Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಜಗಳ ನಡೆದಿದೆ. ಈ ವೇಳೆ ಪ್ರಭಾಕರ ತನ್ನ ಮಕ್ಕಳ ಜೊತೆ ಸೇರಿಕೊಂಡು ತನ್ನ 64 ವರ್ಷದ ಅಕ್ಕಮ್ಮ ಎಂಬ ಅಕ್ಕನನ್ನ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಪ್ರಭಾಕರ, ಆತನ ಪುತ್ರ ದಿಲೀಪ ಹಾಗೂ ಪುತ್ರಿ ತ್ರಿವೇಣಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಕುಟುಂಬಗಳ ನಡುವೆ ಕಳೆದ 15 ವರ್ಷಗಳಿಂದ ಜಮೀನಿನ ವಿಚಾರಕ್ಕಾಗಿ ಗಲಾಟೆ ನಡೆಯುತ್ತಿದ್ದು ಅಕ್ಕಮ್ಮ ಹಾಗೂ ಸಹೋದರ ಪ್ರಭಾಕರ ಅವರ ಜಮೀನು ವಿವಾದ ಸದ್ಯ ಈಗ ಕೋರ್ಟ್ನಲ್ಲಿದೆ. ಅಕ್ಕಮ್ಮ ಕೋರ್ಟ್ನ ಅನುಮತಿ ಪಡೆದು ಜಮೀನು ಅಳತೆ ಮಾಡಲು ಸರ್ವೇಯರ್ ಜೊತೆ ಜಮೀನಿಗೆ ಬಂದಿದ್ದರು. ಸರ್ವೇಯರ್ ಜಮೀನು ಅಳತೆ ಮಾಡಲು ಬಂದಾಗ ನಮ್ಮ ಜಮೀನು ಅಳತೆ ಮಾಡಲು ನೀವು ಯಾರು ಅಂತಾ ದಿಲೀಪ್ ಅಕ್ಕಮ್ಮನ ಮೇಲೆ ಕೊಡಗೋಲಿನಿಂದ ದಾಳಿಗೆ ಯತ್ನಿಸಿದ್ದಾನೆ. ಸ್ಥಳದಲ್ಲಿಯೇ ಇದ್ದ ಪ್ರಭಾಕರ ದೊಣ್ಣೆಯಿಂದ ಅಕ್ಕಮ್ಮನ ತಲೆಗೆ ಹೊಡೆದಿದ್ದಾನೆ. ಈ ವೇಳೆ…
ತಮಿಳುನಾಡಿನ ತಂಜಾವೂರಿನಲ್ಲಿ ಬಾರ್ನಿಂದ ಮದ್ಯ ಖರೀದಿಸಿದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕೀರ್ ಅಲಂಗಂ ಪಡವೆಟ್ಟಿಯಮ್ಮನ್ ಕೋವಿಲ್ ಸ್ಟ್ರೀಟ್ನ ಕುಪ್ಪುಸ್ವಾಮಿ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಮದ್ಯದಂಗಡಿಯನ್ನು ಪೊಲೀಸರು ಸೀಲ್ ಮಾಡಿದ್ದಾರೆ. ಸರ್ಕಾರಿ ಮದ್ಯದಂಗಡಿ ಮತ್ತು ಬಾರ್ನ ನೌಕರರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇವರಿಬ್ಬರೂ ನೆನ್ನೆ ಬೆಳಗ್ಗೆ 10:30ಕ್ಕೆ ಸರ್ಕಾರ ನಿಗದಿಪಡಿಸಿದ ಕಾಲಮಿತಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ ಬಾರ್ನಿಂದ ಮದ್ಯ ಖರೀದಿಸಿದ್ದಾರೆ. ಬಾರ್ ನಲ್ಲಿ ಮದ್ಯ ಸೇವಿಸಿದ ಕುಪಸ್ವಾಮಿ ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮಾರ್ಕೆಟ್ ಏರಿಯಾದಲ್ಲಿ ವಿವೇಕ್ ಪಾನಮತ್ತನಾಗಿದ್ದ. ತರುವಾಯ, ದೈಹಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿವೇಕ್ ಅವರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಮಧ್ಯಾಹ್ನ ನಿಧನರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಂಬೈನ ಧಾರಾವಿಯ ಕೊಳೆಗೇರಿಯಿಂದ, 14 ವರ್ಷದ ಮಲಿಶಾ ಖರ್ವಾ ಐಷಾರಾಮಿ ಸೌಂದರ್ಯ ಬ್ರ್ಯಾಂಡ್ ಫಾರೆಸ್ಟ್ ಎಸೆನ್ಷಿಯಲ್ಸ್ನ ಮುಖವಾಗಿದ್ದಾಳೆ. ಮಲೀಶಾ ಖರ್ವಾ ಅವರು ಐಷಾರಾಮಿ ಸೌಂದರ್ಯ ಬ್ರ್ಯಾಂಡ್ ಫಾರೆಸ್ಟ್ ಎಸೆನ್ಷಿಯಲ್ಸ್ನ ಹೊಸ ಅಭಿಯಾನದ ‘ದಿ ಸಮಾವಾದಿ ಕಲೆಕ್ಷನ್’ ನ ಮುಖವಾಗಿದ್ದಾರೆ. ಹಾಫ್ಮನ್ ತಕ್ಷಣವೇ Instagram ಖಾತೆಯನ್ನು ತೆರೆದರು ಮತ್ತು ಹುಡುಗಿಗಾಗಿ GoFundMe ಪುಟವನ್ನು ಸ್ಥಾಪಿಸಿದರು. ಎನ್ಡಿಟಿವಿ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ಸುದ್ದಿ ನೀಡಿವೆ. ಇಂದು ಖಾರ್ವಾ ಅವರ Instagram ಖಾತೆಯು 2.5 ಲಕ್ಷ ಅನುಯಾಯಿಗಳನ್ನು ಹೊಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಮನಿಷಾ ಅವರ ಅನೇಕ ಪೋಸ್ಟ್ಗಳಲ್ಲಿ, ಅವರು ಸ್ಲಂ ಪ್ರಿನ್ಸೆಸ್ ಎಂಬ ಹ್ಯಾಶ್ಟ್ಯಾಗ್ ಅನ್ನು ಬಳಸುತ್ತಾರೆ. ಇತ್ತೀಚೆಗೆ, ಅವರು ಮಾಡೆಲಿಂಗ್ ಪ್ರಾರಂಭಿಸಿದರು ಮತ್ತು “ಲೀವ್ ಯುವರ್ ಫೇರಿಟೇಲ್” ಎಂಬ ಕಿರುಚಿತ್ರದಲ್ಲಿ ನಟಿಸಿದ್ದಾರೆ. ಯುವ ಮನಸ್ಸುಗಳನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಫಾರೆಸ್ಟ್ ಎಸೆನ್ಷಿಯಲ್ಸ್ನ ಹೊಸ ಅಭಿಯಾನದ ಮುಖವಾಗಿ ಮಲಿಶಾ ಅವರನ್ನು ಆಯ್ಕೆ ಮಾಡಲಾಗಿದೆ.ಈ ಮಧ್ಯೆ, ಫಾರೆಸ್ಟ್ ಎಸೆನ್ಷಿಯಲ್ಸ್ ಸಂಸ್ಥಾಪಕರಾದ ವೋಗ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ…
ಶಾಂತಿಯುತ ವಾತಾವರಣದ ದಿನಗಳ ನಂತರ, ಮಣಿಪುರ ಮತ್ತೆ ಘರ್ಷಣೆಯಾಗಿದೆ. ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಜನರ ಗುಂಪೊಂದು ಕೆಲವು ಮನೆಗಳಿಗೆ ಬೆಂಕಿ ಹಚ್ಚಿದ್ದು ಮತ್ತೆ ತೊಂದರೆ ಶುರುವಾಗಿದೆ. ಸೇನೆ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸುತ್ತಿವೆ. ಹೊಸ ಘರ್ಷಣೆಗಳ ನಂತರ ಇಂಫಾಲ್ನಲ್ಲಿ ಕರ್ಫ್ಯೂ ವಿಸ್ತರಿಸಲಾಗಿದೆ. ಹೊಸ ಕರ್ಫ್ಯೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ. ಇಂಟರ್ನೆಟ್ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದೆ. ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ಇಂಫಾಲ್ ಪೂರ್ವದ ನ್ಯೂ ಚೆಕಾನ್ ಬಜಾರ್ನಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಸಂಭವಿಸಿದೆ. ಘರ್ಷಣೆ ಮಾರುಕಟ್ಟೆಯ ಸ್ಥಳಕ್ಕೆ ಸಂಬಂಧಿಸಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೆಲವರು ಎರಡು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ನಂತರ ಸಂಘರ್ಷ ಭುಗಿಲೆದ್ದಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅನೇಕ ಜನರು ತಮ್ಮ ಸಂಗಾತಿಯ ಹೆಸರನ್ನು ತಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಸಂಗಾತಿಯ ಮೇಲಿನ ಅತಿಯಾದ ಪ್ರೀತಿ ಅನೇಕರನ್ನು ಈ ಸಾಹಸಕ್ಕೆ ಕೊಂಡೊಯ್ಯುತ್ತದೆ. ಪ್ರೇಮವನ್ನು ವ್ಯಕ್ತಪಡಿಸುವುದು ಹೀಗೆಯೇ ಎಂಬ ವಾದ ವಿವಾದಗಳು ನಡೆಯುತ್ತಿರುವಾಗಲೇ ಬೆಂಗಳೂರಿನ ಮಹಿಳೆಯೊಬ್ಬರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಮಹಿಳೆ ತನ್ನ ಹಣೆಯ ಮೇಲೆ ತನ್ನ ಗಂಡನ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾಳೆ. ಬೆಂಗಳೂರಿನ ಮಹಿಳೆಯೊಬ್ಬರು ಹಣೆಯ ಮೇಲೆ ಪತಿಯ ಹೆಸರನ್ನು ‘ಸತೀಶ್’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾರೆ. ಬೆಂಗಳೂರಿನ ಕಿಂಗ್ ಮೇಕರ್ ಟ್ಯಾಟೂ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದೆ. ಟ್ಯಾಟೂ ಸ್ಟುಡಿಯೋ ಸ್ವತಃ ತನ್ನ ಇನ್ಸ್ಟಾಗ್ರಾಮ್ ಪುಟದ ಮೂಲಕ ವೀಡಿಯೊವನ್ನು ಹಂಚಿಕೊಂಡಿದೆ. ವಿಡಿಯೋ ಹೊರಬಿದ್ದ ನಂತರ ಟೀಕೆಗಳ ಸುರಿಮಳೆಯಾಯಿತು. ಪ್ರೀತಿಯನ್ನು ಹೀಗೆಯೇ ಸಾಬೀತುಪಡಿಸಬಾರದು ಮತ್ತು ಇದು ಬುದ್ಧಿವಂತಿಕೆಯ ಗೌರವ ಎಂದು ಕಮೆಂಟ್ಗಳು ತುಂಬಿವೆ. ಹೇಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು ಜಿಲ್ಲೆಯಲ್ಲಿರುವ ಖಾಸಗಿ ಕಂಪನಿಗಳು ಹಾಗೂ ಹೆಚ್ ಎ ಎಲ್ ಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಅವರ ಲೈಸೆನ್ಸ್ ಅನ್ನು ರದ್ದು ಮಾಡುತ್ತೇವೆ ಎಂದು ನೂತನ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿಲ್ಲ ಎಂಬ ಸಾಕಷ್ಟು ದೂರುಗಳು ಬಂದಿದ್ದು ಈ ಕುರಿತಂತೆ ಚಿಂತನೆ ನಡೆಸಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಅಲ್ಲದೆ ಸ್ಥಳೀಯ ಯುವಕರು ಉದ್ಯೋಗ ದೊರೆಯುತ್ತಿಲ್ಲ ಎಂಬ ಆತಂಕ ಪಡಬಾರದು ಎಂಬ ಭರವಸೆಯನ್ನು ಕೂಡ ನೀಡಿದರು. ನಾನು ಯುವಕನಾಗಿದ್ದಾಗ ತುಮಕೂರು ನಗರದ ಜೂನಿಯರ್ ಕಾಲೇಜು ಗ್ರೌಂಡ್ ನಲ್ಲಿ ಅಥ್ಲೆಟಿಕ್ಸ್ ನಲ್ಲಿ ಪಾಲ್ಗೊಳ್ಳಲು ಅಭ್ಯಾಸ ಮಾಡುತ್ತಿದ್ದೆ ಅಲ್ಲಿಂದ ನಾನು ಬೆಂಗಳೂರಿಗೆ ಹೋದೆ ನಂತರ ಬೆಂಗಳೂರಿನಿಂದ ಆಸ್ಟ್ರೇಲಿಯಕ್ಕೆ ಹೋದೆ ಆನಂತರ ವಾಪಸ್ ನಾನು ನನ್ನ ಊರು ತುಮಕೂರಿಗೆ ಬಂದು ಸೇರಿದ್ದೇನೆ. ಎಲ್ಲೆಲ್ಲೂ ಹೋಗಿ…
ಬೆಂಗಳೂರು, ಹಲವು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಟ ಶರತ್ ಬಾಬು ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಇವರು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ ಗಚ್ಚಿ ಬೌಲಿ ಎಐಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಇವರು ಕನ್ನಡ ಧಾರವಾಹಿಯಾದ ಅಮೃತವರ್ಷಿಣಿ, ಶಕ್ತಿ, ಸೀತಾಕೋಕ ಚಿಲಕ, ಓ ಬಾರ್ಯ ಕಥಾ, ನಿರಾಜನಂ ತಮಿಳು, ತೆಲುಗು, ಮಲಯಾಳಂ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಇವರ ನಿಧನಕ್ಕೆ ಚಿತ್ರರಂಗದ ಹಲವು ಕಲಾವಿದರು ಹಾಗೂ ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರಗಾಮಿಯನ್ನು ಎನ್ಐಎ ಬಂಧಿಸಿದೆ. ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿ ಮುಹಮ್ಮದ್ ಉಬೈದ್ ಮಲಿಕ್ ಪಾಕಿಸ್ತಾನದಲ್ಲಿರುವ ಜೈಶ್ ಕಮಾಂಡರ್ ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಲಾಗಿದೆ. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಕಮಾಂಡರ್ಗಳಿಗೆ ಪಡೆಗಳು ಮತ್ತು ಭದ್ರತಾ ಪಡೆಗಳ ಚಲನವಲನದ ಬಗ್ಗೆ ರಹಸ್ಯ ಮಾಹಿತಿಯನ್ನು ಆರೋಪಿಗಳು ರವಾನಿಸುತ್ತಿದ್ದಾರೆ ಎಂದು ಎನ್ಐಎ ಹೇಳಿದೆ. ಭಯೋತ್ಪಾದಕರ ಸಂಚು ಪ್ರಕರಣದಲ್ಲಿ ಬಂಧನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಆರೋಪಿಗಳ ಪಾತ್ರವನ್ನು ಸಾಬೀತುಪಡಿಸುವ ದಾಖಲೆಗಳನ್ನು ಎನ್ಐಎ ಪತ್ತೆ ಮಾಡಿದೆ. ಅಲ್ಲದೆ, ದೂರಿನಿಂದ ದೂರ ನಿಯಂತ್ರಿತ ಜಿಗುಟಾದ ಬಾಂಬ್ಗಳು ಮತ್ತು ಮ್ಯಾಗ್ನೆಟಿಕ್ ಬಾಂಬ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಆರೋಪಿಗಳ ಬಳಿ ನಗದು, ಡ್ರಗ್ಸ್, ಶಸ್ತ್ರಾಸ್ತ್ರಗಳು ಮತ್ತು ಐಇಡಿಗಳು ಕೂಡ ಇದ್ದವು. ರಾಷ್ಟ್ರೀಯ ತನಿಖಾ ಸಂಸ್ಥೆಯ ಸಂಶೋಧನೆಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಅಗತ್ಯವಾದ ವಸ್ತುಗಳನ್ನು ಡ್ರೋನ್ಗಳ ಮೂಲಕ ಅವರಿಗೆ ತಲುಪಿಸಲಾಗುತ್ತಿದೆ ಮತ್ತು ಅವುಗಳನ್ನು ಬಳಸಿ ಸ್ಫೋಟಕಗಳನ್ನು ತಯಾರಿಸಲಾಗುತ್ತಿದೆ. ದಾಳಿಗಳು…
ಯಾದಗಿರಿ: ರಾಜ್ಯದಲ್ಲೇ ಯಾದಗಿರಿಯಲ್ಲಿ ಅತ್ಯಧಿಕ ಬಿಸಿಲು ದಾಖಲೆಯಾಗಿದೆ. ಕಳೆದೊಂದು ವಾರದಿಂದ 45.6 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ದಾಖಲಾಗಿದೆ. ಬಿಸಿಲಿನ ಪ್ರಖರತೆಗೆ ನವಜಾತ ಶಿಶುಗಳು ಅಸ್ವಸ್ಥರಾಗಿದ್ದಾರೆ. ನಿರ್ಜಲೀಕರಣಕ್ಕೆ ಒಳಗಾಗಿ ನವಜಾತ ಶಿಶುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ನಿತ್ಯವೂ ಯಾದಗಿರಿಯ ತಾಯಿ-ಮಕ್ಕಳ ಆಸ್ಪತ್ರೆಗೆ ಹತ್ತಾರು ಮಕ್ಕಳನ್ನು ದಾಖಲಿಸಲಾಗಿತ್ತಿದೆ. ಕಳೆದ 5-6 ದಿನದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬಿಸಿಲಿಗೆ ಮಕ್ಕಳ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತಿದೆ. ಮಾತ್ರವಲ್ಲ ನೀರಿನ ಅಂಶ ಕಡಿಮೆಯಾಗಿ ಮಕ್ಕಳಿಗೆ ಕಿಡ್ನಿ ವೈಫಲ್ಯವೂ ಆಗುತ್ತಿದೆ. 1 ವರ್ಷದಿಂದ 7 ವರ್ಷದೊಳಗಿನ ಮಕ್ಕಳ ಮೇಲೆ ನೇರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಯಲ್ಲಿ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 26 ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಅದರಲ್ಲಿ 15 ಶಿಶುಗಳು ಗುಣಮುಖರಾಗಿದ್ದಾರೆ. ಇನ್ನು ಕೆಲವು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಂದಿರು ಮಕ್ಕಳನ್ನು ವಿಶೇಷವಾಗಿ ಆರೈಸಿದರೇ ಬೇಗ ಗುಣಮುಖರಾಗುತ್ತಾರೆ ಎಂದು ವೈದ್ಯೆ ಸಾವಿತ್ರಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಯಾವುದೇ ದಾಖಲೆ ಇಲ್ಲದೆ 1.70 ಕೋಟಿ ರೂ. ಹಣವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದೆ. ಹುಬ್ಬಳ್ಳಿ ಮೂಲದ ವ್ಯಾಪಾರಿ ವಿಕ್ರಮ್ ಸಿಂಗ್ ಎಂಬುವವರಿಗೆ ಸೇರಿದ 1ಕೋಟಿ 70 ಲಕ್ಷ ರೂ ಹಣ ವಶಕ್ಕೆ ಪಡೆದಿರುವ ನರಗುಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ(ಮೇ 21) ಮಧ್ಯರಾತ್ರಿ ಕಾರಿನಲ್ಲಿ ಹಣ ಸಾಗಾಟದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರು ತಪಾಸಣೆ ಮಾಡಿದಾಗ ಈ ಹಣ ಪತ್ತೆಯಾಗಿದೆ. ಕಾರು ಚಾಲಕ ಶಿವಬಸಯ್ಯ ಹಾಗೂ ವ್ಯಾಪಾರಿ ವಿಕ್ರಮ್ ಸಿಂಗ್ ಅವರನ್ನು ಇನ್ಸ್ಪೆಕ್ಟರ್ ಮಲ್ಲಯ್ಯ ಮಠಪತಿ ಅವರು ಹಣದ ಮೂಲ ಹಾಗೂ ದಾಖಲೆಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…