Author: admin

ತುಮಕೂರು: ಬಯಲು ಸೀಮೆಯ ಏಳು ಜಿಲ್ಲೆಗಳ ಜನರ ದಾಹ ನೀಗಿಸುವ ಎತ್ತಿನಹೊಳೆ ನೀರಾವರಿ ಯೋಜನೆ ಕೊನೆಯ ಹಂತಕ್ಕೆ ಬಂದಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ. ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಇಲ್ಲಿ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು. 2012ರಲ್ಲಿ ಆರಂಭವಾದ ಎತ್ತಿನಹೊಳೆ ಯೋಜನೆಯ ಶೇ. 90ರಷ್ಟು ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಇಂತಹ ಸಮಯದಲ್ಲಿ ಕೇಂದ್ರ ಅಡ್ಡಿಪಡಿಸುತ್ತಿದ್ದು, ಈ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರ ಜತೆಗೆ ಚರ್ಚಿಸಲು ಡಿ. 13– 14ರಂದು ರಾಜ್ಯ ಸರ್ಕಾರ ದೆಹಲಿಗೆ ನಿಯೋಗ ಕೊಂಡೊಯ್ಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯೋಜನೆಗೆ ನಿಗದಿಗಿಂತ ಹೆಚ್ಚು ಭೂಮಿ ಬಳಕೆ ಮಾಡಲಾಗಿದೆ. ಹಸಿರು ನ್ಯಾಯ ಪೀಠದ ಅನುಮತಿ ಪಡೆದಿಲ್ಲ. ಅರಣ್ಯ ಪ್ರದೇಶ ಬಳಕೆ ಮಾಡಿಕೊಳ್ಳಲಾಗಿದೆ, ಇನ್ನಿತರ ಅನಗತ್ಯ ತಕರಾರು ತೆಗೆದು ಕಾಮಗಾರಿ ವಿಳಂಬವಾಗುವಂತೆ ಮಾಡುತ್ತಿದೆ. ಕುಡಿಯುವ ನೀರಿನ ಯೋಜನೆಗೆ ಸಹಕಾರ ನೀಡುವುದು ಬಿಟ್ಟು ಅಡ್ಡಿಪಡಿಸುತ್ತಿದೆ. ಈ ಬಗ್ಗೆ ರಾಜ್ಯದ ಸಂಸದರು ಪಕ್ಷಾತೀತವಾಗಿ ಧ್ವನಿಯೆತ್ತಿ ಕೇಂದ್ರದ…

Read More

ಬೆಳಗಾವಿ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಪರಿಷತ್ ನಲ್ಲಿ ಹೇಳಿದರು. ಪ್ರಶೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ರಮೇಶ್ ಬಾಬು ಅವರು ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳು ಯಾವುವು ಹಾಗೂ ಎಷ್ಟು ಯೋಜನೆಗಳು ಪ್ರಗತಿಯಲ್ಲಿವೆ ಎನ್ನುವ ಪ್ರಶ್ನೆಗೆ ಉತ್ತರಿಸಿದರು. ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು ಬುದ್ದಿವಂತರು ಎಂದು ನಾನು ತಿಳಿದುಕೊಂಡಿರಲಿಲ್ಲ. ಆದರೂ ಈಗ ಸ್ಪೆಷಲ್ ಪ್ಯಾಕೇಜ್ ನೀಡಿ ಎಂದು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ಇದೆಲ್ಲವೂ ಆಯಿತು ಎಂದು ನಾನು ಚರ್ಚಿಸಲು ಹೋಗುವುದಿಲ್ಲ. ಪಕ್ಷ, ವ್ಯಕ್ತಿ ಎಲ್ಲವನ್ನು ಬಿಟ್ಟು ಕೆಲಸವನ್ನು ಮಾಡಿಸಿ ಕೊಂಡಿದ್ದಾರೆ ಎಂದರು. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5,300 ಕೋಟಿ ರೂ. ಹಣ ನೀಡಿದರೆ, ಸಾಕಷ್ಟು ಕೆಲಸಗಳನ್ನು ಮುಗಿಸಬಹುದು. ನಾನು ಪದೇ, ಪದೇ ಕೇಂದ್ರ ಸರ್ಕಾರ ಹಣ…

Read More

ತಿಪಟೂರು: ಪತ್ರ ಬರಹಗಾರರ ಉಳಿವಿನ ಬಗ್ಗೆ ಪತ್ರ ಬರಹಗಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಒಂದು ದಿನ ಲೇಖನ ಸಂದಿಗ್ಧತೆ ಚಳುವಳಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಪತ್ರ ಬರಹಗಾರರ ಒಕ್ಕೂಟದ ತಿಪಟೂರು ತಾಲೂಕು ಪತ್ರ ಬರಹಗಾರರ ಅಧ್ಯಕ್ಷ ಉಮೇಶ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳನ್ನು ಈಡೇರಿಸಲು ಅಗ್ರಹಿಸಿ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಿಗೆ ಪಡೆದ ಸಂಘವು ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾವೇರಿ ತಂತ್ರಾಂಶ ಒಂದು ಮತ್ತು ಎರಡರಲ್ಲಿ ಬದಲಾವಣೆ ಮಾಡಲು ಸರ್ಕಾರ ಹೊರಟಿದೆ, ಹೆಚ್ಚಿನ ಆಸ್ತಿ ವಿವರ ಬರೆಯಲು ಆಗುತ್ತಿಲ್ಲ. ಬೇರೆ ರಾಜ್ಯದಲ್ಲಿ ಇರುವಂತೆ ಪತ್ರ ಬರಹಗಾರರಿಗೂ ಲಾಗಿ ನೀಡಬೇಕು,  ಈಗಾಗಲೇ ನಮಗೆ ಸಾಕಷ್ಟು ಅನುಭವವಿದ್ದು, ಪ್ರತಿ ವರ್ಷ ನವೀಕರಣ ಮಾಡಿಕೊಳ್ಳುತ್ತಿದ್ದೇವೆ. ಅನಧಿಕೃತ ಬರಹಗಾರರಿಗೆ ಕಡಿವಾಣ ಹಾಕಬೇಕು. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು…

Read More

ಬೆಂಗಳೂರು: ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಅವರು ಉತ್ತರಿಸಿದರು. ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ ಎಂದರು. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ…

Read More

ತುಮಕೂರು: ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 325 ಬಾಲಕಿಯರು ಗರ್ಭ ಧರಿಸಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಹೇಳಿದರು. ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಬುಧವಾರ ರಾಜ್ಯ ಮಾನವ ಹಕ್ಕುಗಳ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಬಾಲಕಿಯರು ಗರ್ಭ ಧರಿಸುವ ಪ್ರಕರಣಗಳು ಹೆಚ್ಚುತ್ತಿವೆ. ಈಗಾಗಲೇ ವರದಿಯಾಗಿರುವ 325 ಪ್ರಕರಣಗಳಲ್ಲಿ 230 ಪ್ರಕರಣಗಳ ಬಗ್ಗೆ ವಯಸ್ಸಿನ ಖಾತರಿ ಪಡಿಸುವ ಪ್ರಕ್ರಿಯೆ ಜಿಲ್ಲಾ ಆಸ್ಪತ್ರೆ ಹಂತದಲ್ಲಿ ನಡೆದಿದೆ ಎಂದು ಹೇಳಿದರು. ಗಡಿ ಭಾಗಗಳಲ್ಲಿ ಪೋಕ್ಸೋ, ಬಾಲ ಗರ್ಭಿಣಿ, ಮಕ್ಕಳು ಕಾಣೆಯಾಗುವ ಪ್ರಕರಣಗಳು ಹೆಚ್ಚುತ್ತಿವೆ. ಕಾನೂನು ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಶಾಲಾ–ಕಾಲೇಜು, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು. ನಾಗರಿಕರಲ್ಲಿ ಅರಿವು ಮೂಡಿಸಿ ಮಾನವ ಹಕ್ಕು ಉಲ್ಲಂಘನೆ ಆಗದಂತೆ ತಡೆಯಬೇಕು ಎಂದು ಸಲಹೆ ಮಾಡಿದರು. ವಿದ್ಯೋದಯ…

Read More

ತುಮಕೂರು: ವಿಜ್ಞಾನ ಬಿಂದು–ಮ್ಯಾಥ್ ಲ್ಯಾಬ್ ರಾಷ್ಟ್ರೀಯ ಗಣಿತ ದಿನಾಚರಣೆ ಅಂಗವಾಗಿ ಡಿಸೆಂಬರ್ 21 ಭಾನುವಾರ ಬೆಳಿಗ್ಗೆ 9:30ರಿಂದ 11:30ರವರೆಗೆ ಸರ್ವೋದಯ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತ-ವಿಜ್ಞಾನ ಒಲಂಪಿಯಾಡ್ ಆಯೋಜಿಸಿದೆ. 1 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ.  8, 9, ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಒಲಂಪಿಯಾಡ್ ನಡೆಯಲಿದೆ. ಆಸಕ್ತರು https:// shorturl.at/Fopil ಲಿಂಕ್ ಅಥವಾ ವಾಟ್ಸಾಪ್ ಸಂಖ್ಯೆ 8660587150ರಲ್ಲಿ ನೋಂದಾಯಿಸಿಕೊಳ್ಳಲು ಡಿ.18 ಕೊನೆ ದಿನ ಆಗಿರುತ್ತದೆ. ಗಣಿತ, ವಿಜ್ಞಾನದಲ್ಲಿ ಆಸಕ್ತಿ ಮೂಡಿಸಿ, ಸರಳತೆಯಿಂದ ಸಂತಸಗೊಳಿಸುವುದು, ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸ್ಪರ್ಧಾತ್ಮಕ ಕಲಿಕೆಗೆ ಸಹಕರಿಸುವುದು, ಸಮಸ್ಯೆಗಳನ್ನು ಕಾತುರತೆಯಿಂದ ಸುಲಭವಾಗಿ ಬಿಡಿಸಲು ಮಕ್ಕಳಲ್ಲಿ ವಿಶ್ಲೇಷಣಾ ಸಾಮರ್ಥ್ಯ, ಆಲೋಚನಾ ಕ್ರಮಗಳನ್ನು ಉಂಟುಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಲಾ ಹಂತದಿಂದಲೇ ಸಿದ್ಧಗೊಳಿಸುವುದು ಒಲಂಪಿಯಾಡ್ ಉದ್ದೇಶ. ಶಿಕ್ಷಣ ಇಲಾಖೆಯ ಪಠ್ಯಕ್ರಮ ಆಧಾರದಲ್ಲಿ ತರಗತಿವಾರು ಪ್ರಶ್ನೆಗಳನ್ನು ನೀಡಲಾಗುವುದು. ಒಲಂಪಿಯಾಡ್ ವಿಜೇತರಿಗೆ ಬಹುಮಾನ, ವಿಜ್ಞಾನ ಬಿಂದು ಚಿಲ್ಡನ್ಸ್ ಕ್ಲಬ್ –ಮ್ಯಾಥ್ ಲ್ಯಾಬ್ ಚಟುವಟಿಕೆಗಳಿಗೆ ಒಂದು ವರ್ಷ ಉಚಿತ ಸದಸ್ಯತ್ವ, ರಾಜ್ಯ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ತುಮಕೂರು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘದ ಸಹಯೋಗದಲ್ಲಿ ಡಿಸೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಸ್ವತಿಪುರಂನಲ್ಲಿ ಅಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್‌.ಸಿ. ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ ಕಿತ್ತೂರುರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಗೆ ವೀರ ಮಹಿಳೆ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಪೂರಕ ದಾಖಲಾತಿಗಳೊಂದಿಗೆ ಡಿಸೆಂಬರ್ 24ರೊಳಗಾಗಿ ನೇರವಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2956624ನ್ನು ಸಂಪರ್ಕಿಸಬಹುದಾಗಿದೆ.  ಎಂದು ಇಲಾಖೆಯ ಉಪನಿರ್ದೇಶಕ ಡಾ. ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು. ತರಬೇತಿ ಪಡೆಯಲಿಚ್ಛಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ. ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.…

Read More

ತುಮಕೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಅಕ್ಷಯ ಡೆವಲಪ್ ಮೆಂಟ್ ಫೌಂಡೇಷನ್ ಮಧುಗಿರಿ ಇವರ ಸಂಯುಕ್ತಾಶ್ರಯದಲ್ಲಿ ಡಿ.13 ಮತ್ತು 14 ರಂದು ಬಾಲ ಬಹದ್ದೂರ್ ಐಟಿಐ ಕಾಲೇಜು ಸಭಾಂಗಣ, ಶಿರಾಗೇಟ್, ಮಧುಗಿರಿ ಇಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಡಿ.13ರಂದು  ಬೆಳಗ್ಗೆ 10.30ಕ್ಕೆ ನಡೆಯಲಿರುವ  ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಲಾಬ್ ಬಹದ್ದೂರ್ ವಿದ್ಯಾಸಂಸ್ಥೆ  ಕಾರ್ಯದರ್ಶಿ ಪ್ರಕಾಶ್ ಬಾಬು ಎಂ.ಎಲ್. ವಹಿಸಲಿದ್ದು, ನಟ ಹನುಮಂತೇಗೌಡ  ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಾ.ರವಿಕುಮಾರ್ ನೀಹ, ಪ್ರೊ.ಮ.ಲ.ನ.ಮೂರ್ತಿ, ಡಾ. ನಳಿನ ಎನ್., ಡಾ.ಗೋವಿಂದರಾಯ ಎಂ., ಡಾ.ಮಂಜುನಾಥ್‌ ಬುಡಸನಹಳ್ಳಿ, ಮಲ್ಲಿಕಾರ್ಜುನಪ್ಪ ಬಿ.ಎಲ್., ಈಶ್ವರ ಕು. ಮಿರ್ಜಿ, ಡಾ.ಮಂಜುನಾಥ್ ಟಿ.ಹೆಚ್., ಬಿ.ಮಂಜುನಾಥ್‌, ಪಿ.ವಿ.ಹನುಮಂತರಾಯಪ್ಪ ಆಗಮಿಸುವರು. ನಂತರ ರತ್ನ ಯುವರಾಜ್ ಅಬ್ಬತ್ತನಹಳ್ಳಿ ಇವರಿಂದ ಕನ್ನಡ ಗೀತೆ ಮತ್ತು ಜಾನಪದ ಗೀತೆಗಳ ಗಾಯನ. ಡಿ. 13 ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ದೇಶ: ಸಾಂಸ್ಕೃತಿ ನಿರೂಪಣೆ ಕುರಿತು ಡಾ. ರವಿಕುಮಾರ್ ನೀಹ, ರೆಟ್ರೋ ಸಿನಿಮಾಗಳು …

Read More