Subscribe to Updates
Get the latest creative news from FooBar about art, design and business.
- ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
- ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
- ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
- ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
- ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
Author: admin
ತುರುವೇಕೆರೆ: ಹಳ್ಳಿಕಾರ್ ಮಠವು ಕೇವಲ ಎರಡು ವರ್ಷಗಳಲ್ಲಿ ಇಷ್ಟರಮಟ್ಟಿಗೆ ಬೆಳೆದಿರುವುದು ಸಮುದಾಯದ ಸಂಘಟನೆಯ ಅಭಿವೃದ್ಧಿಯನ್ನು ತೋರುತ್ತದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಅಭಿಪ್ರಾಯ ಪಟ್ಟರು. ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನ ಹಳ್ಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಹಳ್ಳಿಕಾರ್ ಮಠದ ಪಬ್ಲಿಕ್ ಶಾಲೆ ಹಾಗೂ ಮಠದ ಕೊಠಡಿಗಳ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ತುರುವೇಕೆರೆ ಕ್ಷೇತ್ರದಲ್ಲಿ ಶೇ.80ರಷ್ಟು ಹಳ್ಳಿಕರ್ ಸಮುದಾಯ ನನಗೆ ಮತ ನೀಡಿದೆ. ನನ್ನ ಹಾಗೂ ಹಳ್ಳಿಕಾರ್ ಸಮುದಾಯದ ಮುಖಂಡರ ಭಾಂದವ್ಯ ತುಂಬಾ ಉತ್ತಮವಾಗಿದ್ದು ಈ ಬಾರಿ ಚುನಾವಣೆಯಲ್ಲಿ ಸಾಕಷ್ಟು ಸಹಕಾರ ನೀಡಿದರು ಹಳ್ಳಿಕಾರ ಸಮುದಾಯ ಒಕ್ಕಲಿಗ ಸಮುದಾಯ ಎರಡು ಒಂದೇ ಎಂಬ ಭಾವನೆಯಲ್ಲಿ ಇರುವ ನಾನು ಹಳ್ಳಿಕಾರ್ ಸಮುದಾಯದ ಮುಖಂಡರಿಗೆ ರಾಜಕೀಯವಾಗಿ ಅವಕಾಶ ಕಲ್ಪಿಸಲು ನಾನು ಸಿದ್ಧನಿದ್ದೇನೆ ಎಂದರು. ರಾಜ್ಯದಲ್ಲಿ ಇರುವಂತಹ ಏಕೈಕ ಹಳ್ಳಿಕಾರ ಸಮುದಾಯದ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮಠದ ಅಭಿವೃದ್ಧಿಗೆ 5 ಕೋಟಿ ರೂಗಳನ್ನು ಮಂಜೂರು ಮಾಡುವಂತೆ ಒತ್ತಾಯಿಸುತ್ತೇನೆ ಮಠದ ಸಮಗ್ರ…
ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಮಂಜುಳಾ ಎನ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಭಾರ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್ ಬಿ ಅವರನ್ನು ಕೃಷಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.ಇದೇ ರೀತಿ ಇ-ಅಡಳಿತ, ಆರ್ಡಿಪಿಆರ್ ನಿರ್ದೇಶಕಿ ಸುಭಾ ಕಲ್ಯಾಣ್ ಅವರನ್ನು…
ಬಿಹಾರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಭಾಗಲ್ಪುರದ ಅಗುವಾನಿ-ಸುಲ್ತಂಗಂಜ್ ಸೇತುವೆ ಇಂದು ಸಂಜೆ ಗಂಗಾನದಿಯಲ್ಲಿ ಕುಸಿದಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬುದು ಪ್ರಾಥಮಿಕ ತೀರ್ಮಾನ. 1700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿದಿದೆ. ಸೇತುವೆಯ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 2015 ರಲ್ಲಿ ಹಾಕಿದರು. ಎಂಟು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಸೇತುವೆ ಕುಸಿದಿರುವುದು ಇದು ಎರಡನೇ ಬಾರಿ. 2022ರಲ್ಲಿ ಸೇತುವೆಯ ಒಂದು ಭಾಗ ಕುಸಿದು ನದಿಗೆ ಬಿದ್ದಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತನ್ನ ಪತಿ ದುಬೈನಲ್ಲಿದ್ದಾನೆ ಎಂದು ಹೇಳಿ ವ್ಯಕ್ತಿಯೋರ್ವನನ್ನು ಮನೆಗೆ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ಹಣ ದೋಚಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ವೈಟ್ ಫೀಲ್ಡ್ ನಿವಾಸಿಯನ್ನು ಲೈಂಗಿಕ ಕ್ರಿಯೆಗೆ ಅಂತ ತನ್ನ ಜೆ.ಪಿ.ನಗರದ 5ನೇ ಹಂತದ ಮನೆಗೆ ಕರೆಸಿಕೊಂಡು ಮಹಿಳೆ ಹಾಗೂ ಆಕೆಯ ತಂಡ ಸೇರಿಕೊಂಡು ಈ ಕೃತ್ಯ ಎಸಗಿದೆ. ಕೆಲ ದಿನಗಳ ಹಿಂದೆ ಡೇಟಿಂಗ್ ಆ್ಯಪ್ ಮೂಲಕ ಸಂತ್ರಸ್ತನಿಗೆ ಆರೋಪಿ ಮೆಹರಾ ಹೆಸರಿನ ಮಹಿಳೆ ಪರಿಚಯವಾಗಿದೆ. ಆಗ ಪರಸ್ಪರ ಮೊಬೈಲ್ ಸಂಖ್ಯೆಗಳು ವಿನಿಮಿಯವಾಗಿದ್ದು, ಬಳಿಕ ವಾಟ್ಸಪ್ ಚಾಟಿಂಗ್ ಶುರುವಾಗಿದೆ. ಬಳಿಕ ಒಂದು ದಿನ ನನ್ನ ಗಂಡ ದುಬೈನಲ್ಲಿದ್ದಾನೆ. ನಾನು ಲೈಂಗಿಕ ತೃಪ್ತಿಗಾಗಿ ಸಂಗಾತಿಯನ್ನು ಹುಡುಕಾಡುತ್ತಿದ್ದೇನೆ ಎಂದು ಮೆಸೇಜ್ ಮಾಡಿದ್ದಾಳೆ. ಈ ಮಾತಿನಿಂದ ಉದ್ರೇಕಗೊಂಡ ಸಂತ್ರಸ್ತ, ಆರೋಪಿ ಜತೆ ಲೈಂಗಿಕ ಕ್ರಿಯೆ ನಡೆಸಲು ಇಚ್ಛೆ ವ್ಯಕ್ತಪಡಿಸಿದ್ದಾನೆ. ಆಗ ಆತನಿಂದ ಫೋಟೋ ಪಡೆದ ಆಕೆ, ತನ್ನ ಮನೆಯ ವಿಳಾಸ ಲೋಕೇಷನ್ ಶೇರ್ ಮಾಡಿದ್ದಾಳೆ. ಅಂತೆಯೇ…
ಕೊಲ್ಲಂ-ಎಗ್ಮೋರ್ ಎಕ್ಸ್ಪ್ರೆಸ್ ನ ಕೋಚ್ ನಲ್ಲಿ ಬಿರುಕು ಕಂಡುಬಂದಿದೆ. ಭಾನುವಾರ ಮಧ್ಯಾಹ್ನ ಕೊಲ್ಲಂನಿಂದ ಹೊರಟಿದ್ದ ಎಕ್ಸ್ಪ್ರೆಸ್ ಚೆಂಕೋಟಾ ತಲುಪಿದಾಗ ಬಿರುಕು ಕಾಣಿಸಿಕೊಂಡಿದೆ. ಪ್ರಯಾಣಿಕರನ್ನು ಬಿರುಕು ಬಿಟ್ಟ ಬೋಗಿಯಿಂದ ಮತ್ತೊಂದು ಬೋಗಿಗೆ ಸ್ಥಳಾಂತರಿಸಲಾಯಿತು. ನಂತರ ಒಂದು ಗಂಟೆ ನೆರಳಿನ ನಂತರ ಕೆಂಪು ಕೋಟೆಯಿಂದ ರೈಲು ಪ್ರಯಾಣ ಪುನರಾರಂಭವಾಯಿತು. ಎಸ್-3 ಕೋಚ್ನ ಕೆಳಭಾಗದಲ್ಲಿ ಬಿರುಕು ಉಂಟಾಗಿದೆ. ಮಧುರೈ ರೈಲು ನಿಲ್ದಾಣಕ್ಕೆ ತರಲಾಗಿದ್ದ ಮತ್ತೊಂದು ಬೋಗಿಯನ್ನು ಜೋಡಿಸಿ ರೈಲು ಎಗ್ಮೋರ್ ಗೆ ತೆರಳಿತು. ಬಿರುಕು ಗಮನಿಸದೇ ಇದ್ದಿದ್ದರೆ ರೈಲು ಅಪಘಾತವಾಗುವ ಸಾಧ್ಯತೆ ಹೆಚ್ಚಿತ್ತು. ರೈಲು ತೆಂಕಶಿಯಿಂದ ಎಗ್ಮೋರ್ ಗೆ ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಫ್ಲಾಟ್ ಒಳಗೆ ಕೊಳೆತ ಶವ ಪತ್ತೆಯಾಗಿದೆ. ಮುಂಬೈನ ಉಪನಗರ ಮಲಾಡ್ನಲ್ಲಿ ಭಾನುವಾರ ಈ ಘಟನೆ ನಡೆದಿದೆ. ಮಲಗುವ ಕೋಣೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫ್ಲಾಟ್ ನಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾನುವಾರ ಸಂಜೆ ಪೊಲೀಸರು ಸ್ಥಳಕ್ಕಾಗಮಿಸಿ ಫ್ಲಾಟ್ ಗೆ ಪ್ರವೇಶಿಸಿದಾಗ ಶವ ಪತ್ತೆಯಾಗಿದೆ. ಶವ ಹಾಸಿಗೆಯ ಮೇಲೆ ಬಿದ್ದಿತ್ತು. ಪೋಲೀಸರ ಪ್ರಕಾರ, ಪ್ರಾಥಮಿಕವಾಗಿ, ಮೃತ ದೇಹವು ಮೂರು ದಿನಗಳ ಹಳೆಯದು. ದೇಹದ ಮೇಲೆ ಏನಾದರೂ ಗಾಯಗಳಾಗಿವೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರೈಸ್ತ ಧರ್ಮದ ಮುಖಂಡರನ್ನು ಭೇಟಿ ಮಾಡಿದರು. ಅವರು ತ್ರಿಶೂರ್ ಆರ್ಚ್ಡಯಾಸಿಸ್ನ ಆರ್ಚ್ಬಿಷಪ್ ಮಾರ್ ಆಂಡ್ರ್ಯೂಸ್ ಅವರನ್ನು ಭೇಟಿಯಾದರು. ಮಾರ್ ಆಂಡ್ರ್ಯೂಸ್ ಸಿಬಿಸಿಐ ಅಧ್ಯಕ್ಷರೂ ಆಗಿದ್ದಾರೆ. ಕೊಚ್ಚಿಯಲ್ಲಿ ಸಭೆ ನಡೆದಿದೆ. ಅಮೃತಾ ಆಸ್ಪತ್ರೆಯ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಚ್ಚಿಗೆ ಆಗಮಿಸಿದ್ದಾರೆ. ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಕೊಚ್ಚಿಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿತ್ತು. ಸಂಭ್ರಮಾಚರಣೆಯ ಜತೆಗೆ 65 ಕೋಟಿ ರೂ.ಗಳ ಉಚಿತ ಚಿಕಿತ್ಸಾ ಯೋಜನೆಯನ್ನು ಘೋಷಿಸಲಾಗಿದೆ. ಕೊಚ್ಚಿ ಮತ್ತು ಅಮೃತಪುರಿಯಲ್ಲಿ ಎರಡು ಸಂಶೋಧನಾ ಕೇಂದ್ರಗಳನ್ನು ಆರಂಭಿಸುವುದಾಗಿ ಅಮಿತ್ ಶಾ ಘೋಷಿಸಿದ್ದಾರೆ. ಕಿಡ್ನಿ, ಲಿವರ್, ಅಸ್ಥಿಮಜ್ಜೆ, ಮೊಣಕಾಲು ಕಸಿ, ಸ್ತ್ರೀರೋಗ ಚಿಕಿತ್ಸೆ ಇತ್ಯಾದಿಗಳನ್ನು ಈ ಬಾರಿ ಉಚಿತ ಯೋಜನೆಯಲ್ಲಿ ಸೇರಿಸಲಾಗಿದೆ. ಆಚರಣೆಯ ಅಂಗವಾಗಿ 20-25 ವರ್ಷಗಳ ಕಾಲ ಸೇವೆ ಸಲ್ಲಿಸಿದ ವೈದ್ಯರು ಸೇರಿದಂತೆ ನೌಕರರು ಮತ್ತು ನಿವೃತ್ತರನ್ನು ಮುಂದಿನ ಎರಡು ದಿನಗಳಲ್ಲಿ ನಡೆಯುವ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸನ್ಮಾನಿಸಲಾಗುವುದು.…
ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಗುತ್ತದೆ. 1972 ರಲ್ಲಿ ವಿಶ್ವ ಸಂಸ್ಥೆ ಈ ದಿನವನ್ನು ಘೋಷಣೆ ಮಾಡಿದೆ. 1974 ಜೂನ್ 5 ರಂದು ಪ್ರಥಮ ಭಾರಿಗೆ ಈ ದಿನವನ್ನು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ದಿನವನ್ನು 140ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು. ಪ್ಲಾಸ್ಟಿಕ್ ಮಾಲಿನ್ಯವನ್ನು ನಿಷೇದಿಸಿ ಎನ್ನುವ 2023 ರ ಈ ದಿನದ ಘೋಷಣೆಯಾಗಿದೆ. ಈ ದಿನ ಕೆಲವು ಕಡೆ ಶಿಬಿರಗಳು, ಸೆಮಿನಾರ್ ಗಳು, ಹಾಗೂ ರ್ಯಾಲಿ ಗಳು ನಡೆಸುತ್ತಾರೆ. ಕೆಲವು ಕಡೆ ಸಂಘ ಸಂಸ್ಥೆಗಳು ಈ ದಿನ ಸಸಿಗಳನ್ನು ನೆಡುವುದರ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಾರೆ. ನಾವು ಪ್ಲಾಸ್ಟಿಕ್ ಬಳಕೆಯನ್ನು ದಿನೇ ದಿನೇ ಕಡಿತಗೊಳಿಸಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಆದ ಕಾರಣ ಆ ಮಕ್ಕಳಿಗೆ ಉತ್ತಮ ಪರಿಸರ ಬಿಟ್ಟುಕೊಟ್ಟು ಹೋಗೋಣ. ಇಂದಿನ ಪರಿಸರ ಸಮಸ್ಯೆಗಳು 1.ಮಾಲಿನ್ಯ 2. ಮಣ್ಣಿನ ಅವನತಿ 3. ಹವಾಮಾನ ಬದಲಾವಣೆ…
ತುಮಕೂರು: ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್. ಅವರ ಮಾಹಿತಿಯನ್ನು ಒಡಿಶಾ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿ ತನದಿಂದ ಕೋಮುಬಣ್ಣ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಅತ್ಯಂತ ದುರಾದೃಷ್ಟಕರ ಎಂದು ಒಡಿಶಾ ಪೊಲೀಸರು ಟ್ವೀಟ್ ಮಾಡಿದ್ದಾರೆ. ಈ ಅಪಘಾತಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ಜಿಆರ್ ಪಿ ಯಿಂದ ತನಿಖೆ ನಡೆಯುತ್ತಿದೆ. ಇಂತಹ ಸುಳ್ಳು ಮತ್ತು ದುರುದ್ದೇಶ ಪೂರಿತ ಪೋಸ್ಟ್ ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಮನವಿ ಮಾಡುತ್ತೇವೆ. ವದಂತಿಗಳನ್ನು ಹಬ್ಬಿಸಿ ಕೋಮುಸೌಹಾರ್ದತೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದ್ದು, ಅದಕ್ಕಾಗಿ ನಮ್ಮ ಕಾರ್ಯಕರ್ತರಿಗಾಗಿ ಹೆಲ್ತ್ ಲೈನ್ ಆರಂಭಿಸುತ್ತಿದ್ದೇವೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಬಿಜೆಪಿ ಕಚೇರಿಯಲ್ಲಿ ಕಾನೂನು ಪ್ರಕೋಷ್ಠದ ಸಭೆ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರದ ಕಾನೂನಾತ್ಮಕ ದೌರ್ಜನ್ಯಗಳನ್ನು ಎದುರಿಸಲು ಹೆಲ್ಸ್ ಲೈನ್ ಸಂಖ್ಯೆಯನ್ನು ರಾಜ್ಯದಲ್ಲಿ ಘೋಷಣೆ ಮಾಡುತ್ತೇವೆ. ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ನಾಯಕರು ಮಾಡುತ್ತಾ ಇರುವ ಆರೋಪ, ನಮ್ಮಕಾರ್ಯಕರ್ತರ ಮೇಲೆ ಕೇಸ್ ಹಾಕಿಸ್ತಾ ಇರೋದು, ಸರ್ಕಾರದ ಬೇರೆ ಬೇರೆ ಮಂತ್ರಿಗಳು, ಮುಖಂಡರು ನಮ್ಮ ಕಾರ್ಯಕರ್ತರ ವಿರುದ್ಧ ಹೇಳಿಕೆ ಕೊಡುತ್ತಿರುವುದು, ಟಾರ್ಗೆಟ್ ಮಾಡುತ್ತಿರುವುದು ಎಲ್ಲವೂ ಗಮನಕ್ಕೆ ಬಂದಿದೆ. ಎಂದರು. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಹೀಗೆ ಮಾಡಿದ್ರು. ನಮ್ಮ ಕಾರ್ಯಕರ್ತರ ಮೇಲೆ ಕೇಸ್ ಹಾಕಿಸೋದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕೋರ ಮೇಲೆ ಕೇಸ್ ಹಾಕೋದು.ಇಂದಿನ ನಮ್ಮಸಭೆಯಲ್ಲಿ ಈ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ.…