Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
- ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
- ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
- ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
Author: admin
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 21 ಸದಸ್ಯರ ತಂಡ ತಾನೂರಿಗೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ಸ್ ಪೆಕ್ಟರ್ ಅರ್ಜುನ್ ಪಾಲ್ ರಜಪೂತ್ ನೇತೃತ್ವದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿಯವರೆಗೆ 22 ಸಾವುಗಳು ದೃಢಪಟ್ಟಿವೆ. ಹಸ್ನಾ (18), ಸಫ್ನಾ (7), ಫಾತಿಮಾ ಮಿನ್ಹಾ (12), ಸಿದ್ದಿಕ್ (35), ಝಲ್ಸಿಯಾ (40), ಅಫ್ಲಾ (7), ಅನ್ಷಿದ್ (10), ರಜಿನಾ, ಫೈಜಾನ್ (4), ಸಬರುದ್ದೀನ್ (38), ಶಮ್ನಾ ( 17), ಹಾದಿ ಫಾತಿಮಾ (7), ಜಹ್ರಾ, ನೈರಾ, ಸಫ್ಲಾ ಶೆರಿನ್, ರುಶ್ದಾ, ಆದಿಲಾ ಶೆರ್ರಿ, ಐಶಾಬಿ, ಅರ್ಶನ್, ಅದ್ನಾನ್, ಜೀನತ್ (45) ಮತ್ತು ಜೆರಿರ್ (10) ಮೃತರು. ಮೃತರ ಮರಣೋತ್ತರ ಪರೀಕ್ಷೆ ಶೀಘ್ರದಲ್ಲೇ ಆರಂಭವಾಗಲಿದೆ. ಮೂವರು ಮಕ್ಕಳು ಸೇರಿದಂತೆ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ವೆಂಟಿಲೇಟರ್ನಲ್ಲಿದ್ದಾರೆ. ಆಯೇಷಾ (5), ಮುಹಮ್ಮದ್ ಅಫ್ರಾದ್ (5),…
ಮೈಸೂರು: ವರುಣಾ ರಣಕಣ ಈ ಬಾರಿ ಹೈ ವೋಲ್ಟೇಜ್ನಿಂದ ಕೂಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಸಮುದಾಯದ ನಾಯಕ, ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಅಲ್ಲದೇ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವರುಣಾವನ್ನು ಗೆಲ್ಲಲು ತಂತ್ರ ರೂಪಿಸಿದ್ದಾರೆ. ಇದರಿಂದ ತೆಲೆ ಕೆಡೆಸಿಕೊಂಡ ಸಿದ್ದರಾಮಯ್ಯ ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಸಿದ್ದರಾಮಯ್ಯ ಮನೆಯಲ್ಲಿ ಉಳಿಯದೇ ಹೋಟೆಲ್ನಲ್ಲಿ ಖಾಸಗಿ ಹೋಟೆಲ್ನಲ್ಲಿ ಕುಳಿತು ಕ್ಷೇತ್ರದ ಗೆಲುವಿಗೆ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿದ್ದರು ಟಿ ಕೆ ಬಡಾವಣೆ ಮನೆಗೆ ತೆರಳಿಲ್ಲ. ವರುಣಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರನ್ನು ಹೋಟೆಲ್ಗೆ ಕರೆಸಿಕೊಂಡು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ವರುಣ ಕ್ಷೇತ್ರದ ಪ್ರಮುಖ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಕರ್ತವ್ಯ ಪಾಲಿಸದ ತಾ.ಪಂ.ಕಾರ್ಯನಿರ್ವಹಕ ಅಧಿಕಾರಿಗೆ 10 ಸಾವಿರ ದಂಡ ಕೋಳಾಲ ಗ್ರಾ.ಪಂ. ಪಿಡಿಓಗೆ 10 ಸಾವಿರ ದಂಡ, ಕ್ರಿಮಿನಲ್ ಪ್ರಕರಣ ದಾಖಲಿಸಲು ಶಿಫಾರಸು ವರದಿ: ಶಿವಕುಮಾರ್, ಮೇಷ್ಟ್ರುಮನೆ ತುಮಕೂರು: ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿಡಿಓ, ವಾಟರ್ ಮ್ಯಾನ್ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್ ಎಂಬ ಅಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರ ಆದೇಶ ನೀಡಿದೆ. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಕ್ರಮ ಎಸಗಿರುವ ಬಗ್ಗೆ ವಕೀಲರಾದ ಎಂ.ಎನ್.ಚಿನ್ಮಯ ಅವರು ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಯಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಕಮಲಮ್ಮ, ಪಿಡಿಒ ಕೋಮಲ, ವಾಟರ್ ಮ್ಯಾನ್ ಕರಿಯಣ್ಣ, ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಿಕಲ್ಸ್ ಮತ್ತು ಮತ್ತು ಹಾರ್ಡ್ ವೇರ್ ಅಂಗಡಿ ಬೋಗಸ್ ಬಿಲ್ ಮೂಲಕ…
ಮೈಸೂರು: ಕಿಚ್ಚ ಸುದೀಪ್ ಅವರ ಕಿಚ್ಚು ಕಾಂಗ್ರೆಸ್ ಕಚೇರಿಯನ್ನೇ ಸುಟ್ಟು ಹಾಕ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾನುವಾರ ನಂಜನಗೂಡಿನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರವಾಗಿ ಪ್ರಚಾರಕ್ಕೆ ಇಳಿಯುವ ಮೂಲಕ ಕನ್ನಡ ಚಿತ್ರರಂಗದ ಜನಪ್ರಿಯ ನಟ ಸುದೀಪ್ ಅವರು ಕಾಂಗ್ರೆಸ್ ಕಚೇರಿಗೆ ಕಿಚ್ಚು ಹಚ್ಚಿದ್ದಾರೆ. ಕಿಚ್ಚ ಸುದೀಪ್ ಅವರ ಕಿಚ್ಚು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಕಚೇರಿಯನ್ನು ಸುಟ್ಟು ಹಾಕುತ್ತಿದೆ. ಹೀಗಾಗಿ ನಾಯಕರ ರ್ಯಾಲಿಗೆ ಲಕ್ಷಾಂತರ ಜನ ರಾಜ್ಯದ ಉದ್ದಗಲಕ್ಕೂ ಬರುತ್ತಿದ್ದಾರೆ. ಈ ವಾತಾವರಣ ಗಮನಿಸಿದರೆ ಕರ್ನಾಟಕದಲ್ಲಿ ಈ ಬಾರಿ ನಿಶ್ಚಿತವಾಗಿ ಡಬಲ್ ಎಂಜಿನ್ ಸರ್ಕಾರ ಸ್ಥಾಪನೆಯಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು. ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನನ ಜನ್ಮದಿನ ಗೊತ್ತು, ಹನುಮನ ಜನ್ಮದಿನ ಗೊತ್ತಿಲ್ಲ. ರಾಮನಗರದ ಶಿವ ಬೆಟ್ಟವನ್ನು ಡಿ.ಕೆ ಶಿವಕುಮಾರ್ ಏಸು ಬೆಟ್ಟ ಮಾಡಿದ್ದಾರೆ. ಅವರ ಪಕ್ಷದ ಸಿದ್ದರಾಮಯ್ಯ ಹನುಮ ಜನ್ಮದಿನವನ್ನು ಪ್ರಶ್ನಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ…
ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 8 , 9 , 10 ರಂದು ಡ್ರೈ ಡೇ ಆಚಾರಿಸುವಂತೆ ಮದ್ಯ ಮಾರಾಟದ ಅಂಗಡಿ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಗೆ ಇಷ್ಟೇ ಗೊತ್ತಿರೋದು. ಇದೇ ಅವರ ಸಂಸ್ಕೃತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ತನಗೆ ಶೂರ್ಪನಖಿ ಎಂದು ಹೇಳಿರುವ ವಿಚಾರವಾಗಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದಕ್ಕೆ ಜನ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಇದೇ ರೀತಿಯ ಕೀಳು ಮತ್ತು ಕೆಳ ಮಟ್ಟದ ಸಂಸ್ಕೃತಿಯನ್ನು ಪ್ರಯೋಗಿಸುತ್ತದೆ. ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಸದನದಲ್ಲಿ ಇಂದಿರಾ ಗಾಂಧಿಯವರಿಗೆ ದುರ್ಗೆ ಎಂದು ಕರೆದಿದ್ದರು. ಇದು ನಮ್ಮ ಸಂಸ್ಕೃತಿ. ಆದರೆ ಕಾಂಗ್ರೆಸ್ ಸಂಸ್ಕೃತಿ ಯಾವಾಗಲೂ ಕೆಳಮಟ್ಟದಲ್ಲಿ ಮಾತನಾಡೋದೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ಕೊಟ್ಟಿದೆ. ಜಾಹಿರಾತಿನ ಮೂಲಕ ಕಾಂಗ್ರೆಸ್ ಸುಳ್ಳು ಆರೋಪ ಮಾಡಿದೆ. ಇದರ ಬಗ್ಗೆ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಆಯೋಗ ಕೇಳಿದೆ. ಕಾಂಗ್ರೆಸ್ ಯಾವ ಮುಖ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದೆ?…
ಕರ್ನಾಟಕ ಚುನಾವಣಾ ಪ್ರಚಾರ ಇಂದು ಅಂತ್ಯಗೊಂಡಿದೆ. ನಲವತ್ತು ದಿನಗಳ ಕಾಲ ನಡೆದ ಅಭಿಯಾನದಲ್ಲಿ ಶೌರ್ಯ, ವಾಕ್ಚಾತುರ್ಯ ಎದ್ದು ಕಾಣುತ್ತಿತ್ತು. ಅಂತಿಮ ಹಂತದಲ್ಲಿ ಸಂಪೂರ್ಣ ಮೋದಿ ಪ್ರದರ್ಶನವಾಗಿ ಮಾರ್ಪಟ್ಟ ಪ್ರಚಾರವನ್ನು ಬಿಜೆಪಿ ನಡೆಸಿತು. ಮತ್ತೊಂದೆಡೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ತನ್ನ ಪ್ರಚಾರವನ್ನು ತೀವ್ರಗೊಳಿಸಿದೆ. ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿಷಪೂರಿತ ಹಾವಿನ ಟೀಕೆ, ಬಜರಂಗದಳ ವಿವಾದ ಇತ್ಯಾದಿ ಪ್ರಚಾರದ ಬಿಸಿ ಹೆಚ್ಚಿಸಿದೆ. ದೇವೇಗೌಡರು ತಮ್ಮ ವಯಸ್ಸನ್ನು ಮರೆತು ಜೆಡಿಎಸ್ ವೇದಿಕೆಗೆ ಬರುತ್ತಿರುವುದು ಕೂಡ ಉತ್ಸಾಹ ಮೂಡಿಸಿದೆ. ಕರ್ನಾಟಕದಲ್ಲಿ ಆರಂಭದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಪ್ರಚಾರ ಮುಗಿಯುತ್ತಿದ್ದಂತೆ ಬಿಜೆಪಿ ತನ್ನ ಸ್ಥಾನವನ್ನು ಸುಧಾರಿಸಿಕೊಂಡಿದೆ. ಯಾರಿಗೂ ಬಹುಮತ ಸಿಗದ ಕಾರಣ ಯಾರು ಆಡಳಿತ ನಡೆಸಬೇಕು ಎಂಬುದನ್ನು ಜೆಡಿಎಸ್ ನಿರ್ಧರಿಸುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಅಧಿಕೃತ ಅಂಕಿ ಅಂಶಗಳ ಪ್ರಕಾರ ಗುಜರಾತ್ ನಲ್ಲಿ ಐದು ವರ್ಷಗಳಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246 ಮತ್ತು 2019 ರಲ್ಲಿ 9,268 ಮಹಿಳೆಯರು ನಾಪತ್ತೆಯಾಗಿದ್ದಾರೆ. 2020 ರಲ್ಲಿ ಗುಜರಾತ್ನಿಂದ 8,290 ಮಹಿಳೆಯರು ನಾಪತ್ತೆಯಾಗಿದ್ದಾರೆ. ಈ ಐದು ವರ್ಷಗಳಲ್ಲಿ 41,621 ಮಹಿಳೆಯರು ರಾಜ್ಯದಿಂದ ನಾಪತ್ತೆಯಾಗಿದ್ದಾರೆ ಎಂದು NCRB ಅಂಕಿ ಅಂಶಗಳು ತೋರಿಸುತ್ತವೆ. 2021 ರಲ್ಲಿ, ರಾಜ್ಯ ಸರ್ಕಾರವು ಅಹಮದಾಬಾದ್ ಮತ್ತು ವಡೋದರಾದಲ್ಲಿ ಒಂದು ವರ್ಷದಲ್ಲಿ (2019 ರಿಂದ 2020) 4,722 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿತ್ತು. ಇಂತಹ ನಾಪತ್ತೆಯಾದ ಮಹಿಳೆಯರ ಬಗ್ಗೆ ತನಿಖೆ ನಡೆಸಿದಾಗ ಕೆಲವರು ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್ ಸಿನ್ಹಾ ಹೇಳಿದ್ದಾರೆ. ಮಹಿಳಾ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ಪೊಲೀಸ್…
ದಕ್ಷಿಣ ಪೆರುವಿನ ಚಿನ್ನದ ಗಣಿಯಲ್ಲಿ ಬೆಂಕಿ 27 ಸಾವು. ಇಂಧನ ಮತ್ತು ಗಣಿ ಸಚಿವಾಲಯದ ಪ್ರಕಾರ, ಇದು 2000 ರ ನಂತರದ ಅತಿದೊಡ್ಡ ಗಣಿಗಾರಿಕೆ ಅಪಘಾತವಾಗಿದೆ. ಅರೆಕ್ವಿಪಾ ಪ್ರದೇಶದ ‘ಲಾ ಎಸ್ಪೆರಾನ್ಜಾ’ ಗಣಿಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಪ್ರಾಥಮಿಕ ಮಾಹಿತಿ. 30 ತಜ್ಞ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದಿಂದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಆದರೆ ಹೆಚ್ಚಿನವರು ಪತ್ತೆಯಾಗುವ ನಿರೀಕ್ಷೆಯಿಲ್ಲ. ಗಣಿಯನ್ನು ‘ಯಾನಕ್ವಿಹುವಾ’ ಎಂಬ ಸಣ್ಣ ಕಂಪನಿ ನಡೆಸುತ್ತಿದೆ. ಪೆರು ವಿಶ್ವದ ಅತಿದೊಡ್ಡ ಚಿನ್ನದ ಉತ್ಪಾದಕರಲ್ಲಿ ಒಂದಾಗಿದೆ, ವರ್ಷಕ್ಕೆ 100 ಟನ್ಗಳಷ್ಟು ಗಣಿಗಾರಿಕೆ ಮಾಡುತ್ತದೆ (ವಿಶ್ವದ ಒಟ್ಟು ವಾರ್ಷಿಕ ಪೂರೈಕೆಯ ಸುಮಾರು 4%). 2002 ರಲ್ಲಿ, ಪೆರುವಿನಲ್ಲಿ ವಿವಿಧ ಗಣಿಗಾರಿಕೆ ಅಪಘಾತಗಳಲ್ಲಿ 73 ಜನರು ಸಾವನ್ನಪ್ಪಿದರು. 2022ರಲ್ಲಿ 38 ಮಂದಿ ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ರಾಮನಗರ: ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಸ್ವಕ್ಷೇತ್ರ ಚನ್ನಪಟ್ಟಣ ಕ್ಷೇತ್ರದಲ್ಲಿ ಮತಬೇಟೆಯಾಡಲಿದ್ದಾರೆ. ಚನ್ನಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣದ ಶೇರ್ವಾ ಸರ್ಕಲ್ ನಿಂದ ಮಂಗಳವಾರಪೇಟೆವರೆಗೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ. ಹೆಚ್ಡಿ ಕುಮಾರಸ್ವಾಮಿಗೆ ತಂದೆ ಹೆಚ್ಡಿ ದೇವೇಗೌಡ, ಪುತ್ರ ನಿಖಿಲ್ ಸಾಥ್ ನೀಡಲಿದ್ದಾರೆ. ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕನಕಪುರ ಜೆಡಿಎಸ್ ಅಭ್ಯರ್ಥಿ ಪರ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ನಡೆಸಲಿದ್ದಾರೆ. ಇನ್ನು ಇಂದು ರಾಮನಗರ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy