Subscribe to Updates
Get the latest creative news from FooBar about art, design and business.
- ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
- ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
- ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
- ತುಮಕೂರು: ಮೇ 15ರಂದು ಇತಿಹಾಸೋತ್ಸವ
- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
- ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
- ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
- ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ: 44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
Author: admin
ತುಮಕೂರು: ಇಬ್ಬರು ಪೊಲೀಸರು, ಇಬ್ಬರು ನಿರಾಶ್ರಿತ ಕೇಂದ್ರದ ಸಿಬ್ಬಂದಿ ಮೇಲೆ ದಾಳಿ ಉಗಂಡ ಪ್ರಜೆಗಳು ದಾಳಿ ನಡೆಸಿದ್ದು ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಮಕೂರು ನಗರದ ದಿಬ್ಬೂರಿನಲ್ಲಿ ವಿದೇಶಿ ಪ್ರಜೆಗಳ ನಿರಾಶ್ರಿತ ಕೇಂದ್ರವಿದ್ದು ಪಿಎಸ್ ಐ ಚಂದ್ರಕಲಾ, ಡಬ್ಲ್ಯೂ ಪಿಸಿ ತಾಸೀನಾ ಬಾನು ಮೇಲೆ ದಾಳಿ ಮಾಡಲಾಗಿದೆ. ನಿರಾಶ್ರಿತ ಕೇಂದ್ರದ ಡ್ರೈವರ್ ಬಸವರಾಜು, ಅಡುಗೆ ಸಹಾಯಕಿ ಲಕ್ಷ್ಮೀ ಎಂಬುವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ನೀಡಲು ಹೋದಾಗ ಕೊಠಡಿಯಲ್ಲಿ ಕೂಡಿ ಹಾಕಿಕೊಂಡು ದಾಳಿ ಮಾಡಿದ್ದು ನಾಲ್ವರು ಮಹಿಳಾ ಉಗಾಂಡ ಪ್ರಜೆಗಳಿದ್ದರು. ಚಾಕು ಹಿಡಿದುಕೊಂಡು ಕೊಲೆ ಯತ್ನ. ಸಂಜೆ 4.30ರ ಸಂದರ್ಭದಲ್ಲಿ ಘಟನೆ ನಡೆದಿದೆ. ಪಾಸ್ ಪೋರ್ಟ್ ಅವಧಿ ಮುಗಿದ ವಿದೇಶಿಗರ ನಿರಾಶ್ರಿತ ಕೇಂದ್ರವಾಗಿದ್ದು 30 ಜನರಿದ್ದಾರೆ, ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರಿಗೂ ಕಾಲು, ಕೈಗಳಿಗೆ ಗಾಯವಾಗಿದೆ. ತುಮಕೂರು ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಎಸ್…
ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಸಭೆಯ ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಡಾ. ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದರು. ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರು, ತಜ್ಞವೈದರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿ ಕೊರತೆ ನೀಗಿಸಲು ಪ್ರಾಮಾಣೀಕ ಪ್ರಯತ್ನ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಹಲವು ಕಡೆಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡಗಳಿವೆ. ವೈದ್ಯರು ಹಾಗೂ ಇತರೆ ಸಿಬ್ಬಂದಿಗಳಿಲ್ಲ. ಅಂತಹ ಕಡೆಗಳಲ್ಲಿ ವೈದ್ಯರು, ಸಿಬ್ಬಂದಿಯನ್ನು ನೇಮಕ ಮಾಡಿ ಒಳ್ಳೆ ರೀತಿಯಲ್ಲಿ ನಿರ್ವಹಣೆ ಮಾಡುವುದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏಳು ಹಳೆಯ ತಾಲೂಕುಗಳಲ್ಲಿ ಇರುವ ಆಸ್ಪತ್ರೆಗಳನ್ನು ನೂರು ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಬೇಕಿದೆ. ಆನಂತರ ಹೊಸ ತಾಲ್ಲೂಕುಗಳಲ್ಲಿ ಆಸ್ಪತ್ರೆ ಮಂಜೂರು ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ನಮ್ಮತುಮಕೂರು.ಕಾಂನ…
ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್ ಕನ್ನಡ ಬಗ್ಗೆ ಚರ್ಚೆ ಹಿನ್ನೆಲೆ ಯು.ಟಿ.ಖಾದರ್ ಮಾತನಾಡುತ್ತ, ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ, ಆದ್ರೆ ನಮ್ಮ ಪ್ರೀತಿಯ ಭಾಷೆ. ಕನ್ನಡ ಪ್ರೀತಿ, ಸೋದರತೆ, ಸಾಮರಸ್ಯದ ಭಾಷೆ. ಅದಕ್ಕೆ ನಾನು ಕೃತಜ್ಞತೆ ಹೇಳುತ್ತಿದ್ದೇನೆ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ BJP ಶಾಸಕ ಬಸನಗೌಡ ಯತ್ನಾಳ್, ಸಮಸ್ಯೆ ಏನೆಂದರೆ ನಮ್ಮ ಕನ್ನಡ ಬೇರೆ, ಹೈದರಾಬಾದ್ ಕನ್ನಡ ಬೇರೆ. ಮೈಸೂರು ಕನ್ನಡ ಬೇರೆ, ಮಂಗಳೂರು ಕನ್ನಡ ಬೇರೆ, ಮುಂಬೈ ಕನ್ನಡ ಬೇರೆ, ನಮಗೆ ನಿಮ್ಮ ಭಾಷೆ ಅರ್ಥ ಆಗಬೇಕು, ಅದಕ್ಕೆ ಆ್ಯಪ್ ಹಾಕಿಕೊಡಿ. ಮೊಬೈಲ್ನಲ್ಲಿ ಯುಎಸ್ ಇಂಗ್ಲಿಷ್, ಇಂಗ್ಲೆಂಡ್ ಇಂಗ್ಲಿಷ್ ಇದ್ದ ಹಾಗೆ. ಲೋಕಸಭೆಯಲ್ಲಿ ಹಿಂದಿ ಟು ಕನ್ನಡ, ಕನ್ನಡ ಟು ಹಿಂದಿ ಇದ್ದ ಹಾಗೆ ಸ್ಪೀಕರ್ ಟು ಕನ್ನಡ ಆ್ಯಪ್ ಮಾಡಿ ಎಂದು ಕಾಲೆಳೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡ ನಂತರ ಆರೋಪಿಯ ಪಾಸ್ಪೋರ್ಟ್ ಅನ್ನು ಆತನಿಗೆ ಹಿಂದಿರುಗಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ಫ್ರಾನ್ಸಿಸ್ ಕೇವಿಯ ಕ್ರಾಸ್ಟೋ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿ ಖುಲಾಸೆಗೊಂಡರೆ, ಮೇಲ್ಮನವಿ ಅವಧಿ ಮುಗಿಯುವವರೆಗೂ ಕಾಯದೆ ವಿಚಾರಣಾ ನ್ಯಾಯಾಲಯವು ಅದೇ ಆಧಾರದ ಮೇಲೆ ಪಾಸ್ಪೋರ್ಟ್ ಅನ್ನು ಇಟ್ಟುಕೊಳ್ಳಬಾರದು ಎಂದು ಹೇಳಿದೆ. ಅರ್ಜಿದಾರ ಫ್ರಾನ್ಸಿಸ್ ಕ್ರೇವಿಯರ್ ಗೆ ಪಾಸ್ ಪೋರ್ಟ್ ಹಿಂದಿರುಗಿಸುವಂತೆ ಹೈಕೋರ್ಟ್ ಸಂಬಂಧಪಟ್ಟ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಮೇಲ್ಮನವಿಯ ಅವಧಿ ಮುಗಿದಿಲ್ಲವಾದ್ದರಿಂದ ಪಾಸ್ಪೋರ್ಟ್ ಹಸ್ತಾಂತರಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪರಿಶೀಲಿಸಿದ ನಂತರ, ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾದ್ದರಿಂದ ವಶಪಡಿಸಿಕೊಂಡ ಪಾಸ್ಪೋರ್ಟ್ ಅನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ. 2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಿದೆ. ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ಬ್ಲಾಕ್ ಹಾಗೂ ಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಸಭೆಗಳಲ್ಲಿ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವುದು. ವಿದ್ಯಾರ್ಥಿ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಕೈಪಿಡಿಯನ್ನು DSERT ವೆಬ್ ಸೈಟ್ನಲ್ಲಿ lips/dsarkarnataka. nic. in ಅಪ್ಲೋಡ್ ಮಾಡಿದ್ದು,…
ರಾಜ್ಯದಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗೆ ಆಗುತ್ತಿರುವ ಸಮಸ್ಯೆಗೆ ಪರಿಹಾರ ಒದಗಿಸಲು ಶಾಶ್ವತವಾದ ಕಾರ್ಯಪಡೆ ರಚಿಸಬೇಕು ಎಂದು ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಗುರುವಾರ ಆಗ್ರಹಿಸಿದರು. ಕಾಂಗ್ರೆಸ್ ನ ಅಲ್ಲಮಪ್ರಭು ಪಾಟೀಲ ಶೂನ್ಯವೇಳೆಯಲ್ಲಿ ಬರ ಪರಿಸ್ಥಿತಿ ಕುರಿತು ಪ್ರಸ್ತಾಪಿಸಿ, ‘ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ನೀರು ಪೂರೈಕೆಗೆ ಹೆಚ್ಚಿನ ಅನುದಾನ ಒದಗಿಸಬೇಕು’ ಎಂದು ಮನವಿ ಮಾಡಿದರು. ಕಾಂಗ್ರೆಸ್ನ ಬಿ. ಆರ್. ಪಾಟೀಲ, ಜೆಡಿಎಸ್ನ ಶಾರದಾ ಪೂರ್ಯಾನಾಯ್ಕ ದನಿಗೂಡಿಸಿದರು. ಆಗ ಮಧ್ಯಪ್ರವೇಶಿಸಿದ ಬೊಮ್ಮಾಯಿ, ‘ಮಳೆ ಕೊರತೆಯಿಂದ ಕುಡಿಯುವ ನೀರಿನ ಕೊರತೆ ಜತೆಯಲ್ಲೇ ಕೃಷಿ ಚಟುವಟಿಕೆಗಳಿಗೆ ತೀವ್ರ ಸಮಸ್ಯೆ ಆಗುತ್ತಿದೆ. ಪ್ರತಿ ವರ್ಷವೂ ಮಳೆ ಕೊರತೆ ಆದಾಗ ಈ ಸನ್ನಿವೇಶ ಸೃಷ್ಟಿಯಾಗುತ್ತಿದೆ. ಬಿತ್ತನೆ ಮಾಡಿದ ಬೀಜ ಮೊಳೆಕೆ ಒಡೆಯದಿದ್ದರೆ ಪರಿಹಾರ ಕೊಡುವ ವ್ಯವಸ್ಥೆ ಆಗಬೇಕು. ಶಾಶ್ವತ ಕಾರ್ಯಪಡೆ ರಚಿಸಿ, ಪ್ರತಿ ಜಿಲ್ಲೆಗೆ ತಲಾ 7 50 ಲಕ್ಷ ಅನುದಾನ ಒದಗಿಸಬೇಕು’ ಎಂದು ಒತ್ತಾಯಿಸಿದರು. ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಎಲ್ಲ ಜಿಲ್ಲೆಗಳಿಗೆ…
ಕಾರ್ಮೆಲರಾಮ್-ಗುಂಜೂರು ಲೆವೆಲ್ ಕ್ರಾಸಿಂಗ್ನಲ್ಲಿ ಮೇಲ್ವೇತುವೆ ಕಾಮಗಾರಿಯನ್ನು ನೈರುತ್ಯ ರೈಲ್ವೆ ಆರಂಭಿಸಿದೆ.ವಾಹನ ದಟ್ಟಣೆಯಿಂದ ನಿತ್ಯ ಗಿಜಿಗುಟ್ಟುವ ಈ ರಸ್ತೆಯು ರೈಲ್ವೆ ಹಳಿ ದಾಟಿ ಹೋಗಬೇಕು. ಹಲವು ರೈಲುಗಳು ಇಲ್ಲಿ ಸಂಚರಿಸುವುದರಿಂದ ವಾಹನಗಳು ಕಾಯುವುದು ಅನಿವಾರ್ಯವಾಗಿತ್ತು. ಇದನ್ನು ತಪ್ಪಿಸಲು ಮೇಲ್ಸ್ತುವೆ ನಿರ್ಮಿಸಬೇಕು ಎಂದು ಸ್ಥಳೀಯರು ಹಲವು ವರ್ಷಗಳಿಂದ ಆಗ್ರಹಿಸುತ್ತಾ ಬಂದಿದ್ದರು. ಇದೀಗ ಅದಕ್ಕೆ ಸ್ಪಂದನೆ ಸಿಕ್ಕಿದೆ. 280 ಮೀಟರ್ ಉದ್ದ ಮತ್ತು 7.5 ಮೀಟರ್ ಅಗಲ ಇರುವ ದ್ವಿಪಥ ಮೇಲ್ವೇತುವೆ ನಿರ್ಮಾಣಗೊಳ್ಳಲಿದೆ. 2025ರ ಏಪ್ರಿಲ್ವರೆಗೆ ಕಾಮಗಾರಿ ಅವಧಿ: ಕಾರ್ಮೆಲರಾಮ್-ಗುಂಜೂರು ಜಂಕ್ಷನ್ನಲ್ಲಿ 1 30 ಕೋಟಿ ವೆಚ್ಚದಲ್ಲಿ ರಸ್ತೆ ಮೇಲ್ಲೇತುವೆ ಕಾಮಗಾರಿ ನಡೆಸಲಾಗುತ್ತಿದೆ. 2025ರ ಏಪ್ರಿಲ್ ಒಳಗೆ ಕಾಮಗಾರಿ ಮುಗಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೈರುತ್ಯ ರೈಲ್ವೆ ಕಾಮಗಾರಿ ನಿರ್ವಹಣೆ ಮಾಡಿದರೆ, ಸಂಚಾರ ಪೊಲೀಸರು ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯನ್ನು ಮಾಡಿದೆ. ಗುಂಜೂರು ಭಾಗದಲ್ಲಿ ಸೌತ್ ಇಂಡಿಯನ್ ಬ್ಯಾಂಕ್ ಬಳಿಯಿಂದ ಕಾಮಗಾರಿ ಆರಂಭಗೊಂಡಿದೆ. ರಸ್ತೆ ಬದಲಾವಣೆ: ವರ್ತೂರು ರಸ್ತೆಯಿಂದ ಸರ್ಜಾಪುರ ರಸ್ತೆ ಕಡೆಗೆ ಹೋಗುವ ವಾಹನಗಳು…
ಜೀನ್ಸ್ ಪ್ಯಾಂಟ್ ಗಳಲ್ಲಿ ಡ್ರಗ್ಸ್ ಬಚ್ಚಿಟ್ಟುಕೊಂಡು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಸಾಗಿಸುತ್ತಿದ್ದ ವಿಚಾರಾಣಾಧೀನ ಕೈದಿ ಶಾಹಿದ್ ಪಾಷಾ ಅಲಿಯಾಸ್ ನ್ಯಾರೊ ವಿರುದ್ಧ ಪ್ರಕರಣ ದಾಖಲಾಗಿದೆ. ‘ಜೈಲಿನ ಅಧೀಕ್ಷಕ ಡಾ. ಮಲ್ಲಿಕಾರ್ಜುನ್ ಸ್ವಾಮಿ ಅವರು ಡ್ರಗ್ಸ್ ಸಾಗಣೆ ಬಗ್ಗೆ ದೂರು ನೀಡಿದ್ದಾರೆ. ಎನ್ಡಿಪಿಎಸ್ ಹಾಗೂ ಕರ್ನಾಟಕ ಕಾರಾಗೃಹ ಕಾಯ್ದೆಯಡಿ ಶಾಹಿದ್ ಪಾಷಾ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಅಪರಾಧ ಪ್ರಕರಣದಲ್ಲಿ ಜೈಲು ಸೇರಿರುವ ಶಾಹಿದ್ ಪಾಷಾನನ್ನು ಜಗಜೀವನರಾಮ್ ನಗರ ಠಾಣೆಯ ಕಾನ್ಸ್ಟೆಬಲ್ಗಳಾದ ಸಂಗಪ್ಪ ಹಾಗೂ ವಿನಯ್, ಜೂನ್ 27ರಂದು ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆದೊಯ್ದಿದ್ದರು. ವಿಚಾರಣೆ ಮುಗಿದ ಬಳಿಕ, ಆತನನ್ನು ವಾಪಸು ಕಾರಾಗೃಹಕ್ಕೆ ಕರೆತಂದಿದ್ದರು.’ ‘ಕಾರಾಗೃಹದ ಪ್ರವೇಶ ದ್ವಾರದಲ್ಲಿ ಶಾಹಿದ್ ಪಾಷಾನನ್ನು ಸಿಬ್ಬಂದಿ ತಪಾಸಣೆಗೆ ಒಳಪಡಿಸಿದ್ದರು. ಆತನ ಬಳಿಯಿದ್ದ ಎರಡು ಜೀನ್ಸ್ ಪ್ಯಾಂಟ್ಗಳ ಒಳಭಾಗದಲ್ಲಿ 1 ಗ್ರಾಂ ಬ್ರೌನ್ ಶುಗರ್ ಹಾಗೂ 11 ಗ್ರಾಂ ಗಾಂಜಾ ಇರುವುದು ಗೊತ್ತಾಗಿತ್ತು. ಅವುಗಳನ್ನು ಜಪ್ತಿ ಮಾಡಿದ್ದ ಸಿಬ್ಬಂದಿ, ಠಾಣೆಗೆ ಮಾಹಿತಿ ನೀಡಿದ್ದರು’…
ವೀರಶೈವ ಲಿಂಗಾಯತ ಒಳ ಪಂಗಡಗಳ ಒಕ್ಕಟ್ಟಿನ ಮಾತಿನಂತೆ ನಡೆದರೆ ಮಾತ್ರ ಕಾರ್ಯ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಜದ ಸಚಿವರು ಮತ್ತು ಶಾಸಕರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮುದಾಯದ ಒಗ್ಗಟ್ಟಿನ ಮಾತು ಯಾವಾಗಿನಿಂದಲೂ ಹೇಳುತ್ತಿದ್ದೇವೆ. ಬರೆ ಮಾತನಾಡಿದರೆ ಏನೂ ಪ್ರಯೋಜನ ಇಲ್ಲ. ಮಾತಿನಂತೆ ನಡೆದರೆ ಮಾತ್ರ ಕಾರ್ಯ ಸಾಧ್ಯ ಎಂದು ಬೊಮ್ಮಾಯಿ ಹೇಳಿದರು. ಬಸವಣ್ಣನ ತತ್ವದಡಿ ಪ್ರಜಾಪ್ರಭುತ್ವ ಆರಂಭವಾಗಿದೆ. ಅಂಬೇಡ್ಕರ್ ಅವರು ಅದನ್ನು ಪಾಲಿಸಿದ್ದಾರೆ. ಯಾರೊ ಲಿಂಗಾಯತ ಸಿಎಂ ಆದರೆ, ಲಿಂಗಾಯತರ ಬಡತನ ಹೋಗುವುದಿಲ್ಲ. ದುಡಿಮೆ ನಮ್ಮ ಮೂಲ ತತ್ವ, ಕಾಯಕ ಮಾಡುವುದನ್ನು ನಾವು ಬಿಡಬಾರದು. ಕಾಯಕ ಮಾತ್ರ ನಮ್ಮ ಬಡತನ ಹೋಗಲಾಡಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವ ಶಂಕರಪ್ಪ, ಸಚಿವರಾದ ಎಂ. ಬಿ. ಪಾಟೀಲ, ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳರ,…
ಶಾಲೆ ಕಟ್ಟಡ ಪೂರ್ಣಗೊಳ್ಳದೆ ಬಿಲ್ ಪಾವತಿ ಮಾಡಿರುವ ಇಬ್ಬರು ಎಂಜಿನಿಯರ್ಗಳನ್ನು ಅಮಾನತು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜರಾಜೇಶ್ವರಿನಗರ ವಲಯದ ಜ್ಞಾನಭಾರತಿ ವಾರ್ಡ್ನಲ್ಲಿ ಎರಡು ಅಂತಸ್ತಿನ ಶಾಲಾ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ಯೋಜನೆ ಪೂರ್ಣಗೊಳ್ಳದಿದ್ದರೂ ಅಂದಾಜು ವೆಚ್ಚದ ಶೇ 90ರಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಲಗ್ಗೆರೆಯಲ್ಲಿಯೂ ಶಾಲಾ ಕಟ್ಟಡ ನಿರ್ಮಾಣವಾಗದಿದ್ದರೂ ಹಣ ಪಾವತಿ ಮಾಡಿರುವುದು ಎಂದು ಟಿವಿಸಿಸಿ ತನಿಖೆಯಿಂದ ತಿಳಿದುಬಂದಿತ್ತು. ಜ್ಞಾನಭಾರತಿ ಶಾಲಾ ಯೋಜನೆಯಲ್ಲಿ 14. 57 ಕೋಟಿ ಮೊತ್ತದ ಬಿಲ್ ಅನ್ನು ಕಾಮಗಾರಿ ಪರಿಶೀಲನೆ ನಡೆಸದೆ ಪಾವತಿಸಲಾಗಿದೆ. ಈ ಕಟ್ಟಡ ಶ್ರೀಗಂಧದ ಕಾವಲ್ ಕೆರೆಗೆ ಹೊಂದಿಕೊಂಡಂತೆಯೇ ಇದೆ. ಇನ್ನು, ಲಗ್ಗೆರೆ ಶಾಲಾ ಯೋಜನೆಯ ಅಂದಾಜು ಮೊತ್ತ F6. 5 ಕೋಟಿಯಾಗಿತ್ತು. ಮುಖ್ಯ ಆಯುಕ್ತರ ಗಮನಕ್ಕೆ ತಾರದೆಯೇ ಈ ಮೊತ್ತವನ್ನು 110 ಕೋಟಿಗೆ ಹೆಚ್ಚಿಸಿಕೊಳ್ಳಲಾಗಿದೆ. ಅಲ್ಲದೆ, ಈ ಕಟ್ಟಡವನ್ನು ಬಿಡಬ್ಲ್ಯುಎಸ್ಎಸ್ಬಿಯ ಕೊಳವೆ ಮಾರ್ಗದ ಮೇಲೆಯೇ ನಿರ್ಮಿಸಲಾಗುತ್ತಿತ್ತು ಎಂದು ತನಿಖೆಯಿಂದ ಗೊತ್ತಾಗಿದೆ. ಟಿವಿಸಿಸಿ ವರದಿ ಆಧಾರದ ಮೇಲೆ, ಆರ್. ಆರ್.…