Author: admin

ಹೆಚ್.ಡಿ.ಕೋಟೆ/ಸರಗೂರು:  ಹುಲಿ ದಾಳಿಯಿಂದ ಸಾವಿಗೀಡಾಗಿರುವ ರೈತನ ಕುಟುಂಬಕ್ಕೆ ಪರಿಹಾರ ನೀಡಿದ ನಂತರವೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಒತ್ತಾಯಿಸಿದರು. ಅವರು ತಮ್ಮ ಬೆಂಬಲಿಗರೊಡನೆ ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯ ಶವಾಗಾರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ತಾಲ್ಲೂಕಿನ ಹೀರೆಹಳ್ಳಿ ಗ್ರಾಮದ ರೈತ ಮರಿಗೌಡ ತಮ್ಮ ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆಯಲ್ಲಿ ಹುಲಿ ದಾಳಿ ಮಾಡಿ ಪರಿಣಾಮ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬ ಕಂಗಾಲಾಗಿದ್ದಾರೆ ಎಂದರು. ಅರಣ್ಯ ಇಲಾಖೆಯವರು ಪರಿಹಾರ ನೀಡಿದೆ ನಂತರವೇ ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಇಲ್ಲದಿದ್ದರೆ ಮರಣೋತ್ತರ ಪರೀಕ್ಷೆ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮಹೇಶ್ ಕುಮಾರ್ ಮಧು ಸಿದ್ದರಾಜು ಸಂತೋಷ ಹೂಗರ್  ಸೇರಿದಂತೆ ಮತ್ತಿತರರು ಶಾಸಕರ ಮನವೊಲಿಸಿದ್ದರೂ ಪ್ರಯೋಜನವಾಗಲಿಲ್ಲ. ವೈಯಕ್ತಿಕವಾಗಿ ರೈತ ಕುಟುಂಬಕ್ಕೆ ಅರಣ್ಯ ಇಲಾಖೆ ಆಧಿಕಾರಿಗಳು ಆರ್ಥಿಕ ನೆರವು ನೀಡಿ, ಅವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ನಂತರ, ಕೆಲ ಮುಖಂಡರು ಚಿಕ್ಕಣ್ಣರವರ ಮನವೊಲಿಸಿದ್ದು, ಬಳಿಕ ಪ್ರತಿಭಟನೆಯನ್ನು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ  ಆದಿವಾಲ  ಗ್ರಾ. ಪಂ.ವ್ಯಾಪ್ತಿಯ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆದಿವಾಲಗೆ ಡಿ. ಸುಧಾಕರ್ ಭೇಟಿ ನೀಡಿದರು. ಈ  ಸಮಯದಲ್ಲಿ ರೈತರಿಗೆ ಕೆ.ಸಿ.ಸಿ. ಸಾಲದಲ್ಲಿ ವಿಳಂಬ ವಾಗುತ್ತಿರುವುದನ್ನು ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಟ್ಟು,  ರೈತರ ಕೆಸಿಸಿ ಸಾಲವನ್ನು ಬೇಗ ಮಂಜೂರು ಮಾಡಿ ಕೊಡಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ  ಸಹಕಾರ ಸಂಘದ ಅಧ್ಯಕ್ಷರಾದ ಎನ್.ಜಿ. ಶ್ರೀಧರ್ ಮತ್ತು ಮುನೀರ್  ಹಾಗೂ ಸಂಘದ ನಿರ್ದೇಶಕರು ಪಕ್ಷದ ಮುಖಂಡರುಗಳು ಹಾಜರಿದ್ದರು. ವರದಿ:  ಮುರುಳಿಧರನ್ ಆರ್.,  ಹಿರಿಯೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಇಬ್ಬರನ್ನು ಬಲಿ ಪಡೆದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರಕಾರಿ ಬಸ್ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ  ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಿಕ್ಷುಕನ ಮೇಲೆಯೇ ಬಸ್ ಹರಿದಿದ್ದು, ಪರಿಣಾಮವಾಗಿ ಆತನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದಲ್ಲದೇ ರೈತ ಗೋಪಾಲನಾಯ್ಕ ಎಂಬವರಿಗೂ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ 10 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಪೈಕಿ ನಿರ್ವಾಹಕ ಸೇರಿದಂತೆ 8 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಅಪಘಾತದ ತೀವ್ರತೆಗೆ ಬಸ್ಸು ನಜ್ಜುಗುಜ್ಜಾಗಿದ್ದು, ಬಸ್ಸಿನ ನಿರ್ವಾಹಕನ ಕಾಲು ಬಸ್ಸಿನಲ್ಲೇ ಸಿಲುಕಿಕೊಂಡಿದ್ದು,…

Read More

ಚಂದನವನದ ಸ್ಟಾರ್ ನಿರ್ದೇಶಕ ಕಂಟೆಂಟ್ ಸಿನಿಮಾಗಳ ಮಾಸ್ಟರ್ ಮೈಂಡ್ ಟಿ. ಎಸ್. ನಾಗಾಭರಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ.. 69 ವರ್ಷದ ನಟ ಹಾಗೂ ನಿರ್ದೇಶಕರಾದ ನಾಗಾಭರಣ ಅವರಿಗೆ ಗಣ್ಯರು , ಸಿನಿಮಾ ತಾರೆಯರು, ಆಪ್ತರು , ನೆಟ್ಟಿಗರು ಶುಭಾಷಯಗಳ ಮಹಾಪೂರ ಹರಿಸುತ್ತಿದ್ದಾರೆ. ಸುಮಾರು 36 ಸಿನಿಮಾಗಳನ್ನ ಮಾಡಿರುವ ನಾಗಾಭರಣ ಅವರು 10 ರಾಷ್ಟ್ರೀಯ ಪ್ರಶಸ್ತಿ , 23 ರಾಜ್ಯ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದ್ದಾರೆ..ಇವರ ಸಾರಥ್ಯದ 8 ಸಿನಿಮಾಗಳು ಪನೋರೋಮಾ ಅಂತರಾಷ್ಟ್ರೀಯ ಚಲನಚಿತ್ರ ಉತ್ಸವಕ್ಕೆ ಪ್ರವೇಶ ಪಡೆದಿದ್ದವು.ಅಂದ್ಹಾಗೆ ಟಿ. ಎನ್ ನಾಗಾಭಾರಣ ಅಂದ್ರೆ ತಲಕಾಡು ಶ್ರೀನಿವಾಸಯ್ಯ ನಾಗಾಭರಣ ಅವರು ನಿರ್ದೇಶನದ ಜೊತೆಗೆ ನಟನೆ , ರಚನೆ ,ನಿರ್ಮಾಣ,  ರಂಗಮಂದಿರದಲ್ಲೂ ಗುರುತಿಸಿಕೊಂಡಿದ್ದಾರೆ. ಹಲವು ಧಾರಾವಾಹಿಗಳನ್ನ ನಾಗಾಭರಣ ಅವರು ನಿರ್ಮಿಸಿದ್ದಾರೆ. ದೂರದರ್ಶನ ವಾಹಿನಿಯಲ್ಲಿನ ಅನೇಕ ಕಾರ್ಯಕ್ರಮಳಿಗೂ ಬಂಡವಾಳ ಹೂಡಿದ್ದಾರೆ. ಇವರ ಜನುಮದ ಜೋಡಿ ಸಿನಿಮಾ ಅಂತು ಸೂಪರ್ ಹಿಟ್ ಆಗಿದ್ದು ಸುಮಾರು 1 ವರ್ಷ ಥಿಯೇಟರ್ ಯಶಸ್ವಿ ಪ್ರದರ್ಶನ ಕಂಡಿತ್ತು. ಅವರು ನಿರ್ದೇಶಿಸಿರುವ ಒಟ್ಟಾರೆ 36 ಸಿನಿಮಾಗಳ…

Read More

ಚುನಾವಣಾ ಆಯೋಗವು ಇಂದು ಸರಣಿ ವಚ್ರ್ಯುವಲ್ ಸಭೆಗಳನ್ನು ನಡೆಸುತ್ತಿದ್ದು, ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭೌತಿಕ ರ್ಯಾಲಿಗಳು, ರೋಡ್ಷೋಗಳ ಮೇಲೆ ತಾನು ವಿಧಿಸಿರುವ ನಿಷೇಧವನ್ನು ಮುಂದುವರಿಸಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲಿದೆ. ಜ.8ರಂದು ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಪ್ರಕಟಿಸಿದ ಚುನಾವಣಾ ಆಯೋಗವು ಜ.15ರ ತನಕ ಭೌತಿಕ ರ್ಯಾಲಿಗಳು, ರಸ್ತೆ ಮತ್ತು ಬೈಕ್ ಶೋಗಳ ಮೇಲೆ ನಿಷೇಧ ಹೇರಿತ್ತು. ಜ.15ರಂದು ಆಯೋಗವು ಈ ನಿಷೇಧವನ್ನು ಜ.22ರವರೆಗೆ ಮುಂದುವರಿಸಿತ್ತು. ಆದಾಗ್ಯೂ ಅದು ರಾಜಕೀಯ ಪಕ್ಷಗಳಿಗೆ ನಿರ್ಬಂಧಗಳನ್ನು ಕೊಂಚ ಸಡಿಲಿಸಿ ಗರಿಷ್ಠ 300 ಜನ ಅಥವಾ ಸಭಾಂಗಣದ ಪೂರ್ಣ ಸಾಮಥ್ರ್ಯದ ಶೇ.50ರಷ್ಟು ಜನರನ್ನೊಳಗೊಂಡು ಒಳಾಂಗಣ ಸಭೆಗಳನ್ನು ನಡೆಸಲು ಅನುಮತಿ ನೀಡಿತ್ತು. ಚುನಾವಣಾ ಆಯೋಗವು ಕೇಂದ್ರ ಆರೋಗ್ಯ ಸಚಿವಾಲಯ, ತಜ್ಞರು, ಚುನಾವಣೆಗಳು ನಡೆಯಲಿರುವ ಪಂಚರಾಜ್ಯಗಳು ಮತ್ತು ಸಂಬಂಧಪಟ್ಟ ರಾಜ್ಯಗಳ ಮುಖ್ಯ ಚುನಾವಣಾ ಆಯುಕ್ತರು ಮಾಹತಿ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅಕೃತ ಮೂಲಗಳು ತಿಳಿಸಿವೆ. ವರದಿ :ಆಂಟೋನಿ…

Read More

ದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರಕುಶಲ ಅಭಿವೃದ್ಧಿ ನಿಗಮ ಹಿರಿಯ ಕುಶಲಕರ್ಮಿಗಳ ಮಾರ್ಗದರ್ಶನದಲ್ಲಿ ನಿರ್ಮಿಸಿರುವ ಸ್ತಬ್ಧ ಚಿತ್ರಗಳಿಂದ ಕರ್ನಾಟಕದ ಕರಕುಶಲತೆ ದೇಶಕ್ಕೆ ಪರಿಚಯವಾಗಲಿವೆ. ಕರ್ನಾಟಕ ಕರಕುಶಲ ಅಭಿವೃದ್ದಿ ನಿಗಮದ ನೊಂದಾಯಿತ ಹಿರಿಯ ಕುಶಲಕರ್ಮಿ ಶಶಿಧರ ಅಡಪ ಅವರ ಮಾರ್ಗದರ್ಶನದಲ್ಲಿ ತಯಾರಿಸಿದ ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಗಳ ತೊಟ್ಟಿಲು ಕರ್ನಾಟಕ ಹೆಸರಿನ ಸ್ತಬ್ಧ ಚಿತ್ರದಲ್ಲಿ ಕಾವೇರಿ ಎಂಪೋರಿಯಂನ ಆನೆ, ಉಡುಪಿಯ ಯಕ್ಷಗಾನ ಗೊಂಬೆಗಳು, ಕಿನ್ನಾಳ ಅದ್ಭುತ ಕಲೆಯ ಆಂಜನೇಯ ಪ್ರತಿಮೆ, ಬಿದಿರಿನ ಕಲೆ, ನವಿಲಿನ ಮೂರ್ತಿ, ಬಾಗಿನ ಹಿಡಿದ ಕಮಲಾದೇವಿ ಚಟ್ಟೋಪಾಧ್ಯಾಯ ಮೂರ್ತಿ, ಉಡುಪಿಯ ಉಪ್ಪುಂದದ ಯಕ್ಷಗಾನ ಗೊಂಬೆಗಳು ಹಾಗೂ ಕಿನ್ನಾಳ ಹುಡುಗಿ, ಮೈಸೂರು ರೇಷ್ಮೆ ,ಇಳಕಲ್ ಮೊಳಕಾಲ್ಮೂರಿನ ಸೀರೆಗಳ ಬಳಕೆ, ತಾಳೆ, ಬೆತ್ತ ಬಳಸಿ ವಿಶೇಷವಾಗಿ ತಯಾರಿಸಿದ ಸಮಗ್ರತೆ ಚಿತ್ರಣ್ಲ ಪ್ರದರ್ಶನಗೊಳ್ಳಲಿವೆ. ಕರಕುಶಲ ನಿಗಮದ ಕುಶಲಕರ್ಮಿಗಳಿಂದ ಸಿದ್ಧವಾಗಿರುವ ಈ ಸ್ತಬ್ಧಚಿತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ…

Read More

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಅಭಿಮಾನಿ ಸುಧೀರ್ ಕುಮಾರ್ ಚೌಧರಿ ಯಾರಿಗೆ ಗೊತ್ತಿಲ್ಲ ಹೇಳಿ. ಸಚಿನ್ ನಿವೃತ್ತಿಯಾಗುವವರೆಗೂ ಟೀಂ ಇಂಡಿಯಾ ಆಡುವ ಪ್ರತಿಯೊಂದು ಪಂದ್ಯದಲ್ಲೂ ಸುಧೀರ್ ಸ್ಟ್ಯಾಂಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ದೇಶ – ವಿದೇಶ ಎಂಬ ಬೇಧವಿಲ್ಲದೇ ಸಚಿನ್ ಬ್ಯಾಟಿಂಗ್ ನೋಡುಲು ಆಸ್ತಿಗಳನ್ನ ಮಾರಿಕೊಂಡು  ಸುಧೀರ್ ಮೈದಾನಕ್ಕೆ ಬರುತ್ತಿದ್ದರು.  ಕೆಲವು ಸಂದರ್ಭಗಳಲ್ಲಿ, ಬಿಸಿಸಿಐ  ಸುಧೀರ್ ಗೆ ಪಂದ್ಯಗಳನ್ನು ವೀಕ್ಷಿಸಲು ವಿಶೇಷ ರಿಯಾಯಿತಿಗಳನ್ನು  ನೀಡಿದ ಉದಾಹರಣೆಗಳು ಕೂಡ ಇವೆ. ಇತ್ತ ಸಚಿನ್ ಕೂಡ ಸುಧೀರ್ ಬಗ್ಗೆ ತುಂಬಾ ಗೌರವ ಹೊಂದಿದ್ದರು. ಅನೇಕ ಸಂದರ್ಭಗಳಲ್ಲಿ ಅವರನ್ನು ಗೌರವಿಸುವುದರ ಜೊತೆಗೆ ಅವರ ಅಗತ್ಯಗಳನ್ನು ಪೂರೈಸಿದ್ದರು. ವಿದೇಶದಲ್ಲಿ ನಡೆಯುವ ಪಂದ್ಯಾವಳಿ ವೀಕ್ಷಿಸಲು ಬರುವ ಸುಧೀರ್ ಖರ್ಚುವೆಚ್ಚಗಳನ್ನ ಸಚಿನ್ ಭರಿಸಿದ್ದಾರೆ.ಸಚಿನ್ ಅವರನ್ನು ದೇವರ ಸಮಾನ ಎಂದು ಪೂಜಿಸುವ ಸುಧೀರ್ ಮೊದಲ ಬಾರಿಗೆ ಕ್ರಿಕೆಟ್ ಅಲ್ಲದ ಕಾರಣಗಳಿಂದ ಸುದ್ದಿಯಲ್ಲಿದ್ದಾರೆ. ಬಿಹಾರದ ಮುಜಾಫರ್‌ಪುರ ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕೇಸ್ ಒಂದರ ವಿಚಾರವಾಗಿ…

Read More

ಕೊರಟಗೆರೆ:  ಕ್ಷೇತ್ರದ ಜನರು ಭಾವೋದ್ರೇಕವಾಗಿ ನಾನು ಮುಖ್ಯಮಂತ್ರಿಯಾಗಬೇಕು ಎಂದು ಭಾಷಣ ಮಾಡಬೇಡಿ. ನೀವು ಇಲ್ಲಿ ಕೂಗಿದರೆ ನನ್ನ ವಿರುದ್ದ ಒಳ ಕೂಯಿಲು ಅಲ್ಲಿ ಶುರುವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ ಪ್ರತಿಕ್ರಿಯಿಸಿದರು. ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೋರಾ ಹೋಬಳಿಯ ಚಿಕ್ಕಗುಂಡಗಲ್ಲು ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆದ ಸುಮಾರು 5 ಕೋಟಿ ರೂಗಳ ವೆಚ್ಚದ 17 ಕಾಮಗಾರಿಗಳನ್ನು ಶಂಕುಸ್ಥಾಪನೆ  ಶನಿವಾರ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದಿಗೆ ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇನೆ. ಪ್ರತಿಯೊಬ್ಬ ಮತದಾರರ ಋಣ ತೀರಿಸುವ ಕೆಲಸವನ್ನು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ. ಸರ್ಕಾರದಿಂದ ಹಣ ತರುವುದು ಕಷ್ಟ. ಇತರ ಕ್ಷೇತ್ರಗಳನ್ನು ಗಮನಿಸಿ ನಮ್ಮ ಕ್ಷೇತ್ರವನ್ನು ಗಮನಿಸಿ. ಆಗ ಅಭಿವೃದ್ಧಿ ತಿಳಿಯುತ್ತದೆ ಎಂದರು. ಕ್ಷೇತ್ರ ಜನರು ನಾನು ಮುಖ್ಯಮಂತ್ರಿಯಾಗಲಿ ಎಂದು ಕೂಗುತ್ತೀರಿ. ಆದರೆ ಅದು ನಮ್ಮ ಕೈಯಲ್ಲಿ ಇಲ್ಲ. ಪಕ್ಷದ ವರಿಷ್ಠರು ಶಾಸಕರು ಸೇರಿದಂತೆ  ಹಲವು   ಹಂತಗಳಲ್ಲಿ ನಡೆಯುವ ಕೆಲಸ ಅದಾಗಿದೆ. ನಾನು ರಾಜ್ಯದ ಒಬ್ಬ…

Read More

ಪಾವಗಡ:  ತಾಲ್ಲೂಕಿನ  ಮೀನಕುಂಟನಹಳ್ಳಿ ಯಲ್ಲಿ ಆಯೋಜಿಸಲಾಗಿದ್ದ  ನಾಗಲಮಡಿಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ನ್ನು ಸಮಾಜ ಸೇವಕರಾದ  ನಾಗೇಂದ್ರ ಕುಮಾರ್ ಉದ್ಘಾಟಿಸಿದರು. ಪಂದ್ಯಾಟದ ಬಳಿಕ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು,  ಯುವಕರು ಕ್ರೀಡೆ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಎಂ.ಕೆ. ನಾರಾಯಣಪ್ಪ,  ನರಸಿಂಹ ರೆಡ್ಡಿ,    ಶಿವಕುಮಾರ್,    ಸುಭಾರೆಡ್ಡಿ, ಜಯಸಿಂಹ, ನೇರಳೆ ಕುಂಟೆ ನಾಗೇಂದ್ರಕುಮಾರ್ ಅಭಿಮಾನ ಬಳಗದ ಅಧ್ಯಕ್ಷ ಕಿರಣ್  ರವಿ, ಅಶೋಕ್  ಲಿಖಿತ್ ಬಾಬು ರಾಕೇಶ್ ಮತ್ತಿತರರು ಭಾಗಿಯಾಗಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜನವರಿ 23 ರಿಂದ ಭಾನುವಾರದಂದು ಸಂಪೂರ್ಣ ಲಾಕ್‌ ಡೌನ್ ಅನ್ನು ತಮಿಳುನಾಡು ಮುಖ್ಯಮಂತ್ರಿ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಲಾಕ್‌ ಡೌನ್ ಸಮಯದಲ್ಲಿ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ಅನುಮತಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕುಗಳು ವೇಗವಾಗಿ ಏರಿಕೆಯಾಗಲು ಪ್ರಾರಂಭಿಸಿದಾಗಿನಿಂದ  ತಮಿಳುನಾಡು ಸರ್ಕಾರ ಜನವರಿ 9 ರಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಅನ್ನು ವಿಧಿಸಿದೆ.  ಎಲ್ಲಾ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇತ್ತೀಚಿನ ಆರೋಗ್ಯ ಬುಲೆಟಿನ್ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನಲ್ಲಿ 28,561 ಹೊಸ ಪ್ರಕರಣಗಳು ಮತ್ತು 39 ಸಾವುಗಳು ದಾಖಲಾಗಿವೆ. ರಾಜ್ಯದ ಸಕ್ರಿಯ ಕೋವಿಡ್  ಸಂಖ್ಯೆ 1,79,205 ಕ್ಕೆ ತಲುಪಿದೆ, ಆದರೆ ಒಟ್ಟು ಪ್ರಕರಣಗಳು 30 ಲಕ್ಷದ…

Read More