Author: admin

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಯುವ ನಾಯಕ ಹಾಗೂ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಸಿ.ಡಿ.ದಿವಾಕರ್ ಗೌಡ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ಅತ್ಯಂತ ವಿಜ್ರಂಭಣೆಯಿಂದ ಆಚರಿಸಿದರು. ಹಳ್ಳಿ ಮೈಸೂರಿನಲ್ಲಿ ಅದ್ಧೂರಿ ಸಂಭ್ರಮ: ದಿವಾಕರ್ ಗೌಡ ಅವರ ಹುಟ್ಟುಹಬ್ಬಕ್ಕೆ ಎರಡು ದಿನ ಮುಂಚಿತವಾಗಿಯೇ ಹಳ್ಳಿ ಮೈಸೂರು ಹೋಬಳಿಯ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಳ್ಳಿ ಮೈಸೂರು ಸರ್ಕಲ್‌ನಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳು, ಬೃಹತ್ ಕೇಕ್ ಕತ್ತರಿಸುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ, ಜಯಘೋಷ ಹಾಕುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಈ ಸಂಭ್ರಮಾಚರಣೆಯಲ್ಲಿ ದಿವಾಕರ್ ಗೌಡ ಅವರ ಸಾವಿರಾರು ರೈತ ಅಭಿಮಾನಿಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಸಂಗೊಳ್ಳಿ ರಾಯಣ್ಣ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು. ಕ್ಷೇತ್ರದ ಯುವ ಜನತೆ ಮತ್ತು ರೈತರ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ…

Read More

ಕೊರಟಗೆರೆ : ವಾಹನ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸಬೇಕು ಎಂದು ಕೊರಟಗೆರೆ ಪಿಎಸೈ ತೀರ್ಥೇಶ್ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನ ಉದ್ದೇಶಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಅನೇಕ ಅಪಘಾತಗಳು ಮನುಷ್ಯನ ತಪ್ಪುಗಳಿಂದ ಆಗುತ್ತವೆ. ಅಪಘಾತದಲ್ಲಿ ಅಮಾಯಕ ಜನರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನ ಬೀದಿಪಾಲು ಮಾಡುತ್ತಾರೆ. ವಾನಹ ಚಾಲಕರು ವಾಹನದಲ್ಲಿ ಕುಳಿತುಕೊಂಡಾಗ ತಮ್ಮ ಕುಡುಂಬದವರನ್ನ ಒಂದು ಬಾರಿ ನೆನೆಸಿಕೊಳ್ಳಿ. ನಿಮಗೆ ಏನಾದರೂ ತೊಂದರೆ ಆದಲ್ಲಿ ಅವರ ಪರಿಸ್ಥಿತಿ ಏನು. ಅನೇಕರು ಕುಡಿದು ವಾಹನ ಚಾಲನೆ ಮಾಡುತ್ತಾರೆ. ಅದರಿಂದ ಅನೇಕ ಅಪಘಾತಗಳ ಸಂಭಿವಿಸಿ ಮೃತಪಟ್ಟುತ್ತಾರೆ ಎಂದು ತಿಳಿಸಿದರು. ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು ರಸ್ತೆ ನಿಯಮಗಳನ್ನ ಹಾಗೂ ಸಂಚಾರ ಚಿಹ್ನೆಗಳನ್ನ ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೆ ಸರ್ಕಾರದ ನಿಯಮಗಳನ್ನ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ…

Read More

ಕೊರಟಗೆರೆ: ಪಟ್ಟಣದ ಗಿರಿನಗರ ಬಡಾವಣೆಯ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಗುರುಗಳ ಸಾಮೂಹಿಕ ಪ್ರಾರ್ಥನೆಯಲ್ಲಿ ಡಾ.ಜಿ ಪರಮೇಶ್ವರ್ ಭಾವಚಿತ್ರ ಹಿಡಿದು  ಅವರು ಸಿಎಂ ಆಗಲಿ ಎಂದು ಸರ್ವಧರ್ಮದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 2000ಕ್ಕೂ ಹೆಚ್ಚು ಸ್ವಯಂಸೇವಕರು ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ನಯಾಜ್ ಮಾತನಾಡಿ: ಸರ್ವಧರ್ಮ ಗುರುಗಳ ಸಾಮೂಹಿಕ ಪ್ರಾರ್ಥನೆಯ ಮುಖೇನ 2,000 ಕಾರ್ಯಕರ್ತರ ಸಮ್ಮುಖದಲ್ಲಿ ಡಾ.ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ,  ಒಂದು ವೇಳೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೇ ಇದ್ದಲ್ಲಿ  ಕೊರಟಗೆರೆಯಿಂದ ದೆಹಲಿ ಚಲೋ ಬೃಹತ್ ಹೋರಾಟದ ಆಂದೋಲನ ನಡೆಸುತ್ತೇವೆ ಎಂದು ತಿಳಿಸಿದರು. ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಮಾತನಾಡಿ: ಇಂದು ಸರ್ವಧರ್ಮ ಗುರು ಹಿರಿಯರೆಲ್ಲರೂ ಸೇರಿ ಪ್ರಾರ್ಥನೆಯನ್ನು ಮಾಡಿರುವ ಉದ್ದೇಶ  ಕರ್ನಾಟಕದ ದಲಿತ ಮುಖ್ಯಮಂತ್ರಿ  ಕೂಗು ನೆರವೇರಲಿ ಎನ್ನುವ ಉದ್ದೇಶವಿದೆ,  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ಪರಮೇಶ್ವರ್ ಅವರ ಬಹುದೊಡ್ಡ ಕೊಡುಗೆ ಇದೆ. ಸಿದ್ದರಾಮಯ್ಯನವರ ನಂತರ ನಮ್ಮ ಕ್ಷೇತ್ರದ ಶಾಸಕರು ಕರ್ನಾಟಕ…

Read More

ರಾಘವೇಂದ್ರ ಅಡಿಗ ಎಚ್ಚೆನ್ ಸಿನಿ ತಂಡಗಳು ಪ್ರೇಕ್ಷಕರನ್ನ ಸೆಳೆಯಲು ಎಲ್ಲಿಲ್ಲದ ಕಸರತ್ತು ಮಾಡುತ್ತವೆ. ಭರ್ಜರಿ ಪ್ರಚಾರ, ಕಾಲೇಜುಗಳಿಗೆ ಭೇಟಿ, ನಟ-ನಟಿಯರು ಆಟೋ ಓಡಿಸುವುದು ಇನ್ನೂ ಏನೇನೋ, ಇವುಗಳಲ್ಲಿ ಬಹುಮಾನ ಘೋಷಣೆಯೂ ಒಂದು. ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥ ಆಫರ್ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ ಇಂಥಹದ್ದೇ ಆಫರ್ ನೀಡಿದೆ. ‘ಕೊರಗಜ್ಜ’ ಸಿನಿಮಾದ ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ ನೀಡಿದೆ. ಚೆನ್ನಾಗಿ ರೀಲ್ಸ್ ಮಾಡಿ ಹಂಚಿಕೊಂಡು, ಅದರಲ್ಲಿ ಚಿತ್ರತಂಡ ಆಯ್ಕೆ ಮಾಡಿದವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆಯಂತೆ. ಆದರೆ ಇದಕ್ಕೆ ಕೊಡಗಿನ ದೈವ ನರ್ತಕರಿಂದ ಆಕ್ರೋಶ ವುಕ್ತವಾಗಿದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾದ ಹಾಡುಗಳು ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹಾಡುಗಳಿಗೆ ರೀಲ್ಸ್  ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…

Read More

ರಾಘವೇಂದ್ರ ಅಡಿಗ ಎಚ್ಚೆನ್ ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ನಿನ್ನೆ (ಜ.8ರಂದು) ಸಂಜೆ ಧಾರವಾಡದಲ್ಲಿ ‘ರೋಮಾಂಚಕ‘ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಪುತ್ರಿ ರಿತನ್ಯಾ ವಿಜಯ್‌ಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ದುನಿಯಾ ವಿಜಯ್‌ ಮಗಳ ಪಾತ್ರದಲ್ಲಿ ನಟಿಸಿದ್ದು, ‘ಭಾಗ್ಯ’ ಎಂಬ ಪಾತ್ರಕ್ಕೆ ಜೀವತುಂಬಿದ್ದಾರೆ. ರಿತನ್ಯಾ ಅವರು ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತನ್ಯಾ ವಿಜಯ್‌ ಕುಮಾರ್ ಹಾಗೂ ಶಿಶಿರ್ ಬೈಕಾಡಿ ಕಾಣಿಸಿಕೊಂಡಿರುವ ‘ರೋಮಾಂಚಕ’ ಹಾಡು ಆನಂದ್ ಆಡಿಯೊ ಯೂಟ್ಯೂಬ್ ಚಾನೆಲ್‌ ನಲ್ಲಿ ಬಿಡುಗಡೆಯಾಗಿದೆ. ಲ್ಯಾಂಡ್‌ ಲಾರ್ಡ್ ಸಿನಿಮಾದ ಮೂಲಕ ರಿತನ್ಯಾ ವಿಜಯ್‌ ಕುಮಾರ್ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಶಿಶಿರ್ ಬೈಕಾಡಿ ಅವರು ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾನಲ್ಲಿ ಮುಸ್ತಫಾನ ಪಾತ್ರದಲ್ಲಿ ನಟಿಸಿದ್ದರು. ಈಗ ಲ್ಯಾಂಡ್‌ಲಾರ್ಡ್‌ ಸಿನಿಮಾದಲ್ಲಿ ದುನಿಯಾ ವಿಜಯ್‌ ಮಗಳ ಜೊತೆಗೆ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಇದೇ…

Read More

ತಿಪಟೂರು: ಇಲ್ಲಿನ ನಗರದ ನಿವಾಸಿಯಾದ ಗೌರವ್ ಎಂಬ ಬಾಲಕ ಇಂದು ಬೆಳಿಗ್ಗೆ ಟ್ಯೂಷನ್‌ಗೆ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ. ಬಾಲಕನು ಇಂದು ಮುಂಜಾನೆ ಮನೆಯಿಂದ ಟ್ಯೂಷನ್‌ಗೆ ತೆರಳಿದ್ದನು. ಆದರೆ ತರಗತಿ ಮುಗಿದ ನಂತರವೂ ಆತ ಮನೆಗೆ ತಲುಪಿಲ್ಲ. ಕುಟುಂಬಸ್ಥರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಾಲಕನ ಚಹರೆ: ಕಾಣೆಯಾದ ಸಮಯದಲ್ಲಿ ಬಾಲಕನು ನೀಲಿ ಬಣ್ಣದ ಟ್ರ್ಯಾಕ್ ಪ್ಯಾಂಟ್ ಹಾಗೂ ಸ್ವೆಟರ್ ಧರಿಸಿದ್ದನು ಎಂದು ತಿಳಿದುಬಂದಿದೆ. ಸಾರ್ವಜನಿಕರಲ್ಲಿ ವಿನಂತಿ: ಈ ಬಾಲಕನ ಬಗ್ಗೆ ಯಾರಿಗಾದರೂ ಮಾಹಿತಿ ದೊರೆತಲ್ಲಿ ಅಥವಾ ಬಾಲಕ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಬೇಕೆಂದು ಪೋಷಕರು ವಿನಂತಿಸಿದ್ದಾರೆ. ಸಂಪರ್ಕ ಸಂಖ್ಯೆ: 9844437887 ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಗುಬ್ಬಿ: ಕಾನೂನಾತ್ಮಕವಾಗಿ ಕ್ರಯಕ್ಕೆ ಪಡೆದ ಜಮೀನನ್ನು ಇದು ಬೇರೆಯವರು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಬೇರೆ ವ್ಯಕ್ತಿಗೆ ಮಾರಾಟ ಮಾಡಿ ನಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತ ಮುಖಂಡ ವರಹಸಂದ್ರ ಗ್ರಾಮದ ರಂಗಸ್ವಾಮಿ ಬೇಸರ ವ್ಯಕ್ತಪಡಿಸಿದರು. ವರಹಸಂದ್ರ ಗ್ರಾಮದಲ್ಲಿ ಮಾಧ್ಯಮ ದವರೊಂದಿಗೆ ತಮ್ಮ ಅಳಲನ್ನು ತೊಡಿಕೊಂಡರು. ಗುಬ್ಬಿ ತಾಲೂಕು ಕಡಬ ಹೋಬಳಿಯ ವರಹಸಂದ್ರ ಗ್ರಾಮದ ಸ. ನಂ. 19/1ರಲ್ಲಿ  ಒಟ್ಟು 4.31 ಎಕರೆ ಜಮೀನು ತುರುವೇಕೆರೆ ತಾಲೂಕು ದಂಡಿನಶಿವರ  ಹೋಬಳಿ ಸಿದ್ದನಹಟ್ಟಿ ಗ್ರಾಮದ ಕೆಂಪಯ್ಯ ಬಿನ್ ಕೆಂಪಯ್ಯ ಇವರ ಹೆಸರಿಗೆ ಖಾತೆ ಇದ್ದು ಇವರ ಮರಣದ ನಂತರ ಇವರ ಹೆಂಡತಿ ಮಾಳಮ್ಮನಿಗೆ 1.08 ಎಕರೆ ಜಮೀನು ವಿಭಾಗದ ಮೂಲಕ ಬಂದು ಇವರು 1978 ರಲ್ಲಿ  ಜಮೀನು ಮಾರಾಟ ಮಾಡಿರುತ್ತಾರೆ. ಉಳಿಕೆ ಜಮೀನಿನಲ್ಲಿ ನಮ್ಮ ತಂದೆ ಶ್ಯಾನ್ ಬೋಗ್  ನರಸಿಂಹಯ್ಯ 1979 ರಲ್ಲಿ ಕೆಂಪಯ್ಯ ನವರಿಂದ ನಾವು 19/1ರಲ್ಲಿ 1.23 ಎಕರೆ ನಮಗೆ ಶುದ್ದ ಕ್ರಯಕ್ಕೆ ತೆಗೆದುಕೊಂಡು ಸುಮಾರು 60 ವರ್ಷಗಳಿಂದ ಅನುಭವದಲ್ಲಿ…

Read More

ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ ಕಿರಿಕಿರಿ ಉಂಟುಮಾಡುವ ಸಹೋದ್ಯೋಗಿ ಇರಬಹುದು ಅಥವಾ ಸದಾ ಟೀಕಿಸುವ ಸಂಬಂಧಿಕರಿರಬಹುದು; ಇಂತಹವರನ್ನು ನಿಭಾಯಿಸುವುದು ಮಾನಸಿಕವಾಗಿ ದಣಿವು ಉಂಟುಮಾಡುತ್ತದೆ. ಆದರೆ ನಮ್ಮ ಶಾಂತಿಯನ್ನು ಕಳೆದುಕೊಳ್ಳದೆ ಇವರನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಇಲ್ಲಿವೆ ಕೆಲವು ಪರಿಣಾಮಕಾರಿ ಟಿಪ್ಸ್: ೧. ನಂಬಿಕಸ್ತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳಿ: ಮನಸ್ಸಿನಲ್ಲಿರುವ ನೋವು ಅಥವಾ ಕಿರಿಕಿರಿಯನ್ನು ತಪ್ಪು ವ್ಯಕ್ತಿಯ ಮುಂದೆ ತೋಡಿಕೊಂಡರೆ ಅದು ನಿಮ್ಮ ಕೋಪವನ್ನು ಹೆಚ್ಚಿಸಬಹುದು. ಬದಲಾಗಿ, ನಿಮ್ಮನ್ನು ಅರ್ಥಮಾಡಿಕೊಳ್ಳುವ ಮತ್ತು ನಿಮಗೆ ಸಾಂತ್ವನ ನೀಡುವ ನಂಬಿಕಸ್ತ ಸ್ನೇಹಿತರೊಂದಿಗೆ ಮಾತನಾಡಿ. ಇದರಿಂದ ನಿಮ್ಮ ಮಾನಸಿಕ ಒತ್ತಡ (Cortisol level) ಶೇ. ೨೦–೩೦ ರಷ್ಟು ಕಡಿಮೆಯಾಗುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ. ೨. ಮಾನಸಿಕವಾಗಿ ಸಿದ್ಧರಾಗಿರಿ: ಕೆಲವು ವ್ಯಕ್ತಿಗಳು ಸದಾ ಒಂದೇ ರೀತಿಯಲ್ಲಿ ವರ್ತಿಸುತ್ತಾರೆ. ಅವರ ವರ್ತನೆಯ ಮಾದರಿಯನ್ನು ಗಮನಿಸಿ ನೀವು ಮೊದಲೇ ಮಾನಸಿಕವಾಗಿ ಸಿದ್ಧರಾದರೆ, ಅವರು ಎಷ್ಟೇ ಕೆಟ್ಟದಾಗಿ ವರ್ತಿಸಿದರೂ…

Read More

ಬೀದರ್/ ಔರಾದ: ತಾಲೂಕಿನ ಸಂತಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ತಯಾರಕರ ಫೆಡರೇಷನ್‌ ನ ತಾಲೂಕು ಅಧ್ಯಕ್ಷ ರಾಜಕುಮಾರ ಶೆಂಬೆಳ್ಳಿ ಅವರನ್ನುಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಮಲ್ಲಮ್ಮ, ಶಿಕ್ಷಕಿ ಗೀತಾ, ಶಿಕ್ಷಕರಾದ ಬಾಬುರಾವ್ ಹಾಗೂ ಬಸವರಾಜ್ ಉಪಸ್ಥಿತರಿದ್ದರು. ಅಲ್ಲದೆ ಮುಖಂಡರಾದ ಎಸೆಪ್ಪ ಸೇಂಬೆಳ್ಳಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಬಿಸಿಯೂಟ ಯೋಜನೆಯ ಯಶಸ್ಸಿನಲ್ಲಿ ತಯಾರಕರ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 102 ವಯಸ್ಸಿನ ಭೀಮಣ್ಣ ಖಂಡ್ರೆ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಕುಟುಂಬಸ್ಥರು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಅವರು ಹೈದರಾಬಾದ್ ಕರ್ನಾಟಕ ಭಾಗದ ಪ್ರಭಾವಿ ನಾಯಕರಾಗಿದ್ದಾರೆ. ಅವರ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ಅವರು ವೈದ್ಯರ ನಿಗಾದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ವರದಿ: ಅರವಿಂದ್ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More