Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಪಾವಗಡ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಧುಗಿರಿ ಇವರ ವತಿಯಿಂದ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಂಗಳವಾರ ಏರ್ಪಡಿಸಿದ ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾವಗಡ ಪಟ್ಟಣದ ಹೆಸರಾಂತ ಜ್ಞಾನ ಭೋದಿನಿ ಪ್ರೌಢ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಏಕೇಶ್ ಎಸ್. ಮತ್ತು ಈಶ್ವರ್ ರವರು ವಿಜ್ಞಾನ ಶಿಕ್ಷಕರಾದ ಗುಣತೇಜ ರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಅಡೆತಡೆಗಳನ್ನು ತಡೆಯುವ ರೋಬೋಟಿಕ್ ಕಾರ್ (OBSTACLE AVOIDING ROBOTIC CAR)ನ್ನು ಪ್ರದರ್ಶಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆ: ಮಧುಗಿರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( DIET) ಮಧುಗಿರಿ ರವರ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ವೈಯಕ್ತಿಕ ವಿಭಾಗದಲ್ಲಿ ಪ್ರಥಮ…
ತುಮಕೂರು: ಜಿಲ್ಲೆಯಲ್ಲಿ ಬಹುತೇಕ ಉರ್ದು ಶಾಲೆಗಳು ಇನ್ನೂ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ 5–6 ವರ್ಷಗಳಿಂದ ಇವುಗಳ ಬಾಡಿಗೆಯೇ ಪಾವತಿಸಿಲ್ಲ ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಲ್ಲಿ ಪಿಎಂ 15 ಅಂಶಗಳ ಕಾರ್ಯಕ್ರಮ ಸಮಿತಿ ಸದಸ್ಯ ರೆಹಮಾನ್ ಈ ಕುರಿತು ಪ್ರಸ್ತಾಪಿಸಿದರು. ‘ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ನೂರಾರು ಶಾಲೆಗಳಿಗೆ ಸ್ವಂತ ಕಟ್ಟಡ ಇಲ್ಲ. ಎಲ್ಲಿಯೂ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಶೌಚಾಲಯದ ವ್ಯವಸ್ಥೆಯೂ ಇಲ್ಲ. ಮಾಲೀಕರನ್ನು ಕೇಳಿದರೆ ಬಾಡಿಗೆ ಕೊಟ್ಟಿಲ್ಲ ಎನ್ನುತ್ತಿದ್ದಾರೆ. 6 ವರ್ಷದಿಂದ ಬಾಡಿಗೆ ಹಣ ಪಾವತಿ ಮಾಡಿಲ್ಲ’ ಎಂದು ಸಭೆಯ ಗಮನಕ್ಕೆ ತಂದರು. ‘ಜಿಲ್ಲೆಯಲ್ಲಿ ಎಷ್ಟು ಉರ್ದು ಶಾಲೆಗಳಿವೆ? ಎಷ್ಟು ಸ್ವಂತ ಕಟ್ಟಡಗಳಿವೆ? ಎಷ್ಟಕ್ಕೆ ಬಾಡಿಗೆ ನೀಡಲಾಗುತ್ತಿದೆ?’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಶಬ್ಬಿರ್ ಅಹ್ಮದ್ ಅವರನ್ನು ಪ್ರಶ್ನಿಸಿದರು. ಅಧಿಕಾರಿ ಯಾವುದಕ್ಕೂ ಉತ್ತರಿಸಲಿಲ್ಲ. ಮುಂದಿನ ಸಭೆಗೆ ಅಗತ್ಯ…
ಗುಬ್ಬಿ: 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಪಡಿತರ ತರಲು ತೊಂದರೆಯಾಗುತ್ತಿದ್ದ ಕಾರಣ ಸರ್ಕಾರ ಮನೆಬಾಗಿಲಿಗೆ ಪಡಿತರ ವಿತರಿಸುವ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದರು. ಸೋಮವಾರ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿಯಲ್ಲಿ ಆಹಾರ ಅದಾಲತ್ ಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಆರಂಭಿಸಿರುವ ಈ ಯೋಜನೆಯಡಿ 75 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅಂಗವಿಕಲರು ಮಾತ್ರ ಇರುವ ಕುಟುಂಬಗಳಿಗೆ ಸಮೀಪದ ನ್ಯಾಯಬೆಲೆ ಅಂಗಡಿಯವರು ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುತ್ತಾರೆ. ಇದರಿಂದ ಪಡಿತರವನ್ನು ಪಡೆಯಲು ಅಲೆದಾಡುವುದು ತಪ್ಪುತ್ತದೆ ಎಂದು ಹೇಳಿದರು. 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ಅನುಕೂಲವಾಗುವ ಈ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ಸೌಮ್ಯಾ ಮಾತನಾಡಿ, 75 ವರ್ಷ ಮೇಲ್ಪಟ್ಟ ಹಿರಿಯ…
ತುಮಕೂರು: ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ ಬೋಧನೆ ಸೇರಿಸಬೇಕು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಖಂಡಿಸಿದೆ. ಸಚಿವರು ರಾಜ್ಯಕ್ಕೆ ಸಿಗಬೇಕಾದ ಸಂಪನ್ಮೂಲ, ಅಭಿವೃದ್ಧಿಯ ಪ್ರಶ್ನೆಗಳತ್ತ ಗಮನ ಹರಿಸಬೇಕು. ಧಾರ್ಮಿಕ ಭಾವನೆಗಳನ್ನು ರಾಜಕೀಯವಾಗಿ ಬಳಸಬಾರದು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್, ನಗರ ಕಾರ್ಯದರ್ಶಿ ಎ.ಲೋಕೇಶ್ ತಿಳಿಸಿದ್ದಾರೆ. ಸಚಿವರು ಪ್ರಸ್ತಾಪಿಸಿದಂತೆ ಭಗವದ್ಗೀತೆ ಭಾರತೀಯ ಸಂಸ್ಕೃತಿಯ ಪ್ರತೀಕ, ಕಾಲಾತೀತವಲ್ಲ. ಭಾರತೀಯ ಸಂಸ್ಕೃತಿ ಬಹು ನಂಬಿಕೆ, ಆಚಾರ ವಿಚಾರಗಳ ವೈವಿಧ್ಯತೆ, ಸಮಭಾವದಿಂದ ಕೂಡಿದೆ. ಸೌಹಾರ್ದತೆಯಿಂದ ಬದುಕಿ ಬಾಳುವುದು ನಾಡಿನ ಪರಂಪರೆ. ಒಂದು ವಿಭಾಗದ ಧಾರ್ಮಿಕ ನಂಬಿಕೆಗಳನ್ನು ರಾಷ್ಟ್ರದ ಸಂಸ್ಕೃತಿ ಎಂದು ನಂಬಿಸುವುದು ಅಸಂಬದ್ಧ ಹಾಗೂ ಅವೈಜ್ಞಾನಿಕ. ಇದು ವಿಭಜಕ ಕ್ರಮ ಎಂದು ಟೀಕಿಸಿದ್ದಾರೆ. ಎಲ್ಲ ಜನಾಂಗ, ಧರ್ಮದ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಮಕ್ಕಳಲ್ಲಿ ವೈಚಾರಿಕತೆ ದುರ್ಬಲಗೊಳಿಸುವ ಪ್ರಯತ್ನಗಳ ವಿರುದ್ಧ ರಾಜ್ಯದ ಜನತೆ ಜಾಗೃತಿ ವಹಿಸಬೇಕು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೊರಟಗೆರೆ: ತಾಲ್ಲೂಕಿನ ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ದೇವರಾಜು (56) ಎಂಬುವರು ಸೋಮವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆ ವಿದ್ಯಾರ್ಥಿನಿ ಜತೆಗೆ ದೇವರಾಜು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿತ್ತು ಎನ್ನಲಾಗಿದೆ. ಈ ಸಂಬಂಧ ಕೆಲವು ಹಿರಿಯರು ಸೇರಿಕೊಂಡು ವಿದ್ಯಾರ್ಥಿನಿ ಕುಟುಂಬದವರ ಜತೆಗೆ ರಾಜಿ ಸಂಧಾನ ನಡೆಸಿದ್ದರು. ಇದರ ನಡುವೆ ಕೆಲವು ಮಧ್ಯವರ್ತಿಗಳು, ಯೂಟ್ಯೂಬ್ ಪತ್ರಕರ್ತರು ಎಂದು ಹೇಳಿಕೊಂಡವರು ಹಣಕ್ಕಾಗಿ ಪೀಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಹಳ್ಳಿಯ ಜನರು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನ ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಗುಬ್ಬಿ ವೀರಣ್ಣನವರು ಕಟ್ಟಿಸಿ ಬೆಳೆಸಿರುವ ಗುಲಗಂಜಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಸಮುದ್ರನಹಳ್ಳಿ ಮ್ಯಾಗ್ನೆಟ್ ಗೆ ವಿಲೀನ ಮಾಡಲು ಮುಂದಾಗಿದೆ ಈ ನಿರ್ಧಾರವು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರೆದು, ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಸಹ…
ಸರಗೂರು: ನಾರಾಯಣ ಗುರುಗಳು ಶೋಷಿತರ ವರ್ಗಗಳಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದಾರೆ, ಅಂತರ ವಿಧಾನಸೌಧ ಮತ್ತು ವಿಕಾಸಸೌಧ ಮುಂಭಾಗದಲ್ಲಿ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕೆಂದು ಅಂದು ಕನಸು ಕಂಡಿದ್ದರು. ನಾರಾಯಣ ಗುರುಗಳ ಆದರ್ಶ, ವಿಚಾರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಜಗತ್ತು ಕಂಡ ಅಪರೂಪದ ಸಂತರಲ್ಲಿ ಒಬ್ಬರು. ಮೌನ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರುಗಳ ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣ ಮಾಡಲು ಚಳಿಗಾಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ರವರು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು. ‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದವರು ಸಂತಶ್ರೇಷ್ಠ ನಾರಾಯಣಗುರುಗಳು. ಇಂದಿನ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಜಾತೀಯ ವಿಷ ಭಾವನೆಗಳನ್ನು ಬಿತ್ತಿ, ‘ನಮ್ಮ ಧರ್ಮ’, ‘ನಮ್ಮ ಸಿದ್ಧಾಂತ’ ಎನ್ನುತ್ತಾ ಮತಭ್ರಾಂತಿಯಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥ ಕಾಲಘಟ್ಟದಲ್ಲಿ, ‘ಅವನವನ ಆತ್ಮಸುಖಕ್ಕಾಗಿ…
ಕಬಡ್ಡಿ ಭಾರತದ ಮಣ್ಣಿನಿಂದ ಹುಟ್ಟಿದ ಒಂದು ಅತ್ಯಂತ ಜನಪ್ರಿಯ ಮತ್ತು ಪ್ರಾಚೀನ ಆಟ. ಇದು ಕೇವಲ ಒಂದು ಆಟವಲ್ಲ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ. ಕಬಡ್ಡಿ ಪದದ ಉಚ್ಚಾರಣೆಯು ಕರಾವಳಿ ಮತ್ತು ದಕ್ಷಿಣ ಭಾರತದ ಪ್ರದೇಶಗಳಲ್ಲಿ ‘ಕೈ ಹಿಡಿ’ ಅಥವಾ ‘ಕಬಾಡು’ ಎಂಬ ಪದದಿಂದ ಬಂದಿರಬಹುದು ಎಂದು ಹೇಳಲಾಗಿದೆ. ಕಬಡ್ಡಿಯು ಮೊದಲು ದಕ್ಷಿಣ ಭಾರತದ ತಮಿಳುನಾಡಿನಲ್ಲಿ ಹುಟ್ಟಿಕೊಂಡಿತು ಎಂಬ ವ್ಯಾಪಕ ನಂಬಿಕೆಯೂ ಇದೆ. ಆಧುನಿಕ ಕಬಡ್ಡಿ ಆಟಕ್ಕೆ ಒಂದು ನಿರ್ದಿಷ್ಟ ಸ್ವರೂಪ ಸಿಕ್ಕಿದ್ದು 20ನೇ ಶತಮಾನದಲ್ಲಿ. 1930 ರಲ್ಲಿ ಕಬಡ್ಡಿಯ ನಿಯಮಗಳನ್ನು ಮೊದಲ ಬಾರಿಗೆ ರೂಪಿಸಲಾಯಿತು ಮತ್ತು 1950 ರಲ್ಲಿ ಆಲ್ ಇಂಡಿಯಾ ಕಬಡ್ಡಿ ಫೆಡರೇಷನ್ (AIKF) ರಚನೆಯಾಯಿತು. ಏಷ್ಯನ್ ಕ್ರೀಡಾಕೂಟದಲ್ಲಿ ಕಬಡ್ಡಿ 1990 ರಲ್ಲಿ ಸೇರ್ಪಡೆಯಾಯಿತು. 2014 ರಲ್ಲಿ ಪ್ರಾರಂಭವಾದ ಪ್ರೊ ಕಬಡ್ಡಿ ಲೀಗ್ (PKL) ಈ ಆಟದ ಜನಪ್ರಿಯತೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಿತು. ಮುಖ್ಯ ನಿಯಮಗಳು: ಕಬಡ್ಡಿ ಆಟವನ್ನು ಎರಡು ತಂಡಗಳ ನಡುವೆ ಆಡಲಾಗುತ್ತದೆ. ಪ್ರತಿ ತಂಡದಲ್ಲಿ…
ಬೆಳಗಾವಿ: ಸೆಪ್ಟೆಂಬರ್ 2025ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ. ವಿಧಾನ ಪರಿಷತ್ತಿನ ನಿಯಮ 330ರ ಅಡಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಎಂಎಲ್ ಸಿ ಕೆ.ಎಸ್.ನವೀನ್ ಈ ಬಗ್ಗೆ ಪ್ರಶ್ನಿಸಿದ್ದು, ಇದಕ್ಕೆ ಸಚಿವರು ಲಿಖಿತ ಉತ್ತರ ನೀಡಿದರು. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದ್ಯ ಸೇವಿಸುತ್ತಿರುವವರು ಲಿವರ್ ಸಿರೋಸಿಸ್/ಕಾಮಾಲೆಯಿಂದ ಬಳಲುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಅಬಕಾರಿ ಇಲಾಖೆಯ ಆದಾಯದ ಕನಿಷ್ಠ 20 ಪ್ರತಿಶತವನ್ನು ಅವರ ಉತ್ತಮ ಚಿಕಿತ್ಸೆಗಾಗಿ ಹಂಚಿಕೆ ಮಾಡಬೇಕೆಂದು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಿಂದ ಬರುವ ಆದಾಯವನ್ನು ರಾಜ್ಯದ ಕ್ರೋಢೀಕೃತ ನಿಧಿಯಲ್ಲಿ ಠೇವಣಿ ಇಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಹಣವನ್ನು ಮೀಸಲಿಡಲು ಯಾವುದೇ ನಿರ್ದಿಷ್ಟ ವ್ಯವಸ್ಥೆ…
ತುಮಕೂರು: ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್.ಪಟೇಲ್ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರದ ಕನ್ನಡ ಭವನ ಸ್ಯಾನಿಟೋರಿಯಂನಲ್ಲಿ ‘ಕುವ್ಯವಸ್ಥೆಯಿಂದ ಸುವ್ಯವಸ್ಥೆಯೆಡೆಗೆ’ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ಶ್ರೀತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಗಳು ವಹಿಸಲಿದ್ದು, ವಿಧಾನಸಭಾ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿಕಟಪೂರ್ವ ನ್ಯಾಯಾಧೀಶರಾದ ವಿ.ಗೋಪಾಲಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಲೋಕಸಭಾ ಸದಸ್ಯ ಎಂ. ಮಲ್ಲೇಶಬಾಬು, ಮಾಜಿ ಸಭಾಪತಿ ಆರ್.ವಿ.ಸುದರ್ಶನ್, ಶಾಸಕರಾದ ಕೊತ್ತೂರು ಜಿ.ಮಂಜುನಾಥ್, ವಕೀಲರಾದ ಸಿ.ಎಸ್.ದ್ವಾರಕನಾಥ್, ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ಅಧ್ಯಕ್ಷರಾದ ತ್ರಿಶೂಲಪಾಣಿ ಜೆ.ಹೆಚ್.ಪಟೇಲ್, ವ್ಯವಸ್ಥಾಪಕ ಧರ್ಮದರ್ಶಿ ಮಾಜಿ ಶಾಸಕರಾದ ಮಹಿಮ ಜೆ.ಪಟೇಲ್, ಧರ್ಮದರ್ಶಿ ಟಿ.ಪ್ರಭಾಕರ್ ಅವರುಗಳು ಭಾಗವಹಿಸಲಿದ್ದು,…