Author: admin

ಸರಗೂರು:  ನಮ್ಮ ನಡೆ–ನುಡಿಗಳೆ ನಮ್ಮ ಧರ್ಮವನ್ನು ಹೇಳುತ್ತಿವೆ. ಅದನ್ನು ಅರ್ಥ ಮಾಡಿಕೊಂಡು ಸಮಾಜದಲ್ಲಿ ನುಡಿದು ನಡೆಯಬೇಕು. ಧರ್ಮಾಚರಣೆಯಿಂದ ಸುಖ–ಸಂಪತ್ತು ಲಭಿಸುತ್ತದೆ. ಸತ್ಯ ನಾರಾಯಣ ಪೂಜೆ ಮಾಡುವುದರಿಂದ ಇಷ್ಟಾರ್ಥಗಳು ದೊರೆಯುತ್ತವೆ ಎಂದು ಸೌಮ್ಯ ಅನೀಲ್ ಚಿಕ್ಕಮಾದು ಹೇಳಿದರು. ತಾಲೂಕಿನ ಕೊತ್ತೇಗಾಲ ಗ್ರಾ.ಪಂ. ವ್ಯಾಪ್ತಿಯ ಕೊತ್ತೆಗಾಲ ಗ್ರಾಮದಲ್ಲಿ ಸೋಮವಾರದಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹುಲ್ಲಹಳ್ಳಿ ಯೋಜನೆ  ಮುಳ್ಳೂರು ವಲಯದ ವತಿಯಿಂದ ಗುಜ್ಜಮ್ಮ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜಾ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ ವೇಗವಾಗಿ ಬೆಳೆದಂತೆ ಇಂದಿನ ಯುವ ಜನಾಂಗದಲ್ಲಿ ಧಾರ್ಮಿಕ ನಂಬಿಕೆಗಳು ಆಚರಣೆಗಳು ಕಡಿಮೆಯಾಗುತ್ತಿದೆ.ಮಕ್ಕಳಿಗೆ ಸಣ್ಣ ವಯಸ್ಸಿನಲ್ಲಿಯೇ ಸಂಸ್ಕಾರಯುತ ಜೀವನ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾದದ್ದು ಎಂದು ತಿಳಿಸಿದರು. ಮನುಷ್ಯ ಧರ್ಮದ ದಾರಿಯಲ್ಲಿ ನಡೆದಾಗ  ಭಗವಂತನ ಅನುಗ್ರಹ ಪ್ರಾಪ್ತವಾಗುತ್ತದೆ. ಧರ್ಮಸ್ಥಳದ ಧರ್ಮಾಧಿಕಾರಿಗಳು  ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಇಂತಹ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ಜನರಲ್ಲಿ ಧಾರ್ಮಿಕ ಜಾಗೃತಿಯನ್ನು ಮೂಡಿಸುತ್ತಿದ್ದು, …

Read More

ಕೊರಟಗೆರೆ: ಈಡಿಗ, ಬಿಲ್ಲವ, ನಾಮಧಾರಿ, ಧೀವರ ಸೇರಿದಂತೆ 26 ಪಂಗಡಗಳ ಬೇಡಿಕೆ ಈಡೇರಿಕೆಗೆ ಸುಮಾರು 700 ಕಿ.ಮೀ ಸತತ 41 ದಿನಗಳ ಐತಿಹಾಸಿಕ ಪಾದಯಾತ್ರೆ ಮಾಡುತ್ತೇವೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಸೇವಾ ಟ್ರಸ್ಟ್ ಪೀಠಾಧಿಪತಿ ಶ್ರೀಪ್ರಣವಾನಂದ ಸ್ವಾಮೀಜಿ ತಿಳಿಸಿದರು. ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಅಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ  ನಿಗಮಕ್ಕೆ ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡಬೇಕು. ಕುಲಕಸುಬು ಕಳೆದುಕೊಂಡ ಕಲ್ಯಾಣ ಕರ್ನಾಟಕ ಭಾಗದ ಸಂತ್ರಸ್ಥ ಈಡಿಗರಿಗೆ 5 ಎಕೆರೆ ಜಮೀನು ಪ್ರತಿ ಕುಟುಂಬಕ್ಕೆ ಮಂಜೂರು ಮಾಡಬೇಕು ಎಂದು ಹೇಳಿದರು. ಸಮುದಾಯವನ್ನು 2ಎ ಯಿಂದ ಎಸ್ಟಿ ಗೆ ಮೀಸಲಾತಿಗೆ ಸೇರಿಸುವುದಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರು ಸ್ಥಾಪಿಸಬೇಕು, ರಾಜ್ಯದ ಈಡಿಗ ಸಮಾಜದ ಹಾಗೂ ಹಿಂದುಳಿದ ವರ್ಗದ ಭಕ್ತಿ ಶ್ರದ್ಧಾ ಕೇಂದ್ರವಾದ ಶ್ರೀಸಿಗಂಧೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿದ…

Read More

ಕೊರಟಗೆರೆ: ತಾಲ್ಲೂಕಿನ ತಣ್ಣೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಹಾಗೂ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದೊಂದಿಗೆ  ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ಶಸ್ತ್ರ ಚಿಕಿತ್ಸೆ  ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು. ಟ್ರಸ್ಟ್ ಅಧ್ಯಕ್ಷ ಗೋವಿಂದಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡತನದಿಂದ ಅನೇಕ ಯುವಕರು ಹಾಗೂ ವಯೋವೃದ್ಧರು ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಪಡೆಯಲು ಆಗದಂತಹ ಪರಿಸ್ಥಿತಿ ಇನ್ನೂ ಹಳ್ಳಿಗಳಲ್ಲಿ ಇದ್ದಾರೆ. ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯದ ರಕ್ಷಣೆ ಬಹು ಮುಖ್ಯ ಆದ್ದರಿಂದ ನಮ್ಮ ಸೇವಾ ಟ್ರಸ್ಟ್ ಪದಾಧಿಕಾರಿಗಳು  ನಮ್ಮ  ತಾಲೂಕಿನ ಬಡ ಜನರಿಗೆ ಅನುಕೂಲವಾಗಲಿ ಎಂದು ಈ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದೇವೆ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯವನ್ನ ಕಾಪಾಡಿಕೊಳ್ಳಿ ಎಂದರು. ಸಪ್ತಗಿರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಧನುಷ್ ಮಾತನಾಡಿ, ನಮ್ಮ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ತಣ್ಣೇನಹಳ್ಳಿ ಗ್ರಾಮಕ್ಕೆ ಬಂದಿದ್ದಾರೆ. ನಿಮ್ಮ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ನ ಮುಖಂಡರು…

Read More

ಕೊರಟಗೆರೆ : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ದ್ಯಾನ್‌ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೇ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್‌ ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಸೋಮವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ–2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಟಿವಿ ಮತ್ತು ಮೊಬೈಲ್ ಮಕ್ಕಳ ಶೈಕ್ಷಣಿಕ ಜೀವನಕ್ಕೆ ಅಪಾಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ. ಕ್ರೀಡಾಕೂಟ ಯಶಸ್ವಿಗೆ ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ಎಂದರು. ರಾಘವೇಂದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ,…

Read More

ದಾವಣಗೆರೆ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಎಂಸಿಸಿ ಬಡಾವಣೆಯ ಅವರ ನಿವಾಸದಿಂದ ಸೋಮವಾರ ಮಧ್ಯಾಹ್ನ 12.32ಕ್ಕೆ ಆರಂಭವಾಯಿತು. ಪೂಜಾ ಕೈಂಕರ್ಯ ಮುಗಿದು ಪಾರ್ಥಿವ ಶರೀರವನ್ನು ಮನೆಯಿಂದ ಹೊರಗೆ ತರಲಾಯಿತು. ಎಂಸಿಸಿ ಬಡಾವಣೆಯ ‘ಬಿ’ ಬ್ಲಾಕ್‌ನಿಂದ ಹೊರಟ ಮೆರವಣಿಗೆಯಲ್ಲಿ ಭಜನೆ ತಂಡಗಳು ಭಕ್ತಿಗೀತೆ ಹಾಡಿದವು. ಪಾರ್ಥಿವ ಶರೀರದ ಕೈವಲ್ಯಕ್ಕೆ ಪುತ್ರ, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹೆಗಲು ಕೊಟ್ಟಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಸಾಲಾಗಿ ನಿಂತಿರುವ ಜನರು ಹೂಹಾರ ಹಾಕಿ ಗೌರವ ಸಲ್ಲಿಸಿದರು. ಶಾಮನೂರು ರಸ್ತೆ, ಗುಂಡಿ ವೃತ್ತ, ಚರ್ಚ್ ರಸ್ತೆ, ರಾಮ್ ಅಂಡ್ ಕೋ ವೃತ್ತ, ಎವಿಕೆ ಕಾಲೇಜು ರಸ್ತೆಯ ಮೂಲಕ ಸಾಗಿದ ಮೆರವಣಿಗೆ ಹೈಸ್ಕೂಲ್ ಮೈದಾನ ತಲುಪಿತು. ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ…

Read More

ತುಮಕೂರು: ಟಾಸ್ಕ್‌ಗಳಿಗೆ ಹಣ ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ತುರುವೇಕೆರೆ ತಾಲ್ಲೂಕಿನ ಮುದ್ದನಹಳ್ಳಿ ಹೊಸೂರಿನ ಬಸವರಾಜು ಎಂಬುವರು 7.44 ಲಕ್ಷ ರೂ. ಕಳೆದುಕೊಂಡಿದ್ದಾರೆ. ಆರೋಪಿಗಳು ಕರೆ ಮಾಡಿ, ನೀವು ರಿಲಿಯನ್ ಪ್ರಾಪರ್ಟಿಸ್‌ ಗೆ ಸದಸ್ಯರಾಗಿದ್ದು, ನಿಮಗೆ ಮೂರು ಸ್ಲಾಟ್‌ ಗಳನ್ನು ಕೊಡುತ್ತೇವೆ. ಅದನ್ನು ಪೂರ್ಣಗೊಳಿಸಿದರೆ ಹಣ ನೀಡಲಾಗುವುದು  ಎಂದಿದ್ದಾರೆ. ಇದಾದ ಬಳಿಕ ಬಸವರಾಜು ಖಾತೆಗೆ 820 ವರ್ಗಾಯಿಸಿದ್ದಾರೆ. ಸ್ಲಾಟ್ ಮುಂದುವರಿಸಲು 11,228 ರೀಚಾರ್ಜ್ ಮಾಡಬೇಕು ಎಂದು ತಿಳಿಸಿದ್ದಾರೆ. ಬಸವರಾಜು ತಮ್ಮ ಪತ್ನಿ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದು, ವಾಪಸ್ 18 ಸಾವಿರ ಅವರ ಖಾತೆಗೆ ಹಾಕಿದ್ದಾರೆ. ಫ್ಲಾಟ್ ಮುಂದುವರಿಸಲು ಮತ್ತಷ್ಟು ರೀಚಾರ್ಜ್ ಮಾಡಬೇಕು ಎಂದು 10 ಸಾವಿರ ಪಡೆದಿದ್ದಾರೆ. ಇದೇ ಕಾರಣ ಹೇಳಿ ಡಿ. 7ರಿಂದ 12ರ ವರೆಗೆ ಹಂತ ಹಂತವಾಗಿ ಒಟ್ಟು 7,62,131 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಇದರಲ್ಲಿ ಅವರಿಗೆ ಕೇವಲ 18 ಸಾವಿರ ಹಿಂದಿರುಗಿಸಿದ್ದಾರೆ. ಇದುವರೆಗೆ ವರ್ಗಾವಣೆ ಮಾಡಿದ ಹಣ ವಾಪಸ್ ಕೊಡುವಂತೆ ಬಸವರಾಜು…

Read More

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ತರಬೇತಿ ಪಡೆಯಲಿಚ್ಚಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ.ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.…

Read More

ತುಮಕೂರು: ಅಸಮಾನತೆ ತೊಡೆದು ಹಾಕಿ, ಸಮ ಸಮಾಜ ನಿರ್ಮಿಸುವುದು ಸರ್ಕಾರದ ಉದ್ದೇಶ. ಇದಕ್ಕೆ ಪೂರಕವಾಗಿ ಕಳೆದ 2 ವರ್ಷದಲ್ಲಿ ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ನಗರದಲ್ಲಿ ಶನಿವಾರ ತಾಂಡಾ ಅಭಿವೃದ್ಧಿ ನಿಗಮ, ಜಿಲ್ಲಾ ಬಂಜಾರ ಸೇವಾಲಾಲ್ ಸೇವಾ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಂಜಾರ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. 3.40 ಕೋಟಿ ವೆಚ್ಚದಲ್ಲಿ ಭವನ ನಿರ್ಮಿಸಲಾಗಿದೆ. ತಾಂಡಾಗಳ ಮೂಲಭೂತ ಸೌಲಭ್ಯಕ್ಕೆ 50 ಕೋಟಿ ವೆಚ್ಚ ಮಾಡಲಾಗಿದೆ. 500ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿದೆ. 10 ಸಾವಿರ ಲಂಬಾಣಿ ಯುವಕ, ಯುವತಿಯರಿಗೆ ಕೌಶಲ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಮಾತನಾಡಿ, ಜಾತಿ ವ್ಯವಸ್ಥೆ ಮನುಷ್ಯನನ್ನು ಕುಗ್ಗಿಸಿದೆ. ಜಾತಿ, ಉಪಜಾತಿ ಎಂದು ಒಡೆದು ಚೂರಾದರೆ ಅವಕಾಶ ದೂರವಾಗುತ್ತದೆ. ಜಾತೀಯತೆ ಇಲ್ಲದಿದ್ದರೆ ಭಾರತ ಮತ್ತಷ್ಟು ಶಕ್ತಿಯುತವಾಗುತ್ತಿತ್ತು. ತಳ ಸಮುದಾಯವನ್ನು ಸಮಾಜದ ಮುನ್ನೆಲೆಗೆ ತರುವ ಉದ್ದೇಶದಿಂದ ಸಂವಿಧಾನದಲ್ಲಿ ಕಾನೂನಾತ್ಮಕವಾಗಿ…

Read More

ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 164 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದ್ದು, ಈಗ ಮುಖ್ಯಮಂತ್ರಿ ನಿಧಿಯಿಂದ 50 ಕೋಟಿ ಅನುದಾನ ಬಂದಿದ್ದು, ಇನ್ನೂ ಸಾಕಷ್ಟು ಅನುದಾನ ತಂದು ಕೊರಟಗೆರೆ ಅಭಿವೃದ್ಧಿ ಮಾಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದ ಎತ್ತಿನಹೊಳೆ ಯೋಜನೆಗೆ ಭೂ ಸ್ವಾಧೀನ ಪಡಿಸಿಕೊಂಡ ಜಮೀನಿನ ರೈತಗೆ ಭೂ ಪರಿಹಾರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ಆಶೀರ್ವಾದದಿಂದ ಮೂರು ಬಾರಿ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದ ಲಕ್ಷಾಂತ ಹೆಣ್ಣು ಮಕ್ಕಳ ರಕ್ಷಣೆ, ಮಕ್ಕಳ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿ, ಸರ್ಕಾರಿ ಆಸ್ತಿ ರಕ್ಷಣೆ, ಮಾಡುವುದು ನಮ್ಮ ರಕ್ಷಣೆ ಆಗಿದ್ದು, ಅದರ ಜೊತೆಗೆ ಕೊರಟಗೆರೆ ಜನತೆಯನ್ನ ಯಾವುದೇ ಕಾರಣಕ್ಕೂ ಮರೆಯುವುದಿಲ್ಲ. ಕೇಂದ್ರ ಸರ್ಕಾರಿಂದ ಈಗಾಗಲೇ ಸಣ್ಣ ನೀರಾವರಿ ಇಲಾಖೆಗೆ ೩೦ ಕೋಟಿ ಅನುದಾನ ಬಂದಿದ್ದು ಆ ಕೆಲಸಗಳನ್ನ…

Read More

ನೊಣವಿನಕೆರೆ: ನೊಣವಿನಕೆರೆ ಪಿ.ಎಂ. ಶ್ರೀ–ಕೆಪಿಎಸ್ ಪ್ರಾಥಮಿಕ ಶಾಲೆಯ ತೇಜಸ್, 7ನೇ ತರಗತಿ ವಿದ್ಯಾರ್ಥಿ, ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ತುಮಕೂರು ಜಿಲ್ಲೆಯನ್ನು ಪ್ರತಿನಿಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೇಜಸ್ ಅವರ ಈ ಸಾಧನೆಗೆ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಹಂತದಲ್ಲೂ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More