Subscribe to Updates
Get the latest creative news from FooBar about art, design and business.
- ತುಮಕೂರು: ಮೇ 15ರಂದು ಇತಿಹಾಸೋತ್ಸವ
- ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
- ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
- ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
- ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ: 44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
- ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
- ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
Author: admin
ಬೆಂಗಳೂರಿನಲ್ಲಿ ಕ್ರಿಶ್ಚಿಯನ್ ಧರ್ಮಗುರು ಪೀಟರ್ ಮಚಾಡೋ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಗುರುವನ್ನು ಭೇಟಿ ಮಾಡಿದರು. ಮಿಲ್ಲರ್ಸ್ ರಸ್ತೆಯಲ್ಲಿರೋ ಬಿಷಪ್ ನಿವಾಸಕ್ಕೆ ಭೇಟಿ ನೀಡಿದ ಸಿಎಂಗೆ ಹೂಗುಚ್ಛ ನೀಡಿದ ಧರ್ಮಗುರು ಡಾ. ಪೀಟರ್ ಮಚಾಡೋ ಬರಮಾಡಿಕೊಂಡರು. ಸಿಎಂ ಭೇಟಿ ಬಗ್ಗೆ ಜಾರ್ಜ್ ಸ್ಪಷ್ಟನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕ್ರಿಶ್ಚಿಯನ್ ಬಿಷಪ್ ಅನ್ನು ಭೇಟಿಯಾಗಿ ಆಶೀರ್ವಾದ ತಗೊಂಡಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ಬೆಂಗಳೂರಿನಲ್ಲಿ ಮಾತನಾಡಿ, ಇದು ಸೌಹರ್ದಯುತ ಭೇಟಿ ಎಂದು ತಿಳಿಸಿದರು. ಸುತ್ತೂರು ಶ್ರೀ ಸೇರಿದಂತೆ ಎಲ್ಲಾ ಧರ್ಮದ ಗುರುಗಳನ್ನು ಭೇಟಿಯಾಗಿದ್ದಾರೆ. ಅದೇ ರೀತಿ ಇಂದು ಮುಸ್ಲಿಂ ಧರ್ಮಗುರುಗಳು ಮತ್ತು ಕ್ರಿಶ್ಚಿಯನ್ ಧರ್ಮಗುರುಗಳನ್ನು ಭೇಟಿಯಾಗಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಿಎಂಗೆ ಸಚಿವ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸ್ಥಳೀಯ ಮುಖಂಡರ ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಮೊಗ್ಗ: ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶ ಪೂರ್ವಕವಾಗಿ ಗೊಂದಲ ಉಂಟು ಮಾಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲಿಕ್ಕೆ ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ. ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ. ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ತಾಲೂಕಿನ ಮಾಯಸಂದ್ರ ಟಿ.ಬಿ.ಕ್ರಾಸ್ ನಲ್ಲಿರುವ ಎಸ್ ಬಿಜಿ ಮಹಾ ವಿದ್ಯಾಲಯದ ದೈಹಿಕ ಶಿಕ್ಷಕರಾದ ಉದಯ್ ಕುಮಾರ್ ನೇತೃತ್ವದ ಕರ್ನಾಟಕದ ತಂಡ ಟೇಬಲ್ ಟೆನಿಸ್ ತಂಡ ರಾಷ್ಟ್ರಮಟ್ಟದ ಚಿನ್ನದ ಪದಕವನ್ನು ಗೆದ್ದಿದೆ. ಇದೇ ತಿಂಗಳ ದಿನಾಂಕ 6 ರಿಂದ 13 ರವರೆಗೆ ಭೋಪಾಲ್ ನ ,ಟಿ.ಟಿ.ಸ್ಟೇಡಿಯಂನಲ್ಲಿ ನಡೆದ 19 ವರ್ಷದೊಳಗಿನ ಬಾಲಕರ ಟೇಬಲ್ ಟೆನಿಸ್ ಕ್ರೀಡೆಯಲ್ಲಿ ಮಹಾರಾಷ್ಟ್ರದ ತಂಡದ ವಿರುದ್ಧ ಉದಯ್ ಕುಮಾರ್ ರವರ ನೇತೃತ್ವದ ತಂಡ ರಾಷ್ಟ್ರಮಟ್ಟದ ಚಿನ್ನದ ಪದಕವನ್ನು ಗೆದ್ದು ವಿಜೇತರಾಗಿ ಹೊರಹಮ್ಮಿದ್ದಾರೆ . ಈ ತಂಡದಲ್ಲಿ 1 .ಆಕಾಶ್ ಕೆ ಜೆ , 2 .ರೋಹಿತ್ ಶಂಕರ್, 3. ಯಶವಂತ್ ಪಿ, 4. ಆದಿತ್ಯ ಜಿ , 4. ವಿಲಿಯನ್ ಥಾಮಸ್. ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಾಗಿರುತ್ತಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…
ರಾಜಕೀಯ ಪಾದಾರ್ಪಣೆಯ ಊಹಾಪೋಹಗಳ ನಡುವೆ ತಮಿಳು ನಟ ವಿಜಯ್ ಸಾರ್ವಜನಿಕವಾಗಿ ರಾಜಕೀಯ ಮಾತನಾಡಿದ್ದಾರೆ. ಮತಕ್ಕಾಗಿ ಹಣ ಪಡೆಯುವುದನ್ನು ನಿಲ್ಲಿಸುವಂತೆ ಪೋಷಕರಿಗೆ ತಿಳಿಸಬೇಕು ಎಂದು ವಿದ್ಯಾರ್ಥಿಗಳೊಂದಿಗೆ ನಡೆದ ಚರ್ಚೆಯಲ್ಲಿ ವಿಜಯ್ ಹೇಳಿದರು. 10 ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಚೆನ್ನೈನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ವಿಜಯ್ ಅವರ ಅಭಿಮಾನಿಗಳ ಸಂಘಟನೆಯಾದ ವಿಜಯ್ ಮಕ್ಕಳ್ ಇಯಕಂ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ನೀವು ನಾಳಿನ ಮತದಾರರು. ಮುಂದಿನ ನಾಯಕನನ್ನು ಆಯ್ಕೆ ಮಾಡುವವರು ಭವಿಷ್ಯದ ಮತದಾರರಾದ ನೀವೇ. ಇಂದು ಜನರು ಹಣಕ್ಕಾಗಿ ಮತ ಹಾಕುತ್ತಿದ್ದಾರೆ. ಒಂದು ಮತಕ್ಕೆ 1000 ರೂ.ನಂತೆ ಒಂದೂವರೆ ಲಕ್ಷ ಮತದಾರರಿರುವ ಕ್ಷೇತ್ರಕ್ಕೆ ಸುಮಾರು 15 ಕೋಟಿ ರೂ. ವೋಟಿಗಾಗಿ 15 ಕೋಟಿಯವರೆಗೂ ಖರ್ಚು ಮಾಡಬೇಕೆಂದಿದ್ದರೆ ಆ ವ್ಯಕ್ತಿ ಎಷ್ಟು ಸಂಪಾದಿಸುತ್ತಾನೆ ಎಂದು ಯೋಚಿಸಿ’ – ವಿಜಯ್ ಹೇಳಿದರು. ಯಾವುದು ಸರಿ ಮತ್ತು ಯಾವುದು ತಪ್ಪು? ಯಾವುದನ್ನು ನಂಬಬೇಕು ಮತ್ತು ಯಾವುದನ್ನು ನಂಬಬಾರದು ಎಂಬುದನ್ನು ತಿಳಿದುಕೊಳ್ಳಲು…
9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ಹಾಗೂ ಜೈನ್ ಹೆರಿಟೇಜ್ ಶಾಲೆ -ಬೆಳಗಾವಿ ಸಹಯೋಗದಲ್ಲಿ ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ -ಜಿಲ್ಲಾ ಆಯುಷ್ ಆಸ್ಪತ್ರೆ ಟಿಳಕವಾಡಿ ಮಂಡೋಳಿ ರೋಡ್ -ಬೆಳಗಾವಿಯಲ್ಲಿ ದಿನಾಂಕ 17 -06 -2023 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಯೋಗ ತರಬೇತಿಯ ತರಗತಿಯನ್ನು ಆಯೋಜಿಸಲಾಯಿತು. ಯೋಗ ಶಿಕ್ಷಕರಾದ ಲಟುಕರ, ವಿದ್ಯಾರ್ಥಿ ಸತ್ಯಂ ಖಾಂಡೇಕರ್, ಹಾಗೂ ಯೋಗ ಶಿಕ್ಷಕಿಯಾದ ಪಲ್ಲವಿ ನಾಡಕರ್ಣಿ ಮುಂದಾಳತ್ವದಲ್ಲಿ ಜೈನ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು. ಶಿಕ್ಷಕರು ಭಾಗವಹಿಸಿ ಯೋಗದ ಪ್ರಾಮುಖ್ಯತೆಯನ್ನ ತಿಳಿದುಕೊಳ್ಳುವುದಲ್ಲದೆ ಆರೋಗ್ಯಕ್ಕೆ ಯೋಗವು ಉತ್ತಮವಾದದ್ದು ಎಂದು ಅರಿತುಕೊಂಡರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ್ ಸುಣದೊಳಿ ಹಾಗೂ ಡಾ. ಗಿರೀಶ್ ಪಶುಪತಿಮಠ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 19) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡ್ರೆ ಮಾತ್ರ ಮುಂದಿನ ತಿಂಗಳಿನಿಂದಲೇ ಉಚಿತ ವಿದ್ಯುತ್ ಸಿಗಲಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೇವಾ ಸಿಂಧು ವೆಬ್ಸೈಟ್ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ. ಇನ್ನು ಬಾಡಿಗೆದಾರರಾಗಿದ್ರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಡೌಟ್ ಇದ್ರೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಕಾಲ್ ಮಾಡಿ ಮಾಹಿತಿ ಪಡೆಯಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್…
ಬೈಪೋರ್ ಜಾಯ್ ಚಂಡಮಾರುತವು ಹಾನಿಯನ್ನುಂಟುಮಾಡಿರುವ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಗುಜರಾತ್ ನ ಕರಾವಳಿ ಮತ್ತು ರಾಜಸ್ಥಾನದ ಬಾರ್ಮರ್ ನಲ್ಲಿ ಪ್ರವಾಹ ತೀವ್ರವಾಗಿದೆ. ಬಾರ್ಮಾರ್ನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಗುಜರಾತ್ನಲ್ಲಿ ಹಾನಿಗೊಳಗಾದ ವಿದ್ಯುತ್ ಮತ್ತು ರಸ್ತೆ ಸಂಚಾರವನ್ನು ಪುನಃಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಹಲವೆಡೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಮಂಗಳವಾರದ ವೇಳೆಗೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಅಮಿತ್ ಶಾ ಕಳೆದ ದಿನ ರಾಜ್ಯದ ದುರಂತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಕೇಂದ್ರ ಹವಾಮಾನ ಕೇಂದ್ರದ ಪ್ರಕಾರ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಇನ್ನೂ ಎರಡು ದಿನಗಳ ಕಾಲ ಗಾಳಿ ಮತ್ತು ಮಳೆ ಮುಂದುವರಿಯುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ:…
ದೆಹಲಿಯ ಕೆಆರ್ ಪುರಂನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಹೋದರಿಯರು ಸಾವನ್ನಪ್ಪಿದ್ದಾರೆ. ಮೃತರನ್ನು ಪಿಂಕಿ (30) ಮತ್ತು ಜ್ಯೋತಿ (29) ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದ ವಿವಾದ ಕೊಲೆಯ ಹಿಂದೆ ಇದೆ ಎಂದು ತಿಳಿದುಬಂದಿದೆ. ದಾಳಿಕೋರರನ್ನು ಗುರುತಿಸಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಬೆಳಗಿನ ಜಾವ 4:30ರ ಸುಮಾರಿಗೆ ಬಂದ ದೂರವಾಣಿ ಕರೆ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ನೋಡಿದಾಗ ಚೂರಿ ಇರಿತದ ಸ್ಥಿತಿಯಲ್ಲಿದ್ದ ಮಹಿಳೆಯರು ಪತ್ತೆಯಾಗಿದ್ದಾರೆ. ನಂತರ ಪೊಲೀಸರು ಅವರನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಸಾಗಿಸಿದರು, ಆದರೆ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಹತ್ಯೆಗೀಡಾದ ಮಹಿಳೆಯರ ಶವಗಳನ್ನು ಎಸ್ಜೆ ಆಸ್ಪತ್ರೆಗೆ ರವಾನಿಸಲಾಗಿದೆ. ಯುವತಿಯರ ಸಹೋದರನನ್ನು ಹುಡುಕಿಕೊಂಡು ಬಂದ ದುಷ್ಕರ್ಮಿಗಳು ಯುವತಿಯರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹೋದರ ಹಾಗೂ ಆರೋಪಿಗಳ ನಡುವೆ ಹಣಕಾಸಿನ ವ್ಯವಹಾರ ನಡೆದಿತ್ತು ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಮೊಬೈಲ್ ಕದ್ದಿದ್ದಾನೆಂದು ಆರೋಪಿಸಿದ ದುಷ್ಕರ್ಮಿಗಳು ಮುಸ್ಲಿಮ್ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಘೋಷಣೆ ಮಾಡುವಂತೆ ಒತ್ತಾಯಿಸಿದ್ದು, ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೂನ್ 13 ರಂದು ಈ ಘಟನೆ ನಡೆದಿದೆ. ಬುಲಂದ್ ಶಹರ್ ಕಾಕೋಟ್ ಮೂಲದ ಸಾಹಿಲ್ ಥಳಿತಕ್ಕೊಳಗಾದ ವ್ಯಕ್ತಿ. ಸಾಹಿಲ್ ದೂರಿನ ಪ್ರಕಾರ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಯುವಕರು ಬಂದು ಬಲವಂತವಾಗಿ ಬೈಕ್ ನಲ್ಲಿ ಕೂರಿಸಿಕೊಂಡು ಏಕಾಂತ ಸ್ಥಳಕ್ಕೆ ಕರೆದೊಯ್ದು ಥಳಿಸಿದ್ದಾರೆ. ಬಳಿಕ ಮೊಬೈಲ್ ಕಳ್ಳತನವಾಗಿರುವ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಆರೋಪಿಗಳು ತನ್ನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ತಲೆ ಬೋಳಿಸಿ ಜೈ ಶ್ರೀ ರಾಮ್ ಎಂದು ಜಪಿಸುವಂತೆ ಒತ್ತಾಯಿಸಿದರು ಎಂದು ಸಾಹಿಲ್ ಆರೋಪಿಸಿದ್ದಾರೆ. ಘಟನಾ ಸ್ಥಳದಿಂದ ತಪ್ಪಿಸಿಕೊಂಡ ನಂತರ ಸಾಹಿಲ್ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಆದರೆ ಅವರು ಕ್ರಮ ತೆಗೆದುಕೊಳ್ಳಲು ನಿರಾಕರಿಸಿದರು ಮತ್ತು ಬದಲಿಗೆ ಕಳ್ಳತನದ ಆರೋಪ ಹೊರಿಸಿ ಬಂಧಿಸಿದರು ಬಳಿಕ ದೂರು ಹಿಂಪಡೆಯುವಂತೆ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ. ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ. ಏಮ್ಸ್ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ.ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್, ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ…