Subscribe to Updates
Get the latest creative news from FooBar about art, design and business.
- ತುಮಕೂರು | ನವೆಂಬರ್ 21—22ರಂದು ವಿಜ್ಞಾನ ವಸ್ತು ಪ್ರದರ್ಶನ
- ಸಾಲಬಾಧೆ: ರೈತ ಸಾವಿಗೆ ಶರಣು
- ನವೆಂಬರ್ 22: ತಲ್ಲಣಿಸದಿರು ಮನವೆ ಕಾರ್ಯಕ್ರಮ
- ವೈ.ಎನ್.ಹೊಸಕೋಟೆಯಲ್ಲಿ ಸಾಂಪ್ರದಾಯಿಕ ಗೋವಿನ ಹಬ್ಬ
- ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
- ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
- ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
Author: admin
ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಹಾಸನ ಮತ್ತು ಮಂಡ್ಯ ಗಡಿ ಭಾಗ ಶ್ರವಣಹಳ್ಳಿ ಗ್ರಾಮದ ಜವರೇಗೌಡ ಬಿನ್ ಚಂದ್ರೇಕಾಳೆಗೌಡ, ಸೇರಿದ ಮೂರು ಎಕರೆಯ ರಾಗಿ ಹೂಲ್ಲಿನ ಒಕ್ಕಣೆಗೆ ಸೋಮವಾರ ಮಧ್ಯಾಹ್ನ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹುಲ್ಲಿನ ಗುಡ್ಡೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ ಎಂದು ವಾರಸುದಾರರು ತಿಳಿಸಿದ್ದು, ಘಟನೆಯಿಂದ ಸುಮಾರು 60,000ಕ್ಕೂ ಹೆಚ್ಚು ನಷ್ಟವಾಗಿದೆ. ತಾಲೂಕು ಆಡಳಿತ ಈ ಘಟನೆಯನ್ನು ಪರಿಗಣಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿವೇಗೌಡ, ವಿಜಿ, ಮೊಗಣ್ಣಗೌಡ, ವೆಂಕಟೇಶ್, ರತ್ನಮ್ಮ, ಮಂಜಮ್ಮ, ಸೇರಿದಂತೆ ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೊರಟಗೆರೆ: ಲಾರಿ ಹಾಗೂ ಗಾರ್ಮೆಂಟ್ಸ್ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ನಡುವೆ ಕೊರಟಗೆರೆ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಇಂದು ಸಂಜೆ ಈ ದುರ್ಘಟನೆ ನಡೆದಿದ್ದು, ಸಂಜೆ ಕೆಲಸ ಮುಗಿಸಿ ಕಾರ್ಮಿಕರು ತಮ್ಮ ಮನೆಗೆ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಬಸ್ ನಲ್ಲಿ ಸುಮಾರು 75ಕ್ಕೂ ಅಧಿಕ ಕಾರ್ಮಿಕರು ಇದ್ದರು. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಸ್ಥಳಕ್ಕೆ ಆಗಮಿಸಿದ್ದು, ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ತಮ್ಮ ವಾಹನದಲ್ಲೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಕಾಲೇಜು ಶುಲ್ಕ ಪಾವತಿಸಿಲ್ಲ ಎಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ತುಮಕೂರಿನ ಎಸ್.ಎಸ್.ಪುರಂನ ಆಕಾಶ್ ಕಾಲೇಜಿನಲ್ಲಿ ನಡೆದಿದ್ದು, ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಪರೀಕ್ಷೆಗೆ ಹಾಜರಾಗಲು ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಹೇಳಲಾಗಿದೆ. ಇಂದು ಕಾಲೇಜಿನಲ್ಲಿ ಕನ್ನಡ ಪರೀಕ್ಷೆ ನಡೆಯುತ್ತಿದ್ದು, ಕಾಲೇಜು ಶುಲ್ಕ ಪಾವತಿಸಿದ ವಿದ್ಯಾರ್ಥಿಗಳನ್ನು ಪರೀಕ್ಷೆಯಿಂದ ಹೊರಗಿಟ್ಟು ಪರೀಕ್ಷೆ ನಡೆಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ಇನ್ನೂ ವಿಚಾರ ತಿಳಿದು ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ. ಈ ಕಾಲೇಜು ಏಟ್ರಿಯ ಅನ್ನೋ ಹೆಸರಿನಿಂದ ಈವರೆಗೆ ಕಾರ್ಯಾಚರಿಸುತ್ತಿತ್ತು. ಆ ಬಳಿಕ ದಿಢೀರನೇ ಕಾಲೇಜಿನ ಹೆಸರು ಆಕಾಶ್ ಎಂದು ಬದಲಾವಣೆ ಮಾಡಲಾಗಿದೆ. ಜೊತೆಗೆ ಆಡಳಿತ ಮಂಡಳಿ ಕೂಡ ಬದಲಾವಣೆಯಾಗಿದೆ. ಕಾಲೇಜಿನ ಆಡಳಿತ ಮಂಡಳಿಗೆ ಹಣವ ವಿಚಾರದಲ್ಲಿ…
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಬೀದಿಗೆ ಬಂದಿದ್ದು, ಇದೇ ವೇಳೆ ಸರ್ಕಾರದ ವರ್ಚಸ್ಸಿಗೆ ಈ ಗಲಾಟೆಗಳು ಕಾರಣವಾಗುತ್ತಿರುವುದರಿಂದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ಅಧಿಕಾರಿಗಳನ್ನು ಜೊತೆಯಾಗಿ ಅಥವಾ ಪ್ರತ್ಯೇಕವಾಗಿ ಕರೆದು ಮಾತನಾಡಿ ಸ್ಪಷ್ಟೀಕರಣ ಪಡೆದು ಕಿವಿಮಾತು ಹೇಳಿ ಕಳುಹಿಸಲು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ ಎನ್ನಲಾಗಿದೆ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳಿಬ್ಬರೂ ಕಳೆದ 24 ಗಂಟೆಯಿಂದ ಪರಸ್ಪರ ದೋಷಾರೋಪಣೆಗೆ ಇಳಿದಿದ್ದು, ಕಾರ್ಯಾಂಗದ ಕ್ಷಮತೆ ಮೇಲೆ ಪರಿಣಾಮ ಬೀರಲಿದೆ. ಐಪಿಎಸ್, ಐಎಎಸ್ ಹುದ್ದೆಯ ಘನತೆ-ಗೌರವ ಜನಸಾಮಾನ್ಯರ ದೃಷ್ಟಿಯಲ್ಲಿ ಕುಸಿಯಲಿದೆ. ಸರ್ಕಾರದ ಬಗ್ಗೆ ಕೆಟ್ಟ ಅಭಿಪ್ರಾಯಕ್ಕೆ ಕಾರಣವಾಗಲಿದೆ ಎಂದು ಸಿಎಂ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಡೆಬಿಟ್ ಕಾರ್ಡ್ ಒಂದು ಆವಿಷ್ಕಾರವಾಗಿದ್ದು ಅದು ಹಣದ ವಹಿವಾಟುಗಳನ್ನು ಸುಲಭಗೊಳಿಸಿತು. ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ನಂತಹ ಮರುಪಾವತಿಯ ಜ್ಞಾಪನೆಗಳೊಂದಿಗೆ ಗ್ರಾಹಕರನ್ನು ತೊಂದರೆಗೊಳಿಸುವುದಿಲ್ಲ, ಆದರೆ ವಹಿವಾಟಿನ ನಿಖರವಾದ ದಾಖಲೆಯಾಗಿದೆ. ಹಣವನ್ನು ಹಿಂಪಡೆಯುವುದನ್ನು ಹೊರತುಪಡಿಸಿ ಡೆಬಿಟ್ ಕಾರ್ಡ್ ನಿಮಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ. ಜವಾಬ್ದಾರಿ ನಿಮ್ಮ ಡೆಬಿಟ್ ಕಾರ್ಡ್ಗಳಿಗೆ ನೀವು ಜವಾಬ್ದಾರರಾಗಿರುತ್ತೀರಿ. ನಿಮ್ಮ ಪಿನ್ ತಿಳಿಯದೆ ಯಾರೂ ನಿಮ್ಮ ಡೆಬಿಟ್ ಕಾರ್ಡ್ನಿಂದ ಹಣವನ್ನು ಬಳಸಲು ಅಥವಾ ಹಿಂಪಡೆಯಲು ಸಾಧ್ಯವಿಲ್ಲ. ಆದ್ದರಿಂದ, ನಿಮ್ಮ ಕಾರ್ಡ್ನೊಂದಿಗೆ ಮಾಡಿದ ವಹಿವಾಟುಗಳಿಗೆ ನೀವು ಜವಾಬ್ದಾರರಾಗಿರುತ್ತೀರಿ. ನಿಮ್ಮ ಡೆಬಿಟ್ ಕಾರ್ಡ್ ಬಳಸಿ ಯಾರಾದರೂ ಅನಧಿಕೃತವಾಗಿ ಹಿಂಪಡೆಯಲು ಪ್ರಯತ್ನಿಸಿದರೆ ನಿಮ್ಮ ಫೋನ್ನಲ್ಲಿ ನೀವು ಸಂದೇಶವನ್ನು ಸ್ವೀಕರಿಸುತ್ತೀರಿ. ಈ ಮೂಲಕ ಅಕ್ರಮ ಹಣದ ವಹಿವಾಟು ತಡೆಯಬಹುದು. ಮೊದಲೇ ಹೇಳಿದಂತೆ, ಡೆಬಿಟ್ ಕಾರ್ಡ್ಗಳು ಹಣಕಾಸಿನ ವಹಿವಾಟಿನ ನಿಖರವಾದ ದಾಖಲೆಯಾಗಿದೆ. ಎಷ್ಟು ರೂಪಾಯಿ ಹಿಂಪಡೆಯಲಾಗಿದೆ ಮತ್ತು ಉಳಿದ ಮೊತ್ತವನ್ನು ಸಂದೇಶದ ರೂಪದಲ್ಲಿ ನೀವು ನಿಖರವಾಗಿ ನೋಡಬಹುದು. ಆದ್ದರಿಂದ, ಅಂತಹ ಪ್ರತಿಯೊಂದು ಸಂದೇಶವು ತ್ಯಾಜ್ಯವನ್ನು ತಡೆಯಲು…
ದಕ್ಷಿಣಕನ್ನಡ: ಕಾಡಾನೆಯ ದಾಳಿಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದ ಘಟನೆ ಸೋಮವಾರ ಬೆಳ್ಳಂ ಬೆಳಗ್ಗೆ ನಡೆದಿದ್ದು, ಯುವತಿ ಸೇರಿದಂತೆ ಇಬ್ಬರು ಕಾಡಾನೆಗೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂಬ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮೃತ ಯುವತಿ ರಂಜಿತಾ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದಳು ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಣೆಗಾಗಿ ಸ್ಥಳಕ್ಕೆ ಬಂದ ರಮೇಶ್ ಅವರ ಮೇಲೆಯೂ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯ ದಾಳಿಗೆ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ರಂಜಿತಾ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಕಾಡಾನೆ ಓಡಾಡವಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ತೀವ್ರ ನಿರ್ಲಕ್ಷ್ಯದಿಂದಾಗಿ ಇದೀಗ ಎರಡು ಅಮಾಯಕ ಜೀವ ಬಲಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ರಿಲಯನ್ಸ್ ಇಂಡಸ್ಟ್ರೀಸ್ ಎಂಡಿ ಮುಖೇಶ್ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿ ಶಿವರಾತ್ರಿಯ ಸಂದರ್ಭದಲ್ಲಿ ಸೋಮನಾಥ ದೇವಾಲಯಕ್ಕೆ 1.51 ಕೋಟಿ ದೇಣಿಗೆ ನೀಡಿದ್ದಾರೆ. ಇಬ್ಬರೂ ಇಂದು ಬೆಳಗ್ಗೆ ಗುಜರಾತ್ನ ಪ್ರಭಾಸ್ ಪಟಾನ್ನಲ್ಲಿರುವ ಸೋಮನಾಥ ದೇವಾಲಯವನ್ನು ತಲುಪಿದರು. ದೇವಸ್ಥಾನಕ್ಕೆ ಆಗಮಿಸಿದ ಅಂಬಾನಿಯವರನ್ನು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಪಿ.ಕೆ.ಲಹರಿ ಮತ್ತು ಕಾರ್ಯದರ್ಶಿ ಯೋಗೇಂದ್ರ ದೇಸಾಯಿ ಬರಮಾಡಿಕೊಂಡರು. ದೇವಸ್ಥಾನಕ್ಕೆ ಆಗಮಿಸಿದ ಮುಖೇಶ್ ಅಂಬಾನಿ ಮತ್ತು ಅವರ ಪುತ್ರನನ್ನು ದೇವಾಲಯದ ಅರ್ಚಕರು ಸನ್ಮಾನಿಸಿ ಶ್ರೀಗಂಧ ಮತ್ತು ರೇಷ್ಮೆಯನ್ನು ಅರ್ಪಿಸಿದರು. ನಂತರ ದೇವಸ್ಥಾನದ ಅಧಿಕಾರಿಗಳಿಗೆ 1.51 ಕೋಟಿ ದೇಣಿಗೆ ಹಸ್ತಾಂತರಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸೋನಿಯಾ ಗಾಂಧಿ ಅವರನ್ನು ಉಳಿಸಿಕೊಳ್ಳಲು ಕಾರ್ಯಕಾರಿ ಸಮಿತಿಯ ಸಂಯೋಜನೆಯನ್ನು ಬದಲಾಯಿಸಲಾಗುವುದು. ಕಾರ್ಯಕಾರಿ ಸಮಿತಿಯ ರಚನೆಯು ಅಧ್ಯಕ್ಷ ಮತ್ತು 23 ಸದಸ್ಯರಿಂದ ಅಧ್ಯಕ್ಷ ಮತ್ತು 28 ಸದಸ್ಯರಿಗೆ ಬದಲಾಗಲಿದೆ. ಹೊಸ ಸಂಯೋಜನೆಯು ಕಾಂಗ್ರೆಸ್ ಅಧ್ಯಕ್ಷರು ಮತ್ತು ಮಾಜಿ ರಾಷ್ಟ್ರಪತಿ, ಸಂಸದೀಯ ಪಕ್ಷದ ಅಧ್ಯಕ್ಷರು, ಮಾಜಿ ಪ್ರಧಾನಿ, ಮಾಜಿ ಕಾಂಗ್ರೆಸ್ ಅಧ್ಯಕ್ಷರು, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸೇರಿದಂತೆ 23 ಸದಸ್ಯರನ್ನು ಒಳಗೊಂಡಿರುತ್ತದೆ. ಇದೇ ವೇಳೆ ಎ.ಐ.ಸಿ.ಯ ಕಾರ್ಯಕಾರಿ ಸಮಿತಿ ಚುನಾಯಿತ ಸದಸ್ಯರ ಸಂಖ್ಯೆ 12 ಉಳಿಯುತ್ತದೆ. 11 ಸದಸ್ಯರನ್ನು ಕಾಂಗ್ರೆಸ್ ಅಧ್ಯಕ್ಷರು ನಾಮನಿರ್ದೇಶನ ಮಾಡುತ್ತಾರೆ. ಕಾಂಗ್ರೆಸ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ಸಂಸದೀಯ ಪಕ್ಷದ ಅಧ್ಯಕ್ಷ, ಮಾಜಿ ಪ್ರಧಾನಿ, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಗಳನ್ನು ಹೊಂದಿರುವವರು ನೇರವಾಗಿ ಕಾರ್ಯಕಾರಿ ಸಮಿತಿಯನ್ನು ತಲುಪುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡಿನ ಕೊಡೈಕೆನಾಲ್ನಲ್ಲಿ ಇದು ಪಕ್ಷಿಗಳಿಗೆ ಹಬ್ಬದ ಸಮಯ. ಜನಪ್ರಿಯ ಪ್ರವಾಸಿ ತಾಣವಾಗಿರುವ ಬೆಟ್ಟಗಳಿಗೆ ಈಗ ಪಕ್ಷಿಗಳು ಬಣ್ಣ ತುಂಬುತ್ತಿವೆ. ಕೋವಿಡ್ ಅವಧಿಯ ನಂತರ ಪಕ್ಷಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಪಕ್ಷಿ ವೀಕ್ಷಕರು ಹೇಳುತ್ತಾರೆ. ಬಾಂಬೆ ಓಯಸಿಸ್, ಸಂಗತನ್ ಓಯಸಿಸ್, ಟೈಗರ್ ಓಯಸಿಸ್, ಲಾಫಿಂಗ್ ಥ್ರಷ್, ಅಳಿವಿನಂಚಿನಲ್ಲಿರುವ ಗುಬ್ಬಚ್ಚಿಗಳು, ಹೀಗೆ ಕೊಡೈಕೆನಾಲ್ನಲ್ಲಿ ಹಬ್ಬ ಮಾಡುವ ಪಕ್ಷಿಗಳ ಹಿಂಡುಗಳ ಹೆಸರುಗಳು. ಕೊಡೈಕೆನಾಲ್ ನಲ್ಲಿ ಯಥೇಚ್ಛವಾಗಿ ಕಾಣಸಿಗುತ್ತಿದ್ದ ಮಾರುಕಟ್ಟೆ ಗುಬ್ಬಚ್ಚಿಗಳು ಒಂದು ಹಂತದಲ್ಲಿ ಮಾಯವಾಗಿದ್ದವು. ಆದರೆ ಈಗ ಅವುಗಳ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸ್ಥಗಿತಗೊಂಡ ನಂತರ ಈ ಬದಲಾವಣೆಯು ಬರುತ್ತದೆ. ಕಡಿಮೆ ವಾಯು ಮಾಲಿನ್ಯವೇ ಇದಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ಪಕ್ಷಿ ವೀಕ್ಷಕರು ಹಾಗೂ ಪರಿಸರ ತಜ್ಞರು. ಕೊಡೈಕೆನಾಲ್ ನ ಸೊಬಗನ್ನು ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಕಣ್ಣು ಮತ್ತು ಮನಸ್ಸಿಗೆ ಈ ವರ್ಣರಂಜಿತ ಪಕ್ಷಿಗಳು ಉಲ್ಲಾಸಕರ ದೃಶ್ಯವಾಗುತ್ತವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ರಾಜಮನೆತನದ ಇತಿಹಾಸದ ಕುರುಹಾಗಿ ಪಾಲಕ್ಕಾಡ್ನ ವಿಕ್ಟೋರಿಯಾ ಕಾಲೇಜು ರಸ್ತೆಯಲ್ಲಿ ತಲೆ ಎತ್ತಿರುವ ದೇವಿ ವಿಲಾಸಂ ಅರಮನೆ ಈಗ ನೆನಪಾಗಿದೆ. ಅರಣ್ಯದಂಚಿನಲ್ಲಿ ಕುಸಿದು ಬೀಳುವ ಹಂತದಲ್ಲಿದ್ದ ಅರಮನೆ ಸಂಪೂರ್ಣ ನೆಲಸಮವಾಗಿದೆ. ಒಮ್ಮೆ ಜಿಲ್ಲೆಗೆ ಬಂದಿದ್ದ ಎಲ್ಲ ಗಣ್ಯರು ತಂಗಿದ್ದ ಐತಿಹಾಸಿಕ ಸ್ಥಳ ನೆನಪಾಗಿ ಮರೆಯಾಗಿದೆ.ದೇವಿ ವಿಲಾಸಂ ಅರಮನೆಯು ಕೊಲ್ಲಂಗೋಡು ರಾಜವಂಶದ ಒಂದು ಭಾಗವಾಗಿದೆ. ದೇವಿ ವಿಲಾಸಂ ಅರಮನೆಯ ಹೆಗ್ಗಳಿಕೆಯನ್ನು ಪ್ರಾಚೀನರು ಕಾಲೇಜ್ ರಸ್ತೆ ಪ್ರದೇಶವನ್ನು ಐಷಾರಾಮಿ ಕಟ್ಟಡಗಳ ನಗರ ಎಂದು ಕರೆಯುತ್ತಿದ್ದರು. ಒಲವಕೋಟ್ ಸಾಯಿ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಬಂದಾಗ ಸಾಯಿಬಾಬಾ ಎರಡು ದಿನಗಳ ಕಾಲ ಅರಮನೆಯಲ್ಲಿ ತಂಗಿದ್ದರು ಎಂದು ಇತಿಹಾಸಕಾರರು ಹೇಳುತ್ತಾರೆ. ಶತಮಾನದಿಂದ ಕಾಲೇಜ್ ರಸ್ತೆಯಲ್ಲಿ ತಲೆ ಎತ್ತಿರುವ ಅರಮನೆಗೆ ಇನ್ನೂ ಹಲವು ವೈಶಿಷ್ಟ್ಯಗಳಿವೆ, ನಿವಾಸಿಗಳು ಹೋದಾಗ ಅರಮನೆ ಪಾಳುಬಿದ್ದಿದೆ.ನಿರ್ವಹಣೆ ಕೊರತೆಯಿಂದ ಕಟ್ಟಡ ಯಾವ ಕ್ಷಣದಲ್ಲಾದರೂ ಬೀಳುವ ಸ್ಥಿತಿಯಲ್ಲಿತ್ತು.ಹೀಗಿರುವಾಗ ಅದನ್ನು ಕೆಡವಲು ನಿರ್ಧರಿಸಲಾಯಿತು..ಹೀಗೆ ಒಂದು ಯುಗದ ಪ್ರೌಡಿಯ ಗುರುತು ಈಗ ನೆನಪುಗಳಲ್ಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…