Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ನಗರದ ಅಮಾನಿಕೆರೆ ಅಂಗಳದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಜಾರಿ, ಗಾಳಿಯಲ್ಲಿ ತೇಲಿ ಸಂಭ್ರಮಿಸಿದರು. ದಿನನಿತ್ಯ ಇಲ್ಲಿಗೆ ವಾಯುವಿಹಾರ ಮಾಡಲು ಬರುವ ಶಾಸಕರು ಶುಕ್ರವಾರ ಬೆಳಿಗ್ಗೆ ರೋಪ್ ವೇ ಬಳಸಿದರು. ಅಮಾನಿಕೆರೆ ಅಂಗಳ ನಗರದ ಪ್ರಮುಖ ಮನರಂಜನಾ ತಾಣವಾಗಿದೆ. ಸುಮಾರು 500 ಎಕರೆ ವಿಸ್ತೀರ್ಣದ ಜಲಭರ್ತಿ ಕೆರೆ ಅಂಗಳದಲ್ಲಿ ಗಿಡಮರಗಳ ಹಸಿರುವನ, ಅಂಕಾರಿಕ ಹೂವಿನ ಗಿಡಗಳು ಗಮನ ಸೆಳೆಯುತ್ತದೆ. ವಾಯು ವಿಹಾರ ಮಾಡುವವರಿಗೆ ಈ ಸ್ಥಳ ಪ್ರಶಸ್ತವಾಗಿದೆ ಎಂದು ಸುರೇಶ್ ಗೌಡರು ಹೇಳಿದರು. ಅಮಾನಿಕೆರೆಯಲ್ಲಿ ಫುಡ್ ಪಾರ್ಕ್, ದೋಣಿ ವಿಹಾರ, ಮಕ್ಕಳ ಆಟದ ಪರಿಕರಗಳ ಜೊತೆಗೆ ಈಗ ನಗರಾಭಿವೃದ್ಧಿ ಪ್ರಾಧಿಕಾರ ರೋಪ್ ವೇ ಸಿದ್ಧಪಡಿಸಿದ್ದು, ಶೀಘ್ರವೇ ಸಾರ್ವಜನಿಕರ ಬಳಕೆಗೆ ಉದ್ಘಾಟನೆಯಾಗಲಿದೆ. ಅಮಾನಿಕೆರೆ ಆವರಣ ಆಕರ್ಷಣೀಯ ತಾಣವಾಗಿ ಎಲ್ಲರನ್ನೂ ಸೆಳೆಯುತ್ತದೆ. ಇಂದಿನ ಒತ್ತಡದ ಬದುಕಿನಲ್ಲಿ ಬಳಲುತ್ತಿರುವವರಿಗೆ ಅಮಾನಿಕೆರೆ ಅಂಗಳ ಮನೋಲ್ಲಾಸ ತಾಣವಾಗಲಿದೆ. ವಾರಾಂತ್ಯದಲ್ಲಿ ಕುಟುಂಬ ಸಮೇತರಾಗಿ ಇಲ್ಲಿಗೆ ಬಂದು ಆನಂದಪಡಬಹುದು ಎಂದರು. ಸ್ಮಾರ್ಟ್ ಸಿಟಿ ಯೋಜನೆಯಡಿ…
ಕೊರಟಗೆರೆ: ತಾಲ್ಲೂಕಿನ ಹಂಚಿಹಳ್ಳಿ ಗ್ರಾಮ ಪಂಚಾಯಿತಿಗೆ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದರು. ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಬಳಿಕ ಗ್ರಾ.ಪಂ ಅಧ್ಯಕ್ಷ ಎಂ.ಎಸ್.ಭೀಮರಾಜು ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳ ಸದಸ್ಯರುಗಳನ್ನು ವಿಶ್ವಾಸಕ್ಕೆ ಪಡೆದು ಪ್ರತೀ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಜೊತೆಗೆ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿ ಶುದ್ದ ಕುಡಿಯುವ ನೀರನ್ನು ಒದಗಿಸಿದ್ದೇವೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಇದರಿಂದಾಗಿ ಇಂದು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಲು ಕಾರಣವಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲ ಸದಸ್ಯರು ಮತ್ತು ಅಧಿಕಾರಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಮಾತನಾಡಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳ ಅಭಿವೃದ್ಧಿ ಮತ್ತು ಆಗತ್ಯ…
ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಗುರುವಾರ ಬೆಳಗ್ಗೆಯೇ ತಾಲ್ಲೂಕು ಕಚೇರಿಗೆ ಬಂದಿಳಿದ ಲೋಕಾಯುಕ್ತ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿರುವ ಕುರಿತು ತಾಲ್ಲೂಕು ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸಂಬಂಧಿಸಿದ ಭೂಮಿಗಳ ದಾಖಲೆ ಪರಿಶೀಲಿಸಿದರು. ತಾಲ್ಲೂಕಿನ ನರಿಗೇಹಳ್ಳಿ, ಲೆಂಕನಹಳ್ಳಿ, ದೇವನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿದ್ದ ಸರ್ಕಾರಿ ಭೂಮಿಯನ್ನು ಕೆಲವು ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಹಲವರು ಲಕ್ಷಾಂತರ ಹಣ ಪಡೆದು ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ನಕಲಿ ದಾಖಲೆಗಳನ್ನು 2018–19ರಲ್ಲಿ ಸೃಷ್ಟಿಸಲಾಗಿದೆ. 1995ರಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್, ಸಿಬ್ಬಂದಿ ಕಲ್ಲೇಶ್…
ಕುಣಿಗಲ್: ಪಟ್ಟಣದ ಕುಂಬಾರಗುಂಡಿ ಸ್ಮಶಾನದಲ್ಲಿ ವರ್ಷದ ಹಿಂದೆ ವಿದ್ಯುತ್ ಚಿತಾಗಾರ ಉದ್ಘಾಟನೆಗೊಂಡಿತ್ತು. ಆದ್ರೆ, ಇದು ಉದ್ಘಾಟನೆಗಿಂತ ಮೊದಲೇ ಶಿಥಿಲಾವಸ್ಥೆ ತಲುಪಿದ್ದು, ಕಾರ್ಯಾರಂಭಗೊಳ್ಳುವ ಮುನ್ನವೇ ಚಿತಾಗಾರ ಶಿಥಿಲಾವಸ್ಥೆಗೆ ತಲುಪಿರುವುದಕ್ಕೆ ಯಾರು ಹೊಣೆ ಅನ್ನೋ ಪ್ರಶ್ನೆ ಕೇಳಿ ಬಂದಿದೆ. ವರದಿಗಳ ಪ್ರಕಾರ, ಸಂಸದ ಡಿ.ಕೆ. ಸುರೇಶ್ ಅವರ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣವಾಗಿತ್ತು. ಆದರೆ ಎರಡು ವರ್ಷ ಕಳೆದಿದ್ದರೂ, ಯಂತ್ರೋಪಕರಣ ಅಳವಡಿಕೆ ಮತ್ತು ವಿದ್ಯುತ್ ಸಂಪರ್ಕ ಸಾಧ್ಯವಾಗಿರಲಿಲ್ಲ, ಕಳೆದ ವರ್ಷ ಶಾಸಕ ಡಾ.ರಂಗನಾಥ್ ಅಧ್ಯಕ್ಷತೆಯಲ್ಲಿ ಉದ್ಘಾಟನೆ ಮಾಡಲಾಗಿತ್ತು. ಆದರೆ, ನಿರ್ವಹಣೆ ಕೊರತೆಯಿಂದಾಗಿ ಚಿತಾಗಾರ ಕಾರ್ಯಾರಂಭ ತಡವಾಗಿದ್ದು, ಪುರಸಭೆಯಿಂದ ನಿರ್ವಹಣೆ ಟೆಂಡ ಕರೆಯಲಾಗಿದ್ದು, ಗುತ್ತಿಗೆ ಪಡೆದವರು ಅರ್ಹ ಸಿಬ್ಬಂದಿಗೆ ತರಬೇತಿ ನೀಡಿ ಕಾರ್ಯಾರಂಭ ಮಾಡದ ಕಾರಣ ಮತ್ತೆ ಸ್ಥಗಿತಗೊಂಡಿದೆ. ಈಗಾಗಲೇ ಎರಡು ಬಾರಿ ಚಿತಾಗಾರದ ಬಾಗಿಲು ಮೀಟಿ ಒಳ ನುಸುಳಿದ ಕಿಡಿಗೇಡಿಗಳು ಸಾಮಗ್ರಿ ಕಳವು ಮಾಡಿದ್ದಾರೆ. ಕಿಟಕಿ ಗಾಜುಗಳನ್ನು ನಿರಂತರವಾಗಿ ಒಡೆದು ಹಾಕಲಾಗುತ್ತಿದ್ದು, ಪುರಸಭೆಯಿಂದ ಅಳವಡಿಕೆ ಕಾರ್ಯ ಮುಂದುವರೆದಿದೆ. ಕುಲುಮೆ ಅಳವಡಿಕೆ ಮತ್ತು…
ಕೊರಟಗೆರೆ : ಇತ್ತೀಚಿಗೆ ನಡೆದ ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಗೆದ್ದು ಸಾಧನೆ ಮಾಡಿದ ತಂಡದ ಆಟಗಾರ್ತಿ ಕಾವ್ಯಗೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ ಗ್ರಾ.ಪಂ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ಕೆ. ಮಂಜುನಾಥ್ ಹಾಗೂ ಇಓ ಅಪೂರ್ವ ಸಿ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ನಾಯಕನಪಾಳ್ಯ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಕಾವ್ಯ ಅವರ ಸಾಧನೆ ಇಡೀ ದೇಶವೇ ಮೆಚ್ಚುವಂತ ಸಾಧನೆ ಮಾಡಿದ್ದಾರೆ. ವಿಶೇಷ ಚೇತನರು ಆಗಿದ್ದರೂ ಸಹ ನಾವು ಕೂಡ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಇವರನ್ನ ಸ್ಪೂರ್ತಿಯಾಗಿ ಇಟ್ಟುಕೊಂಡು ಮಹಿಳೆಯರು ಹಾಗೂ ಇವತ್ತಿನ ಹೆಣ್ಣು ಮಕ್ಕಳು ವಿವಿಧ ರಂಗ ಕ್ಷೇತ್ರಗಳಲ್ಲಿ ಆರಿಸಿಕೊಂಡು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದಾಗಿದೆ ಎಂದು ತಿಳಿಸಿದರು. ನಮ್ಮ ಜಿಲ್ಲೆಯಲ್ಲಿ ಇಬ್ಬರು ವಿಶೇಷ ಚೇತನರು ಸಾಧನೆ ಮಾಡಿ ನಮ್ಮ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇಂತಹ ಪ್ರತಿಭೆಗಳನ್ನ ಗುರಿತಿಸುವುದು…
ತುಮಕೂರು: ನಗರೀಕರಣ, ಕೈಗಾರಿಕೀಕರಣದ ಹೆಸರಿನಲ್ಲಿ ಜಲಮೂಲ, ನದಿಪಾತ್ರ ಬರಿದು ಮಾಡಿದರೆ ಮನುಕುಲ ಸೇರಿದಂತೆ ಇಡೀ ಜೀವ ಸಂಕುಲವೇ ಅಪಾಯಕ್ಕೆ ಸಿಲುಕಲಿದೆ ಎಂದು ಜಲಸಂಪನ್ಮೂಲ ಇಲಾಖೆ ನಿವೃತ್ತ ಕಾರ್ಯದರ್ಶಿ ಕೆ.ಜೈಪ್ರಕಾಶ್ ಎಚ್ಚರಿಸಿದರು. ನಗರದ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಎಂಜಿನಿಯರುಗಳ ಸಂಸ್ಥೆ (ಐಇಐ) ಸಹಯೋಗದಲ್ಲಿ ಉತ್ತಮ ಜಗತ್ತು ರೂಪಿಸಲು ಸ್ಮಾರ್ಟ್ ಎಂಜಿನಿಯರಿಂಗ್ ಹಾಗೂ ರಾಜ್ಯದ ನೀರಿನ ಪರಿಸ್ಥಿತಿ ಕುರಿತು ಮಾತನಾಡಿದರು. ಜನಸಂಖ್ಯೆ ಬೆಳೆಯುತ್ತಲೇ ಸಾಗಿದ್ದು, ನೀರಿಗೆ ಬೇಡಿಕೆ ಹೆಚ್ಚುತ್ತಿದೆ. ಇರುವ ಜಲಮೂಲವನ್ನು ಮಾಲಿನ್ಯ ರಹಿತವಾಗಿ ಸಂರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಎಂಜಿನಿಯರುಗಳ ಪಾತ್ರ ಪ್ರಮುಖವಾಗಿದೆ. ನೀರಿನ ಸಂರಕ್ಷಣೆ ವಿಚಾರದಲ್ಲಿ ಎಚ್ಚರಿಕೆಯಿಂದ ಯೋಜನೆ ರೂಪಿಸಿ ಕಾರ್ಯ ರೂಪಕ್ಕೆ ತರಬೇಕು ಎಂದರು. ಎಸ್ ಐಟಿ ಸಿಇಒ ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಐಇಐ ಅಧ್ಯಕ್ಷ ಆರ್.ಸುರೇಶ್, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಪವನ್ ಕುಮಾರ್, ಆನಂದ್, ಮಾದವ್, ಗಣೇಶ್, ತಿರುಮಲೇಶ್ ಉಪಸ್ಥಿತರಿದ್ದರು. ಪವನ್ಕುಮಾರ್ ಯಮ್ಮಿ ಸ್ವಾಗತಿಸಿ, ರೂಪ ನಿರೂಪಿಸಿ ಎನ್.ಚಕ್ರವರ್ತಿ ವಂದಿಸಿದರು.…
ತುರುವೇಕೆರೆ: ಪಟ್ಟಣಕ್ಕೆ ಗುರುವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ವಿವಿಧ ಇಲಾಖೆಗಳ ಕಾರ್ಯವೈಖರಿ ಪರಿಶೀಲಿಸಿದರು. ನಂತರ ಜನರ ಸಮಸ್ಯೆ ಆಲಿಸಿದರು. ತಾಲ್ಲೂಕಿನ ಕಳ್ಳನಕೆರೆ ನಿವಾಸಿ ನಂಜಮ್ಮ ಅವರಿಗೆ ಶ್ರವಣದೋಷ ಇರುವುದು ಗಮನಿಸಿದ ಅವರು, ಕೂಡಲೇ ಶ್ರವಣ ದೋಷ ಮಿಷನ್ ಒದಗಿಸುವಂತೆ ತಹಶೀಲ್ದಾರ್ ಗೆ ಸೂಚಿಸಿದರು. ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ಹಾಗೂ ಮೂಲ ಸೌಕರ್ಯ ಪರಿಶೀಲಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ರೋಗಿಗಳಿಗೆ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ 24 ಗಂಟೆ ಅರೋಗ್ಯ ಕೇಂದ್ರ ಕಾರ್ಯನಿರ್ವಹಿಸಬೇಕು ಎಂದು ವೈದ್ಯಾಧಿಕಾರಿ ಡಾ.ಸ್ವರೂಪಗೆ ಸೂಚಿಸಿದರು. ತುಮಕೂರು ಉಪ ವಿಭಾಗಾಧಿಕಾರಿ ಸಪ್ತಶ್ರೀ, ಡಿಡಿಎಲ್ಆರ್ ಭಾವನ, ತಹಶೀಲ್ದಾರ್ ಎನ್.ಎ.ಕುಂಞ ಅಹಮದ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಪಾವಗಡ: ತಾಲ್ಲೂಕು ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫಲಿತಾಂಶ ಈ ಕೆಳಗಿನಂತಿದೆ: HPS ವಿಭಾಗ ಪ್ರಥಮ ಸ್ಥಾನ: 1) ನಯನ — ಪ್ರಬಂಧ ಸ್ಪರ್ಧೆ 2) ನೇಹಾ — ಅಭಿನಯ ಗೀತೆ ದ್ವಿತೀಯ ಸ್ಥಾನ 1) ಕೃಪಾ D N — ಕಂಠಪಾಠ ಕನ್ನಡ ಪ್ರೌಢ ಶಾಲಾ ವಿಭಾಗ ಪ್ರಥಮ ಸ್ಥಾನ: 1) ದೀಪ್ತಿ ರೆಡ್ಡಿ T N– ಕನ್ನಡ ಭಾಷಣ 2) ಸಂತೋಷ್ — ಕ್ವಿಝ್ 3) ಪ್ರಮೋದ್ – ಕ್ವಿಝ್ 4) ದಯಿತ — ಚರ್ಚಾಸ್ಪರ್ಧೆ 5) ಚಂದನ ಕುಮಾರಿ — ಹಿಂದಿ ಭಾಷಣ 6) ಚೈತ್ರ — ಆಂಗ್ಲ ಭಾಷಣ 7) ಚರಣ್ ಕುಮಾರ್ — ಕವನ / ಪದ್ಯ ವಾಚನ ದ್ವಿತೀಯ ಸ್ಥಾನ: 1) ನವ್ಯ ಶ್ರೀ — ಪ್ರಬಂಧ 2) ಶ್ರಾವಣಿ. S G — ಚಿತ್ರಕಲೆ ತೃತೀಯ…
ಬೆಂಗಳೂರು: ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಶುಕ್ರವಾರ ಬೆಳಗ್ಗೆ ಮೆಟ್ರೋ ಬರುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್ ಗೆ ಹಾರಿದ್ದು, ಪರಿಣಾಮ ಮೆಟ್ರೋ ಹರಿದು ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೆಟ್ರೋ ಸಿಬ್ಬಂದಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಟ್ರ್ಯಾಕ್ ಮೇಲಿದ್ದ ಶವವನ್ನು ತೆರವುಗೊಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕವೇ ವಿದ್ಯಾರ್ಥಿಗಳು ಭವಿಷ್ಯವನ್ನು ಸುಂದರಗೊಳಿಸಬಹುದು ಎಂದು ತುಮಕೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಧ್ಯಕ್ಷರಾದ ಡಾ.ಸುರೇಶ್ ಬಿ.ಕೆ. ಹೇಳಿದರು. ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಎಂ.ಕಾಂ. ವತಿಯಿಂದ ಗುರುವಾರ ಆಯೋಜಿಸಿದ್ದ 13ನೇ ಪದವಿ ಪ್ರಧಾನ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ 42 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿದ ನಂತರ ಮಾತನಾಡಿದರು. “ಪದವಿ ಪಡೆದುಕೊಂಡ ನಂತರ ಹೊರಜಗತ್ತಿಗೆ ಕಾಲಿಡುವ ಈ ಹಂತದಲ್ಲಿ ಯಾವ ಕಾಲೇಜಿನಲ್ಲಿ ಕಲಿತಿದ್ದೀರಿ ಎಂಬುದರ ಜೊತೆಗೆ ಯಾವ ಮೌಲ್ಯಗಳನ್ನು ಜೀವನದಲ್ಲಿ ಅನುಸರಿಸುತ್ತೀರಿ ಎಂಬುದು ಅತ್ಯಂತ ಮಹತ್ವದ್ದಾಗಿದೆ. ಸಮಾಜದಲ್ಲಿ ಮಾದರಿ ಜೀವನ ರೂಪಿಸಿಕೊಳ್ಳುತ್ತಾ ಕಾರ್ಯನಿರ್ವಹಿಸಬೇಕು” ಎಂದರು. ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಅಶೋಕ್ ಮೆಹ್ತಾ ಮಾತನಾಡಿ, “13ನೇ ಪದವಿ ಪ್ರಧಾನ ದಿನವನ್ನು ಆಚರಿಸುತ್ತಿರುವುದು ಶ್ಲಾಘನೀಯ. ಇಂದಿನ ಸಮಾಜಕ್ಕೆ ಹೊಂದಿಕೊಂಡು ಬದುಕುವುದನ್ನು ಕಲಿಯಬೇಕು. ಹಿಂದೆ ನಡೆದದ್ದಲ್ಲ, ಮುಂದೆ ನಡೆಯಲಿರುವುದನ್ನಲ್ಲ– ಪ್ರಸ್ತುತತೆಗೆ ಹೆಚ್ಚಿನ ಪ್ರಾಧಾನ್ಯ ನೀಡಬೇಕು” ಎಂದು ಸಲಹೆ ನೀಡಿದರು. ಈ ವೇಳೆ ಕಾಲೇಜಿನ…