Subscribe to Updates
Get the latest creative news from FooBar about art, design and business.
- ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ: 44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
- ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
- ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
Author: admin
ತುರುವೇಕೆರೆ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳಿಂದ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತುಂಬಾ ತೊಂದರೆ ಆಗುತ್ತಿದ್ದು , ಇದಕ್ಕೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಉತ್ತರಿಸಬೇಕಾಗಿದೆ ಎಂದು ತಾಲ್ಲೂಕು ಛಲವಾದಿ ಮಹಾಸಭಾ ಮುಖಂಡ ಕುಣಿಕೇನಹಳ್ಳಿ ಜಗದೀಶ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಮತ್ತು ನಿರ್ಲಕ್ಷ ಹಾಗೂ ಅವ್ಯವಹಾರಗಳ ಬಗ್ಗೆ ಬೆಳಕು ಚಲ್ಲುವ ಪ್ರಕರಣಗಳು ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ಇರುವುದು ಬಡವರಿಗೆ ಅನುಕೂಲವಾಗಲೆಂದು, ಆದರೆ ಇಲ್ಲಿ ನಿರ್ಲಕ್ಷ್ಯ ಮತ್ತು ಅವ್ಯವಹಾರ ಬಗ್ಗೆ ದಲಿತರು ದ್ವನಿ ಎತ್ತಲೇ ಬೇಕಾಗಿದೆ ಎಂದು ಕರೆ ನೀಡಿದರು. ಕಾರಣ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ಮುರುಳಿಯವರ ಮೇಲಿನ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೇಲಿನದು ಆರೋಪವಾ ಅಥವಾ ಷಡ್ಯಂತ್ರವ ಎನ್ನುವ ಬಗ್ಗೆ ನಾವು ವಿಚಾರ ಮಾಡಬೇಕಾಗಿದೆ. ಕೇವಲ ಇವರನ್ನು ಈ ವಿಚಾರದಲ್ಲಿ ಸಿಕ್ಕಿಸಿ ಅವರನ್ನು ತೇಜೋವಧೆ ಮಾಡಬೇಕೆನ್ನುವುದು, ಷಡ್ಯಂತ್ರ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ , ಇಲ್ಲಿ ಧ್ವನಿ ಎತ್ತುತ್ತಿರುವುದು ಕೇವಲ ಛಲವಾದಿ…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವಿಟರ್ ನಲ್ಲಿ 25 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಹಿಂಬಾಲಕರ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಕಚೇರಿಯೇ ಟ್ವಿಟರ್ ಮೂಲಕ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಯ ಜನಪ್ರಿಯತೆ ಮಿತಿ ಮೀರಿದ್ದು, ಇವತ್ತಿನವರೆಗೂ ದೇಶದ ಯಾವುದೇ ಪ್ರಮುಖ ನಾಯಕರಿಗೆ ಇಷ್ಟೊಂದು ಫಾಲೋವರ್ಸ್ ಇಲ್ಲ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ. ಇದರೊಂದಿಗೆ ಯೋಗಿ ಆದಿತ್ಯನಾಥ್ ಟ್ವಿಟರ್ ನಲ್ಲಿ 25 ಮಿಲಿಯನ್ ಸಾಧನೆ ಮಾಡುವ ಮೂಲಕ ಈ ದಾಖಲೆ ಸೃಷ್ಟಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಸೆಪ್ಟೆಂಬರ್ 2015 ರಲ್ಲಿ, ಮುಖ್ಯಮಂತ್ರಿ ಯೋಗಿ ಟ್ವಿಟರ್ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ ಅನ್ನು ಪ್ರಾರಂಭಿಸಿದರು. 2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ 89 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಟ್ವಿಟರ್ನಲ್ಲಿ 33 ಮಿಲಿಯನ್…
ಮಣಿಪುರದಲ್ಲಿ ಮತ್ತೆ ಸಂಘರ್ಷ. ಘರ್ಷಣೆ ವೇಳೆ ಉಗ್ರರು ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಮನೆಗೆ ಬೆಂಕಿ ಹಚ್ಚಲಾಗಿದೆ. ನಿನ್ನೆ ರಾತ್ರಿ ಇಂಫಾಲದಲ್ಲಿ ಮನೆಗೆ ಬೆಂಕಿ ಹಚ್ಚಲಾಗಿದೆ. ಘಟನೆಯ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ ಉಲ್ಬಣಗೊಂಡ ನಂತರ ಇಂಫಾಲ್ನಲ್ಲಿ ಕರ್ಫ್ಯೂ ಇದ್ದರೂ, ದಾಳಿಕೋರರು ನಗರದಾದ್ಯಂತ ತಿರುಗಾಡುತ್ತಿದ್ದರು. ಉಳಿದಂತೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ದಿನ ಮಣಿಪುರದಲ್ಲಿ ಕೈಗಾರಿಕಾ ಸಚಿವರ ಮನೆಗೆ ಬೆಂಕಿ ಹಚ್ಚಲಾಗಿತ್ತು. ಕೈಗಾರಿಕಾ ಸಚಿವ ನೆಮ್ಚಾ ಕಿಪ್ಜೆನ್ ಅವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ದಾಳಿಕೋರರಿಗಾಗಿ ಭದ್ರತಾ ಪಡೆ ಹುಡುಕಾಟ ಆರಂಭಿಸಿದೆ. ಮಣಿಪುರದಲ್ಲಿ ಶಾಂತಿ ಕದನಕ್ಕೆ ಹಿನ್ನಡೆಯಾಗಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಶಾಂತಿ ಪ್ರಕ್ರಿಯೆಗೆ ಧಕ್ಕೆ ತರುವ ಎಲ್ಲಾ ನಡೆಗಳನ್ನು ಬಲವಾಗಿ ವಿರೋಧಿಸಲಾಗುವುದು ಎಂದು ರಾಜಭವನ ಸ್ಪಷ್ಟಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೈಪೋರ್ ಜಾಯ್ ಚಂಡಮಾರುತ ಗುಜರಾತ್ ನಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಗುಜರಾತಿ ಮಾಧ್ಯಮಗಳು ಸಾವಿನ ವರದಿಯನ್ನು ವರದಿ ಮಾಡಿವೆ. ಮೋರ್ಬಿಯಲ್ಲಿ ಸುಮಾರು 300 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರಿಂದ ರಾಜ್ಯದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. 45 ಗ್ರಾಮಗಳು ಸಂಪೂರ್ಣ ಕತ್ತಲಲ್ಲಿ ಮುಳುಗಿವೆ. ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಬೈಪೋರ್ ಜಾಯ್ ಚಂಡಮಾರುತವು ಗುಜರಾತ್ನಲ್ಲಿ ವ್ಯಾಪಕ ಹಾನಿಯನ್ನುಂಟು ಮಾಡಿದೆ. ಬಲವಾದ ಗಾಳಿಯಿಂದಾಗಿ 99 ರೈಲುಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ ಇದುವರೆಗೆ 524 ಮರಗಳು ಧರೆಗುರುಳಿವೆ ಎಂದು ವರದಿಯಾಗಿದೆ. ಜಾಮ್ ನಗರ ಮತ್ತು ದ್ವಾರಕಾ ಪಂಟಕ್ನಲ್ಲಿ ಬಲವಾದ ಗಾಳಿ ಮತ್ತು ಮಳೆ ಮುಂದುವರಿದಿದೆ. ಸೌರಾಷ್ಟ್ರ ಮತ್ತು ಕಚ್ಮೇಖಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭುಜ್ನಲ್ಲೂ ಭಾರೀ ಮಳೆ ಮುಂದುವರಿದಿದೆ. ಮೋರ್ಬಿಯಲ್ಲಿ ವಿದ್ಯುತ್ ಕಂಬಗಳು ಮತ್ತು ತಂತಿಗಳು ಹಾನಿಗೊಳಗಾಗಿವೆ. ಪೋರಬಂದರ್ನಲ್ಲಿ ವ್ಯಾಪಕ ಹಾನಿಯಾಗಿದೆ. ದ್ವಾರಕಾದಲ್ಲಿ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ರಾಜ್ಯದ ವಿವಿಧೆಡೆ ವಿದ್ಯುತ್ ಕಂಬಗಳು ಬಿದ್ದಿವೆ. ಅಹಮದಾಬಾದ್ನ ಒಂಬತ್ತು ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.…
ಆದಿಪುರುಷ ಚಿತ್ರದ ಪ್ರದರ್ಶನದ ವೇಳೆ ಕೋತಿಯೊಂದು ಥಿಯೇಟರ್ ಪ್ರವೇಶಿಸಿದೆ. ಜನರು ಸಿನಿಮಾ ನೋಡುತ್ತಿರುವಾಗಲೇ ಕೋತಿ ಬಾಲ್ಕನಿಗೆ ಬಂದಿತ್ತು. ತೆಲಂಗಾಣದ ವಿಡಿಯೋದಲ್ಲಿ ಕೋತಿಯನ್ನು ನೋಡಿದ ಜನರು ಜೈಶ್ರೀರಾಮ್ ಎಂದು ಕೂಗುತ್ತಿದ್ದಾರೆ. ಆದಿಪುರುಷ ಚಿತ್ರ ತೆರೆಕಾಣುತ್ತಿರುವಾಗ ಪ್ರತಿ ಥಿಯೇಟರ್ನಲ್ಲಿ ಹನುಮಂತನಿಗೆ ಆಸನ ಬಿಟ್ಟುಕೊಡುವಂತೆ ನಿರ್ದೇಶಕ ಓಂ ರಾವುತ್ ಥಿಯೇಟರ್ ಮಾಲೀಕರಿಗೆ ಸೂಚಿಸಿದ್ದರು. ಯಾವುದೇ ಶೋನಲ್ಲಿ ಈ ಸೀಟನ್ನು ಬೇರೆಯವರಿಗೆ ನೀಡುವುದಿಲ್ಲ ಎಂದು ಚಿತ್ರತಂಡ ನಿರ್ಧರಿಸಿದೆ. ಹಲವೆಡೆ ಹನುಮರಿಗೆ ವಿಶೇಷವಾಗಿ ಸಿದ್ಧಪಡಿಸಿರುವ ಆಸನಗಳ ಚಿತ್ರಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಿಂದಿ, ಮಲಯಾಳಂ, ತಮಿಳು, ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಆದಿಪುರುಷ ಚಿತ್ರಮಂದಿರಗಳಿಗೆ ಲಗ್ಗೆ ಇಡುತ್ತಿದೆ. ರಾಮಾಯಣಕ್ಕೆ ಸಂಬಂಧಿಸಿದಂತೆ ಓಂ ರಾವುತ್ ನಿರ್ಮಿಸಿದ ಚಿತ್ರ ಆದಿಪುರುಷ. ಚಿತ್ರದಲ್ಲಿ ಪ್ರಭಾಸ್ ಮತ್ತು ಕೃತಿ ಸನೋನ್ ಅವರಲ್ಲದೆ, ಸನ್ನಿ ಸಿಂಗ್, ದೇವದತ್ತ ನಾಗ್ ಮತ್ತು ಸೈಫ್ ಅಲಿ ಖಾನ್ ಸಹ ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಭಿವೃದ್ಧಿ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ, ಅರ್ಜಿ ಸಲ್ಲಿಕೆ 4-5 ದಿನಗಳ ಕಾಲ ವಿಳಂಬವಾಗಲಿದೆ ಎಂದಿದ್ದಾರೆ. ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆನ್ನುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಹಾಗಾಗಿ ಆ್ಯಪ್ ಸಿದ್ಧಪಡಿಸಲು ಸ್ವಲ್ಪ ಸಮಯಾವಕಾಶ ಬೇಕಿರುವುದರಿಂದ ಅರ್ಜಿ ಸಲ್ಲಿಕೆಯನ್ನು ಸ್ವಲ್ಪ ಮುಂದೂಡೋಣ ಎನ್ನುವ ಸಲಹೆ ಹಿರಿಯರಿಂದ ಬಂದಿರುವುದರಿಂದ ಸ್ವಲ್ಪ ಮುಂದೂಡಲಾಗಿದೆ ಎಂದು ಅವರು ವಿವರಿಸಿದರು. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಸೇವಾಸಿಂಧು ಆಪ್, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಡಕಚೇರಿಗಳಿಗೂ ತೆರಳಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಗೃಹಲಕ್ಷ್ಮೀ ಯೋಜನೆಗಾಗಿ ಹೊಸ ಆಪ್ ಸಿದ್ಧಪಡಿಸಲು ಇ-ಗವರ್ನನ್ಸ್ ಗೆ…
ಬೆಳಗಾವಿ: ನಾನು ಇನ್ನೂ 22 ವರ್ಷ ರಾಜಕಾರಣದಲ್ಲಿ ಇರುತ್ತೇನೆ. ರಾಜಕೀಯದಲ್ಲಿದ್ದವರಿಗೆ ತಾಳ್ಮೆ ಮತ್ತು ದೂರದೃಷ್ಟಿ ಎರಡೂ ಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷ್ಮಣ ಸವದಿಯವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರದ ಕುರಿತು ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಒಳ್ಳೆಯ ದಿನಗಳು ಕಾದಿವೆ ಎಂಬುದನ್ನು ನಾನು ನಂಬುತ್ತೇನೆ. ನಾನು ಮೊದಲ ಆದ್ಯತೆಯನ್ನು ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿವೆ. ನೆನೆಗುದಿಗೆ ಬಿದ್ದಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಕ್ಷೇತ್ರದ ಜನ ನೆಮ್ಮದಿಯಿಂದ ಬದುಕುವ ಹಾಗೆ ವಾತಾವರಣ ನಿರ್ಮಾಣ ಮಾಡಿದ ಮೇಲೆ ರಾಜ್ಯ ರಾಜಕಾರಣದ ವಿಚಾರ ಮಾಡುತ್ತೇನೆ ಎಂದರು. ಕಳೆದ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ನಾಯಕರ ಮಧ್ಯೆ ಹೊಂದಾಣಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ.ನಾನು ಅಷ್ಟು ಕೆಳಗೆ ಹೋಗಿ…
ಬೆಂಗಳೂರು: ಉಚಿತ ಯೋಜನೆಗಳನ್ನು ಜಾರಿಗೆ ತರುವ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ ಸಿದ್ದರಾಮಯ್ಯನವರೇ ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ. ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ. ಉಚಿತ.. ಉಚಿತ.. ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ…
ಕಾಂಗ್ರೆಸ್, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನನ್ನ ಜೀವನದಲ್ಲಿ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆಯೇ ಇಲ್ಲ. ಶಾಮನೂರು, ನಾವು ಹಳೆಯ ಸ್ನೇಹಿತರು, ಹೀಗಾಗಿ ಭೇಟಿಯಾಗಿದ್ದೆವು. ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಮ್ಮದೇ ಪಕ್ಷದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA