Author: admin

ಅಹಮದಾಬಾದ್: ಮೋದಿ ಉಪನಾಮ ಹೇಳಿಕೆ ಕುರಿತು ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಗೀತಾ ಗೋಪಿ ಅವರು ವಿಚಾರಣೆಯಿಂದ ಹಿಂದೆ ಸರಿದ ಕಾರಣ, ಪ್ರಕರಣ ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಗೀತಾ ಗೋಪಿ ಅವರು ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಎಜೆ ದೇಸಾಯಿ ಅವರಿಗೆ ಹಸ್ತಾಂತರಿಸುವಂತೆ ಅಥವಾ ಬೇರೆ ಪೀಠಕ್ಕೆ ನಿಯೋಜಿಸುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ನಿರ್ದೇಶನ ನೀಡಿದ್ದರು. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಕಳೆದ ತಿಂಗಳು, ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿತ್ತು. ರಾಹುಲ್ ಗಾಂಧಿ ಅವರ ‘ಮೋದಿ ಉಪನಾಮ ಟೀಕೆ’ ವಿರುದ್ಧ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಪ್ರಕರಣ ದಾಖಲಿಸಿದ್ದರು. ನಮ್ಮತುಮಕೂರು.ಕಾಂನ…

Read More

ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಏಷ್ಯಾದ ಅತ್ಯಂತ ಜನಪ್ರಿಯ ಕ್ರೀಡಾ ತಂಡವಾಗಿದೆ. ಪೋರ್ಚುಗೀಸ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ನೇತೃತ್ವದ ಸೌದಿ ಕ್ಲಬ್ ಅಲ್ ನಾಸರ್ ನಂತರ ಸಿಎಸ್‌ಕೆ ಮೊದಲ ಸ್ಥಾನದಲ್ಲಿದೆ. ಡಿಪೋರ್ಟೆಸ್ ಮತ್ತು ಫೈನಾನ್ಸ್‌ನ ವರದಿಯ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್ ಏಷ್ಯಾದ ಅತ್ಯಂತ ಜನಪ್ರಿಯ ಕ್ರೀಡಾ ತಂಡವಾಗಿ ಆಯ್ಕೆಯಾಗಿದೆ. ಮಾರ್ಚ್ 2023 ರಲ್ಲಿ ಟ್ವಿಟರ್ ಸಂವಹನದ ಆಧಾರದ ಮೇಲೆ ಡಿಪೋರ್ಟೆಸ್ ಮತ್ತು ಫೈನಾಂಜಾಸ್ ತಂಡಗಳನ್ನು ಶ್ರೇಣೀಕರಿಸುತ್ತಾರೆ. ಚೆನ್ನೈ ಸೂಪರ್ ಕಿಂಗ್ಸ್ 512 ಮಿಲಿಯನ್ ಸಂವಾದಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಆದರೆ ಅಲ್-ನಾಸ್ರ್ ಎಫ್‌ಸಿ 500 ಮಿಲಿಯನ್ ಸಂವಾದಗಳೊಂದಿಗೆ ನಂತರದ ಸ್ಥಾನದಲ್ಲಿದೆ. CSK ಹೊರತುಪಡಿಸಿ, ಇತರ ಎರಡು IPL ಫ್ರಾಂಚೈಸಿಗಳು Twitter ನಲ್ಲಿ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಪಟ್ಟಿಯಲ್ಲಿರುವ ಇತರ ಐಪಿಎಲ್ ಫ್ರಾಂಚೈಸಿಗಳೆಂದರೆ ವಿರಾಟ್ ಕೊಹ್ಲಿ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರೋಹಿತ್ ಶರ್ಮಾ ಅವರ ಮುಂಬೈ ಇಂಡಿಯನ್ಸ್. ರಾಯಲ್ ಚಾಲೆಂಜರ್ಸ್ ಬೆಂಗಳೂರು 345…

Read More

ಹಾಸನ: ಜೆಡಿಎಸ್ ಒಂದೇ ಕುಟುಂಬದ ಪಕ್ಷ, ಮಧ್ಯದಲ್ಲಿ ಒಂದು ಬೇರೆ ಮುಖ ಇರಲಿ ಎಂದು ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಹಾಸನದ ಹಳ್ಳಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರು ನಮ್ಮದು ವಂಶ ಪಾರಂಪರಿಕ ಪಕ್ಷವೆಂದು ಟೀಕೆ ಮಾಡುತ್ತಾರೆ ಎಂದು ಹೇಳಿಕೊಳ್ಳುತ್ತಾರೆ. ಆ ಪಕ್ಷಕ್ಕೆ ಮತ್ತೆ ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿಯವರು ಹೇಳಬೇಕು. ಇದರ ನಡುವೆ ನಮ್ಮ ಸಿಸ್ಟರ್ ಭವಾನಿ ರೇವಣ್ಣ ಟಿಕೆಟ್‍ಗಾಗಿ ಹೋರಾಟ ಮಾಡಿದ್ದರು. ಮತದಾರರು ಇಂತಹ ಪಕ್ಷವನ್ನು ಬೆಂಬಲಿಸಬೇಕಾ ಎಂದು ಕುಟುಕಿದ್ದಾರೆ. ಕನಕದಾಸ ಜಯಂತಿ ಘೋಷಣೆ ಹಾಗೂ ಕಾಗಿನೆಲೆ ಪ್ರತಿಷ್ಠಾನ ಮಾಡಿದ್ದು ಯಡಿಯೂರಪ್ಪನವರು. ಇದು ಕುರುಬರ ವೋಟಿಗಾಗಿ ಅಲ್ಲ. ಕನಕದಾಸರ ವಿಚಾರಧಾರೆ ಎಲ್ಲರಿಗೂ ತಲುಪಬೇಕು ಎಂದು ಈ ಅಭಿವೃದ್ಧಿ ಮಾಡಿದ್ದಾರೆ. ಇದೇ ರೀತಿ ಎಲ್ಲಾ ಸಮಾಜಗಳಿಗೂ ಜಾಗೃತಿ ಮೂಡಿಸುವ ಕೆಲಸವನ್ನು ಬಿಜೆಪಿ ಮಾಡಿದೆ. ಆದರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಮಾಜದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದಾರೆ…

Read More

ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತಿ ತಡೆದಿದ್ದಕ್ಕೆ 34 ವರ್ಷದ  ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ. ನಗರದ ಸ್ಕೀಮ್ ನಂಬರ್ 51 ಎಂಬ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಸಬ್ ಇನ್ಸ್‌ಪೆಕ್ಟರ್ ಉಮಾ ಶಂಕರ್ ಯಾದವ್ ಪಿಟಿಐಗೆ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬ್ಯೂಟಿಪಾರ್ಲರ್‌ಗೆ ಹೋಗುತ್ತಿದ್ದ ಪತ್ನಿಯನ್ನು ತಡೆದಿದ್ದರಿಂದ ಕೋಪಗೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತಿ ಪೊಲೀಸರಿಗೆ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅಂತರ್ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರಿಗಾಗಿ ಆಪರೇಷನ್ ಕಾವೇರಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸುಡಾನ್‌ನಿಂದ ಭಾರತೀಯರ ಇನ್ನೂ ಎರಡು ಗುಂಪುಗಳು ಸುರಕ್ಷಿತವಾಗಿ ಜೆಡ್ಡಾಕ್ಕೆ ಬಂದಿವೆ. ಜೆಡ್ಡಾದಿಂದ ಮೂರನೇ ವಿಮಾನ ಭಾರತಕ್ಕೆ ಆಗಮಿಸಿದೆ. ಪೋರ್ಟ್ ಸುಡಾನ್‌ನಿಂದ 256 ಭಾರತೀಯರು ಇಂದು ವಾಯುಪಡೆಯ ವಿಮಾನದಲ್ಲಿ ಜೆಡ್ಡಾಕ್ಕೆ ಆಗಮಿಸಿದ್ದಾರೆ. ಹತ್ತು ಬ್ಯಾಚ್‌ಗಳಲ್ಲಿ ಇದುವರೆಗೆ 1839 ಭಾರತೀಯರನ್ನು ಸುಡಾನ್‌ನಿಂದ ಸ್ಥಳಾಂತರಿಸಲಾಗಿದೆ. ರಾಯಭಾರಿ ಕಚೇರಿಯ ಸಿಬ್ಬಂದಿಯ ಕುಟುಂಬ ಸದಸ್ಯರನ್ನು ನಾಗರಿಕ ಯುದ್ಧ ವಲಯದಿಂದ ಸಾಹಸಮಯ ರೀತಿಯಲ್ಲಿ ರಕ್ಷಿಸಲಾಯಿತು. ಸುಡಾನ್‌ನಿಂದ 392 ಜನರನ್ನು ಸ್ಥಳಾಂತರಿಸುವುದರೊಂದಿಗೆ ವಾಯುಪಡೆಯ ಗ್ಲೋಬ್‌ಮಾಸ್ಟರ್ ಸಿ-17 ವಿಮಾನದಲ್ಲಿ ಭಾರತೀಯ ಪ್ರಜೆಗಳನ್ನು ದೆಹಲಿಗೆ ಕಳುಹಿಸಲಾಯಿತು. ಇಂದು ದೆಹಲಿಗೆ ಆಗಮಿಸಿದ ಗುಂಪಿನಲ್ಲಿ ಇಬ್ಬರು ಮಲಯಾಳಿಗಳಿದ್ದಾರೆ. 362 ಪ್ರಯಾಣಿಕರೊಂದಿಗೆ ಜೆಡ್ಡಾದಿಂದ ಮತ್ತೊಂದು ವಿಮಾನ ಬೆಂಗಳೂರಿಗೆ ಆಗಮಿಸಲಿದೆ. ಸರ್ಕಾರಿ ವೆಚ್ಚದಲ್ಲಿ ಮಲಯಾಳಿಗಳನ್ನು ಮನೆಗೆ ಕರೆತರಲಾಗುವುದು. ಎಲ್ಲಾ ಭಾರತೀಯರನ್ನು ಸ್ಥಳಾಂತರಿಸುವವರೆಗೆ ಆಪರೇಷನ್ ಕಾವೇರಿ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ಮೇಲೆ ನಡೆದ ಹಲ್ಲೆ ಘಟನೆಯನ್ನು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ  ಹೆಬ್ಬಾಳಕರ್  ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಚುನಾವಣಾ ಪ್ರಚಾರದ ರೋಡ್ ಶೋ ವೇಳೆ ದುಷ್ಕರ್ಮಿಗಳು ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಿ ಗಂಭೀರ ಗಾಯಗೊಳಿಸಿದ್ದಾರೆ. ಇಂಥ ಘಟನೆ ಕಾನೂನು ಸುವ್ಯವಸ್ಥೆಯ ಕಗ್ಗೊಲೆಯಾಗಿದೆ ಎಂದು ಅವರು ಹೇಳಿದ್ದಾರೆ. ಡಾ.ಜಿ. ಪರಮೇಶ್ವರ ಅವರು ಅತ್ಯಂತ ಸೌಮ್ಯ, ಸರಳ ಸಜ್ಜನ ರಾಜಕಾರಣಿಯಾಗಿ ಪರಿಚಿತರು. ನಿರ್ವಿವಾದದಿಂದ ಕೂಡಿದ ರಾಜಕೀಯ ಜೀವನ ನಡೆಸುತ್ತಿರುವ ಹಿರಿಯ ರಾಜಕಾರಣಿ. ಅಂಥವರನ್ನು ಈ ರೀತಿಯ ಹಿಂಸಾತ್ಮಕ ರೀತಿಯಲ್ಲಿ ನಡೆಸಿಕೊಳ್ಳುವುದು ಯಾರಿಗೂ ಶೋಭೆಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವನ್ನು ವೈಯಕ್ತಿಕ ದ್ವೇಷಕ್ಕಾಗಿ ಬಳಸುವುದು ಹೀನಾಯ ಕೃತ್ಯ. ಹಿಂಸೆಯ ರೂಪದಲ್ಲಿ ರಾಜಕೀಯ ದ್ವೇಷದ ಇಂಥ ಕೃತ್ಯಗಳು ಭವಿಷ್ಯದಲ್ಲಿ ಎಂದಿಗೂ ಮರುಕಳಿಸಬಾರದು. ಈ ಹಿಂದೆಯೂ ನಾಮಪತ್ರ…

Read More

ತುಮಕೂರು: ಮೇಕೆ ಮರಿ ಕೊಡುವುದಾಗಿ 5 ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ ತುಮಕೂರಿನ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ)ವು 10 ವರ್ಷ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರೂಪಾಯಿ ದಂಡ ವಿಧಿಸಿದೆ. 2021ರಲ್ಲಿ ಈ ಘಟನೆ ನಡೆದಿತ್ತು. ನೊಂದ ಬಾಲಕಿಯ ತಾಯಿ ತನ್ನ ಎರಡನೇ ಮಗುವಿನ ಬಾಣಂತನಕ್ಕೆ ಪಾವಗಡ ತಾಲೂಕಿನ ಓಬಾಳಪುರ ಗ್ರಾಮಕ್ಕೆ ಆಗಮಿಸಿದ್ದರು. ದಿನಾಂಕ 13—01—2022ರಂದು ಬೆಳಗ್ಗೆ ಸುಮಾರು 10 ಗಂಟೆಗೆ ನೊಂದ ಬಾಲಕಿಯು ಆಟವಾಡಲು ಮನೆಯಿಂದ ಹೊರಗೆ ಹೋಗಿದ್ದಳು. ಈ ವೇಳೆ ಕಾವಲಪ್ಪ(45) ಎಂಬಾತ ಮೇಕೆ ಮರಿಕೊಡಿಸುವುದಾಗಿ ಕರೆದೊಯ್ದು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಪ್ರಕರಣದ ತನಿಖಾಧಿಕಾರಿ ಎಸ್.ಆರ್.ಕಾಂತರೆಡ್ಡಿ ಅವರು ಪೋಕ್ಸೋ ಕಾಯ್ದೆಯಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ವಿಚಾರಣೆಯಲ್ಲಿ ಅಪರಾಧಿಯ ಕೃತ್ಯ ಸಾಬೀತಾದ ಕಾರಣ, ನ್ಯಾಯಾಧೀಶರಾದ ಸಂಧ್ಯಾ ರಾವ್ ಪಿ., ಅವರು ಅಪರಾಧಿ ಕಾವಲಪ್ಪನಿಗೆ 10 ವರ್ಷ ಜೈಲುಶಿಕ್ಷೆ 1.10 ಲಕ್ಷ ರೂಪಾಯಿ…

Read More

ದ್ವೇಷದ ಭಾಷಣ ಮಾಡುವವರ ವಿರುದ್ಧ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಕಠಿಣಗೊಳಿಸಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ದ್ವೇಷ ಭಾಷಣದ ಪ್ರಕರಣಗಳಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಪೊಲೀಸರಿಗೆ ನಿರ್ದೇಶನ ನೀಡಿದ ಅಕ್ಟೋಬರ್ 2022 ರ ಆದೇಶವು ಪ್ರಸ್ತುತ ಎಲ್ಲಾ ರಾಜ್ಯಗಳಿಗೆ ಅನ್ವಯಿಸುತ್ತದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ದ್ವೇಷದ ಮಾತುಗಳು ಸಂವಿಧಾನದ ಸಾರ ಮತ್ತು ಚೌಕಟ್ಟಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಪೀಠವು ಗಮನಿಸಿದೆ. ಇನ್ನಾದರೂ ಪೊಲೀಸರು ಎರಡು ಗುಂಪುಗಳ ನಡುವೆ ದ್ವೇಷ ಹರಡುವ, ದೇಶದ ಏಕತೆ ಒಡೆಯುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಪ್ರಕರಣಗಳಲ್ಲಿ ದೂರುಗಳಿಗೆ ಕಾಯದೆ ಪ್ರಕರಣ ದಾಖಲಿಸಬೇಕು. ಕೇವಲ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ವಿಚಾರಣೆ ನಡೆಸುವ ಪದ್ಧತಿ…

Read More

ಮಣಿಪುರದಲ್ಲಿ ಮತ್ತೆ ಸಂಘರ್ಷ. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿ ಸಂಘಟನೆ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರು ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯಾವಳಿಗಳು ಹೊರಬಿದ್ದಿವೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಅಕ್ರಮ ನಿರ್ಮಾಣದ ಕಾರಣ ಕ್ರಿಶ್ಚಿಯನ್ ಚರ್ಚ್‌ಗಳನ್ನು ಕೆಡವಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ತಡರಾತ್ರಿಯಾದರೂ ಪರಿಸ್ಥಿತಿ ಗಂಭೀರವಾಗಿದೆ. ಕಳೆದ ದಿನ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗಾಗಿ ಸಿದ್ಧಪಡಿಸಿದ್ದ ವೇದಿಕೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಸಿದ್ಧಪಡಿಸಿದ್ದ ಆಸನಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದ್ದು, ಐದು ದಿನಗಳ ಕಾಲ ಅಂತರ್ಜಾಲ ಸೇವೆಯನ್ನು ನಿಷೇಧಿಸಲಾಗಿದೆ. ಸ್ಥಳದಲ್ಲಿ ಕಮಾಂಡೋಗಳನ್ನೂ ನಿಯೋಜಿಸಲಾಗಿತ್ತು. ನಿಷೇಧಾಜ್ಞೆ ವಿರೋಧಿಸಿ ಪ್ರತಿಭಟನೆ ನಡೆಸಿದ ಪೊಲೀಸರೊಂದಿಗೆ ಮತ್ತೆ ಘರ್ಷಣೆ  ಪ್ರಾರಂಭವಾಯಿತು. ಜಿಲ್ಲೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಸಂರಕ್ಷಿತ ಅರಣ್ಯ ಮತ್ತು ಜಲಮೂಲಗಳ ಸಮೀಕ್ಷೆಗಾಗಿ ಜಿಲ್ಲೆಯಲ್ಲಿ ಮೂರು ಕ್ರಿಶ್ಚಿಯನ್ ಚರ್ಚ್‌ಗಳನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಬುಡಕಟ್ಟು ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

2023ರ ಸಾರ್ವತ್ರಿಕ ಚುನಾವಣೆ ಹಲವು ವಿಶೇಷತೆಗಳಿಂದ ಕೂಡಿದ್ದು ರಾಜಕೀಯ ರಂಗ ಆಟದ ಹಾಗೂ ವೈಯಕ್ತಿಕ  ಪ್ರತಿಷ್ಠೆ   ಅಕಾಡ ಆಗಿ ಪರಿವರ್ತನೆಯಾಗಿದೆ. ಬೆಳಗಾವಿ 18 ಕ್ಷೇತ್ರಗಳಲ್ಲಿ ಅತಿ ಹೆಚ್ಚು ಚರ್ಚೆ ಹಾಗೂ ರಾಜಕೀಯ ಬೆಳವಣಿಗೆ ನಡೆಯುತ್ತಿರುವ ಕ್ಷೇತ್ರವೆಂದರೆ ಬೆಳಗಾವಿ ಗ್ರಾಮೀಣ ಕ್ಷೇತ್ರ.ಇಲ್ಲಿ ತ್ರಿಕೋನ ಸ್ಪರ್ಧೆ ನಿರ್ಮಾಣವಾಗಿದೆ. ಗ್ರಾಮೀಣ ಶಾಸಕ ಮಹಿಳಾ ಶಕ್ತಿಯನ್ನು ತಮ್ಮದಾಗಿಸಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರದಲ್ಲಿ ತೊಡಗಿದ್ದಾರೆ.ಯಾವುದೇ ಕಾಂಟ್ರವರ್ಸಿಗೆ ಕೇರ್ ಅನ್ನದೆ ಚುನಾವಣೆಯಲ್ಲಿ ಗೆಲ್ಲುವುದೇ ಒಂದೇ ಗುರಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ನಿಶ್ಚಯಿಸಿದಂತೆ ಕಾಣುತ್ತಿದೆ. ಯಾರೇ ಏನೇ ಗಿಮಿಕ್ ಮಾಡಿದರು 50,000ಗಳ ಅಂತರದಿಂದ ಗೆಲವು ನನ್ನದೇ ಎಂಬುದು ಆತ್ಮವಿಶ್ವಾಸ ಅವರಿಗಾಗಿದೆ. ಈ ಕಡೆ ಕುಟುಂಬದ ಸದಸ್ಯರುಗಳಾದ ವಿಧಾನಪರಿಷತ್ ಸದಸ್ಯರು ಚನ್ನರಾಜ ಹಟ್ಟಿಹಳಿ ರುನಾಲ್ ಹೆಬ್ಬಾಳ್ಕರ್ ಅಪಾರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ಸಿನ ಕಾರ್ಯಕರ್ತರು ಗ್ರಾಮೀಣ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ಮಯ ಮಾಡಲು ಪಣತೊಟ್ಟಂತೆ   ಕಾಣುತ್ತಿದೆ. ಏನೇ ಆದರೂ ಮೇ 13 ರಂದು ಯಾರತ್ತ ಜಯ ಸಿಗಲಿದೆ ಅನ್ನೋದು ಕಾದು ನೋಡಬೇಕಾಗಿದೆ. ನಮ್ಮತುಮಕೂರು.ಕಾಂನ…

Read More