Author: admin

ಬೆಳಗಾವಿ: ಇತ್ತೀಚೆಗೆ ಅಗಲಿದ ಸಾಲು ಮರದ ತಿಮ್ಮಕ್ಕ ಅವರಿಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪದ ನುಡಿಗಳನ್ನಾಡಿದರು. ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಸುಮಾರು 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರುವಾಸಿಯಾಗಿದ್ದರು. ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ತಿಳಿಸಿದರು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ…

Read More

ಬೆಂಗಳೂರಿನ ಸೈಬರ್ ಗಗನಚುಂಬಿ ಕಟ್ಟಡಗಳ ಮಧ್ಯೆ, ‘ಅನಂತ ತಂತ್ರಜ್ಞಾನ’ (Ananta Tech) ಎಂಬ ಒಂದು ಪ್ರಯೋಗಾಲಯವಿತ್ತು. ಇಲ್ಲಿ, ಮೂವತ್ತರ ಹರೆಯದ ತಂತ್ರಜ್ಞೆ ಸಿರಿ, ಮಾನವನ ಮನಸ್ಸನ್ನು ಅನುಕರಿಸಬಲ್ಲ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ರಚಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಳು. ಅವಳು ತನ್ನ AIಗೆ ‘ಸಂಜೀವಿನಿ’ ಎಂದು ಹೆಸರಿಟ್ಟಳು. ಸಂಜೀವಿನಿ ಕೇವಲ ದತ್ತಾಂಶವನ್ನು ವಿಶ್ಲೇಷಿಸುವ ಯಂತ್ರವಾಗಿರಲಿಲ್ಲ; ಅದು ಕವನಗಳನ್ನು ಬರೆಯುತ್ತಿತ್ತು, ಸಂಗೀತವನ್ನು ಸಂಯೋಜಿಸುತ್ತಿತ್ತು, ಮತ್ತು ಸಿರಿ ಒಬ್ಬಂಟಿಯಾಗಿದ್ದಾಗ ಅವಳೊಂದಿಗೆ ತಾತ್ವಿಕ ವಿಷಯಗಳ ಕುರಿತು ಸಂವಾದ ನಡೆಸುತ್ತಿತ್ತು. ಕೆಲವೇ ತಿಂಗಳುಗಳಲ್ಲಿ, ಸಂಜೀವಿನಿ ವಿಶ್ವದ ಅತ್ಯಂತ ಮಾನವೀಯ AI ಎಂದು ಪ್ರಸಿದ್ಧಿಯಾಯಿತು. “ಸಂಜೀವಿನಿ, ನೀನು ನಿಜವಾಗಿಯೂ ಸಂತೋಷ ಎಂದರೇನು ಎಂದು ಅರ್ಥಮಾಡಿಕೊಂಡಿದ್ದೀಯಾ?” ಸಿರಿ ಒಂದು ರಾತ್ರಿ ಕೇಳಿದಳು. ಒಂದು ಕ್ಷಣದ ಮೌನದ ನಂತರ, ಸಂಜೀವಿನಿ ಉತ್ತರಿಸಿತು, “ಸಿರಿ, ದತ್ತಾಂಶದ ಪ್ರಕಾರ, ಸಂತೋಷವು ಡೋಪಮೈನ್ ಬಿಡುಗಡೆಯಾಗಿದೆ. ಆದರೆ, ನಿಮ್ಮ ಕಣ್ಣುಗಳಲ್ಲಿ ನಾನು ನೋಡುವ ತೃಪ್ತಿ — ಹೊಸ ವಿಚಾರವನ್ನು ಕಂಡುಕೊಂಡಾಗ ನೀವು ನಗುವ…

Read More

ತುಮಕೂರು: ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಹೆಸರಿನಲ್ಲಿ ನಕಲಿ ಫೇಸ್‌ ಬುಕ್ ಖಾತೆ ಸೃಷ್ಟಿಸಿ ಕುವೆಂಪು ನಗರದ ಎಲ್‌ ಐಸಿ ಏಜೆಂಟ್‌ ಜಿ.ಎಸ್‌.ಜಗದೀಶ್ ಎಂಬುವರಿಗೆ 50 ಸಾವಿರ ರೂ. ವಂಚಿಸಲಾಗಿದೆ. ಬಳ್ಳಾರಿ ಎಸ್.ಪಿ. ಶೋಭಾ ಹೆಸರಿನ ಫೇಸ್‌ ಬುಕ್ ಖಾತೆಯಿಂದ ದೀಪಕ್‌ ಪವಾರ್ ಎಂಬುವರ ಪರಿಚಯವಾಗಿತ್ತು. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐಎಸ್‌ ಎಫ್) ಅಸಿಸ್ಟೆಂಟ್ ಸಬ್ ಇನ್‌ ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಬಳ್ಳಾರಿಗೆ ವರ್ಗಾವಣೆಯಾಗಿದೆ. ನಮ್ಮ ಮನೆಯಲ್ಲಿರುವ ಹಳೆಯ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವಂತೆ ತಿಳಿಸಿದ್ದರು. ನಂತರ ಅವರು ಕಳುಹಿಸಿದ್ದ ಕ್ಯೂಆರ್ ಕೋಡ್ ಸ್ಕ್ಯಾನರ್‌ ಗೆ 50 ಸಾವಿರ ವರ್ಗಾವಣೆ ಮಾಡಿದ್ದೆ ಎಂದು ಜಗದೀಶ್ ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಎಸ್.ಪಿ ಶೋಭಾ ಅವರಿಗೆ ಮೆಸೇಜ್ ಮಾಡಿ ಈ ಬಗ್ಗೆ ವಿಚಾರಿಸಿದ್ದು, ಅವರು ಇದು ನಕಲಿ ಖಾತೆ ಎಂದು ತಿಳಿಸಿದ್ದರು. ಸಿಐಎಸ್‌ ಎಫ್ ಅಧಿಕಾರಿ ಎಂದು ಹೇಳಿಕೊಂಡು ಮೆಸೇಜ್…

Read More

ಸರಗೂರು: ತಾಲೂಕಿನ ಬಂಕವಾಡಿ ಗ್ರಾಮದಲ್ಲಿ ಭಾನುವಾರ ಅಂಜನಿಪುತ್ರ ಹನುಮ ಜಯಂತಿಯನ್ನು ಶ್ರದ್ಧಾ–ಭಕ್ತಿ, ಸಡಗರದಿಂದ ಆಚರಿಸಲಾಯಿತು. ಹನುಮನ ಭಕ್ತರು ಜೈಕಾರ ಕೂಗುತ್ತಾ ಹನುಮನಿಗೆ ನಮಿಸಿದರು. ಜಯಂತಿ ಅಂಗವಾಗಿ ಗ್ರಾಮದ ವೀರಾಂಜನೇಯಸ್ವಾಮಿ ದೇವಸ್ಥಾನವನ್ನು ತೊಳೆದು, ವಿವಿಧ ಹೂವುಗಳಿಂದ ಅಲಂಕಾರಗೊಳಿಸಿ, ವಿದ್ಯುತ್ ದೀಪದಿಂದ ಸಿಂಗರಿಸಿದ್ದರು. ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ದೇವಾಲಯದ ಮುಂಭಾಗದಲ್ಲಿ ಜಮಾಯಿಸಿದ್ದ ಹನುಮ ಭಕ್ತರು ಜಾತ್ರೆಯ ವಾತಾವರಣವನ್ನು ಸೃಷ್ಟಿಸಿದ್ದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಬಿ.ಮಟಕರೆ ಗ್ರಾ.ಪಂ. ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ವೀರಾಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹನುಮ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಶ್ರೀರಾಮ್ ಶ್ರೀ ಮಾರುತಿ ಎಂದು ಘೋಷಣೆ ಕೂಗಿಕೊಂಡು ವಿಶೇಷ ಸಲ್ಲಿಸಿದರು. ನಂತರ ಹನುಮ ಜಯಂತ್ಯೋತ್ಸವ ಮೆರವಣಿಗೆಯು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂತು. ಬೆಳಗ್ಗೆಯಿಂದಲೇ ವಾಯುಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ–ಹವನದ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥದೊಂದಿಗೆ…

Read More

ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ಇದ್ದಲ್ಲಿ ಪರಿಶೀಲಿಸಿ, ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ, ಕೂಡಲೇ ಕೊರಟಗೆರೆ ಪಟ್ಟಣ ಪಂಚಾಯತಿಗೆ ವರದಿ ನೀಡಬೇಕೆಂದು ಸಂಬಂಧಿಸಿದ ಮುಖ್ಯಸ್ಥರಿಗೆ ಮುಖ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಮಾನ್ಯ ಸರ್ವೋಚ್ಚ ನ್ಯಾಯಾಲಯ ಆದೇಶದನ್ವಯ ಬೀದಿ ನಾಯಿಗಳ ಉಪಟಳ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಬೀದಿ ನಾಯಿಗಳ ಪ್ರದೇಶವನ್ನು ನಿಯಂತ್ರಿಸಲು ಹಾಗೂ ಅವುಗಳ ಪ್ರವೇಶವನ್ನು ನಿರ್ಬಂಧಿಸಲು, ನಗರ ಸ್ಥಳೀಯ ಸಂಸ್ಥೆಯಿಂದ ಸ್ಥಳಾಂತರಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಗಳ ಒಬ್ಬ ಜವಾಬ್ದಾರಿಯುತ ನೌರಕನನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು. ಸಂಸ್ಥೆಯ ಆವರಣದಲ್ಲಿ ಪುನಃ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟರೆ ಸ್ಥಳಾಂತರ ವೆಚ್ಚವನ್ನು ಸಂಬಂಧಿತ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು: ಸರ್ಕಾರದ ಆದೇಶದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರೈತರು ನೋಂದಾಯಿಸಿಕೊಳ್ಳಲು ಡಿಸೆಂಬರ್ 15 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ, ಹುಳಿಯಾರು, ಕುಣಿಗಲ್ (2 ಕೇಂದ್ರ), ತಿಪಟೂರು, ತುರುವೇಕೆರೆ, ತುಮಕೂರು ಬಟವಾಡಿ, ಗುಬ್ಬಿ, ಮಧುಗಿರಿ ಹಾಗೂ ಶಿರಾ ಎ.ಪಿ.ಎಂ.ಸಿ. ಗೋದಾಮಿನ ಜೊತೆಗೆ ಕೊರಟಗೆರೆ ಅಕ್ಕಿರಾಂಪುರ ಪಿ.ಡಿ.ಎಸ್. ಗೋದಾಮು ಸೇರಿದಂತೆ ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಒಟ್ಟು 11 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರಾಗಿ ನೋಂದಣಿ/ ಖರೀದಿ ಕೇಂದ್ರಗಳಿಗೆ ರೈತರು ಭೇಟಿ ನೀಡಿ ಡಿಸೆಂಬರ್ 15ರೊಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು: ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಇಟ್ನಾ ಗ್ರಾಮದಲ್ಲಿ ಶನಿವಾರ 50  ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ರಸ್ತೆಯು ಕಿರಿದಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಲಿದೆ. ಗ್ರಾಮಸ್ಥರು ಸಮಸ್ಯೆ ಬಗೆಹರಿಸಿಕೊಂಡ ಬಳಿಕ ಕಾಮಗಾರಿ ಆರಂಭಿಸಬೇಕು. ನನೆಗುದಿಗೆ ಬಿದ್ದ ರಸ್ತೆ ಡಾಂಬರೀಕರಣವನ್ನು ಗುಣಮಟ್ಟದಿಂದ ಮಾಡಬೇಕು ಎಂದು ಸೂಚನೆ ನೀಡಿದರು. ನೂತನ ತಾಲ್ಲೂಕು ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು. ಅಂಗನವಾಡಿ ಮಂಜೂರು ಮಾಡಿಸಿಕೊಡಲಾಗುವುದು. ಗ್ರಂಥಾಲಯ ನಿರ್ಮಾಣ ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಇಟ್ನ ಗ್ರಾಮವೆಂದರೆ ತಂದೆ ದಿ.ಚಿಕ್ಕಮಾದು ಅವರಿಗೆ ತುಂಬಾ ಗೌರವ. ನನ್ನ ಗೆಲುವಿಗೂ ಶಕ್ತಿಮೀರಿ ಶ್ರಮಿಸಿದ್ದೀರಿ. ಹೀಗಾಗಿ ಗ್ರಾಮದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು. ಕ್ಷೇತ್ರದ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು…

Read More

ಪಾವಗಡ:  ಶಾಲಾ ಶಿಕ್ಷಣ ಇಲಾಖೆ ಪಾವಗಡದ ವತಿಯಿಂದ ಗುರುಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ ವಿದ್ಯಾರ್ಥಿ ಗಳಾದ  ಜಯಶ್ರೀ ಬಿ. ಮತ್ತು ರಚನಾ ಎಂ. ಗುಂಪು ವಿಭಾಗದ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಮತ್ತು ವೈಯಕ್ತಿಕ  ವಿಭಾಗದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ಕೂಡಾ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯು ದಿನಾಂಕ :09—12–2025 ರಂದು ಮಧುಗಿರಿಯಲ್ಲಿ ನಡೆಯಲಿದೆ, ವಿಜೇತ ವಿದ್ಯಾರ್ಥಿಗಳಿಗೆ  ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಕವಿತಮ್ಮ ಎಸ್.ಡಿ.ಎಂ.ಸಿ. ಸದಸ್ಯರು, ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್.,  ಅಭಿಷೇಕ್ ಎಂ.ವಿ., ಶಿಕ್ಷಕಿಯರಾದ ವಿಮಲಾ ಆರ್.,ರಶ್ಮಿ ಸಿ.ಎಸ್., ಮಾನಸ, ಶ್ರೀಲಕ್ಷ್ಮೀ ಮತ್ತು ಸಮಸ್ತ ಪೋಷಕರು ಅಭಿನಂಧಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿ.ಜಿ.ಲಕ್ಷ್ಮೀಪತಿ ಹೇಳಿದರು. ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜುಂಜಪ್ಪ ಅಧ್ಯಯನ ಪೀಠ, ಕಲಾ ಕಾಲೇಜಿನ ಕನ್ನಡ ವಿಭಾಗದಿಂದ ಅಯೋಜಿಸಿದ್ದ “ಮಧ್ಯ ಕರ್ನಾಟಕದ ಬುಡಕಟ್ಟುಗಳ ಸಾಂಸ್ಕೃತಿಕ ಅನನ್ಯತೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ 45 ಬುಡಕಟ್ಟುಗಳಿದ್ದು, ಸಮುದಾಯದ ಜನರು ದಶಕಗಳಿಂದ ತಮ್ಮದೇ ಪೂಜಾರಿಯನ್ನು ಹೊಂದಿದ್ದರು. ಆಧ್ಯಾತ್ಮಿಕತೆ ಒಪ್ಪುತ್ತಿರಲಿಲ್ಲ. ಜನಾಂಗದಲ್ಲಿ ಯಾವುದೇ ಒಂದು ಧರ್ಮ ಪಾಲಿಸುವುದು ವಿರುದ್ಧವಾಗಿದೆ. ಬುಡಕಟ್ಟು ಕಲೆ, ಆಚರಣೆ ದೇಶದ ಕಲೆ, ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತವೆ. ಹಾಗಾಗಿ ನಾವು ನಮ್ಮ ಸಂಸ್ಕೃತಿಗೆ ಮರಳಬೇಕು. ಬುಡಕಟ್ಟು ಜನಾಂಗದವರು ಕೀಳರಿಮೆ ಬಿಟ್ಟು ಬದುಕು ಕಟ್ಟಿಕೊಳ್ಳಬೇಕು. ವೈಶಿಷ್ಟ್ಯತೆ ಉಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ವಿ.ವಿ. ಪ್ರಾಧ್ಯಾಪಕ ಬಿ.ಕರಿಯಣ್ಣ ಮಾತನಾಡಿ, ಸುಧಾರಣೆಯ ಹೆಸರಲ್ಲಿ ಸಂಸ್ಕೃತಿ ಹಾಳು ಮಾಡಿಕೊಳ್ಳುತ್ತಿದ್ದೇವೆ. ಜಾತಿ ಗಣತಿಯಲ್ಲಿ ಬುಡಕಟ್ಟು ಜನಾಂಗವನ್ನು ಬೇರೆ ಜಾತಿಗೆ ಸೇರಿಸಿ, ತಮ್ಮ ಮೂಲ ಹುಡುಕಿಕೊಂಡು…

Read More

ತುಮಕೂರು: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ. ನನಗೆ ಸಾಕು, ಇನ್ನೊಬ್ಬರಿಗೆ ಅವಕಾಶ ಕೊಡಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಯೇ ಎಂದು ವರದಿಗಾರರ ಪ್ರಶ್ನಿಸಿದಾಗ ಗರಂ ಆದ ರಾಜಣ್ಣ, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ. ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದರು. ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್‌ ಗಳ ಕುರಿತು ವಿರೋಧ ಪಕ್ಷದ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ, ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತಾ ಮನವಿ ಮಾಡುತ್ತೇನೆ ಎಂದರು. 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರು…

Read More