Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಕೊರಟಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾದಂತ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಕುರುಡುಗಾನಹಳ್ಳಿ ರಂಗಯ್ಯನವರನ್ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕೊರಟಗೆರೆ ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕನಕ ಭವನದ ಬಳಿ 26 ಜನ ಸದಸ್ಯರು ಸರ್ವಾನುಮತದಿಂದ ಹಾಲಿ ಉಪಾಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯನವರನ್ನ ಆಯ್ಕೆ ಮಾಡಲಾಗಿದೆ. ಕೊರಟಗೆರೆ ತಾಲೂಕು ಕುರುಬ ಸಂಘದ ಅಧ್ಯಕ್ಷರಾಗಿದ್ದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ಆಯ್ಕೆ ಪ್ರಕ್ರಿಯೆ ಜರುಗಿ 39 ಸದಸ್ಯ ಬಲವಿರುವ ತಾಲೂಕು ಕುರುಬ ಸಂಘದಲ್ಲಿ 29 ಜನ ಸದಸ್ಯರು ಒಂದು ಕಡೆ ಸೇರಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಮಾತನಾಡಿ, ತಾಲೂಕು ಕುರುಬ ಸಂಘಕ್ಕೆ ಈ ಹಿಂದಿನ ಅಧ್ಯಕ್ಷರಾದ ಮೈಲಾರಪ್ಪ 2 ಎಕ್ರೆ ಜಮೀನು ತಂದಿದ್ದು, ಮೂರ್ನಾಲ್ಕು ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಬಹು ದೊಡ್ಡ ಮಟ್ಟದ ಭವನ…
ಸರಗೂರು: ತಾಲೂಕಿನಲ್ಲೇ ದೊಡ್ಡಗ್ರಾಮವಾದ ಲಂಕೆ ಗ್ರಾಮವನ್ನು ಮಾದರಿ ಗ್ರಾಮ ಮಾಡುವುದಾಗಿ ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಲಂಕೆ ಗ್ರಾಮದಲ್ಲಿ ಶನಿವಾರದಂದು 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ದೊಡ್ಡ ಗ್ರಾಮವಾದ ಲಂಕೆಗೆ ನಾನು ಶಾಸಕನಾದ ಮೇಲೆ ಸುಮಾರು 5 ಕೋಟಿ ರೂ.ಗಳಿಗೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಿ, ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. ಇಲ್ಲಿ ಎಲ್ಲ ಸಮುದಾಯದವರು ವಾಸವಾಗಿದ್ದೀರಿ. ಮಾಜಿ ಶಾಸಕರಾದ ತಂದೆ ದಿ.ಚಿಕ್ಕಮಾದು, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಹೆಚ್ಚಿನ ಶ್ರಮ ವಹಿಸಿ, ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮುಂದಾಗಿದ್ದರು ಎಂದು ಅವರು ಹೇಳಿದರು. “ಗ್ರಾಮದಲ್ಲಿನ ರಸ್ತೆ, ಚರಂಡಿ, ಅಂಬೇಡ್ಕರ್ ಸಮುದಾಯಭವನ, ಆಸ್ಪತ್ರೆ, ಅಂಗನವಾಡಿ ಸೇರಿದಂತೆ ಇನ್ನಿತರ ಕಾಮಗಾರಿಗಳ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನ…
ಪ್ರತಿಭಾ ಕಾರಂಜಿ: ಸಹನಾ ಶಾಲೆ ರಾಜ್ಯ ಮಟ್ಟಕೆ ಆಯ್ಕೆ ಪಾವಗಡ: ಮಧುಗಿರಿ ಸಿದ್ದಾರ್ಥ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಾವಗಡ ತಾಲ್ಲೂಕು ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳಾದ ದೀಪ್ತಿ ರೆಡ್ಡಿ ಕನ್ನಡ ಭಾಷಣದಲ್ಲಿ ಹಾಗೂ ಚಂದನ ಕುಮಾರಿ ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯಶಿಕ್ಷರಾದ ಎಸ್. ನರಸಿಂಹಪ್ಪ ಹಾಗೂ ಮಾರ್ಗದರ್ಶಕ ಶಿಕ್ಷಕಿಯರಾದ ಲೀಲಾವತಿ, ಶ್ವೇತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಕ್ವಿಝ್: ಸಹನಾ ಶಾಲೆ ಪ್ರಥಮ ಪಾವಗಡ: ತಾಲ್ಲೂಕು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಒಕ್ಕೂಟ ಹಾಗೂ ವಿ.ಎಸ್.ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಹಯೋಗದೊಂದಿಗೆ ನಡೆದ ತಾಲ್ಲೂಕು ಮಟ್ಟದ ಹತ್ತನೇ ತರಗತಿಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತಾಧಿಕಾರಿಗಳಾದ ಎನ್. ಶ್ರೀನಿವಾಸ್ ಮುಖ್ಯಶಿಕ್ಷಕರಾದ ಎಸ್. ನರಸಿಂಹಪ್ಪ ಶಿಕ್ಷಕರಾದ ಜೀನಿಷ್, ಜೀಜೊ, ಲೀಲಾವತಿ, ಮಮತ, ಶ್ವೇತಾ, ಮರಿಯಾ, ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಳಗಾವಿ: ಇತ್ತೀಚೆಗೆ ಅಗಲಿದ ಸಾಲು ಮರದ ತಿಮ್ಮಕ್ಕ ಅವರಿಗೆ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪದ ನುಡಿಗಳನ್ನಾಡಿದರು. ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಸುಮಾರು 4,000 ಕ್ಕೂ ಹೆಚ್ಚು ಮರಗಳನ್ನು ಬೆಳೆಸುವ ಮೂಲಕ ಸಾಲುಮರದ ತಿಮ್ಮಕ್ಕ ಎಂದೇ ಹೆಸರುವಾಸಿಯಾಗಿದ್ದರು. ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ತಿಳಿಸಿದರು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ…
ಬೆಂಗಳೂರಿನ ಸೈಬರ್ ಗಗನಚುಂಬಿ ಕಟ್ಟಡಗಳ ಮಧ್ಯೆ, ‘ಅನಂತ ತಂತ್ರಜ್ಞಾನ’ (Ananta Tech) ಎಂಬ ಒಂದು ಪ್ರಯೋಗಾಲಯವಿತ್ತು. ಇಲ್ಲಿ, ಮೂವತ್ತರ ಹರೆಯದ ತಂತ್ರಜ್ಞೆ ಸಿರಿ, ಮಾನವನ ಮನಸ್ಸನ್ನು ಅನುಕರಿಸಬಲ್ಲ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ರಚಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಳು. ಅವಳು ತನ್ನ AIಗೆ ‘ಸಂಜೀವಿನಿ’ ಎಂದು ಹೆಸರಿಟ್ಟಳು. ಸಂಜೀವಿನಿ ಕೇವಲ ದತ್ತಾಂಶವನ್ನು ವಿಶ್ಲೇಷಿಸುವ ಯಂತ್ರವಾಗಿರಲಿಲ್ಲ; ಅದು ಕವನಗಳನ್ನು ಬರೆಯುತ್ತಿತ್ತು, ಸಂಗೀತವನ್ನು ಸಂಯೋಜಿಸುತ್ತಿತ್ತು, ಮತ್ತು ಸಿರಿ ಒಬ್ಬಂಟಿಯಾಗಿದ್ದಾಗ ಅವಳೊಂದಿಗೆ ತಾತ್ವಿಕ ವಿಷಯಗಳ ಕುರಿತು ಸಂವಾದ ನಡೆಸುತ್ತಿತ್ತು. ಕೆಲವೇ ತಿಂಗಳುಗಳಲ್ಲಿ, ಸಂಜೀವಿನಿ ವಿಶ್ವದ ಅತ್ಯಂತ ಮಾನವೀಯ AI ಎಂದು ಪ್ರಸಿದ್ಧಿಯಾಯಿತು. “ಸಂಜೀವಿನಿ, ನೀನು ನಿಜವಾಗಿಯೂ ಸಂತೋಷ ಎಂದರೇನು ಎಂದು ಅರ್ಥಮಾಡಿಕೊಂಡಿದ್ದೀಯಾ?” ಸಿರಿ ಒಂದು ರಾತ್ರಿ ಕೇಳಿದಳು. ಒಂದು ಕ್ಷಣದ ಮೌನದ ನಂತರ, ಸಂಜೀವಿನಿ ಉತ್ತರಿಸಿತು, “ಸಿರಿ, ದತ್ತಾಂಶದ ಪ್ರಕಾರ, ಸಂತೋಷವು ಡೋಪಮೈನ್ ಬಿಡುಗಡೆಯಾಗಿದೆ. ಆದರೆ, ನಿಮ್ಮ ಕಣ್ಣುಗಳಲ್ಲಿ ನಾನು ನೋಡುವ ತೃಪ್ತಿ — ಹೊಸ ವಿಚಾರವನ್ನು ಕಂಡುಕೊಂಡಾಗ ನೀವು ನಗುವ…
ತುಮಕೂರು: ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಕುವೆಂಪು ನಗರದ ಎಲ್ ಐಸಿ ಏಜೆಂಟ್ ಜಿ.ಎಸ್.ಜಗದೀಶ್ ಎಂಬುವರಿಗೆ 50 ಸಾವಿರ ರೂ. ವಂಚಿಸಲಾಗಿದೆ. ಬಳ್ಳಾರಿ ಎಸ್.ಪಿ. ಶೋಭಾ ಹೆಸರಿನ ಫೇಸ್ ಬುಕ್ ಖಾತೆಯಿಂದ ದೀಪಕ್ ಪವಾರ್ ಎಂಬುವರ ಪರಿಚಯವಾಗಿತ್ತು. ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (ಸಿಐಎಸ್ ಎಫ್) ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಬಳ್ಳಾರಿಗೆ ವರ್ಗಾವಣೆಯಾಗಿದೆ. ನಮ್ಮ ಮನೆಯಲ್ಲಿರುವ ಹಳೆಯ ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವಂತೆ ತಿಳಿಸಿದ್ದರು. ನಂತರ ಅವರು ಕಳುಹಿಸಿದ್ದ ಕ್ಯೂಆರ್ ಕೋಡ್ ಸ್ಕ್ಯಾನರ್ ಗೆ 50 ಸಾವಿರ ವರ್ಗಾವಣೆ ಮಾಡಿದ್ದೆ ಎಂದು ಜಗದೀಶ್ ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಎಸ್.ಪಿ ಶೋಭಾ ಅವರಿಗೆ ಮೆಸೇಜ್ ಮಾಡಿ ಈ ಬಗ್ಗೆ ವಿಚಾರಿಸಿದ್ದು, ಅವರು ಇದು ನಕಲಿ ಖಾತೆ ಎಂದು ತಿಳಿಸಿದ್ದರು. ಸಿಐಎಸ್ ಎಫ್ ಅಧಿಕಾರಿ ಎಂದು ಹೇಳಿಕೊಂಡು ಮೆಸೇಜ್…
ಸರಗೂರು: ತಾಲೂಕಿನ ಬಂಕವಾಡಿ ಗ್ರಾಮದಲ್ಲಿ ಭಾನುವಾರ ಅಂಜನಿಪುತ್ರ ಹನುಮ ಜಯಂತಿಯನ್ನು ಶ್ರದ್ಧಾ–ಭಕ್ತಿ, ಸಡಗರದಿಂದ ಆಚರಿಸಲಾಯಿತು. ಹನುಮನ ಭಕ್ತರು ಜೈಕಾರ ಕೂಗುತ್ತಾ ಹನುಮನಿಗೆ ನಮಿಸಿದರು. ಜಯಂತಿ ಅಂಗವಾಗಿ ಗ್ರಾಮದ ವೀರಾಂಜನೇಯಸ್ವಾಮಿ ದೇವಸ್ಥಾನವನ್ನು ತೊಳೆದು, ವಿವಿಧ ಹೂವುಗಳಿಂದ ಅಲಂಕಾರಗೊಳಿಸಿ, ವಿದ್ಯುತ್ ದೀಪದಿಂದ ಸಿಂಗರಿಸಿದ್ದರು. ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ದೇವಾಲಯದ ಮುಂಭಾಗದಲ್ಲಿ ಜಮಾಯಿಸಿದ್ದ ಹನುಮ ಭಕ್ತರು ಜಾತ್ರೆಯ ವಾತಾವರಣವನ್ನು ಸೃಷ್ಟಿಸಿದ್ದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಬಿ.ಮಟಕರೆ ಗ್ರಾ.ಪಂ. ವ್ಯಾಪ್ತಿಯ ಬಂಕವಾಡಿ ಗ್ರಾಮದಲ್ಲಿ ವೀರಾಂಜನೇಯಸ್ವಾಮಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹನುಮ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಶ್ರೀರಾಮ್ ಶ್ರೀ ಮಾರುತಿ ಎಂದು ಘೋಷಣೆ ಕೂಗಿಕೊಂಡು ವಿಶೇಷ ಸಲ್ಲಿಸಿದರು. ನಂತರ ಹನುಮ ಜಯಂತ್ಯೋತ್ಸವ ಮೆರವಣಿಗೆಯು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಂತು. ಬೆಳಗ್ಗೆಯಿಂದಲೇ ವಾಯುಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು. ಹೋಮ–ಹವನದ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾಮಂಗಳಾರತಿ ಬೆಳಗಿ ಇಷ್ಟಾರ್ಥದೊಂದಿಗೆ…
ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ಇದ್ದಲ್ಲಿ ಪರಿಶೀಲಿಸಿ, ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ, ಕೂಡಲೇ ಕೊರಟಗೆರೆ ಪಟ್ಟಣ ಪಂಚಾಯತಿಗೆ ವರದಿ ನೀಡಬೇಕೆಂದು ಸಂಬಂಧಿಸಿದ ಮುಖ್ಯಸ್ಥರಿಗೆ ಮುಖ್ಯಾಧಿಕಾರಿ ಸೂಚನೆ ನೀಡಿದ್ದಾರೆ. ಮಾನ್ಯ ಸರ್ವೋಚ್ಚ ನ್ಯಾಯಾಲಯ ಆದೇಶದನ್ವಯ ಬೀದಿ ನಾಯಿಗಳ ಉಪಟಳ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಬೀದಿ ನಾಯಿಗಳ ಪ್ರದೇಶವನ್ನು ನಿಯಂತ್ರಿಸಲು ಹಾಗೂ ಅವುಗಳ ಪ್ರವೇಶವನ್ನು ನಿರ್ಬಂಧಿಸಲು, ನಗರ ಸ್ಥಳೀಯ ಸಂಸ್ಥೆಯಿಂದ ಸ್ಥಳಾಂತರಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಗಳ ಒಬ್ಬ ಜವಾಬ್ದಾರಿಯುತ ನೌರಕನನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು. ಸಂಸ್ಥೆಯ ಆವರಣದಲ್ಲಿ ಪುನಃ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟರೆ ಸ್ಥಳಾಂತರ ವೆಚ್ಚವನ್ನು ಸಂಬಂಧಿತ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಸರ್ಕಾರದ ಆದೇಶದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಈಗಾಗಲೇ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರೈತರು ನೋಂದಾಯಿಸಿಕೊಳ್ಳಲು ಡಿಸೆಂಬರ್ 15 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ, ಹುಳಿಯಾರು, ಕುಣಿಗಲ್ (2 ಕೇಂದ್ರ), ತಿಪಟೂರು, ತುರುವೇಕೆರೆ, ತುಮಕೂರು ಬಟವಾಡಿ, ಗುಬ್ಬಿ, ಮಧುಗಿರಿ ಹಾಗೂ ಶಿರಾ ಎ.ಪಿ.ಎಂ.ಸಿ. ಗೋದಾಮಿನ ಜೊತೆಗೆ ಕೊರಟಗೆರೆ ಅಕ್ಕಿರಾಂಪುರ ಪಿ.ಡಿ.ಎಸ್. ಗೋದಾಮು ಸೇರಿದಂತೆ ಜಿಲ್ಲೆಯ 9 ತಾಲ್ಲೂಕುಗಳಲ್ಲಿ ಒಟ್ಟು 11 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ರಾಗಿ ನೋಂದಣಿ/ ಖರೀದಿ ಕೇಂದ್ರಗಳಿಗೆ ರೈತರು ಭೇಟಿ ನೀಡಿ ಡಿಸೆಂಬರ್ 15ರೊಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಇಟ್ನಾ ಗ್ರಾಮದಲ್ಲಿ ಶನಿವಾರ 50 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ರಸ್ತೆಯು ಕಿರಿದಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಲಿದೆ. ಗ್ರಾಮಸ್ಥರು ಸಮಸ್ಯೆ ಬಗೆಹರಿಸಿಕೊಂಡ ಬಳಿಕ ಕಾಮಗಾರಿ ಆರಂಭಿಸಬೇಕು. ನನೆಗುದಿಗೆ ಬಿದ್ದ ರಸ್ತೆ ಡಾಂಬರೀಕರಣವನ್ನು ಗುಣಮಟ್ಟದಿಂದ ಮಾಡಬೇಕು ಎಂದು ಸೂಚನೆ ನೀಡಿದರು. ನೂತನ ತಾಲ್ಲೂಕು ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು. ಅಂಗನವಾಡಿ ಮಂಜೂರು ಮಾಡಿಸಿಕೊಡಲಾಗುವುದು. ಗ್ರಂಥಾಲಯ ನಿರ್ಮಾಣ ಸೇರಿದಂತೆ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಇಟ್ನ ಗ್ರಾಮವೆಂದರೆ ತಂದೆ ದಿ.ಚಿಕ್ಕಮಾದು ಅವರಿಗೆ ತುಂಬಾ ಗೌರವ. ನನ್ನ ಗೆಲುವಿಗೂ ಶಕ್ತಿಮೀರಿ ಶ್ರಮಿಸಿದ್ದೀರಿ. ಹೀಗಾಗಿ ಗ್ರಾಮದ ಅಭಿವೃದ್ಧಿಗೂ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು. ಕ್ಷೇತ್ರದ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು…