Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನರಿಗೆ ಅಭಯ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅತೀ ಶೀಘ್ರದಲ್ಲಿ ಜಾರಿಗೊಳಿಸಲಾಗುತ್ತದೆ. ಚುನಾವಣೆಗೂ ಮುನ್ನ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು. ಬಿಜೆಪಿಯವರು ನಡೆಸುತ್ತಿರುವ ಪ್ರತಿಭಟನೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಅಧಿಕಾರದ ಅವಧಿಯಲ್ಲಿ ರಾಜ್ಯದ ಜನರಿಗೆ ನೀಡಿದ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂದು ಜನರಿಗೆ ಗೊತ್ತಿದೆ. ಅದಕ್ಕಾಗಿಯೇ ಜನರು ಅವರಿಗೆ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು. ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಈಗಾಗಲೇ…
ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ ಯುವತಿ. ಇತ್ತ ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಇಯರ್ ವಿದ್ಯಾರ್ಥಿನಿಯಾಗಿದ್ದ ಬೆಂಗಳೂರು ಮೂಲದ ಹೇಮಾಳಿಗೆ ಬಾಗಲಕೋಟೆ ಮೂಲದ ಅಖಿಲ್ ಜೊತೆ ಪ್ರೇಮಾಂಕುರವಾಗಿತ್ತು. ಇಬ್ಬರೂ ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಮದುವೆಗೆ ಪೋಷಕರು ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ಈ ಹಿನ್ನೆಲಯಲ್ಲಿ ಜೋಡಿ ಈ ತೀರ್ಮಾನಕ್ಕೆ ಬಂದಿದೆ. ಸಾಯೋದಕ್ಕೂ ಮುನ್ನ ನಮಗೆ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗ್ತಾ ಇದ್ದೇವೆ ಎಂದು ಯುವತಿ ಫೋನ್ ಮಾಡಿ ಹೇಳಿದ್ದಳು. ಬಳಿಕ ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಕುಡಿದು ಮಲಗಿದ್ದಾರೆ. ಈ ನಡುವೆ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ನಲ್ಲಿದ್ದವರಿಗೆ ಅನುಮಾನ ಬಂದಿದೆ. ವಿಷದ ವಾಸನೆ…
ಯಮಕನಮರಡಿ: ಯಮಕನಮರಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಸಿದ್ಧವಾಗಿದ್ದೇನೆ. ಕ್ಷೇತ್ರವನ್ನು ಮತ್ತೆ ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಮೂಲಕ ನಿಮ್ಮ ಆಶೋತ್ತರಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಶಹಾಬಂದರ್ ಕ್ರಾಸ್ ನ ವಾಲ್ಮೀಕಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮತಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಕಳೆದ 15 ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಕುಡಿಯಲು ನೀರು, ರಸ್ತೆಗಳು ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸಿದ್ದರಿಂದ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಕ್ಷೇತ್ರದಲ್ಲಿ ನನಗೆ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ಹಾಗೂ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ್ದ ಕಾರ್ಯಕರ್ತರಿಗೂ ಇದೇ ವೇಳೆ ಧನ್ಯವಾದ ತಿಳಿಸಿದರು. ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಲೋಕೋಪಯೋಗಿ ಇಲಾಖೆಯ ಸಚಿವರಾಗಿ ಪ್ರಥಮ ಬಾರಿಗೆ ಶಹಾಬಂದರ್ಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನು ಕಾರ್ಯಕರ್ತರು ಅದ್ದೂರಿ ರೋಡ್ ಶೋ…
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್ ಗೋಡೆ (42) ಸದ್ಯ ಬದುಕುಳಿದ ಚಾಲಕ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲಿಂದ ನದಿಗೆ ಕ್ಯಾಂಟರ್ ವಾಹನ ಉರುಳಿದ್ದು ಚಿಕ್ಕಮಗಳೂರಿನಿಂದ ಮಹಾರಾಷ್ಟ್ರಕ್ಕೆ ಕಟ್ಟಿಗೆ ಹೊತ್ತೊಯ್ಯುತ್ತಿದ್ದಾಗ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಗರದ ಪೊಲೀಸ್ ಇಲಾಖೆಯಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ರಾಣಿ ಚೆನ್ನಮ್ಮ ಪಡೆ ಹೆಸರಿನಲ್ಲಿ ತಂಡವೊಂದು ರಚನೆಯಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ಈ ಹಿಂದೆ ಡಿಸಿಪಿಯಾಗಿದ್ದ ಶ್ರೀನಾಥ್ ಜೋಶಿ ಈ ಚೆನ್ನಮ್ಮ ಪಡೆಗೆ ಚಾಲನೆ ಕೊಟ್ಟಿದ್ದರು. ಸದ್ಯ ಆಗ್ನೇಯ ವಿಭಾಗದ ಡಿಸಿಪಿಯಾಗಿರುವ ಸಿಕೆ ಬಾಬ ಈ ಪಡೆಗೆ ಹೊರ ರೂಪ ಮತ್ತು ಹುರುಪು ನೀಡಿದ್ದಾರೆ. ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಿ ಆ ಸಿಬ್ಬಂದಿಯಿಂದ ಮಹಿಳೆ ಮತ್ತು ಮಕ್ಕಳಿಗೆ ತರಬೇತಿ ನೀಡಲಾಗುತ್ತೆ. ಮಹಿಳೆಯರಿಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡುವ ಈ ಪಡೆಕಷ್ಟ ಅಂತಾ ಕರೆ ಮಾಡೋ ಹೆಣ್ಣು ಮಕ್ಕಳ ಸಹಾಯಕ್ಕೆ ಈ ತಂಡ ಧಾವಿಸುತ್ತದೆ. ಮಹಿಳೆಯರು ತಮ್ಮ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ತರಬೇತಿ ನೀಡಿ ದೈಹಿಕ ಸಾಮಾರ್ಥ್ಯ ಹೆಚ್ಚಿಸಿಕೊಳ್ಳುವ ಮಾರ್ಷಲ್ ಆರ್ಟ್ ನಂತಹ ಕೆಲ ಪಟ್ಟುಗಳನ್ನು ಈ ತಂಡ ಹೇಳಿಕೊಡುತ್ತದೆ. ಸುಮಾರು 40 ಸಿಬ್ಬಂದಿಗಳ ಈ…
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಎಸ್.ಆರ್.ಬೊಮ್ಮಾಯಿ ಜನ್ಮ ಶತಮಾನೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ತಂದೆಯ ಸರಳತೆ ಮತ್ತು ಜೀವನ ನಡೆಸಿದ ಬಗೆಯನ್ನು ನೆನೆದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾದರು. ತಂದೆಯವರು ಶಾಲೆಗೆ ಕೈ ಹಿಡಿದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭ, ಊಟ ಮಾಡುವಾಗ ಮಕ್ಕಳಿಗೆ ಸಮಾನತೆಯ ಪಾಠ ಮಾಡುತ್ತಿದ್ದದ್ದನ್ನು ನೆನೆದು ಕಣ್ಣೀರು ಹಾಕಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪದ್ಮವಿಭೂಷಣ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮತ್ತು ಎಸ್.ಆರ್.ಬೊಮ್ಮಾಯಿ ಗಾಡ್ ಫಾಧರ್ ಇಲ್ಲದೆ ರಾಜಕೀಯದಲ್ಲಿ ಬೆಳೆದವರು, ಅವರು ಹೊರಾಟದ ಮೂಲಕ ಜನರ ಮನದಲ್ಲಿ ಉಳಿದವರು ಎಂದು ಬೊಮ್ಮಾಯಿ ಹೇಳಿದರು. ಎಸ್.ಆರ್ ಬೊಮ್ಮಾಯಿಯವರ ಕಾಲದಲ್ಲಿ ತೆಗೆದುಕೊಂಡ ಕೆಲವು ತೀರ್ಮಾನಗಳು ಈಗಿನ ಕಾಲಘಟ್ಟದಲ್ಲಿ ಪ್ರಸ್ತುತ ಇರದಿರಬಹುದು ಆದರೆ ಆಗಿನ ಸಂದರ್ಭದಲ್ಲಿ ಅವುಗಳ ಪ್ರಾಮುಖ್ಯತೆ ಬೇರೆಯೇ ಇತ್ತು ಎಂದು ತಂದೆಯ ಆಡಳಿತದ ಶೈಲಿಯನ್ನು ಬೊಮ್ಮಾಯಿ ನೆನೆದರು. ಅವರು ದೊಡ್ಡವಕೀಲರಾಗಿದ್ದರೂ ಎಲ್ಲೂ ದೊಡ್ಡಸ್ತಿಕೆ ತೋರಲಿಲ್ಲ. ಜನ ಸೇವೆಯಲ್ಲೇ ಸಾರ್ಥಕತೆಯನ್ನು ಕಂಡರೂ, ರಾಜಕೀಯದಲ್ಲಿ ತಾವು ನಂಬಿದ ಸಿದ್ಧಾಂತಗಳಲ್ಲಿ ರಾಜಿಯಾಗಿದ್ದರೆ ಇನ್ನೂ…
ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲು ಅಪಘಾತದ ತನಿಖೆಗಾಗಿ ಸಿಬಿಐ ಘಟನಾ ಸ್ಥಳಕ್ಕೆ ತಲುಪಿದೆ. ಜೂನ್ 2 ರಂದು ಸಂಭವಿಸಿದ ಬಾಲಸೋರ್ ರೈಲು ಅಪಘಾತದಲ್ಲಿ ಇದುವರೆಗೆ 278 ಜನರು ಸಾವನ್ನಪ್ಪಿದ್ದಾರೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ಅಪಘಾತದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ತನಿಖೆಗೆ ಬಂದಿರುವ ಸಿಬಿಐ ಇದೀಗ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೋ ಪಿತೂರಿಯಿಂದ ನಡೆದಿದೆಯೇ ಎನ್ನುವ ಮಾಹಿತಿ ಕಲೆ ಹಾಕುತ್ತಿದೆ. 10 ಸದಸ್ಯರ ಸಿಬಿಐ ತಂಡ ಸೋಮವಾರ ಬಾಲಸೋರ್ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ತನಿಖೆ ಆರಂಭಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಕ್ಕೂ ಮುನ್ನ ರೈಲ್ವೆ ಸುರಕ್ಷತಾ ಆಯುಕ್ತ ಶೈಲೇಶ್ ಕುಮಾರ್ ಪಾಠಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಬಹನಾಗಾ ಬಜಾರ್ ರೈಲು ನಿಲ್ದಾಣದ ಕಂಟ್ರೋಲ್ ರೂಂ, ಸಿಗ್ನಲ್ ರೂಂ ಹಾಗೂ ಸಿಗ್ನಲ್ ಪಾಯಿಂಟ್ ಗೂ ಭೇಟಿ ನೀಡಿದರು. ಜೂನ್ 3 ರಂದು, ರೈಲು ಅಪಘಾತದ ಬಗ್ಗೆ ಭಾರತೀಯ ದಂಡ ಸಂಹಿತೆ…
ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿ ಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಮೃತಪಟ್ಟ 5 ಮಂದಿ ಸಂಬಂಧಿಕರಾಗಿದ್ದಾರೆ. ಆಂಧ್ರಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ತಂದೆ ಮುನೀರ್ ಹಾಗೂ ಪುತ್ರ ಮುದ್ದಸಿರ್ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವೆಲುಗೋಡ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಕ್ರೂಸರ್, ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಬರುತ್ತಿತ್ತು. ಈ ವೇಳೆ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ, ಬಾಲಕ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. ನಿದ್ದೆ ಮಂಪರ್ ನಲ್ಲಿದ್ದ ಕ್ರೂಸರ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಯಾದಗಿರಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ ಯುವತಿಯಾಗಿದ್ದು, ಈಕೆಯನ್ನು ದೆಹಲಿ ಮೂಲದ ಅರ್ಪಿತ್ ಕೊಲೆ ಮಾಡಿದ್ದಾನೆ. ಈ ಹಿಂದೆ ಆಕಾಂಕ್ಷಾ ಹಾಗೂ ಅರ್ಪಿತ್ ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಕೆಲಸ ಬದಲಾವಣೆ ಮಾಡಿ ಬೇರೆ ಬೇರೆ ಕಡೆ ಕೆಲಸಮಾಡುತ್ತಿದ್ದರು. ಯುವತಿ ಬಿಕಾಂ ವ್ಯಾಸಂಗ ಮಾಡಿ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ಇಬ್ಬರು ಒಟ್ಟಿಗೆ ವಾಸ ಮಾಡುತ್ತಿದ್ದರು. ಇತ್ತೀಚೆಗೆ ಇವರಿಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಇಬ್ಬರು ಬೇರೆಯಾಗಬೇಕು ಎಂದು ಮಾತಾಡಿಕೊಂಡಿದ್ದರು. ಇದಾದ ಬಳಿಕ ಸೋಮವಾರ ಇಬ್ಬರು ಮನೆಯಲ್ಲಿ ಇರುವಾಗ ಗಲಾಟೆ ಶುರುವಾಗಿದೆ. ಬಳಿಕ ಯುವತಿಯನ್ನು ಅರ್ಪಿತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೊಂದ ಬಳಿಕ ಯುವತಿಯ ಕುತ್ತಿಗೆಗೆ ಬಟ್ಟೆ ಕಟ್ಟಿ ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ…
ವಿಶ್ವ ಪರಿಸರ ದಿನಾಚರಣೆ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಅರಣ್ಯ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಬೆಳಗಾವಿ ವೃತ್ತದ ಮುಖ್ಯ ಸಂರಕ್ಷಣಾಧಿಕಾರಿಗಳು ಮಂಜುನಾಥ್ ಚೌವಾಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬೆಳಗಾವಿ ಹರ್ಷ ಬಾನು ಇವರು ಉಪಸ್ಥಿತಿಯಲ್ಲಿ ಬೆಳಗಾವಿ ಕೋರ್ಟ್ ಆವರಣದಲ್ಲಿ ಸಸಿ ನೆಡಲಾಯಿತು. ಸಾಮಾಜಿಕಾ ಅರಣ್ಯ ಇಲಾಖೆ ಹಾಗೂ ಪ್ರಾದೇಶಿಕ ಅರಣ್ಯ ಇಲಾಖೆ ವತಿಯಿಂದ ಖಾನಾಪುರ ಹಾಗೂ ಬೆಳಗಾವಿ ವಲಯಗಳ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಳು ಹಾಗೂ ಸಂಘ ಸಂಸ್ಥೆಗಳ ಉಪಸ್ಥಿತಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರದ ಸಂರಕ್ಷಣೆ ಹಾಗೂ ಜನರ ಸಹಭಾಗಿತ್ವದದಿಂದ ಅರಣ್ಯ ಸಂರಕ್ಷಣೆ ನಮ್ಮ ಹೊಣೆ ಎಂದು ಅರಣ್ಯ ಇಲಾಖೆ ಸಂದೇಶ ಸಾರಿತು. ಈ ಸಂದರ್ಭದಲ್ಲಿ ಖಾನಾಪುರ ಎಸಿಎಫ್ ಸಂತೋಷ್ ಚವಾನ , RFO ಕವಿತಾ ಈರನಟ್ಟಿ, ನಾಗರಾಜ್ ಬಾಳೆಹೊಸೂರ, ಉಪ ವಲಯ ಅರಣ್ಯ ಅಧಿಕಾರಿಗಳಾದ ಆರ್ ಎಂ ಬೀಡಿಕರ, ವಿನಾಯಕ ಪಾಟೀಲ್, ಅರಣ್ಯ…