Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
- ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
- ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
- ತುಮಕೂರು: ಮೇ 15ರಂದು ಇತಿಹಾಸೋತ್ಸವ
- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
- ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
- ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
- ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ: 44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
Author: admin
ಬೆಂಗಳೂರು: ರೆಡ್ಡಿ ಜನಾಂಗದಲ್ಲೂ ಬಡಜನರಿದ್ದು, ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ರೆಡ್ಡಿ ಜನ ಸಂಘದಿಂದ ವಿಧಾನಸಭೆಗೆ ರೆಡ್ಡಿ ಸಮುದಾಯದಿಂದ ಆಯ್ಕೆಯಾಗಿರುವ ನೂತನ ಶಾಸಕರು ಮತ್ತು ಸಚಿವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ಅವರು. ರೆಡ್ಡಿ ಜನಾಂಗ ಸಾಮಾಜಿಕ, ಆರ್ಥಿಕವಾಗಿ ಮತ್ತಷ್ಟು ಬಲಿಷ್ಠವಾಗಬೇಕು. ಇದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಪ್ರಾತಿನಿಧ್ಯ ದೊರೆತಿದ್ದು, ಇದು ಇನ್ನಷ್ಟು ಹೆಚ್ಚಾಗಬೇಕು. ಆಯ್ಕೆಯಾಗಿರುವ ಶಾಸಕರ ಜೊತೆಗೂಡಿ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು. ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರೆಡ್ಡಿ ಜನಾಂಗ ಭವ್ಯ ಇತಿಹಾಸ ಹೊಂದಿದ್ದು, ಇದು ಜಾತಿಯಲ್ಲ. ಮಹತ್ವದ ಸಾಂಸ್ಕೃತಿಕ ನೆಲಗಟ್ಟನ್ನು ಹೊಂದಿದೆ. ಸಮುದಾಯ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಉತ್ತಮ ಸಾಧನೆಯತ್ತ ಮುನ್ನಡೆದಿದೆ. ಇತ್ತೀಚಿನ ದಿನಗಳಲ್ಲಿ ಸಂಘದಲ್ಲಿ ಕ್ರಿಯಾತ್ಮಕ ಚಟುವಟಿಕೆ ಹೆಚ್ಚಾಗಿದೆ. ರಾಜ್ಯದಲ್ಲಿ ಉತ್ತಮ ಶಕ್ತಿಯನ್ನು ಹೊಂದಿರುವ ಸಮಾಜವಾಗಿ…
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ತುರುವೇಕೆರೆ: ನನ್ನ ಅವಧಿಯಲ್ಲಿ ಬಂದಂತಹ ಶಾಸಕರ ಪ್ರದೇಶಾಭಿವೃದ್ದಿ ಅನುದಾನ 3 ಕೋಟಿ ಅದರಲ್ಲಿನ ಕಾಮಗಾರಿಗಳ ಎಸ್ಟಿಮೆಂಟ್ ಗಳನ್ನು ಇದರಲ್ಲಿರುವ ಎಂಜಿನಿಯರ್ ಗಳು ಅದನ್ನು ಬದಲಾಯಿಸಿದ್ದಾರೆ. ಸುಮಾರು 100 ಹಳ್ಳಿಗಳಿಗೆ ಅನುದಾನವನ್ನು ಹಂಚಿಕೆ ಮಾಡಿದ್ದೆವು. ಅದನ್ನು ಬದಲಾಯಿಸಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ನೇರ ಆರೋಪ ಮಾಡಿದರು. ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಜಿಲ್ಲೆಯಲ್ಲಿ ಅತಿ ಹೆಚ್ಚು ಕೊಬ್ಬರಿ ಮತ್ತು ಅಡಿಕೆಯನ್ನು ಬೆಳೆಯುತ್ತೇವೆ . ನಮ್ಮ ಸರ್ಕಾರದ ಅವಧಿಯಲ್ಲಿ ನಫೆಡ್ ತೆರೆದಿದ್ದೆವು ಈಗಿನ ಸರ್ಕಾರದಲ್ಲೂ ಸಹ ನಫೆಡ್ ಖರೀಧಿಕೇಂದ್ರಗಳಲ್ಲಿ ಅವುಗಳನ್ನು ಸರ್ಕಾರದಿಂದ ಖರೀದಿ ಮಾಡುತ್ತಿದೆ . ಕೇಂದ್ರ ಸರ್ಕಾರ ಬೆಂಬಲಬೆಲೆ 11,750|- ರೂಗಳನ್ನು ನೀಡಿ ನಿಗದಿ ಮಾಡಿದೆ ಆದರೆ ರಾಜ್ಯಸರ್ಕಾರ ಪ್ರೋತ್ಸಾಹ ಧನವನ್ನುಕೊಡುತ್ತಿಲ್ಲ . ರಾಜ್ಯ ಸರ್ಕಾರಕ್ಕೆ ರೈತರ ಪರವಾಗಿ ಮನವಿ ಮಾಡುತ್ತೇನೆ, ದಯವಿಟ್ಟು ನಫೆಡ್ ಖರೀದಿ ಕೇಂದ್ರಗಳನ್ನು ಇನ್ನು 2 ರಿಂದ 3…
ವರದಿ: ಅಬಿದ್ ಮಧುಗಿರಿ ಮಧುಗಿರಿ : ಪಟ್ಟಣದ ಖಾಸಗಿ ಬಸ್ ಸ್ಟಾಂಡ್ ಸಮೀಪದಲ್ಲಿ ತಾ. ಸಿ.ಐ.ಟಿ.ಯು ಅಧ್ಯಕ್ಷೇ ಎಸ್.ಡಿ ಪಾರ್ವತಮ್ಮ ನೇತೃತ್ವದಲ್ಲಿ ಅಕ್ಷರ ದಾಸೋಹ ಬಿಸಿ ಊಟ ತಯಾರಕರು ಸಮಾವೇಶಗೊಂಡು, ತಮ್ಮ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ತಾ.ಪಂ. ಕಚೇರಿವರೆಗೆ ಮೆರವಣಿಗೆ, ಪ್ರತಿಭಟನೆ ನಡೆಸಿ, ನಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಇಲ್ಲದ ಸಂದರ್ಭ ಕಚೇರಿ ವ್ಯವಸ್ಥಾಪಕರಾದ ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಅಕ್ಷರ ದಾಸೋಹ ನೌಕರರು ಒಂಬತ್ತು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಿದ್ದು, ನಾವು ತಾ.ಪಂ. ಮುಖಾಂತರ ಮತ್ತು ಜಿಲ್ಲಾಧಿಕಾರಿಗಳು ಸರ್ಕಾರದ ಹಂತಕ್ಕೆ ತಲುಪಿಸಲು ಕ್ರಮವಹಿಸಿ ಎಂದು ತಿಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಮಧುಗಿರಿ ತಾಲೂಕು ಸಮಿತಿ ಅಧ್ಯಕ್ಷೇ ನಾಗರತ್ನ ಮಾತನಾಡಿ, 2023 ರ ಬಜೆಟ್ ನಲ್ಲಿ ಹಿಂದಿನ ಸರ್ಕಾರ ಬಿಸಿ ಊಟ ನೌಕರರಿಗೆ 1,000 ಗೌರವಧನ ಹೆಚ್ಚಳ ಮಾಡುವುದಾಗಿ ಘೋಷಿಸಿತ್ತು, ಆದರೆ ಈ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಕುರಿತಂತೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ. ಸಚಿವರುಗಳಾದ ಭೋಸರಾಜ್, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ ಅವರೊಂದಿಗೆ ಬೆಂಗಳೂರಿನಲ್ಲಿಂದು ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಮಂಡಳಿಗಳ ಒಕ್ಕೂಟ ಮತ್ತು ಆರ್. ಟಿ. ಇ. ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಸಂವಾದ ನಡೆಸಿದ ಈಶ್ವರ ಖಂಡ್ರೆ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಿಸುವಲ್ಲಿ ವೇತನಾನುದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಣದ ಹಕ್ಕು ಕಾಯಿದೆಯ ನಿಯಮ 4ಕ್ಕೆ ತಿದ್ದುಪಡಿ ತಂದಿರುವ ಪರಿಣಾಮ ಇಂದು 9 ಲಕ್ಷಕ್ಕೂ ಅಧಿಕ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ನನಗೆ…
ಬೆಂಗಳೂರು: ಹಳ್ಳಿಗಳಲ್ಲಿನ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಹಿಳೆಯರು ನಮಗೆ ಘೇರಾವ್ ಹಾಕಿ ಪ್ರಶ್ನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಏನು ಕ್ರಮ ಕೈಕೊಂಡಿದೆ ಎಂದು ಶಾಸಕ ರಾಜುಕಾಗೆ ಪ್ರಶ್ನೆ ಮಾಡಿದ್ದಾರೆ. ರಾಜು ಕಾಗೆ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಉತ್ತರಿಸಿ ವಹಿವಾಟು ಆಧರಿಸಿ MSILಗೆ ಅವಕಾಶ ಕೊಟ್ಟಿದ್ದೇವೆ. ಈವರೆಗೂ ಗ್ರಾಮೀಣ ಭಾಗದಲ್ಲಿ ಯಾವುದೇ ಲೈಸೆನ್ಸ್ ಕೊಟ್ಟಿಲ್ಲ. ಹಳ್ಳಿಗಳ ಅಂಗಡಿಯಲ್ಲೂ ಮಾರಾಟ ಮಾಡ್ತಿರೋದು ಗಮನಕ್ಕೆ ಬಂದಿದೆ. ಮೈದಾನ, ಶಾಲೆಗಳ ಬಳಿಯೂ ಕೆಲವರು ಮದ್ಯ ಕುಡಿಯುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜತೆ ಮಾತನಾಡಿ ಕಂಟ್ರೋಲ್ ಮಾಡುತ್ತೇನೆ ಎಂದು ವಿಧಾನಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಬೇಕು. ಅಲ್ಲದೆ ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡುವ ಹಾಗೂ ಪುನರ್ವಸತಿ ಕೇಂದ್ರಗಳ ಕಾಮಗಾರಿ ಮತ್ತೆ ಚಾಲನೆ ನೀಡುವ ವಿಚಾರವಾಗಿ ಪರಿಷತ್ ಸದಸ್ಯರಾದ ರುದ್ರಪ್ಪ ನಿರಾಣಿ ಅವರು ಪ್ರಸ್ತಾಪಿಸಿದಾಗ, ಮಾತನಾಡಿದ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ಸದಸ್ಯರು ಹೇಳಿದ ಮಾತು ಸತ್ಯವಿದೆ. ಸಂತ್ರಸ್ತರಿಗೆ ಎಷ್ಟು ಹಣ ನೀಡಬೇಕು ಎಂಬುದರ ಬಗ್ಗೆ ಬಹಳ ದಿನಗಳಿಂದ ತೀರ್ಮಾನ ಆಗಬೇಕಿತ್ತು. ಬಾಗಲಕೋಟೆ ಭಾಗದಲ್ಲಿ 2-3 ಲಕ್ಷ ಇದ್ದರೂ 10-15 ಲಕ್ಷಕ್ಕೆ ಮಾಡಲಾಗಿತ್ತು. ಹೀಗಾಗಿ ಸಮಸ್ಯೆ ಆಗಿತ್ತು”. ಎಂದು ವಿಧಾನ ಪರಿಷತ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. “ನಾವು ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡು ಮಾಡಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಇದಕ್ಕೆ ಹಣ ನೀಡಲು ಆಗುತ್ತಿಲ್ಲ. ಆದರೂ ಇದು ಆದ್ಯತೆ ಯೋಜನೆ ಆಗಿದ್ದು, ನಾನು ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಯನ್ನು ಜೂ. 11 ರಿಂದ ಜಾರಿಗೊಳಿಸಿದೆ. ಇನ್ನು ಜೂ. 11ರಿಂದ ಜುಲೈ 11ರವರೆಗೆ ಒಂದು ತಿಂಗಳ ಅವಧಿ ಪೂರ್ಣಗೊಂಡಿದೆ. ಒಂದು ತಿಂಗಳಲ್ಲಿ ಬರೋಬ್ಬರಿ 16. 73 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಜೂನ್ 11 ರಿಂದ ಜುಲೈ 10ರ ತನಕ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ 32. 89 ಕೋಟಿ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಶೇ 50. 86ರಷ್ಟು ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ. ಜೂನ್ 11 ರಿಂದ ಜುಲೈ 10ರ ತನಕ ಸಂಚಾರ ನಡೆಸಿದ ಅವಧಿಯಲ್ಲಿನ ಟಿಕೆಟ್ ಮೌಲ್ಯ ಹೀಗಿದೆ. ಕೆ ಎಸ್ ಆರ್ ಟಿಸಿ 151. 25 ಕೋಟಿ, ಬಿಎಂಟಿಸಿ…
ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದೇಶದಲ್ಲಿಯೇ ಅತ್ಯುತ್ತಮವಾದ ಬಜೆಟ್ ಮಂಡಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ 5ಸಾವಿರ ಕೋಟಿ ರೂ. ಗಳನ್ನು ಬಜೆಟ್ ನಲ್ಲಿ ಸಿಎಂ ಅವರು ಒದಗಿಸಿದ್ದು, ಸದರಿ ಅನುದಾನದ ಸದ್ಬಳಕೆ ಮಾಡಿಕೊಂಡು ಸಮಗ್ರ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕೆ 2013ರಿಂದ ಇಲ್ಲಿಯವರೆಗೆ ಸಾವಿರಾರು ಕೋಟಿ ರೂ. ಗಳು ಖರ್ಚು ಮಾಡಲಾಗಿದ್ದು, ಸರಕಾರದ ಪ್ರಯೋಜನ ಪಡೆದುಕೊಂಡಿರುವ ಪರಿಶಿಷ್ಟ ಪಂಗಡದ ಫಲಾನುಭವಿಗಳ ಜೀವನಮಟ್ಟದಲ್ಲಿ ಸುಧಾರಣೆಯಾಗಿದೆಯೇ ಎಂಬುದರ ಕುರಿತು ಇಲಾಖೆಯಿಂದ ಮೌಲ್ಯಮಾಪನ ನಡೆಸಲಾಗುವುದು ಎಂದು ಅವರು ಹೇಳಿದರು. ಪರಿಶಿಷ್ಟ ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1588. 23ಕೋಟಿ ರೂ. ಗಳನ್ನು ಒದಗಿಸಿದ್ದಾರೆ ಎಂದು ಸಚಿವ ನಾಗೇಂದ್ರ ಅವರು ತಿಳಿಸಿದರು. ಈಗ ನೀಡಲಾಗಿರುವ ಬಜೆಟ್ ನಲ್ಲಿ…
ನಾಳೆ ನಗರದ ಹಲವೆಡೆ ನೀರಿನ ವ್ಯತ್ಯಯ ಉಂಟಾಗಲಿದೆ ಎಂದು ಬಿಡಬ್ಲ್ಯೂಎಸ್ಎಸ್ ಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೆಂಗೇರಿ ಹೊರವಲಯದ ರಸ್ತೆಯಲ್ಲಿರುವ ಅಂಬೇಡ್ಕರ್ ಕಾಲೇಜ್ ಕವಾಟ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜುಲೈ 13 ರಂದು (ಗುರುವಾರ) ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಸ್ಟೇಜ್ -4 ಫೇಸ್-1 ಎರಡು ಪಂಪುಗಳು ತುರ್ತಾಗಿ ಸ್ಥಗಿತಗೊಳ್ಳಲಿದೆ. ಮುಂಜಾಗ್ರತ ಕ್ರಮವಾಗಿ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿತ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಸ್ಟೇಜ್ -4 ಫೇಸ್ -1 ನ ಎರಡು ಪಂಪ್ಗಳ ದುರಸ್ತಿ ಮಾಡುವುದರಿಂದ ದಿನವಿಡೀ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಹೀಗಾಗಿ ಸಾರ್ವಜನಿಕರು ಇಂದೇ ಅಗತ್ಯವಿರುವಷ್ಟು ನೀರು ಶೇಖರಿಸಿಕೊಟ್ಟುಕೊಳ್ಳುವಂತೆ ತಿಳಿಸಿದೆ. ರಾಜರಾಜೇಶ್ವರಿನಗರ, ಕೆಂಗೇರಿ, ವಿಜಯನಗರ, ಗೋವಿಂದರಾಜನಗರ, ಲಗ್ಗೆರೆ, ಕಾಮಾಕ್ಷಿಪಾಳ್ಯ, ಪೀಣ್ಯ, ದಾಸರಹಳ್ಳಿ, ಜಾಲಹಳ್ಳಿ, ಯಲಹಂಕ, ಹೆಬ್ಬಾಳ, ಮಹಾಲಕ್ಷ್ಮೀ ಲೇಔಟ್, ಬಸವೇಶ್ವರನಗರ, ನಂದಿನಿ ಲೇಔಟ್ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಥಗಿತಗೊಳ್ಳಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ರಾಹುಲ್ ಗಾಂಧಿ ಅವರನ್ನು ಆನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕರು ರಸ್ತೆಗಿಳಿದು ಮೌನ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೆಳಿಗ್ಗೆ 10: 30 ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಸೇರಲಿರುವ ಕಾಂಗ್ರೆಸ್ ನಾಯಕರುಗಳು, ನೇರವಾಗಿ ಮೌನ ಪ್ರತಿಭಟನೆ ನಡೆಸಲಿದ್ದು, ಸಂಜೆಯವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಅರ್ಜಿ ತಿರಸ್ಕರಿಸಿರುವ ನ್ಯಾಯಾಲಯದ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರ ಕೈವಾಡವಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ನಾಯಕರುಗಳು ಸಾಥ್ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy