Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ನಗರದ ವಿವಿಧೆಡೆ ಗಾಂಜಾ, ಮಾದಕ ವಸ್ತು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಗಸಂದ್ರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬೆಂಗಳೂರಿನ ಶೇಖ್ ಸಾಹಿಲ್ ಅಕ್ಟರ್ (24), ಫಾರೂಖ್ ಹುಸೇನ್ (45), ನಗರದ ವಸೀಂ (27), ರೋಷನ್ ಸಮೀರ್ (29), ನಯಿಮ್ (38), ಮೈಸೂರಿನ ಶೋಯೆಬ್ (22) ಎಂಬುವರನ್ನು ತಿಲಕ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 711 ಲಕ್ಷ ಮೌಲ್ಯದ 8 ಕೆ.ಜಿ ಗಾಂಜಾ ಸೊಪ್ಪು, 178 ಸಾವಿರ ಬೆಲೆಯ 12 ಗ್ರಾಂ ಎಂಡಿಎಂಎ ಮಾದಕ ವಸ್ತು, 714 ಲಕ್ಷದ 2 ಕಾರು ಜಪ್ತಿ ಮಾಡಿದ್ದಾರೆ. ‘ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ ರಾಜ್ಯಗಳಿಂದ ಗಾಂಜಾ, ಮಾದಕ ವಸ್ತು ತರುತ್ತಿದ್ದರು. ನಗರದ ವಿವಿಧೆಡೆ, ಹೊರವಲಯದ ಶಾಲಾ– ಕಾಲೇಜು ಸಮೀಪ ಮಾರಾಟ ಮಾಡುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಗುರುವಾರ ತಿಳಿಸಿದರು. ತಿಲಕ್ ಪಾರ್ಕ್ ಠಾಣೆ ಇನ್ ಸ್ಪೆಕ್ಟರ್ ಜಿ.ಪುರುಷೋತ್ತಮ, ಸಬ್ ಇನ್ಸ್ಪೆಕ್ಟರ್ ಗಳಾದ ಸಂಜಯ್ ಕುಮಾರ್ ಕಾಂಬ್ಳೆ, ಪದ್ಮಾವತಿ,…
ತಿಪಟೂರು: ತಾಲ್ಲೂಕಿನ ಹಾಲುಗೌಡನಕಟ್ಟೆ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.1 ಲಕ್ಷ ಮೊತ್ತದ ಡಿಡಿ ಮಂಜೂರುಗೊಳಿಸಿದ್ದಾರೆ ಎಂದು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ. ತಿಳಿಸಿದರು. ಇದೇ ವೇಳೆ ಗ್ರಾಮಸ್ಥರಿಗೆ ಚೆಕ್ ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಆನಂದ್ ಕುಮಾರ್,ಚಂದ್ರಯ್ಯ, ಗುಡಿಗೌಡರಾದ ಲೋಕೇಶ್ ಕಮಿಟಿ ಅಧ್ಯಕ್ಷರಾದ ಮಹಲಿಂಗಪ್ಪ, ಸದಸ್ಯರಾದ ಚಿಕ್ಕಣ್ಣ ಯೋಜನೆಯ ತಾಲ್ಲೂಕು ಕೃಷಿ ಅಧಿಕಾರಿ ಪ್ರಮೋದ್ ಕುಮಾರ್, ಮೇಲ್ವಿಚಾರಕಿ ರಮ್ಯಾ, ಸೇವಾಪ್ರತಿನಿಧಿ ಮಂಜುಳ ಹಾಗೂ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬೆಳಗಿನ ಜಾವ ತಾಪಮಾನ ತೀವ್ರವಾಗಿ ಇಳಿಕೆಯಾಗಿದ್ದು, ಚಳಿ ಜನರನ್ನು ಗಢಗಢ ನಡುಗಿಸುವಂತಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಈ ಸ್ಥಿತಿ ಇಂದು ಕೂಡ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಭಾಗಗಳಲ್ಲಿಯೂ ಸಹ ಶೀತಗಾಳಿ ಬೀಸುವ ಸಾಧ್ಯತೆ ಇದೆ. ಚಳಿಗಾಲ ಮುಂದುವರೆದಂತೆ ಬೆಂಗಳೂರಿನಲ್ಲಿ ತಾಪಮಾನ ಕಡಿಮೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಾದ ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ತೀವ್ರ ಶೀತಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಂತಹ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಶೀತಗಾಳಿ ಬೀಸಲಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಶೀತ ವಾತಾವರ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ 12.9°…
ಮಂಡ್ಯ : ಸಕ್ಕರೆಯ ನಾಡು ಮಂಡ್ಯ ನಗರ ಪ್ರವೇಶಿಸುತ್ತಿದ್ದಂತೆಯೇ ಹಸಿರಿನಿಂದ ಕಂಗೊಳಿಸುವ ಸುಂದರವಾದ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಉದ್ಯಾನವನವನ್ನು ದೇವವನವನ್ನಾಗಿಸಿದವರು ಕ್ರಿಯಾಶೀಲ ಪತ್ರಕರ್ತ ಎಂ.ಶಿವಕುಮಾರ್. ಪಾಳುಬಿದ್ದಿದ್ದ ಒಂದೂವರೆ ಎಕರೆಯಷ್ಟು ಭೂಮಿಯನ್ನು ಮಂಡ್ಯ ನಗರಸಭೆಯಿಂದ ದತ್ತು ಪಡೆದು ಕಳೆದ ಇಪ್ಪತ್ತು ವರ್ಷಗಳಿಂದ ಸಸ್ಯ ಸೇವೆಯನ್ನೇ ಶಿವಪೂಜೆಯಂತೆ ಮಾಡಿ, ವಿವಿಧ ಬಗೆಯ ನೂರಾರು ಔಷಧೀಯ ಸಸಿಗಳು, ಕಾಡುಜಾತಿಯ ಮರಗಳು, ಅಲಂಕಾರಿಕ ಸಸಿಗಳನ್ನು ನೆಟ್ಟು ಮಕ್ಕಳಂತೆ ಪೋಷಿಸಿ ಸದ್ದುಗದ್ದಲವಿಲ್ಲದೆ ಸಸ್ಯಕಾಶಿಯನ್ನೇ ಸೃಷ್ಟಿಸಿದ ಕಾಯಕ ಯೋಗಿ ಪರಿಸರವಾದಿ ಪತ್ರಕರ್ತ ಎಂ.ಶಿವಕುಮಾರ್. ಪ್ರಧಾನಿ ಮೋದಿಯವರ ಜೂನ್.21ರ ವಿಶ್ವಯೋಗ ದಿನಾಚರಣೆಯಿಂದ ಪ್ರಭಾವಿತರಾಗಿ ಪ್ರತಿನಿತ್ಯ ವಾಯು ವಿಹಾರಕ್ಕೆ ಬರುವ ನೂರಾರು ಮಂದಿ ವಯೋವೃದ್ದರು, ಸಾರ್ವಜನಿಕರ ಅನುಕೂಲಕ್ಕಾಗಿ ಸಿದ್ದಗಂಗಾ ಶ್ರೀಗಳ ಉದ್ಯಾನವನದಲ್ಲಿ ಧ್ಯಾನಕೇಂದ್ರ ನಿರ್ಮಾಣ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಕರಾಟೆ, ಧ್ಯಾನ ಹಾಗೂ ಯೋಗಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟು ಆರೋಗ್ಯಕರ ಸಮಾಜಕ್ಕೆ ಸಹಕಾರಿಯಾಗಿದ್ದಾರೆ. ತಮ್ಮ ಜನ್ಮ ದಿನಾಚರಣೆಯನ್ನು ಸ್ಮಶಾನ, ಸರ್ಕಾರಿ ಶಾಲೆಯ ಆವರಣ ಹಾಗೂ ಸ್ಲಂಗಳಲ್ಲಿ ಸಸಿನೆಡುವ ಮೂಲಕ ಆಚರಿಸಿಕೊಂಡು ರೈತರಿಗೆ ತೆಂಗಿನ…
ಕೊರಟಗೆರೆ : ಭಾರತಾವು ಒಂದು ಬಲಿಷ್ಟ ರಾಷ್ಟ್ರ ಪ್ರಗತಿಪರ ರಾಷ್ಟ್ರ ಭವಿಷ್ಯದ ಭಾರತ ಕನಸನ್ನು ಹೊತ್ತಿರುವ ಪ್ರಧಾನ ಮಂತ್ರಿಗಳ ಸಂಕಲ್ಪವನ್ನು ವಿದ್ಯಾರ್ಥಿಗಳು ನನಸು ಮಾಡಬೇಕು, ಎನ್ ಡಿಎ ಮೈತ್ರಿಕೂಟದಿಂದ ವಿತರಿಸುತ್ತಿರುವ ನೋಟ್ ಬುಕ್ ನ್ನು ಸದ್ಭಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಎನ್ ಡಿಎ ಪಕ್ಷವು ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನೋಟ್ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿ.ಸೋಮಣ್ಣನವರು ತುಮಕೂರು ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ…
ತುಮಕೂರು: ಉದ್ಯೋಗದಾತರ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ಇದರ ಹಿಂದಿನ ಪಾವತಿಗಳನ್ನು ಕ್ರಮಬದ್ಧಗೊಳಿಸಲು ನವೆಂಬರ್ 1ರಿಂದ ಏಪ್ರಿಲ್ 30ರವರೆಗೆ 6 ತಿಂಗಳ ಅವಧಿಯಲ್ಲಿ “ನೌಕರರ ದಾಖಲಾತಿ ಅಭಿಯಾನ – 2025” (EEC – 2025) ನಡೆಸಲಾಗುತ್ತಿದ್ದು, ಈ ಸಂಬಂಧ ತುಮಕೂರಿನ ಕೈಗಾರಿಕಾ ಪ್ರದೇಶ ವಸಂತನರಸಾಪುರದ ಇಂಡಿಯನ್ ಫುಡ್ ಪಾರ್ಕ್(India Food Park) ನಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಈ ಕೆಳಗಿನ ಮಾಹಿತಿಯನ್ನು ಹಂಚಿಕೊಳ್ಳಲಾಯಿತು: ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ ಯೋಜನೆ (PMVBRY) ಭಾಗ : ಎ ಹೊಸ ಉದ್ಯೋಗಿಗಳಿಗೆ ಪ್ರೋತ್ಸಾಹಧನ » ತಿಂಗಳಿನ ವೇತನ (ಮೂಲ + DA ) ಕ 15,000 ವರೆಗೆ ಒಂದು ಬಾರಿ ಪ್ರೋತ್ಸಾಹಧನ, 2 ಕಂತುಗಳಲ್ಲಿ > 6 ತಿಂಗಳ ಸೇವೆಯ ನಂತರ ಪ್ರಥಮ ಕಂತಿನ ಪಾವತಿ 12 ತಿಂಗಳ ಸೇವೆಯ ನಂತರ ಮತ್ತು EPFO ಪೋರ್ಟಲ್ನಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಪೂರ್ಣಗೊಳಿಸಿದ ನಂತರ ದ್ವಿತೀಯ ಕಂತಿನ ಪಾವತಿ > ಅರ್ಹತೆಯ…
ಬೀದರ್: ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಬೀದರ್ ನಗರದ ಚಿಕ್ಕಪೇಠ್ನಲ್ಲಿರುವ ಡಿಸಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಡಿಸಿ ಕಚೇರಿಯಲ್ಲಿ ಪೋಲಿಸರು ಹೈಅಲರ್ಟ್ ಆಗಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಡಿಸಿ ಕಚೇರಿಯ ಸಿಬ್ಬಂದಿಯನ್ನು ಹೊರಗಡೆ ಕಳಿಸಿ, ಪೊಲೀಸರು ಕಚೇರಿಯನ್ನ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್ಪಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಹಲವು ಅಧಿಕಾರಿಗಳು ಆಗಮಿಸಿ, ಪರಿಶೀಲನೆ ಮಾಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಚಿಕ್ಕಬಳ್ಳಾಪುರ: ಚಿರತೆ ಮರಿಯೊಂದು ಗುಡಿಬಂಡೆ ಪೊಲೀಸ್ ಠಾಣೆಯ ಆವರಣದಲ್ಲಿದ್ದ ಹಳೆಯ ಕಾರಿನಲ್ಲಿ ಅವಿತುಕುಳಿತ ಘಟನೆ ನಡೆದಿದೆ. ಜಿಲ್ಲೆಯ ಗುಡಿಬಂಡೆ ಪೊಲೀಸ್ ಠಾಣೆಯ ಆವರಣದಲ್ಲಿ ಚಿರತೆ ಮರಿ ಓಡಾಡಿದ್ದನ್ನು ಪೊಲೀಸರು ಕಂಡಿದ್ದರು. ಜನರನ್ನ ಕಂಡ ಚಿರತೆ ಭಯದಿಂದ ಪೊಲೀಸ್ ಠಾಣೆಯ ಆವರಣದಲ್ಲೇ ಇದ್ದ ಹಳೆಯ ಕಾರಿನಲ್ಲಿ ಹತ್ತಿ ಅವಿತುಕೊಂಡಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಆಗಮಿಸಿದ್ದು, ಗುಡಿಬಂಡೆ ಪೊಲೀಸರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, ಬಲೆ ಹಾಕಿ ಚಿರತೆ ಮರಿಯ ಸೆರೆಗೆ ಯತ್ನ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯಲ್ಲಿರುವ ಲಂಬಾಣಿ (ಬಂಜಾರ) ಸಮುದಾಯಕ್ಕೆ ದಶಕಗಳಿಂದಲೂ ಒಂದು ಸ್ವಂತ ಸಮುದಾಯ ಭವನದ ಅಗತ್ಯವಿತ್ತು. ಅನೇಕ ವರ್ಷಗಳ ಹೋರಾಟದ ಫಲವಾಗಿ, ತುಮಕೂರು ನಗರದ ಸರಸ್ವತಿಪುರಂನಲ್ಲಿ ಬೃಹತ್ ಮತ್ತು ಭವ್ಯವಾದ ಜಿಲ್ಲಾ ಬಂಜಾರ ಭವನ ಶನಿವಾರ ಉದ್ಘಾಟನೆಗೆ ಸಿದ್ಧಗೊಂಡಿದೆ. ಜಿಲ್ಲೆಯಲ್ಲೇ ತಮ್ಮದೇಯಾದ ಆದ ಪ್ರಾಬಲ್ಯವನ್ನು ಹೊಂದಿರುವ ಬುಡಕಟ್ಟು ಲಂಬಾಣಿ ಸಮುದಾಯ, ಸಂಸ್ಕೃತಿ, ಕಲೆ, ಪರಂಪರೆ ಮತ್ತು ಐತಿಹಾಸಿಕ ಹೆಗ್ಗಳಿಕೆಗಳನ್ನು ಗಮನಿಸಿದಾಗ, ಇಂತಹ ಭವನವು ಬಹುಕಾಲದಿಂದ ಬೇಕಾಗಿತ್ತು. ಭಾರತದ ಶ್ರೀಮಂತ ಸಂಸ್ಕೃತಿಯಲ್ಲಿ ಬಂಜಾರ ಸಮುದಾಯವು ವಿಶಿಷ್ಟ ಸ್ಥಾನವಹಿಸಿದೆ. ಅವರ ಉಡುಗೆ–ತೊಡುಗೆ, ಹಾಡು–ನೃತ್ಯ, ಕಸೂತಿ ಕಲೆ ಹಾಗೂ ಸಂಗೀತ ಎಲ್ಲವೂ ಅನನ್ಯತೆ ಹೊಂದಿವೆ. ಪರಂಪರೆಯ ಮೌಲ್ಯಗಳನ್ನು ಕಾಪಾಡಿಕೊಂಡು ಬದುಕುತ್ತಿರುವ ಈ ಜನಾಂಗ, ಸಾಮಾಜಿಕ ಮತ್ತು ಆರ್ಥಿಕ ಹಿನ್ನಡೆಯ ನಡುವೆಯೂ ತನ್ನ ಗುರುತನ್ನು ಉಳಿಸಿಕೊಂಡಿದೆ. ಜಿಲ್ಲೆಯ ಬಹುತೇಕ ತಾಂಡಗಳಲ್ಲಿ ವಾಸವಾಗಿರುವ ಜನರು ರಾಜಕೀಯ ಮತ್ತು ಶೈಕ್ಷಣಿಕವಾಗಿಯೂ ಹಿಂದುಳಿದ ಸ್ಥಿತಿಯಲ್ಲಿ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಸಂಘಟನೆ ಮತ್ತು ಜಾಗೃತಿಯ ಚಟುವಟಿಕೆಗಳು ವೇಗ ಪಡೆದಿವೆ. ಸ್ವಾತಂತ್ರ್ಯ ನಂತರ 75…
ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು 1.15 ಲಕ್ಷ ಲಂಚದ ಹಣ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಒಟ್ಟು 1.25 ಲಕ್ಷ ಲಂಚಕ್ಕೆ ಒತ್ತಾಯಿಸಿದ್ದು. ಮುಂಗಡವಾಗಿ 10 ಸಾವಿರ ಹಣ ಪಡೆದುಕೊಂಡಿದ್ದರು. ಗುರುವಾರ ಮಧ್ಯಾಹ್ನ ಉಳಿದ 1.15 ಲಕ್ಷ ಹಣ ತೆಗೆದುಕೊಳ್ಳುವ ಸಮಯದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ನಗರದ ವಿಜಯನಗರ ಬಡಾವಣೆಯ ಎಂ.ಎಸ್.ಚನ್ನಬಸವೇಶ್ವರ ಅವರು ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಶಿವಲಿಂಗ ಇಂಡಸ್ಟ್ರೀಸ್ ಸ್ಥಾಪಿಸಿ ಸಣ್ಣ ಉದ್ದಿಮೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಕಂಟ್ರೋಲ್ ಪ್ಯಾನಲ್ ತಯಾರಿಸುತ್ತಿದ್ದಾರೆ. ಮೊದಲ ಬಾರಿಗೆ ಸಣ್ಣ ಉದ್ದಿಮೆ ಆರಂಭಿಸಿದವರಿಗೆ ರಾಜ್ಯ ಸರ್ಕಾರದಿಂದ ಸಹಾಯ ಧನ ನೀಡಲಾಗುತ್ತಿದೆ. ಹಾಗಾಗಿ ಸಹಾಯ ಧನ ಮಂಜೂರು ಮಾಡುವಂತೆ ಕೋರಿ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಜಂಟಿ ನಿರ್ದೇಶಕರಿಗೆ ಅರ್ಜಿ ಸಲ್ಲಿಸಿದ್ದರು. ಚನ್ನಬಸವೇಶ್ವರ ಅವರಿಗೆ 18.75 ಲಕ್ಷ ಸಹಾಯ ಧನ ಮಂಜೂರು ಮಾಡಬೇಕಿತ್ತು. ಈ…