Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ಜನ ಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದ್ದು, ಡಿ.29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಈ ಕುರಿತು ನ್ಯಾಯಾಲಯ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ತನಿಖಾಧಿಕಾರಿಗಳು ಸೂರಜ್ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಮುಂದಿಟ್ಟು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವು ಬಿ ರಿಪೋರ್ಟ್ ತಿರಸ್ಕರಿಸಿದೆ. ಜೊತೆಗೆ ತನಿಖೆ ಮುಂದುವರೆಸಿ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಸೂರಜ್ ವಿರುದ್ಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಜಮಖಂಡಿ: ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ರಾತ್ರಿ 12.30ಕ್ಕೆ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಬ್ಬಿನ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತಪಟ್ಟವರು. ಮೃತರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳಗಾವಿ: ಏಳನೇ ತರಗತಿಯ ವಿದ್ಯಾರ್ಥಿನಿಯನ್ನು ಕಬ್ಬಿನ ತೋಟಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ನವೆಂಬರ್.23ರಂದು ಬಾಲಕಿ ಸಂಜೆ ಮನೆಯಿಂದ ಹಿಟ್ಟಿನ ಗಿರಣಿಗೆ ಹೋಗಿದ್ದು, ಆ ವೇಳೆ ಪ್ರಮುಖ ಆರೋಪಿ ಮಣಿಕಾಂತ್ ದಿನ್ನಿಮಣಿ ಮತ್ತು ಈರಣ್ಣ ಸಂಕಮ್ಮನವರ್ ಎಂಬುವವರು ಆಕೆಯನ್ನು ಅಡ್ಡಗಟ್ಟಿದ್ದು, ಕಬ್ಬಿನ ಗದ್ದೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ಇದರಿಂದ ಕೃತ್ಯ ಬೆಳಕಿಗೆ ಬರುವುದು ತಡವಾಗಿದೆ. ಏತನ್ಮಧ್ಯೆ ವಿಚಾರ ತಿಳಿದ ಪೋಷಕರು ಡಿಸೆಂಬರ್ 1ರಂದು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ರಾಜ್ಯದ ಗೃಹ ಸಚಿವರ ಆದೇಶದಂತೆ ತಾಲೂಕಿನ 6 ಹೋಬಳಿಯ ಕೇಂದ್ರಗಳನ್ನ ಸಮಗ್ರ ಅಭಿವೃದ್ಧಿಗಾಗಿ ತಲಾ ಎರಡುವರೆ ಕೋಟಿ ಅನುದಾನ ನೀಡಿದ್ದು, ರಸ್ತೆ ಅಗಲಿಕರಣ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತುಮಕೂರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಜಿ. ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಕೋಳಾಲ ಹೋಬಳಿ ಕೇಂದ್ರದ ಗ್ರಾ.ಪಂ.ಯಲ್ಲಿ ಸದಸ್ಯರ ಸಭೆ ಮಾಡಿ ನಂತರ ಕಾಮಗಾರಿ ನಡೆಯುವ ಸ್ಥಳವನ್ನ ಪರಿಶೀಲಿಸಿ ಮಾತನಾಡಿದರು. ಈಗಾಗಲೇ ಶಾಸಕರ ನಿಧಿಯಾಗಿ ಮುಖ್ಯಮಂತ್ರಿಗಳು 50 ಕೋಟಿ ರೂ ಅನುದಾನವನ್ನ ಬಿಡುಗಡೆ ಮಾಡಿದ್ದು, ಗೃಹ ಸಚಿವರ ಮಾರ್ಗದರ್ಶನ ಹಾಗೂ ಅವರ ಆದೇಶದಂತೆ ತಾಲೂಕಿನ ಹೊಳವನಹಳ್ಳಿ, ಕೋಳಾಲ, ಕಸಬಾ, ಪುರವಾರ, ತೋವಿನಕೆರೆ, ಚಿಕ್ಕತೊಟ್ಲುಕೆರೆ ಹೋಬಳಿ ಕೇಂದ್ರಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಪುಟ್ಪಾತ್, ರಸ್ತೆ ಮಧ್ಯ ವಿನ್ಯಾಸವಾದ ವಿದ್ಯುತ್ ದೀಪ ಅಳವಡಿಸಿ ಪಟ್ಟಣದ ಮಾದರಿಯಂತೆ ಮಾಡಲು ಈಗಾಗಲೇ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 50 ಕೋಟಿ ಅನುದಾನದಲ್ಲಿ ರಸ್ತೆ,…
ಬೀದರ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ರವೀಂದ್ರ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಅವರನ್ನು ಬೀದರ್ ಜಿಲ್ಲೆಯಿಂದ ಗಡೀಪಾರು ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮಾರುತಿ ಬೌದ್ಧೆ ಆಗ್ರಹಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾರುತಿ ಬೌದ್ಧೆ, 2016ರಲ್ಲಿ ನಗರಸಭೆಯ ಮಾಜಿ ಸದಸ್ಯ ರವೀಂದ್ರ ಸ್ವಾಮಿ ಅವರು ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಆದರೆ ಅದನ್ನು 2019ರಲ್ಲಿ ಅಂದಿನ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿರಸ್ಕರಿಸಿದ್ದರು. ಆಗ ಜಿಲ್ಲಾಧಿಕಾರಿಗಳ ಆದೇಶದ ವಿರುದ್ಧ ರವೀಂದ್ರ ಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ಕೋರ್ಟ್ ಅರ್ಜಿ ಪರಿಶೀಲನೆಗೆ ಆದೇಶಿಸಿತು. ನಂತರ ಅಧಿಕಾರಿಗಳು ಆದೇಶವನ್ನು ಅಪಾರ್ಥ ಮಾಡಿಕೊಂಡು ಎಸ್ಸಿ ಜಾತಿ ಪ್ರಮಾಣ ವಿತರಿಸಿದ್ದರು ಎಂದು ಆರೋಪಿಸಿದರು. ನಂತರ ನ್ಯಾಯಾಲಯ ಎಸ್ ಸಿ ಸರ್ಟಿಫಿಕೇಟ್ ರದ್ದು ಮಾಡಿತ್ತು.…
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಾಮಶೆಟ್ಟಿಹಳ್ಳಿ ಗ್ರಾಮದ ಕುರಿಗಾಹಿ ರಾಜಣ್ಣ ಎಂಬವರ ಮೇಲೆ, ಹೊಲದಲ್ಲಿ ಕುರಿ ಮೇಯಿಸುವಾಗ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ಕೈ ಮತ್ತು ಕೆಲವು ಅಂಗಾಂಗಗಳ ಮೇಲೆ ಕಚ್ಚಿ ಚಿರತೆ ಗಾಯಗೊಳಿಸಿದ್ದು, ಈ ವೇಳೆ ಕುರಿಗಾಹಿ ಕೂಗಿಕೊಂಡಾಗ ಚಿರತೆ ಸ್ಥಳದಿಂದ ಪರಾರಿಯಾದ ಕಾರಣ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾರ್ವಜನಿಕರ ಆಕ್ರೋಶ: ಪದೇಪದೇ ನಮ್ಮ ಗ್ರಾಮ ಮತ್ತು ಜಮೀನುಗಳಲ್ಲಿ ಓಡಾಡಲು ತುಂಬಾ ಕಷ್ಟವಾಗುತ್ತಿದೆ, ಹಗಲು ಮತ್ತು ರಾತ್ರಿ ವೇಳೆ ಚಿರತೆಗಳ ದಾಳಿ ಮುಂದುವರೆದಿದ್ದು, ಅರಣ್ಯ ಇಲಾಖೆಗೆ ತಿಳಿಸಿದರು, ಯಾವುದೇ ಕ್ರಮ ಜರುಗಿಸುತ್ತಿಲ್ಲ ಎಂದು ಗ್ರಾಮಸ್ಥರ ಆಕ್ರೋಶವಾಗಿದೆ. ವರದಿ: ಆನಂದ, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಉಡುಪಿ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ. ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ತಮ್ಮ ಚಾತುರ್ಯ, ಸಮಯ ಪ್ರಜ್ಞೆ ಮತ್ತು ಧೈರ್ಯಶಾಲಿ ಮಹತ್ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರದಾನ ಮಾಡಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ, 2025ರ ನವೆಂಬರ್ 28ರಂದು, ಶುಕ್ರವಾರ, ಈ ಗೌರವವನ್ನು ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರವು ಮಕ್ಕಳ ಧೈರ್ಯ, ಸಮಯಪ್ರಜ್ಞೆ ಮತ್ತು ತ್ವರಿತ ನಿರ್ಧಾರಶಕ್ತಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಹೊಯ್ಸಳ ಶೌರ್ಯ ಪ್ರಶಸ್ತಿಯು ಪ್ರಮುಖವಾಗಿದೆ. ಈ ಪ್ರಶಸ್ತಿ ದೊರೆತ ದೀಪೇಶ್ ಅವರು ಅಕಾಡೆಮಿ ಆಫ್…
ಸರಗೂರು: ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್ ಹೇಳಿದರು. ತಾಲೂಕಿನ ಕೆ.ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪದನಿಮಿತ್ತ ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಾಯದೊಂದಿಗೆ ಕೆ.ಬೆಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 25–26 ನೇ ಸಾಲಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅವನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ, ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡಿ, ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಶಾಲಾ ಮಟ್ಟದಲ್ಲಿ ಇಂತಹ ಪ್ರತಿಭೆಗಳನ್ನು ಗುರುತಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸುವ ಅವಕಾಶವಿದೆ. ಇದರಿಂದ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ–ಪ್ರಯೋಗಗಳನ್ನು ಮಾಡುತ್ತಾರೆಂದು ಹೇಳಿದರು. ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜುರವರು ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಆರೋಗ್ಯದ ಬಗ್ಗೆ ಗಮನ ಕೊಟ್ಟು ಯೋಗಾಭ್ಯಾಸ…
ಕೊರಟಗೆರೆ: ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಿದ್ದು, ಪಟ್ಟಣದ ಉದ್ಭವ ಮೂರ್ತಿ ಇತಿಹಾಸವುಳ್ಳ ಶ್ರೀ ಗುಂಡಾಂಜನೇಯ ಸ್ವಾಮಿ ದೇಗುಲದಲ್ಲಿಯೂ ಹನುಮ ಜಯಂತಿಯನ್ನು ವಿಶೇಷವಾಗಿ ಆಚರಿಸಿ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು. ಹನುಮ ಜಯಂತಿ ಅಂಗವಾಗಿ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯವನ್ನು ಹಸಿರು ತೋರಣ, ಹೂಗಳಿಂದ ಅಲಂಕೃತಗೊಳಿಸಿದ್ದು, ಸ್ವಾಮಿಗೆ ಮುಂಜಾನೆಯಿಂದಲೇ ಗಂಗಾಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಸ್ವಾಮಿ ಉತ್ಸವ ಈಗೇ ಅನೇಕ ಧಾರ್ಮಿಕ ಪೂಜೆಗಳು ಜರುಗಿದ್ದು, ದರ್ಶನ ಪಡೆದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಅರ್ಚಕ ಕಸ್ತೂರಿ ಹನುಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿ ವರ್ಷ ಭಕ್ತರ ಸಹಕಾರದಿಂದ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಜಯಂತಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆದಿವೆ, ಭಕ್ತರು ಸಹ ಕುಟುಂಬ ಸಮೇತ ಹೆಚ್ಚಿನ ಸಂಖೈಯಲ್ಲಿ ಆಗಮಿಸಿ ಸ್ವಾಮಿ ದರ್ಶನ ಪಡೆದು…
ತುಮಕೂರು: ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಅದ್ದೂರಿಯಾಗಿ ನೆರವೇರಿತು. ಇದೇ ವೇಳೆ ಡಾ.ಜಿ.ಪರಮೇಶ್ವರ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ದಲಿತ ಸಮುದಾಯದ ಭಕ್ತರು 101 ತೆಂಗಿನಕಾಯಿ ಹೊಡೆದು ಪೂಜೆ, ಅನ್ನ ಸಂತರ್ಪಣೆ, ಹಾಗೂ ಉರುಳು ಸೇವೆ ನೆರವೇರಿಸಿದರು. ಹನುಮ ಜಯಂತಿಯ ಪ್ರಯುಕ್ತ ಬೆಳಿಗ್ಗೆ ಸುಮಾರು 7 ಗಂಟೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಪರಮೇಶ್ವರ್ ಅವರ ಅಭಿಮಾನಿಗಳು, ದಲಿತ ಮುಖಂಡರು ತಮ್ಮ ಮೆಚ್ಚಿನ ನಾಯಕನಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂದು ಹಾರೈಸಿದರು. ಪೂಜೆ ನಂತರ ಸುಮಾರು 500ಕ್ಕೂ ಹೆಚ್ಚು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ದೇವಾಲಯದ ಮುಂಭಾಗದಲ್ಲಿ ವಿಶೇಷ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಡಾ.ಜಿ.ಪರಮೇಶ್ವರ್ ಅವರು ಸಿಎಂ ಆಗಲೆಂದು ಇದೇ ವೇಳೆ ದಲಿತ ಮುಖಂಡರು ಮತ್ತು ಯುವಕರು ಉರುಳು ಸೇವೆ ನಡೆಸಿದರು. ದೇವಾಲಯದ ಬಾಗಿಲಿನಿಂದ ಕೋಟೆ ವೃತ್ತದವರೆಗೆ…