Author: admin

ಎಸೆಸೆಲ್ಸಿ, ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣ ವಾದವರಿಗೆ ತುಮಕೂರಿನ ಹೆಸರಾಂತ ಕಂಪೆನಿಯಲ್ಲಿ ಉದ್ಯೋಗದ ಸುವರ್ಣಾವಕಾಶವಿದ್ದು, ಲೋಡಿಂಗ್ ಹಾಗೂ ಅನ್ ಲೋಡಿಂಗ್ ಕೆಲಸಗಳನ್ನು ಮಾಡಲು ಯುವಕರು ಬೇಕಾಗಿದ್ದಾರೆ. ಗುತ್ತಿಗೆ ಆಧಾರದಲ್ಲಿ ಉತ್ತಮ ವೇತನದ ಜೊತೆಗೆ  ಕರ್ನಾಟಕ ರಾಜ್ಯದ ಕನಿಷ್ಠ ವೇತನ ಕಾಯ್ದೆ ಅನ್ವಯ ಇಎಸ್ಐ, ಪಿಎಫ್ ಸೌಲಭ್ಯ, ಬೋನಸ್ ಸೌಲಭ್ಯ ದೊರೆಯಲಿದೆ. ಕೆಲಸಕ್ಕೆ ಸೇರಲು ಇಚ್ಛಿಸುವವರು ಜನ್ಮ ದಿನಾಂಕ ದೃಢೀಕರಣ ಪತ್ರ, ಎಸೆಸೆಲ್ಸಿ ಅಂಕಪಟ್ಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಜೆರಾಕ್ಸ್ ಹಾಗೂ ಇತ್ತೀಚೆಗಿನ 3 ಭಾವ ಚಿತ್ರಗಳು ಹಾಗೂ ವ್ಯಾಕ್ಸಿನ್ ಸರ್ಟಿಫಿಕೇಟ್ ತೆಗೆದುಕೊಂಡು ಬರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 9741717700 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷಿಣ ಭಾರತ ಪ್ರವಾಸ ಇಂದು ಮುಕ್ತಾಯವಾಗಲಿದೆ. ಬೆಳಗ್ಗೆ 7 ಗಂಟೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ನಂತರ ಮುತುಮಲ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕ್ಕಾಡ್ ಆನೆ ಶಿಬಿರಕ್ಕೆ ಭೇಟಿ ನೀಡಲಾಗುವುದು. ಆಸ್ಕರ್ ಪ್ರಶಸ್ತಿ ವಿಜೇತ ದಿ ಎಲಿಫೆಂಟ್ ವಿಸ್ಪರರ್ಸ್ ನಲ್ಲಿ ಬೊಮ್ಮಿ ಮತ್ತು ಬೆಲ್ಲಿ ಅವರನ್ನು ಪ್ರಧಾನಿ ಭೇಟಿಯಾಗಲಿದ್ದಾರೆ. ಹನ್ನೊಂದು ಗಂಟೆಗೆ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಐವತ್ತು ವರ್ಷಗಳ ಹುಲಿ ಯೋಜನೆಯ ಉದ್ಘಾಟನೆಯೂ ನಡೆಯಲಿದೆ. ಅದರ ನಂತರ ದೆಹಲಿಗೆ ಹಿಂದಿರುಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇಂದು, ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಪ್ರಪಂಚದ ಪಾಪಗಳನ್ನು ಹೊತ್ತುಕೊಂಡು ಮೂರನೇ ದಿನ ಯೇಸುವಿನ ಪುನರುತ್ಥಾನದ ಸ್ಮರಣೆಯನ್ನು ನವೀಕರಿಸುವ ಮೂಲಕ ಈಸ್ಟರ್ ಅನ್ನು ಆಚರಿಸುತ್ತಾರೆ. ಈಸ್ಟರ್ ಕೂಡ ಪ್ರೀತಿ ಮತ್ತು ಭರವಸೆಯ ಹಬ್ಬವಾಗಿದೆ. ಜೀಸಸ್ ತನ್ನ ಮೇಲೆ ಮನುಷ್ಯರ ದುಷ್ಟತನವನ್ನು ತೆಗೆದುಕೊಂಡನು ಮತ್ತು ಅದಕ್ಕಾಗಿ ಶಿಲುಬೆಗೆ ಹೊಡೆಯಲ್ಪಟ್ಟನು ಮತ್ತು ಮೂರನೆಯ ದಿನದಲ್ಲಿ ಮತ್ತೆ ಏರಿದನು ಎಂದು ನಂಬಲಾಗಿದೆ. ಆ ಮಹಾನ್ ತ್ಯಾಗದ ಸ್ಮರಣೆಯನ್ನು ನವೀಕರಿಸಲು ಕ್ರಿಶ್ಚಿಯನ್ನರು ಈಸ್ಟರ್ ಅನ್ನು ಆಚರಿಸುತ್ತಾರೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತಿದೆ. ಈಸ್ಟರ್ ಆಚರಣೆಯ ಇತಿಹಾಸ: ಮೊದಲ ಶತಮಾನದಲ್ಲಿ, ರೋಮ್ನಲ್ಲಿನ ಕ್ರಿಶ್ಚಿಯನ್ನರು ಈಸ್ಟರ್ ಅನ್ನು ಸಂತೋಷದ ಭಾನುವಾರ ಎಂದು ಕರೆದರು. ಕ್ರಿಶ್ಚಿಯನ್ ನಂಬಿಕೆಯ ಕೇಂದ್ರ ರಹಸ್ಯವಾಗಿರುವ ಪುನರುತ್ಥಾನವನ್ನು ನೆನಪಿಸುವ ಈ ದಿನದಂದು, ಆರಂಭಿಕ ಪೂರ್ವ ಚರ್ಚುಗಳಲ್ಲಿನ ವಿಶ್ವಾಸಿಗಳು ನಂಬಿಕೆಯ ಘೋಷಣೆಯ ಮೂಲಕ ಪರಸ್ಪರ ಪರವಾಗಿ ವಿನಿಮಯ ಮಾಡಿಕೊಂಡರು. “ಕ್ರಿಸ್ತನು ಪುನರುತ್ಥಾನಗೊಂಡಿದ್ದಾನೆ” ಎಂದು ಒಬ್ಬರು ಹೇಳಿದಾಗ, ಇನ್ನೊಬ್ಬರು, “ಸತ್ಯವೆಂದರೆ ಅವನು ಎದ್ದಿದ್ದಾನೆ” ಎಂದು ಹೇಳುತ್ತಾನೆ.…

Read More

ಅಮುಲ್ ಥಾಸಾ ಶೀಘ್ರದಲ್ಲೇ ಬೆಂಗಳೂರಿಗೆ ಬರಲಿದೆ’…ಕರ್ನಾಟಕಕ್ಕೆ ಅಮುಲ್ ಆಗಮನವನ್ನು ಪ್ರಕಟಿಸುವ ಮೂಲಕ ಕಂಪನಿಯ ಪ್ರಚಾರವು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿದೆ. ಆದರೆ ‘ಗೋ ಬ್ಯಾಕ್ ಅಮುಲ್ ಆ್ಯಂಡ್ ಸೇವ್ ನಂದಿನಿ’ ಎಂಬ ಹ್ಯಾಶ್ ಟ್ಯಾಗ್ ಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ-ಪ್ರಚಾರ ಜೋರಾಗಿದೆ. ಗೋ ಬ್ಯಾಕ್ ಅಮುಲ್ ಹ್ಯಾಶ್‌ಟ್ಯಾಗ್ ಹಿಂದೆ ಅಮುಲ್ ಪ್ರವೇಶವು ರಾಜ್ಯದ ಸ್ಥಳೀಯ ಬ್ರಾಂಡ್ ನಂದಿನಿಯನ್ನು ದುರ್ಬಲಗೊಳಿಸುತ್ತದೆ ಎಂಬ ಆತಂಕವಾಗಿದೆ. ಇಡೀ ಕರ್ನಾಟಕದ ಪ್ರತಿಪಕ್ಷಗಳು ಬಹಿಷ್ಕಾರ ಕರೆಗೆ ಮುಂದಾಗಿವೆ. ಗುಜರಾತ್ ಮೂಲದ ಅಮುಲ್ ಮತ್ತು ಸ್ಥಳೀಯವಾಗಿ ತಯಾರಿಸಿದ ನಂದಿನಿ ಸಹಯೋಗದಲ್ಲಿ ಮುಂದುವರಿಯುವಂತೆ ಮಂಡ್ಯದಲ್ಲಿ ಅಮಿತ್ ಶಾ ಭಾಷಣ ಮಾಡಿದ ನಂತರ ಸಾಮಾಜಿಕ ಮಾಧ್ಯಮ ವಾರ್ ಪ್ರಾರಂಭವಾಯಿತು. ಅಮಿತ್ ಶಾ ಅವರ ಈ ಹೇಳಿಕೆಗೆ ಹೈನುಗಾರರು, ವಿರೋಧ ಪಕ್ಷದ ನಾಯಕರು ಮತ್ತು ಕನ್ನಡ ಪರ ಬಣಗಳು ಹರಿಹಾಯ್ದಿದ್ದಾರೆ. ರಾಜ್ಯ ಹಾಲು ಒಕ್ಕೂಟವು ನಂದಿನಿಗೆ ಸಾಕಷ್ಟು ಬೆಂಬಲ ಅಥವಾ ಪ್ರಚಾರ ನೀಡುತ್ತಿಲ್ಲ ಎಂದು ಕೆಎಂಎಫ್ ನಿರ್ದೇಶಕರಲ್ಲಿ ಒಬ್ಬರಾದ ಆನಂದ್ ಕುಮಾರ್ ಹೇಳುತ್ತಾರೆ. ಆನಂದ್ ಅವರು…

Read More

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಮಲಪ್ರಭಾ ನದೀ ತೀರದ ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಜಾತ್ರೆ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ರಥೋತ್ಸವ ಜರುಗುವ ಸಂಭ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ತವರೂರು ಅಭಿಮಾನಿ ಬಳಗ ಚಿಕ್ಕಹಟ್ಟಿಹೊಳಿಯ ಅಧ್ಯಕ್ಷರು ಸರ್ವ ಸದಸ್ಯರು ಸೇರಿ ಬಾಳೆಹಣ್ಣಿನ ಮೇಲೆ “” ಲಕ್ಷ್ಮೀ ಅಕ್ಕಾ 2023 ಮಂತ್ರಿ ಪಕ್ಕಾ “” ಎಂದು ಬರೆದು 111 ಬಾಳೆ ಹಣ್ಣುಗಳನ್ನು ರಥೋತ್ಸವ ಜರುಗುವ ಸಂಭ್ರಮದಲ್ಲಿ ಭಕ್ತಿಯಿಂದ ಶ್ರೀ ವೀರಭದ್ರೇಶ್ವರನಲ್ಲಿ ಬೇಡಿಕೊಂಡು ಭಕ್ತಿಯಿಂದ ರಥಕ್ಕೆ ಬಾಳೇಹಣ್ಣನ್ನು ಸಮರ್ಪಿಸಿದರು. ಈ ವೇಳೆ ಲಕ್ಷ್ಮಿ ಹೆಬ್ಬಾಳಕರ ತವರೂರು ಅಭಿಮಾನಿ ಬಳಗದ ಅಧ್ಯಕ್ಷರಾದ ವೀರಭದ್ರ ಸಣ್ಣಕ್ಕಿ, ಜಗದೀಶ ಕಾದ್ರೊಳ್ಳಿ , ಮಂಜುನಾಥ್ ಮಾಸ್ತಮರಡಿ, ಈರಯ್ಯ ಹಾಲಗಿಮರ್ಡಿ, ನಾಗರಾಜ ಸಣ್ಣಕ್ಕಿ, ಶ್ರೀಧರ ಜೈನರ, ಪ್ರಕಾಶ ತಳವಾರ, ಸೇರಿದಂತೆ ಗ್ರಾಮದ ಹಿರಿಯರು ಹಾಜರಿದ್ದರು. ಕುಕಡೊಳ್ಳಿ, ಎಮ್ ಕೆ ಹುಬ್ಬಳ್ಳಿ, ಪಾರೀಶ್ವಾಡ ಹಿರೆಬಾಗೇವಾಡಿ, ಅರಳಿಕಟ್ಟಿ,ಬಸ್ಸಾಪೂರ, ಸೇರಿದಂತೆ ಜಿಲ್ಲೆಯ ವಿವಿದ ಗ್ರಾಮಗಳ ಭಕ್ತರು ಸೇರಿದಂತೆ ಧಾರವಾಡ, ಬಾಗಲಕೋಟಿ, ಹಾವೇರಿ, ವಿಜಯಪೂರ, ಜಿಲ್ಲೆಗಳಿಂದ ಮತ್ತು ಮಹಾರಾಷ್ಟ್ರ ರಾಜ್ಯದ…

Read More

ಪೋಪ್ ಅವರ ಈಸ್ಟರ್ ಸಂದೇಶವು ಎಲ್ಲಾ ಯುದ್ಧಗಳನ್ನು ಕೊನೆಗೊಳಿಸಲು ಕರೆ ನೀಡುತ್ತದೆ. ಪೋಪ್ ಸಂದೇಶವು ಮತ್ತೊಮ್ಮೆ ಉಕ್ರೇನ್ ಜನರನ್ನು ಹುತಾತ್ಮರೆಂದು ಉಲ್ಲೇಖಿಸುತ್ತದೆ. ಈಸ್ಟರ್ ಭರವಸೆಯೊಂದಿಗೆ ಮುನ್ನಡೆಯಲು ಸ್ಫೂರ್ತಿಯಾಗಿದೆ ಎಂದು ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ. ವಿಪರೀತ ಚಳಿ ಮತ್ತು ಅನಾರೋಗ್ಯದ ಕಾರಣ, ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಹೊರಗಿನ ಸಮಾರಂಭಕ್ಕೆ ಪೋಪ್ ಗೈರುಹಾಜರಾಗಿದ್ದರು. ಪ್ರಪಂಚದಾದ್ಯಂತದ ಕ್ರೈಸ್ತರು ಇಂದು ಈಸ್ಟರ್ ಅನ್ನು ಆಚರಿಸುತ್ತಿದ್ದಾರೆ. ನಿನ್ನೆ ಮಧ್ಯರಾತ್ರಿಯಿಂದ ಪ್ರಾರ್ಥನಾ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆಗಳು ಮತ್ತು ಪುನರುತ್ಥಾನ ದಿನದ ಸೇವೆಗಳು ನಡೆದವು. ಸಿರೋ-ಮಲಬಾರ್ ಚರ್ಚ್‌ನ ಪ್ರಧಾನ ಕಛೇರಿಯಾದ ಕಾಕ್ಕನಾಡು ಮೌಂಟ್ ಸೇಂಟ್ ಥಾಮಸ್‌ನಲ್ಲಿ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ ಮತ್ತು ಕರಿಕೋಟ್ ಸೈಂಟ್ ಥಾಮಸ್ ಚರ್ಚ್‌ನಲ್ಲಿ ಜೋಸೆಫ್ ಮಾರ್ ಗ್ರೆಗೋರಿಯೋಸ್ ಮೆಟ್ರೋಪಾಲಿಟನ್ ಅವರು ಪ್ರಾರ್ಥನೆಯನ್ನು ನೆರವೇರಿಸಿದರು. ಈಸ್ಟರ್ ಪ್ರೀತಿ, ಸಹಿಷ್ಣುತೆ ಮತ್ತು ಭರವಸೆಯ ದಿನವಾಗಿದೆ. ಮೂರನೇ ದಿನ ಗಾಗುಲ್ತಮಾಲಾದಲ್ಲಿ ಶಿಲುಬೆಗೇರಿಸಿದ ಕ್ರಿಸ್ತನ ಪುನರುತ್ಥಾನದ ಸ್ಮರಣಾರ್ಥ ಶನಿವಾರ ಮಧ್ಯರಾತ್ರಿಯಿಂದಲೇ ದೇಗುಲಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಚರ್ಚ್, ಕುಟುಂಬ ಮತ್ತು…

Read More

ಬೆಳಗಾವಿ: ಟಿಕೆಟ್‌ ನೀರಿಕ್ಷೆಯಲ್ಲಿದ್ದ ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯಲಿವೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್‌ ನಿಂದ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಅವರಿಗೆ, ಯಾವ ಆಧಾರದ ಮೇಲೆ ಟಿಕೆಟ್ ಸಿಕ್ಕಿದೆ ನನಗೆ ಗೊತ್ತಿಲ್ಲ, ಹೈಕಮಾಂಡ್ ತೀರ್ಮಾನ ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಯಾವ ಕ್ಷೇತ್ರದಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು ನಿರ್ಧಾರ ಇಲ್ಲ ಎಂದ ಅವರು, ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು ನಡೆದಿವೆ. ಟಿಕೆಟ್‌ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು…

Read More

ಬೆಂಗಳೂರು: ಅಮುಲ್ ​ನಲ್ಲಿ, ಕೆಎಂಎಫ್ ​​ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಚುನಾವಣೆ ಹೊತ್ತಿಲಿನಲ್ಲಿ ಪ್ರತಿರೋಧದ ದಾಳವಾಗಿ ಬಳಸಿಕೊಳ್ಳುತ್ತವೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿ ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್​ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಬ್ಬಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ನಡೆದಿದೆ. ರೈಲ್ವೆ ಇಲಾಖೆಯ ನಿವೃತ್ತ ನೌಕರ ತಿಮ್ಮಯ್ಯ(70) ಮೃತಪಟ್ಟವರು  ಎನ್ನಲಾಗಿದೆ.  ಟಿವಿಎಸ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಂ ತಿಮ್ಮಯ್ಯ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪಿಎಸ್ಐ ಮುತ್ತುರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭೀಕರ ಅಪಘಾತ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯಾದ ಡಾ.ಬಿ.ಗೋಪಾಲಕೃಷ್ಣ ಹೇಳಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಭವನದಲ್ಲಿ 73 ಮತಕ್ಷೇತ್ರ ವ್ಯಾಪ್ತಿ, ಚುನಾವಣಾ ಸಿದ್ಧತೆ, ಸಿಬ್ಬಂದಿ ನೇಮಕ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು, ಚೆಕ್ ಪೋಸ್ಟ್ ಹಾಗೂ ಇತರ ವಿಷಯಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮತದಾನ ನಡೆಯುವ 10 ದಿನ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶವಿರುವುದು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು. ಈ ಕ್ಷೇತ್ರದ ವ್ಯಾಪ್ತಿಯಲ್ಲಿ 2,46,120 ಮತದಾರರು ಇದ್ದು, ಅದರಲ್ಲಿ 1,22,006 ಪುರುಷರು, 1,24,076…

Read More