Author: admin

ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಎಲ್ಲರೂ ಮತದಾನ ಮಾಡುವಂತೆ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಈ ಬಾರಿ ಹೊಸದಾಗಿ 16,04,285 ಮತದಾರರು ಸೇರ್ಪಡೆಯಾಗಿದ್ದಾರೆ. ರಾಜ್ಯದಲ್ಲಿ 18ರಿಂದ 19 ವಯಸ್ಸಿನ 11,71,558 ಯುವ ಮತದಾರರಿದ್ದು, ಯುವಕರು 645140, ಯುವತಿಯರು 526237, ಇತರೆ 181 ಮತದಾರರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ನಮ್ಮ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಜಾರಿ‌ಗೆ ತರುತ್ತೇವೆ. ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಮತ ಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ 130 ಸೀಟ್ ಬರುವ ವಿಶ್ವಾಸ ಇದೆ‌ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಸಿದ್ದಾರ್ಥ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿರುವ  ಮತಗಟ್ಟೆ ಸಂಖ್ಯೆ 133ರ ಬೂತ್ ನಂ 59ರಲ್ಲಿ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಬಂದು ಮತ ಚಲಾವಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ಉದ್ದೇಶ ಪೂರ್ವಕವಾಗಿ ನಾನು ಓದಿದ ಊರು, ಶಾಲೆಯಲ್ಲೇ ಮತದಾನ ಮಾಡುತ್ತೇನೆ ಎಂದರು. ಇಲ್ಲಿನ ನನಗೆ ಭಾವನಾತ್ಮಕ ಸಂಬಂಧ ಇದೆ. ಹಾಗಾಗಿ ನಾನು ಸ್ಪರ್ಧೆ ಮಾಡುವ ಕೊರಟಗೆರೆ ಕ್ಷೇತ್ರದಲ್ಲಿ ಮತ ವರ್ಗಾವಣೆ ಮಾಡಿಕೊಂಡಿಲ್ಲ ಎಂದರು. ಸಂತೋಷದಿಂದ ಮತಚಲಾವಣೆ ಮಾಡಿದ್ದೇನೆ.  ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಷಣ್ಮುಖಪ್ಪ ಗೆದಿಯ ಬೇಕು ಅಂತ ನಮ್ಮೆಲ್ಲರಿಗೂ ಆಸೆ ಇದೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ…

Read More

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತಗಟ್ಟೆ ಸಂಖ್ಯೆ 116ರಲ್ಲಿ ಮತ ಚಲಾಯಿಸಿದರು. ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಪಾಠಶಾಲೆಯ   ಕೊಠಡಿಯಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು ಮೊದಲ ಮತದಾನ ಮಾಡಿದರು. ಮತ ಚಲಾಯಿಸಲು ಮತಗಟ್ಟೆಗೆ ಬಂದ ಸ್ವಾಮೀಜಿಯವರ ಕಾಲಿಗೆ ಬಿದ್ದು ಮತಗಟ್ಟೆ ಸಿಬ್ಬಂದಿ ಆಶೀರ್ವಾದ ಪಡೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಗೋ ಫಸ್ಟ್‌ ಗೆ ನೋಟಿಸ್ ನೀಡಿದೆ. ಡಿಜಿಸಿಎ ಸೂಚನೆಯಲ್ಲಿ, ಸೇವೆಗಳ ನಿರಂತರ ಅಮಾನತಿಗೆ ಕಾರಣವನ್ನು ನೀಡಬೇಕು. ಈ ಟಿಪ್ಪಣಿಗೆ 15 ದಿನಗಳೊಳಗೆ ಉತ್ತರಿಸುವಂತೆಯೂ ಸೂಚಿಸಲಾಗಿದೆ. ಡಿಜಿಸಿಎ ಕೂಡ ಗೋ ಫಸ್ಟ್ ಟಿಕೆಟ್ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಘೋಷಿಸಿದೆ. ಕಂಪನಿಯು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎಂಬುದು ಗೋ ಫಸ್ಟ್ ನ ವಿವರಣೆ. ಮೇ 12 ರವರೆಗಿನ ಸೇವೆಗಳನ್ನು ಪ್ರಸ್ತುತ ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಸಂಪೂರ್ಣ ಹಣ ಮರುಪಾವತಿ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ವಾಡಿಯಾ ಗ್ರೂಪ್ ಒಡೆತನದ ಗೋಫಸ್ಟ್ ಏರ್‌ಲೈನ್ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಮುಂದೆ ಅರ್ಜಿ ಸಲ್ಲಿಸಿದೆ. ಕೋವಿಡ್‌ ನಿಂದಾಗಿ ಬಿಕ್ಕಟ್ಟಿನಲ್ಲಿರುವ ಏರ್‌ಲೈನ್‌ ನ ಸಾಲ ಮತ್ತು ಹೊಣೆಗಾರಿಕೆಗಳನ್ನು ಪುನರ್ರಚಿಸುವುದು ಕಂಪನಿಯ ಮನವಿಯಾಗಿದೆ. ಮೇ 15ರವರೆಗೆ ಗೋ ಫಸ್ಟ್ ಟಿಕೆಟ್ ಬುಕ್ಕಿಂಗ್ ಅನ್ನು ಡಿಜಿಸಿಎ ನಿಲ್ಲಿಸಿದೆ. ಕಡಿಮೆ ದರದಲ್ಲಿ ಕಾರ್ಯಾಚರಿಸುತ್ತಿರುವ ಗೋ ಫಸ್ಟ್ ಅನಿವಾಸಿಗಳು ಸೇರಿದಂತೆ ಪ್ರಯಾಣಿಕರಿಗೆ ಭಾರೀ ಸಮಾಧಾನ…

Read More

ಹುಬ್ಬಳ್ಳಿ: ನಾನು ಕಾಂಗ್ರೆಸ್ ಪಾರ್ಟಿ ಸೇರಿದ್ದು ಒಳ್ಳೆಯ ನಿರ್ಧಾರ ಅಂತ ಜನ ಹೇಳುತ್ತಿದ್ದಾರೆ. ಯಾವುದೇ ಪಕ್ಷಕ್ಕೆ ಪಕ್ಷ ಮತ್ತು ವ್ಯಕ್ತಿ ಬೇಕು. ನಾನು ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಜನರಿಗೆ ಮನವೊಲಿಸಲು ಮುಂದಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು 70 ವರ್ಷದ ಮೇಲೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿರುತ್ತೇನೆ. ಆದರೆ ಯಾವುದೇ ಮಾದರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆಯಾದ ಮೇಲೆ ಸ್ಥಳೀಯ ನಾಯಕರು ನನಗೆ ಶಕ್ತಿ ತುಂಬವ ಕೆಲಸ ಮಾಡಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಸಹ ನನಗೆ ಬೆಂಬಲ ನೀಡಿದ್ದಾರೆ. ಕೊಪ್ಪಳ, ವಿಜಯಪುರ, ಸಿಂದಗಿ, ಹಾವೇರಿ, ಹಾನಗಲ್ಲನಲ್ಲಿ ನಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾನೆ. ಎಲ್ಲಾ ಕಡೆ ಕಾಂಗ್ರೆಸ್‍ ಗೆ ದೊಡ್ಡ ಬೆಂಬಲ ಸಿಗುತ್ತಿದೆ. ನಾನು ಕಳೆದ ಬಾರಿ ಮಾಡಿದ ಚುನಾವಣೆಗಿಂತ ಈ ಬಾರಿ ಜಾಸ್ತಿಯಾಗುತ್ತಿದೆ ಎಂದರು. ದಿನದಿಂದ ದಿನಕ್ಕೆ…

Read More

ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಳೆದ ದಿನ ಕರ್ನಾಟಕದಲ್ಲಿ ಮಾಡಿದ ಭಾಷಣ ಆಯೋಗದ ಶಿಫಾರಸುಗಳಿಗೆ ಚ್ಯುತಿ ತಂದಿದೆ ಎಂಬುದು ದೂರು. ಕೇಂದ್ರ ಸಚಿವ ಭೂಪೇಂದ್ರ ಯಾದವ್ ನೇತೃತ್ವದ ತಂಡ ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಆಗಮಿಸಿ ದೂರು ದಾಖಲಿಸಿದೆ. ಕರ್ನಾಟಕದ ಸಾರ್ವಭೌಮತೆ, ಪ್ರತಿಷ್ಠೆ ಅಥವಾ ಅಖಂಡತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂಬ ಟೀಕೆ ವಿಭಜನೆಯ ಉದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಆರೋಪಿಸಿದೆ. ಕರ್ನಾಟಕ ಚುನಾವಣೆಯ ಜಾಹೀರಾತು ಪ್ರಚಾರ ಇಂದು ಕೊನೆಗೊಳ್ಳಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೊಟ್ಟಿಕಲಶಕ್ಕೆ ಚಾಲನೆ ನೀಡಲಿದ್ದಾರೆ. ಪ್ರಿಯಾಂಕಾ ಗಾಂಧಿ ಚಿಕ್ಕಪೇಟೆ ಮತ್ತು ವಿಜಯನಗರದಲ್ಲಿ ರ್ಯಾಲಿಗಳನ್ನು ಮುನ್ನಡೆಸಲಿದ್ದಾರೆ. ರಾಹುಲ್ ಗಾಂಧಿ ಬೆಂಗಳೂರು ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಲವತ್ತು ದಿನಗಳ ಕಾಲ ನಡೆದ ಅಭಿಯಾನದಲ್ಲಿ ಶೌರ್ಯ, ವಾಕ್ಚಾತುರ್ಯ ಎದ್ದು ಕಾಣುತ್ತಿತ್ತು. ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿಷಸರ್ಪ ಟೀಕೆ, ಬಜರಂಗದಳ ವಿವಾದ ಇತ್ಯಾದಿ ಪ್ರಚಾರದ ಬಿಸಿ ತಟ್ಟಿದೆ. ಮೌನ…

Read More

ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷ, ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ರಾಜ್ಯದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ್ದರು, ಇದೀಗ ದಿ ಕೇರಳ ಸ್ಟೋರಿಗೆ ತೆರಿಗೆ ಮುಕ್ತ ಎಂದು ಘೋಷಣೆ ಮಾಡಿದೆ. ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಅವರು ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಚಿತ್ರವನ್ನು ತೋರಿಸಿದ್ದರು. ಮಧ್ಯಪ್ರದೇಶದಲ್ಲೂ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದ ನಂತರ ‘ತೆರಿಗೆ ಮುಕ್ತ’ ಮಾಡಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಅನೈತಿಕ ಸಂಬಂಧವಿದೆ ಎಂಬ ಶಂಕೆಯಲ್ಲಿ ಯುವಕ ತನ್ನ  ಸಹೋದರಿಯನ್ನು ಕ್ರೂರವಾಗಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.30 ವರ್ಷದ ಆರೋಪಿ ತನ್ನ 12 ವರ್ಷದ ಸಹೋದರಿಗೆ ನಿತ್ಯ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ ತಂದೆ-ತಾಯಿಯನ್ನು ಕಳೆದುಕೊಂಡ ಅಂಗವಿಕಲ ಬಾಲಕಿ ತನ್ನ ಸಹೋದರ ಹಾಗೂ ಆತನ ಪತ್ನಿಯೊಂದಿಗೆ ವಾಸವಾಗಿದ್ದಳು. ಬಾಲಕಿ ಪ್ರಣಯ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಯುವಕ 12 ವರ್ಷದ ಬಾಲಕನಿಗೆ ದೈಹಿಕ ಕಿರುಕುಳ ನೀಡಿದ್ದಾನೆ. ಕಬ್ಬಿಣದ ತಂತಿಯನ್ನು ಕಾಯಿಸಿ ಸುಡುವುದು ಕೂಡ ವಾಡಿಕೆಗಾಗಿತ್ತು ಎನ್ನಲಾಗಿದೆ. ಕ್ರೂರ ಚಿತ್ರಹಿಂಸೆಯಿಂದ ಬಾಲಕಿ ಭಾನುವಾರ  ಗಂಭೀರ ಗಾಯಗೊಂಡಿದ್ದುಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಾವು ದೃಢಪಡಿಸಿದ ಬಳಿಕ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಉಲ್ಲಾಸನಗರ ಕೇಂದ್ರ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಅಲ್ಲದೆ ಮತದಾನ‌ ಮಾಡಿ ಬಂದವರಿಗೆ ಮಾತ್ರ ಪ್ರವಾಸಿ ವಾಹನಗಳಲ್ಲಿ ಪ್ರಯಾಣಿಸಲು ಅಥವಾ ಬಳಸಲು ಅವಕಾಶ ನೀಡಬೇಕೆಂದು ಮೈಸೂರು ಜಿಲ್ಲಾ ಟ್ರ್ಯಾವಲ್ಸ್ ಮಾಲೀಕರು ನಿರ್ಧರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ನಾಳೆ (ಮೇ.10) ರಂದು ನಡೆಯಲಿದ್ದು, ರಾಜ್ಯಾದ್ಯಂತ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 58,282 ಮತಗಟ್ಟೆಗಳಿದ್ದು, ಭದ್ರತೆಗಾಗಿ 1.56 ಲಕ್ಷ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯದ 84,119 ಪೊಲೀಸರ ಜೊತೆಗೆ ನೆರೆ ರಾಜ್ಯದ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಹೊರರಾಜ್ಯದಿಂದ 8,500 ಪೊಲೀಸರು, 650 ಸಿಆರ್​ಪಿಎಫ್​ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. 304 ಡಿವೈಎಸ್​​ಪಿ, 991 ಇನ್ಸ್​​ಪೆಕ್ಟರ್ಸ್​, 2,610 ಪಿಎಸ್​ಐ, 108 ಬಿಎಸ್​ಎಫ್​, 75 ಸಿಐಎಸ್​​ಎಫ್​, 70 ಐಟಿಬಿಪಿ, 35 ಆರ್​ಫಿಎಫ್​ ಬಂದೋಬಸ್ತಗೆ ನಿಯೋಜಿಸಲಾಗಿದೆ. ವಿಶೇಷವಾಗಿ 2,930 ಪೊಲೀಸ್ ಮೊಬೈಲ್​ ಸೆಕ್ಟರ್​ಗಳ ಕಾರ್ಯಾಚರಣೆ, ಮೊಬೈಲ್ ಸೆಕ್ಟರ್​ ಮೇಲ್ವಿಚಾರಣೆಗೆ 749 ಸೂಪರ್​ವೈಸರ್​, ರಾಜ್ಯದ ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಮಾಡಿ ಬಿಡಲು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More