Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಆಚರಣೆ ವಿಚಾರದಲ್ಲಿ ಸರ್ಕಾರದಲ್ಲಿ ಬ್ಲೂಬುಕ್ ಇದೆ, ಅದರಲ್ಲಿ ಏನಿರುತ್ತೊ ಅದೇ ಆಗಬೇಕು. ಗೃಹ ಇಲಾಖೆಯಲ್ಲಿ ನಾನೊಂದು ಕಾನೂನು ಮಾಡಲು ಬರಲ್ಲ. ಇನ್ನೊಬ್ಬರು ಇನ್ನೊಂದು ಮಾಡಲು ಬರಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅದನ್ನು ಮುಂದಿನ ದಿನಗಳಲ್ಲಿ ನೋಡೋಣ. ಯಾವುದನ್ನು ಮಾಡಬಾರದು. ಯಾವುದನ್ನು ಮಾಡಬೇಕು, ಎಂಬ ಬಗ್ಗೆ ಸರ್ಕಾರದ ನಿಯಮಗಳಿವೆ ಎಂದರು. ಪೊಲೀಸ್ ಇಲಾಖೆಯಲ್ಲಿ ಮಾನ್ಯೂಯಲ್ ಇದೆ. ಅದನ್ನು ಬಿಟ್ಟು ಬೇರೆ ಮಾಡಲು ಬರೊದಿಲ್ಲ. ಹಿರಿಯ ಅಧಿಕಾರಿಗಳು ಮಾನ್ಯೂಯಲ್ ಅನುಷ್ಟಾನ ಮಾಡುತ್ತಾರೆ. ನಾವು ವೈಯಕ್ತಿಯವಾಗಿ ಸಚಿವರಾಗಿದ್ದೇನೆ ಅಂತ ಪ್ರತ್ಯೇಕ ಕಾನೂನು ಮಾಡಲು ಬರಲ್ಲ. ಕುಂಕುಮ, ವಿಭೂತಿ, ಇಟ್ಟು ಕೊಳ್ಳಬಾರದು ಅಂತ ಹೇಳಿದ್ದೇನೆ ಅಂತ ವೈರಲ್ ಮಾಡಿದ್ದಾರೆ. ಅದನ್ನು ನಾನು ಹೇಳಿಯೇ ಇಲ್ಲ. ಯಾರು ವೈರಲ್ ಮಾಡಿದ್ದಾರೋ ಅವರನ್ನು ಹುಡುಕುತ್ತಿದ್ದೇವೆ. ಇಂತಹವನ್ನೆಲ್ಲಾ ಸುಮ್ಮನೆ ಬಿಡೊಕ್ಕೆ ಆಗಲ್ಲ. ನನಗೆ ಪ್ರಜ್ಞೆಯಿದೆ, ನಾನು ಮೂರು ಬಾರಿ ಗೃಹ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದೇನೆ…
ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ.ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಅನುಭವ,ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು. ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ,ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ಭಾರತವು 27 ವರ್ಷಗಳ ನಂತರ ವಿಶ್ವ ಸುಂದರಿ 2023 ಅನ್ನು ಆಯೋಜಿಸಲು ಸಿದ್ಧವಾಗಿದೆ. 71ನೇ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ನಡೆಯುತ್ತಿದೆ. ವರದಿಯ ಪ್ರಕಾರ, ಸ್ಪರ್ಧೆಯು ನವೆಂಬರ್ ನಲ್ಲಿ ನಡೆಯಲಿದೆ. ದಿನಾಂಕಗಳನ್ನು ಪ್ರಕಟಿಸಿಲ್ಲ. ಭಾರತವು ಕೊನೆಯ ಬಾರಿಗೆ 1996 ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಿತ್ತು. ರೀಟಾ ಫರಿಯಾ ಮೂಲಕ ಭಾರತವು ಆಗಿನ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದುಕೊಂಡಿತು ರೀಟಾ ಫರಿಯಾ (1966), ಐಶ್ವರ್ಯಾ ರೈ (1994), ಡಯಾನಾ ಹೇಡನ್ (1997), ಯುಕ್ತಾ ಮುಖಿ (1999), ಪ್ರಿಯಾಂಕಾ ಚೋಪ್ರಾ (2000), ಪಾರ್ವತಿ ಓಮನಕುಟ್ಟನ್ (2008) ಮತ್ತು ಮಾನುಷಿ ಚಿಲ್ಲರ್ (2017) ಭಾರತಕ್ಕೆ ವಿಶ್ವ ಸುಂದರಿ ಪ್ರಶಸ್ತಿಯನ್ನು ತಂದಿದ್ದಾರೆ. ತಿಂಗಳ ಕಾಲ ನಡೆಯುವ ಸ್ಪರ್ಧೆಯಲ್ಲಿ 130 ದೇಶಗಳ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅನೇಕ ಸ್ಪರ್ಧೆಗಳು ಸ್ಪರ್ಧಿಗಳಿಗಾಗಿ ಕಾಯುತ್ತಿವೆ. ವಿಶ್ವ ಸುಂದರಿ ಸಂಸ್ಥೆಗೆ ಸಮಾನವಾದ ಮೌಲ್ಯಗಳನ್ನು ಹೊಂದಿರುವ ಈ ಸುಂದರ ದೇಶದಲ್ಲಿ ವಿಶ್ವ ಸುಂದರಿ ಕಿರೀಟವನ್ನು ಹಸ್ತಾಂತರಿಸಲು ನಾನು ತುಂಬಾ ಉತ್ಸುಕನಾಗಿದ್ದೇನೆ ಎಂದು ಪ್ರಸ್ತುತ ವಿಶ್ವ…
ದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ಎಚ್ಚರಿಸಿದೆ. ಟೈಫಾಯಿಡ್, ಮಲೇರಿಯಾ, ಡೆಂಗ್ಯೂ ಜ್ವರ, ಸ್ಕ್ರಬ್ ಟೈಫಸ್ ಮತ್ತು ಹೆಪಟೈಟಿಸ್ ಎ ವಿರುದ್ಧ ಎನ್ಸಿಡಿಸಿ ಎಚ್ಚರಿಕೆ ನೀಡಿದೆ. ಎನ್ಸಿಡಿಸಿ ಅಧಿಕಾರಿಗಳ ಪ್ರಕಾರ, ಈ ತಿಂಗಳು ಈ ನಿಟ್ಟಿನಲ್ಲಿ 209 ಎಚ್ಚರಿಕೆಗಳನ್ನು ನೀಡಲಾಗಿದೆ ಮತ್ತು ಈ ರೋಗಗಳು 90 ಸ್ಥಳಗಳಲ್ಲಿ ಪ್ರಾದೇಶಿಕ ಸಾಂಕ್ರಾಮಿಕ ರೋಗಗಳಾಗಿವೆ. ಮುಂದಿನ ದಿನಗಳಲ್ಲಿ ರೋಗಗಳು ಹರಡುವುದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಎನ್ಸಿಡಿಸಿ ಎಲ್ಲಾ ರಾಜ್ಯಗಳನ್ನು ಕೇಳಿದೆ. ಈ ಎಚ್ಚರಿಕೆಗಳು ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಪ್ರೋಗ್ರಾಂನ ಭಾಗವಾಗಿದೆ. ಟೈಫಾಯಿಡ್, ಮಲೇರಿಯಾ, ಹೆಪಟೈಟಿಸ್ ಎ, ಸ್ಕ್ರಬ್ ಟೈಫಸ್ ಮತ್ತು ಡೆಂಗ್ಯೂ ಜ್ವರ ಈ ಐದು ರೋಗಗಳ ಎಚ್ಚರಿಕೆ ನೀಡಲಾಗಿದೆ. ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾದಿಂದ ಟೈಫಾಯಿಡ್ ಉಂಟಾಗುತ್ತದೆ. ಟೈಫಾಯಿಡ್ ಅನ್ನು ಎಂಟರ್ಟಿಕ್ ಜ್ವರ ಎಂದೂ ಕರೆಯುತ್ತಾರೆ. ಈ ಬ್ಯಾಕ್ಟೀರಿಯಾವು ಆಹಾರ ಮತ್ತು ನೀರಿನ ಮೂಲಕ ಮಾನವ ದೇಹವನ್ನು ಪ್ರವೇಶಿಸುತ್ತದೆ. ಟೈಫಾಯಿಡ್ ನ ಲಕ್ಷಣಗಳು ಅಧಿಕ-ದರ್ಜೆಯ ಜ್ವರ,…
ರಾಜ್ಯದ ವಿವಿಧ ಜಿಲ್ಲೆಗಳಿಗೆ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದ್ದು, ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಈ ರೀತಿಯಾಗಿದೆ. ಡಿ.ಕೆ.ಶಿವಕುಮಾರ್: ಬೆಂಗಳೂರು ನಗರ ಡಾ.ಜಿ.ಪರಮೇಶ್ವರ್: ತುಮಕೂರು ಎಚ್.ಕೆ.ಪಾಟೀಲ: ಗದಗ ಕೆ.ಹೆಚ್.ಮುನಿಯಪ್ಪ: ಬೆಂಗಳೂರು ಗ್ರಾಮಾಂತರ ರಾಮಲಿಂಗರೆಡ್ಡಿ: ರಾಮನಗರ ಕೆ.ಜೆ.ಜಾರ್ಜ್: ಚಿಕ್ಕಮಗಳೂರು ಎಂ.ಬಿ.ಪಾಟೀಲ: ವಿಜಯಪುರ ದಿನೇಶ್ ಗುಂಡೂರಾವ್: ದಕ್ಷಿಣ ಕನ್ನಡ ಹೆಚ್.ಸಿ.ಮಹಾದೇವಪ್ಪ: ಮೈಸೂರು ಸತೀಶ್ ಜಾರಕಿಹೊಳಿ: ಬೆಳಗಾವಿ ಪ್ರಿಯಾಂಕ್ ಖರ್ಗೆ: ಕಲಬುರಗಿ ಶಿವಾನಂದ ಪಾಟೀಲ: ಹಾವೇರಿ ಬಿ.ಝೆಡ್.ಜಮೀರ್ ಅಹ್ಮದ್ ಖಾನ್: ವಿಜಯನಗರ ಶರಣ ಬಸಪ್ಪ ದರ್ಶನಾಪುರ್: ಯಾದಗಿರಿ ಈಶ್ವರ್ ಬಿ. ಖಂಡ್ರೆ: ಬೀದರ್ ಎನ್.ಚಲುವರಾಯಸ್ವಾಮಿ: ಮಂಡ್ಯ ಎಸ್.ಎಸ್.ಮಲ್ಲಿಕಾರ್ಜುನ: ದಾವಣಗೆರೆ ಸಂತೋಷ ಎಸ್.ಲಾಡ್: ಧಾರವಾಡ ಡಾ.ಶರಣ ಪ್ರಕಾಶ್ ಪಾಟೀಲ್: ರಾಯಚೂರು ಆರ್.ಬಿ.ತಿಮ್ಮಾಪೂರ: ಬಾಗಲಕೋಟೆ ಕೆ.ವೆಂಕಟೇಶ್: ಚಾಮರಾಜನಗರ ತಂಗಡಗಿ ಶಿವರಾಜ್ ಸಂಗಪ್ಪ: ಕೊಪ್ಪಳ ಡಿ.ಸುಧಾಕರ್: ಚಿತ್ರದುರ್ಗ ಬಿ.ನಾಗೇಂದ್ರ: ಬಳ್ಳಾರಿ ಕೆ.ಎನ್.ರಾಜಣ್ಣ: ಹಾಸನ ಬಿ.ಎಸ್.ಸುರೇಶ್: ಕೋಲಾರ ಲಕ್ಷ್ಮೀ ಹೆಬ್ಬಾಳ್ಕರ್: ಉಡುಪಿ ಮಂಕಾಳ್ ವೈದ್ಯ: ಉತ್ತರ ಕನ್ನಡ ಮಧುಬಂಗಾರಪ್ಪ: ಶಿವಮೊಗ್ಗ ಡಾ.ಎಂ.ಸಿ.ಸುಧಾಕರ್: ಚಿಕ್ಕಬಳ್ಳಾಪುರ ಎನ್.ಎಸ್.ಭೋಸರಾಜು: ಕೊಡಗು…
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇ ಸಿಎಂ ಎಂದು ಪ್ರಚಾರ ಮಾಡಿದರು. ಆದರೆ, ಅದಕ್ಕಿಂತ ಜಾಸ್ತಿ ಇಂದಿನ ಸರಕಾರದಲ್ಲಿ ನಡೆಯುತ್ತಿದೆ. ಇದನ್ನು ಎಷ್ಟು ಪರ್ಸೆಂಟ್ ಸರಕಾರ ಎಂದು ಕರೆಯಬೇಕು? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಅವರು, ಈಗ ಅವರದೇ ಸರಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಇನ್ನೂ ಇವರಷ್ಟೇ ಅಲ್ಲದೆ ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್ ಅವರನ್ನು, ಕಾರವಾರದ ಕರ್ನಾಟಕ ಮರಿಟೈಮ್ ಬೋರ್ಡ್ ಸಿಇಓ ಆಗಿ ನೇಮಿಸಿದೆ. ಐಎಎಸ್ ಅಧಿಕಾರಿ ಡಾ.ರಿಚರ್ಜ್ ವಿನ್ಸೆಂಟ್ ಡಿಸೋಜಾ ಅವರನ್ನು ಎಂಎಸ್ಎಂಇ ಮತ್ತು ಮೈನಿಂಗ್ ಹುದ್ದೆಯ ಜೊತೆಗೆ, ಹೆಚ್ಚುವರಿಯಾಗಿ ಗೌರ್ನಮೆಂಟ್ ಪ್ರೋಗ್ರಾಂ ಮಾನಿಟರಿಂಗ್ ಮತ್ತು ಸ್ಟಾಟಿಸ್ಟಿಕ್ಸ್ ವಿಭಾಗದ ಕಾರ್ಯದರ್ಶಿಯ ಹೊಣೆಗಾರಿಕೆಯನ್ನು ವಹಿಸಿ ಆದೇಶಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಪರಕಲಾ ವಾಂಗ್ಮಯಿ ವಿವಾಹವಾಗಿದ್ದಾರೆ. ಬೆಂಗಳೂರಿನ ಹೊಟೇಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರು ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯಲ್ಲಿ ಅಧಿಕಾರಿ ಪ್ರತೀಕ್ ದೋಷಿ ಎಂಬಾತನೇ ವರ. ಸಾಂಪ್ರದಾಯಿಕ ಹಿಂದೂ ವಿವಾಹದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಡುಪಿ ಆತಮಾರು ಮಠದ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ವಾಂಗ್ಮೈ ಮಿಂಟ್ ಲಾಂಚ್ನ ಪುಸ್ತಕಗಳು ಮತ್ತು ಸಂಸ್ಕೃತಿ ವಿಭಾಗಕ್ಕೆ ವೈಶಿಷ್ಟ್ಯ ಬರಹಗಾರರಾಗಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ನಲ್ಲಿ ಪದವಿ ಪಡೆದಿರುವ ವಾಂಗ್ಮಯಿ ಮಿಡಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪ್ರತೀಕ್ ಅವರು 2014 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಕೆಲಸ ಮಾಡುತ್ತಿದ್ದಾರೆ. ದೋಷಿ ಅವರು ಪ್ರಧಾನಿ ಕಾರ್ಯಾಲಯದಲ್ಲಿ ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ. ಅವರು 2014 ರಲ್ಲಿ ಪಿಎಂಒ ಕಚೇರಿಯನ್ನು ತಲುಪಿದರು. ಜೂನ್ 2019 ರಲ್ಲಿ, ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾದಾಗ, ಅವರನ್ನು ಜಂಟಿ ಕಾರ್ಯದರ್ಶಿ ಶ್ರೇಣಿಯಲ್ಲಿ…
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕ್ಯಾಂಪಸ್ ಜಿಕೆವಿಕೆಯ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಬೀಜ ದಿನ – 2023’ ಉದ್ಘಾಟಿಸಿ ಮಾತನಾಡಿದ ಅವರು ಬಿತ್ತನೆ ಬೀಜಗಳನ್ನು ಉತ್ಪಾದಿಸುವತ್ತ ಹೆಚ್ಚಿನ ನಿಗಾ ವಹಿಸುವಂತೆ ಕೃಷಿ ಸಚಿವ ಎನ್. ಚಲುವರಾಯ ಸೂಚಿಸಿದ್ದಾರೆ. ಹೆಚ್ಚು ಇಳುವರಿ ನೀಡುವ ಹಾಗೂ ಹೊಸ ತಳಿಗಳನ್ನು ಸಂಶೋಧಿಸಿ ರೈತರಿಗೆ ತಲುಪಿಸಬೇಕು. ಹೊಸ ತಾಂತ್ರಿಕತೆಯನ್ನು ರೈತಾಪಿ ವರ್ಗಕ್ಕೆ ವರ್ಗಾಯಿಸಬೇಕು. ರೈತರು ಹೆಚ್ಚು ಶ್ರಮವಹಿಸಿ ದುಡಿಯುತ್ತಿದ್ದರೂ, ದೇಶದಲ್ಲಿ ಸ್ವಲ್ಪಮಟ್ಟಿಗೆ ಆಹಾರ ಕೊರತೆ ಉಂಟಾಗುವ ಲಕ್ಷಣ ಗೋಚರಿಸುತ್ತಿದೆ. ಇದಕ್ಕೆ ಆಸ್ಪದ ನೀಡದಿರಲು ಕೃಷಿ ವಿಜ್ಞಾನಿಗಳು ಹಾಗೂ ವಿಶ್ವವಿದ್ಯಾಲಯಗಳು ರೈತರ ಬೆನ್ನೆಲುಬಾಗಿ ಸದಾ ಇರಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ. ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಯಾಗಿ ಆರ್ಥಿಕ ನಷ್ಟವನ್ನು ರೈತರು ಒಳಗಾಗುತ್ತಿದ್ದಾರೆ.ಉತ್ತಮ ಬೆಳೆಗೆ ಮಾರುಕಟ್ಟೆ ದರ ಸಿಗುವುದಿಲ್ಲ ಎಂಬ ಆಕ್ಷೇಪವೂ ಇದೆ. ಇದನ್ನು ಮನಗಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಪರವಾಗಿ ನಿಲ್ಲಲು ಕಟಿಬದ್ಧವಾಗಿವೆ ಎಂದು ಪ್ರತಿಪಾದಿಸಿದ್ದಾರೆ. ಬೀಜ ಕೊರತೆ…
ವಸತಿ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಜಿಲ್ಲಾಮಟ್ಟದಲ್ಲಿ ಜನತಾ ದರ್ಶನ ಆರಂಭಿಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ ಗುರುವಾರ ಮಾತನಾಡಿದ ಅವರು, ‘ಮೊದಲ ಜನತಾ ದರ್ಶನ ಆಗಸ್ಟ್ 1ರಂದು ನಡೆಯಲಿದೆ. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಎರಡು ದಿನ ಜನತಾ ದರ್ಶನ ನಡೆಸಲಿದ್ದೇನೆ. ಜಿಲ್ಲೆ ವ್ಯಾಪ್ತಿಯ ಎರಡೂ ಇಲಾಖೆಗಳ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ’ ಎಂದು ಮಾಹಿತಿ ನೀಡಿದರು. ಆಗಸ್ಟ್ ಒಳಗೆ ಎರಡೂ ಇಲಾಖೆಗಳಲ್ಲಿ ಸಮಸ್ಯೆ ಇದ್ದರೆ ಪರಿಹರಿಸಿಕೊಳ್ಳಲು ಅಧಿಕಾರಿಗಳಿಗೆ ಗಡುವು ನೀಡಿದ್ದೇನೆ.ಜನತಾ ದರ್ಶನ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಕಂಡು ಬಂದರೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ತಪ್ಪು ನಡೆದಿದ್ದರೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು. ಬೆಂಗಳೂರಿನ 25 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ ಘೋಷಿಸಿರುವ 154 ಕೊಳೆಗೇರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಒಂದು ತಿಂಗಳಲ್ಲಿ ಪ್ರಾರಂಭಿಸಬೇಕು ಎಂದು ಸೂಚಿಸಿದರು.7500 ಕೋಟಿ ಅನುದಾನಕ್ಕೆ…