Author: admin

ತಿಪಟೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ತಿಪಟೂರು , ಸಮಗ್ರ ಶಿಶು ಅಭಿವೃದ್ಧಿ ಯೋಜನೆ ತಿಪಟೂರು ಹಾಗೂ ಗ್ರಾಮ ಪಂಚಾಯಿತಿ ಈಚನೂರು ವತಿಯಿಂದ ಆಯೋಜಿಸಲಾಗಿದ್ದ ಅಂಗನವಾಡಿ ಕಟ್ಟಡಗಳನ್ನು ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು. ಆರ್. ಐ. ಡಿ. ಎಫ್. -22 ರ ಯೋಜನೆಯಡಿಯಲ್ಲಿ ರೂ 9.17 ಲಕ್ಷ ಅಂದಾಜು ಮೊತ್ತ ಅನುದಾನದಲ್ಲಿ ತಿಪಟೂರು ನಗರಸಭಾ ವ್ಯಾಪ್ತಿಯ ತಮಿಳು ಕಾಲನಿ-ಬಿ, ಚಿಕ್ಕಲಕ್ಕಿಪಾಳ್ಯ ಹಾಗೂ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಹಳ್ಳಿ ಕಾವಲು ಅಂಗನವಾಡಿ ಕೇಂದ್ರಗಳ ಕಟ್ಟಡವನ್ನು ನೂತನವಾಗಿ ನಿರ್ಮಿಸಲಾಗಿತ್ತು. ನಗರಸಭೆ ಅಧ್ಯಕ್ಷ ಪಿ. ಜೆ. ರಾಮ್ ಮೋಹನ್, ಉಪಾಧ್ಯಕ್ಷ ಗಣೇಶ್ , ನಗರಸಭಾ ಸದಸ್ಯರಾದ ಲತಾ ಲೋಕೇಶ್ , ಜೈರಾಜು, ಮೋಹನ್ ರಾಜು, ಈಚನೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಎಸ್., ಗ್ರಾಮ ಪಂಚಾಯಿತಿ ಸದಸ್ಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ, ಹಾಗೂ ಸಿದ್ದೇಶ್ ಇಂಜಿನಿಯರ್ ನಿರ್ಮಿತಿ ಕೇಂದ್ರ ತುಮಕೂರು ಮೊದಲಾದವರು ಇದ್ದರು. ವರದಿ:  ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರಿ ನಿಯಮಿತದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆಯಾಗಿದೆ ಎಂದು ನಿಯಮಿತದ ಸಿಇಒ ಮತ್ತು ಅಧ್ಯಕ್ಷರ ವಿರುದ್ಧ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕ ನಾಗರಾಜ್ ಆರೋಪಿಸಿದರು. ನಗರದ ಸಹಕಾರ ಇಲಾಖೆಯ ಕಚೇರಿ ಮುಂದೆ ಅವರು ಮಾತನಾಡಿದರು. ಇದೇ ವೇಳೆ ಮಾತನಾಡಿದ ಉಪಾಧ್ಯಕ್ಷ ವಿನಯ್ ಮತ್ತು ನಿರ್ದೇಶಕ ಪ್ರಕಾಶ್ ಯಾದವ್, ಸಾಮಾನ್ಯ ಸಭೆಯನ್ನು ಕೇಂದ್ರ ಸ್ಥಾನ ಬಿಟ್ಟು ಅಧ್ಯಕ್ಷರ ಊರಾದ ಕಲ್ಕೆರೆಯಲ್ಲಿ ಗ್ರಾಮ ಸಭೆಯನ್ನು ಆಯೋಜಿಸಿ, ನಿಯಮ ಉಲ್ಲಂಘಿಸಲಾಗಿದೆ. ಆರೋಪ ಸಾಬೀತಾದಲ್ಲಿ ನಿಯಮಿತವನ್ನು ಸೂಪರ್ ಸೀಡ್ ಮಾಡಬೇಕೆಂದು ಅವರು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ಚಂದ್ರಶೇಖರ್ ಮತ್ತು ದೇವಿರಮ್ಮ, ಮಾಜಿ ನಿರ್ದೇಶಕ ನಾಗರಾಜ್ ಹಾಗೂ ಗ್ರಾಮಸ್ಥ ರಾಜಣ್ಣ ಸೇರಿದಂತೆ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ಅಪಘಾತದಲ್ಲಿ ತಮ್ಮೆರಡು ಕಾಲುಗಳನ್ನು ಕಳೆದುಕೊಂಡಿರುವ ಕೆ.ಟಿ.ಹಳ್ಳಿ ಗ್ರಾಮದ ಹನುಮಂತರಾಯಪ್ಪ ಅವರಿಗೆ ಪಾವಗಡ ತಾಲ್ಲೂಕಿನ ಸಮಾಜ ಸೇವಕರಾದ ನೇರಳೆ ಕುಂಟೆ ನಾಗೇಂದ್ರ ಕುಮಾರ್ ಆರ್ಥಿಕ ನೆರವು ನೀಡಿದರು. ಅತ್ಯಂತ ಕಡುಬಡತನದಲ್ಲಿರುವ ಹನುಮಂತರಾಯಪ್ಪನವರು ತೀವ್ರ ಸಂಕಷ್ಟದಲ್ಲಿದ್ದು, ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಲು ಕೂಡ ಆರ್ಥಿಕವಾಗಿ ಅಶಕ್ತರಾಗಿದ್ದಾರೆ. ಈ ಮಾಹಿತಿ ಪಡೆದ ನೇರಳೆ ಕುಂಟೆ ನಾಗೇಂದ್ರ ಕುಮಾರ್, ಹನುಮಂತರಾಯಪ್ಪ ಅವರಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದರು. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಬರದ ನಾಡಾದ ಮಧುಗಿರಿಯಲ್ಲಿ ಇಲ್ಲಿಯವರೆಗೂ ಅಧಿಕಾರ ನಡೆಸಿದ ಶಾಸಕರು ಕೋಟ್ಯಂತರ ಅನುದಾನ ತಂದು ನೂರಾರು ಚೆಕ್ ಡ್ಯಾಮ್ ಹಾಗೂ ಕೆರೆಗಳ ಅಭಿವೃದ್ಧಿ ಮಾಡಿ ರೈತರಿಗೆ ನೆರವಾಗುತ್ತಿದ್ದಾರೆ. ಆದರೆ ಇಲ್ಲೊಬ್ಬ  ಕಿಡಿಗೇಡಿ ಜೆಸಿಬಿ ಬಳಸಿ ರಸ್ತೆ ಹಾಗೂ ಕೆರೆಯ ಕೋಡಿ ಒಡೆದು ಹಾಕಿ ಕೆರೆಯ ನೀರನ್ನು ಪೋಲು ಮಾಡಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ತಾಲೂಕಿನ ದೊಡ್ಡೇರಿ ಹೋಬಳಿಯ ಸಿದ್ದರಾಗಲು ಬಳಿಯ ಕೆರೆಯು ನೂರಾರು ಎಕರೆ ಭೂಮಿಗೆ ನೀರು ನಿರುಣಿಸುತ್ತಿದ್ದು, ಅರಣ್ಯದ ಮಧ್ಯೆ ಇರುವ ಕಾರಣ ಸಾವಿರಾರು ಜೀವರಾಶಿಗಳಿಗೆ ನೀರಿನ ಆಸರೆಯಾಗಿತ್ತು. ಈ ಕೆರೆಯು ಕಳೆದ ವರ್ಷ ಸುರಿದ ಮಳೆಗೆ ತುಂಬಿತ್ತು, ಆದರೆ ಇದೀಗ ಈ ಕೆರೆಯ ಹಿಂಭಾಗದ ಜಮೀನಿನವರು ಕೆರೆಕೋಡಿಯನ್ನು ಒಡೆದು ಹಾಕಿ ನೀರು ಪೋಲಾಗುವಂತೆ ಮಾಡಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೃತ್ಯ ನಡೆಸಿದವರನ್ನು ತಕ್ಷಣವೇ ಪೊಲೀಸರು ಬಂಧಿಸಬೇಕು ಎಂದು ಇಲ್ಲಿನ ರೈತರು ಆಗ್ರಹಿಸಿದ್ದು, ಈ ಸಮಸ್ಯೆಯ ಪರಿಹಾರಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ವರದಿ: ಅಬಿದ್…

Read More

ಸರಗೂರು: ​ ತಾಲ್ಲೂಕು ರಾಷ್ಟ್ರೀಯ ಹಬ್ಬ ಸಮಿತಿ ವತಿಯಿಂದ  ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಶಿವಯೋಗಿ  ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಚಲುವರಾಜು,  ಶಿವಯೋಗಿ ಸಿದ್ದರಾಮೇಶ್ವರರವರು 12 ನೇ ಶತಮಾನದಲ್ಲಿ ಬಸವಣ್ಣರವರ ಕಾಲದಲ್ಲಿ ವಚನಕಾರವಾಗಿದ್ದರು ಎಂದು ಸಿದ್ದರಾಮೇಶ್ವರ ಇತಿಹಾಸವನ್ನು ವಿವರಿಸಿದರು. ಇದೇ ವೇಳೆ ತಾಲ್ಲೂಕು ಭೋವಿ ಸಮಾಜದ ಅಧ್ಯಕ್ಷ ನಾಗರಾಜು. ವಕೀಲರಾದ ಚೌಡಹಳ್ಳಿ ಜವರಯ್ಯ, ಶಿಕ್ಷಕರಾದ ಕೆ.ಸಿ.ಕೋಡಯ್ಯ, ಶಿವಯೋಗಿ ಸಿದ್ದರಾಮೇಶ್ವರ ಅವರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ನಾರಾಯಣ, ಕಾರ್ಯಾಧ್ಯಕ್ಷ ಬೋಜಯ್ಯ, ಪಟ್ಟಣ ಪಂಚಾಯಿತಿ ಸದಸ್ಯೆ ಹೇಮಾವತಿರಮೇಶ, ಮಹದೇವ, ಹನುಮಬೋವಿ, ಚಲುವರಾಜು, ವೀರಭದ್ರ ಸಿದ್ದಪುರ ವೆಂಕಟರಾಮ, ಶೀರಾದ್ದಾರ್ ಹರೀಶ್, ಗುರುರಾಜು, ರಾಜನಿರೀಕ್ಷಕರು ಮುಜೀಪ್, ರವಿಚಂದ್ರ ಹಾಗೂ ಭೋವಿ ಸಮುದಾಯ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ  ಜನಕ ಲೋಟಿ ಗ್ರಾಮದ ಹೊರಹೊಲಯದಲ್ಲಿ  ಜಿಂಕೆಗಳು ಪರಸ್ಪರ ಕಾಳಗ ನಡೆಸಿಕೊಂಡಿದ್ದು ಪರಿಣಾಮವಾಗಿ ಜಿಂಕೆಯ ಎಡಭಾಗದ ಕಾಲಿಗೆ ತೀವ್ರ ತರವಾದ ಪೆಟ್ಟು ಬಿದ್ದು ರಕ್ತ ಸ್ರಾವವಾಗಿತ್ತು.  ವಿಷಯ  ತಿಳಿದು ಸ್ಥಳಕ್ಕೆ ಆಗಮಿಸಿದ ಮುಖಂಡರಾದ ರಾಜಮೋಹನ್, ಜನಕ   ಲೋಟಿ   ಗ್ರಾಮದ ಲಕ್ಷ್ಮಿ ನಾರಾಯಣ್ , ಕೆ ಜಿ ಎನ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಜಲಾಲ್ ಭಾಷಾ, ಟ್ರಸ್ಟಿ ಗುಲಹಳ್ಳಿ ಗ್ರಾಮದ  ಶಹಜಹಾನ್ ಗಾಯಗೊಂಡಿದ್ದ  ಜಿಂಕೆಯನ್ನು ರಕ್ಷಿಸಿದ್ದಾರೆ . ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಜಲಾಲ್ ಭಾಷಾ ಮಾಧ್ಯಮದೊಂದಿಗೆ ಮಾತನಾಡಿ,  ಮನುಷ್ಯನ ನೆರವಿಲ್ಲದೆ ವಾಸ ಮಾಡುವ ವನ್ಯಜೀವಿಗಳ ಸಮೂಹ ಹಾಗೂ ಅವುಗಳ ಸಂಖ್ಯೆಯನ್ನು ಅವುಗಳ  ಅವಾಸ ಸ್ಥಾನದಲ್ಲಿಯೇ ಸಂರಕ್ಷಣೆ ಮಾಡುವುದು ನೈಜ  ಸಂರಕ್ಷಣೆಯಾಗಿದೆ ಎಂದು ತಿಳಿಸಿದರು. ವರದಿ: ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ತುರುವೇಕೆರೆ:  ತಾಲೂಕಿನ ಮಾಯಸಂದ್ರ ಹೋಬಳಿಯ ಚಿಕ್ಕಪುರ ಗೇಟ್ ಬಳಿ ಕಾರವೊಂದು ಮರಕ್ಕೆ ಡಿಕ್ಕಿ ಹೊಡೆದ ದುರ್ಘಟನೆ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 150 A ನಲ್ಲಿರುವ ಚಿಕ್ಕಪುರ ಗೇಟ್ ನ ಕೂಗಳತೆ ದೂರದಲ್ಲಿ ಇರುವ ಹುಣಸೆ ಮರಕ್ಕೆ ಮಾರುತಿ ಬ್ರೀಝ್ KA-44 M-8276  ನೋಂದಣಿ  ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂದಿನ ಭಾಗ ಪೂರ್ಣ ಜಖಂಗೊಂಡಿದ್ದು, ಈ ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ತಮ್ಮ ಗ್ರಾಮವಾದ ಮುತ್ತುಗದಹಳ್ಳಿ ಯಿಂದ ಚಿಕ್ಕಪುರ ಮಾರ್ಗದಲ್ಲಿ ಸಂಚರಿಸುವಾಗ ಈ ಘಟನೆ ನಡೆದಿದೆ. ಈ ಕಾರು ಮುತ್ತುಗದಹಳ್ಳಿ ಗ್ರಾಮ ಶಿಕ್ಷಣ ಇಲಾಖೆಯಲ್ಲಿ, ಬಿ.ಆರ್.ಸಿ. ಆಗಿರುವ ರಾಜು ಎಂಬವರಿಗೆ ಸೇರಿದ್ದಾಗಿದ್ದು, ಅಪಘಾತದ ಪರಿಣಾಮ ಚಾಲಕನ ತಲೆಗೆ ತೀವ್ರ ಗಾಯವಾಗಿದ್ದು,  ಗಾಯಾಳುವನ್ನು  ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಶ್ರೀ ಆದಿಚುಂಚನಗಿರಿ ವೈದ್ಯಕೀಯದ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಘಟನೆ ಸಂಬಂಧ  ತುರುವೇಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ:  ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ತಿಪಟೂರು : ಮನುಷ್ಯನು ರಾಗ, ದ್ವೇಷಗಳನ್ನು ಮರೆತು ಪರಸ್ಪರರ ಜೊತೆ ಪ್ರೀತಿ, ವಿಶ್ವಾಸದಿಂದ ಬೆರೆಯುತ್ತಾ ಜೀವನ ನಡೆಸಿದಾಗ ಮಾತ್ರ ಮಾನಸಿಕ ಹಾಗೂ ಆತ್ಮತೃಪ್ತಿಯು ದೊರಕುತ್ತದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಶ್ರೀಚೌಡೇಶ್ವರಿ ದೇವಿ ದೇವಾಲಯ ಆವರಣದಲ್ಲಿ ಮರಕ ಸಂಕ್ರಾಂತಿಯ ಅಂಗವಾಗಿ ಶ್ರೀಮಠ ಮತ್ತು ದಸರೀಘಟ್ಟ ಗ್ರಾಮಸ್ಥರು ಸಹಯೋಗದಲ್ಲಿ ಗೋವುಗಳಿಗೆ ಕಿಚ್ಚು ಹಾಯಿಸುವ ಕಾರ್ಯಕ್ರಮಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಆಶೀರ್ವಚನ ನೀಡಿದರು. ಮಾನವ ತನ್ನ ಜೀವನದಲ್ಲಿ ಹಣ, ಐಶ್ವರ್ಯದ ಸಂಪಾದನೆಗಾಗಿ ಹೆಚ್ಚು ಶ್ರಮಿಸುತ್ತಾನೆ. ಮಾನವೀಯ ಮೌಲ್ಯಗಳನ್ನು ಮರೆತು ತನ್ನ ಸುಖವೇ ಪರಮಸುಖವೆಂದು ಭಾವಿಸುತ್ತಾ ಪರಮಾತ್ಮನನ್ನು ಕಾಣುವ ಗೋಜಿಗೆ ಹೋಗದೇ ಸ್ವಾರ್ಥದಿಂದ ತನ್ನಪಾಡಿಗೆ ತಾನಿರುತ್ತಾನೆ. ಜೀವನದಲ್ಲಿ ಅಂತರಂಗದಲ್ಲಿರುವ ಪರಮಾತ್ಮನನ್ನು ಹುಡುಕದೇ ಎಲ್ಲೆಲ್ಲಿಗೋ ಹೋಗುತ್ತೇವೆ. ಆದರೆ ಪರಮಾತ್ಮ ನಮ್ಮಲ್ಲಿಯೇ ನೆಲೆಸಿರುತ್ತಾನೆ ಎಂಬುದು ತಿಳಿದೇ ಇರುವುದಿಲ್ಲ. ಮಾನವನ ಮನಸ್ಸಿನಲ್ಲಿ ಎಲ್ಲಾರೀತಿಯ ವಿಚಾರಗಳು ನೆಲೆಸಿದ್ದು ಉತ್ತಮ ವಿಚಾರಗಳನ್ನು…

Read More

ಮುಧೋಳ: ಇಂದು ಬೆಳ್ಳಂಬೆಳಗ್ಗೆ ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯು ಶಿರೋಳ ಕ್ರಾಸ್ ಬಳಿ ನಡೆದಿದ್ದು, ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ. ಸಿದ್ದರಾಯ ತೇಲಿ (36), ಬಾಲಪ್ಪ ಸಂಡಗಿ (34), ಹನಮಂತ ಗನಗಾರ (21), ರಿಯಾಜ ಜಾಲಗೇರ (25) ಮೃತ ದುರ್ದೈವಿಗಳು. ಇವರು ಜಮಖಂಡಿ ತಾಲೂಕಿನ ಗೋಠೆ ಗ್ರಾಮದವರೆಂದು ಹೇಳಲಾಗುತ್ತಿದೆ. ಇವರು ನ್ಯಾಯಲಯದ ವ್ಯಾಜ್ಯದ ನಿಮಿತ್ತ ಗೋಠಯಿಂದ ಧಾರವಾಡದ ಹೈಕೋರ್ಟ್ ಗೆ ತೆರಳುತ್ತಿದ್ದರು. ಈ ಸಮಯದಲ್ಲಿ ಬೆಳಗಾವಿಯಿಂದ ಕಲಬುರಗಿ ಮಾರ್ಗವಾಗಿ ತೆರಳುತಿದ್ದ ಬಸ್ ಒಂದು, ಕಬ್ಬಿನ ಟ್ರ್ಯಾಕ್ಟರ್ ಓವರ್ ಟೆಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮುಂಬೈ: 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಪ್ರಾಣ ಉಳಿಸಿದ ಮಹಿಳೆ. ಈ ಘಟನೆಯು ಪುಣೆಯಲ್ಲಿ ನಡೆದಿದ್ದು, ಬಸ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಸ್ ಓಡಿಸಿದ ಯೋಗಿತಾ ಸತಾವ್(42) ಇವರು ತಮ್ಮ ಮಕ್ಕಳು ಹಾಗೂ ಇತರೆ ಮಹಿಳೆಯರು ಮತ್ತು ಅವರ ಮಕ್ಕಳೊಂದಿಗೆ ಕೃಷಿ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳಿ ಬರುವಾಗ ಕಾಡಿನ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಮಿನಿಬಸ್ ನ ಚಾಲಕನಿಗೆ ಮೂರ್ಛೆ ರೋಗ ಬಂದಿದೆ.  ಆಗ ಬಸ್ ನ್ನು ಪಕ್ಕಕ್ಕೆ ನಿಲ್ಲಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದರಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಭಯಭೀತರಾಗಿದ್ದರು. ಈ  ಸಮಯದಲ್ಲಿ ಯೋಗಿತಾ ಸಾತಾವ್ ಅವರು ಜೊತೆ ಇದ್ದ ಪ್ರಯಾಣಿಕರಿಗೆ ಧೈರ್ಯ ತುಂಬಿ ತಾವೇ 10 ಕಿ.ಮೀ. ವರೆಗೆ ಬಸ್ ಚಲಾಯಿಸಿಕೊಂಡು ಹೋಗಿ ಸಮೀಪದ ಆಸ್ಪತ್ರಗೆ ಚಾಲಕನನ್ನು ದಾಖಲಿಸಿ, ಆತನ ಪ್ರಾಣ ಕಾಪಾಡಿದ್ದಾರೆ. ಹಾಗೇ ಪ್ರಯಾಣಿಕರನ್ನು ಅವರ ಮನೆಗೆ ಬಿಟ್ಟಿದ್ದಾರೆ. ಇವರ ಧೈರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More