Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಬೆಳಗಾವಿ: 200 ಯುನಿಟ್ ಉಚಿತ ವಿದ್ಯುತ್ ಘೋಷಿಸಿ ಎರಡೆ ದಿನದಲ್ಲಿ ಪ್ರತಿ ಯುನಿಟ್ ಕ್ಕೆ ಸರಾಸರಿ 70 ಪೈಸೆ ವಿದ್ಯುತ್ ದರ ಹೆಚ್ಚಿಸಿರುವ ಹಾಗೂ ಆಧಾರ ಲಿಂಕ್ ಮಾಡದ ರೈತರ ಪಂಪಸೆಟ್ ಗಳ ಅನುದಾನ ಕಡಿತಗೊಳಿಸುವ, ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯವ ಬಗ್ಗೆ ಹಾಗೂ ಹಾಲು ಗ್ರಾಹಕರ ಅನುದಾನ ಕಡಿತ ಮಾಡಿರುವ ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವಿನ ಆದೇಶವನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಬೆಳಗಾವಿ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ಗೃಹ ಬಳಕೆದಾರ ಗ್ರಾಹಕರಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವದಾಗಿ ಘೋಷಿಸಿ, ಜೂನ್ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತಗೆದುಕೊಂಡಿದ್ದರೆ ಆದರೆ, ಎಪ್ರಿಲ್ 1 ರಿಂದ ಪೂರ್ವಾನ್ವಯಿಸಿ ಎಲ್.ಟಿ ಮತ್ತು ಎಚ್ ಟಿ ಗ್ರಾಹಕರು ಬಳಸುವ ಪ್ರತಿ ಯುನಿಟ್ ವಿದ್ಯುತ್ ಗೆ ಸರಾಸರಿ 70ಪೈಸೆ ಹೆಚ್ಚಿಸಿ ಶೇ 8.31ರಷ್ಟು ಹೆಚ್ಚಳ…
ತುಮಕೂರು: ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರಿನ ಅಂತರಸನಹಳ್ಳಿ ಸಮೀಪದ ಮಾರುಕಟ್ಟೆ ಶೌಚಾಲಯದಲ್ಲಿ ನಡೆದಿದೆ. ಬಿಹಾರ ಮೂಲದ ಯುವಕ ಲಖನ್ ಮಾನ್ಸಿ ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದ್ದು, ಈತ ಕಳೆದ 6 ತಿಂಗಳುಗಳಿಂದ ಮಾರುಕಟ್ಟೆ ಶೌಚಾಲಯವನ್ನು ಶುಚಿಗೊಳಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶೌಚಾಲಯದಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ತುಮಕೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ತುಮಕೂರು ಪ್ರಾದೇಶಿಕ ಕೇಂದ್ರ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿ ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಕರಾಮುವಿಯ ಎಂ.ಎ. ಪ್ರಥಮ ವರ್ಷದ ಇತಿಹಾಸ ವಿದ್ಯಾರ್ಥಿಗಳಿಂದ ಸಸಿಗಳನ್ನು ನೆಡಿಸುವ ಮುಖಾಂತರ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ಲೋಕೇಶ ಆರ್. ಮಾತನಾಡಿ, ಈ ಆವರಣವನ್ನು ಹಸಿರೀಕರಣ ಮತ್ತು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಕೇಂದ್ರದ ಎಲ್ಲಾ ಸಿಬ್ಬಂದಿ ಹಾಗೂ ಕರಾಮುವಿಯ ಎಂ.ಎ ಪ್ರಥಮ ವರ್ಷದ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಾಗಲಕೋಟೆ: ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಾಹವಿದ್ಯಾಲಯದ ಆವರಣದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ಹಾಗೂ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳ ಸಹಯೋಗದಲ್ಲಿ ಸಸಿ ನೆಡುವುದರ ಮೂಲಕ ಆಚರಣೆ ಮಾಡಲಾಯಿತು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಎಸ್. ಸೂಳಿಭಾವಿ ಅವರು ನಾಗಲಿಂಗ ಪುಷ್ಪದ ಸಸಿ ನೆಟ್ಟು ನೀರೆರೆಯುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ, ವಿಶ್ರಾಂತ ಪ್ರಾಚಾರ್ಯ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ, ಎನ್ಎಸ್ಎಸ್ ಘಟಕದ ಕಾರ್ಯಕ್ರಮದ ಅಧಿಕಾರಿಗಳಾದ ಎಮ್.ಎಚ್ ವಡ್ಡರ, ಡಾ. ವೀರುಪಾಕ್ಷ.ಎನ್.ಬಿ ಸೇರಿದಂತೆ ಎಲ್ಲ ವಿಭಾಗದ ಪ್ರಾದ್ಯಾಪಕರುಗಳು, ಎನ್ಎಸ್ಎಸ್ ಸ್ವಯಂ ಸೇವಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರನ್ನು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಗರಂ ಆದ್ರು. ನನ್ನ ಕೈಯಲ್ಲಿ ಗಿಡ ನೆಡಿಸಿದ್ದಾರೆ, ಅದು ಸಂಪೂರ್ಣ, ಅವೈಜ್ಞಾನಿಕ. ಕೇವಲ ಫೋಟೋಗೆ ಪೋಸ್ ಕೊಡಲು ಗಿಡ ನೆಟ್ಟರೆ ಇಷ್ಟ ಇಲ್ಲ. ಮರ ಇರುವ ಕಡೆ ಗಿಡ ನೆಡುವುದಲ್ಲ, ಮರ ಇಲ್ಲದ ಕಡೆ ಗಿಡನೆಡಿ. ನನ್ನ ಊರಿನಲ್ಲಿ ನಾನು ಗಿಡಗಳನ್ನು ಬೆಳೆಸಿದ್ದೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧ್ಯವಯಸ್ಕ ಮಹಿಳೆಯನ್ನು ಇರಿದು ಕೊಂದ 23 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ ದಕ್ಷಿಣ ಕೊರಿಯಾದಲ್ಲಿ ಈ ಘಟನೆ ನಡೆದಿದೆ. ಜಂಗ್ ಯೂ ಜಂಗ್ ಎಂಬ ಯುವತಿ ಮಧ್ಯವಯಸ್ಕ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಂದು ದೇಹವನ್ನು ಛಿದ್ರಗೊಳಿಸಿದ್ದಾಳೆ. ಯಾವುದೇ ಪ್ರಚೋದನೆ ಇಲ್ಲದೆ ಮಧ್ಯವಯಸ್ಕ ಮಹಿಳೆಯನ್ನು ಕೊಂದ ಜಂಗ್ ಸಮರ್ಥನೆ ಪೊಲೀಸರನ್ನು ಕಂಗೆಡಿಸಿತು. ತನ್ನ ಕೈಯಿಂದಲೇ ಒಬ್ಬನೇ ಒಬ್ಬನನ್ನು ಕೊಂದಿದ್ದು, ಅದನ್ನು ಮುಚ್ಚಿಡುವ ಕುತೂಹಲವೇ ಅಪರಾಧ ಎಸಗಲು ಪ್ರೇರೇಪಿಸಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ದೂರದರ್ಶನದ ಅಪರಾಧ ಸರಣಿಗಳು, ಕ್ರೈಮ್ ಥ್ರಿಲ್ಲರ್ ಚಲನಚಿತ್ರಗಳು, ಕಾದಂಬರಿಗಳು ಇತ್ಯಾದಿಗಳನ್ನು ನೋಡುವ ಮತ್ತು ಓದುವ ಮೂಲಕ ಕೊಲೆ ಮಾಡಿದ್ದೇನೆ ಎಂದು ಮಹಿಳೆ ಹೇಳುತ್ತಾರೆ. ಹತ್ಯೆಯನ್ನು ಯೋಜಿಸಲು ತಿಂಗಳುಗಟ್ಟಲೆ ಸಂಶೋಧನೆ ನಡೆಸಲಾಯಿತು. ಮಹಿಳೆ ಸುಮಾರು ಮೂರು ತಿಂಗಳಿಂದ ತನ್ನ ದೇಹವನ್ನು ಹೇಗೆ ಮರೆಮಾಚುವುದು ಎಂದು ಗೂಗ್ಲಿಂಗ್ ಮಾಡುತ್ತಿದ್ದಾಳೆ. ಮಹಿಳೆಯ ಫೋನ್ ಪರಿಶೀಲಿಸಿದಾಗ ಆಕೆಯನ್ನು ಹುಡುಕಿರುವುದು ಪೊಲೀಸರಿಗೆ ಸ್ಪಷ್ಟವಾಯಿತು. ಯುವತಿಯು ಲೈಬ್ರರಿಯಿಂದ ಹಲವು ಕ್ರೈಂ ಥ್ರಿಲ್ಲರ್ಗಳನ್ನು ಓದಿದ್ದು ಮತ್ತು ಪದೇ ಪದೇ ಕ್ರೈಂ…
ಕ್ರೈಂ ಬ್ರಾಂಚ್ ಅಧಿಕಾರಿಗಳಂತೆ ನಟಿಸಿ ಮುಂಬೈನ ಆಭರಣ ಮಳಿಗೆಯೊಂದರಲ್ಲಿ ದರೋಡೆ ನಡೆಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು 2.7 ಕೋಟಿ ಮೌಲ್ಯದ ವಜ್ರಾಭರಣ ಹಾಗೂ ಚಿನ್ನದ ಬಿಸ್ಕೆಟ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮಹೇಂದ್ರ ಮತ್ತು ಮನೋಜ್ ಬಂಧಿತರು. ರಾಜಸ್ಥಾನದ ರಾಜಾಸರ್-ಬಿಕಾನೇರ್ ರಸ್ತೆಯ ದೇರಾಜ್ಸರ್ ಬಳಿ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಎಂಬ ನೆಪದಲ್ಲಿ ಮುಂಬೈನ ಆಭರಣ ಮಳಿಗೆಯೊಂದರಲ್ಲಿ ದರೋಡೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ. ಅವರು ಪ್ರಯಾಣಿಸುತ್ತಿದ್ದ ವಾಹನದಿಂದ 27 ಲಕ್ಷ ರೂ., ಎರಡು ಕೆಜಿ ತೂಕದ 20 ಚಿನ್ನದ ಬಿಸ್ಕೆಟ್ಗಳು (ಸುಮಾರು 1.10 ಕೋಟಿ ರೂ.), 15 ಪವನ್ ವಜ್ರದ ಆಭರಣಗಳು (ರೂ. 1.25 ಕೋಟಿ ಮೌಲ್ಯ) ಮತ್ತು 18 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಸಿಯಾನ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ…
ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್,ಶರ್ಟ್ ಮಾದರಿ ಸಮವಸ್ತ್ರದ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ. ಶರ್ಟ್, ಸ್ಕರ್ಟ್ ಮಾದರಿ ಸಮವಸ್ತ್ರಧರಿಸಿಕೊಂಡು ವಿದ್ಯಾರ್ಥಿನಿಯರ ಖಾಸಗಿ ಶಾಲೆಗೆ ಹೋಗುತ್ತಿದ್ದು, ಇದರಿಂದ ಮುಜುಗರದ ಸನ್ನಿವೇಶ ಎದುರಿಸುವಂತಾಗಿದೆ.ಚೂಡಿದಾರ್ ಅಥವಾ ಪ್ಯಾಂಟ್ ಸಮವಸ್ತ್ರ ನಿಗದಿಪಡಿಸಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮಾಡಿದೆ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಚೂಡಿದಾರ್ ಸಮವಸ್ತ್ರವನ್ನಾಗಿ ನಿಗದಿಪಡಿಸಿದೆ. ಆದರೆ ಕೆಲವು ಪ್ರತಿಷ್ಠಿತ ಶಾಲೆಗಳಲ್ಲಿ ಮಂಡಿ ಮೇಲೆ ಸ್ಕರ್ಟ್ ಇರುವ ಸಮವಸ್ತ್ರ ನಿಗದಿ ಮಾಡುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿನಿಯರು, ಪೋಷಕರು ಒಲ್ಲದ ಮನಸ್ಸಿನಿಂದ ಆಡಳಿತ ಮಂಡಳಿಗಳ ಒತ್ತಡಕ್ಕೆ ಮಣಿದು ಸ್ಕರ್ಟ್ ಹಾಕಿಕೊಂಡು ಹೋಗುವಂತಾಗಿದೆ. ನೆಲದ ಮೇಲೆ ಕುಳಿತುಕೊಳ್ಳುವಾಗ, ವಾಹನಗಳಲ್ಲಿ ಸಂಚರಿಸುವ ವೇಳೆ, ಸೈಕಲ್ ಓಡಿಸುವಾಗ, ಕ್ರೀಡೆಗಳಲ್ಲಿ ಭಾಗವಹಿಸುವಾಗ ವಿದ್ಯಾರ್ಥಿನಿಯರು ಮುಜುಗರಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕಿಯರಿಗೆ ಶಾಲೆಯಲ್ಲಿ ಶರ್ಟ್ ಮತ್ತು ಸ್ಕರ್ಟ್ ಸಮವಸ್ತ್ರಬದಲಿಗೆ ಚೂಡಿದಾರ್ ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ…
ಒಡಿಶಾದ ಬಾಲಸೋರ್ ನಲ್ಲಿ ರೈಲು ದುರಂತದ ನಂತರ ಸಿಲುಕಿರುವ ವಾಲಿಬಾಲ್ ಆಟಗಾರರಿಗೆ ಕರ್ನಾಟಕ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿದೆ. 38 ಸಬ್ ಜೂನಿಯರ್ ವಾಲಿಬಾಲ್ ಆಟಗಾರರನ್ನು ಕರ್ನಾಟಕ ಸರ್ಕಾರವು ಮನೆಗೆ ಕಳುಹಿಸಿದೆ. ಮೇ 27 ರಿಂದ ಜೂನ್ 1 ರವರೆಗೆ ಕೋಲ್ಕತ್ತಾದ ಹೌರಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ 16 ವರ್ಷದೊಳಗಿನ ಬಾಲಕ-ಬಾಲಕಿಯರು ಇದೇ ತಿಂಗಳ 2 ರಂದು ಮರಳಬೇಕಿತ್ತು. ಶುಕ್ರವಾರ ಸಂಜೆ ಪ್ರಯಾಣಕ್ಕೆ ಬುಕ್ ಮಾಡಲಾಗಿದ್ದ ರೈಲು ಅಪಘಾತಕ್ಕೀಡಾಗಿದೆ. ತರಬೇತುದಾರ ಧರ್ಮಪುರ ಮಾಧವಮೂರ್ತಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿದರು. ಒಡಿಶಾದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಸಂಪರ್ಕದಲ್ಲಿರುವ ಮುಖ್ಯಮಂತ್ರಿಗಳು ಶೀಘ್ರವಾಗಿ ಹಿಂದಿರುಗುವ ವಿಮಾನ ಟಿಕೆಟ್ಗಳನ್ನು ವ್ಯವಸ್ಥೆಗೊಳಿಸಿದರು. ಸಹಾಯಕ್ಕಾಗಿ ಸರ್ಕಾರ ನೇಮಿಸಿದ ಐವರು ಸದಸ್ಯರೊಂದಿಗೆ ನಟರು ಬೆಂಗಳೂರಿಗೆ ಬಂದಿಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಜೀರೊ ಟ್ರಾಫಿಕ್ ಬೇಡವೆಂದು ಹೇಳಿದ್ದು ಸುದ್ದಿಯಾಗುವುದಕ್ಕೆ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಜೀರೊ ಟ್ರಾಫಿಕ್ ವಿಚಾರ ಪ್ರಸ್ತಾಪಿಸಿ ಟ್ವಿಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರು ಸದ್ದಿಲ್ಲದೆ ಮತ್ತೆ ಜೀರೊ ಟ್ರಾಫಿಕ್ನಲ್ಲಿ ಓಡಾಡುತ್ತಿದ್ದಾರೆ. ಇದು ರಿವರ್ಸ್ ಗೇರ್ ಕಾಂಗ್ರೆಸ್ ಎಂದು ನಾವು ಅಂದೇ ಹೇಳಿದ್ದೆವು. ಈಗದು ಪ್ರತ್ಯಕ್ಷವಾಗಿ ಸಾಬೀತಾಗುತ್ತಿದೆ ಎನ್ನುವುದು ರಾಜ್ಯದ ಪಾಲಿಗೆ ಖೇದಕರ’ ಎಂದು ಟೀಕಿಸಿದೆ. 200 ಯುನಿಟ್ ಉಚಿತ ವಿದ್ಯುತ್ ಯೋಜನೆ ದೋಖಾ ಎಂದು ದಿನ ಹೋದಂತೆ ಸಾಬೀತಾಗುತ್ತಿದೆ. 200 ಯುನಿಟ್ ಉಚಿತ ಅಂದಿಲ್ಲವೆಂದು ಇಂಧನ ಸಚಿವರೇ ರಿವರ್ಸ್ ಕನೆಕ್ಷನ್ ಕೊಡುತ್ತಿದ್ದಾರೆ. ಜನ, ಕೈಗಾರಿಕೆ ಮತ್ತು ಉದ್ಯೋಗ ಸೃಷ್ಟಿಗೆ ಶಾಕ್ ಮಾತ್ರವಲ್ಲ ಶಾರ್ಟ್ ಸರ್ಕ್ಯೂಟ್ ನ ಅನುಭವ ಕೊಡಲು ಸಚಿವ ಕೆ.ಜೆ.ಜಾರ್ಜ್ ಅವರು ಸನ್ನದ್ಧರಾಗಿದ್ದಾರೆ ಎಂದು ಬಿಜೆಪಿ ಕುಟುಕಿದೆ. ಮೇ 20ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ತಮಗಿದ್ದ ಜೀರೊ ಟ್ರಾಫಿಕ್ ಸೌಲಭ್ಯ ತ್ಯಜಿಸಿದ್ದರು. ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್…