Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಮಂಗಳೂರಲ್ಲಿ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ ಎಂದರು. ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ನೈತಿಕ ಪೊಲೀಸ್ ಗಿರಿ ನಡೆಯಲು ಅವಕಾಶವೇ ಕೊಡಬಾರದು. ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ…
ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಬೆಳಗಾವಿ ಜಿಲ್ಲಾ ವಿಭಜನೆ ಕೂಗು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೆ ಜಿಲ್ಲಾ ವಿಭಜನೆ ಆಗಬೇಕೆಂದು ಸಚಿವೆ ಒತ್ತಾಯಿಸಿದರು. ಮಾಜಿ ಸಚಿವ ಪ್ರಕಾಶ ಹುಕ್ಕೇರಿ, ನಾನು ಹೇಳ್ತಿದ್ದೇನೆ ಎಂಬ ಕಾರಣಕ್ಕೆ ವಿಭಜನೆ ಬೇಡ. ಜಿಲ್ಲಾ ವಿಭಜನೆ ಸಂಬಂಧ ಸರ್ಕಾರ ಮಟ್ಟದಲ್ಲಿ ಹಂತಹಂತವಾಗಿ ಚರ್ಚೆ ನಡೆಯಲಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನಾಯಕರು ಕ್ರಮ ಜರುಗಿಸುತ್ತೇವೆ ಎಂದು ಹೆಬ್ಬಾಳ್ಕರ್ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡು ಕಂಡ ಮುತ್ಸದಿ ರಾಜಕಾರಣಿ ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು. ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ…
ತುರುವೇಕೆರೆ: ರಾಜಿ ಮಾಡಿಕೊಳ್ಳೋಣ ಎಂದು ಕರೆದು ತಂಡವೊಂದರ ಮೇಲೆ ಮತ್ತೊಂದು ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕರೇಕಲ್ಲು ಗ್ರಾಮದಲ್ಲಿ ನಡೆದಿದೆ. ಕ್ರಾಮಸಂದ್ರ ಪ್ರಸಾದಿ, ಅಬುಕನಹಳ್ಳಿ ಮಂಜ ಅಲಿಯಾಸ್ ಕೋಳಿಮಂಜ, ಮನು ಅಲಿಯಾಸ್ ಅಲ್ಲ ಇವರು ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ಪ್ರಸಾದಿ ಹಾಗೂ ಕಿರಣ್ ಕುಮಾರ್ ನಡುವೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಳೆದ 29 ಮಾರ್ಚ್ ರಂದು ಗಲಾಟೆ ನಡೆದಿತ್ತು. ಈ ವಿಚಾರವಾಗಿ ಪ್ರಸಾದಿ ಮೇಲೆ ತುರುವೇಕೆರೆ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ಹಿನ್ನಲೆಯಲ್ಲಿ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು. ಸದ್ಯ ಕಿರಣ್ ಕುಮಾರನ್ನ ರಾಜೀಗಾಗಿ ಪ್ರಸಾದಿ ಕರೆದಿದ್ದ. ಹೀಗಾಗಿ ಕಿರಣ್ ಜೊತೆ ತೆರಳಿದ್ದ ಸ್ನೇಹಿತರಾದ ದಿಲೀಪ್ ಕುಮಾರ್, ಸಂಜು, ಮೋಹನ್, ಮಂಜುನಾಥ್ ಕೂಡ 3ರಂದು ರಾತ್ರಿ ಯಲ್ಲಿ ಕರೆಕಲ್ಲು ಗ್ರಾಮದ ಬಳಿ ಹೋಗಿದ್ದರು. ಪ್ರಸಾದಿ ಹಾಗೂ ಕಿರಣ್ ಕುಮಾರ್ ಮಾತಾನಾಡುತ್ತಿದ್ದ ಸಂದರ್ಭದಲ್ಲಿ ಎರಡು ಕಾರಿನಲ್ಲಿ ಬಂದ ಐದಾರು ಜನರ ಗುಂಪು. ಕಾರಿನಲ್ಲಿ…
ಮಾದಕ ವ್ಯಸನಿಯಾಗಿದ್ದ ತಂದೆ ತನ್ನ ಎಂಟು ವರ್ಷದ ಮಗಳ ತಲೆಗೆ ಹೊಡೆದು ಕೊಂದಿದ್ದಾನೆ. ಮಗಳು ಚಾಕೊಲೇಟ್ ಮತ್ತು ಆಟಿಕೆಗಳಿಗೆ ಬೇಡಿಕೆಯ ನಂತರ ಕೊಲೆ ನಡೆದಿದೆ. ಈ ಪ್ರಕರಣದಲ್ಲಿ 37 ವರ್ಷದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಈ ಭೀಕರ ಹತ್ಯೆ ನಡೆದಿದೆ. ಶನಿವಾರ ರಾತ್ರಿ ಕೊಲೆ ನಡೆದಿದೆ. ಆರೋಪಿ ರಾಕೇಶ್ ತನ್ನ ಮಗಳನ್ನು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದೊಯ್ದು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ತಾನು ಬಡವನಾಗಿದ್ದು, ಮಗಳು ಪ್ರತಿದಿನ ಚಾಕಲೇಟ್, ಆಟಿಕೆಗಳು ಮತ್ತು ಬಟ್ಟೆಗಳನ್ನು ಕೇಳಿ ತನಗೆ ತೊಂದರೆ ನೀಡುತ್ತಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಈ ಸಮಸ್ಯೆಯಿಂದ ಪಾರಾಗಲು ಮಗಳನ್ನು ಕೊಂದಿರುವುದಾಗಿ ಆರೋಪಿಯ ಹೇಳಿಕೆಯನ್ನು ಉಲ್ಲೇಖಿಸಿ ಉಪ ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೂಲಿ ಕಾರ್ಮಿಕನಾದ ಆರೋಪಿ ರಾಕೇಶ್ ಮಾದಕ ವ್ಯಸನ ಹೊಂದಿದ್ದ ಎಂದು ಅವರು ತಿಳಿಸಿದ್ದಾರೆ. ಮೂರು ವರ್ಷಗಳ ಹಿಂದೆ ಮಗುವಿನ ತಾಯಿ ಅವರನ್ನು ಬಿಟ್ಟು ಹೋಗಿದ್ದರು. ಆರೋಪಿಯ…
ಪರಿಸರ ದಿನಾಚಣೆಗೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ವಲಯ ಅರಣ್ಯಾಧಿಕಾರಿಗಳಾದ ದೇವರಾಜ್ ಅವರ ಮಾಗ್ರದರ್ಶನದಲ್ಲಿ ಮತ್ತು ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕನಕಪುರ ಘಟಕದ ಸಹೋಯೋಗದಲ್ಲಿ ಕನಕಪುರ ತಾಲ್ಲೂಕಿನ ಮುಗ್ಗುರು ವನ್ಯಜೀವಿ ವಲಯದ ಉಯ್ಯಂಬಳ್ಳಿ ದೊಡ್ಡಿ ಕಾಡಂಚಿನ ಪ್ರದೇಶ ಸುತ್ತ ಮುತ್ತ ಸುಮಾರು 300 ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಜೊತೆಗೆ ಸ್ಥಳೀಯ ಗ್ರಾಮಸ್ಥರಿಗೆ ಪರಿಸರದ ಬಗ್ಗೆ ತಿಳುವಳಿಕೆ ನೀಡಿ ಅರಣ್ಯ ಸಂರಕ್ಷಣೆಯ ಮಹತ್ವ ಮಾನವ ಮತ್ತು ವನ್ಯಜೀವಿ ಸಂಘರ್ಷದ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮಕ್ಕೆ ಸ್ಥಳೀಯ ಸುಮಾರು 50 ಜನ ರೈತರು ಬಾಗವಹಿಸಿ ಗಿಡಗಳನ್ನು ನೇಡುವ ಮೂಲಕ ಅರ್ಥ ಪೂರ್ಣ ಪರಿಸರ ದಿನಾಚರಣೆ ಮಾಡಿದಲ್ಲದೆ ನಾವು ನೆಟ್ಟಿರುವ ಗಿಡಗಳನ್ನು ಸುರಕ್ಷಿತವಾಗಿ ಬೆಳೆಸಿ ಫಲ ಕೊಡುವ ತನಕ ಜೋಪಾನವಾಗಿ ಬೆಳೆಸುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಗಸ್ತು ಅರಣ್ಯ ಪಾಲಕ ಶ್ರೀಕಾಂತ್ ಚಿವಟೆ ಮಾತನಾಡಿ ಅರಣ್ಯ ನಾಶದಿಂದ ಪರಿಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಇದೆ ರೀತಿ…
ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು, ಚಂದ್ರಶೇಖರಪುರ ಹೋಬಳಿ, ಮಾವಿನಹಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿಯಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಸಿಗಳನ್ನು ನೆಡುವುದರ ಮೂಲಕ “ವಿಶ್ವ ಪರಿಸರ ದಿನಾಚರಣೆ” ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರ ಪ್ರಜ್ಞೆಯನ್ನು ನೀಡುವುದರ ಜೊತೆಗೆ ಪರಿಸರ ಪ್ರಜ್ಞೆಯ ಅರಿವು ಮೂಡಿಸುವ ಘೋಷಣಾ ವಾಕ್ಯವನ್ನು ಕೂಗಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ಮುರುಗಿ ಶಿಲ್ಪಾ ರವರು ಯಶಸ್ವಿಯಾಗಿ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ವರದಿ: ಯತೀಶ್ ಕುಮಾರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಆಟೋ ಚಾಲಕನೋರ್ವ ಚಾಕ್ಲೆಟ್ ಕೊಡುತ್ತೇನೆಂದು ನಂಬಿಸಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ರೂ 75 ಸಾವಿರ ರೂಪಾಯಿ ದಂಡ ವಿಧಿಸಿದೆ. ಕುಣಿಗಲ್ ತಾಲ್ಲೂಕು ಹತ್ರಿದುರ್ಗ ಹೋಬಳಿಯ ಗುಳ್ಳಳ್ಳಿಪುರ ಗ್ರಾಮದ ವ್ಯಾಪ್ತಿಗೆ ಸೇರಿದ ಠಾಣೆಯಲ್ಲಿ ನೊಂದ ಬಾಲಕಿಯ ಅಜ್ಜಿ ದೂರು ನೀಡಿದ್ದು, ದಿನಾಂಕ 28/07/2022ರಂದು ರಾತ್ರಿ ನೊಂದ ಬಾಲಕಿ ರಾತ್ರಿ ಮಲಗಿದ್ದಾಗ ಬೆಚ್ಚಿಬಿದ್ದು ಕೂಗಿದ್ದು, ಈ ವೇಳೆ ಬಾಲಕಿಯನ್ನು ಅಜ್ಜಿ ಸಂತೈಸಿಸಿ ಏನಾಯ್ತು ಎಂದು ವಿಚಾರಿಸಿದ್ದಾರೆ. 9ನೇ ವರ್ಷ ವಯಸ್ಸಿನ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದು, ಆಕೆ ಊರಿನ ತಾತನ ಜೊತೆಗೆ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಂಡು ಬರಲು ಶಾಲೆಯಿಂದ ಹೋಗಿದ್ದಳು. ವಾಪಸ್ ಬರಬೇಕಾದ್ರೆ ತಾತ ತನ್ನ ಮನೆಯ ಬಳಿ ಆಟೋದಿಂದ ಇಳಿದಿದ್ದಾರೆ. ಬಳಿಕ ನೊಂದ ಬಾಲಕಿ ಶಾಲೆಗೆ ತೆರಳಲು ಮುಂದಾದಾಗ ಅದೇ ಊರಿನ…
ತುಮಕೂರು: ಬಾಡಿಗೆ ಇದೆ ಎಂದು ಹೇಳಿ ಸ್ನೇಹಿತರ ಜೊತೆಗೆ ತೆರಳಿದ್ದ ಆಟೋ ಚಾಲಕ ಶವವಾಗಿ ಪತ್ತೆಯಾದ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಧುಗಿರಿ ಪಟ್ಟಣದ ಶ್ರೀಧರ್ ಮೂರ್ತಿ (45) ಮೃತ ದುರ್ದೈವಿ. ಪಟ್ಟಣದ ಅಗ್ನಿಶಾಮಕ ಠಾಣೆ ಬಳಿ ವಾಸವಿದ್ದ ಶ್ರೀಧರ್ ಮೂರ್ತಿ, ಸ್ನೇಹಿತ ವೆಂಕಟೇಶ್ ಜೊತೆ ಬಾಡಿಗೆ ಇದೆ ಎಂದು ಮನೆಯಿಂದ ಹೋಗಿದ್ದ. ಬಳಿಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಯಾಗಿದ್ದ ಕುಟುಂಬಸ್ಥರು, ವೆಂಕಟೇಶ್ ಗೆ ಕರೆ ಮಾಡಿ ಕೇಳಿದಾಗ ಯಾರೋ ಮೂವರ ಜೊತೆ ಕಾರಿನಲ್ಲಿ ತೆರಳಿದ್ದಾಗಿ ತಿಳಿಸಿದ್ದರು. ಆದರೆ, ಬೆಳಗ್ಗೆ ಮಧುಗಿರಿ– ಗೌರಿಬಿದನೂರು ಬೈಪಾಸ್ ರಸ್ತೆಯಲ್ಲಿರುವ ಇಟ್ಟಿಗೆ ಫ್ಯಾಕ್ಟರಿ ಬಳಿ ಶ್ರೀಧರ್ ಮೂರ್ತಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದಾರೆ. ಶ್ರೀಧರ್ ಮೂರ್ತಿ ಸಾವಿನ ಬಗ್ಗೆ ಸ್ನೇಹಿತ ವೆಂಕಟೇಶ್ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರಿನಲ್ಲಿ ಕರೆದುಕೊಂಡು ಹೋದ ಅಪರಿಚಿತರನ್ನ ಪತ್ತೆ ಹಚ್ಚಿ ನ್ಯಾಯ ಓದಗಿಸಬೇಕೆಂದು ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮರಿ ಮೊಮ್ಮಗರಾದ ರಾಜರತ್ನ ಅಂಬೇಡ್ಕರ್ ರಾಷ್ಟ್ರೀಯ ಅಧ್ಯಕ್ಷರು, ಭಾರತೀಯ ಬೌದ್ಧ ಮಹಾಸಭಾ ಕಾರ್ಯದರ್ಶಿಗಳು, ಫಿಲೋಫಿಪ್ ಆಫ್ ಭೌದ್ಧಿಸ್ಟ್ ವಿವಿಧ ಸಾಮಾಜಿಕ ಸಂಘಟನೆಗಳ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಯುವಜನತೆಯ ಒಂದು ವಿಚಾರ ಸಂಕೀರ್ಣ ದಲ್ಲಿ ಭಾಗವಹಿಸಲು ಬಂದಿದ್ದ ರಾಜರತ್ನ ಅಂಬೇಡ್ಕರ್ ಅವರಿಂದ ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದರು. ಆದರೆ ಈಗಿನ ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ವಿಫಲವಾಗುತ್ತಿದೆ ಹಣಕಾಸಿನ ವ್ಯವಸ್ಥೆಯಿಂದ ಶಿಕ್ಷಣ ಸಂಸ್ಥೆಗಳು ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಾ ಇದ್ದಾರೆ ಶಿಕ್ಷಣ ಸಂಸ್ಥೆಗಳು ಮೇಲ್ವರ್ಗದ ಸಮುದಾಯಗಳ ಹತ್ತಿರ ಇರುವುದರಿಂದ ಕೆಲವರಿಗೆ ಸಮುದಾಯಗಳಿಗೆ ಶಿಕ್ಷಣ ಪಡೆದುಕೊಳ್ಳಲು ಸಮಸ್ಯೆ ಎದುರಾಗುತ್ತಾ ಇದೆ ಆದ್ದರಿಂದ ನಮ್ಮ ಸಂಸ್ಥೆಯಾದ ಭಾರತೀಯ ಬೌದ್ಧ ಮಹಾಸಭಾ ದಿ ವರ್ಲ್ಡ್ ಫಿಲಾಸ ಆಪ್ ಬುದ್ಧಿಸ್ಟ್ ವತಿಯಿಂದ ನಾಗಪುರದಲ್ಲಿ ವರ್ಲ್ಡ್ ಯೂನಿವರ್ಸಿಟಿಯನ್ನು ಸ್ಥಾಪನೆ ಮಾಡಲಾಗುವುದು ಈಗಾಗಲೇ 70 ಯೂನಿವರ್ಸಿಟಿಗಳ…