Subscribe to Updates
Get the latest creative news from FooBar about art, design and business.
- ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
- ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
- ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
- 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
- ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
- ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
- ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
Author: admin
2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಈಗ ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಕಾರ್ಯಕರ್ತರು ಆಕ್ರೋಶವನ್ನು ನಾಯಕರ ಎದುರುಗಡೆ ವ್ಯಕ್ತಪಡಿಸುತ್ತಿದ್ದು, ಕಾರ್ಯಕರ್ತರ ಸಮಸ್ಯೆ ಒಂದು ಕಡೆ ಆದರೆ, ಇನ್ನೊಂದು ಕಡೆ ನಾಯಕರಗಳ ಒಳ ಜಗಳದಿಂದಾಗಿ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ನಾಯಕರಗಳು ವೇದಿಕೆಯ ಮೇಲೆ ಒಬ್ಬರು ಇನ್ನೊಬ್ಬರಿಗೆ ಟಾಂಗ್ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೌಹಾರ್ದತ್ತ ಭೇಟಿ ಕುರಿತು, ಪಕ್ಷದ ಫೈಯರ್ ಬ್ರಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸವರಾಜ ಯತ್ನಾಳ ಅವರು ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಬಹಿರಂಗವಾಗಿಯೇ ವಿಷಯವನ್ನು ಪ್ರಸ್ತಾಪಿಸಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುಜುಗರವನ್ನುಂಟು ಮಾಡಿದರು. ಅಲ್ಲದೆ, ಮಾಜಿ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ನನ್ನನ್ನು ಸೋಲಿಸಲು ಪ್ರಯತ್ನದಲ್ಲಿದ್ದರೆಂದು ಮಾಜಿ ಸಚಿವರ ಹೆಸರು ಹೇಳದೆ ಪ್ರಸ್ತಾಪಿಸಿ ಸಂಪೂರ್ಣ ಸಭೆಯಲ್ಲಿ ಯತ್ನಾಳ್ ಕೇಂದ್ರ ಬಿಂದುವಾಗಿ ಬಿಟ್ಟರು. ಇದಕ್ಕೆ ಬೆಳಗಾವಿ ಮಾತ್ರ ಸಾಕ್ಷಿಯಾಗಲಿಲ್ಲ.…
ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಕೃಷಿ ಇಲಾಖೆ ಜೆ.ಡಿ.ರವಿ ಮನೆ ಹಾಗೂ ಫಾರಂ ಹೌಸ್ ನಲ್ಲಿ ಮೊಕ್ಕಂ ಹೂಡಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ ಇತ್ತೀಚೆಗಷ್ಟೇ ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು. ತುಮಕೂರು ನಗರದ ಶಂಕರಪುರದಲ್ಲಿ ಇರುವ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿದ್ದಾರೆ. ದಾಖಲಾತಿಗಳನ್ನು ಪರಿಶೀಲಿಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ತುಮಕೂರಿನ ಶಿರಾದ ಪಂಚಾಯರ್ ರಾಜ್ ಎಇ ಪುಟ್ಟರಾಜು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ಶಿರಾ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿದ್ದು ಅವರ ತುಮಕೂರು ನಗರದ ಅಶೋಕ ನಗರದ 9ನೇ ಕ್ರಾಸ್ ನಲ್ಲಿರುವ ಮನೆ…
ಟೊಮೇಟೋ ಬೆಲೆ 100 ರೂಪಾಯಿ ಗಡಿದಾಟಿದ್ದು, ಜನರು ಬೆಲೆ ಏರಿಕೆಯ ಶಾಕ್ ನಲ್ಲಿರುವಾಗಲೇ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೊಮೆಟೊ ಬೆಲೆ ಏರಿಕೆಯು ತಾತ್ಕಾಲಿಕ ವಿದ್ಯಮಾನ. ಶೀಘ್ರದಲ್ಲೇ ದರ ಇಳಿಕೆಯಾಗಲಿದೆ ಎಂದು ತಿಳಿಸಿದ್ದಾರೆ. ಇದು ಹೆಚ್ಚು ಹಾಳಾಗುವ ವಸ್ತುವಾಗಿದೆ. ಹಠಾತ್ ಮಳೆ ಬೀಳುವ ಪ್ರದೇಶಗಳಲ್ಲಿ ಟೊಮೇಟೊ ಸಾಗಾಟದ ಮೇಲೆ ಪರಿಣಾಮ ಬೀರುತ್ತದೆ. ಇದು ತಾತ್ಕಾಲಿಕ ಸಮಸ್ಯೆ. ಶೀಘ್ರದಲ್ಲೇ ಟೊಮೆಟೊ ಬೆಲೆ ಇಳಿಕೆಯಾಗಲಿದೆ. ಈ ಸಮಯದಲ್ಲಿ ಪ್ರತಿ ವರ್ಷ ಟೊಮೆಟೊ ಬೆಲೆ ಏರಿಕೆಯಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟೊಮ್ಯಾಟೋ ಬೆಲೆ ನೂರು ರೂಪಾಯಿ ಮುಟ್ಟಿದೆ. ಕಳೆದ ವಾರ 40-50 ರೂಪಾಯಿ ಆಸುಪಾಸಿನಲ್ಲಿದ್ದ ಟೊಮ್ಯಾಟೊ ಬೆಲೆ ಒಂದೇ ವಾರದಲ್ಲಿ ದುಪ್ಪಟ್ಟಾಗಿದೆ. ದೇಶದ ನಾಲ್ಕು ಮಹಾನಗರಗಳಾದ, ದೆಹಲಿಯಲ್ಲಿ ಟೊಮೆಟೊ ಬೆಲೆ ಕೆಜಿಗೆ 60 ರೂ., ಮುಂಬೈ ಕೆಜಿಗೆ 42 ರೂ., ಕೋಲ್ಕತ್ತಾ ಕೆಜಿಗೆ 75 ರೂ. ಮತ್ತು…
ತುರುವೇಕೆರೆ: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವವನ್ನು ತಾಲೂಕು ಒಕ್ಕಲಿಗರ ಸಂಘ ಮತ್ತು ತಾಲೂಕು ನೌಕರರ ಸಂಘ ಹಾಗೂ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ ಶ್ರೀ ಕೆಂಪೇಗೌಡ ಯುವ ಸೇನೆ ವತಿಯಿಂದ ಬಹಳ ಅದ್ದೂರಿಯಾಗಿ ಪಟ್ಟಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯನ್ನು ನಾವುಗಳೆಲ್ಲರೂ ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ . ಶ್ರೀ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಲ್ಪತರು ಆಶೀರ್ವಾದ ಸ್ವಾಮೀಜಿಯವರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ನಮಗೆ ಆಶೀರ್ವಚನವನ್ನು ಮಾಡಿದ್ದಾರೆ ಎಂದರು. ಈ ಸಮಾರಂಭದ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಪ್ರೊಫೆಸರ್ ಚಂದ್ರಶೇಖರ್ ರವರು ಬಹಳ ಸೊಗಸಾಗಿ ಕೆಂಪೇಗೌಡರ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟಿದ್ದಾರೆ ಅವರಿಗೆ ನನ್ನ ಕೃತಜ್ಞತೆಗಳು ಪ್ರೊಫೆಸರ್ ಪುಟ್ಟರಂಗಪ್ಪನವರು ಚಂದ್ರಶೇಖರ್ ಅವರ ಹೆಸರನ್ನು ಶಿಫಾರಸು ಮಾಡಿ ಬಹಳ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಅವರಿಗೆ ಧನ್ಯವಾದಗಳು ಎಂದು ನುಡಿದರು. ನಿರೀಕ್ಷಿತ ಮಟ್ಟದಲ್ಲಿ ಜನ ಸೇರದ್ದಕ್ಕೆ ಬಹಳ ನಿರಾಸೆಯಾಗಿದೆ ನಮ್ಮಗಳಿಗೆ ಇಂತಹ ವಿಚಾರದಲ್ಲಿ ಆಸಕ್ತಿ ಕಡಿಮೆಯಾಗಿರುವುದೇ…
ಕೊರಟಗೆರೆ: ತಾಲೂಕಿನ ಕಾಲೋನಿ, ನಾಗೇನಹಳ್ಳಿ ಸೇರಿದಂತೆ ಭೈರೇನಹಳ್ಳಿ ಕ್ರಾಸ್ ಬಳಿ ಸರಣಿ ಕಳ್ಳತನ ನಡೆದಿದ್ದು, ರಸ್ತೆ ಬದಿಯ ಅಂಗಡಿಗಳಲ್ಲಿ ಕಳ್ಳರು ಕಳ್ಳತನ ನಡೆಸಿರುವುದಲ್ಲದೇ ಬೆಳಗ್ಗಿನ ವೇಳೆ ವೃದ್ದೆಯ ಕೊರಳಲ್ಲಿದ್ದ ಚೈನ್ ಕಸಿದು ಪರಾರಿಯಾದ ಘಟನೆ ಕೂಡ ನಡೆದಿದೆ. ಕಾಲೋನಿಯಿಂದ ಕೊರಟಗೆರೆಗೆ ಬರುವ ಮಾರ್ಗ ಮಧ್ಯದ ರಸ್ತೆ ಬದಿಯ ಐದು ಅಂಗಡಿಗಳಲ್ಲಿ ತಡ ರಾತ್ರಿ ಕಳ್ಳತನ ನಡೆಸಲಾಗಿದ್ದು, ಸಿಲಿಂಡರ್,ಗುಟ್ಕಾ, ಸಿಗರೇಟ್, ನಗದು ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳತನ ಮಾಡಿರುವ ಪ್ರತಿಯೊಂದು ಅಂಗಡಿಗಳಲ್ಲಿ ಬೆಲೆ ಬಾಳುವ ವಸ್ತುಗಳಾದ 4 ಸಿಲಿಂಡರ್, ಸಿಗರೇಟ್, ಗುಟ್ಕಾ, 40 ಸಾವಿರ ಹೆಚ್ಚು ನಗದು ಕಳವು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋಳಾಲ ಹಾಗೂ ಕೊರಟಗೆರೆ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವೃದ್ಧೆಯ ಸರಗಳ್ಳತನ: ಜಮೀನಿಗೆ ತೆರಳುತ್ತಿದ್ದ ಒಂಟಿ ವೃದ್ದೆಯ ಕೊರಳಿನಲ್ಲಿದ್ದ 2 ಲಕ್ಷ ಮೌಲ್ಯದ 30 ಗ್ರಾಂ ಮಾಂಗಲ್ಯ ಸರವನ್ನು ಸರಗಳ್ಳರು ದೋಚಿ ಪರಾರಿಯಾದ ಘಟನೆ ನಡೆದಿದೆ.…
ಮಧುಗಿರಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗದ ಮುಖ್ಯ ದ್ವಾರದ ಸಮೀಪದಲ್ಲಿ ದೊಡ್ಡ ಗಾತ್ರದ ಮರದ ಕೊಂಬೆ ಅರ್ಧಕ್ಕೆ ಮುರಿದು ನೇತಾಡುತ್ತಿದ್ದರೂ ಸಹ, ಕೊಂಬೆಯನ್ನು ತೆರವುಗೊಳಿಸದೆ ಆಸ್ಪತ್ರೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ನಿರ್ಲಕ್ಷ್ಯವಹಿಸಿರುವ ಘಟನೆ ನಡೆದಿದೆ. ಕಳೆದ ಭಾನುವಾರದಂದು ದೊಡ್ಡ ಗಾತ್ರದ ಮರದ ಕೊಂಬೆ ಮುರಿದಿದ್ದು, ಜೋತಾಡುವ ಸ್ಥಿತಿಯಲ್ಲಿದೆ. ಆದರೆ ಸೋಮವಾರದವರೆಗೂ ಈ ಮರದ ಕೊಂಬೆಯನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿಲ್ಲ. ಇದು ತಾಲೂಕು ಮಟ್ಟದ ಆಸ್ಪತ್ರೆಯಾಗಿದ್ದು, ನಿತ್ಯ ಸಾರ್ವಜನಿಕರು ಈ ಆಸ್ಪತ್ರೆಗೆ ನೂರಾರು ಸಂಖ್ಯೆಯಲ್ಲಿ ಬಂದು ಹೋಗುತ್ತಾರೆ. ಅಲ್ಲದೇ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗಕ್ಕೆ ಇದೇ ದಾರಿಯಲ್ಲಿ ತೆರಳ ಬೇಕಿದೆ. ಮರದ ಕೊಂಬೆ ಜೋತಾಡುತ್ತಿರುವುದರಿಂದಾಗಿ ಆಂಬುಲೆನ್ಸ್ ಸಂಚಾರಕ್ಕೂ ಸಹ ಅಡೆತಡೆಯಾಗುತ್ತಿದೆ. ಜೋತಾಡುತ್ತಿರುವ ಮರದ ಕೊಂಬೆಯ ಕೆಳಗೆ ಜನರು ಹೋಗಲು ಭಯಪಡುತ್ತಿದ್ದು, ಎಲ್ಲ ಸಾರ್ವಜನಿಕರ ಮೇಲೆ ಬೀಳಲಿದೆಯೋ ಎನ್ನುವ ಆತಂಕದ ಮಾತುಗಳು ಕೇಳಿ ಬಂದಿವೆ. ಸಾಧ್ಯವಾದಷ್ಟು ಬೇಗನೇ ಮರದ ಕೊಂಬೆ ತೆರವುಗೊಳಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ.…
ಹಾಸನ: ಕೆಂಪೇಗೌಡ ಜಯಂತಿಯನ್ನು ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸರ್ಕಾರ ಆಚರಣೆ ಮಾಡುತ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ನಡೆಯುತ್ತಿದ್ದು, ಇದು 514 ನೇ ಜಯಂತಿಯಾಗಿದೆ. ಕೆಂಪೇಗೌಡರು 1510 ರಲ್ಲಿ ಜನಿಸಿದ್ದು, ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದ ನಗರ ಆಗಬೇಕಾದರೆ ಕೆಂಪೇಗೌಡರು ಕಾರಣ. ಕೆಂಪೇಗೌಡರು ದೂರ ದೃಷ್ಟಿಯುಳ್ಳ ನಾಡ ಪ್ರಭು ಆಗಿದ್ದರು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪೆರಿಫೆರಲ್ ವರ್ತುಲ ರಸ್ತೆ (ಪಿಆಆರ್) ಯೋಜನೆಯಡಿ ಸ್ವಾಧೀನ ಪಡೆಯುವ ಭೂಮಿಗೂ 2013ರ ಕೇಂದ್ರ ಸರ್ಕಾರದ ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆಯಡಿ ಪರಿಹಾರ ನೀಡಬೇಕು. ಇಲ್ಲದಿದ್ದರೆ, ಯೋಜನೆಯನ್ನೇ ಕೈಬಿಡಬೇಕು ಎಂದು ಪಿಆರ್ಆ ರೈತ ಹಾಗೂ ನಿವೇಶನದಾರರ ಸಂಘ ಸೋಮವಾರ ಆಗ್ರಹಿಸಿದೆ. ‘ಬೆಂಗಳೂರಿನ ಉತ್ತರ ಭಾಗದಲ್ಲಿರುವ 65 ಕಿ. ಮೀ. ವರ್ತುಲ ರಸ್ತೆ ಅಭಿವೃದ್ಧಿಗೆ ಬಿಡಿಎ 2005ರಲ್ಲಿ ಬಿಡಿಎ ಯೋಜನೆ ರೂಪಿಸಿದ್ದು, 1, 810 ಎಕರೆ ಭೂಮಿ ಸ್ವಾಧೀನಕ್ಕಾಗಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಈವರೆಗೆ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಕುರಿತು ಬಿಡಿಎ ಮತ್ತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದರೂ ರೈತರಿಗೆ ಪರಿಹಾರ ಕುರಿತಂತೆ ತೀರ್ಮಾನ ಕೈಗೊಂಡಿಲ್ಲ’ ಎಂದು ಸಂಘದ ಅಧ್ಯಕ್ಷ ಮಾವಳಿಪುರ ಬಿ. ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ‘ಸದ್ಯ ಇಲ್ಲಿ ಎಕರೆ ಜಮೀನಿಗೆ ಮಾರುಕಟ್ಟೆಯಲ್ಲಿ 110 ಕೋಟಿಯಿಂದ 714 ಕೋಟಿವರೆಗೆ ಬೆಲೆ ಇದೆ. ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೇವೆ. 2013ರ ಕಾಯ್ದೆಯಡಿ ಬೆಲೆ ನಿಗದಿಪಡಿಸಿ ಪರಿಹಾರ ನೀಡಬೇಕು ಅಥವಾ ಯೋಜನೆ ಕೈಬಿಟ್ಟು,…
ನಗರ ಪೊಲೀಸರು, ಸೋಮವಾರ 7 21 ಕೋಟಿ ಮೌಲ್ಯದ 2, 117 ಕೆ.ಜಿ ಡ್ರಗ್ಸ್ ನಾಶಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ.ದಯಾನಂದ್, ‘ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 2, 053 ಕೆ. ಜಿ ಗಾಂಜಾ, 9 ಕೆ. ಜಿ ಹಶೀಷ್, 12 ಕೆ. ಜಿ ಅಫೀಮು, 9 ಕೆ. ಜಿ ಚರಸ್, 568 ಗ್ರಾಂ ಕೊಕೇನ್, 13 ಗ್ರಾಂ ಹೆರಾಯಿನ್, 5 ಕೆ. ಜಿ ಎಂಡಿಎಂಎ ಅನ್ನು ಕೋರ್ಟ್ ಆದೇಶ ಪಡೆದು ನಾಶಪಡಿಸಲಾಗಿದೆ’ ಎಂದರು. ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ 2022ರ ಜನವರಿಯಿಂದ 2023ರ ಜೂನ್ ವರೆಗೆ 6, 191 ಪ್ರಕರಣ ದಾಖಲಾಗಿದೆ. ಈ ಸಂಬಂಧ 7, 723 ಭಾರತೀಯರು, 159 ವಿದೇಶಿಯರನ್ನು ಬಂಧಿಸಿದ್ದು, 7 117 ಕೋಟಿ ಮೌಲ್ಯದ 6, 261 ಕೆ. ಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದು ಅವರು ವಿವರಿಸಿದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ‘ಡ್ರಗ್ಸ್ ಸಾಗಣೆ ಹಾಗೂ ರಾಷ್ಟ್ರೀಯ…
ತುಮಕೂರು: ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಬಡ ಮಹಿಳೆಯೊಬ್ಬರಿಗೆ ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ಆಶಾ ಎಂಬ ಮಹಿಳೆಯ ಕೀಲು ಮುರಿದುಹೋಗಿತ್ತು. ಶಸ್ತ್ರಚಿಕಿತ್ಸೆ ಮಾಡಲು 4-5 ಲಕ್ಷ ರೂ ಖರ್ಚಾಗುತಿತ್ತು. ಶಾಸಕರ ಬಳಿ ಬಂದು ನೋವು ತೋಡಿಕೊಂಡಿದ್ದರು. ಮಹಿಳೆಯನ್ನು ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ. ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಸಿಕೊಂಡಿದ್ದ ಆಶಾ ಅವರಿಗೆ ಪುನಃ ಡಿಸ್ ಲೊಕೆಟ್ ಆಗಿತ್ತು. ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಇದನ್ನರಿತು ಈ ರೀತಿಯ ಕೀಲು ಮೂಳೆ ಸಮಸ್ಯೆ ಇದ್ದ ಮಹಿಳೆಯ ಉಚಿತ ಶಸ್ತ್ರಚಿಕಿತ್ಸೆಗೆ ಮುಂದಾಗಿರುವ ಶಾಸಕ ಡಾ.ರಂಗನಾಥ್, ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ. ಶಾಸಕರ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…