Subscribe to Updates
Get the latest creative news from FooBar about art, design and business.
- ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
- ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
- ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
- ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
- ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
- ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
- ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
- ತುರುವೇಕೆರೆ: ಚಿರತೆ ಸಿಕ್ಕರೂ ಗ್ರಾಮಸ್ಥರಲ್ಲಿ ದೂರವಾಗದ ಆತಂಕ
Author: admin
ತುಮಕೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ನಿರುದ್ಯೋಗಿ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸ್ವಯಂ ಉದ್ಯೋಗಗಳಲ್ಲಿ ತೊಡಗಿಕೊಳ್ಳಲು ಅನುಕೂಲವಾಗುವಂತೆ ಉದ್ಯೋಗಿನಿ, ಧನಶ್ರೀ, ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಆರ್ಥಿಕ ನೆರವು ನೀಡಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ 18-55 ವಯೋಮಿತಿಯೊಳಗಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಟ 3 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುವುದು. ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ಅಂಗವಿಕಲರು ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗರಿಷ್ಠ 90,000 ರೂ. ಅಥವಾ ಶೇ.30ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗರಿಷ್ಠ 1,50,000 ರೂ. ಅಥವಾ ಶೇ.50ರಷ್ಟು ಸಹಾಯಧನವನ್ನು ನೀಡಲಾಗುವುದು. ಧನಶ್ರೀ, ಚೇತನ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ 18–60 ವಯೋಮಿತಿಯೊಳಗಿರುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು…
ತುಮಕೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಹಾರ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸೌಮ್ಯ ತಿಳಿಸಿದ್ದಾರೆ. ಆಹಾರ ಅದಾಲತ್ ಕಾರ್ಯಕ್ರಮವು ಡಿಸೆಂಬರ್ 8ರಂದು ಗುಬ್ಬಿ ತಾಲ್ಲೂಕು ಕಸಬಾ ಹೋಬಳಿ ಜಿ. ಹೊಸಹಳ್ಳಿ, ಡಿಸೆಂಬರ್ 10ರಂದು ತುಮಕೂರು ನಗರದ ದಿಟ್ಟೂರು, ಡಿಸೆಂಬರ್ 12ರಂದು ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿ ಕೆರೆ ಹೋಬಳಿ ಸಿದ್ದರಾಮನಗರ, ಡಿಸೆಂಬರ್ 15ರಂದು ತಿಪಟೂರು ತಾಲ್ಲೂಕು ನೊಣವಿನಕೆರೆ ಹೋಬಳಿ ಬಜಗೂರು ಗ್ರಾಮ, ಡಿಸೆಂಬರ್ 17ರಂದು ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಚಿಕ್ಕನಹಳ್ಳಿ, ಡಿಸೆಂಬರ್ 18ರಂದು ಮಧುಗಿರಿ ತಾಲ್ಲೂಕು ಐ.ಡಿ.ಹಳ್ಳಿ ಹೋಬಳಿ ದೊಡ್ಡದಾಳವಟ್ಟ ಡಿಸೆಂಬರ್ 20ರಂದು ತುಮಕೂರು ಗ್ರಾಮಾಂತರ ಕಸಬಾ ಹೋಬಳಿ ಊರುಕೆರೆ, ಡಿಸೆಂಬರ್ 22ರಂದು ತುರುವೇಕೆರೆ ಪಟ್ಟಣದ ಲಯನ್ಸ್ ಕ್ಲಬ್, ಡಿಸೆಂಬರ್ 24ರಂದು ಪಾವಗಡ ತಾಲ್ಲೂಕು ನಿಡಗಲ್ಲು ಹೋಬಳಿ ಮಂಗಳವಾಡ, ಡಿಸೆಂಬರ್ 29ರಂದು ಕುಣಿಗಲ್ ತಾಲ್ಲೂಕು ಕೊತ್ತಗೆರೆ ಹೋಬಳಿ ಭಕ್ತರಹಳ್ಳಿ ಹಾಗೂ ಡಿಸೆಂಬರ್ 31ರಂದು ಕೊರಟಗೆರೆ ತಾಲ್ಲೂಕಿನ…
ತುಮಕೂರು: ತುಮಕೂರು ನಗರದಲ್ಲಿ 26 ಹಾಗೂ ಮಧುಗಿರಿ ಪಟ್ಟಣದಲ್ಲಿ 7 ಸೇರಿದಂತೆ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 7ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ 7,340 ಹಾಗೂ ಮಧುಗಿರಿಯಲ್ಲಿ 1,840 ಸೇರಿದಂತೆ ಒಟ್ಟು 9,180 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಪೂರ್ವ ಸಿದ್ಧತೆಗಳನ್ನು ಕೈಗೊಂಡು ಯಾವುದೇ ಅಡೆತಡೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ಪರೀಕ್ಷಾ ಅಕ್ರಮವನ್ನು ತಡೆಯುವ ದೃಷ್ಟಿಯಿಂದ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವಾಗಿಸಿ, ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪರೀಕ್ಷಾ ಗೌಪ್ಯ ಸಾಮಗ್ರಿಗಳ ಸುರಕ್ಷಿತ ನಿರ್ವಹಣೆ, ಪೊಲೀಸ್ ಭದ್ರತೆ, ಮೂಲಸೌಕರ್ಯಗಳ…
ಚಿಕ್ಕಮಗಳೂರು: ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ ರಾತ್ರಿ 10:30ರ ವೇಳೆ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾರ್ ಬಳಿ ಗಲಾಟೆ ನಡೆದ ಅರ್ಧ ಗಂಟೆ ನಂತರ ಮಠದ ಬಳಿ ಮತ್ತೆ ಗಲಾಟೆ ನಡೆದಿದೆ. ಈ ಗಲಾಟೆ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್ ಮೇಲೆ ಹಲ್ಲೆ ನಡೆದು ಹತ್ಯೆ ಮಾಡಲಾಗಿದೆ. ಗಣೇಶ್ ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು,…
ತುಮಕೂರು: ವೈಯಕ್ತಿಕ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಗುಬ್ಬಿತಾಲ್ಲೂಕು ಕೆ.ಅರಿವೆಸಂದ್ರ ಗ್ರಾಮದ ಮಂಜುಳ ಎಂಬವರನ್ನು ಮಧು ಎಂಬಾತ ಹತ್ಯೆ ಮಾಡಿ ಪರಾರಿಯಾಗಿದ್ದ. ಮೃತ ಮಂಜುಳ ಅವರ ಮಗ ಶ್ರೀ ನಿವಾಸ್ ಎಂಬುವರು ಸಿ.ಎಸ್.ಪುರ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು. ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಲಂ 103 (1) ಅನ್ವಯ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಗುಬ್ಬಿ ಸಿಪಿಐ ರಾಘವೇಂದ್ರ ಟಿ.ಆರ್., ಪಿ.ಎಸ್ಐ ಧರ್ಮಾಂಜಿ, ಸಿಬ್ಬಂದಿಗಳಾದ ರಾಜು, ತ್ಯಾಗರಾಜು, ನವೀನ್ ಕುಮಾರ್, ವಿಜಯಕುಮಾರ್, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ನರಸಿಂಹರಾಜು, ಜಗದೀಶ್ ಮತ್ತು ತಂಡ ಕಾರ್ಯಪ್ರವೃತ್ತರಾಗಿ ಪ್ರಕರಣದ ಆರೋಪಿ ಮಧು ಎಂಬಾತನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಸರಗೂರು: ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಆವರಣದಲ್ಲಿ ಶನಿವಾರದಂದು ತಾಲೂಕು ಆಡಳಿತ ತಾಲೂಕು ಪಂಚಾಯಿತಿ ಪಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋ ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು. ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು. ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ…
ತುಮಕೂರು: ಸೃಜನ ವೇದಿಕೆ ತುಮಕೂರು, ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು, ದಿ. ಶ್ರೀ ಮತಿ ಲತಾ ಜಿ.ಕುಲಕರ್ಣಿ ಸಾಂಸ್ಕೃತಿಕ ವೇದಿಕೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 7ರಂದು ಮಧ್ಯಾಹ್ನ 3 ಗಂಟೆಗೆ ಕನ್ನಡ ಭವನದಲ್ಲಿ ವಿದ್ಯಾವಾಚಸ್ಪತಿ ದಿ.ಡಾ.ಕವಿತಾಕೃಷ್ಣ ಸ್ಮರಣಾರ್ಥ ಕನ್ನಡ ಗೀತೆಗಳ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಜಾಪ್ರಗತಿ ಸಂಪಾದಕ ಡಾ.ಎಸ್.ನಾಗಣ್ಣ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಆಗಮಿಸಲಿದ್ದಾರೆ. ಸೃಜನ ವೇದಿಕೆ ಅಧ್ಯಕ್ಷರಾದ ಸುಶೀಲಾ ಸದಾಶಿವಯ್ಯ ಆಶಯ ನುಡಿಗಳನ್ನಾಡುವರು. ಅತಿಥಿಗಳಾಗಿ ಜಿ.ಕೆ.ಕುಲಕರ್ಣಿ, ಡಾ.ಎಸ್.ನಟರಾಜ್, ಡಾ.ಕೆ.ಬಿ.ಭರತ್ ರಾಜ್, ಗಣಪತಿ ಹೆಗಡೆ, ಅಬ್ಬಿನಹೊಳೆ ಸುರೇಶ್ ಅವರುಗಳು ಆಗಮಿಸುವರು. ಗೀತ ಗಾಯನದಲ್ಲಿ ಮುದ್ದೇನಹಳ್ಳಿ ನಂಜಯ್ಯ, ವಿದ್ವಾನ್ ಎಂ.ಜಿ.ಸಿದ್ದರಾಮಯ್ಯ, ಡಾ.ಎಸ್.ಪಿ.ಪದ್ಮಪ್ರಸಾದ್, ಜಿ.ಕೆ.ಕುಲಕರ್ಣಿ, ಬಾ.ಪು. ಜಯದೇವಯ್ಯ, ಗಣಪತಿ ಹೆಗಡೆ, ಬಾ.ಹ. ರಮಾಕುಮಾರಿ, ಡಾ.ಬಿ.ಸಿ.ಶೈಲಾನಾಗರಾಜ್, ಸಿ.ಎನ್.ಗುಣಾದೇವಿ, ಡಾ.ಕೆ.ಬಿ. ಭರತ್ರಾಜ್, ಡಾ.ಗಂಗಾಧರ ಕೊಡ್ಡಿಯವರ, ಡಾ.ಪ್ರಕಾಶ್ ನಾಡಿಗ್, ಕಮಲಾ ಬಡ್ಡಿಹಳ್ಳಿ, ವಿ.ಪಿ.ಕೃಷ್ಣಮೂರ್ತಿ, ಡಾ.ಕೆ.ಬಿ. ರಂಗಸ್ವಾಮಿ, ಕಮಲಾ ರಾಜೇಶ್, ಕೃಷ್ಣಾಬಾಯಿ ಹಾಗಲವಾಡಿ, ಅಬ್ಬಿನಹೊಳೆ…
ತುಮಕೂರು: ನಗರದ ಅಮಾನಿಕೆರೆ ಅಂಗಳದಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ರೋಪ್ ವೇನಲ್ಲಿ ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಜಾರಿ, ಗಾಳಿಯಲ್ಲಿ ತೇಲಿ ಸಂಭ್ರಮಿಸಿದರು. ದಿನನಿತ್ಯ ಇಲ್ಲಿಗೆ ವಾಯುವಿಹಾರ ಮಾಡಲು ಬರುವ ಶಾಸಕರು ಶುಕ್ರವಾರ ಬೆಳಿಗ್ಗೆ ರೋಪ್ ವೇ ಬಳಸಿದರು. ಅಮಾನಿಕೆರೆ ಅಂಗಳ ನಗರದ ಪ್ರಮುಖ ಮನರಂಜನಾ ತಾಣವಾಗಿದೆ. ಸುಮಾರು 500 ಎಕರೆ ವಿಸ್ತೀರ್ಣದ ಜಲಭರ್ತಿ ಕೆರೆ ಅಂಗಳದಲ್ಲಿ ಗಿಡಮರಗಳ ಹಸಿರುವನ, ಅಂಕಾರಿಕ ಹೂವಿನ ಗಿಡಗಳು ಗಮನ ಸೆಳೆಯುತ್ತದೆ. ವಾಯು ವಿಹಾರ ಮಾಡುವವರಿಗೆ ಈ ಸ್ಥಳ ಪ್ರಶಸ್ತವಾಗಿದೆ ಎಂದು ಸುರೇಶ್ ಗೌಡರು ಹೇಳಿದರು. ಅಮಾನಿಕೆರೆಯಲ್ಲಿ ಫುಡ್ ಪಾರ್ಕ್, ದೋಣಿ ವಿಹಾರ, ಮಕ್ಕಳ ಆಟದ ಪರಿಕರಗಳ ಜೊತೆಗೆ ಈಗ ನಗರಾಭಿವೃದ್ಧಿ ಪ್ರಾಧಿಕಾರ ರೋಪ್ ವೇ ಸಿದ್ಧಪಡಿಸಿದ್ದು, ಶೀಘ್ರವೇ ಸಾರ್ವಜನಿಕರ ಬಳಕೆಗೆ ಉದ್ಘಾಟನೆಯಾಗಲಿದೆ. ಅಮಾನಿಕೆರೆ ಆವರಣ ಆಕರ್ಷಣೀಯ ತಾಣವಾಗಿ ಎಲ್ಲರನ್ನೂ ಸೆಳೆಯುತ್ತದೆ. ಇಂದಿನ ಒತ್ತಡದ ಬದುಕಿನಲ್ಲಿ ಬಳಲುತ್ತಿರುವವರಿಗೆ ಅಮಾನಿಕೆರೆ ಅಂಗಳ ಮನೋಲ್ಲಾಸ ತಾಣವಾಗಲಿದೆ. ವಾರಾಂತ್ಯದಲ್ಲಿ ಕುಟುಂಬ ಸಮೇತರಾಗಿ ಇಲ್ಲಿಗೆ ಬಂದು ಆನಂದಪಡಬಹುದು ಎಂದರು. ಸ್ಮಾರ್ಟ್ ಸಿಟಿ ಯೋಜನೆಯಡಿ…
ಕೊರಟಗೆರೆ: ತಾಲ್ಲೂಕಿನ ಹಂಚಿಹಳ್ಳಿ ಗ್ರಾಮ ಪಂಚಾಯಿತಿಗೆ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ ಖರ್ಗೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದರು. ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಬಳಿಕ ಗ್ರಾ.ಪಂ ಅಧ್ಯಕ್ಷ ಎಂ.ಎಸ್.ಭೀಮರಾಜು ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳ ಸದಸ್ಯರುಗಳನ್ನು ವಿಶ್ವಾಸಕ್ಕೆ ಪಡೆದು ಪ್ರತೀ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಜೊತೆಗೆ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿ ಶುದ್ದ ಕುಡಿಯುವ ನೀರನ್ನು ಒದಗಿಸಿದ್ದೇವೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಇದರಿಂದಾಗಿ ಇಂದು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಲು ಕಾರಣವಾಗಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲ ಸದಸ್ಯರು ಮತ್ತು ಅಧಿಕಾರಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಮಾತನಾಡಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತಹ ಎಲ್ಲ ಗ್ರಾಮಗಳ ಅಭಿವೃದ್ಧಿ ಮತ್ತು ಆಗತ್ಯ…
ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಗುರುವಾರ ಬೆಳಗ್ಗೆಯೇ ತಾಲ್ಲೂಕು ಕಚೇರಿಗೆ ಬಂದಿಳಿದ ಲೋಕಾಯುಕ್ತ ಪೊಲೀಸರು ಸುಳ್ಳು ದಾಖಲೆ ಸೃಷ್ಟಿಸಿರುವ ಕುರಿತು ತಾಲ್ಲೂಕು ಕಚೇರಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸಂಬಂಧಿಸಿದ ಭೂಮಿಗಳ ದಾಖಲೆ ಪರಿಶೀಲಿಸಿದರು. ತಾಲ್ಲೂಕಿನ ನರಿಗೇಹಳ್ಳಿ, ಲೆಂಕನಹಳ್ಳಿ, ದೇವನಾಯಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿದ್ದ ಸರ್ಕಾರಿ ಭೂಮಿಯನ್ನು ಕೆಲವು ಅಧಿಕಾರಿಗಳು, ಮಧ್ಯವರ್ತಿಗಳು ಸೇರಿದಂತೆ ಹಲವರು ಲಕ್ಷಾಂತರ ಹಣ ಪಡೆದು ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ನಕಲಿ ದಾಖಲೆಗಳನ್ನು 2018–19ರಲ್ಲಿ ಸೃಷ್ಟಿಸಲಾಗಿದೆ. 1995ರಲ್ಲೇ ಈ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ನಕಲಿ ಪತ್ರವನ್ನೂ ಸಹ ಸೃಷ್ಟಿಸಿ ಪರಭಾರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಹಲವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ತಹಶೀಲ್ದಾರ್ ಆಗಿದ್ದ ನಾಗರಾಜ್, ಸಿಬ್ಬಂದಿ ಕಲ್ಲೇಶ್…