Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಿಂದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ತಿನ ಉದ್ಘಾಟನೆ ಮಾಡಲಿದ್ದಾರೆ. ಹೊಸ ಸಂಸತ್ ಭವನ ಪ್ರಧಾನಿ ಮೋದಿಯವರ ಶೋ-ಆಫ್ ಯೋಜನೆ ಎಂದು ಕಾಂಗ್ರೆಸ್ ಈ ಹಿಂದೆ ಟೀಕಿಸಿತ್ತು. ಉದ್ಘಾಟನಾ ಸಮಾರಂಭಕ್ಕೆ ಕೆಲವೇ ದಿನಗಳಿರುವಾಗ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೂತನ ಸಂಸತ್ ಭವನ ಉದ್ಘಾಟನೆಯನ್ನು ಟೀಕಿಸಲು ಇತರ ವಿರೋಧ ಪಕ್ಷಗಳ ನಾಯಕರು ಈಗಾಗಲೇ ಮುಂದಾಗಿದ್ದರು. ಪ್ರಧಾನಮಂತ್ರಿ ಕೇವಲ ಸರ್ಕಾರದ ಮುಖ್ಯಸ್ಥರೇ ಹೊರತು ಸದನದ ಪ್ರಭು ಅಲ್ಲ ಎಂಬ ಟೀಕೆಯನ್ನು ಪ್ರತಿಪಕ್ಷಗಳು ಮುಖ್ಯವಾಗಿ ಎತ್ತಿದವು. ಲೋಕಸಭೆ ಸ್ಪೀಕರ್ ಅಥವಾ ರಾಜ್ಯಸಭಾ ಅಧ್ಯಕ್ಷರು ಏಕೆ ಕಟ್ಟಡವನ್ನು ಉದ್ಘಾಟಿಸಲಿಲ್ಲ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕೇಳಿದ್ದರು. ಸಾವರ್ಕರ್ ಅವರ ಜನ್ಮದಿನವಾದ ಮೇ 28 ರಂದು ಉದ್ಘಾಟನಾ ಸಮಾರಂಭವನ್ನು ತೃಣಮೂಲ ಕಾಂಗ್ರೆಸ್ ಕೂಡ ಟೀಕಿಸಿತ್ತು. ಅದಾದ ಬಳಿಕ ರಾಹುಲ್…
ತೆಲಂಗಾಣದಲ್ಲಿ ಹುಟ್ಟುಹಬ್ಬದ ದಿನ ಹೃದಯಾಘಾತದಿಂದ 16 ವರ್ಷದ ಯುವಕ ಸಾವನ್ನಪ್ಪಿದ್ದು,ಮೃತದೇಹದೊಂದಿಗೆ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಕುಟುಂಬದವರು ಅಂತಿಮ ದರ್ಶನ ಪಡೆದರು. ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಸಿ.ಎಚ್.ಸಚಿನ್ (16) ಮೃತರು. ಆಸಿಫಾಬಾದ್ ಮಂಡಲದ ಬಾಬಾಪುರ ಗ್ರಾಮದ ಮನೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರು ಜಮಾಯಿಸಿದ್ದರು. ಮನೆಯವರು ಮಗನಿಗಾಗಿ ದೊಡ್ಡ ಸಂಭ್ರಮಾಚರಣೆಯನ್ನು ಸಿದ್ಧಪಡಿಸಿದ್ದರು. ಆದರೆ ಸಂಭ್ರಮಾಚರಣೆಯ ನಡುವೆ ಸಚಿನ್ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಹೃದಯಾಘಾತದಿಂದ ಸಚಿನ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅಂತ್ಯ ಸಂಸ್ಕಾರಕ್ಕೂ ಮುನ್ನ ಮಗನ ಪಾರ್ಥಿವ ಶರೀರದೊಂದಿಗೆ ಹುಟ್ಟುಹಬ್ಬ ಆಚರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳಿಕ ಹುಟ್ಟುಹಬ್ಬ ಆಚರಿಸಿ ಸಚಿನ್ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯಸಂಸ್ಕಾರ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy …
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು ನಿನ್ನೆಯ ಮಹಾಮಳೆಗೆ ಯುವಕನೋರ್ವ ರಾಜಕಾಲುವೆಯಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ. ಕೆಪಿ ಅಗ್ರಹಾರದ ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಲೋಕೇಶ್(31) ಮೃತದೇಹ ಇಂದು(ಮೇ 22) ಬ್ಯಾಟರಾಯನಪುರದ ರಾಜಕಾಲುವೆ ಬಳಿ ಪತ್ತೆಯಾಗಿದೆ. ಸದ್ಯಕ್ಕೆ ಲೋಕೇಶ್ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅವೈಜ್ಞಾನಿಕ ರಾಜಕಾಲುವೆ ಕಾಮಗಾರಿಯಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಸ್ಸಾಂ ಸರ್ಕಾರ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಬಿಡುಗಡೆ ಮಾಡಿದೆ. ಆದೇಶದ ಪ್ರಕಾರ, ಕೆಲವು ಶಿಕ್ಷಕರು ಸಾಮಾನ್ಯ ಜನರಿಗೆ ಸ್ವೀಕಾರಾರ್ಹವಲ್ಲದ ರೀತಿಯಲ್ಲಿ ಡ್ರೆಸ್ಸಿಂಗ್ ಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಪುರುಷ ಶಿಕ್ಷಕರು ಟೀ ಶರ್ಟ್ ಮತ್ತು ಜೀನ್ಸ್ ಧರಿಸುವಂತಿಲ್ಲ. ಮಹಿಳಾ ಶಿಕ್ಷಕರು ಟೀ ಶರ್ಟ್, ಜೀನ್ಸ್, ಲೆಗ್ಗಿಂಗ್ ಧರಿಸಿ ಶಾಲೆಗೆ ಬರಬಾರದು. ಎಲ್ಲಾ ಶಿಕ್ಷಕರು ಸ್ವಚ್ಛ, ಸಾಧಾರಣ ಮತ್ತು ಸಭ್ಯವಾದ ಬಟ್ಟೆಗಳನ್ನು ಧರಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕ್ಯಾಶುಯಲ್ ಮತ್ತು ಪಾರ್ಟಿ ವೇರ್ ಗಳನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಪುರುಷ ಶಿಕ್ಷಕರಿಗೆ ವಸ್ತ್ರ ಸಂಹಿತೆ ಎಂದರೆ ಶರ್ಟ್ ಮತ್ತು ಪ್ಯಾಂಟ್ ಎಂದು ಸರ್ಕಾರ ನಿಗದಿಪಡಿಸಿದೆ. ಮಹಿಳಾ ಶಿಕ್ಷಕರಿಗೆ ಸಾಧಾರಣ ಸಲ್ವಾರ್ ಸೂಟ್ ಮತ್ತು ಸೀರೆ ಧರಿಸುವಂತೆ ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೀರೋ ಟ್ರಾಫಿಕ್ ಪ್ರೋಟೋಕಾಲ್ ಅನ್ನು ಹಿಂಪಡೆಯುವಂತೆ ಬೆಂಗಳೂರು ಪೊಲೀಸರಿಗೆ ಸೂಚಿಸಿದ್ದಾರೆ. ವಾಹನಗಳ ತಡೆಯಿಂದ ಜನರು ಎದುರಿಸುತ್ತಿರುವ ತೊಂದರೆಗಳನ್ನು ನೇರವಾಗಿ ಕಂಡಿದ್ದರಿಂದ ಈ ನಿರ್ದೇಶನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ನನ್ನ ಸಂಚಾರಕ್ಕೆ ‘ಜೀರೋ ಟ್ರಾಫಿಕ್’ ಪ್ರೋಟೋಕಾಲ್ ಅನ್ನು ಮರುಸ್ಥಾಪಿಸುವಂತೆ ನಾನು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇನೆ.’ಝೀರೋ ಟ್ರಾಫಿಕ್’ ನಿಂದಾಗಿ ನಿರ್ಬಂಧಿತ ಲೇನ್ನಲ್ಲಿ ಪ್ರಯಾಣಿಸುವ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ.- ಟ್ವಿಟರ್ನಲ್ಲಿ ಬರೆದಿದ್ದಾರೆ. ಸಿದ್ದರಾಮಯ್ಯ ಅವರು ಶನಿವಾರ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಐದು ಪ್ರಮುಖ ಚುನಾವಣಾ ಭರವಸೆಗಳನ್ನು ಜಾರಿಗೆ ತರಲು ತಾತ್ವಿಕವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ಮಾಸಿಕ 2000 ರೂ., ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ಮತ್ತು ನಿರುದ್ಯೋಗಿ ಯುವಕರಿಗೆ ಆರ್ಥಿಕ ನೆರವು ಮುಂತಾದ ಭರವಸೆಗಳನ್ನು ಜಾರಿಗೆ ತರಲು…
ತುಮಕೂರು: ಭಾನುವಾರ ರಾತ್ರಿ ತುಮಕೂರಿನಲ್ಲಿ ಭಾರೀ ಪ್ರಮಾಣದ ಆಲಿಕಲ್ಲು ಮಳೆಯಾಗಿದ್ದು, ಭಾರೀ ಗಾತ್ರದ ಆಲಿಕಲ್ಲುಗಳನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ನಿನ್ನೆ ಜೋರಾಗಿ ಮಳೆ ಸುರಿದಿದ್ದು, ಮಳೆಯ ಜೊತೆಗೆ ಆಲಿಕಲ್ಲುಗಳು ಕೂಡ ಬಿದ್ದಿವೆ. ಸತತ ಎರಡು ಗಂಟೆಗಳಿಂದ ಆಲಿಕಲ್ಲು ಮಳೆಯಾಗಿದ್ದು ಸಾರ್ವಜನಿಕರು ಆತಂಕ್ಕೀಡಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಬಿದ್ದ ಭಾರೀ ಗಾತ್ರ ಆಲಿಕಲ್ಲಿನ ಮಳೆಯಾಗಿದೆ. ಜಲ್ಲಿಕಲ್ಲುಗಳ ಗಾತ್ರದ ಆಲಿಕಲ್ಲುಗಳು ಧಾರಾಕಾರವಾಗಿ ಸುರಿದಿದ್ದು, ಕೆಲವೆಡೆ ಜನರು ಆಲಿಕಲ್ಲುಗಳನ್ನು ಹೆಕ್ಕುತ್ತಿರುವ ದೃಶ್ಯಗಳು ಕೂಡ ಕಂಡು ಬಂತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದಾರೆ. ಇನ್ನೂ ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ–ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ಹಾಗೂ ಇಡೀ ರಾಜ್ಯವೇ ಎದುರು ನೋಡುತ್ತಿದ್ದ ಹೈವೋಲ್ಟೇಜ್ ವರುಣ ವಿಧಾನಸಭೆ ಕ್ಷೇತ್ರದ ವಾರ್ ರೂಮ್ ಸಂಯೋಜಕನಾಗಿ ನನ್ನನ್ನು ನೇಮಕ ಮಾಡಿ ಅವರ ಗೆಲುವಿಗೆ ಶ್ರಮಿಸಲು ಜವಾಬ್ದಾರಿತ ಕೆಲಸ ನೀಡಿದ ಎಐಸಿಸಿ, ಕೆಪಿಸಿಸಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕವಾದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಪಟೂರಿನ ಟುಡಾ ಶಶಿಧರ್ ತಿಳಿಸಿದರು. ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವಾರ್ ರೂಮ್ ಗೆ ಭೇಟಿ ನೀಡಿ ವರುಣ ಕ್ಷೇತ್ರದ ಪ್ರಚಾರದ ರೂಪುರೇಷೆಗಳ ಬಗ್ಗೆ ತಂಡದೊಂದಿಗೆ ಚರ್ಚಿಸುತ್ತಿದ್ದರು. ಈ ಸಂದರ್ಭದಲ್ಲಿ ಶಶಿಧರ್ ತಂಡದವರು ಕಾಂಗ್ರೆಸ್ ಪಕ್ಷ 2018ರಲ್ಲಿ ಕಡಿಮೆ ಮತ ಹೊಂದಿರುವ ಬೂತ್ ಗಳನ್ನು ಗುರುತಿಸಿ ಅಂತಹ ಬೂತ್ ಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ತಲುಪಿಸಲು ತಂಡವು ಹಗಲಿರಲು ಶ್ರಮವಹಿಸಿದ್ದು, ರಾಜ್ಯವೇ ಎದುರು ನೋಡುತ್ತಿದ್ದ ವರುಣ ವಿಧಾನಸಭಾ ಕ್ಷೇತ್ರದ ವಾರ್ ರೂಮ್ ನಿಭಾಯಿಸುವ ಅವಕಾಶ ಶಶಿಧರ್ ತಂಡಕ್ಕೆ ಸಿಕ್ಕಿದ್ದು ನಿಜಕ್ಕೂ…
ತುಮಕೂರು ಜಿಲ್ಲೆ ಕಾಡು ಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಈ ವೇಳೆ ತುರುವೇಕೆರೆ ಕ್ಷೇತ್ರದ ನೂತನ ಶಾಸಕ ಜೆಡಿಎಸ್ ಪಕ್ಷದ ಎಂ.ಟಿ.ಕೃಷ್ಣಪ್ಪನವರು ಡಿ.ಕೆ.ಶಿವಕುಮಾರ್ ಅವರಿಗೆ ಹಾರ ಹಾಕುವ ಮೂಲಕ ಅಭಿನಂದಿಸಿದರು. ತುರುವೇಕೆರೆ ಪಟ್ಟಣದಲ್ಲಿರುವ ಕ್ರೀಡಾಂಗಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಡಿ.ಕೆ.ಶಿವಕುಮಾರ್ ಬಂದಿಳಿದರು. ಈ ವೇಳೆ ಡಿಕೆಶಿ ಅಭಿಮಾನಿಗಳು ಕಾರ್ಯಕರ್ತರು ಹರ್ಷೋದ್ಘಾರ ಮಾಡಿ ಜೈಕಾರ ಕೂಗಿದರು. ಇದೇ ವೇಳೆ ಅಭಿಮಾನಿಗಳು ಮತ್ತು ಕಾಂಗ್ರೆಸ್ ಮುಖಂಡರುಗಳು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದರು. ಬಳಿಕ ಅಭಿಮಾನಿಗಳತ್ತ ಕೈಬೀಸಿದ ಡಿ.ಕೆ.ಶಿವಕುಮಾರ್ ಕಾರ್ ಹತ್ತಿ ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದತ್ತ ಪ್ರಯಾಣ ಬೆಳೆಸಿದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಶ್ರೀ ಸಿದ್ಧಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದ ಎಂ.ಸಿದ್ದಲಿಂಗಯ್ಯ (95ವರ್ಷ) ನಿಧನರಾಗಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಪೀಠಾಧಿಪತಿಯಾಗಿದ್ದ ಸಂದರ್ಭದಲ್ಲಿ ಸುಮಾರು ಐವತ್ತು ವರ್ಷಕ್ಕೂ ಹೆಚ್ಚು ಕಾಲ ಸಿದ್ದಗಂಗಾ ಮಠದಲ್ಲಿ ಕೆಲಸ ಮಾಡಿದ್ದರು. ಅಲ್ಲದೆ ಅತ್ಯಂತ ಪ್ರಾಮಾಣಿಕವಾಗಿ ಲೆಕ್ಕಪತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy