Subscribe to Updates
Get the latest creative news from FooBar about art, design and business.
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
- ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ: ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
- ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ ಪರಮೇಶ್ವರ್ ಸೂಚನೆ
- ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
- ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
Author: admin
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಉಷ್ಣಾಂಶದ ಏರಿಕೆ, ಅಸ್ಥಿರ ಹವಾಮಾನ, ಭಾರೀ ಗುಡುಗು–ಮಿಂಚು ಹಾಗೂ ಆಲಿಕಲ್ಲು ಮಳೆಯಂತಹ ಅಸಾಮಾನ್ಯ ಹವಾಮಾನ ಬದಲಾವಣೆಗಳು ಜನರನ್ನು ಕಂಗೆಡಿಸುತ್ತಿವೆ. ನಗರದಲ್ಲಿ ಹೆಚ್ಚುತ್ತಿರುವ ಕಾಂಕ್ರೀಟ್ ಕಟ್ಟಡಗಳು, ವಾಹನಗಳ ಸಂಖ್ಯೆ ಮತ್ತು ಹಸಿರು ಪ್ರದೇಶಗಳ ಕುಸಿತದ ಜೊತೆಗೆ ಈಗ ವೇಗವಾಗಿ ವಿಸ್ತರಿಸುತ್ತಿರುವ ಕೃತಕ ಬುದ್ಧಿಮತ್ತೆ (AI) ಡೇಟಾ ಸೆಂಟರ್ ಗಳು ನಗರದ “ಹೀಟ್ ಐಲ್ಯಾಂಡ್” (Heat Island) ಪರಿಣಾಮವನ್ನು ತೀವ್ರಗೊಳಿಸುತ್ತಿವೆ ಎಂದು ಪರಿಸರ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ವರದಿಗಳ ಆಧಾರದ ಪ್ರಕಾರ, ಡೇಟಾ ಸೆಂಟರ್ ಎಂದರೆ ಅತಿ ದೊಡ್ಡ ಗಣಕ ಶಕ್ತಿ (Computational Power) ಹೊಂದಿರುವ ವಿಶೇಷ ತಾಂತ್ರಿಕ ಕೇಂದ್ರ. ಕೃತಕ ಬುದ್ಧಿಮತ್ತೆ (AI) ಹಾಗೂ ಮೆಷಿನ್ ಲರ್ನಿಂಗ್ (Machine Learning) ಮಾದರಿಗಳಿಗೆ ತರಬೇತಿ ನೀಡಲು, ಅವುಗಳನ್ನು ಕಾರ್ಯಗತಗೊಳಿಸಲು ಹಾಗೂ ವೇಗವಾಗಿ ಡೇಟಾ ಸಂಸ್ಕರಣೆ ಮತ್ತು ವಿಶ್ಲೇಷಣೆ ಮಾಡಲು ಈ ಕೇಂದ್ರಗಳನ್ನು ಬಳಸಲಾಗುತ್ತದೆ. ರಾಜ್ಯದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆಯ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 24 ರಂದು ನಡೆದ ಎಸ್ ಐಆರ್ (SIR) ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆದಿದ್ದು, ಯೋಜನೆಗಳಲ್ಲಿ ಪಾರದರ್ಶಕತೆ ತರಲು ಮತ್ತು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಸಮಗ್ರ ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಅಂತಾ ವರದಿಗಳಿಂದ ತಿಳಿದು ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮಹಿಳೆಯರ ಹೆಸರಿನಲ್ಲಿಯೂ ಹಣ ಸಂದಾಯವಾಗುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದು ಸರ್ಕಾರಿ ಹಣದ ದುರುಪಯೋಗಕ್ಕೆ ಕಾರಣವಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವ ಉದ್ದೇಶದಿಂದ ಜಾರಿಗೆ ತಂದ ಈ ಯೋಜನೆಗಳ ಲಾಭವನ್ನು ತೆರಿಗೆ ಪಾವತಿದಾರರು (Tax payers) ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅವರನ್ನು ಈ ಪಟ್ಟಿಯಿಂದ ಹೊರಗಿಡಲು ಚಿಂತಿಸಲಾಗಿದೆ. ಒಂದೇ ಮನೆಯಲ್ಲಿ ಇಬ್ಬಿಬ್ಬರು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯುತ್ತಿರುವ ಅಕ್ರಮಗಳು ಸಹ ಪತ್ತೆಯಾಗಿದ್ದು,…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಹಸು ಹಾಗೂ ಕೇಬಲ್ ಕಳ್ಳತನ ಪ್ರಕರಣಗಳು ಸರಣಿಯಾಗಿ ವರದಿಯಾಗುತ್ತಿದ್ದು, ಸ್ಥಳೀಯ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಸಾಸಲಕುಂಟೆ, ಪೆನ್ನೋಬನಹಳ್ಳಿ ಹಾಗೂ ಲಿಂಗದಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿರುವ ಕುಟುಂಬಗಳು ಭಯದ ನೆರಳಿನಲ್ಲಿ ದಿನ ಕಳೆಯುವಂತಾಗಿದೆ. ಕಳೆದ ವಾರ ರಾತ್ರಿ ಸಾಸಲಕುಂಟೆ ಗ್ರಾಮದ ರೈತ ಧನ್ವಂತ್ ರೆಡ್ಡಿ ಅವರ ಕೊಟ್ಟಿಗೆಯಲ್ಲಿದ್ದ ಹಸು ನಾಪತ್ತೆಯಾಗಿತ್ತು. ಗಾಬರಿಗೊಂಡ ಅವರು ತಮ್ಮ ಸಹೋದರನ ಬೈಕ್ ನಲ್ಲಿ ಲಿಂಗದಹಳ್ಳಿ ಮಾರ್ಗವಾಗಿ ಹಸುವನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಪೆನ್ನೋಬನಹಳ್ಳಿ ರಸ್ತೆ ಪಕ್ಕದಲ್ಲಿ ಮತ್ತೊಬ್ಬ ರೈತನ ಸೀಮೆಹಸುವಿನ ಹಗ್ಗ ಬಿಚ್ಚಿ ಕಳ್ಳತನ ಮಾಡಲು ಕಳ್ಳರು ಯತ್ನಿಸುತ್ತಿದ್ದರು. ಬೈಕ್ ನ ಹೆಡ್ ಲೈಟ್ ಬೆಳಕು ಕಂಡ ಕಳ್ಳನೊಬ್ಬ ಧನ್ವಂತ್ ರೆಡ್ಡಿ ಅವರತ್ತ ಕಲ್ಲು ತೂರಿ ದಾಳಿ ನಡೆಸಿದ್ದಾನೆ. ಇದರಿಂದ ಹೆದರಿದ ರೈತರು ಬೈಕನ್ನು ಸ್ವಲ್ಪ ದೂರದಲ್ಲೇ ನಿಲ್ಲಿಸಿದ್ದಾರೆ. ಅಷ್ಟರಲ್ಲಿ ಕಳ್ಳರು…
ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಳವಾಯಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಈ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೂ ತೊಂದರೆಯಾಗಿದೆ. ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಧೋರಣೆಯಿಂದ ಬೇಸತ್ತ ವಕೀಲರು ಹಾಗೂ ಭಾರತೀಯ ಪರಿವರ್ತನ ಸಂಘ–BPS ರಾಜ್ಯಾಧ್ಯಕ್ಷರಾದ ಪ್ರೊ. ಹರಿರಾಮ್ ಎ. ರವರು ಸ್ವತಃ ಮುಂದೆ ನಿಂತು ಪರಿಹಾರ ಕಲ್ಪಿಸಿದ್ದಾರೆ. ಗ್ರಾಮದ BPS ಮುಖಂಡ ಅಂಜಿ ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಟ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸಿದ್ದಾರೆ. “ಮನವಿ ಕೊಟ್ಟು ಸುಸ್ತಾದೆವು. ಅಧಿಕಾರಿಗಳು ಸ್ಥಳಕ್ಕೆ ಬಂದು ನೋಡುವ ಸೌಜನ್ಯವೂ ತೋರಲಿಲ್ಲ. BPS ಸಂಘದವರು ಬಂದು ನೀರು ಕೊಟ್ಟಿದ್ದರಿಂದ ಸದ್ಯಕ್ಕೆ ಉಸಿರಾಡುವಂತಾಗಿದೆ” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಟ್ಯಾಂಕರ್ ನೀರು…
ಪಾವಗಡ (ತುಮಕೂರು): ತಾಲ್ಲೂಕಿನ ದೊಡ್ಡಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ. ಶಾಲಾ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ‘ಶಾಲಾ ಪ್ರಾರಂಭೋತ್ಸವ’ ಹಾಗೂ ‘ದಾಖಲಾತಿ ಆಂದೋಲನ’ಕ್ಕೆ ಚಾಲನೆ ನೀಡಲಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಕ್ಷರ ಲೋಕಕ್ಕೆ ಬರಮಾಡಿಕೊಳ್ಳಲು ಶಾಲೆ ಸಜ್ಜಾಗಿದೆ. ಕಳೆದ 2025–26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಾಲೆ ಶೇ. 87.5 ರಷ್ಟು ಉತ್ತಮ ಫಲಿತಾಂಶ ದಾಖಲಿಸುವ ಮೂಲಕ ತನ್ನ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದೆ. ಪರಿಣಿತ ಶಿಕ್ಷಕ ಬಳಗ ಹಾಗೂ ಉತ್ತಮ ಕಲಿಕಾ ವಾತಾವರಣ ಹೊಂದಿರುವುದು ಶಾಲೆಯ ಈ ಸಾಧನೆಗೆ ಕಾರಣವಾಗಿದೆ. 8, 9 ಮತ್ತು 10ನೇ ತರಗತಿಗಳಿಗೆ ಮುಕ್ತ ಅವಕಾಶ, ಪ್ರಸ್ತುತ ಸಾಲಿನಲ್ಲಿ 8ನೇ, 9ನೇ ಮತ್ತು 10ನೇ ತರಗತಿಗಳಿಗೆ ಹೊಸ ದಾಖಲಾತಿ ಹಾಗೂ ಪುನರ್ ದಾಖಲಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಿಗಲಿವೆ 11 ವಿಶೇಷ ಸೌಕರ್ಯಗಳು: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಜೊತೆಗೆ ಮಕ್ಕಳ…
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರಾಚನೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರ್ರಚನೆಗೂ ಯಾವುದೇ ಸಂಬಂಧವಿಲ್ಲ, ಈ ಎರಡೂ ಪ್ರಕ್ರಿಯೆಗಳು ಸಂಪೂರ್ಣವಾಗಿ ಬೇರೆ ಬೇರೆಯಾಗಿ ನಡೆಯಲಿವೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಅದು ಒಂದು ನಿಯಮಿತ ಪ್ರಕ್ರಿಯೆಯಾಗಿದೆ. ಹಾಗಾಗಿ, ಸಚಿವ ಸಂಪುಟ ಪುನರಾಚನೆ ನಿರ್ಧಾರಕ್ಕೂ ಅದಕ್ಕೂ ಯಾವುದೇ ಲಿಂಕ್ ಇಲ್ಲ” ಎಂದರು. ಜೂನ್ 18ರಂದು ಕರ್ನಾಟಕದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಸಂಪುಟ ಬದಲಾವಣೆ ಆಗಬಹುದು ಎಂಬ ರಾಜಕೀಯ ವಲಯದ ಊಹಾಪೋಹಗಳಿಗೆ ಅವರು ಈ ಮೂಲಕ ತೆರೆ ಎಳೆದಿದ್ದಾರೆ. ಮೂರು–ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಾಯಿಸುತ್ತಿರುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು,…
ಸಿರಾ: ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಮೇ 26 ರಂದು ಮತಪಟ್ಟಿ ಪರಿಷ್ಕರಣೆ, ವಿವಿಧ ಘಟಕಗಳ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ, ಪಕ್ಷದ ಬಿಎಲ್ ಒ ಕಾರ್ಯಕರ್ತರ ತರಬೇತಿ ಹಾಗೂ ಪಕ್ಷದ ವಿವಿಧ ಮುಖಂಡರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಬಿ. ಸತ್ಯಪ್ರಕಾಶ್ ತಿಳಿಸಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಶ್ರೀ ರಾಮ ಕಲ್ಯಾಣ ಮಂಟಪದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಸದರಿ ಕಾರ್ಯಕ್ರಮದಲ್ಲಿ ಮಾಜಿ ವಿಪ ಸದಸ್ಯರಾದ ತಿಪ್ಪೇಸ್ವಾಮಿ, ನೂತನ ಜಿಲ್ಲಾ ಜೆಡಿ ಎಸ್ ಅಧ್ಯಕ್ಷ ಹೆಚ್ ನಿಂಗಪ್ಪ, ಮಾಜಿ ಅಧ್ಯಕ್ಷ ಅಂಜನಪ್ಪ, ಚೀನಾ ಹಳ್ಳಿ ಶಾಸಕ ಸಿಬಿ ಸುರೇಶ್ಬಾಬು ಅವರನ್ನು ಪಕ್ಷದ ವತಿಯಿಂದ ಅಭಿನಂದಿಸುವ ಕಾರ್ಯಕ್ರಮವನ್ನೂ ಏರ್ಪಡಿಸಲಾಗಿದೆ ಎಂದರು. ಜೆಡಿಎಸ್ ಪಕ್ಷದ ಮತ್ತಷ್ಟು ಸಂಘಟನೆಯ ದೃಷ್ಟಿಯಿಂದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಇದೇ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುವುದು. ಪಕ್ಷದ ಎಲ್ಲಾ…
ತುಮಕೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ ಕೈಗೆ ಮೊಬೈಲ್ ಕೊಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ತುಮಕೂರು ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಬಾಲಕನೊಬ್ಬ ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದಾಗ ಬಂದ ಲಿಂಕ್ ಕ್ಲಿಕ್ ಮಾಡಿದ ಪರಿಣಾಮ, ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 1.98 ಲಕ್ಷ ರೂಪಾಯಿ ಆನ್ ಲೈನ್ ಮೂಲಕ ಕಳುವಾಗಿರುವ ಬಗ್ಗೆ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ಹುಳಿಯಾರು ಪಟ್ಟಣದ ಕೆಂಚಮ್ಮ ನಗರದ ನಿವಾಸಿಯಾದ ಗಂಗಾಧರ ಹೆಚ್. ಎಂಬುವವರೇ ವಂಚನೆಗೊಳಗಾದ ದುರ್ದೈವಿ. ಗಂಗಾಧರ ಅವರು ಇತ್ತೀಚೆಗೆ ತಮ್ಮ ಸಂಬಂಧಿಕರ ಹುಡುಗನಿಗೆ ಆಟವಾಡಲು ಮೊಬೈಲ್ ನೀಡಿದ್ದರು. ಬಾಲಕ ಮೊಬೈಲ್ ನಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಅಪರಿಚಿತರು ಫೇಸ್ ಬುಕ್ ಮೆಸೆಂಜರ್ ಮೂಲಕ ಲಿಂಕ್ ಒಂದನ್ನು ಕಳುಹಿಸಿದ್ದರು. ಲಿಂಕ್ ನ ಆಮಿಷಕ್ಕೆ ಒಳಗಾದ ಬಾಲಕ ಅದನ್ನು ಓಪನ್ ಮಾಡಿದ್ದಾನೆ. ತಕ್ಷಣವೇ ಮೊಬೈಲ್ ಗೆ ಬಂದ ಒಟಿಪಿ (OTP) ಸಂಖ್ಯೆಯನ್ನು ಅಲ್ಲಿ ನಮೂದಿಸಿದ್ದಾನೆ. ಈ ಒಂದು ಸಣ್ಣ ತಪ್ಪಿನಿಂದಾಗಿ ಗಂಗಾಧರ ಅವರ ಬ್ಯಾಂಕ್ ಖಾತೆಯಿಂದ ತಲಾ…
ಯಾರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸುವ ಗುಣದವನು ನಾನಲ್ಲ, ತೇಜೋವಧೆ ಮಾಡಿಸೋನು ಸಹ ಅಲ್ಲ. ನಾನು ಮತ್ತು ನನ್ನ ಮಗ ಸೇರಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದೇವೆ ಎಂದು ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಯಾರೂ ಕೀಳು ಮಟ್ಟದ ರಾಜಕಾರಣ ಮಾಡಬಾರದು. ನಾನು ನನ್ನ ಮಗನಿಗೆ ಕರೆ ಮಾಡಿದ್ದರೆ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ. ಇದು ಸುಳ್ಳಾದರೆ ಬಿ.ಎಸ್. ನಾಗರಾಜು ರಾಜಕೀಯದಿಂದ ನಿವೃತ್ತಿ ಹೊಂದುತ್ತಾರೆಯೇ? | ಎಸ್.ಆರ್.ಶ್ರೀನಿವಾಸ್, ಶಾಸಕರು. ಚೇಳೂರು: ಇನ್ನೊಬ್ಬರನ್ನು ಹನಿಟ್ರ್ಯಾಪ್ ಮಾಡಿ ತೇಜೋವಧೆ ಮಾಡಿ ಕೀಳುಮಟ್ಟದ ರಾಜಕಾರಣ ಮಾಡುವುದು ನನಗೆ ಗೊತ್ತಿಲ್ಲ. ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಎಂದು ಶಾಸಕ ಎಸ್. ಆರ್.ಶ್ರೀನಿವಾಸ್ ಜೆಡಿಎಸ್ ಮುಖಂಡ ಬಿ.ಎಸ್ ನಾಗರಾಜುಗೆ ತಿರುಗೇಟು ನೀಡಿ ಹೇಳಿದರು. ಅವರು ಚೇಳೂರು, ಸಾತೇನಹಳ್ಳಿ, ನಂದಿಹಳ್ಳಿ, ಕೋಡಿ ನಾಗೇನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾತೇನಹಳ್ಳಿಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಇನ್ನೂ ಎಚ್ ಎಂಟಿಎಲ್ ಗೆ 300 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳುವ ಸಂಬಂಧ ವಿರೋಧಿಸಿ ರೈತರು ಇಂದು (ಮೇ 23)…
ತುಮಕೂರು: ಜಿಲ್ಲೆಯಲ್ಲಿ ಕೆಲವೆಡೆ ಮಳೆಯಾಗುತ್ತಿದ್ದು, ಶನಿವಾರ ಬೆಳಿಗ್ಗೆ ದಾಖಲಾದ ಮಳೆಮಾಪನ ವರದಿಯಂತೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 0.3 ಮಿಮೀ ಮಳೆ ಪ್ರಮಾಣ ದಾಖಲಾಗಿದೆ. ಅತ್ಯಧಿಕ ಮಳೆ ಇಟಕಡಿಬ್ಬನಹಳ್ಳಿ ಹೋಬಳಿಯಲ್ಲಿ 5.9 ಮಿಮೀ(ಅರ್ಧಸೆಂ.ಮೀಗೂ ಅಧಿಕ) ದಾಖಲಾಗಿದ್ದು, ಸಿ.ಎಸ್.ಪುರದಲ್ಲಿ 0.2 ಮಿಮೀ, ಚೇಳೂರಿನಲ್ಲಿ 0.1 ಮಿಮೀ, ಕಡಬದಲ್ಲಿ 0.5 ಮಿಮೀ, ಚನ್ನರಾಯನದುರ್ಗದಲ್ಲಿ 0.4 ಮಿಮೀ, ಕೋಳಾಲದಲ್ಲಿ 0.4 ಮಿಮೀ, ಯಡಿಯೂರಿನಲ್ಲಿ 0.1 ಮಿಮೀ. ದೊದ್ದೇರಿಯಲ್ಲಿ 0.4 ಮಿಮೀ, ಕೊಡಿಗೇನಹಳ್ಳಿಯಲ್ಲಿ 0.3 ಮಿಮೀ ಹಾಗೂ ಮಿಡಿಗೇಶಿಯಲ್ಲಿ 0.2 ಮಿಮೀ ಮಳೆ ಪ್ರಮಾಣ ದಾಖಲಾಗಿದೆ. ಗುಬ್ಬಿಯಲ್ಲಿ 0.2 ಮಿಮೀ, ಕೊರಟಗೆರೆಯಲ್ಲಿ 0.2 ಮಿಮೀ, ಮಧುಗಿರಿಯಲ್ಲಿ 1.1 ಮಿಮೀ, ಪಾವಗಡದಲ್ಲಿ 0.1 ಮಿಮೀ, ಸಿರಾದಲ್ಲಿ 0.1 ಮಿಮೀ, ತಿಪಟೂರಲ್ಲಿ 0.4 ಮಿಮೀ, ತುಮಕೂರಿನಲ್ಲಿ 0.1 ಮಿಮೀ ಹಾಗೂ ತುರುವೇಕೆರೆಯಲ್ಲಿ 1.6 ಮಿಮೀ ಮಳೆ ದಾಖಲಾಗಿದ್ದು, ಉಳಿದ ತಾಲ್ಲೂಕಿನಲ್ಲಿ ಮಳೆ ಪ್ರಮಾಣ ಶೂನ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…