Author: admin

ಪಾವಗಡ:  ಶಾಲಾ ಶಿಕ್ಷಣ ಇಲಾಖೆ ಪಾವಗಡದ ವತಿಯಿಂದ ಗುರುಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ 10 ನೇ ತರಗತಿಯ ವಿದ್ಯಾರ್ಥಿ ಗಳಾದ  ಜಯಶ್ರೀ ಬಿ. ಮತ್ತು ರಚನಾ ಎಂ. ಗುಂಪು ವಿಭಾಗದ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಮತ್ತು ವೈಯಕ್ತಿಕ  ವಿಭಾಗದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಹೃತಿಕ್ ಹೆಚ್. ಕೂಡಾ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯು ದಿನಾಂಕ :09—12–2025 ರಂದು ಮಧುಗಿರಿಯಲ್ಲಿ ನಡೆಯಲಿದೆ, ವಿಜೇತ ವಿದ್ಯಾರ್ಥಿಗಳಿಗೆ  ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಪ್ರೇಮ್ ಕುಮಾರ್, ಉಪಾಧ್ಯಕ್ಷರಾದ ಕವಿತಮ್ಮ ಎಸ್.ಡಿ.ಎಂ.ಸಿ. ಸದಸ್ಯರು, ಸಹಶಿಕ್ಷಕರಾದ ಹನುಮೇಶ್ ಎನ್., ಮೋಹನ್ ಕುಮಾರ್ ಜಿ.ಕೆ., ಕುಮಾರ್ ಎಸ್.,  ಅಭಿಷೇಕ್ ಎಂ.ವಿ., ಶಿಕ್ಷಕಿಯರಾದ ವಿಮಲಾ ಆರ್.,ರಶ್ಮಿ ಸಿ.ಎಸ್., ಮಾನಸ, ಶ್ರೀಲಕ್ಷ್ಮೀ ಮತ್ತು ಸಮಸ್ತ ಪೋಷಕರು ಅಭಿನಂಧಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿ.ಜಿ.ಲಕ್ಷ್ಮೀಪತಿ ಹೇಳಿದರು. ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜುಂಜಪ್ಪ ಅಧ್ಯಯನ ಪೀಠ, ಕಲಾ ಕಾಲೇಜಿನ ಕನ್ನಡ ವಿಭಾಗದಿಂದ ಅಯೋಜಿಸಿದ್ದ “ಮಧ್ಯ ಕರ್ನಾಟಕದ ಬುಡಕಟ್ಟುಗಳ ಸಾಂಸ್ಕೃತಿಕ ಅನನ್ಯತೆ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ 45 ಬುಡಕಟ್ಟುಗಳಿದ್ದು, ಸಮುದಾಯದ ಜನರು ದಶಕಗಳಿಂದ ತಮ್ಮದೇ ಪೂಜಾರಿಯನ್ನು ಹೊಂದಿದ್ದರು. ಆಧ್ಯಾತ್ಮಿಕತೆ ಒಪ್ಪುತ್ತಿರಲಿಲ್ಲ. ಜನಾಂಗದಲ್ಲಿ ಯಾವುದೇ ಒಂದು ಧರ್ಮ ಪಾಲಿಸುವುದು ವಿರುದ್ಧವಾಗಿದೆ. ಬುಡಕಟ್ಟು ಕಲೆ, ಆಚರಣೆ ದೇಶದ ಕಲೆ, ಸಂಸ್ಕೃತಿಯ ಮೇಲೆ ಪ್ರಭಾವ ಬೀರುತ್ತವೆ. ಹಾಗಾಗಿ ನಾವು ನಮ್ಮ ಸಂಸ್ಕೃತಿಗೆ ಮರಳಬೇಕು. ಬುಡಕಟ್ಟು ಜನಾಂಗದವರು ಕೀಳರಿಮೆ ಬಿಟ್ಟು ಬದುಕು ಕಟ್ಟಿಕೊಳ್ಳಬೇಕು. ವೈಶಿಷ್ಟ್ಯತೆ ಉಳಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ವಿ.ವಿ. ಪ್ರಾಧ್ಯಾಪಕ ಬಿ.ಕರಿಯಣ್ಣ ಮಾತನಾಡಿ, ಸುಧಾರಣೆಯ ಹೆಸರಲ್ಲಿ ಸಂಸ್ಕೃತಿ ಹಾಳು ಮಾಡಿಕೊಳ್ಳುತ್ತಿದ್ದೇವೆ. ಜಾತಿ ಗಣತಿಯಲ್ಲಿ ಬುಡಕಟ್ಟು ಜನಾಂಗವನ್ನು ಬೇರೆ ಜಾತಿಗೆ ಸೇರಿಸಿ, ತಮ್ಮ ಮೂಲ ಹುಡುಕಿಕೊಂಡು…

Read More

ತುಮಕೂರು: ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡವೇ ಬೇಡ. ನನಗೆ ಸಾಕು, ಇನ್ನೊಬ್ಬರಿಗೆ ಅವಕಾಶ ಕೊಡಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆಯೇ ಎಂದು ವರದಿಗಾರರ ಪ್ರಶ್ನಿಸಿದಾಗ ಗರಂ ಆದ ರಾಜಣ್ಣ, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ. ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಅವರು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದರು. ಸಿಎಂ ಮತ್ತು ಡಿಸಿಎಂ ದುಬಾರಿ ವಾಚ್‌ ಗಳ ಕುರಿತು ವಿರೋಧ ಪಕ್ಷದ ಟೀಕೆಯ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ, ವಿರೋಧ ಪಕ್ಷದವರಿಗೆ ವಿರೋಧ ಮಾಡೋಕೆ ಬೇರೆ ವಿಚಾರ ಇಲ್ಲ. ವಾಚ್ ಬಗ್ಗೆ, ಊಟಕ್ಕೆ ಹೋದರೂ ಆರೋಪ ಮಾಡುತ್ತಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಅಂತಾ ಮನವಿ ಮಾಡುತ್ತೇನೆ ಎಂದರು. 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಅವರು…

Read More

ತುಮಕೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ನಿರುದ್ಯೋಗಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಅನುಕೂಲವಾಗುವಂತೆ ಉದ್ಯೋಗಿನಿ, ಧನಶ್ರೀ, ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಆರ್ಥಿಕ ನೆರವು ನೀಡಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ 18-55 ವಯೋಮಿತಿಯೊಳಗಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಟ 3 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುವುದು. ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ಅಂಗವಿಕಲರು ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗರಿಷ್ಠ 90,000 ರೂ. ಅಥವಾ ಶೇ.30ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗರಿಷ್ಠ 1,50,000 ರೂ. ಅಥವಾ ಶೇ.50ರಷ್ಟು ಸಹಾಯಧನವನ್ನು ನೀಡಲಾಗುವುದು. ಧನಶ್ರೀ, ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ 18–60 ವಯೋಮಿತಿಯೊಳಗಿರುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು…

Read More

ತುಮಕೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸೌಮ್ಯ ತಿಳಿಸಿದ್ದಾರೆ. ಆಹಾರ ಅದಾಲತ್‌ ಕಾರ್ಯಕ್ರಮವು ಡಿಸೆಂಬರ್ 8ರಂದು ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಜಿ. ಹೊಸಹಳ್ಳಿ, ಡಿಸೆಂಬರ್ 10ರಂದು ತುಮಕೂರು ನಗರದ ದಿಟ್ಟೂರು, ಡಿಸೆಂಬರ್ 12ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿ ಕೆರೆ ಹೋಬಳಿ ಸಿದ್ದರಾಮನಗರ, ಡಿಸೆಂಬರ್ 15ರಂದು ತಿಪಟೂರು ತಾಲ್ಲೂಕು ನೊಣವಿನಕೆರೆ ಹೋಬಳಿ ಬಜಗೂರು ಗ್ರಾಮ, ಡಿಸೆಂಬರ್ 17ರಂದು ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ, ಡಿಸೆಂಬರ್ 18ರಂದು ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ ಹೋಬಳಿ ದೊಡ್ಡದಾಳವಟ್ಟ ಡಿಸೆಂಬರ್ 20ರಂದು ತುಮಕೂರು ಗ್ರಾಮಾಂತರ ಕಸಬಾ ಹೋಬಳಿ ಊರುಕೆರೆ, ಡಿಸೆಂಬರ್ 22ರಂದು ತುರುವೇಕೆರೆ ಪಟ್ಟಣದ ಲಯನ್ಸ್ ಕ್ಲಬ್, ಡಿಸೆಂಬರ್ 24ರಂದು ಪಾವಗಡ ತಾಲ್ಲೂಕು ನಿಡಗಲ್ಲು ಹೋಬಳಿ ಮಂಗಳವಾಡ, ಡಿಸೆಂಬರ್ 29ರಂದು ಕುಣಿಗಲ್ ತಾಲ್ಲೂಕು ಕೊತ್ತಗೆರೆ ಹೋಬಳಿ ಭಕ್ತರಹಳ್ಳಿ ಹಾಗೂ ಡಿಸೆಂಬರ್ 31ರಂದು ಕೊರಟಗೆರೆ ತಾಲ್ಲೂಕಿನ…

Read More

ತುಮಕೂರು: ತುಮಕೂರು ನಗರದಲ್ಲಿ 26 ಹಾಗೂ ಮಧುಗಿರಿ ಪಟ್ಟಣದಲ್ಲಿ 7 ಸೇರಿದಂತೆ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ 7,340 ಹಾಗೂ ಮಧುಗಿರಿಯಲ್ಲಿ 1,840 ಸೇರಿದಂತೆ ಒಟ್ಟು 9,180 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಪೂರ್ವ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆತಡೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ಪರೀಕ್ಷಾ ಅಕ್ರಮವನ್ನು ತಡೆಯುವ ದೃಷ್ಟಿಯಿಂದ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವಾಗಿಸಿ, ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪರೀಕ್ಷಾ ಗೌಪ್ಯ ಸಾಮಗ್ರಿಗಳ ಸುರಕ್ಷಿತ ನಿರ್ವಹಣೆ, ಪೊಲೀಸ್ ಭದ್ರತೆ, ಮೂಲಸೌಕರ್ಯಗಳ…

Read More

ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ.  ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ. ಗಣೇಶ್ ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು,…

Read More

ತುಮಕೂರು: ವೈಯಕ್ತಿಕ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗುಬ್ಬಿತಾಲ್ಲೂಕು ಕೆ.ಅರಿವೆಸಂದ್ರ ಗ್ರಾಮದ ಮಂಜುಳ ಎಂಬವರನ್ನು ಮಧು ಎಂಬಾತ ಹತ್ಯೆ ಮಾಡಿ ಪರಾರಿಯಾಗಿದ್ದ. ಮೃತ ಮಂಜುಳ ಅವರ ಮಗ ಶ್ರೀ ನಿವಾಸ್ ಎಂಬುವರು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 103 (1) ಅನ್ವಯ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಗುಬ್ಬಿ ಸಿಪಿಐ ರಾಘವೇಂದ್ರ ಟಿ.ಆರ್., ಪಿ.ಎಸ್‌ಐ ಧರ್ಮಾಂಜಿ, ಸಿಬ್ಬಂದಿಗಳಾದ ರಾಜು, ತ್ಯಾಗರಾಜು, ನವೀನ್ ಕುಮಾರ್, ವಿಜಯಕುಮಾರ್, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ನರಸಿಂಹರಾಜು, ಜಗದೀಶ್ ಮತ್ತು ತಂಡ ಕಾರ್ಯಪ್ರವೃತ್ತರಾಗಿ ಪ್ರಕರಣದ ಆರೋಪಿ ಮಧು ಎಂಬಾತನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಸರಗೂರು: ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆವರಣದಲ್ಲಿ ಶನಿವಾರದಂದು ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನದಂದು  ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು. ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು. ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ…

Read More

ತುಮಕೂರು: ಸೃಜನ ವೇದಿಕೆ ತುಮಕೂರು, ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು, ದಿ. ಶ್ರೀ ಮತಿ ಲತಾ ಜಿ.ಕುಲಕರ್ಣಿ ಸಾಂಸ್ಕೃತಿಕ ವೇದಿಕೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 7ರಂದು  ಮಧ್ಯಾಹ್ನ 3 ಗಂಟೆಗೆ ಕನ್ನಡ ಭವನದಲ್ಲಿ ವಿದ್ಯಾವಾಚಸ್ಪತಿ ದಿ.ಡಾ.ಕವಿತಾಕೃಷ್ಣ ಸ್ಮರಣಾರ್ಥ ಕನ್ನಡ ಗೀತೆಗಳ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್‌.ಸಿದ್ದಲಿಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಜಾಪ್ರಗತಿ ಸಂಪಾದಕ ಡಾ.ಎಸ್.ನಾಗಣ್ಣ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಆಗಮಿಸಲಿದ್ದಾರೆ. ಸೃಜನ ವೇದಿಕೆ ಅಧ್ಯಕ್ಷರಾದ ಸುಶೀಲಾ ಸದಾಶಿವಯ್ಯ ಆಶಯ ನುಡಿಗಳನ್ನಾಡುವರು. ಅತಿಥಿಗಳಾಗಿ ಜಿ.ಕೆ.ಕುಲಕರ್ಣಿ, ಡಾ.ಎಸ್.ನಟರಾಜ್, ಡಾ.ಕೆ.ಬಿ.ಭರತ್ ರಾಜ್, ಗಣಪತಿ ಹೆಗಡೆ, ಅಬ್ಬಿನಹೊಳೆ ಸುರೇಶ್ ಅವರುಗಳು ಆಗಮಿಸುವರು. ಗೀತ ಗಾಯನದಲ್ಲಿ ಮುದ್ದೇನಹಳ್ಳಿ ನಂಜಯ್ಯ, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ, ಡಾ.ಎಸ್.ಪಿ.ಪದ್ಮಪ್ರಸಾದ್, ಜಿ.ಕೆ.ಕುಲಕರ್ಣಿ, ಬಾ.ಪು. ಜಯದೇವಯ್ಯ, ಗಣಪತಿ ಹೆಗಡೆ, ಬಾ.ಹ. ರಮಾಕುಮಾರಿ, ಡಾ.ಬಿ.ಸಿ.ಶೈಲಾನಾಗರಾಜ್, ಸಿ.ಎನ್.ಗುಣಾದೇವಿ, ಡಾ.ಕೆ.ಬಿ. ಭರತ್‌ರಾಜ್, ಡಾ.ಗಂಗಾಧರ ಕೊಡ್ಡಿಯವರ, ಡಾ.ಪ್ರಕಾಶ್ ನಾಡಿಗ್, ಕಮಲಾ ಬಡ್ಡಿಹಳ್ಳಿ, ವಿ.ಪಿ.ಕೃಷ್ಣಮೂರ್ತಿ, ಡಾ.ಕೆ.ಬಿ. ರಂಗಸ್ವಾಮಿ, ಕಮಲಾ ರಾಜೇಶ್, ಕೃಷ್ಣಾಬಾಯಿ ಹಾಗಲವಾಡಿ, ಅಬ್ಬಿನಹೊಳೆ…

Read More