Author: admin

ಚೇಳೂರು: ಗ್ರಾಮದ ಮಹಾಲಕ್ಷ್ಮಿ ಬ್ಯಾಂಕರ್ ಮತ್ತು ಜ್ಯುವೆಲ್ಲರ್ಸ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಡಿಸೆಂಬರ್ 4ರಂದು ಬೆಳಗ್ಗೆ 9:30ರ ಸುಮಾರಿಗೆ ನಡೆದಿದೆ. ಮಾಲಿಕ ಸುನೀಲ್ ಅಂಗಡಿಯ ಬಾಗಿಲು ತೆರೆದು ಪೂಜೆ ಮಾಡಿ, ವ್ಯಾಪಾರ ಆರಂಭಕ್ಕೆ ಸಿದ್ಧತೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ನಾಲ್ವರು ಅಂಗಡಿಗೆ ನುಗ್ಗಿ ಚಾಕು ತೋರಿಸಿದ್ದು, ನಂತರ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಲು ಯತ್ನಿಸಿದ್ದಾರೆ. ಕಳ್ಳರ ಪೈಕಿ ಒಬ್ಬಾತ ಅಂಗಡಿಯಿಂದ ಹೊರಗೆ ನಿಂತು ಯಾರಾದರೂ ಬರುತ್ತಾರೆಯೇ ಎಂದು ನೋಡುತ್ತಿದ್ದ. ಕಳ್ಳರ ನಡೆ ಕಂಡು ಭಯಭೀತರಾದ ಮಾಲಿಕ ಸುನೀಲ್ ಜೋರಾಗಿ ಕಿರುಚಿಕೊಂಡಿದ್ದು ಈ ವೇಳೆ ಅಂಗಡಿ ಸುತ್ತಮುತ್ತಲಿದ್ದ ಜನರು ಓಡಿ ಬಂದಿದ್ದಾರೆ. ಈ ವೇಳೆ ಕಳ್ಳರು ತಾವು ಬಂದಿದ್ದ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಕಳ್ಳರು ಹಾಡಹಗಲೇ ಈ ಕೃತ್ಯ ನಡೆಸಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ನಗರ ಪ್ರದೇಶದಲ್ಲೇ ಅದೂ, ಹಗಲು ಹೊತ್ತಿನಲ್ಲೇ ಈ ರೀತಿಯಾಗಿ ಕಳ್ಳರು ಕಳ್ಳತನಕ್ಕಿಳಿದರೆ, ಇನ್ನೂ ಹಳ್ಳಿಗಳ ಪರಿಸ್ಥಿತಿ ಏನು…

Read More

ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ ಎಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರು, KJK ಸಂಯೋಜಕರು ಹಾಗೂ ಪ್ಲೇಸ್ಮೆಂಟ್ ಸೆಲ್ ಸಂಯೋಜಕರು ಈ ಮಾಹಿತಿಯನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ತಿಳಿಸಲು ವಿನಂತಿಸಲಾಗಿದೆ. 2022–2023 ಮತ್ತು 2023–-2024 ರಲ್ಲಿ ಕಲಿಕೆಯ ಜೊತೆ ಕೌಶಲ್ಯ (KJK) ಕೋರ್ಸ್ ಮುಗಿದಿರುವ ವಿದ್ಯಾರ್ಥಿಗಳಿಗೆ ನೋಂದಣಿ ಲಿಂಕ್ ಕಳುಹಿಸಬೇಕು. ಗಮನಕ್ಕೆ: ಅರ್ಹ ವಿದ್ಯಾರ್ಥಿಗಳಿಗೆ ತಕ್ಷಣ ಮಾಹಿತಿ ನೀಡಬೇಕು. • ವಿದ್ಯಾರ್ಥಿಗಳು ಲಿಂಕ್ ಮೂಲಕ ಬೇಗನೇ ನೋಂದಣಿ ಮಾಡಿಕೊಳ್ಳುವಂತೆ ಪ್ರೋತ್ಸಾಹಿಸಬೇಕು. • ಈ ಮಾಹಿತಿಯನ್ನು ಕಾಲೇಜಿನ ಸೂಚನಾ ಫಲಕ, ಕಾಲೇಜಿನ ವಾಟ್ಸಪ್ ಗುಂಪು, KJK ವಿದ್ಯಾರ್ಥಿ ಗುಂಪು ಮತ್ತು ಟೆಲಿಗ್ರಾಂ ಗುಂಪುಗಳಲ್ಲಿ ಪ್ರಕಟಿಸಬೇಕು. • ಉದ್ಯೋಗ ಮೇಳಕ್ಕೆ ಬೇಕಾದ ದಾಖಲೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. • KJK ವಿದ್ಯಾರ್ಥಿಗಳ ಹಾಜರಾತಿ ಮತ್ತು ಭಾಗವಹಿಸುವಿಕೆ ಇಲಾಖೆ ಮಾರ್ಗಸೂಚಿಗಳ ಪ್ರಕಾರ ಗಮನಿಸಲಾಗುತ್ತದೆ. • ಯಾವುದೇ ಮಾಹಿತಿ /…

Read More

ಬೀದರ್:  ಔರಾದ್ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬೇರಾಳ ಬಿಳಿ ಭಾಲ್ಕಿ ಸಾರಿಗೆ ಘಟಕದ ಬಸ್ ಹಾಳಾಗಿದ್ದು,  ಇದರಿಂದಾಗಿ ವಿದ್ಯಾರ್ಥಿಗಳು ಬಸ್ ಇಲ್ಲದೇ ಪರದಾಡಿದ ಘಟನೆ ಬುಧವಾರ ನಡೆದಿದೆ., ಭಾಲ್ಕಿ ಘಟಕದಿಂದ ಔರಾದ್ ತಾಲೂಕು ಘಟಕದ ಸಾರಿಗೆ ಬಸ್ಸು ನಿನ್ನೆ ಹಾಳಾಗಿದ್ದು, ಇಂದು ಮುಂಜಾನೆ ಕೂಡ ಬಂದಿಲ್ಲ, ಹಾಗಾಗಿ ವಿದ್ಯಾರ್ಥಿಗಳು ಪರದಾಡಿದ್ದಾರೆ. ಶಾಲಾ ಕಾಲೇಜಿಗೆ  ಸರಿಯಾದ ಸಮಯಕ್ಕೆ  ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ತೊಂದರೆಗೀಡಾದರು. ನಿನ್ನೆ ಹಾಳಾದ ಬಸ್ಸು ಇಂದು ಬೆಳಿಗ್ಗೆ ಕೂಡ ಬಸ್ ಬಂದಿಲ್ಲ. ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳು ತುಂಬಾ ತೊಂದರೆ ಅನುಭವಿಸಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಯ್ತು. ಭಾಲ್ಕಿ ಘಟಕದಿಂದ ಔರಾದ್ ಘಟಕ ತಲುಪಲು ಸುಮಾರು ಒಂದು ತಾಸು ಬೇಕು. ಆದರೆ ಬಸ್ ಗಳ ಕೊರತೆಯಿಂದ ವಿದ್ಯಾರ್ಥಿಗಳು ಗಂಟೆಗಟ್ಟಲೆ ತಡವಾಗಿ ಶಾಲಾ—ಕಾಲೇಜುಗಳಿಗೆ ತಲುಪುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ತಕ್ಷಣವೇ ಬಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ಸಂಬಂಧ ಕೆಎಸ್ ಆರ್ ಟಿಸಿ ಹಿರಿಯ…

Read More

ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ) ಪಾವಗಡ, ಸಹಸ್ರ ಬಿಲ್ವಾರ್ಚನ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ರೊಪ್ಪ ಮತ್ತು ಕಸಬಾ ವಲಯದಲ್ಲಿ  ನಡೆದ ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಹೆಚ್.ವಿ.ವೆಂಕಟೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯಿಂದ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾಕ್ಟರ್ ಜಪಾನಂದ ಮಹಾರಾಜ್ ಸ್ವಾಮೀಜಿ,  ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿತ್ವದ ಯೋಜನೆಯು ರಾಜ್ಯದಾದ್ಯಂತ ಗ್ರಾಮಗಳ ಅಭಿವೃದ್ಧಿಗೆ ಅರ್ಥಪೂರ್ಣ ಕೊಡುಗೆ ನೀಡುತ್ತಿರುವ ಬಗ್ಗೆ ಶ್ಲಾಘನೆ  ವ್ಯಕ್ತಪಡಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ಎಚ್. ಮಾತನಾಡಿ, ಧರ್ಮಸ್ಥಳ ಯೋಜನೆಯ ಮೂಲಕ ಪಾವಗಡ ತಾಲೂಕಿನಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ, 20 ಶಾಲೆಗಳಿಗೆ…

Read More

ಬೀದರ್: ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೊಳಿಸುವುದು, ಆರ್ ಎನ್ ಐ ಸಂಖ್ಯೆ ಹೊಂದಿದ ಎಲ್ಲಾ ಪತ್ರಕರ್ತರಿಗೆ ರಾಜ್ಯದಾದ್ಯಂತ ಸಂಚರಿಸಲು ಉಚಿತ ಬಸ್ ಪಾಸ್ ಸೇರಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಡಿ. 15 ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಿಲು ನಿರ್ಧರಿಸಿದೆ. ಡಿ.8ರಿಂದ 19 ರವರಿಗೆ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ  ಅಧಿವೇಶನ ನಡೆಯಲಿದೆ. ಈ ವೇಳೆ ಸರಕಾರದ ಗಮನ ಸೆಳೆಯಲು ಧರಣಿ ನಡೆಸಲಾಗುತ್ತಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಜಾನಸನ್ ಘೋಡೆ ತಿಳಿಸಿದ್ದಾರೆ. ಪತ್ರಕರ್ತರ ಮಾಶಾಸನ ನಿಯಮ ಸರಳೀಕರಿಸುವುದು ಹಿರಿಯ ಪತ್ರಕರ್ತರಿಗೆ ನೆರವು ಕಲ್ಪಿಸುವುದು ಕರ್ತವ್ಯದ ವೇಳೆ ಅಥವಾ ಅಪಘಾತದಲ್ಲಿ ಪತ್ರಕರ್ತರು ಮೃ ತಪಟ್ಟರೆ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರ ಒದಗಿಸುವುದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಖಾಲಿ ಇರುವ 300 ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡುವುದು ಬೇಡಿಕೆಗಳಾಗಿವೆ ಎಂದು ಹೇಳಿದ್ದಾರೆ ವರದಿ: ಅರವಿಂದ ಮಲ್ಲಿಗೆ,…

Read More

ತುಮಕೂರು: ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ನಿರ್ಲಕ್ಷಿಸಿದ ಮಗನಿಗೆ ತಂದೆ, ಹಿರಿಯ ನಾಗರಿಕರ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಗಾಂಧಿನಗರದ ನಿವಾಸಿ ಟಿ.ಕೆ. ಶಿವಪ್ರಸಾದ್ ಅವರು ಮನೆ ಸಹಿತ 2 ನಿವೇಶನಗಳನ್ನು ಕಿರಿಯ ಪುತ್ರ ಟಿ.ಎಸ್.ಪೃಥ್ವಿ ಪ್ರಸಾದ್ ಹೆಸರಿಗೆ 2020ರಲ್ಲಿ ನೋಂದಾಯಿತ ದಾನಪತ್ರದ ಮೂಲಕ ವರ್ಗಾವಣೆ ಮಾಡಿದ್ದರು. ದಾನಪತ್ರದಲ್ಲಿ ಮುಂದೆಯೂ ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುವ, ವೈದ್ಯಕೀಯ ವೆಚ್ಚ ಭರಿಸುವ ಭರವಸೆ ಹೊಂದಿರುವುದಾಗಿಯೂ ಉಲ್ಲೇಖಿಸಿದ್ದರು. ಆದರೆ, ಆಸ್ತಿ ವರ್ಗಾವಣೆಗೊಂಡ ಬಳಿಕ ಬಳಿಕ ಪುತ್ರನ ನಡವಳಿಕೆ ಬದಲಾಗಿದ್ದು, ತಮ್ಮನ್ನು ನಿರ್ಲಕ್ಷಿಸಿ, ನಿಂದಿಸುತ್ತಾ ದೌರ್ಜನ್ಯ ವೆಸಗುತ್ತಿದ್ದಾರೆ ಎಂದು ಶಿವ ಪ್ರಸಾದ್ ಅವರು ಉಪವಿಭಾಗಾಧಿಕಾರಿಗಳ ನ್ಯಾಯಾಲಯದ ಮೊರೆಹೋಗಿದ್ದರು. ಮಗನಿಗೆ ಮಾಡಿದ್ದ ದಾನಪತ್ರ ರದ್ದುಪಡಿಸುವಂತೆ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯಿದೆಯಡಿ ಮನವಿ ಸಲ್ಲಿಸಿದ್ದ ಶಿವಪ್ರಸಾದ್ ಅವರ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಪ್ರಕರಣದ ವಿಚಾರಣೆ ನಡೆಸಿದ ಉಪ ವಿಭಾಗಾಧಿಕಾರಿಗಳು ಹಾಗೂ ನ್ಯಾಯಿಕ ದಂಡಾಧಿಕಾರಿಗಳಾದ ನಾಹಿದಾ ಜಮ್…

Read More

ತುಮಕೂರು: ಬೆಸ್ಕಾಂ ಗ್ರಾಮೀಣ ಉಪವಿಭಾಗ–1ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ಆರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಡಿಸೆಂಬರ್ 5ರಂದು ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬೆಳ್ಳಾವಿ ಹಾಗೂ ಬುಗುಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳು ಮತ್ತು ಇತರೆ 66/11 ಕೆವಿ ಬೆಳ್ಳಾವಿ ಉಪಸ್ಥಾವರದ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಿರುವ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಖಾಲಿಯಿರುವ 1 ನೇತ್ರ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಡಿಸೆಂಬರ್ 9ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ನೇರ ಸಂದರ್ಶನವು ಡಿಸೆಂಬರ್ 9ರಂದು ಬೆಳಿಗ್ಗೆ 10 ಗಂಟೆಗೆ ನಗರದ ಅಮಾನಿಕೆರೆ ಎದುರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 2 ವರ್ಷದ Diploma in Ophthalmic ಅಥವಾ ನೇತ್ರ ಸಹಾಯಕರಾಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್‌ ಪಿಸಿಐಬಿ ನಿಯಮಾನುಸಾರ ತರಬೇತಿ ಪಡೆದಿರಬೇಕು. ಕಂಪ್ಯೂಟರ್ ಮತ್ತು ಇಂಟರ್‌ ನೆಟ್ ಇತ್ಯಾದಿ ಬಳಕೆಗೆ ಬೇಕಾಗುವ ಕಂಪ್ಯೂಟರ್ ಬೇಸಿಕ್ ಕೋರ್ಸ್‌ನಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ಸಂದರ್ಶನಕ್ಕೆ ಗರಿಷ್ಠ 45 ವರ್ಷದ ಅಭ್ಯರ್ಥಿಗಳು ಮೂಲ ದಾಖಲೆ ಹಾಗೂ 2 ಸ್ವಯಂ ದೃಢೀಕೃತ ಪ್ರತಿ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು…

Read More

ತುಮಕೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು, ಬೋಧಕರು ಜನಸಾಮಾನ್ಯರಿಗೆ ಅನುಕರಣೀಯ ಆವಿಷ್ಕಾರ/ನಾವೀನ್ಯತೆಯ ಪುರಸ್ಕಾರ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಅಥವಾ ಆರ್ಥಿಕತೆಯ ಯಾವುದೇ ವಿಭಾಗದಿಂದ ಮೂಡಿದ ಜನಸಾಮಾನ್ಯರ, ಅದರಲ್ಲೂ ಗ್ರಾಮೀಣ ಪ್ರದೇಶದ ಜನಜೀವನವನ್ನು ಪರಿವರ್ತಿಸಲು ಸಹಾಯಕವಾದ ಅಥವಾ ಉದ್ಯಮಗಳು ಹಾಗೂ ಉದೋಗ ಸೃಷ್ಟಿಗೆ ಕಾರಣವಾದ ಅನುಕರಣೀಯ ಆವಿಷ್ಕಾರಗಳು/ಪರಿಹಾರಗಳನ್ನು ಪ್ರತಿ ವರ್ಷ ಗುರುತಿಸಿ ಈ ಪುರಸ್ಕಾರ ನೀಡಲಾಗುವುದು. ಪುರಸ್ಕಾರವು 10,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಸ್ನಾತಕೋತ್ತರ ವಿದ್ಯಾರ್ಥಿಗಳು ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಯು.ಆರ್. ರಾವ್, ಪದವಿ ವಿದ್ಯಾರ್ಥಿಗಳ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಡಾ.ಎಸ್.ಕೆ. ಶಿವಕುಮಾರ್ ಹಾಗೂ ಬೋಧಕರು ಹಾಗೂ ಜನಸಾಮಾನ್ಯರ ಅತ್ಯುತ್ತಮ ಆವಿಷ್ಕಾರ/ನಾವಿನ್ಯತೆಗೆ ಪ್ರೊ.ಎಸ್.ಅಯ್ಯಪ್ಪನ್ ಪುರಸ್ಕಾರ ನೀಡಲಾಗುವುದು, ಆಸಕ್ತರು ಡಿಸೆಂಬರ್ 31ರೊಳಗಾಗಿ ಅಕಾಡೆಮಿಯ ವೆಬ್ ಸೈಟ್ https://kstacademy.in  ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080–29721550 ಅಥವಾ ಮೊ.ಸಂ: 9620767819/ 9686449019ನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ…

Read More

ಗುಬ್ಬಿ: ದನ ಮೇಯಿಸಲು ಹೋಗಿದ್ದ 60 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿ.ಎಸ್.ಪುರ ಹೋಬಳಿ ಮಣಿಕುಪ್ಪೆ ನಿವಾಸಿ ನರಸಯ್ಯ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಡಿಕೆ ತೋಟದಲ್ಲಿದ್ದ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್ ಗೆ ಉಗಣಿ ಬಳ್ಳಿ, ಗಿಡಗಂಟೆಗಳು ಹಬ್ಬಿದ್ದು, ಇದರಿಂದಾಗಿ ವಿದ್ಯುತ್ ಸ್ಪರ್ಶಿಸಿ ಅವರು ಸಾವನ್ನಪ್ಪಿದ್ದಾರೆನ್ನಲಾಗಿದೆ. ಹಸುಗಳು ಮಾತ್ರವೇ ಮನೆಗೆ ಬಂದ ವೇಳೆ ಮನೆಯವರು ಅನುಮಾನಗೊಂಡು ಹುಡುಕಾಟ ನಡೆಸಿದ್ದು,  ಈ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತದೇಹ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಮಾಯಕ ವ್ಯಕ್ತಿ ಬಲಿಯಾಗಲು ಪ್ರಮುಖ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಿ.ಎಸ್.ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More