Author: admin

ಕೇಳಿದಷ್ಟು ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡದಿದ್ದರೆ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ವಾಟ್ಸ್ ಆ್ಯಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ತಾವು ಸೂಚಿಸಿದ ಬ್ಯಾಂಕ್ ಖಾತೆಗೆ 750 ಲಕ್ಷ ವರ್ಗಾವಣೆ ಮಾಡಬೇಕು. ಇಲ್ಲದಿದ್ದರೆ ಆರು ನ್ಯಾಯಮೂರ್ತಿಗಳನ್ನು ಕೊಲೆ ಮಾಡಲಾಗುವುದೆಂದು ಬೆದರಿಕೆ ಬಂದಿದೆ’ ಎಂದು ನ್ಯಾಯಾಲಯದ ಅಧಿಕಾರಿ ಕೆ. ಮುರಳೀಧರ್ ದೂರು ನೀಡಿದ್ದಾರೆ. ಜುಲೈ 14 ರಂದೇ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೈಬರ್ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ‘ಜುಲೈ 12 ರಂದು ರಾತ್ರಿ 7ರ ಸುಮಾರಿಗೆ ವ್ಯಕ್ತಿಯೊಬ್ಬ, ಮುರಳೀಧರ್ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದಾನೆ. ಪಾಕಿಸ್ತಾನ ಮೂಲದ ಎಬಿಎಲ್ ಅಲೈಡ್ ಬ್ಯಾಂಕ್ ಖಾತೆ ಸಂಖ್ಯೆಯನ್ನು ಉಲ್ಲೇಖಿಸಿ ಸಂದೇಶ ಕಳುಹಿಸಲಾಗಿದೆ. ಆ ಖಾತೆಗೆ ಹಣ ವರ್ಗಾವಣೆ ಮಾಡದಿದ್ದರೆ ನಿನ್ನನ್ನು (ಮುರಳೀಧರ್) ಹಾಗೂ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್,…

Read More

ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಅಷ್ಟೇ ಕಳೆದಿದೆ. ಆದ್ರೆ, ಇದು ಸಾಮಾನ್ಯ ಸರ್ಕಾರ ಅಲ್ಲ. 60% ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಈಗಾಗಲೇ 60% ಸರ್ಕಾರ ಅಂತಾ ಕರೆಯಲಾಗುತ್ತಿದೆ. ಕಾಂಗ್ರೆಸ್ ಶಾಸಕರೇ ಈಗ ಬಂಡಾಯ ಎದ್ದಿದ್ದಾರೆ. ರಾಜ್ಯದಲ್ಲಿ ಯಾವುದೇ ಸರಿ ಇಲ್ಲ ತೋರಿಸುತ್ತಿದೆ. ಕಾಂಗ್ರೆಸ್ ಆತಂರಿಕ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡುವುದು ಬಿಟ್ಟು, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಿದ್ದಾರೆ. ಆ ಗ್ಯಾರೆಂಟಿ ಕೂಡಾ ಸರಿಯಾಗಿ ಜಾರಿಯಾಗುತ್ತಿಲ್ಲ. ಇನ್ನು ಕಾಂಗ್ರೆಸ್ ಶಾಸಕರ ಪತ್ರಕ್ಕೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…

Read More

ಕಳೆದೊಂದು ತಿಂಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದ ಕೃಷ್ಣರಾಜಸಾಗರ, ಕೊನೆಗೂ ಬೆಂಗಳೂರಿನ ಜನತೆಗೆ ಗುಡ್‌ ನ್ಯೂಸ್ ಕೊಟ್ಟಿದೆ. ಕಳೆದ ಜೂನ್ ತಿಂಗಳ ಆರಂಭದಲ್ಲಿಯೇ ಮುಂಗಾರು ಮಳೆ ಆರಂಭವಾಗಬೇಕಿತ್ತು. ಆದ್ರೆ, ಸರಿಯಾದ ಸಮಯಕ್ಕೆ ಮುಂಗಾರು ಆರಂಭವಾಗದೇ ಇದ್ದದ್ದು, ಬೇಸಿಗೆಗಾಲದಲ್ಲಿ ಈ ಬಾರಿ ಬೆಂಗಳೂರಿನ ಜನತೆ ಕುಡಿಯುವ ನೀರಿಗೂ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಕಾವೇರಿ, ಕೆಆರ್‌ಎಸ್ ಮೂಲಕ ಬೆಂಗಳೂರಿನ ಜನತೆಗೆ ಗುಡ್‌ ನ್ಯೂಸ್ ನೀಡಿದ್ದಾಳೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಈಗಾಗಲೇ ಜಲಾಶಯ ಮಟ್ಟ 124. 80 ಅಡಿಗಳ ಪೈಕಿ 100 ಅಡಿಗಳ ಗಡಿಯನ್ನು ಜಲಾಶಯ ದಾಟಿದೆ. ಇನ್ನು ಇದೇ ಪ್ರಮಾಣದಲ್ಲಿ ಮುಂದಿನ ನಾಲ್ಕೈದು ದಿನಗಳು ಮಳೆ ಸುರಿದ್ರೆ, ಜಲಾಶಯ ಭರ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೂಲಗಳು ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC…

Read More

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ದೇಶದ ನಾನಾ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಲನಾಡಿನಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಇನ್ನು ನಿನ್ನೆ ಇಡೀ ದಿನ ಬೆಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿದಿದ್ದು, ಇನ್ನು ಎರಡು ದಿನಗಳ ಕಾಲ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ವಾತಾವರಣ ಬದಲಾಗಿದೆ. ಕಳೆದ ಎರಡೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಬೆಳ್ಳಂಬೆಳಿಗ್ಗೆ ಹಾಗೂ ರಾತ್ರಿಯ ಸಂದರ್ಭದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು, ಇದು ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂಬ ಮಾಹಿತಿ ಇದೆ. ಇನ್ನು ಇಷ್ಟು ದಿನ ಹಾಕದೇ ಸ್ಟೇಟರ್‌ ಗಳನ್ನು ಜನರ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕನಕಪುರ ಮುಖ್ಯರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ ಮೂರು ಬಾಕ್ಸ್ ನೋಟುಗಳು ಪತ್ತೆಯಾಗಿದೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಎರಡು ಬಾಕ್ಸ್ ಹಾಗೂ ಒಂದು ಸೂಟ್ ಕೇಸ್ ನಲ್ಲಿ ಕಲರ್ ಜೆರಾಕ್ಸ್ ನೋಟುಗಳು ಮಂಗಳವಾರ ಪತ್ತೆಯಾಗಿವೆ. ಸಾರ್ವಜನಿಕರು ನೋಡಿ ಸಂಚಾರಿ ಪೋಲೀಸರ ಗಮನಕ್ಕೆ ತಂದಿದ್ದು, ಸಂಚಾರಿ ಪೊಲೀಸ್ ರಿಂದ ಕೂಡಲೇ ತಲಘಟ್ಟಪುರ ಠಾಣೆ ಪೊಲೀಸಿಗೆ ಮಾಹಿತಿ ಕೊಟ್ಟಿದ್ದರು. ಕೂಡಲೆ ಸ್ಥಳಕ್ಕೆ ಹೋಗಿ ಜೆರಾಕ್ಸ್ ನೋಟುಗಳನ್ನ ಪರಿಶೀಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್ ನೋಟುಗಳು ಅಲ್ಲಿಗೆ ಹೇಗೆ ಬಂದವು ಎಂಬುದರ ಬಗ್ಗೆ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಖಾನಾಪುರ: ಭತ್ತದ ನಾಟಿಗೆ ಸಿದ್ದತೆ ಮಾಡುವ ಸಂದರ್ಭದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತನೋರ್ವ ಮೃತಪಟ್ಟ ಘಟನೆ ಖಾನಾಪುರ ತಾಲ್ಲೂಕಿನ ತಿವೋಲಿ ಎಂಬ ಗ್ರಾಮದಲ್ಲಿ ಸಂಭವಿಸಿದೆ. ಪಾಂಡುರಂಗ ಸದೋಬಾ ಲಾಡಗಾಂವ್ಕರ್ (ನಿವೃತ್ತ ಶಿಕ್ಷಕ) ಮೃತ ದುರ್ದೈವಿಯಾಗಿದ್ದು ಅವರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ‌. ಸ್ಥಳಕ್ಕಾಗಮಿಸಿದ ಮಾಜಿ ಶಾಸಕಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಹಾಗೂ ಖಾನಾಪುರ ಪೊಲೀಸರು ಒಳಗೊಂಡು ಪಾರ್ಥಿವ ಶರೀರವನ್ನು ತಿವೋಲಿವಾಡಕ್ಕೆ ತರಲಾಗಿದ್ದು, ವೈದ್ಯಕೀಯ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ಆಂಬ್ಯುಲೆನ್ಸ್‌ ನಲ್ಲಿ ಕಳುಹಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಸಚಿವರು ಸಂದೇಶ ರವಾನಿಸಿದ್ದಾರೆ. ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಿಲ್ಲಾಡಳಿತ ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರೂ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಬೇಕು. ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ. ಇಂತಹ ಸಂದರ್ಭಗಳಲ್ಲಿ ಗುಡ್ಡ ಕುಸಿಯುವ ಸಂಭವ ಇರುತ್ತದೆ. ಆದ್ದರಿಂದ ಪ್ರವಾಸಿಗರು ಮತ್ತು ಗುಡ್ಡದ ಮೇಲೆ ವಾಸಿಸುವ…

Read More

ತುಮಕೂರು: ಕಾಂಗ್ರೆಸ್ ಶಾಸಕರಿಗೆ ಸಚಿವರ ಮೇಲೆ ಅಸಮಾಧಾನ, ಸಿಎಂ‌ಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನನಗೆ ಅದರ ಬಗ್ಗೆ ಗೊತ್ತಿಲ್ಲ, ನಿನ್ನೆ ಸಿಎಂ ಸಿಕ್ಕಿದ್ರು, ಅದರ ಬಗ್ಗೆ ಏನೂ ಮಾತಾಡಿಲ್ಲ ಎಂದು ತಿಳಿಸಿದ್ರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಂಗಾಪುರ ಆಪರೇಷನ್ ವಿಚಾರದಲ್ಲಿ ಅದರ ಬಗ್ಗೆ ನಮ್ಮ ಅಧ್ಯಕ್ಷರು ಮಾತನಾಡಿದಾರಲ್ಲ, ಅವರಿಗೆ ಅದರ ಬಗ್ಗೆ ವಿಶೇಷವಾಗಿ ಮಾಹಿತಿ ಇರಬಹುದು ಅಲ್ಲಿ ಏನೇನಾಗ್ತಾ ಇದೆ ಅನ್ನೋದು, ಖಂಡಿತವಾಗಿಯೂ ಜೆಡಿಎಸ್ ಬಿಜೆಪಿ ಒಂದಾಗಿರೋದು ಸತ್ಯ, ಅವರು ಷಡ್ಯಂತ್ರ ಮಾಡ್ತಾ ಇರಬಹುದು. ಆದರೆ ನಾವು ಒಗ್ಗಟ್ಟಾಗಿದ್ದೇವೆ ಎಂದರು. ಐದು ವರ್ಷ ನಾವು ಅಧಿಕಾರ ನಡೆಸ್ತಿವಿ. ಒಳ್ಳೆ ಆಡಳಿತ ಕೊಡ್ತಿವಿ, ಆ ಆತಂಕ ಯಾವುದೂ ಇಲ್ಲ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದರು. ಕೋವಿಡ್ ಕಾಲದಲ್ಲಿ ನಡೆದ ಎಲ್ಲ ಅವ್ಯವಹಾರಗಳನ್ನು ತನಿಖೆ ಮಾಡಿಸುತ್ತೇವೆ. ಇದು ದ್ವೇಷದ ರಾಜಕಾರಣ ಅಲ್ಲ,  ತನಿಖೆ ಮಾಡಿಸುವ ಬಗ್ಗೆ ನಾವು ಚುನಾವಣೆಯಲ್ಲೇ…

Read More

ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿಯ ಪುರ ಗ್ರಾಮದ ಬಳಿ ಇರುವ ತೊರೆಯಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದ ಪುರ ಗ್ರಾಮದ ರೈತ ಗೋವಿಂದಯ್ಯ ಬಿನ್ ಮೂಡಲಗಿರಿ ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ತೊರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಕುಣಿಗಲ್ ಉಪ ವಿಭಾಗದ ಡಿವೈಎಸ್ಪಿ ಲಕ್ಷ್ಮಿಕಾಂತ್, ತುರುವೇಕೆರೆ ಪೊಲೀಸ್ ಉಪ ನಿರೀಕ್ಷಕ ಕೆ.ಗಣೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಮೃತದೇಹವನ್ನು ನೀರಿನಿಂದ ಹೊರಕ್ಕೆತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ , ಮೃತ ವ್ಯಕ್ತಿಯ ಕುಟುಂಬದವರ ಹಾಗೂ ಆಕ್ರಂದನ ಮುಗಿಲು ಮುಟ್ಟಿತ್ತು.  ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿದರೆ ಹಿಂದೂ, ಕ್ರೈಸ್ತ ಸಮುದಾಯಕ್ಕಿಂತ ಮುಸ್ಲಿಮರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಸುಪ್ರೀಂ ಕೋರ್ಟ್‌ ವಕೀಲ ಅಶ್ವಿನಿ ಉಪಾಧ್ಯಾಯ ಹೇಳಿದರು. ಸ್ಪಂದನ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ಏಕರೂಪ ನಾಗರಿಕ (ಯುಸಿಸಿ) ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಪರ ಮತ್ತು ವಿರೋಧ ವ್ಯಕ್ತಪಡಿಸುತ್ತಿರುವ ಹಲವರಿಗೆ ಸಮರ್ಪಕ ಮಾಹಿತಿ ಇಲ್ಲ. ಈ ಸಂಹಿತೆ ಜಾರಿಯಾದರೆ ಹಿಂದೂಗಳು ಸೇರಿ ಎಲ್ಲರ ಮದುವೆ ನೋಂದಣಿ ಕಡ್ಡಾಯವಾಗಲಿದೆ. ಪಾರ್ಸಿ ಸಮುದಾಯದ ಮಹಿಳೆಯರು ಅನ್ಯ ಧರ್ಮಿಯರೊಂದಿಗೆ ಮದುವೆಯಾದರೂ ಸಹ ಆಸ್ತಿ ಹಕ್ಕು ದೊರೆಯಲಿದೆ. ಜತೆಗೆ ಮುಸ್ಲಿಂ ಮಹಿಳೆಯರಿಗೆ ಈ ಎಲ್ಲ ಹಕ್ಕುಗಳ ಜತೆಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದು ಪ್ರತಿಪಾದಿಸಿದರು. ‘ಭಾರತದ ನಾಗರಿಕತ್ವ ಪಡೆದುಕೊಳ್ಳಲು ಸ್ಪಷ್ಟ ವ್ಯಾಖ್ಯಾನ ರೂಪಿಸಬೇಕು. ಮತದಾನದ ಹಕ್ಕು ಪಡೆಯಬೇಕಾದರೆ ಸಂವಿಧಾನ ನಿಷ್ಠೆ ಪ್ರದರ್ಶಿಸುವ ಅರ್ಜಿ ತುಂಬಬೇಕು. ದೇಶದಲ್ಲಿ ಧರ್ಮದ ವಿಜಯವಾಗಬೇಕಾದರೆ ಕೇಂದ್ರ ಸರ್ಕಾರ ಏಕರೂಪ ನಾಗರಿಕ ಸಂಹಿತೆ, ಏಕಧರ್ಮ ಸಂಹಿತೆ, ಸಮಾನ ಜನಸಂಖ್ಯೆ ಸಂಹಿತೆ ಎಂಬ ಮೂರು…

Read More