ಮತ್ತು ಸುಧಾಮ್ ದಾಸ್ ಅವರಿಗೆ ಪರಿಷತ್ ಸದಸ್ಯ ಸ್ಥಾನ ನೀಡುತ್ತಿರುವುದಕ್ಕೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(8/ಆಗಸ್ಟ್) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 22 ಸ್ಥಾನ ಗೆಲ್ಲುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 1996 ರಿಂದ ಲೋಕಸಭೆ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018 ರಲ್ಲಿ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರಲಿಲ್ಲ ಆದರೆ, ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೆವು. ಲೋಕಸಭೆಗೆ ವಿಚಾರಗಳು ಬೇರೆ ಇರುತ್ತವೆ. ನಾವು 25 ಸ್ಥಾನಗಳನ್ನು ಉಳಿಸಿಕೊಳ್ಳಲು ತಯಾರಿ ಮಾಡಿಕೊಳ್ಳವೆ ಎಂದು ಹೇಳಿದರು. ನಾನು ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸಂಸದರು ಮನವಿ ಮಾಡಿದ್ದರು. ಈ ಹಿನ್ನಲೆ ದೆಹಲಿಗೆ ಆಗಮಿಸಿದ್ದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಅಮಿತ್ ಶಾ ಭೇಟಿಗೂ ಪ್ರಯತ್ನ ಮಾಡುತ್ತೇನೆ. ಅವರು ಸಂಸತ್ ಕಲಾಪ ಹಿನ್ನಲೆ ಸಮಯ ಸಿಕ್ಕಿಲ್ಲ. ಸಮಯ ಸಿಕ್ಕ ಬಳಿಕ ನಾನು ಭೇಟಿ ಮಾಡುತ್ತೇನೆ ಹೈಕಮಾಂಡ್ ಬುಲಾವ್ ನೀಡಿಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಳೆದ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗಿತ್ತು. ಈ ಬಾರಿಯೂ ಅದೇ ಮಾದರಿಯಲ್ಲಿ ಇನ್ನಷ್ಟು ಉತ್ಸಾಹದಿಂದ ಪಕ್ಷಾತೀತವಾಗಿ ಎಲ್ಲರನ್ನೂ ಜೋಡಿಸಬೇಕು ಎಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಅಶ್ವಥ್ ನಾರಾಯಣ ತಿಳಿಸಿದರು. ದೇಶಭಕ್ತಿಯ ಕುರಿತು ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಗಸ್ಟ್ 13 ರಿಂದಲೇ ನಡೆಸಲು ಉದ್ದೇಶಿಸಲಾಗಿದೆ. ನಮ್ಮ ಮಲ್ಲೇಶ್ವರದ ಎಲ್ಲಾ ಆಟದ ಮೈದಾನಗಳು, ಉದ್ಯಾನವನಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ-ಕಾಲೇಜು ಮಕ್ಕಳನ್ನು ಜೋಡಿಸಿಕೊಂಡು ಆಚರಿಸಲು ಸೂಚಿಸಲಾಗಿದೆ. ಕಳೆದ ಬಾರಿಯ ಧ್ವಜವನ್ನೇ ಮರು ಬಳಕೆ ಮಾಡಲು ಸೂಚಿಸುವ ಜತೆ ಅಗತ್ಯ ಇರುವವರಿಗೆ ಅಂಚೆ ಕಚೇರಿಗಳು ಹಾಗೂ ಸ್ವ ಸಹಾಯ ಸಂಘದ ಸಹೋದರಿಯರು ತಯಾರಿಸಿದ ರಾಷ್ಟ್ರ ಧ್ವಜವನ್ನು ಕೊಂಡುಕೊಳ್ಳುವಂತೆ ತಿಳಿಸಲು ಹೇಳಲಾಯಿತು. ಹಾಗೆಯೇ ಧ್ವಜವನ್ನು ಸುರಕ್ಷಿತವಾಗಿ ಮಡಚಿ ಇಡುವ ಬಗ್ಗೆ ಜನತೆಗೆ ಅರಿವು ಮೂಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನ ಎಸಗುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ನಿವಾಸಿ ಅಚ್ಯುತ್ ಕುಮಾರ್, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಮಾರ್ಚ್ನಲ್ಲಿ ಈತನನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. ಕೃತ್ಯದ ಬಳಿಕ ಆರೋಪಿ ಮೈಸೂರಿಗೆ ಹೋಗಿ ತಲೆಮರೆಸಿಕೊಂಡಿದ್ದ. ಮಹಿಳೆ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಈತನಿಂದ 9.40 ಲಕ್ಷ ಮೌಲ್ಯದ 4 ಚಿನ್ನದ ಸರ ಹಾಗೂ ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ಅವರನ್ನು ಮುಖ್ಯಮಂತ್ರಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು. ‘ಕೃಷಿ ಸಚಿವರು, ತಮ್ಮ ಇಲಾಖೆಯ ಅಧಿಕಾರಿಗಳಿಂದ ತಿಂಗಳಿಗೆ ತಲಾ ಕೆ 6ರಿಂದ 8 ಲಕ್ಷ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳು ರಾಜ್ಯಪಾಲರಿಗೂ ದೂರ ನೀಡಿದ್ದಾರೆ. ಅದರಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪಾಲೆಷ್ಟು ಎಂದು ಜನರು ಕೇಳುವ ಮೊದಲು ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಬೇಕು’ ಎಂದು ಆಗ್ರಹಿಸಿದರು. ಮುಖಂಡರಾದ ಜಗದೀಶ್ ಚಂದ್ರ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ದರ್ಶನ್ ಜೈನ್ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಯುಪಿಎಸ್ ಸಿ ಪರೀಕ್ಷೆಯಲ್ಲಿ 349ನೇ ಬ್ಯಾಂಕ್ ಪಡೆದಿರುವ ಶಿಲ್ಪಶ್ರೀ ಆರ್. ಅವರನ್ನು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದಿಂದ ಸನ್ಮಾನಿಸಲಾಯಿತು. ನಗರದ ಜನ್ಮಾದೇವಿ ಮಂದಿರ ಕಲ್ಯಾಣ ಮಂಟಪದಲ್ಲಿ ನಡೆದ ಸಂಘದ 23ನೇ ವಾರ್ಷಿಕೋತ್ಸವ ಮತ್ತು 44ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು. ಹೈಸ್ಕೂಲ್ ನಿಂದ ಉನ್ನತ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದಿರುವ ಭೋವಿ ಸಮಾಜದ 442 ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಮಹಾಗಣಪತಿ ಹೋಮ, ದುರ್ಗಾ ಹೋಮ, ಕುಂಭಾಭಿಷೇಕ ಮಹೋತ್ಸವ, ಗೋಪೂಜೆ, ಮಂಟಪ ಪ್ರವೇಶ, ಗಣೇಶ ಪೂಜೆಗಳು ನಡೆದವು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ದುಷ್ಕರ್ಮಿಗಳಿಗೆ ಕಾನೂನು ರೀತಿ ಶಿಕ್ಷೆ ನೀಡಬೇಕೆಂದು ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಕೆ. ಎಂ. ಪಾಲಾಕ್ಷರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ಚಂದ್ ಗೆಹ್ಲಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು ಕುಕಿ ಸಮುದಾಯದ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವುದು ಮನುಕುಲವೇ ತಲೆತಗ್ಗಿಸುವಂತಹ ರಾಕ್ಷಸಿ ಕೃತ್ಯವಾಗಿದೆ. ಮಣಿಪುರ ರಾಜ್ಯದ ಮುಖ್ಯಮಂತ್ರಿ ಬೀರೇನ್ಸಿಂಗ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅಬ್ದುಲ್ ರೌಫ್, ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್, ರಾಜ್ಯ ಉಪಾಧ್ಯಕ್ಷರಾದ ಎಂ. ಆರ್ ಕೃಷ್ಣಪ್ಪ, ಮಹಿಳೆಯ ಮುಖಂಡರಾದ ಶ್ರೀಮತಿ ವಾಣಿ ಎನ್ ಶೆಟ್ಟಿ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು…
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ ಆ. 9ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರವಿ ಎಂ. ತಿರ್ಲಾಪೂರ, ‘1919ರಲ್ಲಿ ಪ್ರಾರಂಭವಾದ ಕರ್ನಾಟಕ ಆಡಳಿತ ಸೇವೆ ಅಧಿಕಾರಗಳ ಸಂಘವು 2019ಕ್ಕೆ ನೂರು ವರ್ಷಗಳನ್ನು ಪೂರೈಸಿತ್ತು. ಕೋವಿಡ್ ಕಾರಣದಿಂದ ಶತಮಾನೋತ್ಸವವನ್ನು ಮುಂದೂಡಲಾಗಿತ್ತು’ ಎಂದು ತಿಳಿಸಿದರು. ‘ಈ ಸಮಾರಂಭವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸಲಿದ್ದಾರೆ. ಸಂಘದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು. ‘ಟಿ. ಎಂ. ವಿಜಯಭಾಸ್ಕರ, ರಾಜೀವ್ ಚಾವ್ಹಾ, ಗುರುರಾಜ ಕರಜಗಿ ಮತ್ತು ಟಿ. ವಿ. ಮೋಹನ್ ದಾಸ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…