Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ತುರುವೇಕೆರೆ: ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿ, ಶಾಸಕನಾಗುವ ಮಟ್ಟಕ್ಕೆ ಬೆಳೆದು ಬಂದವನು. ಎಲ್ಲಾ ರೀತಿಯ ಅಡೆತಡೆಗಳನ್ನು ದಾಟಿ ಬೆಳೆದು ಬಂದಿದ್ದೇನೆ, ಚುನಾವಣಾ ಕಣದಲ್ಲಿ ಹಲವು ಗೆಲುವು ಸೋಲುಗಳನ್ನು ಕಂಡಿದ್ದೇನೆ. ಆದರೆ ನನಗೆ ಈ ಚುನಾವಣೆಯಲ್ಲಿ ಅವರು ಮಾಡಿದ ಕುತಂತ್ರದಿಂದ ನನ್ನ ಸೋಲಾಯಿತು ಎಂದು ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ತೋಟದಮನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಅವರ ಮೋಸದ ಆಟಕ್ಕೆ ಕುತಂತ್ರಕ್ಕೆ ಇವತ್ತು ಈ ತಾಲೂಕಿನ ಜನ ಬಲಿಯಾಗಿದ್ದಾರೆ. ಅವರು ಮಾಡಿದ ಮೋಸ ಒಂದಾ ಎರಡಾ? ನಾನು ಈ ದಿನ ಚುನಾವಣೆಯಲ್ಲಿ ಸೋತಿರಬಹುದು ಆದರೆ ನಾನು ಗೆದ್ದಿದ್ದೇನೆ. ನಿಮ್ಮ ಶ್ರಮ ನಿಮ್ಮ ಶಕ್ತಿ ನೀವು ಮಾಡಿದಂತಹ ಕೆಲಸ ಕಾರ್ಯ ಬೇರೆ ಪಕ್ಷದ ಬಂಧ ಕಾರ್ಯಕರ್ತರು ಸಹ ಒಟ್ಟಾಗಿ ಶ್ರಮಪಟ್ಟು ಕೆಲಸ ಮಾಡಿದ್ದೀರಾ ನಾನು ಸೋತಿಲ್ಲ ಇಲ್ಲಿ ಗೆದ್ದಿದ್ದೇನೆ ಎಂದರು. ನಾನು ಸೋತಿದ್ದರೆ ಕೇವಲ ಬರಿ 25,000 ಮತಗಳಿಗೆ ಸೀಮಿತವಾಗಬೇಕಾಗಿತ್ತು, ಆದರೆ 58000 ,ಮತಗಳನ್ನು ಪಡೆದಿದ್ದೇನೆ.…
ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ! ಕಾಳಿ ವೇಲಾಯುಧಂ ನಿರ್ಮಾಣ ಮಾಡಿ ನಿರ್ದೇಶಿಸಿರುವ ‘JIOCINEMA’ ಒರಿಜಿನಲ್ ವೆಬ್ ಸಿರೀಸ್ನಲ್ಲಿ ಅದಿತಿ ಪ್ರಭುದೇವ, ವಿಕ್ರಮ್ ರವಿಚಂದ್ರನ್ ಮತ್ತು ರವಿಶಂಕರ್ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟ ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್ ಸಿರೀಸ್. ತಮ್ಮ ಪಾತ್ರದ ಕುರಿತು ತುಂಬ ಉತ್ಸಾಹದಿಂದ ವಿವರಿಸುತ್ತಾರೆ ವಿಕ್ರಮ್. ‘ಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ. ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ…
ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಮದಲ್ಲಿ ಅಲೆಮಾರಿಗಳಿಗೆ ವೃದ್ದಾಪ್ಯ ವೇತನ,ಅಂಗವಿಕಲ ವೇತನ ಸೌಲಭ್ಯ ಮನೆಗೆ ತಲುಪಿಸಲು ತಾಲೂಕು ಆಡಳಿತ ವಿಫಲವಾಗಿರುವ ಸಂಬಂಧ ನಮ್ಮತುಮಕೂರು ನಿನ್ನೆ ಸವಿವರವಾದ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೊರಟಗೆರೆ ತಹಶೀಲ್ದಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಈ ಹಿಂದಿನ ಕೊರಟಗೆರೆ ತಹಶೀಲ್ದಾರ್ ನಹೀದಾ ಜಂ ಜಂರವರು ಈ ಜನರಿರುವ ಸ್ಥಳಕ್ಕೆ ಸಂಬಂಧಿಸಿದ ನೌಕರರನ್ನು ಕಳುಹಿಸಿ ಸ್ಥಳದಲ್ಲೇ ಬಹುತೇಕ ಮೂಲ ದಾಖಲೆಗಳಾದ ಆಧಾರ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಮಾಡಿಸಿ ಕರ್ತವ್ಯ ಪ್ರಜ್ಞೆಯ ಜೊತೆಗೆ ಮಾನವೀಯತೆ ಮೆರೆದಿದ್ದರು. ಈ ನಡುವೆ ಅವರು ವರ್ಗಾವಣೆಯಾಗಿದ್ದರಿಂದಾಗಿ ಅಲೆಮಾರಿಗಳಿಗೆ ಸಂವಿಧಾನದತ್ತವಾಗಿ ಸಿಗಬೇಕಾಗಿದ್ದ ಸವಲತ್ತುಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ನಮ್ಮತುಮಕೂರು ಮಾಧ್ಯಮದಲ್ಲಿ ವರದಿ ಪ್ರಕಟಗೊಂಡು ಕೆಲವೇ ಗಂಟೆಗಳ ಅವಧಿಯಲ್ಲಿ ಕೊರಟಗೆರೆ ತಹಶೀಲ್ದಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಇನ್ನೂ ತಹಶೀಲ್ದಾರ್ ಅವರು ಅಲೆಮಾರಿಗಳ ಸಮಸ್ಯೆಗೆ ಹೇಗೆ ಪರಿಹಾರ ನೀಡಲಿದ್ದಾರೆ ಎನ್ನುವ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ, ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ… ನಮ್ಮತುಮಕೂರು.ಕಾಂನ…
ತಮಿಳುನಾಡಿನ ನಕಲಿ ಮದ್ಯ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ ಚೆಂಗಲ್ಪೇಟೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 22ಕ್ಕೆ ತಲುಪಿದೆ. ಚೆಂಗಲಪೇಟೆಯ ಚಿತ್ತಮೂರಿನವರಾದ ಮುತ್ತು ಮೃತರು. ಇಂದು ಚೆಂಗಲ್ಪೇಟ್ ಮತ್ತು ವಿಜಿಪುರಂನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 35 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆಂಗಲ್ ಪೇಟೆಯಲ್ಲಿ ತಂಬಿ ಮತ್ತು ಶಂಕರ್ ಮೃತಪಟ್ಟಿದ್ದಾರೆ. ಸರವಣನ್ ವಿಜಿಪುರಂನಲ್ಲಿ ನಿಧನರಾದರು. ಅಪಘಾತಕ್ಕೆ ಸಂಬಂಧಿಸಿದಂತೆ 2466 ಪ್ರಕರಣಗಳು ದಾಖಲಾಗಿವೆ. 2461 ಜನರನ್ನು ಬಂಧಿಸಲಾಗಿದೆ. 21,611 ಲೀಟರ್ ನಕಲಿ ಮದ್ಯ ಪತ್ತೆ ಮಾಡಿ ನಾಶಪಡಿಸಲಾಗಿದೆ. 17,031 ವಿದೇಶಿ ಮದ್ಯದ ಬಾಟಲಿಗಳನ್ನೂ ವಶಪಡಿಸಿಕೊಳ್ಳಲಾಗಿದೆ. ನಕಲಿ ಮದ್ಯ ಮತ್ತು ಗುಟ್ಕಾ ತಯಾರಿಸಿ ಹಂಚುತ್ತಿದ್ದ ಪ್ರಕರಣ ಇದಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಘೋಷಿಸಿದ್ದಾರೆ. ಮರಕಾನಂ ಇನ್ಸ್ಪೆಕ್ಟರ್ ಅರುಲ್ ವಡಿವಜಗನ್, ಸಬ್ ಇನ್ಸ್ಪೆಕ್ಟರ್ ದಿಬಾನ್, ಕೊಟ್ಟಕುಪ್ಪಂ ನಿಷೇಧಾಜ್ಞೆ ಜಾರಿ ವಿಭಾಗದ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮರಿಯಾ ಸೋಫಿ ಮಂಜುಳಾ ಮತ್ತು ಸಬ್ ಇನ್ಸ್ಪೆಕ್ಟರ್…
ಮಾಜಿ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಯುವಕನೊಬ್ಬ ತನ್ನ ಸಹೋದ್ಯೋಗಿಯನ್ನು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. 25 ವರ್ಷದ ಬ್ಯಾಂಕ್ ಉದ್ಯೋಗಿ ಸಂದೇಶ್ ಪಾಟೀಲ್ ಎಂಬಾತನನ್ನು ಆತನ ಸಹೋದ್ಯೋಗಿ ಚೂತನ್ ಸಫಿ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಹತ್ಯೆಯ ನಂತರ ಸಂದೇಶ್ ನ ಶವವನ್ನು ಸಾಫಿ ರೈಲು ಹಳಿಗಳ ಮೇಲೆ ಎಸೆದಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಫಿ ಮತ್ತು ಸಂದೇಶ್ ಸಹ ನಿರೂಪಕರು. ಆತ ಮತ್ತು ಸಫಿಯ ಮಾಜಿ ಗೆಳತಿ ಒಂದೇ ಬ್ಯಾಂಕಿನ ಬೇರೆ ಬೇರೆ ಬ್ಯಾಂಕ್ಗಳಲ್ಲಿ ಕೆಲಸ ಮಾಡುತ್ತಿದ್ದರು. ಸಂದೀಪ್ ಅವರನ್ನು ಕುಡಿಯಲು ಕರೆದಿದ್ದು, ಮದ್ಯಪಾನ ಮಾಡುವಾಗ ಸಫಿ ಸಂದೇಶ್ ನ ತಲೆಗೆ ಕಲ್ಲಿನಿಂದ ಹೊಡೆದು ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಅವನ ತಲೆಗೆ ಹೊಡೆದನು. ನಂತರ ಸಫಿ ರೈಲ್ವೆ ಹಳಿಯಿಂದ ಹಾದುಹೋದರು. ದಾರಿಯಲ್ಲಿ ಹೋಗುತ್ತಿದ್ದ ಕೆಲವರು ಶವವನ್ನು ನೋಡಿ ಠಾಣಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಹೆಸರು ಘೋಷಣೆ ಮಾಡುತ್ತಾರೆ. ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಮಾತುಕತೆ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಕನ್ಫರ್ಮ್ ಆಗಿದೆ. ನಾವೆಲ್ಲ ಸಿದ್ದರಾಮಯ್ಯಗೆ ಶುಭಾಶಯ ತಿಳಿಸಿದ್ದೇವೆ. ಸಿದ್ದರಾಮಯ್ಯ ಕೂಡ ತುಂಬಾ ಖುಷಿಯಾಗಿದ್ದಾರೆ. ಯಾವಾಗ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬುದು ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ ಕೂಡ ನಾಯಕರನ್ನು ಭೇಟಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕಿ ಪುಷ್ಪಾ ಅಮರನಾಥ್ ತಿಳಿಸಿದ್ರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಲಾಗುವುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಇಂದು ಉಲ್ಟಾ ಹೊಡೆದಿದ್ದಾರೆ. ಷರತ್ತು ವಿಧಿಸುವುದಿಲ್ಲ ಕೆಲ ಮಾನದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಘೋಷಣೆ ಮಾಡುವ ಮುನ್ನ ಹಣಕಾಸಿನ ಸ್ಥಿತಿಯನ್ನು ವರ್ಕೌಟ್ ಮಾಡಿದ್ದೇವೆ. ಅದಕ್ಕೆ ಬೇಕಾದ ಮಾನದಂಡ ರೂಪಿಸಬೇಕು. ಅ ಮಾನದಂಡ ರೂಪಿಸಿ ಜಾರಿ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ ವಿಧವಾ ವೇತನ ಪಡೆಯುತ್ತಿರುವವರಿಗೆ 2 ಸಾವಿರ ಕೊಟ್ಟರೆ ಡಬಲ್ ಆಗುತ್ತದೆ. ಹೀಗೆ ಕೆಲವೊಂದು ವಿಚಾರಗಳಿವೆ. ಇವೆಲ್ಲವನ್ನು ವರ್ಕೌಟ್ ಮಾಡಿ ಜಾರಿ ಮಾಡಲಾಗುವುದು ಎಂದು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭಾರತೀಯ ಪಾಕಪದ್ಧತಿಯು ಸುವಾಸನೆ ಮತ್ತು ಬಣ್ಣಗಳ ನಿಧಿಯಾಗಿದೆ. ಮತ್ತು ಈ ಸವಿಯಾದ ಅಡುಗೆ ಒಂದು ಸಾವಿರ ವರ್ಷಗಳ ಹಿಂದಿನ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಭಾರತೀಯ ಪಾಕಪದ್ಧತಿಯು ವಿಶಿಷ್ಟವಾದ ಸುವಾಸನೆ, ಸುವಾಸನೆ ಮತ್ತು ವಿಭಿನ್ನ ಅಡುಗೆ ವಿಧಾನಗಳಿಂದ ಸಮೃದ್ಧವಾಗಿದೆ. ಜಗತ್ತು ಜಾಗತಿಕ ಗ್ರಾಮವಾಗುತ್ತಿದ್ದಂತೆ, ವಿವಿಧ ದೇಶಗಳಿಂದ ಹೆಚ್ಚು ಹೆಚ್ಚು ಜನರು ಭಾರತೀಯ ಪಾಕಪದ್ಧತಿಯ ಅಭಿಮಾನಿಗಳಾಗುತ್ತಿದ್ದಾರೆ. ಇದೀಗ ಭಾರತೀಯ ಆಹಾರಪ್ರೇಮಿಗಳ ಪಟ್ಟಿಗೆ ಬಿಲಿಯನೇರ್ ಎಲಾನ್ ಮಸ್ಕ್ ಕೂಡ ಸೇರಿಕೊಂಡಿದ್ದಾರೆ. ಮಂಗಳವಾರ, ಟ್ವಿಟರ್ ಬಳಕೆದಾರ ಡೇನಿಯಲ್ ಬಟರ್ ಚಿಕನ್, ನಾನ್ ಮತ್ತು ರೈಸ್ನ ಬಾಯಲ್ಲಿ ನೀರೂರಿಸುವ ಚಿತ್ರವನ್ನು ಹಂಚಿಕೊಂಡಿದ್ದಾರೆ. “ನಾನು ಭಾರತೀಯ ಆಹಾರವನ್ನು ಪ್ರೀತಿಸುತ್ತೇನೆ. ತುಂಬಾ ರುಚಿಕರವಾಗಿದೆ, ”ಅವರು ಹೇಳಿದರು. “ನಿಜ,” ಎಂದು ಮಸ್ಕ್ ಉತ್ತರಿಸಿದರು. ಟೆಸ್ಲಾ CEO ಅವರ ಒಂದು ಪದದ ಉತ್ತರವು ಭಾರತೀಯರು ಮತ್ತು ಆಹಾರಪ್ರೇಮಿಗಳನ್ನು ಸಮಾನವಾಗಿ ಸೆಳೆಯಿತು. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತೀಯ ಆಹಾರವನ್ನು ಹೊಗಳಿದ್ದಕ್ಕಾಗಿ ಅನೇಕರು ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಪೋಸ್ಟ್ ಟ್ವಿಟರ್ನಲ್ಲಿ ತ್ವರಿತವಾಗಿ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ…
ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಜನ್ಪತ್ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಾವಣಗೆರೆ: ಬಿಜೆಪಿ ತಪ್ಪು ನಿರ್ಧಾರ, ಗುಜರಾತ್ ಮಾದರಿಯೇ ಸೋಲಿಗೆ ಕಾರಣ, ಮೀಸಲಾತಿ ಪರಿಷ್ಕರಣೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳು ಮಾಡಿದವು. ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಲ್ಲಿ ಜಾತಿ ಸಮೀಕರಣ ಆಗಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಮುದಾಯಕ್ಕೆ ಮಲ್ಲಿಕಾರ್ಜುನ ಖರ್ಗೆ, ಕುರುಬ ಸಮುದಾಯಕ್ಕೆ ಸಿದ್ದರಾಮಯ್ಯ, ವಾಲ್ಮೀಕಿ ಸಮಾಜಕ್ಕೆ ಸತೀಶ್ ಜಾರಕಿಹೊಳಿ ಇದ್ದಾರೆ. ಭಾರತೀಯ ಜನತಾ ಪಕ್ಷದಲ್ಲಿ ಇಂತಹ ಪ್ಲ್ಯಾನ್ ಮಾಡಲೇ ಇಲ್ಲ. ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತಗೊಳಿಸಿದ್ದರಿಂದ ಬಿಜೆಪಿ ಸೋತಿದೆ. ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಹೇಳುತ್ತಿದ್ದಾರೆ. ಯಡಿಯೂರಪ್ಪರನ್ನು ಹಿಂದೆ ಸರಿಸಿದ್ದೇ ದೊಡ್ಡ ತಪ್ಪು ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…