Author: admin

‘ಆಟೊ ಮತ್ತು ಟ್ಯಾಕ್ಸಿ ಚಾಲಕರ ಆದಾಯಕ್ಕೆ ಮಾರಕವಾಗಿರುವ ಅಕ್ರಮ ವೈಟ್‌ ಬೋರ್ಡ್ ಬೈಕ್ ಟ್ಯಾಕ್ಸಿ ಹಾಗೂ ಸರ್ಕಾರದ ಶಕ್ತಿ ಯೋಜನೆಯಿಂದ ನಷ್ಟ ಅನುಭವಿಸುತ್ತಿರುವ ಆಟೊ ಚಾಲಕರಿಗೆ ಸರ್ಕಾರ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು’ ಎಂದು ಬೆಂಗಳೂರು ಆಟೊ ಚಾಲಕರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ. ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದರ್ಶ ಆಟೊ ಮತ್ತು ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಎಂ. ಮಂಜುನಾಥ್, ‘ನಗರದಲ್ಲಿ ಆಟೊ ಸೇವೆಯು ಬಿಎಂಟಿಸಿ ನಂತರದ ಸ್ಥಾನದಲಿದ್ದು, ನಿತ್ಯ ಲಕ್ಷಾಂತರ ಜನರಿಗೆ ಸಾರಿಗೆ ಸೇವೆ ಒದಗಿಸುತ್ತಿದೆ. ಕಳೆದ ಎರಡು ವರ್ಷಗಳಿಂದ ಕೆಲವು ಆಯಪ್ ಆಧಾರಿತ ಅನಧಿಕೃತ ಅಕ್ರಮ ವೈಟ್‌ಬೋರ್ಡ್ ಟ್ಯಾಕ್ಸಿಗಳ ಹಾವಳಿ ಮತ್ತು ಸರ್ಕಾರದ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ ಕೂಡಲೇ ಸರ್ಕಾರ ನಮಗೆ ಪರಿಹಾರ ಘೋಷಿಸಬೇಕು’ ಎಂದು ಒತ್ತಾಯಿಸಿದರು. ‘ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಚಾಲಕರ ಪುನಶ್ಚತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಜಾತಿವಾರು ನಿಗಮಗಳಿಂದ ನೇರಸಾಲ ಯೋಜನೆ ಅಡಿಯಲ್ಲಿ ಆಟೊ,…

Read More

ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರು ನಿಯಮ 72 ರಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಹಿಂದಿನ ಸರ್ಕಾರದಲ್ಲಿ ತರಲಾಗಿದ್ದ ಕಾಯ್ದೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ಮಾರುಕಟ್ಟೆ ಪ್ರಾಂಗಣಗಳ ಹೊರಗಡೆ ಮಾರುಕಟ್ಟೆ  ಕ್ಷೇತ್ರದಲ್ಲಿ ನಡೆಯುವ ವ್ಯಾಪಾರ ವಹಿವಾಟಿನ ಮೇಲೆ ಈ ಮೊದಲಿನಂತೆ ನಿಯಂತ್ರಣವನ್ನು ಹೊಂದುವುದು ರೈತ ಬೆಳೆಗಾರರ ಹಿತದೃಷ್ಟಿಯಿಂದ ಅವಶ್ಯಕತೆ ಇರುತ್ತದೆ. ಆದುದರಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966ರ ಕಲಂ 8(2), ಕಲಂ 8(3) ಹಾಗೂ ಕಲಂ 117ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲು ಇದೇ ಜೂನ್ 16 ರಂದು ನಡೆದ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಮುಂದಿನ ಕ್ರಮಕ್ಕಾಗಿ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ 2020 ತಿದ್ದುಪಡಿ ಕಾಯ್ದೆಯಿಂದಾಗಿ ಎಪಿಎಂಸಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು ಅವರು ನಿಯಮ 72 ರಡಿ ಪ್ರಸ್ತಾಪಿಸಿದ ವಿಷಯಕ್ಕೆ ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಬುಧವಾರ ಉತ್ತರಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ತರಲಾಗಿದ್ದ ಕಾಯ್ದೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ಮಾರುಕಟ್ಟೆ ಪ್ರಾಂಗಣಗಳ ಹೊರಗಡೆ ಮಾರುಕಟ್ಟೆ ಕ್ಷೇತ್ರದಲ್ಲಿ ನಡೆಯುವ ವ್ಯಾಪಾರ ವಹಿವಾಟಿನ ಮೇಲೆ ಈ ಮೊದಲಿನಂತೆ ನಿಯಂತ್ರಣವನ್ನು ಹೊಂದುವುದು ರೈತ ಬೆಳೆಗಾರರ ಹಿತದೃಷ್ಟಿಯಿಂದ ಅವಶ್ಯಕತೆ ಇರುತ್ತದೆ. ಆದುದರಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966ರ ಕಲಂ 8(2), ಕಲಂ 8(3) ಹಾಗೂ ಕಲಂ 117ಕ್ಕೆ ತಿದ್ದುಪಡಿ ಮಾಡಿ ಪುನರ್ ಸ್ಥಾಪಿಸಲು ಇದೇ ಜೂನ್ 16 ರಂದು ನಡೆದ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಮುಂದಿನ ಕ್ರಮಕ್ಕಾಗಿ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಇಲಾಖೆಗೆ ಕಳುಹಿಸಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿ ಸಂದೇಶಗಳನ್ನು ಪೋಸ್ಟ್ ಮಾಡಿದವರ ವಿರುದ್ಧ ಕಳೆದ 30 ದಿನಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ಮೇಲಿನ ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜೈನ್, ಧರ್ಮಕ್ಕೆ ಸಂಬಂಧಿಸಿದ ಪ್ರಚೋದನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಮತ್ತು ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಾಟ್ಸ್ಆ್ಯಪ್, ಫೇಸ್‌ ಬುಕ್, ಟ್ವಿಟರ್, ಇನ್‌ ಸ್ಟಾಗ್ರಾಮ್ ಮತ್ತು ಇತರ ಅಪ್ಲಿಕೇಶನ್‌ ಗಳಲ್ಲಿ ಕೋಮು ಸೂಕ್ಷ್ಮ ಸಂದೇಶಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದು ಜೈನ್ ಹೇಳಿದ್ದಾರೆ. ಯಾವುದೇ ಧರ್ಮದ ಪರವಾಗಿ ಮತ್ತು ವಿರುದ್ಧವಾಗಿ ಸಂದೇಶಗಳನ್ನು ಪೋಸ್ಟ್ ಮಾಡುವ, ಹಂಚಿಕೊಳ್ಳುವ ಮತ್ತು ಕಾಮೆಂಟ್ ಮಾಡುವ ವ್ಯಕ್ತಿಗಳ ವಿರುದ್ಧ ಎಲ್ಲಾ ಪೊಲೀಸ್ ಠಾಣೆಗಳ ಸಾಮಾಜಿಕ ಮಾಧ್ಯಮ ಸೆಲ್‌ಗಳಲ್ಲಿ ಕಟ್ಟುನಿಟ್ಟಾದ ನಿಗಾ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಪುನರಾವರ್ತಿತ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ ಹೆಚ್.ಡಿ.ಕುಮಾರಸ್ವಾಮಿಯವರು ‘ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ‌ ಕೊರತೆ ಇದೆ. ಸಮಸ್ಯೆ ಬಗೆಹರಿಯುವವರೆಗೆ ಬೇಳೆ, ಎಣ್ಣೆ, ಬೆಲ್ಲ ವಿತರಿಸಬಹುದು’ ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು. ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ‘5 ಗ್ಯಾರಂಟಿ ಮೇಲೆ ಕಾಂಗ್ರೆಸ್ ಗೆದ್ದಿದೆಯೆಂದು ವಿಶ್ಲೇಷಣೆ ಮಾಡ್ತಾರೆ, ಆದರೆ, ಅದಕ್ಕೆ ನಾನು ಮಹತ್ವ ಕೊಡಲ್ಲ. ಯಾವ ನಿರೀಕ್ಷೆ ಇಟ್ಟುಕೊಂಡು ಜನ ಮತ ಕೊಟ್ಟಿದ್ದಾರೆ ಗೊತ್ತಾಗುತ್ತೆ’ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ ಹಿನ್ನಲೆ ರಾಜಭವನದ ಬಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಸಂವಿಧಾನ, ‌ಕಾನೂನಿಗೂ ಸಂಬಂಧವಿಲ್ಲ ಎಂಬ ರೀತಿ ವರ್ತಿಸುತ್ತಿದ್ದು, ಕೋರ್ಟ್ ಆದೇಶದ‌ ವಿರುದ್ಧ ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲರೂ ಒಂದು ಕುಟುಂಬದ ಸಲುವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಾವೇರಿ: ಜಿಲ್ಲೆಯಲ್ಲಿ ಮಳೆಯಾಗದ ಹಿನ್ನಲೆ ಬರಗಾಲ ಆವರಿಸುವ ಮುನ್ಸೂಚನೆ ಹಿನ್ನಲೆ ಖಾಸಗಿಯಾಗಿ ಮೋಡ ಬಿತ್ತನೆ ಮಾಡಿಸಲು ಶಾಸಕ ಪ್ರಕಾಶ್ ಕೋಳಿವಾಡ ನಿರ್ಧಾರ ಮಾಡಿದ್ದಾರೆ. ಇನ್ನು ಈಗಾಗಲೇ ಮಳೆಯ ಕೊರತೆ ತೀವ್ರವಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಶಾಸಕರ ಮೋಡ ಬಿತ್ತನೆ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದೀಗ ಕೇಂದ್ರ ಸರ್ಕಾರದಿಂದ ಅನುಮತಿ ಮಾತ್ರ ಬಾಕಿಯಿದ್ದು, ಜುಲೈ ಅಂತ್ಯದ ವೇಳೆಗೂ ಮಳೆ ಕೊರತೆ ಕಾಣಿಸಿಕೊಂಡರೆ ಮೋಡ ಬಿತ್ತನೆ ಮಾಡಲಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ ಸೋನ್‌ ಪ್ರಯಾಗ ಮತ್ತು ಗೌರಿಕುಂಡ್‌ ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೋನ್‌ ಪ್ರಯಾಗ್ ಮತ್ತು ಗೌರಿಕುಂಡ್‌ ನಲ್ಲಿ ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್‌ ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ,  ಮಾಜಿ ಶಾಸಕರು  ಹಾಗೂ ಹಿರಿಯ  ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು  ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ  ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ  ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ  ಬಿ.ಟಿ. ನಾಗಣ್ಣ  ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್  ರವರುಗಳನ್ನು ನೇಮಿಸಲಾಗಿದೆ. ಪಕ್ಷದ ಈ ಹಿಂದಿನ   ರಾಜ್ಯಾಧ್ಯಕ್ಷರಾಗಿದ್ದ  ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ  ಜಂಟಿ ಕಾರ್ಯದರ್ಶಿಗಳನ್ನಾಗಿ  ನೇಮಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ ಭೀತಿ ಇಲ್ಲದೆ ಓಡಾಡುವಂತಿಲ್ಲ. ಜೈನ ಮುನಿ ಕೊಲೆಯಾಗಿದೆ‌ ನಮ್ಮ‌ಕಾರ್ಯಕರ್ತರ ಕೊಲೆಯಾಗಿದೆ. ಜನ ಸಾಮಾನ್ಯರ ಕೊಲೆಯಾಗಿದೆ. ಇಬ್ಬರು ಟೆಕ್ಕಿಗಳ ಕೊಲೆಯಾಗಿದೆ. ಕೊಲೆ ಮಾಡಿ ಆ ವ್ಯಕ್ತಿ ತನ್ನ ಇನ್ ಸ್ಟಾ ಗ್ರಾಂನಲ್ಲಿ ಹಾಕುತ್ತಾನೆ. ಕೊಲೆಗಡುಕರಿಗೆ ಯಾವುದೇ ಭಯ ಇಲ್ಲ. ಪೊಲಿಸರ ಮೇಲೆ ಒತ್ತಡ ಹೇರಲಾಗುತ್ತಿದೆ. ಅವ್ಯವಹಾರ ತಡೆಯಲು ಹೋಗಿದ್ದ ಪೊಲಿಸ್ ಅಧಿಕಾರಿಯನ್ನೆ ಕೊಲೆ ಮಾಡಲಾಗಿದೆ‌. ಹಿರಿಯ ಅಧಿಕಾರಿಗಳು ಸರ್ಕಾರದ ಮುಂದೆ ತಲೆವಾಗಿ ಅವರ ಮುಂದೆ ನಿಂತಿದ್ದಾರೆ. ಹೀಗಾಗಿ ಕೊಲೆಗಡುಕರಿಗೆ ಯಾವುದೇ ಭಯವಿಲ್ಲದಂತಾಗಿದೆ. ದಪ್ಲ ಚರ್ಮದ ಸರ್ಕಾರ…

Read More