Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷ, ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ರಾಜ್ಯದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ್ದರು, ಇದೀಗ ದಿ ಕೇರಳ ಸ್ಟೋರಿಗೆ ತೆರಿಗೆ ಮುಕ್ತ ಎಂದು ಘೋಷಣೆ ಮಾಡಿದೆ. ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಅವರು ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಚಿತ್ರವನ್ನು ತೋರಿಸಿದ್ದರು. ಮಧ್ಯಪ್ರದೇಶದಲ್ಲೂ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದ ನಂತರ ‘ತೆರಿಗೆ ಮುಕ್ತ’ ಮಾಡಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಅನೈತಿಕ ಸಂಬಂಧವಿದೆ ಎಂಬ ಶಂಕೆಯಲ್ಲಿ ಯುವಕ ತನ್ನ ಸಹೋದರಿಯನ್ನು ಕ್ರೂರವಾಗಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.30 ವರ್ಷದ ಆರೋಪಿ ತನ್ನ 12 ವರ್ಷದ ಸಹೋದರಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ತಂದೆ-ತಾಯಿಯನ್ನು ಕಳೆದುಕೊಂಡ ಅಂಗವಿಕಲ ಬಾಲಕಿ ತನ್ನ ಸಹೋದರ ಹಾಗೂ ಆತನ ಪತ್ನಿಯೊಂದಿಗೆ ವಾಸವಾಗಿದ್ದಳು. ಬಾಲಕಿ ಪ್ರಣಯ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಯುವಕ 12 ವರ್ಷದ ಬಾಲಕನಿಗೆ ದೈಹಿಕ ಕಿರುಕುಳ ನೀಡಿದ್ದಾನೆ. ಕಬ್ಬಿಣದ ತಂತಿಯನ್ನು ಕಾಯಿಸಿ ಸುಡುವುದು ಕೂಡ ವಾಡಿಕೆಗಾಗಿತ್ತು ಎನ್ನಲಾಗಿದೆ. ಕ್ರೂರ ಚಿತ್ರಹಿಂಸೆಯಿಂದ ಬಾಲಕಿ ಭಾನುವಾರ ಗಂಭೀರ ಗಾಯಗೊಂಡಿದ್ದುಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಾವು ದೃಢಪಡಿಸಿದ ಬಳಿಕ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಲ್ಲಾಸನಗರ ಕೇಂದ್ರ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಅಲ್ಲದೆ ಮತದಾನ ಮಾಡಿ ಬಂದವರಿಗೆ ಮಾತ್ರ ಪ್ರವಾಸಿ ವಾಹನಗಳಲ್ಲಿ ಪ್ರಯಾಣಿಸಲು ಅಥವಾ ಬಳಸಲು ಅವಕಾಶ ನೀಡಬೇಕೆಂದು ಮೈಸೂರು ಜಿಲ್ಲಾ ಟ್ರ್ಯಾವಲ್ಸ್ ಮಾಲೀಕರು ನಿರ್ಧರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ನಾಳೆ (ಮೇ.10) ರಂದು ನಡೆಯಲಿದ್ದು, ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿದ್ದು, ಭದ್ರತೆಗಾಗಿ 1.56 ಲಕ್ಷ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದ 84,119 ಪೊಲೀಸರ ಜೊತೆಗೆ ನೆರೆ ರಾಜ್ಯದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಹೊರರಾಜ್ಯದಿಂದ 8,500 ಪೊಲೀಸರು, 650 ಸಿಆರ್ಪಿಎಫ್ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. 304 ಡಿವೈಎಸ್ಪಿ, 991 ಇನ್ಸ್ಪೆಕ್ಟರ್ಸ್, 2,610 ಪಿಎಸ್ಐ, 108 ಬಿಎಸ್ಎಫ್, 75 ಸಿಐಎಸ್ಎಫ್, 70 ಐಟಿಬಿಪಿ, 35 ಆರ್ಫಿಎಫ್ ಬಂದೋಬಸ್ತಗೆ ನಿಯೋಜಿಸಲಾಗಿದೆ. ವಿಶೇಷವಾಗಿ 2,930 ಪೊಲೀಸ್ ಮೊಬೈಲ್ ಸೆಕ್ಟರ್ಗಳ ಕಾರ್ಯಾಚರಣೆ, ಮೊಬೈಲ್ ಸೆಕ್ಟರ್ ಮೇಲ್ವಿಚಾರಣೆಗೆ 749 ಸೂಪರ್ವೈಸರ್, ರಾಜ್ಯದ ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಮಾಡಿ ಬಿಡಲು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೇ 10 ರಂದು ಕರ್ನಾಟಕದ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ವಿಡಿಯೋ ಸಂದೇಶದ ಮೂಲಕ ಕರ್ನಾಟಕದ ಜನತೆಯನ್ನು ತಲುಪುವ ಪ್ರಯತ್ನ ಮಾಡಿರುವ ಪ್ರಧಾನಿ ಮೋದಿ ಮೇ 10 ರಂದು ತಪ್ಪದೇ ಮತದಾನ ಎಂದು ಮನವಿ ಮಾಡಿದ್ದಾರೆ. ನೀವು ನನಗೆ ಸದಾ ಪ್ರೀತಿ ಕೊಟ್ಟಿದ್ದೀರಿ ಅದು ನನಗೆ ಈಶ್ವರನ ಆರ್ಶೀವಾದವಿದ್ದಂತೆ, ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಎನಿಸಿಕೊಂಡಿದೆ. ಆದಷ್ಟು ಬೇಗ ಕರ್ನಾಟಕವನ್ನು ದೇಶದ ಆರ್ಥಿಕತೆಯ ನಂಬರ್ 1 ರಾಜ್ಯವನ್ನಾಗಿ ಮಾಡಬೇಕಿದೆ. ಎಲ್ಲರ ಲಕ್ಷ್ಯ ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಎಕಾನಮಿಯತ್ತ ಕೊಂಡೊಯ್ಯುವುದಾಗಿರಬೇಕು. ಕೊರೊನಾ ಬಳಿಕವು ದೇಶದಕ್ಕ 90 ಸಾವಿರ ಕೋಟಿಯಷ್ಟು ವಿದೇಶಿ ಬಂಡವಾಳ ಹೂಡಿಕೆಯಾಗಿದೆ, ಆದರೆ ಕಳೆದ ಸರ್ಕಾರದಲ್ಲಿ ಕೇವಲ 30 ಸಾವಿರ ಕೋಟಿಯಷ್ಟು ಮಾತ್ರ ವಿದೇಶಿ ಬಂಡವಾಳ ಹೂಡಿಕೆಯಾಗಿತ್ತು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ. ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು. ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ…
ಮದುವೆಯಾಗಿ ಹದಿನೈದು ವರ್ಷ ಕಳೆದರೂ ಗರ್ಭಿಣಿಯಾಗದ ಮಹಿಳೆಗೆ ಅತ್ತೆ-ಮಾವ ವಿಷ ನೀಡಿದ್ದಾರೆ .ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸಾಲಿ ಬೇಗಂ ಎಂಬ 33 ವರ್ಷದ ಮಹಿಳೆ ಕೊಲೆಯಾದವರು. 15 ವರ್ಷಗಳ ಹಿಂದೆ ಸ್ಯಾಲಿ ಬೇಗಂ ಫಿರೋಜ್ ಅಹ್ಮದ್ ಅವರನ್ನು ವಿವಾಹವಾಗಿದ್ದರೂ,ಈ ದಂಪತಿಗಳಿಗೆ ಮಗು ಜನಿಸಿರಲಿಲ್ಲ ಈ ವಿಷಯಕ್ಕೆ ಸಂಬಂಧಿಸಿದಂತೆ ಘಟನೆಯ ಹಿಂದಿನ ದಿನ ಜಗಳ ನಡೆದಿತ್ತು ಎನ್ನಲಾಗಿದೆ. ಹಿಂದಿನ ದಿನ ನಡೆದ ಜಗಳದ ನಂತರ ತನ್ನ ಸಹೋದರಿ ತನಗೆ ಕರೆ ಮಾಡಿ ತನ್ನ ಅತ್ತೆಯವರು ವಿಷ ನೀಡಿದ್ದಾರೆ ಎಂದು ಆಕೆಯ ಸಹೋದರ ಗೌಸ್ ಮುಹಮ್ಮದ್ ಹೇಳಿದ್ದಾರೆ. ವಿಷಯ ತಿಳಿದ ಸಹೋದರ ಕೂಡಲೇ ಸಹೋದರಿಯ ಮನೆಗೆ ತಲುಪಿದ್ದು ಆಕೆಯನ್ನು ತಕ್ಷಣವೇ ಸಿರಾತ್ನಲ್ಲಿರುವ ಸ್ಯಾಲಿಯನ್ನು ಆಸ್ಪತ್ರೆಗೆ ಸಾಗಿಸಿದನು ಆದರೆ ಆಕೆಯ ಜೀವವನ್ನು ಉಳಿಸಲಾಗಲಿಲ್ಲ. ಮುಹಮ್ಮದ್ ಅವರ ದೂರಿನ ಆಧಾರದ ಮೇಲೆ ಕಡಧಾಮ್ ಪೊಲೀಸರು ಮಹಿಳೆಯ ಪತಿ ಮತ್ತು ನಾಲ್ವರು ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…
ದೇಶದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರು ಶೋರೊಮ್ ಹೊಂದಿರುವ ಪೊಕ್ಸ್ ವೇಗನ್ ಕಾರು ಶೋರೊಮ್ ಬೆಳಗಾವಿಯಲ್ಲಿ ಇಂದು ಉದ್ಘಾಟನೆ ನಡೆಯುತ್ತಿದ್ದು ಇವತ್ತು ಬೆಳಗಾವಿ ನಗರದ ಸಮೀಪದಲ್ಲಿನ ಹಲಗಾ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ನೂತನ ಪೊಕ್ಸ್ ವೇಗನ್ ಕಾರು ಶೋರೊಮ್ ಭರ್ಜರಿ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಪೋಕ್ಸ್ ವೇಗನ್ ಕಾರ ಶೋರೊಮ್ ನಿರ್ದೇಶಕರಾದ ಆಶಿಸ್ ಗುಪ್ತಾ ,ಅಕ್ಷಯ ದೇಸಾಯಿ,ಪ್ರದೀಪ ಬಡಿಗೇರ್,ಅಭಯ ಹರ್ಣಿ, ಸೇರಿದಂತೆ ವಿವಿಧ ಗಣ್ಯರು ರಿಬ್ಬನ್ ಕಟ್ ದೀಪ ಬೆಳಗಿಸುವ ಮೂಲಕ ಭರ್ಜರಿ ಉದ್ಘಾಟನೆಗೊಳಿಸಿದರು. ಪೋಕ್ಸ್ ವೇಗನ್ ಕಾರ ಶೋರೊಮ್ ದಿಂದ 5500 ಕಾರುಗಳು ಈಗಾಗಲೇ ಮಾರಾಟವಾಗಿದೆ ಇದರಿಂದ ಇನ್ನು ಹೆಚ್ಚಾಗಿ ಕಂಮಪನಿ ಬೆಳೆಸುವಂತೆ ಸೂಚಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
2027ರ ವೇಳೆಗೆ ಭಾರತದಲ್ಲಿ ನಾಲ್ಕು ಚಕ್ರಗಳ ಡೀಸೆಲ್ ವಾಹನಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ. ಪೆಟ್ರೋಲಿಯಂ ಸಚಿವಾಲಯದ ಇಂಧನ ಪರಿವರ್ತನಾ ಸಲಹಾ ಸಮಿತಿಯು ಈ ನಿರ್ದೇಶನ ನೀಡಿದೆ. ದೇಶದ ಎಲ್ಲಾ ನಗರಗಳು 2027 ರ ವೇಳೆಗೆ ಡೀಸೆಲ್ ಚಾಲಿತ ನಾಲ್ಕು ಚಕ್ರಗಳ ವಾಹನಗಳನ್ನು ನಿಷೇಧಿಸುತ್ತವೆ. ವಾಯು ಮಾಲಿನ್ಯವನ್ನು ಸಂಪೂರ್ಣವಾಗಿ ತೊಡೆದುಹಾಕಲು ನಿರ್ಧರಿಸಲಾಗಿದೆ. ಮಾಜಿ ಪೆಟ್ರೋಲಿಯಂ ಕಾರ್ಯದರ್ಶಿ ತರುಣ್ ಕಪೂರ್ ನೇತೃತ್ವದ ಸಮಿತಿಯ ಶಿಫಾರಸಿನ ಪ್ರಕಾರ, ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡೀಸೆಲ್ ಬಸ್ಗಳನ್ನು 2024 ರಿಂದ ಹಂತಹಂತವಾಗಿ ಸ್ಥಗಿತಗೊಳಿಸಬೇಕು ಮತ್ತು 2030 ರ ವೇಳೆಗೆ ಎಲೆಕ್ಟ್ರಿಕ್ ಅಲ್ಲದ ಸಿಟಿ ಬಸ್ಗಳಿಗೆ ಅನುಮತಿ ನೀಡಬಾರದು. ವರದಿಗಳ ಪ್ರಕಾರ, 2024 ರಿಂದ ವಿದ್ಯುತ್ ಚಾಲಿತ ನಗರ ವಿತರಣಾ ವಾಹನಗಳ ಹೊಸ ನೋಂದಣಿಗೆ ಅನುಮತಿ ನೀಡಲು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಎರಡ್ಮೂರು ವರ್ಷಗಳಲ್ಲಿ ರೈಲ್ವೇ ಜಾಲವನ್ನು ಸಂಪೂರ್ಣ ವಿದ್ಯುದೀಕರಣಗೊಳಿಸಲು ಉದ್ದೇಶಿಸಲಾಗಿದೆ. ಮುಂದಿನ ಹತ್ತು ವರ್ಷಗಳಲ್ಲಿ, ಎಲ್ಲಾ ನಗರಗಳಲ್ಲಿ 75 ಪ್ರತಿಶತವು ಎಲೆಕ್ಟ್ರಿಕ್ ವಾಹನಗಳಾಗಿವೆ. ನಮ್ಮತುಮಕೂರು.ಕಾಂನ ಕ್ಷಣ…
ಬೆಂಗಳೂರು: ಇವಿಎಂನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದ್ರು ದೋಷ ಕಂಡು ಬಂದರೆ ಕೂಡಲೇ ನಾವು ಬದಲಾವಣೆ ಮಾಡುತ್ತೇವೆ ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು. ಮೇ 10ಕ್ಕೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗಳಿಗೆ ಮಂಗಳವಾರ ಸಿಬ್ಬಂದಿ ತೆರಳಲಿದ್ದಾರೆ. 42 ಸಾವಿರ ಸಿಬ್ಬಂದಿಯನ್ನು ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ. ಮಸ್ಟರಿಂಗ್ ಸೆಂಟರ್ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಸ್ಟರಿಂಗ್ ಸೆಂಟರ್ಗಳಲ್ಲಿ ಇವಿಎಂ ಪಡೆದು ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೇವೆ ಎಂದು ತಿಳಿಸಿದರು. ಒಂದು ಬಸ್ನಲ್ಲಿ ಐದರಿಂದ ಆರು ಮತಕಟ್ಟೆಗಳಿಗೆ ಸಂಬಂಧಿಸಿದ ಸಿಬ್ಬಂದಿಯನ್ನು ಡ್ರಾಪ್ ಮಾಡಲಾಗುವುದು. ನಾಳೆ ಬೆಳಗ್ಗೆ ಮತಗಟ್ಟೆಗಳಲ್ಲಿ 6 ಗಂಟೆಗೆ ಅಣಕು ಮತದಾನ ನಡೆಯಲಿದೆ. ನಂತರ ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಲಿದೆ. ಇವಿಎಮ್ಗಳಲ್ಲಿ ದೋಷ ಕಂಡು ಬಂದರೆ ತಕ್ಷಣವೇ ಸರಿಪಡಿಸಲು…