Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವಿಟ್ ಮಾಡಿದ್ದಾರೆ. ಜುಲೈ ತಿಂಗಳಲ್ಲಿ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಮೇ ತಿಂಗಳಲ್ಲಿ 29 ಮತ್ತು ಜೂನ್ ನಲ್ಲಿ 28 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಸಂಖ್ಯೆಯನ್ನು ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾದ ಒಂದು ತಿಂಗಳ ಅಂತರದಲ್ಲಿ ಎಡಿಜಿಪಿ ಎರಡು ಸಲ ಹೆದ್ದಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ, ಅಪಘಾತಗಳ ಸಂಖ್ಯೆ ಸಾವು ಹಾಗೂ ಗಾಯಾಳುಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿರಿಸಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸುತ್ತಿರುವ ರಾಜ್ಯ ಸರ್ಕಾರ, ಎಸ್. ಸಿ ಹಾಗೂ ಎಸ್. ಟಿ ಸಮುದಾಯದವರಿಗೆ ದ್ರೋಹವೆಸಗುತ್ತಿದೆ’ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ‘ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ’ ಎಂಬ ಬರಹವುಳ್ಳ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಗ್ಯಾರಂಟಿ ಯೋಜನೆಗಳಿಗೆ ನೀಡಿರುವ ಪರಿಶಿಷ್ಟರ ಹಣವನ್ನು ವಾಪಸು ಪಡೆಯಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು. ‘ಜನರಿಗೆ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ದಲಿತರ ಜೀವನದ ಜೊತೆ ಆಟವಾಡುತ್ತಿದೆ. ದಲಿತರ ಮನೆಗಳಿಗೆ ಹೋಗಿ ಗ್ಯಾರಂಟಿ ಕಾರ್ಡ್ ನೀಡಿದ್ದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು, ಇದೀಗ ದಲಿತರ ಹಣವನ್ನೇ ಗ್ಯಾರಂಟಿಗೆ ವ್ಯಯಿಸುತ್ತಿದ್ದಾರೆ’ ಎಂದು ದೂರಿದರು. ಕಾಂಗ್ರೆಸ್ ಸರ್ಕಾರ, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯವನ್ನು ದಿವಾಳಿಯತ್ತ ತೆಗೆದುಕೊಂಡು ಹೋಗುತ್ತಿದೆ. ಎಸ್ ಸಿ ಪಿ ಹಾಗೂ ಟಿ ಎಸ್ ಪಿ…
ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…
ದೆಹಲಿ: ಅಹಿಂದ್ ಹೆಸರಲ್ಲಿ ಸಿದ್ದರಾಮಯ್ಯ ಮತ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಹೇಳಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬೇರೆ ಕಡೆ ಬಳಕೆ ಮಾಡಿದ್ದಾರೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಹಣ ವಾಪಸ್ ಪಡೆದಿದ್ದಾರೆ. ದಲಿತರ ಕಲ್ಯಾಣಕ್ಕೆ ಹಣದ ಕೊರತೆ ಆಗಲಿದೆ. ಇದು ದಲಿತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರಗಿಡಗಳಿವೆ. ಬ್ರಿಟೀಷರ ಕಾಲದಲ್ಲಿದ್ದ ಈ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ. 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಶ್ರೀ ಕೆಂಗಲ್ ಹನುಮಂತಯ್ಯನವರು ಇನ್ನೂ 100 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿ, ಒಟ್ಟು 240 ಎಕರೆ ಪ್ರದೇಶದಲ್ಲಿರುವ ಅತಿ ದೊಡ್ಡ ಉದ್ಯಾನವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶವನ್ನು ಅತ್ಯುತ್ತಮವಾಗಿ ಆಯೋಜಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದೆ. ಇದನ್ನು ಸಹಿಸಲು ಆಗದ ವಿಪಕ್ಷದ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಪರಿಣಾಮ ಲೋಕಸಭಾ ಚುನಾವಣೆಯಲ್ಲೂ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಹಣವನ್ನು ಎಲ್ಲೆಲ್ಲಿ ಬಳಕೆ ಮಾಡಬೇಕು ಎಂಬ…
ಪಿಎಚ್ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ. ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ದಿದ್ದಾರೆ. ಮೊಬೈಲ್ ನಲ್ಲಿ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ. ಜತೆಗೆ ಈಗಾಗಲೇ ಪಿಎಚ್ಡಿ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಪರೀಕ್ಷಾ ಕೇಂದ್ರಗಳೊಳಗೆ ತೆರಳಿ ಅಕ್ರಮಿಗಳಿಗೆ ಸಹಾಯ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಜಾಮೀನು ಪಡೆದು ಹೊರಬಂದ ಎರಡೇ ದಿನದಲ್ಲಿ ಕರ್ತವ್ಯ ನಿರತ ಇಬ್ಬರು ಕಾನ್ಸ್ಟೆಬಲ್ಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ಈ ಸಂಬಂಧ ಆರೋಪಿಯನ್ನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಜೆ ಜೆ ನಗರ ನಿವಾಸಿ ಅಫ್ರಿದ್ ಖಾನ್ ಬಂಧಿತ ಆರೋಪಿ. ಗಾಯಾಳು ಕಾನ್ ಸ್ಟೆಬಲ್ಗಳಾದ ಶಿವಪ್ರಸಾದ್ ದಾನರೆಡ್ಡಿ ಹಾಗೂ ವಿಜಯ್ ಕುಮಾರ್ ಹಲ್ಲೆಗೊಳಗಾದವರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೂರು ನೀಡಿದ್ದು, ಅರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಅಫ್ರಿದ್ ಕಳೆದ ಸೋಮವಾರವಷ್ಟೇ ಜೈಲಿನಿಂದ ಹೊರಬಂದಿದ್ದ. ಹವಾ ಮೆಂಟೈನ್ ಮಾಡಲು ಶರ್ಟ್ ಹಿಂಭಾಗದಲ್ಲಿ ಮಚ್ಚು ಇಟ್ಟುಕೊಂಡು ತಿರುಗಾಡುತ್ತಿದ್ದ. ನಿನ್ನೆ ಮಧ್ಯಾಹ್ನ 3. 45ರ ಸುಮಾರಿಗೆ ಕಾನ್ಸ್ಟೆಬಲ್ ಗಳಾದ ಶಿವಪ್ರಕಾಶ್ ಹಾಗೂ ವಿಜಯ್ ಕುಮಾರ್ ಗಸ್ತು ಕರ್ತವ್ಯದಲ್ಲಿ ಅನಂತ ರಾಮಯ್ಯ ಕಾಂಪೌಂಡ್ ಬಳಿ ಬರುವಾಗ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅಫ್ರೀನ್ನ್ನು ಕಂಡು ತಡೆದು ನಿಲ್ಲಿಸಿದ್ದಾರೆ. ಎಂಸಿಸಿಟಿಎನ್ಎಸ್ ಆ್ಯಪ್ನಡಿ ಬೆರಳಚ್ಚು ಪಡೆಯಲು ಮುಂದಾಗಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಮೊನ್ನೆಯಷ್ಟೇ ಜೈಲಿಂದ ಬಂದಿರುವೆ. ಚೆಕ್ ಮಾಡಲು ಬಂದಿದ್ದೀರಾ ಎಂದು ಪ್ರಶ್ನಿಸಿದ್ದಾನೆ. ಇನ್ನೊಂದು ಸಲ…
ತಿರುಪತಿ ತಿರುಮಲ ದೇವಾಲಯದಲ್ಲಿ ತಯಾರಾಗುವ ಲಡ್ಡು ಪ್ರಸಾದಕ್ಕೆ ಬಳಕೆ ಮಾಡುತ್ತಿದ್ದ, ರಾಜ್ಯದ ಕೆಎಂಎಫ್ನ ತುಪ್ಪಕ್ಕೆ ಬ್ರೇಕ್ ಬಿದ್ದಿದ್ದು ಭಾರೀ ಸುದ್ದಿಯಾದ ಬೆನ್ನಲ್ಲೇ, ಇದೀಗ ಕೆಎಂಎಫ್ ಟಿಟಿಡಿ ಆಡಳಿತ ಮಂಡಳಿಗೆ ಪತ್ರ ಬರೆದು ತುಪ್ಪ ಖರೀದಿಸುವಂತೆ ಪ್ರಸ್ತಾಪ ಮುಂದಿಟ್ಟಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ಸರ್ಕಾರ ಆಸ್ತಿತ್ವಕ್ಕೆ ಬಂದಿದ್ದು, ಯಾವಾಗ ನಂದಿನಿ ಹಾಲಿನ ದರ ಏರಿಕೆಯಾಯಿತೋ, ನಂದಿನಿಯ ಎಲ್ಲಾ ಉತ್ಪನ್ನಗಳ ಬೆಲೆಯಲ್ಲೂ ಏರಿಕೆ ಆಗಿದ್ದು, ತಿರುಪತಿ ತಿರುಮಲ ದೇವಾಲಯ ಲಡ್ಡು ಪ್ರಸಾದಕ್ಕೆ ಮತ್ತೆ ನಂದಿನಿ ತುಪ್ಪ ಬೇಡ ಎಂದಿತ್ತು. ಇದೀಗ ಮತ್ತೆ ಕೆಎಂಎಫ್ ಪತ್ರ ಬರೆದು, ನಂದಿನಿ ತುಪ್ಪ ಬಳಸಿಕೊಳ್ಳುವಂತೆ ಪ್ರಸ್ತಾಪ ಮುಂದಿಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಹಾಡಹಗಲೇ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ವಿಲಿಯಮ್ ಟೌನ್ ನಲ್ಲಿ ನಡೆದಿದೆ. ಹೆಲ್ಮಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಖದೀಮರು ಸ್ಕೂಟಿಯಲ್ಲಿ ಹೋಗುತ್ತಿದ್ದ ಸವಾರನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಆತನ ಜೇಬಿನಲ್ಲಿದ್ದ ಮೊಬೈಲ್ ಫೋನ್, ವ್ಯಾಲೆಟ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಸಾರ್ವಜನಿಕರೊಬ್ಬರು ಟ್ವಿಟ್ ಮಾಡುವ ಮೂಲಕ ಪೊಲೀಸರ ಗಮನಕ್ಕೆ ತಂದಿದ್ದಾರೆ. ಆದರೆ ಠಾಣೆಗೆ ಈವರೆಗೂ ಯಾವುದೇ ದೂರು ಬಂದಿಲ್ಲ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA