Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ನಾನು ಬಿ.ಜೆ.ಪಿ. ಸೇರಿಲ್ಲ , ಅರಸೀಕೆರೆಯ ನನ್ನ ವ್ಯಾಪಾರದ ಗೆಳೆಯ ಅರಸೀಕೆರೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯ ಮನೆಗೆ ಹೋದ ಸಂದರ್ಭದಲ್ಲಿ ಅವರಿಗೆ ಮತನೀಡುವಂತೆ ಕೇಳಿದ್ದೆ ಆದರೇ ಆ ವಿಡಿಯೋವನ್ನು ತಿಪಟೂರಿನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅದರ ಪ್ರಯೋಜನ ಪಡೆದುಕೊಳ್ಳಲು ಹೊರಟಿರುವುದು ವಿಪರ್ಯಾಸ ಎಂದು ಮಾಜಿ ಶಾಸಕ ಬಿ.ನಂಜಾಮರಿ ಸ್ಪಷ್ಟಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗ ನಮ್ಮ ಶಾಸಕರಿಗೆ ರೈತರ ಮತ್ತು ಕೊಬ್ಬರಿ ಬೆಳೆಗಾರರ ಕಷ್ಟ ಅರ್ಥವಾಗಲಿಲ್ಲ, ಆದರೆ ಈಗ ನಾನು ಬೆಂಬಲ ಬೆಲೆಕೊಡಿಸಿದ್ದೇನೆ ಎಂದು ಹೇಳುವ ಶಾಸಕರು, ರೈತರು ಪ್ರತಿಭಟನೆ ಮಾಡಬೇಕಾದರೆ ಸೌಜನ್ಯಕ್ಕಾದರು ರೈತರನ್ನು ಭೇಟಿಮಾಡಲಿಲ್ಲ, ಆಗ ರೈತರ ಮತಗಳು ಬೇಕಾಗಿರಲಿಲ್ಲವೇ ಎಂದು ಪ್ರಶ್ನಿಸಿದರು. ನಂಜಾಮರಿ ಅವರ ಪುತ್ರ ಚುನಾವಣೆಗೆ ಸ್ಪರ್ಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ನನ್ನನ್ನು ಚುನಾವಣೆಗೆ ನಿಲ್ಲಲು ಹೇಳಿದಾಗ, ನನ್ನ ಮಗನನ್ನು ಚುನಾವಣೆಗೆ ನಿಲ್ಲಿಸುತ್ತೇನೆಂದು ಗಂಗನಘಟ್ಟದ ವಡ್ಡಗಲ್ಲು ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣಮಾಡಿದ್ದೆ. ಅದಕ್ಕಾಗಿ ಅವನು…
ತುಮಕೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಇಂದು ತುಮಕೂರು ನಗರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ರೋಡ್ ಶೋ ನಡೆಸುವುದಿಲ್ಲವೆಂದು ಮೊದಲಿಗೆ ಹೇಳಿದ್ದರೂ, ನಂತರ ದಿಢೀರೆಂದು ಬಿ.ಎಚ್.ರಸ್ತೆಯಲ್ಲಿ ರೋಡ್ ಶೋ ನಡೆಸಿದ್ದು, ಸುತ್ತಲೂ ನೆರೆದಿದ್ದ ಜನರಿಗೆ ಒಂದು ರೀತಿ ಸಂತಸ ತಂದಿತ್ತು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಜರಂಗ ಬಲಿ ಕೀ ಘೋಷಣೆ ಕೂಗಿ, ಈ ಘೋಷಣೆ ದೆಹಲಿ ತನಕ ತಲುಪಬೇಕು. ಡಬಲ್ ಇಂಜಿನ್ ಸರ್ಕಾರ ಬರೋದು ನಿಶ್ಚಿತ ಎಂದರು. ಸಿದ್ದಗಂಗಾ ಮಠ ಹಾಗೂ ಚುಂಚನಗಿರಿ ಮಠಕ್ಕೆ ನಮಸ್ಕಾರ. ಕಲ್ಪತರು ನಾಡಿನ ನನ್ನ ಸಹೋದರ ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ಹೆಲಿಪ್ಯಾಡ್ ಮೂಲಕ ಬರುವಾಗ ಜನ ತುಂಬಾ ಸೇರಿದರು. ರೋಡ್ ಶೋ ಪ್ಲಾನ್ ಇರಲಿಲ್ಲ ಆದರೆ ನಾನು ರೋಡ್ ಶೋ ಮಾಡಿದೆ ಎಂದರು. ಕಾಂಗ್ರೆಸ್ ನವರಿಗೆ ಜೈ ಬಜರಂಗ ಬಲಿ ಕೂಗಿದರೂ ಅವರಿಗೆ ತೊಂದರೆ ಆಗಿದೆ. ಕಾಂಗ್ರೆಸ್ ನವರು…
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ಕೊರಟಗೆರೆ: 2023ಕ್ಕೆ ನೀವು ಸುಧಾರಕಲಾಲ್ ಗೆಲ್ಲಿಸಿ ವಿಧಾನಸೌಧಕ್ಕೆ ಕಳ್ಸಿ.. ನಾನು ಸುಧಾಕರಲಾಲ್ ಮಂತ್ರಿ ಮಾಡಿ ಕೊರಟಗೆರೆಗೆ ಕಳಿಸ್ತೀನಿ.. ಕೊರಟಗೆರೆ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ದಿ ಮಾಡ್ತೀನಿ.. ನಾನು ರೈತನ ಮಗ ನುಡಿದಂತೆ ನಡಿತ್ತೀನಿ-ಕೊಟ್ಟ ಮಾತನ್ನು ಉಳಿಸಿಕೋಳ್ತಿನಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊರಟಗೆರೆ ಕ್ಷೇತ್ರದ ಜನತೆಗೆ ಭರ್ಜರಿ ಭರವಸೆ ನೀಡಿದರು. ಕೊರಟಗೆರೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಾತ್ಯಾತೀತ ಜನತಾ ದಳದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸುಧಾಕರಲಾಲ್ ಬಡಜನರು ಕಷ್ಟ-ಸುಖಕ್ಕೆ ಪೋನ್ ಮಾಡಿದ್ರೇ ಬರ್ತಾರೇ. ಲಾಲ್ ಪೋನ್ ನಂಬರ್ ನಿಮ್ಮೇಲ್ಲರ ಹತ್ತಿರ ಇದೆ ಅಲ್ವಾ. ಬಡಜನರು ಕಷ್ಟ ಅಂತಾ ಕರೇದರೇ ತಕ್ಷಣ ನಿಮ್ಮ ಮನೆ ಬಾಗಿಲಿಗೆ ಲಾಲ್ ಬರ್ತಾರೇ. ಕಾಂಗ್ರೇಸ್ ಮತ್ತು ಬಿಜೆಪಿ ಅಭ್ಯರ್ಥಿ ಬರ್ತಾರಾ ಹೇಳಿ ನೀವೇ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ಪೋನ್ ನಂಬರ್ ಅವರ ಮುಖಂಡರ ಬಳಿಯೇ ಇಲ್ಲ ಎಂದು ತಿಳಿಸಿದರು. ಕೊರಟಗೆರೆ ಕ್ಷೇತ್ರದ…
ಹಿಂದಿನ ಸರ್ಕಾರಗಳು ಜಾತಿ ಮತ್ತು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸಿ ಸಮಾಜದಲ್ಲಿ ಬಿರುಕುಗಳನ್ನು ಸೃಷ್ಟಿಸಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆದರೆ ಇಂದು ಟ್ವಿನ್ ಇಂಜಿನ್ ಅನ್ನು ಸರ್ಕಾರವು ತ್ವರಿತ ಗತಿಯಲ್ಲಿ ಅಭಿವೃದ್ಧಿಪಡಿಸುತ್ತಿದೆ. ಸ್ಥಳೀಯ ಚುನಾವಣೆಯ ಪೂರ್ವಭಾವಿಯಾಗಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಅವಳಿ ಇಂಜಿನ್ ಸರ್ಕಾರದ ನೇತೃತ್ವದಲ್ಲಿ ರಾಜ್ಯದಲ್ಲಿ ಹೆದ್ದಾರಿಗಳು, ರೈಲ್ವೆಗಳು, ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳು ಮತ್ತು ಏಮ್ಸ್ಗಳನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ಭಾರತದ ಕೀರ್ತಿ ಹೆಚ್ಚುತ್ತಿದೆ ಎಂದೂ ಅವರು ಹೇಳಿದ್ದಾರೆ. ಐತಿಹಾಸಿಕ ನಗರಿ ಬಸ್ತಿ ಹಿಂದಿನ ಸರಕಾರಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿತ್ತು. ಐತಿಹಾಸಿಕ ಮತ್ತು ಪುರಾತತ್ತ್ವ ಶಾಸ್ತ್ರದ ಮಹತ್ವವುಳ್ಳ ನಗರವಾದ ಬಸ್ತಿಯನ್ನು ಹಿಂದಿನ ವಿರೋಧ ಪಕ್ಷದ ಸರ್ಕಾರಗಳ ಆಡಳಿತದಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಉಜ್ವಲಾ ಯೋಜನೆಯ ಪ್ರಯೋಜನಗಳು ಪ್ರತಿ ಮನೆಗೂ ತಲುಪುತ್ತಿದ್ದಂತೆ ಹೊಗೆಯಿಂದ ಉಂಟಾದ ಶ್ವಾಸಕೋಶದ ಕಾಯಿಲೆಗಳಿಂದ ಮಹಿಳೆಯರು ಮುಕ್ತರಾಗಿದ್ದಾರೆ. ದೀಪಾವಳಿ ಮತ್ತು ಹೋಳಿ ಹಬ್ಬದಂದು ಉಚಿತ ಗ್ಯಾಸ್ ಸಿಲಿಂಡರ್ ನೀಡಲು…
ನವದೆಹಲಿ: ಇವಿಎಂಗಳ ಖರೀದಿಯಲ್ಲಿ ಭಾರತ ಚುನಾವಣಾ ಆಯೋಗ ಅಕ್ರಮ ನಡೆಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚುನಾವಣಾ ವೆಚ್ಚ ಹೆಚ್ಚಾದರೆ ಅದು ಪ್ರಜಾಪ್ರಭುತ್ವಕ್ಕೆ ತೆರಬೇಕಾದ ಬೆಲೆಯಾಗಿದೆ. ಅದ್ದರಿಂದ ಇವಿಎಂ ಖರೀದಿಯಲ್ಲಿ ಹೇಗೆ ಹಣ ಖರ್ಚು ಮಾಡಿದ್ದೀರಿ ಎಂದು ಕೇಳಲು ಸಾದ್ಯವಿಲ್ಲ. ಅಲ್ಲದೆ ಇವಿಎಂಗಳನ್ನು ಖರೀದಿಸುವ ವಿಷಯವು ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್ಗೆ ತೆರಳುವ ಆರ್ಟಿಕಲ್ 32 ರ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ. ಈ ವೇಳೆ ಅರ್ಜಿದಾರರ ಪರ ವಕೀಲ, ಭಾರತ ಚುನಾವಣಾ ಆಯೋಗ ಇವಿಎಂಗಳನ್ನು ಖರೀದಿಸಿದೆ ಎಂದು ತೋರಿಸಿದೆ. ಆದರೆ ವಾಸ್ತವವಾಗಿ ಖರೀದಿಸಿಲ್ಲ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದು ಎನ್ಸಿಪಿಯ ಪ್ರಮುಖ ನಾಯಕತ್ವ ಸಭೆ. ಶರದ್ ಪವಾರ್ ರಾಜೀನಾಮೆ ನಂತರ ಪರಿಸ್ಥಿತಿಯನ್ನು ನಿರ್ಣಯಿಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವುದು ಅಜೆಂಡಾ. ಸುಪ್ರಿಯಾ ಸುಳೆ ಎನ್ಸಿಪಿಯ ಕಾರ್ಯಾಧ್ಯಕ್ಷೆಯಾಗುವ ಸಾಧ್ಯತೆ ಇದೆ. ಶರದ್ ಪವಾರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಹಿಂಪಡೆಯಲು ಸಿದ್ಧರಿಲ್ಲದ ಕಾರಣ ಎನ್ಸಿಪಿ ಇದನ್ನು ಪರಿಗಣಿಸುತ್ತಿದೆ. ಈ ನಿರ್ಧಾರವು ಅಜಿತ್ ಪವಾರ್ ಬಗ್ಗೆ ವಿವಿಧ ವಿರೋಧ ಪಕ್ಷಗಳ ಆಸಕ್ತಿಯ ಕೊರತೆಯನ್ನು ಗಣನೆಗೆ ತೆಗೆದುಕೊಂಡಿದೆ. ಅಜಿತ್ ಪವಾರ್ ಅವರು ಸುಪ್ರಿಯಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲು ತಮ್ಮ ಭಿನ್ನಾಭಿಪ್ರಾಯವನ್ನು ಶರದ್ ಪವಾರ್ ಅವರಿಗೆ ತಿಳಿಸಲಿದ್ದಾರೆ. ಮುಂಬೈನ ವೈಬಿ ಚವಾನ್ ಹಾಲ್ನಲ್ಲಿ ಎನ್ಸಿಪಿ ಸಭೆ ನಡೆಯಲಿದೆ. ಎನ್ಸಿಪಿಯನ್ನು ಒಟ್ಟಿಗೆ ಇರಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಶರದ್ ಪವಾರ್ ಬಹಿರಂಗಪಡಿಸಿದ್ದರು. 2019ರಲ್ಲಿ ಎನ್ಸಿಪಿ ಜೊತೆಗೂಡಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಆಹ್ವಾನ ನೀಡಲಾಗಿತ್ತು. ಪವಾರ್ ಅವರ ಬಹಿರಂಗಪಡಿಸುವಿಕೆಯು ಆತ್ಮಚರಿತ್ರೆಯ ಪರಿಷ್ಕೃತ ಆವೃತ್ತಿಯಾದ ‘ಲೋಕ್ ಮಹ್ಜೆ ಸಂಘ’ದಲ್ಲಿದೆ. ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಲು ನನಗೆ ಆಸಕ್ತಿ ಇಲ್ಲ ಎಂದು…
ಕರ್ನಾಟಕದಲ್ಲಿ ಹನುಮಾನ್ ಮಂದಿರ ನಿರ್ಮಾಣವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯಾದ್ಯಂತ ಹನುಮಾನ ದೇಗುಲಗಳ ಅಭಿವೃದ್ಧಿಗೆ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ರಾಜ್ಯದ ವಿವಿಧೆಡೆ ಹನುಮಾನ್ ಮಂದಿರ ನಿರ್ಮಾಣವಾಗಲಿದೆ. ಹನುಮಂತನ ಜನ್ಮಸ್ಥಳ ಎಂದು ನಂಬಲಾದ ಅಂಜನಾದ್ರಿಗೆ ವಿಶೇಷ ಯೋಜನೆಗಳನ್ನು ಮಾಡಲಾಗುವುದು. ಕರ್ನಾಟಕದಲ್ಲಿ ಈಗಿರುವ ಹನುಮರ ದೇವಾಲಯಗಳನ್ನು ಅಭಿವೃದ್ಧಿಪಡಿಸಲಾಗುವುದು. ಹನುಮಂತನ ವಿಚಾರಗಳನ್ನು ಪಸರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಡಿ. ಕೆ ಶಿವಕುಮಾರ್ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವುದರಲ್ಲಿ ಅನುಮಾನವಿಲ್ಲ. ಕಾಂಗ್ರೆಸ್ 140 ರಿಂದ 150 ಸ್ಥಾನಗಳನ್ನು ಪಡೆಯಲಿದ್ದು, ಡಿ. ಕರ್ನಾಟಕದಲ್ಲಿ ಬಜರಂಗದಳ ಅಧಿಕಾರಕ್ಕೆ ಬಂದರೆ ಅದನ್ನು ನಿಷೇಧಿಸಲಾಗುವುದು ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದು ಬಹಳ ವಿವಾದಕ್ಕೀಡಾಗಿದೆ ಎಂದು ಕೆ. ಇದನ್ನು ವಿರೋಧಿಸಿ ಭಜರಂಗದಳ ಕಾರ್ಯಕರ್ತರು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಮೈಸೂರು: ಇಂದು ಕೂಡ ಸ್ವಕ್ಷೇತ್ರ ವರುಣಾದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ ಮತಯಾಚಿಸಲಿದ್ದಾರೆ. ಸಿದ್ದರಾಮಯ್ಯ ಪರ ಸ್ಟಾರ್ ನಟ, ನಟಿಯರು ರೋಡ್ ಶೋ ನಡೆಸಲಿದ್ದಾರೆ. ವರುಣಾ ಕ್ಷೇತ್ರದ 23 ಗ್ರಾಮಗಳಲ್ಲಿ ನಟರಾದ ಶಿವರಾಜ್ಕುಮಾರ್, ದುನಿಯಾ ವಿಜಯ್, ಮಾಜಿ ಸಂಸದೆ, ನಟಿ ರಮ್ಯಾ ಸೇರಿದಂತೆ ಹಲವರು ಪ್ರಚಾರ ಮಾಡುತ್ತಾರೆ. ಬರೋಬ್ಬರಿ 23 ಗ್ರಾಮಗಳಲ್ಲಿ ರೋಡ್ ಶೋ ವೇಳಾಪಟ್ಟಿ: ಬೆಳಿಗ್ಗೆ 9:00ಕ್ಕೆ ಚಿಕ್ಕಳ್ಳಿ , 9:30ಕ್ಕೆ ಭುಗತಗಳ್ಳಿ, 10:00ಕ್ಕೆ ವಾಜಮಂಗಲ, 10:30ಕ್ಕೆ ಮೆಲ್ಲಹಳ್ಳಿ, ಮಧ್ಯಾಹ್ನ 12:00 ಕ್ಕೆ ಹಾರೋಹಳ್ಳಿ, 1:00 ಕ್ಕೆ ಮಾದೇಗೌಡನ ಹುಂಡಿ, 1:30ಕ್ಕೆ ರಂಗನಾಥಪುರ, 2:00 ಕ್ಕೆ ರಂಗಾಚಾರಿ ಹುಂಡಿ, 2:30 ಕ್ಕೆ ರಂಗಸಮುದ್ರ, 3:00 ಕ್ಕೆ ಇಟ್ಟುವಳ್ಳಿ, 3:30 ಕ್ಕೆ ಕುಪ್ಪೆ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ 4:00 ಕ್ಕೆ ತುಂಬಲ, 4:30ಕ್ಕೆ ಮುತ್ತತ್ತಿ, 5:00ಕ್ಕೆ RP ಹುಂಡಿ, 5:30 ಕ್ಕೆ ಎಡತೊರೆ, 6:00 ಕ್ಕೆ ಗರ್ಗೇಶ್ವರಿ, 6:30 ಕ್ಕೆ ಹಳೆ ತಿರುಮಕೂಡಲ ಸರ್ಕಲ್, ರಾತ್ರಿ 7:00ಕ್ಕೆ ಹೊಸ ತಿರುಮಕೂಡಲ ಸರ್ಕಲ್,…
ಹುಬ್ಬಳ್ಳಿ: ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿದಾಗ, ಖರ್ಗೆ ಜೀವನದ ಸಾಧನೆ ಮಣ್ಣುಪಾಲಾಯ್ತು. ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ತಂದೆ ಹಾಗೂ ಮಗ ಇಬ್ಬರ ವಿರುದ್ಧವೂ ಗರಂ ಆದರು. ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಿ, ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸವಾಗಿದೆ. ಬಜರಂಗದಳವನ್ನು ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲವಿದೆ. ಭಾರತ ಸಂಸ್ಕೃತಿಯ ರಕ್ಷಣೆಗಿರುವ ಸಂಘಟನೆ ಬಜರಂಗದಳ. ಪಿಎಫ್ಐಗೆ ಹೋಲಿಸಿದ್ದು, ದೊಡ್ಡ ದುರಂತ. ಹಿಂದೂಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು. ಜಗದೀಶ್ ಶೆಟ್ಟರ್ ಪರಿಸ್ಥಿತಿ ನೋಡಿ ಅಯ್ಯೋ ಪಾಪ ಅನಿಸುತ್ತಿದೆ. ಆರ್ಎಸ್ಎಸ್, ಹಿಂದುತ್ವ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಸ್ವಾಭಿಮಾನವನ್ನು ನಾನು ನಿರೀಕ್ಷಿಸುತ್ತಿದ್ದೆ. ಟಿಕೆಟ್ಗಾಗಿ ಶೆಟ್ಟರ್ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆ.…
ಯಾದಗಿರಿ: ಹೊಟ್ಟೆಯಲ್ಲೇ ಮಗು ಸಹಿತ ಗರ್ಭಿಣಿ ಸಾವಿಗೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೆರಿಗೆ ಮಾಡಿಕೊಳ್ಳದೇ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆಂದು ಮೃತ ಮಹಿಳೆ ಕುಟುಂಬಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಯಾದಗಿರಿಯ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಈ ಘಟನೆ ವರದಿಯಾಗಿದೆ. ಗೂಡೂರು ಗ್ರಾಮದ ಸಂಗೀತಾ (20) ಮೃತ ಗರ್ಭಿಣಿ. 3ನೇ ತಾರೀಖು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತೀ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿದ್ದರಿಂದ ಆರೋಗ್ಯವಾಗಿದ್ದರು. ದಿನ ತುಂಬಿದ್ದರಿಂದ ಯಾವುದೇ ಸಮಸ್ಯೆ ಇಲ್ಲ, ನಾರ್ಮಲ್ ಹೆರಿಗೆ ಮಾಡುವುದಾಗಿ ವೈದ್ಯರು ಹೇಳಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಸ್ಕ್ಯಾನ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎಂದು ಕುಟುಂಬದವರು ದೂರಿದ್ದಾರೆ. ಇಡೀ ದಿನ ಆರೋಗ್ಯವಾಗಿ, ಆ್ಯಕ್ಟೀವ್ ಆಗಿ ಸಂಗೀತಾ ಇದ್ದಳು. ಆದರೆ ಸಂಜೆ ಏಕಾಏಕೀ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿ, ಆಸ್ಪತ್ರೆ ಮುಂದೆ ಅಂಬುಲೆನ್ಸ್ನಲ್ಲೇ ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…