Author: admin

ಮಧುಗಿರಿ: ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಇವರ ವತಿಯಿಂದ ಫೆಬ್ರವರಿ 16ರಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಲಿದೆ. ಮಧುಗಿರಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಭೆ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲಿನ ಜೊತೆಗೆ  ಕುಂದುಕೊರತೆ ಸಭೆಯಲ್ಲಿ ಹಾಜರಾಗುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಧುಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಆರೋಪಕ್ಕೆ ದಾಖಲೆ ನೀಡಬೇಕು. ಕಾಂಗ್ರೆಸ್ ನವರು ತಾವು ಮಾಡಿದ ಅನುಭವದಿಂದ ಮಾತನಾಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಮಾಡಿದ್ದ ಕರ್ಮಕಾಂಡ ನೆನೆಸಿಕೊಳ್ಳೂತ್ತಿದ್ದಾರೆ. ಕಾಂಗ್ರೆಸ್ ಅವಧಿಯ ಅಕ್ರಮ ಲೋಕಾಯುಕ್ತದಲ್ಲಿದೆ. ಕಾಂಗ್ರೆಸ್ ತಾವು ಜೈಲಿಗೆ ಹೋಗೋದನ್ನ ತಪ್ಪಿಸಿಕೊಳ್ಳಲಿ. ಜಾಮೀನು ಪಡೆದು ರಕ್ಷಣೆ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು. ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ಅಜೆಂಡಾ ಸ್ಪಷ್ಟವಾಗಿದೆ. 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ಸಾಬೀತು ಮಾಡಿಲ್ಲ. ಕೋರ್ಟ್ ನಲ್ಲಿ ಕೇಸ್ ದಾಖಲಿಸುತ್ತೇವೆ ಎಂದಿದ್ದರು. ಆದರೆ ದಾಖಲಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ನನ್ನ ಅಪ್ಪನಾಣೆಗೂ ಸಿದ್ದರಾಮಣ್ಣ ಮುಂದೆ ಸಿಎಂ ಆಗಲ್ಲ ಎಂದು ಲೇವಡಿ ಮಾಡಿದ್ದಾರೆ. ಮಾತನಾಡಿದ ನಳೀನ್ ಕುಮಾರ್ ಕಟೀಲ್, ಅವತ್ತು ಸೋನಿಯಾ ಗಾಂಧಿ ಕಾಲಿಡಿದು ಸಿಎಂ ಆಗಿದ್ರಿ. ದೇವೇಗೌಡರ ಹತ್ತಿರ ಬೆಳೆದು ಅವರನ್ನೇ ತುಳಿದ್ರಲ್ಲಾ ಸಿದ್ದರಾಮಣ್ಣ. ನನ್ನ ಅಪ್ಪನಾಣೆಗೂ ನೀವು ಮುಂದೆ ಸಿಎಂ ಆಗಲ್ಲ ಎಂದರು. ಒಂದ್ ದಿನ ಸೋನಿಯಾ ಗಾಂಧಿ ನಿವಾಸದ ಮುಂದೆ ಕತ್ತೆ ಮಲಗಿತ್ತು. ಖರ್ಗೆ ಅಜಾದ್ ಸೇರಿ ಯಾರಿಂದಲೂ ಕತ್ತೆ ಓಡಿಸಲು ಆಗಲಿಲ್ಲ. ಕತ್ತೆಯನ್ನ ಓಡಿಸಿದ್ದು ಸಿದ್ದರಾಮಣ್ಣ. ಕಾಂಗ್ರೆಸ್ ಸೇರ್ತೀಯಾ ಅಂದಿದ್ರಂತೆ ಅದಕ್ಕೆ ಕತ್ತೆ ಓಡಿತು. ಕತ್ತೆಗೂ ಕಾಂಗ್ರೆಸ್ ಬೇಡವಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಫೆಬ್ರವರಿ 17ರಂದು ಬೆಳಿಗ್ಗೆ 10:15ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದರು. ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದೇ ಶುಕ್ರವಾರ ಬೆಳಗ್ಗೆ 10:15 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ . ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಲಿದೆ. ಬಳಿಕ ಫೆಬ್ರುವರಿ 20ರಿಂದ 22ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಫೆಬ್ರುವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ ಎಂದು ತಿಳಿಸಿದರು. ಈಗಾಗಲೇ ಬಜೆಟ್ ಅಧಿವೇಶನ ಫೆಬ್ರುವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ.ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ಮೇಲೆ ಕುತೂಹಲವಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತುಮಕೂರು: ಶಾಲೆಯ ನೈರ್ಮಲ್ಯ ಕಾಪಾಡಬೇಕಾದ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಶಾಲೆಯ ಮುಂಭಾಗದಲ್ಲಿ ಕೊಳಚೆ ತುಂಬಿದ್ದರೂ, ಸ್ವಚ್ಛಗೊಳಿಸಲು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವ ಘಟನೆ  ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ನಡೆದಿದ್ದು, ಶಾಲೆಯ ಮುಖ್ಯೋಪಾದ್ಯಾಯರು  ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಿರ್ಲಕ್ಷ್ಯವಹಿಸಿದ್ದಾರೆ ಅನ್ನೋ ಆಕ್ರೋಶದ ಮಾತುಗಳು ಇದೀಗ ಕೇಳಿ ಬಂದಿವೆ. ತುಮಕೂರು ಮಹಾನಗರ ಪಾಲಿಕೆ, ಬಸ್ ನಿಲ್ದಾಣ ಸಮೀಪದ, ಮೈಸೂರು ಮಹಾರಾಜರು ಕೊಡುಗೆಯಾಗಿ ನೀಡಿರುವ ಜಾಗದಲ್ಲಿ ಕಟ್ಟಿರುವ ಹಾಗೂ ಕೆಆರ್ ಜಿ ಎಂಎಸ್ ಎಂಬ ಶಾಲೆಯ ಆವರಣಕ್ಕೆ ಹೊಂದಿಕೊಂಡಂತಿರುವ,  ತುಮಕೂರು ನಗರ ಹೃದಯ ಭಾಗದಲ್ಲಿರುವ ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ಇಂತಹದ್ದೊಂದು ದುಸ್ಥಿತಿ ಕಂಡು ಬಂದಿದ್ದು, ಶಾಲೆಯ ಸ್ವಚ್ಚವಾಗಿಡದೇ ನಿರ್ಲಕ್ಷ್ಯವಹಿಸಲಾಗಿದೆ. ಮಕ್ಕಳು ಊಟ ಮಾಡಿ ಕೈ ತೊಳೆಯಲು ಸರಿಯಾದ ವ್ಯವಸ್ಥೆ ಇಲ್ಲದೇ, ಶಾಲೆಯ ಆವರಣದಲ್ಲಿ ಮಕ್ಕಳು ಊಟದ ಬಳಿಕ ಎಸೆದ ಅನ್ನ, ಕೈ ತೊಳೆದ ನೀರು ಕೊಳೆಯಾಗಿ ಗಬ್ಬೆದ್ದು ನಾರುತ್ತಿದೆ. ಇದರ ಬಗ್ಗೆ ಯಾರ ಗಮನಕ್ಕೆ ತಂದರೂ ಯಾರೂ ಕಿವಿಗೆ…

Read More

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇರಲ್ಲ ಔಷಧಿ ಗುಣವಿದೆ ಎಂದು ವರದಿ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ವಿಧಾನಪರಿಷತ್ ನಲ್ಲಿ ಇಂದು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಒಂದು ವರ್ಷದ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆಯೇ ಎಂಬ ಬಗ್ಗೆ ಸಂಶೋಧನೆ ನಡೆಸಲು  ರಾಮಯ್ಯ ತಾಂತ್ರಿಕವಿವಿಗೆ ಹೇಳಿದ್ದೆವು . ತಾಂತ್ರಿಕ ವಿವಿ ಸಂಶೋಧನಾ ವರದಿ ನೀಡಿದೆ. ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಇರಲ್ಲ ಔಷಧಿ ಇರುತ್ತೆ ಎಂದು ವರದಿ ಸಲ್ಲಿಕೆ ಮಾಡಿದೆ. ಆದರೆ ಹಿಂದಿನ ಸರ್ಕಾರ ಅಡಿಕೆಯಲ್ಲಿ ಕ್ಯಾನ್ಸರ್ ಗುಣ ಇದೆ ಎಂದಿತ್ತು . ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ ಎಂದು ಅರಗ ಜ್ಞಾನೇಂದ್ರ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯ ಸರ್ಕಾರದ ವಿರುದ್ಧ ಟೆಂಡರ್ ಗೋಲ್ಮಾಲ್ ಆರೋಪ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿರುವ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಹುಚ್ಚರು,ತಲೆ ತಿರುಕರು. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ತಲೆ ಸರಿ ಇದ್ದವರು ಈ ರೀತಿ ಮಾತನಾಡೋದಿಲ್ಲ, ಅಧಿಕಾರದ ಭ್ರಮೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅಂತಾ ಕನಸು ಕಾಣ್ತಿದ್ದಾರೆ. ಕಾಂಗ್ರೆಸ್​ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸದನದಲ್ಲಿ ಮಾತನಾಡಲಿ ತಕ್ಕ ಉತ್ತರ ಕೊಡುತ್ತೇವೆ ಎಂದರು. ವಿಪಕ್ಷ ನಾಯಕರಾಗಿ ಈ ರೀತಿಯ ಹೇಳಿಕೆ ಸರಿಯಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಆ ರೀತಿಯಾಗಿ ನಡೆದುಕೊಳ್ಳಬಹುದಾ..? ಕಾಂಗ್ರೆಸ್ ಪಕ್ಷದವರಿಗೆ ಕೇವಲ ಚುನಾವಣೆಯೇ ಮುಖ್ಯಾವಾಯಿತಾ..? ಆರೋಪ ಮಾಡಿ ಹುಚ್ಚು ಹುಚ್ಚಾಗಿ ಆಡೋದು ಜಾಸ್ತಿಯಾಗಿದೆ. ಡಿ.ಕೆ ಶಿವಕುಮಾರ್ ಈ ಮಟ್ಟಕ್ಕೆ ಇಳಿದಿರುವುದು ನನಗೆ ತುಂಬಾ ನೋವಾಗಿದೆ ಇನ್ನಾದ್ರೂ ಜವಾಬ್ದಾರಿಯುತ ಮಾತನಾಡಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಕಳೆದ ಎರಡು ದಿನಗಳಿಂದ ಫ‍್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಬ್ಯಾರಿಕೇಡ್ ತಳ್ಳಿ ವಿಧಾನಸೌಧಕ್ಕೆ ಮುತ್ತಿಗೆಗೆ ಮುಂದಾದ ಪ್ರತಿಭಟನಾನಿರತ ಕಾರ್ಯಕರ್ತೆಯರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಬೇರೆಡೆಗೆ ಸ್ಥಳಾಂತರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರ ಪ್ರದೇಶ : ಹಾಳಾದ ಮೊಬೈಲ್ ಫೋನ್ ರಿಪೇರಿ ಮಾಡಲು ಮನೆಯವರು ನಿರಾಕರಿಸಿದ್ದರಿಂದ 15 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದೆ. ಬಾಲಕ ಮೊಬೈಲ್ ಗೇಮ್‌ಗಳಿಗೆ ದಾಸನಾಗಿದ್ದ ಎಂದು ಮನೆಯವರು ಹೇಳಿದ್ದಾರೆ. ಓದುವ ಕಡೆ ಗಮನ ಕೊಡದೆ ಮೊಬೈಲ್‌ನಲ್ಲಿ ಗೇಮ್‌ ಆಡುತ್ತಿದ್ದ ಮಗುವಿಗೆ ಮನೆಯವರು ನಿರಂತರವಾಗಿ ನಿಂದಿಸುತ್ತಿದ್ದರು. ಮೊಬೈಲ್ ಫೋನ್ ಕೆಲಸ ಮಾಡುವುದನ್ನು ನಿಲ್ಲಿಸಿದಾಗ, ಮನೆಯವರಿಗೆ ಫೋನ್ ರಿಪೇರಿ ಮಾಡಲು ಒತ್ತಾಯಿಸಿದರು, ಆದರೆ ಅವರು ಅದನ್ನು ಮಾಡಲು ನಿರಾಕರಿಸಿದರು. ಇದರಿಂದ ಮನನೊಂದ ಬಾಲಕ ತನ್ನ ಕೊಠಡಿಗೆ ತೆರಳಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾನೆ. ಮೃತದೇಹವನ್ನು ಪೊಲೀಸರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷಗಳು ತಂತ್ರ, ರಣ ತಂತ್ರ ಹೆಣಿಯುತ್ತಿವೆ. ಅಧಿಕಾರಕ್ಕಾಗಿ ಮತದಾರರ ಮನೆ ಭಾಗಿಲಿಗೆ ಹೋಗೋದು ಒಂದು ಕಡೆಯಾದರೆ ಎದುರಾಳಿ ಅಭ್ಯರ್ಥಿಗಳನ್ನು ಮಟ್ಟ ಹಾಕಲು ತಮ್ಮ ಪಕ್ಷದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎಂಬ ಲೆಕ್ಕಾಚಾರ ಮತ್ತೊಂದೆಡೆ ಭರ್ಜರಿಯಾಗಿ ನಡೆದಿದೆ. ಇನ್ನು ಸಾರ್ವಜನೀಕ ಸಭೆಗಳಲ್ಲಿ ಸೌಲಭ್ಯಗಳ ಸುರಿಮಳೆ ಯಥೆಚ್ಚವಾಗಿ ಸುರಿಯುತ್ತದೆ. ಇವುಗಳ ಮಧ್ಯೆಯೆ ಎಚ್. ಡಿ ಕುಮಾರಸ್ವಾಮಿ ಅವರನ್ನು ಸೋಲಿಸೋಕೆ ಸಿದ್ದರಾಮಯ್ಯ ಅವರು ಹೊಸ ಅಸ್ತ್ರ ಉಪಯೋಗಿಸಲು ಮುಂದಾಗಿದ್ದು ಇದಕ್ಕೆ ಹೈಕಮಾಂಡ್ ಅಸ್ತು ಅನ್ನುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕಾದ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಮಣಿಸಿ ದೊಡ್ಡ ಮಟ್ಟದಲ್ಲಿ ಜಯಭೇರಿ ಭಾರಿಸಬೇಕು. ಅದಕ್ಕೆ ಮಂಡ್ಯ, ರಾಮನಗರದಂತಹ ಭದ್ರ ಕೋಟೆಯಲ್ಲಿ ಜೆಡಿಎಸ್ ಮಣಿಸಬೇಕು. ರಮ್ಯಾ ಅವರನ್ನ ಚನ್ನಪಟ್ಟಣದಿಂದ ಕಣಕ್ಕಿಳಿಸಿದರೆ ಪಕ್ಷಕ್ಕೆ ಅನುಕೂಲವಾಗಲಿದೆ. ಇದು ಮಂಡ್ಯದ ಮೇಲೂ ಪರಿಣಾಮ ಬೀರಲಿದೆ ಅನ್ನೋದು ಸಿದ್ದರಾಮಯ್ಯ ವಾದ ಎಂದು ಹೇಳಲಾಗುತ್ತಿದೆ. ತ್ರಿಕೋನ ಸ್ಪರ್ಧೆಯಲ್ಲಿ ರಮ್ಯಾ ಗೆಲುವಿಗೆ ಅವಕಾಶ ಜಾಸ್ತಿ…

Read More