Author: admin

ತುಮಕೂರು: ಕೇಂದ್ರದವರು 3 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದಾರೆ. ನೀರು ಹಾಕಿ ಬಸ್ ಚಲಾಯಿಸಲು ಆಗುತ್ತಾ. ಹಾಗಾಗಿ 100% ಬಸ್ ದರ ಏರಿಕೆ ಮಾಡಲೇಬೇಕು. ಎಂದು ಗುಬ್ಬಿ ಶಾಸಕ ಹಾಗೂ ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಿಳಿಸಿದರು. ಶನಿವಾರ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಮೋದಿ ಮೋದಿ ಅಂತಾ ಸಾಯ್ತಾರೆ. ತೈಲ ಬೆಲೆ ನಿಯಂತ್ರಣದ ಬಗ್ಗೆ ಈ ದೇಶ ಉದ್ಧಾರ ಮಾಡೋ ವ್ಯಕ್ತಿ ಮೋದಿ ಅವರನ್ನೇ ಕೇಳಲಿ. ಸಾರಿಗೆ ನಿಗಮಗಳ ನೌಕರರಿಗೆ 1260 ಕೋಟಿ ಅರಿಯರ್ಸ್ ನೀಡುತ್ತಿದ್ದೇವೆ. ಈಗಾಗಲೇ ಕೆಎಸ್ ಆರ್ ಟಿಸಿ ಲಾಸ್ ನಲ್ಲಿದೆ. ದರ ಏರಿಕೆ ಅನಿವಾರ್ಯ ಎಂದು ಸಮರ್ಥಿಸಿಕೊಂಡರು. ಬೆಂಗಳೂರಿನಿಂದ–ತುಮಕೂರುವರೆಗೆ ಮೆಟ್ರೋ ಮಾಡಲಿ ತುಂಬ ಒಳ್ಳೆಯದು.. ನಾನು ಅದನ್ನು ಸ್ವಾಗತಿಸುತ್ತೇನೆ. ಆದರೆ ತುಮಕೂರನ್ನು ಬೆಂಗಳೂರು ಉತ್ತರಕ್ಕೆ ಸೇರಿಸುವುದನ್ನು ಒಪ್ಪೋದಿಲ್ಲ. ಹೆಸರು ಬದಲಾವಣೆ ಮಾಡಲ್ಲ ಅಂದರೆ ಸೇರ್ಪಡೆ ಹೆಂಗೆ ಬರುತ್ತೆ. ಈ ಬಗ್ಗೆ ಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಇಡೀ ತುಮಕೂರು ಜಿಲ್ಲೆಯ…

Read More

ಮಧುಗಿರಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನಪರವಾದ ಯೋಜನೆಗಳನ್ನು ಜಾರಿ ಮಾಡುತ್ತಿರುವುದು ಮತ ಗಳಿಕೆಗೆ ಅಲ್ಲ, ಬಡ ಜನರ ಏಳಿಗೆಗಾಗಿ ಎಂದು ಮಾಜಿ ಸಚಿವ, ಶಾಸಕರಾದ ಕೆ.ಎನ್. ರಾಜಣ್ಣ ತಿಳಿಸಿದರು. ಅವರು ಮಿಡಿಗೇಶಿ ಹೋಬಳಿಯ ಬ್ರಹ್ಮದೇವರಹಳ್ಳಿ (ಕತ್ತಿರಾಜನಹಳ್ಳಿ) ಗ್ರಾಮದಲ್ಲಿ ಶನಿವಾರ ಕೆಪಿಟಿಸಿಎಲ್ ವತಿಯಿಂದ ಹಮ್ಮಿಕೊಂಡಿದ್ದ 25 ಕೋಟಿ ರೂ. ವೆಚ್ಚದ 66/11 ಕೆ.ವಿ ವಿದ್ಯುತ್ ಉಪಸ್ಥಾವರ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮೀಣ ಭಾಗದ ರೈತರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕೆ 24X7 ನಿರಂತರ ವಿದ್ಯುತ್ ನೀಡಲು ವಿದ್ಯುತ್ ಉಪಸ್ಥಾವರ ಪ್ರಾರಂಭಿಸಲಾಗುತ್ತಿದೆ. ಈಗಾಗಲೇ ಗರಣಿ ಗ್ರಾಮದಲ್ಲಿ ವಿದ್ಯುತ್ ಉಪಸ್ಥಾವರ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿದೆ. ಈ ಹಿಂದೆ ನಾನು ಬೆಳ್ಳಾವಿ ಶಾಸಕನಾಗಿದ್ದಾಗ 5 ಕೋಟಿ ರೂ. ವೆಚ್ಚದಲ್ಲಿ ಪುಲುಮಘಟ್ಟ ಗ್ರಾಮದಲ್ಲಿ ವಿದ್ಯುತ್ ಉಪಸ್ಥಾವರ ನಿರ್ಮಿಸಲಾಗಿತ್ತು. ಈಗ ಈ ಭಾಗದ ಹಳ್ಳಿಗಳ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಸ್ಥಳ ಗುರುತಿಸಿ ಅದನ್ನು ಕೆ.ಪಿ.ಟಿ.ಸಿ.ಎಲ್ ಗೆ ಹಸ್ತಾಂತರಿಸಿ 25 ಕೋಟಿ ರೂ.…

Read More

ಪಾವಗಡ: ಪಟ್ಟಣದ ಹೊರವಲಯದ ಶಿರಾ ರಸ್ತೆ, ಕುರುಬರಹಳ್ಳಿ ಗೇಟ್ ಬಳಿ ಇರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಇದೇ ಬರುವ ಮೇ 29, 2026ರ ಶುಕ್ರವಾರ ಬೆಳಿಗ್ಗೆ 10:00 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಿವಾನಂದಯ್ಯ ಎನ್.ಸಿ. ಹಾಗೂ ನಿಕಟಪೂರ್ವ ಪ್ರಾಂಶುಪಾಲರಾದ ಪ್ರೊ. ಮಾರಪ್ಪ ಕೆ.ಬಿ. ಅವರಿಗೆ ಕಾಲೇಜಿನ ವತಿಯಿಂದ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಈ ಸಮಾರಂಭದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಹಾಗೂ ಹಳೆಯ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು, ಹಿತೈಷಿಗಳು ಮತ್ತು ಶಿಕ್ಷಣ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾಲೇಜು ಆಡಳಿತ ಮಂಡಳಿ ಕೋರಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ಒಟ್ಟು 100 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಭಾರತದ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 943 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ಅನ್ನು ನಿರ್ಮಿಸಲಾಗುತ್ತಿದ್ದು, ಕ್ರೀಡಾಂಗಣದ ಮುಖ್ಯ ಆವರಣವು 80 ಎಕರೆ ಜಾಗದಲ್ಲಿ ತಲೆಯೆತ್ತಲಿದೆ. ಈ ಬೃಹತ್ ಕ್ರೀಡಾಂಗಣವು ಏಕಕಾಲಕ್ಕೆ 80,000 ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯ ಹೊಂದಿರಲಿದ್ದು, ಮುಂದಿನ 2 ರಿಂದ 3 ವರ್ಷಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಹೈಟೆಕ್ ಸ್ಟೇಡಿಯಂ ಆವರಣದಲ್ಲಿ 500ಕ್ಕೂ ಹೆಚ್ಚು ವಾಹನಗಳ ನಿಲುಗಡೆಗೆ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮತ್ತು ಚಿಲ್ಲರೆ ವ್ಯಾಪಾರ ಮಳಿಗೆಗಳು, ಆಟಗಾರರು ಮತ್ತು ಸಿಬ್ಬಂದಿಗಾಗಿ ಅತ್ಯಾಧುನಿಕ ವಸತಿ ಗೃಹಗಳು, ಹೆಲಿಪ್ಯಾಡ್ ಹಾಗೂ ಸುತ್ತಲೂ ಆಕರ್ಷಕ ಹಸಿರು ವಲಯವನ್ನು (Green Zone) ನಿರ್ಮಿಸಲು ಯೋಜನೆಯಲ್ಲಿ ಚಾಲನೆ…

Read More

ಶಿವಮೊಗ್ಗ: ರಾಜ್ಯದಲ್ಲಿ ಈ ಬಾರಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುವುದು. ಈ ಶೈಕ್ಷಣಿಕ ವರ್ಷದಲ್ಲಿ ಒಟ್ಟು 52 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಶಿವಮೊಗ್ಗದ ಅಲ್ಲಮಪ್ರಭು ಮೈದಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಅಧಿಕೃತವಾಗಿ ಶಾಲಾ ಆರಂಭಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ರಾಜ್ಯಾದ್ಯಂತ 1,000 ಕೆಪಿಎಸ್ ಶಾಲೆಗಳ ನಿರ್ಮಾಣ: ಮುಖ್ಯಮಂತ್ರಿಗಳು ಶಿವಮೊಗ್ಗದಲ್ಲಿ 19 ಶಾಲೆಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 1,000 ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಾಗಿ ಪ್ರತೀ ಶಾಲೆಗೆ ಕನಿಷ್ಠ 3.5 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಪರಿಕಲ್ಪನೆ ಈಗ ದೇಶದಲ್ಲೇ ಅತ್ಯಂತ ಯಶಸ್ವಿ ಹಾಗೂ ಮಾದರಿ ಯೋಜನೆಯಾಗಿ ಹೊರಹೊಮ್ಮಿದೆ. ಇದೇ ಮಾದರಿಯನ್ನು…

Read More

ಬೀದರ್: ಜಿಲ್ಲಾ ಸರ್ಕಾರಿ ಆಸ್ಪತ್ರೆಯಾದ ಬ್ರಿಮ್ಸ್‌ನಲ್ಲಿ (ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗುರುವಾರ ತಡರಾತ್ರಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣದ ಕಾರ್ಯಾಚರಣೆ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆದಿತ್ಯ ತಜಲಾಪುರ, ವಿನೋದ್ ಚಾಂಬೋಲ್, ಗೋವಿಂದ್ ಬೆನಕನಳ್ಳಿ, ಅನಿಲ್ ಬೆನಕನಳ್ಳಿ, ಮಹಾದೇವ ಬೆನಕನಳ್ಳಿ, ಬಾಲಾಜಿ ತಜಲಾಪುರ ಹಾಗೂ ಪವನ್ ಚಾಂಬೋಲ್ ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ: ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ವಿಜಯ್ ಸಿಂಗ್ ತುಕಾರಾಂ ಎಂಬಾತ ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದನು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ವಿಜಯ್‌ನ ಸಂಬಂಧಿಕರು ಮತ್ತು ಪರಿಚಯಸ್ಥರ ಗುಂಪು, ಮೆಡಿಕೋ ಲೀಗಲ್ ಸರ್ಟಿಫಿಕೇಟ್ (MLC) ವಿಚಾರವಾಗಿ ಕರ್ತವ್ಯದಲ್ಲಿದ್ದ ವೈದ್ಯ ಡಾ. ತುಕಾರಾಂ ಮಾಚಿಂದ್ರ ಅವರೊಂದಿಗೆ ಗಲಾಟೆ ತೆಗೆದಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ, ಗುಂಪು ವೈದ್ಯರ ಮೇಲೆ ತೀವ್ರವಾಗಿ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ನಡೆಸಿದೆ. ಅಲ್ಲದೆ, “ರೋಗಿಗೆ ಸರಿಯಾಗಿ ಚಿಕಿತ್ಸೆ…

Read More

ತುಮಕೂರು: ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯನ್ನು ‘ತುಮಕೂರು (ಬೆಂಗಳೂರು ಉತ್ತರ)’ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ಅಸೋಸಿಯೇಷನ್‌ (KASSIA) ಹಮ್ಮಿಕೊಂಡಿದ್ದ ದಕ್ಷಿಣ ಭಾರತ ಮಟ್ಟದ ಎಂಎಸ್‌ಎಂಇ ಸಮಾವೇಶ ಹಾಗೂ ಕೈಗಾರಿಕಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಸರು ಬದಲಾವಣೆಗೆ ಕಾರಣವೇನು? ಅಮೆರಿಕಾ, ಇಂಗ್ಲೆಂಡ್‌ ಸೇರಿದಂತೆ ಜಾಗತಿಕ ಮಟ್ಟದ ವಿದೇಶಿ ಕೈಗಾರಿಕೋದ್ಯಮಿಗಳಿಗೆ ‘ಬೆಂಗಳೂರು ಉತ್ತರ’ ಎಂಬ ಹೆಸರು ತುಮಕೂರಿಗಿಂತ ಹೆಚ್ಚು ಪರಿಚಿತ ಹಾಗೂ ಆಕರ್ಷಕವಾಗಿ ಕಾಣುತ್ತದೆ. ಈ ಹೆಸರಿನಿಂದಾಗಿ ಅವರು ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ಹೂಡಿಕೆ ಮಾಡಲು ಹೆಚ್ಚಿನ ಆಸಕ್ತಿ ತೋರಿಸುತ್ತಾರೆ ಎಂದು ಪರಮೇಶ್ವರ್ ಅಭಿಪ್ರಾಯಪಟ್ಟರು. “ನಾನು ಇಲ್ಲೇ ಹುಟ್ಟಿ ಬೆಳೆದವನು. ಜಿಲ್ಲೆಯ ಹೆಸರನ್ನು ಸಂಪೂರ್ಣವಾಗಿ ಬದಲಾಯಿಸಿ ಅದರ ಗುರುತಿಗೆ ಧಕ್ಕೆ ತರುವುದಿಲ್ಲ. ಬದಲಿಗೆ, ತುಮಕೂರನ್ನು ಬೆಂಗಳೂರಿನ ಭಾಗವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಕ್ರಮ…

Read More

ಬೆಂಗಳೂರು: ಬಹುದಿನಗಳ ಕನಸಿನ ಯೋಜನೆಯಾದ ಮಾದಾವರ-ತುಮಕೂರು ಮೆಟ್ರೋ (Madavara – Tumakuru Metro) ರೈಲು ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸವಿಸ್ತಾರ ಯೋಜನಾ ವರದಿ (DPR) ಸಲ್ಲಿಕೆಯಾಗಿದೆ. ವಿಧಾನಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಡಿಪಿಆರ್ ವರದಿಯನ್ನು ಅಧಿಕೃತವಾಗಿ ಸ್ವೀಕರಿಸಿದ್ದಾರೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಈ ಡಿಪಿಆರ್ ಅನ್ನು ಸಿದ್ಧಪಡಿಸಿದೆ. 20 ಸಾವಿರ ಕೋಟಿ ರೂ. ವೆಚ್ಚದ ಯೋಜನೆ: ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, “ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಬಹಳ ದಿನಗಳಿಂದ ಪ್ರಯತ್ನಗಳು ನಡೆಯುತ್ತಿದ್ದವು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಫೀಸಿಬಿಲಿಟಿ (ಸಾಧ್ಯತಾ) ಅಧ್ಯಯನ ಮಾಡುವುದಾಗಿ ಘೋಷಿಸಿದ್ದರು. ಅದರಂತೆ ಹೈದರಾಬಾದ್ ಮೂಲದ ಸಂಸ್ಥೆಯೊಂದಕ್ಕೆ 3.5 ಕೋಟಿ ರೂ. ವೆಚ್ಚ ಮಾಡಿ ಅಧ್ಯಯನ ನಡೆಸಲು ಜವಾಬ್ದಾರಿ ನೀಡಲಾಗಿತ್ತು. ಆ ವರದಿಯಲ್ಲಿ ಮಾದಾವರದಿಂದ ತುಮಕೂರಿಗೆ ಮೆಟ್ರೋ ಯೋಜನೆ ಕೈಗೆತ್ತಿಕೊಳ್ಳುವುದು ಸೂಕ್ತ ಮತ್ತು ಸಾಧ್ಯ ಎಂದು ತಿಳಿಸಲಾಗಿತ್ತು,”…

Read More

ತಿಪಟೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡದಿದ್ದರೆ, ಅಂತಹವರ ಹುದ್ದೆಯಿಂದ ನಿರ್ಗಮಿಸಬಹುದು ಇಲ್ಲವಾದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ. ಷಡಕ್ಷರಿ ಎಚ್ಚರಿಕೆ ನೀಡಿದರು. ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಬಲಪಡಿಸಬೇಕು. ಶೀಘ್ರದಲ್ಲೇ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷದ ಚಿಹ್ನೆ ಬರಬಹುದಾದ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಕಾರ್ಯಕರ್ತರನ್ನು ಸನ್ನದ್ಧಗೊಳಿಸಬೇಕು. ಯಾರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಿಲ್ಲವೋ ಅವರು ರಾಜೀನಾಮೆ ನೀಡಿ, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ತಾಲ್ಲೂಕಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನನ್ನೊಂದಿಗೆ ಚರ್ಚಿಸಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಅಭಿವೃದ್ಧಿ…

Read More

ತುಮಕೂರು: ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿ ತಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರ ನಡೆಸಿದ್ದಾರೆ ಎಂದು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಖಂಡ ಬಿ.ಎಸ್.ನಾಗರಾಜು ಆರೋಪಿಸಿದರು. ಶುಕ್ರವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಮ್ಮ ಕಾರು ಚಾಲಕ, ಆಪ್ತ ಸಹಾಯಕರಾಗಿದ್ದು, ಈಗ ತಮ್ಮನ್ನು ಬಿಟ್ಟುಹೋಗಿರುವವರನ್ನು ಜೊತೆಯಾಗಿಸಿಕೊಂಡು ನನ್ನ ದೌರ್ಬಲ್ಯಗಳನ್ನು ಸಂಗ್ರಹಿಸಿ ತಮ್ಮ ತೇಜೋವಧೆ ಮಾಡುವ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಮಗನ ಈ ದುಷ್ಕೃತ್ಯದಲ್ಲಿ ತಂದೆ ಶಾಸಕ ಶ್ರೀನಿವಾಸ್ ಕೈವಾಡವಿದೆ ಎಂದು ದೂರಿದರು. ವೈಚಾರಿಕತೆಯ, ಆರೋಗ್ಯಕರ ರಾಜಕಾರಣ ಮಾಡಬೇಕೆ ಹೊರತು ಮತ್ತೊಬ್ಬರ ದೌರ್ಬಲ್ಯ ಹುಡುಕಿ ಆ ಮೂಲಕ ಅವರನ್ನು ಮಣಿಸುವಂತೆ ಕೀಳು ಮಟ್ಟದ ರಾಜಕಾರಣ ಮಾಡಬಾರದು. ಅಂತಹ ಯಾವುದೇ ತಂತ್ರಗಳಿಗೆ ತಾವು ಹೆದರುವುದಿಲ್ಲ. ಶಾಸಕ ಶ್ರೀನಿವಾಸ್ ಹಾಗೂ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ನೇರ ರಾಜಕಾರಣಕ್ಕೆ ಇಳಿಯಲಿ ಅವರ ಎಲ್ಲಾ…

Read More