Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೂ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಗೃಹ ಕಚೇರಿ ಬಳಿ ಕಿಕ್ಕಿರಿದು ಸೇರಿದ್ದ ಸಾರ್ವಜನಿಕರಿಂದ ಅವರ ಸಮಸ್ಯೆ, ಬೇಡಿಕೆಗಳ ಕುರಿತು ಅಹವಾಲು ಆಲಿಸಿ, ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು. ಇನ್ನಿತರ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಲ್ಲರೊಂದಿಗೂ ನಗು ನಗುತ್ತಲೇ ಮಾತನಾಡಿ ಬಂದವರ ಕಷ್ಟ ವಿಚಾರಿಸುತ್ತಿದ್ದ ದೃಶ್ಯ ಒಬ್ಬ ಮಗಳು, ಒಬ್ಬ ಸಹೋದರಿ, ಒಬ್ಬ ತಾಯಿಯ ಜೊತೆ ಸಮಸ್ಯೆಗಳನ್ನು ಹೇಳಿಕೊಂಡ ಅನುಭವ ಸಾರ್ವಜನಿಕರಿಗೆ ಉಂಟಾಗುವಂತಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರಕ್ಕೆ ಸಂಬಂಧಿಸಿ ಒಬ್ಬರಿಗೆ 1 ರೂ. ಕೊಡಬೇಕಾದ್ರೆ ಅಕೌಂಟೆಬಿಲಿಟಿ ಇಟ್ಟುಕೊಳ್ಳಬೇಕು. ಬಡವರಿಗೆ ಗ್ಯಾರಂಟಿ ಯೋಜನೆ ನೀಡಬೇಕೆಂದು ತೀರ್ಮಾನಿಸಿದ್ದೆವು ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಟ್ಯಾಕ್ಸ್ ಕಟ್ಟುವವರು $2 ಸಾವಿರ ಕೊಡಿ ಎಂದು ಕೇಳುವುದಿಲ್ಲ. 2 ಸಾವಿರ ಹಣ ಬೇಡ ಎಂದು ಬಹಳ ಜನ ಪತ್ರ ಬರೆದಿದ್ದಾರೆ. ಪಾಪ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಕೊಡ್ತೀವಿ ಎಂದಿದ್ದರು. ಮೊದಲು ಬಿಜೆಪಿಯವರು ಎಲ್ಲರ ಖಾತೆ 15 ಲಕ್ಷ ರೂ. ಹಾಕಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಬೇಡಿ ಎನ್ನಲು ಆಗುತ್ತಾ? ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ಚಿಗರಿ ಬಸ್ ಫ್ರೀ ಮಾಡುವಂತೆ ಸರಕಾರಕ್ಕೆ ಒತ್ತಾಯ ಕೇಳಿ ಬಂದಿದೆ. BRTS ಸಾರಿಗೆ ವ್ಯಾಪ್ತಿಯ ಹುಬ್ಬಳ್ಳಿ ಧಾರವಾಡ ನಡುವೆ ಸಂಚರಿಸುವ ಹವಾನಿಯಂತ್ರಿತ ಚಿಗರಿ ಬಸ್ ಫ್ರೀ ಬಿಡುವಂತೆ BRTS ಎಮ್ ಡಿ ಭರತ್ ಆಗ್ರಹಿಸಿದ್ದಾರೆ. ಸರ್ಕಾರ ಆದೇಶ ಹೊರಡಸಿದಂತೆ ಹವಾನಿಯಂತ್ರಿತ ಬಸ್ ನಲ್ಲಿ ಫ್ರೀ ಇಲ್ಲ. BRTS ಸಾರಿಗೆಯನ್ನು ಶಕ್ತಿ ಸ್ಕೀಮ್ ನಲ್ಲಿ ಅನುಮತಿ ನೀಡಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು BRTS ಎಮ್ ಡಿ ಭರತ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್ ಆರ್ ನಂಬರ್ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು. ಜೂನ್ 15 ರಿಂದ ನೋಂದಣಿ ಆರಂಭವಾಗಿ, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು…
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರುನಗರ ಘಟಕದ ವತಿಯಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಮೂರುವರೆ ಕೋಟಿ(3.5) ಅನುದಾನ ಮೀಸಲು ಇಡಬೇಕು ಎಂದು ಮನವಿ ಸಲ್ಲಿಸಿದರು. ಬೆಂಗಳೂರುನಗರ ಘಟಕದ ಅಧ್ಯಕ್ಷರಾದ ಕೆ.ಸತ್ಯನಾರಾಯಣ್ ರವರು, ಕಾರ್ಯಾಧ್ಯಕ್ಷರಾದ ಹುಲಿ ಅಮರ್ ನಾಥ್, ಸಂಘದ ಜಕ್ರಿಯ, ಕೆ.ಲಕ್ಷ್ಮಣ ಹರೀಶ್, ನಾಗರಾಜ್ ಶೆಟ್ಟಿ, ಬಿ.ಟಿ.ಎಸ್.ಶ್ರೀನಿವಾಸ್, ವಿಜಯಕುಮಾರ್, ಡಾ.ಸಿ.ಎಸ್.ರಘು, ಬಿ.ಕೆ.ಪ್ರಸನ್ನ, ಜೆ.ಹೆಚ್.ಆನಿಲ್ ಕುಮಾರ್, ಒಂಟಿ ಚಿರತೆ ಮಹದೇವ್,ಚಂದ್ರಶೇಖರ್, ರಾಮರಾವ್, ಹರೀಶ್, ವಿಜಯಕುಮಾರ್, ಶಿವಾನಂದ್, ವೆಂಕಟೇಶ್ ಪೈ, ಬಿ.ಕೆ.ಸುಂದರೇಶ್, ಮಹೇಶ್ , ಜೆಮ್ಸ್, ರಾಕೇಶ್, ಶ್ರೀನಿವಾಸ್, ಕವಿತಾ, ವೇದ, ಲಿಂಗರಾಜು, ಸಂತೋಷ್ ಕುಮಾರ್, ಮಸೂದ್ ,ಅದಿ, ಬೊಮ್ಮೆಗೌಡರವರು ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ತುಷಾರ್ ಗಿರಿನಾಥ್ ರವರು ಮಾತನಾಡಿ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಬೆಳಸಲು ಪ್ರತಿ ವರ್ಷ 1ಕೋಟಿ ರೂಪಾಯಿ ಜಾಹಿರಾತು ನೀಡಲಾಗುತ್ತಿದೆ. ಈ ಬಾರಿ ಪತ್ರಕರ್ತರ ಸಂಘವು ಸಲ್ಲಿಸಿದ ಮನವಿ…
ಕಂದಾಯ ಇಲಾಖೆ ಅಧಿಕಾರಿಗಳು ಬಡ ಕುಟುಂಬಗಳ ಸಮಸ್ಯೆಯನ್ನು ಗಾಳಿಗೆ ತೂರುತ್ತಿದ್ದಾರಾ? ಎಂಬ ಪ್ರಶ್ನೆ ಕೇಳಿ ಬಂದಿದ್ದು, ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಅಕ್ಕಾಳಸಂದ್ರ ಗ್ರಾಮದ ನಿವಾಸಿ, ಶಬಾನ ಬಾನು ಎಂಬವರ ಮನೆಗೆ ಸುಮಾರು ವರ್ಷದಿಂದ ಹಾದು ಹೋಗಲು ದಾರಿ ಇದ್ದು, ಕೆಲದಿನಗಳ ಹಿಂದೆ ಬಲಾಢ್ಯ ಹಣವಂತರು ಈ ಕುಟುಂಬ ಓಡಾಡುವ ದಾರಿಗೆ ಅಡ್ಡಲಾಗಿ ಬೇಲಿಯನ್ನು ಹಾಕಿದ್ದಾರೆ. ಇದರ ವಿಷಯವಾಗಿ ಶಬಾನ ಬಾನು ಅವರ ಕುಟುಂಬ ಪೊಲೀಸ್ ಠಾಣೆಗೆ ದೂರು ಕೂಡ ಸಲ್ಲಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ . ಹೀಗಾಗಿ ಈ ಕುಟುಂಬ ಇದಕ್ಕೆ ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ಕೂಡ ಸಲ್ಲಿಸಿ, ಸಮಸ್ಯೆ ಬಗೆಹರಿಸಲು ಹೇಳಿದ್ದಾರೆ. ಇನ್ನು ಎಂಟು 10 ದಿನವಾದರೂ ತಾಲೂಕು ಕಚೇರಿ ಕಂದಾಯ ಇಲಾಖೆ ಅಧಿಕಾರಿಗಳು ಈ ಬಡ ಕುಟುಂಬದ ಸಮಸ್ಯೆಯನ್ನು ಆಲಿಸದೆ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಈ ಕುಟುಂಬ ನೇರ ಆರೋಪ ಮಾಡುತ್ತಿದೆ, ಇದರ ಬಗ್ಗೆ…
ಜನಪ್ರಿಯ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರು ತುಮಕೂರಿನಿಂದ ವರ್ಗಾವಣೆಯಾಗಿದ್ದು, ಕೃಷಿ ಆಯುಕ್ತರಾಗಿ ನಿಯೋಜನೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಮಿ ಮತ್ತು ವಸತಿ ಹೋರಾಟ ಸಮಿತಿಯ ತಂಡದ ಸದಸ್ಯರು ವೈ.ಎಸ್.ಪಾಟೀಲ್ ಅವರನ್ನು ಗೌರವಿಸಿ ನೆನಪಿನ ಕಾಣಿಕೆ ನೀಡಿ ಹಾರೈಸಿದರು. ನೊಂದವರ ಧ್ವನಿಯಾಗಿದ್ದ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರು, ಅನೇಕ ವಸತಿ ನಿವೇಶನ ರಹಿತರಿಗೆ ನಮ್ಮ ತಂಡದ ಮನವಿಯ ಮೇರೆಗೆ ಭೂಮಿ ಮಂಜೂರು ಮಾಡಿ ನಿವೇಶನ ಕೊಡಿಸಿ ಅವರಿಗೆ ಆಶ್ರಯದಾತರಾಗಿದ್ದರು ಎಂದು ಸಮಿತಿಯ ಮುಖಂಡರು ನೆನಪಿಸಿಕೊಂಡರು. ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ಜಿಲ್ಲೆಯ ಜನರ ಪ್ರಾಣ ರಕ್ಷಿಸುವಲ್ಲಿ ಮುಂದಾಳಾಗಿದ್ದರು. ಹೀಗೆ ಬಡವರ ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಿ ಜಿಲ್ಲಾಧಿಕಾರಿಗಳು ಜನಾನುರಾಗಿಯಾಗಿದ್ದರು. ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕೂರದೆ ಜನರ ಕಷ್ಟಗಳಿಗೆ ಸ್ಪಂದಿಸುತ್ತ ಜನಸಾಮಾನ್ಯರೊಂದಿಗೆ ಸೇರಿ ಅವರಿಗೆ ಜನಪರ ಸೇವೆ ಮಾಡಿ ಅಸಾಮಾನ್ಯ ಜಿಲ್ಲಾಧಿಕಾರಿಗಳಾಗಿದ್ದರು ಎಂದು ಸಮಿತಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದೆಯೂ ಇವರ ಸೇವಾ ಕೈಂಕರ್ಯ ಹೀಗೆ ಮುಂದುವರೆಯಲಿ ಮತ್ತು ಇವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು…
ಬೆಂಗಳೂರು: ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಗೆ ಸಿಎಂ ಸಿದ್ದರಾಮಯ್ಯ ಮೌಖಿಕ ಸೂಚನೆ ನೀಡಿದ್ದಾರೆನ್ನಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆ ಸಿಎಂ ಮಂಗಳವಾರ ಈ ಬಗ್ಗೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಹೀಗಾಗಿ ಕೆಲವು ವಿವಾದಿತ ಪಠ್ಯಗಳನ್ನು ಈ ಸಾಲಿನಲ್ಲಿ ಬೋಧನೆಯಿಂದ ಕೈಬಿಡುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಅಂತಹ ಕೆಲ ಪಠ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ.…
ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದುಬ ದಿನ ಕಳೆದಿಲ್ಲ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬೆಂಗಳೂರಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಬೆಂಗಳೂರಿನ 57 ವರ್ಷದ ರೋಗಿಯೊಬ್ಬರಿಗೆ ವಿಶಿಷ್ಟವಾದ ಶ್ವಾಸಕೋಶದ ಕಸಿ ಯಶಸ್ವಿಯಾಗಿ ಮಾಡುವ ಮೂಲಕ ದಾಖಲೆ ಬರೆದಿದ್ದೇವೆ ಎಂದು ಹರ್ಯಾಣದ ಮರೆಂಗೋ ಏಷ್ಯಾ ಆಸ್ಪತ್ರೆಗಳ ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸಕ ಡಾ.ಕುಮುದ್ ಧಿತಾಲ್ ಹೇಳಿದರು. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡುತ್ತಿದೆ. ಇದರಿಂದಾಗಿ ಬಹುಮೂಲ್ಯವಾದ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತಿದೆ. ಮುಂದುವರಿದ ತಂತ್ರಜ್ಞಾನದ ಸದ್ಬಳಕೆ ಸಾಧ್ಯವಾಗುತ್ತಿದೆ. ನಗರದ ಅಪೋಲೊ ಆಸ್ಪತ್ರೆಗಳ ಶ್ವಾಸಕೋಶ ಶಾಸ್ತ್ರವಿಭಾಗದ ತಜ್ಞ ವೈದ್ಯರ ತಂಡ, ಚೆನ್ನೈನ ಕಾವೇರಿ ಆಸ್ಪತ್ರೆ ಮತ್ತು ಹರ್ಯಾಣದ ಫರಿದಾಬಾದ್ನ ಮರೆಂಗೋ ಏಷ್ಯಾ ಆಸ್ಪತ್ರೆಯ ವೈದ್ಯ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಅತ್ಯಂತ ಕ್ಲಿಷ್ಟಕರ, ಅಪರೂಪದ ಹಾಗೂ ತುಂಬಾ ನಾಜೂಕಾದ ಶಸ್ತ್ರಚಿಕಿತ್ಸೆ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ಸಹ ಮುಂಚೂಣಿಯಲ್ಲಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಸಫಲವಾಗಿದೆ ಎಂದರು. ಬೆಂಗಳೂರಿನ 57 ವರ್ಷದ ಮೀನಾಕ್ಷಿ (ಹೆಸರು ಬದಲಾಯಿಸಲಾಗಿದೆ) ಅವರು ಕಳೆದ ಎರಡು ವರ್ಷಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.ಉಸಿರುಗಟ್ಟುವಿಕೆ ಸಮಸ್ಯೆ ತೀರಾ…