Author: admin

288 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಒಡಿಶಾ ರೈಲು ದುರಂತಕ್ಕೆ ಕಾರಣವಾದ ಕಾರಣಗಳನ್ನು ಕಂಡುಹಿಡಿಯಲು ತನಿಖೆ ಪ್ರಾರಂಭವಾಗಿದೆ. ಸಿಗ್ನಲ್ ದೋಷವು ಅಪಘಾತಕ್ಕೆ ಕಾರಣವಾಗಿದೆಯೇ ಎಂಬ ಬಗ್ಗೆ ತನಿಖೆ ಈಗ ಕೇಂದ್ರೀಕೃತವಾಗಿದೆ. ಒಡಿಶಾದ ಬಾಲಸೋರ್‌ ನಲ್ಲಿ ಅಪಘಾತ ನಡೆದ ಸ್ಥಳದಲ್ಲಿ ಉನ್ನತ ಮಟ್ಟದ ರೈಲ್ವೇ ತನಿಖಾ ತಂಡ ಉಳಿದುಕೊಂಡಿದೆ. ನಿನ್ನೆ ಬಾಲಸೋರ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ಕೂಲಂಕುಷ ತನಿಖೆ ನಡೆಸಲಾಗುವುದು ಮತ್ತು ಅಪಘಾತಕ್ಕೆ ಕಾರಣರಾದವರನ್ನು ಬಿಡುವುದಿಲ್ಲ ಎಂದು ಹೇಳಿದ್ದರು. ಒಡಿಶಾ ರೈಲು ದುರಂತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ ಅಪಘಾತದಲ್ಲಿ ಸುಮಾರು ಸಾವಿರ ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ತಡರಾತ್ರಿ ಬಾಲಸೋರ್ ಮುರಿದು ಬಿದ್ದ ಬೋಗಿಗಳನ್ನು ಸ್ಥಳಾಂತರಿಸುವ ವೇಳೆ ಮತ್ತೆ ಮೃತದೇಹಗಳು ಪತ್ತೆಯಾದ ದಾರುಣ ದೃಶ್ಯಕ್ಕೆ ಸಾಕ್ಷಿಯಾಯಿತು. ಸ್ಥಳದಲ್ಲಿ ವಿಪತ್ತು ನಿರ್ವಹಣಾ ಕಾರ್ಯಾಚರಣೆಗಳು ಯುದ್ಧದ ಆಧಾರದ ಮೇಲೆ ಪ್ರಗತಿಯಲ್ಲಿವೆ. ಅಪಘಾತದ ನಂತರ ಅಸ್ತವ್ಯಸ್ತಗೊಂಡಿದ್ದ ರೈಲು ಸಂಚಾರವನ್ನು ಪುನಃಸ್ಥಾಪಿಸಲು…

Read More

ತುಮಕೂರು: ನಗರದಲ್ಲಿ ದಲಿತ ಜನಾಂದೋಲನ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಅವರ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು. ಟೌನ್ ಹಾಲ್ ಮಹಾನಗರ ಪಾಲಿಕೆ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಇರುವ ಗುಂಚಿ ವೃತ್ತದವರೆಗೂ ಹೆಜ್ಜೆ ಹಾಕಿದ ವಿವಿಧ ಜಾನಪದ ಕಲಾತಂಡಗಳಿಗೆ ಚಾಲನೆ ನೀಡಿ ಮಾತನಾಡಿದ ತುಮಕೂರು ನಗರ ಕಾಂಗ್ರೆಸ್  ಮುಖಂಡ ಇಕ್ಬಾಲ್ ಅಹಮದ್,  ದೇಶದಲ್ಲಿ ಬಡವರು ಶೋಷಿತರು ಸಮಾನವಾಗಿ ಬದುಕಬೇಕಾದರೆ ಸಮಾನವಾದ ಜೀವನ ನಡೆಸಬೇಕಾದರೆ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳು ಮತ್ತು ನೀತಿ ವಾಕ್ಯಗಳನ್ನು ಪಾಲನೆ ಮಾಡಿ  ಸಂವಿಧಾನದ ಅಡಿಯಲ್ಲಿ ಐಕ್ಯತೆಯನ್ನು ಕಾಪಾಡಬೇಕು ಎಂದು ಕರೆ ನೀಡಿದರು. ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ ಜಯಂತಿ  ಚುನಾವಣಾ ಆಯೋಗವು ಚುನಾವಣಾ ನೀತಿ ಸಂಹಿತೆ ಆಯೋಜನೆ ಮಾಡಿದ್ದ ಕಾರಣದಿಂದಾಗಿ ಅದ್ದೂರಿಯಾಗಿ ಅಂಬೇಡ್ಕರ್ ಜಯಂತಿಯನ್ನು ಆಚರಣೆ ಮಾಡಲು ಆಗಲಿಲ್ಲ,  ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ತತ್ವದರ್ಶನಗಳನ್ನ ಜಗತ್ತಿಗೆ ಸಾರಲು ದಲಿತ ಜನಾಂದೋಲನ ಸಮಿತಿಯ…

Read More

ತಿಪಟೂರು: ನಗರದ ರಾಜಕಾಲುವೆ ನೀರಿಗೆ ಮಳೆನೀರು ಸೇರಿಕೊಂಡು ಕೋಡಿ ಸರ್ಕಲ್ ಬಳಿ ಮ್ಯಾನ್ ಹೋಲ್ ತೆರೆದು ಚರಂಡಿಯ ನೀರು ಹೇಮಾವತಿ ನಾಲೆಗೆ ಸೇರುವುದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನಿಯೋಗ ನಗರಸಭೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಎಸ್.ಎನ್.ಸ್ವಾಮಿ, ಬಿ. ಲೋಕೇಶ್, ರಂಗಧಾಮಯ್ಯ, ಗೋಪಿನಾಥ್ ಬೊಮ್ಮನಹಳ್ಳಿ ಹಾಗೂ ಇನ್ನಿತರರಿದ್ದ  ನಿಯೋಗವು ಮನವಿ  ಸಲ್ಲಿಸಿತು. ಕಲುಷಿತ ನೀರು  ಹೇಮಾವತಿ ನಾಲೆಯ ಮೂಲಕ ಈಚನೂರು ಕೆರೆ ಸೇರುತ್ತದೆ. ಇದರಿಂದ ನಗರಕ್ಕೆ ಕಲುಷಿತ ನೀರು ಸರಬರಾಜು ಆಗುವ ಅಪಾಯವಿದೆ. ಆದರಿಂದ ಹಲವಾರು ರೋಗಗಳು, ಅದರಲ್ಲೂ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಮತ್ತೊಂದೆಡೆ, ಯುಜಿಡಿಯ ಸಂಸ್ಕರಣಗೊಂಡ ನೀರು ಹೂವಿನ ಕಟ್ಟೆ ತುಂಬುತ್ತಿದ್ದು ಅದರಿಂದ ಕೃಷಿ ಕೆಲಸಗಳಿಗೆ ನೀರು ಉಪಯೋಗವಾಗುತ್ತಿದೆ. ಆದರೆ ಅಲ್ಲಿ ವಾಸನೆ ಬರುತ್ತಿದ್ದು, ನೀರು ಸಂಪೂರ್ಣವಾಗಿ ಶುದ್ಧೀಕರಣ ವಾಗಿದೆಯೇ ಎನ್ನುವ ಅನುಮಾನ ಕಾಡುತ್ತಿದೆ. ಅಂತರ್ಜಲಕ್ಕೇ ಕಲುಷಿತ ನೀರು ಸೇರಿಕೊಂಡು ರೋಗಗಳ ವಿತರಣಾ ಕೆಂದ್ರಗಳಾಗುತ್ತವೆ ಎಂದು ಮನವಿ ಪತ್ರದಲ್ಲಿ…

Read More

ತುಮಕೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರಪ್ರಥಮವಾಗಿ ಪ್ರಜಾಪ್ರಭುತ್ವದಲ್ಲಿ ಕಂಡು ಕೇಳರಿಯದಂತಹ, ಕುತೂಹಲವಾದಂತಹ ಕಾರ್ಯಕ್ರಮ ಎಂದು ತುಮಕೂರು ಸಂಸದ ಜಿ.ಎಸ್.ಬಸವರಾಜ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಮುಂದೆ ಕಾದು ನೋಡೋಣ ಯಾವ ರೀತಿಯ ಪರಿಣಾಮವಾಗುತ್ತೆ ಅಂತ ಎಂದು ಹೇಳಿದರು. ಈ ರಾಜ್ಯದ ಬಂಡವಾಳ 54 ಸಾವಿರ ಕೋಟಿ ಬೇಕಾಗುತ್ತದೆ ಎಂದು ಹೇಳುತ್ತಾರೆ. ಆದರೆ ಹಣ ಹೊಂದಿಸಲು ಯಾರ ತಲೆ ಬೋಳಿಸುತ್ತಾರೆ ಅನ್ನೋದಯ ಮುಖ್ಯ ಎಂದರು. ಈ ನಡುವೆ ಜನರಿಗೆ ಗ್ಯಾರೆಂಟಿ ಕೊಡುತ್ತೇನೆ ಅಂತಾ ಹೇಳಿದ್ದು ಒಳ್ಳೆಯದೆ. ಜನರು ಕೆಲಸ ಮಾಡದೇ ಸುಖವಾಗಿರುವಂತೆ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದರು. ಸುಖವಾಗಿರಿ, ಚೆನ್ನಾಗಿರಿ, ಒಳ್ಳೆ ಡ್ರೆಸ್ ಹಾಕೊಳಿ, ಕೋಟ್ ಹಾಕೋಳಿ ಎಂದಿದ್ದಾರೆ. 3 ಸಾವಿರ ತೆಗೆದುಕೊಂಡು ನಿರುದ್ಯೋಗಿಯಾಗಿ, ಶಾಶ್ವತವಾಗಿ ನಿರುದ್ಯೋಗಿಯಾಗಿ ಎಂದು ಮುಖ್ಯ ಮಂತ್ರಿಗಳು ಘೋಷಣೆ ಮಾಡಿದ್ದಾರೆ ಎಂದರು. ನಿರುದ್ಯೋಗಿಗಳಿಗೆ ಅಪ್ರೆಂಟಿಸ್ ಟ್ರೈನಿಂಗ್ ಕೊಟ್ಟು ಸ್ವಯಂ ಉದ್ಯೋಗ ಮಾಡುವಂತೆ ಉತ್ತೇಜನ ಕೊಡಬೇಕಿತ್ತು ಎಂದು ಹೇಳಿದರು. ಇನ್ನು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ…

Read More

ತುಮಕೂರು: ನಾವು ಐದು ವರ್ಷದವರೆಗೂ ಘೋಷಣೆ ಮಾಡಲಾಗಿರುವಂತಹ ಈ ಐದು  ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು. ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಚುನಾವಣೆ ವೇಳೆ ಗ್ಯಾರಂಟಿ ಭರವಸೆ ಕೊಟ್ಟಿದ್ರು. ಕೊಟ್ಟ ಭರವಸೆಯಂತೆ ನಮ್ಮ ಗ್ಯಾರಂಟಿಗಳಿಗೆ ನಿನ್ನೆ ಅನುಷ್ಠಾನಕ್ಕೆ ತೀರ್ಮಾನ ಆಗಿದೆ ಎಂದರು. ಅದರ ಪ್ರೋಸಿಜರ್ ಬಗ್ಗೆ ನಿನ್ನೆ ಚರ್ಚೆ ಆಗಿದೆ. ಅನುಷ್ಠಾನ ಮಾಡೋದಕ್ಕೆ ಆರಂಭ ಮಾಡುತ್ತೇವೆ ಸಂಪನ್ಮೂಲಗಳ ಕ್ತೋಡೀಕರಣ ಪ್ರಶ್ನೆ ಎಲ್ಲರೂ ಎತ್ತಿದ್ರು ಎಂದರು. ವಿರೋಧ ಪಕ್ಷದವರು ಇದನ್ನು ಒಂದು ಅಸ್ತ್ರವಾಗಿ ಪ್ರಯೋಗ ಮಾಡಿದ್ರು. ಹಣಕಾಸು ವ್ಯಯ ಆಗದೇ, ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು ಗ್ಯಾರಂಟಿ ಜಾರಿ ಮಾಡುತ್ತೇವೆ. ಅನಾವಶ್ಯಕವಾದ ಯೋಜನೆ, ಕಾರ್ಯಕ್ರಮ ಇದ್ದರೆ ಅದನ್ನು ಸ್ಥಗಿತ ಮಾಡುತ್ತೇವೆ ಎಂದರು. ಎಲ್ಲಾ ಯೋಜನೆಗಳ ಡಿಪಿಆರ್ ಮಾಡುವಾಗ ಎಚ್ಚರಿಕೆಯಿಂದ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಭಿವೃದ್ಧಿ ಕುಂಟಿತವಾಗದ ರೀತಿಯಲ್ಲಿ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ನಿಗಮ ಮಂಡಳಿ ಅನಗತ್ಯ ಇದ್ದರೆ ಅದನ್ನು…

Read More

ರದ್ದುಗೊಳಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ಶುಕ್ರವಾರ ಮತ್ತೆ ವಿಸ್ತರಿಸಿದೆ.ಹಾಗಾಗಿ, ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‌ಗೆ ಹೈಕೋರ್ಟ್‌ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ. ಚೇತನ್ ಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಕೇಂದ್ರ ಸರಕಾರ ಒಸಿಐ ರದ್ದು ಮಾಡಿ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೆ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. 2022ರ ಜೂ.8ರಂದು ನೋಟಿಸ್ ಜಾರಿ: ಅರ್ಜಿದಾರರ ಪರ ವಕೀಲರು, ‘ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಅರ್ಜಿದಾರರು ಪಾಲಿಸುತ್ತಿದ್ದಾರೆ. ಹಾಗಾಗಿ, ಹಿಂದೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಬೇಕು ಎಂದು ಕೋರಿದರು.2018ರಲ್ಲಿ ಚೇತನ್‌ಗೆ ಓವರ್‌ಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ನೀಡಧಿಲಾಗಿತ್ತು. ಆದರೆ, ಅವರ ವಿರುದ್ಧ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಮತ್ತು ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಚೇತನ್‌ಗೆ 2022ರ ಜೂ. 8ರಂದು ನೋಟಿಸ್ ನೀಡಿ ಉತ್ತರ…

Read More

ಬೆಂಗಳೂರು:ಜೂನ್ 03: ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆಂದು ರೂಪಿಸಲಾದ ಮುಖ್ಯಮಂತ್ರಿಗಳ 1ಲಕ್ಷ ಬೆಂಗಳೂರು ವಸತಿ ಯೋಜನೆ ಗೊಂದಲದ ಗೂಡಾಗಿದ್ದು, ನಿತ್ಯ ಹತ್ತಾರು ಮಂದಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತಕಚೇರಿಗೆ ಭೇಟಿ ನೀಡಿ ಬರಿಗೈಯಲ್ಲಿ ಹಿಂತಿರುಗುತ್ತಿದ್ದಾರೆ. ಕಳೆದ 3 ವರ್ಷಗಳಿಂದ ಮುಖ್ಯಮಂತ್ರಿಗಳ 1 ಲಕ್ಷ ಬೆಂಗ ಳೂರು ವಸತಿ ಯೋಜನೆಯು ಅನುಷ್ಠಾನಗೊಂಡಿದ್ದು, ಆರಂಭದಲ್ಲಿ ಜನ ಸಾಮಾನ್ಯರಿಗೆ ಸ್ಪಂದಿಸಿ ಹಲವು ಪ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ, ಕಳೆದ 4 ತಿಂಗಳುಗಳಿಂದ ಈ ಯೋಜನೆಯು ಜನ ಸಾಮಾನ್ಯರಿಗೆ ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. 2022ರ ಡಿಸೆಂಬರ್‌ನಲ್ಲಿ ಯೋಜನೆಯಡಿ ಪ್ಲಾ ಬೇಕಾಗಿರುವವರು ಅರ್ಜಿ ಸಲ್ಲಿಸಿ ಎಂದು ನಿಗಮ ಸೂಚಿಸಿತ್ತು. ಅದರಂತೆ ಸಾವಿರಾರು ಮಂದಿ ಅರ್ಜಿ ಸಲ್ಲಿಸಿದ್ದರು.ಇದೀಗ 2 ಬಿಎಚ್‌ಕೆ ಫ್ಲಾಟ್ ಬೇಕಾದ ಎಲ್ಲರೂ ತಾವು ಈ ಹಿಂದೆ ಸಲ್ಲಿಸಿರುವ ಅರ್ಜಿ ರದ್ದುಪಡಿಸಿ ಹೊಸ ಅರ್ಜಿ ಸಲ್ಲಿಸಬೇಕು.1 ಬಿಎಚ್‌ಕೆಗೆ ಅರ್ಜಿ ಸಲ್ಲಿಸಿರುವ ಕೆಲ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ. ಇದೀಗ 700ಕ್ಕೂ ಅಧಿಕ ಫಲಾನುಭವಿಗಳು ರಾಜೀವ್ ಗಾಂಧಿ…

Read More

ಕುಸ್ತಿಪಟುಗಳನ್ನು ಬೆಂಬಲಿಸಿ 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಸದಸ್ಯರು ನೀಡಿರುವ ಹೇಳಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಂಡದ ಸದಸ್ಯ ಹಾಗೂ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹೇಳಿದ್ದಾರೆ. ಕ್ರೀಡೆಯಲ್ಲಿ ರಾಜಕೀಯ ಬೆರೆಸಬಾರದು ಎಂದಿರುವ ರೋಜರ್ ಬಿನ್ನಿ, ಸದ್ಯ ಕುಸ್ತಿಪಟುಗಳ ಪ್ರತಿಭಟನೆಯ ಸನ್ನಿವೇಶದ ಕುರಿತು ಹೇಳಿಕೆ ನೀಡಿದ್ದಾರೆ ಎಂಬ ಮಾಧ್ಯಮ ವರದಿಗಳು ಸುಳ್ಳು ಎಂದು ಸುದ್ದಿಸಂಸ್ಥೆಗೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮ ವರದಿಗಳಿಗೆ ವಿರುದ್ಧವಾಗಿ, ಕುಸ್ತಿಪಟುಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ಸಮರ್ಥ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸಲು ಕೆಲಸ ಮಾಡುತ್ತಿದ್ದಾರೆ ಎಂದು ನಾನು ನಂಬುತ್ತೇನೆ. ಮಾಜಿ ಕ್ರಿಕೆಟಿಗನಾಗಿ, ಕ್ರೀಡೆಯನ್ನು ರಾಜಕೀಯದೊಂದಿಗೆ ಬೆರೆಸಬಾರದು ಎಂದು ನಾನು ಬಯಸುತ್ತೇನೆ. ರೋಜರ್ ಬಿನ್ನಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ನಿನ್ನೆ, 1983 ರ ವಿಶ್ವಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾ ಕುಸ್ತಿಪಟುಗಳನ್ನು…

Read More

ತುಮಕೂರು: ನಗರದಿಂದ ಮೈದಾಳ, ಮಾದಗೊಂಡನಹಳ್ಳಿ ಮಾರ್ಗವಾಗಿ ಊರ್ಡಿಗೆರೆಯವರೆಗೂ ಸಂಚರಿಸುವ ಗ್ರಾಮೀಣ ಸಾರಿಗೆ ಬಸ್ ಸರಿಯಾದ ಸಮಯಕ್ಕೆ ಸಂಚರಿಸುತ್ತಿಲ್ಲ, ಈ ಬಗ್ಗೆ ಕ್ರಮವಹಿಸುವಂತೆ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹೈಕೋರ್ಟ್ ವಕೀಲರಾದ ರಮೇಶ್ ನಾಯಕ್ ಎಲ್. ಮನವಿ ಮಾಡಿದ್ದಾರೆ. ಈ ಮಾರ್ಗದಲ್ಲಿ ಹಲವಾರು ದಶಕಗಳಿಂದ ಐದು ಟ್ರಿಪ್ ಬಸ್ ವ್ಯವಸ್ಥೆ ಇದ್ದು, ಬೆಳಗ್ಗೆ 8:15, 10 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆ, ಸಂಜೆ 5 ಗಂಟೆ ಹಾಗೂ ರಾತ್ರಿ 8 ಗಂಟೆಯ ಬಸ್ ಗಳು ಸರಿಯಾದ ಸಮಯಕ್ಕೆ ಸಂಚರಿಸುತ್ತಿಲ್ಲ. ಇದರಿಂದಾಗಿ ಈ ಮಾರ್ಗದ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ಬಡ ಜನರಿಗೆ ತೊಂದರೆಯಾಗುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಬೆಳಗ್ಗೆ 7 ಗಂಟೆ, 8:15 ಗಂಟೆ, 10 ಗಂಟೆ, ಮಧ್ಯಾಹ್ನ 2 ಗಂಟೆ, ಸಂಜೆ 5 ಗಂಟೆ, ರಾತ್ರಿ 7 ಗಂಟೆ ಪ್ರತಿ ದಿನ ಈ ಸಮಯದಲ್ಲಿ ತುಮಕೂರಿನಿಂದ ಹೊರಟು ಮೈದಾಳ ಮಾರ್ಗವಾಗಿ ಊರ್ಡಿಗೆರೆಯಿಂದ…

Read More